Author: admin
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಾರಥ್ಯದಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ-2023” ಇದರ ಸಮಾರೋಪ ಸಮಾರಂಭ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಆಶೀರ್ವಚನದ ಮಾತನ್ನಾಡಿದ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ ಅವರು, “ಪಟ್ಲರು ತಮ್ಮ ಕಂಠಸಿರಿಯ ಮೂಲಕ ಮಾತ್ರ ಸಮಾಜವನ್ನು ರಂಜಿಸಿದ್ದಲ್ಲ. ಸಾಮಾಜಿಕ ಸಂಘಟನೆಯನ್ನು ಸ್ಥಾಪಿಸಿ ಆ ಮೂಲಕ ಸಮಾಜದಲ್ಲಿನ ನೊಂದವರ ಕಣ್ಣೀರು ಒರೆಸುತ್ತಿದ್ದಾರೆ. ಕೆಲವರಿಗೆ ದಾನ ಮಾಡುವ ಸಾಮರ್ಥ್ಯ ಇರುತ್ತದೆ. ಇನ್ನೂ ಕೆಲವರಿಗೆ ತಮಗೆ ದಾನ ಮಾಡುವ ಸಾಮರ್ಥ್ಯ ಇಲ್ಲದಿದ್ದರೂ ಹತ್ತು ಮಂದಿಯಿಂದ ದಾನ ಕೊಡಿಸುತ್ತಾರೆ. ಮತ್ತೂ ಕೆಲವರು ತಾವೂ ದಾನ ಮಾಡುತ್ತಾರೆ ಇತರರಿಂದಲೂ ಕೊಡಿಸುತ್ತಾರೆ. ಇನ್ನೂ ಕೆಲವರಿಗೆ ಈ ಎಲ್ಲಾ ಸಾಮರ್ಥ್ಯವಿರುತ್ತದೆ. ಅಂತಹ ವಿಶೇಷ ಗುಣ ಪಟ್ಲ ಸತೀಶ್ ಶೆಟ್ಟಿ ಅವರಲ್ಲಿದೆ. ಅವರ ಸಮಾಜಮುಖಿ ಕಾರ್ಯ ನಿರಂತರ ಮುಂದುವರಿಯಲಿ” ಎಂದರು. ವೇದಿಕೆಯಲ್ಲಿ ಯಕ್ಷಗಾನ ರಂಗದ ಐದು ದಶಕಗಳ ಹಿರಿಯ ಸಾಧಕ ಪ್ರೊ. ಎಂ.ಎಲ್. ಸಾಮಗ-ಪ್ರತಿಭಾ ಸಾಮಗ ದಂಪತಿಗೆ “ಪಟ್ಲ ಪ್ರಶಸ್ತಿ-2023” ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು,…
ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ. ಭುಜಂಗ ಶೆಟ್ಟಿ (69) ಅವರು ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ ಮನೆಯಲ್ಲಿ ತೀವ್ರ ಹೃದಯಾಘಾತವಾಗಿದೆ. ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಡಾ.ಭುಜಂಗ ಶೆಟ್ಟಿ ನಿಪುಣ ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿದ್ದರು. 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ ಅವರು 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದ್ದರು. ಅವರು ಎಂಬತ್ತರ ದಶಕದಲ್ಲಿ ಸಣ್ಣ ಕ್ಲಿನಿಕ್ನಲ್ಲಿ ನೇತ್ರಶಾಸ್ತ್ರವನ್ನು ಪ್ರಾರಂಭಿಸಿದರು. ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಿದ್ದರು.
ಪುರಾತನ ಜನಪದ ಕ್ರೀಡೆಯಾದ ಕಂಬಳವು ತುಳುನಾಡಿನಲ್ಲಿ ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದಿದೆ. ಕಂಬಳವು ಸಾಂಪ್ರದಾಯಿಕ ಕಂಬಳವಾಗಿದ್ದು ಆಧುನಿಕ ವ್ಯವಸ್ಥೆಗಳನ್ನು ಸಾರಿಸಿಕೊಂಡರೂ ಸಂಪ್ರದಾಯವನ್ನು ಉಳಿಸಿಕೊಂಡೇ ಬರುತ್ತಿದೆ. ಕಹಳೆ, ವಾಲಗದೊಂದಿಗೆ ಓಟಕ್ಕಿಳಿಯುವ ಕೋಣಗಳು, ಅಷ್ಟೇ ವೇಗವಾಗಿ ಹಿಡಿತ ಸಾಧಿಸಿಕೊಂಡು ಓಟಕ್ಕಿಳಿಯುವ ಓಟಗಾರನ ವೇಗ ಎಂತವರನ್ನೂ ಮೈ ರೋಮಾಂಚನಗೊಳಿಸುತ್ತದೆ. ಇಂತಹ ವಿಶಿಷ್ಟ ಜನಪದ ಕ್ರೀಡೆ ಕಂಬಳದಲ್ಲಿ ತಮ್ಮ ಮಿಂಚಿನ ಓಟದಿಂದ ದಾಖಲೆಯ ವೀರನೆಂದೇ ಹೆಸರು ಗಳಿಸಿದವರು ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್.ಎಮ್ ಶೆಟ್ಟಿಯವರು. 24-03-1986 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹೊಕ್ಕಾಡಿಗೋಳಿ ಹಕ್ಕೇರಿಯಲ್ಲಿ ಮಧು ಶೆಟ್ಟಿ ಹಾಗೂ ಶಾರದ ಶೆಟ್ಟಿ ದಂಪತಿಗಳ ಪುತ್ರನಾಗಿ ಜನಿಸಿದ ಸುರೇಶ್ ಶೆಟ್ಟಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಬೋಡಿಯಲ್ಲಿ ಪೂರ್ಣಗೊಳಿಸಿ ಪ್ರೌಢ ಹಾಗೂ ಕಾಲೇಜು ಶಿಕ್ಷಣವನ್ನು ಸಿದ್ಧಕಟ್ಟೆ ಬಂಟ್ವಾಳದಲ್ಲಿ ಪೂರ್ಣಗೊಳಿಸಿದರು.ಶಾಲಾ ದಿನಗಳಲ್ಲೇ ಆಟೋಟಗಳಲ್ಲಿ ಮುಂಚೂಣಿಯಲ್ಲಿದ್ದ ಸುರೇಶ್ ಓಟದಲ್ಲಿ ಜಿಲ್ಲಾಮಟ್ಟವನ್ನು ಪ್ರತಿನಿಧಿಸಿದ್ದರು. ಬಾಲ್ಯದಲ್ಲಿ ತಮ್ಮ ಮನೆಯಲ್ಲಿದ್ದ ಕಂಬಳದ ಕೋಣಗಳನ್ನು ನೋಡಿ ಕಂಬಳಾಸಕ್ತಿ ಬೆಳೆದು ಇಪ್ಪತ್ತರ ಹರೆಯದಲ್ಲೇ…
2023 ವರ್ಷಾಂತ್ಯದ ಕೊನೆಯ ದಿನ ಡಿಸೆಂಬರ್ 30ನೇ ತಾರೀಕು ಬೆಳಗಿನ ಜಾವ 5.30 ಕ್ಕೆ ಜನಾನುರಾಗಿಯಾಗಿದ್ದ ಆತ್ಮೀಯರು ಶ್ರೀ ದೇವೆಶ್ ಆಳ್ವರವರು ಕೊನೆಯುಸಿರೆಳೆದ ಸುದ್ದಿ ಕ್ಷಣಾರ್ಧದಲ್ಲಿ ಯು.ಎ.ಇ.ಯ ಉದ್ದಗಲಗಳಲ್ಲಿ ಸ್ನೇಹಿತರೆಲ್ಲರಿಗೂ ದಿಗ್ರಭಮೆ ಮೂಡಿಸಿಸು. ಕೆಲವು ದಿನಗಳಿಂದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಮೂಲತ ಕರಾವಳಿ ಕರ್ನಾಟಕದ ತುಳುನಾಡಿನವರಾದ ದೇವೆಶ್ ಆಳ್ವ ಪ್ರತಿಷ್ಠಿತ ಕೆನರಾ ಕಾಲೇಜು ಮತ್ತು ಎಸ್.ಡಿ.ಎಂ.ಸಿ.ಇ.ಟಿ. ನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದವರು. ದುಬಾಯಿಗೆ ಬಂದು ಸೋಲಾಸ್ ಮರೀನ್ ಸರ್ವಿಸಸ್ ನಲ್ಲಿ ಮ್ಯಾನೆಜರ್ ಆಗಿ ಸೇವೆ ಸಲ್ಲಿಸುತಿದ್ದರು. ಸ್ವಂತ ಉಧ್ಯಮ ಪಯೋನಿರ್ ಮರೈನ್ ಸಂಸ್ಥೆಯನ್ನು ಸ್ಥಾಪಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಸುರದ್ರೂಪಿಯಾಗಿದ್ದು ಸುಂದರ ವ್ಯಕ್ತಿತ್ವ ಹೊಂದಿದ್ದ ದೇವೆಶ್ ಆಳ್ವರು ಜನಮಾನಸದಲ್ಲಿ ಸದಾ ನಗುಮುಖದ ವ್ಯಕ್ತಿಯಾಗಿದ್ದು ಸದಾ ಚೈತನ್ಯದ ಚಿಲುಮೆಯಂತೆ ಇದ್ದವರು. ಗಲ್ಫ್ ರಾಷ್ಟ್ರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾಕೂಟ, ಸ್ನೇಹಮಿಲನಗಳಿಗೆ ಸದಾ ಬೆಂಬಲ ನೀಡುತ್ತಾ ಪ್ರಾಯೋಜಕರಾಗಿ ಪ್ರೋತ್ಸಾಹ ನೀಡುತಿದ್ದ ಹೃದಯವಂತ ಅಗಲಿರುವುದು ಎಲ್ಲಾ ಬಂದುಬಳಗ ಸ್ನೇಹಿತ ವರ್ಗದವರಿಗೆ ಅತೀವ ನೋವಾಗಿದೆ. ಯು.ಎ.ಇ.…
‘ನಮ್ಮ ವ್ಯವಸ್ಥೆಯನ್ನು ನಾವು ಪ್ರೀತಿಸಬೇಕು’ ಮೂಡುಬಿದಿರೆ: ‘ಇತರರಿಗೆ ಕಲಿಸುವ ಮೊದಲು ನಾವು ನಮ್ಮ ವ್ಯವಸ್ಥೆಯನ್ನು ಪ್ರೀತಿಸುವುದು ಮುಖ್ಯ’ ಎಂದು ಉಡುಪಿಯ ತೋನ್ಸೆ ಹೆಲ್ತ್ ಸೆಂಟರ್ನ ವೈದ್ಯಕೀಯ ಅಧಿಕಾರಿ ಡಾ. ಶ್ರುತ ಮಾನ್ಯ ಹೇಳಿದರು. ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಯೋಗ ಸಭಾಂಗಣದಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ದಿನಾಚರಣೆಯಲ್ಲಿ ‘ಸಮಗ್ರ ವಿಧಾನಕ್ಕಾಗಿ ಪ್ರಕೃತಿ ಚಿಕಿತ್ಸೆ’ ಧ್ಯೇಯ ಕುರಿತು ಅವರು ಶನಿವಾರ ಅವರು ಮಾತನಾಡಿದರು. ‘ಕೋವಿಡ್ ನಂತರದ ದಿನಗಳಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಬಹಳ ಜಾಗೃತರಾಗಿದ್ದಾರೆ. ಸುತ್ತಮುತ್ತಲಿರುವ ವಿವಿಧ ರೀತಿಯ ಚಿಕಿತ್ಸೆಯನ್ನು ಕೇಳುವ ಮನೋಭಾವವಿದ್ದರೂ ಮನಸ್ಸಿಗೆ ತೋಚಿದಂತೆ ಚಿಕಿತ್ಸೆ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಚಿಕಿತ್ಸಾ ವಿಧಾನ ಆಯ್ಕೆ ಮಾಡಿಕೊಳ್ಳುವಾಗ ವೈಜ್ಞಾನಿಕ ಮನೋಭಾವ ಮುಖ್ಯ’ ಎಂದರು. ‘ಇಂದಿನ ಯುವಜನತೆ ಸಾಮಾಜಿಕ ಜಾಲತಾಣಗಳಿಗೆ ನೀಡುವ ಆದ್ಯತೆಯನ್ನು ಆರೋಗ್ಯಕ್ಕೆ ನೀಡುತ್ತಿಲ್ಲ. ಆರೋಗ್ಯ ಪಾಲನೆಯಲ್ಲಿ ‘ಪಂಚತಂತ್ರ’ ಪಾಲನೆ ಅತ್ಯವಶ್ಯ’ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ‘ಆರೋಗ್ಯದ ಕುರಿತು…
ಪುತ್ತೂರು ದೇವತಾ ಸಮಿತಿ ವತಿಯಿಂದ ಕಿಲ್ಲೆ ಮೈದಾನದಲ್ಲಿ ನಡೆಯಲಿರುವ 66 ನೇ ವರ್ಷದ ಸಾರ್ವಜನಿಕ ಮಹಾಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಪೈ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ವೇದಮೂರ್ತಿ ಸುಬ್ರಮಣ್ಯ ಹೊಳ್ಳರವರ ನೇತೃತ್ವದಲ್ಲಿ ದೇವತಾ ಸಮಿತಿಯ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ವಿಗ್ರಹ ರಚನೆಗೆ ಮುಹೂರ್ತ ನಡೆಸಲಾಯಿತು. ಮೂರ್ತಿ ರಚನೆ ಮಾಡುವ ರಮೇಶ್ ಪೂಜಾರಿಯವರು ಶ್ರೀ ಗಣೇಶನ ವಿಗ್ರಹ ರಚಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಪ್ರತೀ ವರ್ಷ ನಾಗರ ಪಂಚಮಿಯ ದಿನದಂದು ಕಿಲ್ಲೆ ಮೈದಾನದ ಗಣೇಶೋತ್ಸವಕ್ಕೆ ವಿಗ್ರಹ ಮುಹೂರ್ತ ಮಾಡಲಾಗುತ್ತಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ : ಶ್ರೀಮಹಾ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ದೇವತಾ ಸಮಿತಿಯ ಅಧ್ಯಕ್ಷ ಎನ್. ಸುಧಾಕರ್ ಶೆಟ್ಟಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಇದು ಗಣೇಶನ ಸಂಕಲ್ಪದಂತೆ ನಡೆಯುವ ಉತ್ಸವವಾಗಿದೆ. ಕಳೆದ 65 ವರ್ಷಗಳಿಂದ…
ತುಳುನಾಡ ಸಂಸ್ಕೃತಿ, ಆಚಾರ- ವಿಚಾರ, ನಡೆ-ನುಡಿ, ಜೀವನ ಪದ್ಧತಿ, ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರಸಿಕೊಂಡು ಕುತೂಹಲ ಹುಟ್ಟಿಸಿ ಸುಂದರವಾಗಿ ಮೂಡಿಬಂದಿರುವ ತುಳು ಸಿನಿಮಾ “ಕೊರಮ್ಮ”, ಇಂದಿನ ಯುವ ಜನತೆಯನ್ನು ಬೆರಗುಗೊಳಿಸುವಂತೆ ಮಾಡಿದೆ. ಈ ಸಿನಿಮಾವನ್ನು ತುಳು ನಾಡಿನ ಎಲ್ಲರೂ ನೋಡಿ ಪ್ರೋತ್ಸಾಹಿಸಬೇಕು ಎಂದು ನಿರ್ದೇಶಕ ಶಿವಧ್ವಜ್ ಶೆಟ್ಟಿ ತಿಳಿಸಿದರು. ಸುರತ್ಕಲ್ ನಲ್ಲಿರುವ ಸಿನಿಗ್ಯಾಲಕ್ಸಿ ಚಿತ್ರಮಂದಿರದಲ್ಲಿ ಕೊರಮ್ಮ ತುಳು ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಸಮಾರಂಭದಲ್ಲಿ ನಿರ್ಮಾಪಕ ಅಡ್ಯಾರ್ ಮಾಧವ ನಾಯ್ಕ್, ಸಿನಿಗ್ಯಾಲಕ್ಸಿ ಸಂಸ್ಥೆಯ ನಿರ್ದೇಶಕ ಶಶಿಕುಮಾರ್, ಕೃಷ್ಣ ಅಡ್ಯಂತಾಯ, ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ, ವೆಂಕಟರಮಣ, ದಿನೇಶ್ ಫರಂಗಿಪೇಟೆ, ಮಧು ಸುರತ್ಕಲ್, ನಟ ಮೋಹನ್ ಶೇಣಿ, ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಸರೋಜ ಟಿ ಶೆಟ್ಟಿ, ಸರಾಯು ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಸಿನಿಗ್ಯಾಲಕ್ಸಿಯ ದೀಪಕ್ ಮೊದಲಾದವರು ಉಪಸ್ಥಿತರಿದ್ದರು. ಮಂಗಳೂರು, ಸುರತ್ಕಲ್, ಪುತ್ತೂರು, ಪಡುಬಿದ್ರೆ, ಮುಂತಾದ ಕಡೆಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ ಎಂದು ನಿರ್ಮಾಪಕ ಅಡ್ಯಾರ್ ಮಾಧವ ನಾಯ್ಕ್…
ಭಾರತದ ಯುವ ಬ್ಯಾಡ್ಮಿಂಟನ್ ಪಟುಗಳಾದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸವನ್ನು ಬರೆದಿದ್ದಾರೆ. ಜಕಾರ್ತಾದಲ್ಲಿ ನಡೆದ ಬ್ಯಾಡ್ಮಿಂಟನ್ ಸೂಪರ್ 1000 ಫೈನಲ್ ನಲ್ಲಿ ಪ್ರಶಸ್ತಿಯನ್ನು ಗೆದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಡಬಲ್ಸ್ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಮತ್ತು ಕಳೆದ ವರ್ಷ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಕಂಚು ಗೆದ್ದಿದ್ದ ವಿಶ್ವದ ನಂ.6 ಜೋಡಿ, ಜಕಾರ್ತದಲ್ಲಿ ನಡೆದ 2 ಗೇಮ್ ಗಳ ಅದ್ಭುತ ಹೋರಾಟದಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕಾ ಅವರನ್ನು ಸೋಲಿಸಿದರು. ಇಂಡೋನೇಷ್ಯಾ ಓಪನ್ ನ ಪುರುಷರ ಡಬಲ್ಸ್ ಫೈನಲ್ ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಅವರು ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೋಹ್ ಅವರನ್ನು 21-17, 21-18 ರಿಂದ ಸೋಲಿಸಿದರು. ನಿಧಾನಗತಿಯ ಆರಂಭವನ್ನು ಪಡೆದರೂ ಭಾರತೀಯ ಜೋಡಿ ನೇರ ಗೇಮ್ ಗಳಲ್ಲಿ ಪಂದ್ಯವನ್ನು ಗೆದ್ದರು. ಭಾರತದ ಜೋಡಿ…
ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮಿà ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಎ. 9ರಿಂದ ವರ್ಷಾವಧಿ ಉತ್ಸವ ಮೊದಲ್ಗೊಂಡು ಎ.14ರ ತನಕ ವಿವಿಧ ವಿಧಿ ವಿಧಾನಗಳ ಮೂಲಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ. 12ರಂದು ಶ್ರೀ ಮನ್ಮಹಾರಥೋತ್ಸವ ಜರಗಲಿದೆ. ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಮನ್ಮಹಾರಥೋತ್ಸವ ಅಂಗವಾಗಿ ಎ. 9ರ ರವಿವಾರ ಧ್ವಜಾರೋಹಣ, ರಾತ್ರಿ ಭೇರಿ ತಾಡನ, ಕೌತುಕ ಬಂಧನ, ಶಿಬಿಕಾಯನೋತ್ಸವ ಜರಗಿತು. ಎ. 10ರಂದು ಸಿಂಹವಾಹನೋತ್ಸವ, ಎ. 11ರಂದು ಪುಷ್ಪಕ ವಾಹನೋತ್ಸವ, ಎ. 12 ರಂದು ಶ್ರೀ ಮನ್ಮಹಾರಥೋತ್ಸವ. ಎ. 13ರಂದು ಚೂರ್ಣೋತ್ಸವ ಹಾಗೂ ತುಲಾಭಾರ ಸೇವೆ, ಎ. 14ರಂದು ಅವಭೃಥ, ಮೃಗಯಾ ವಿಹಾರ, ಪೂರ್ಣಾಹುತಿ, ಧ್ವಜಾರೋಹಣ, ಕುಂಭಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ. . 13ರಂದು ನಡೆಯುವ ತುಲಾಭಾರ ಸೇವೆ ಮಾಡಲಿಚ್ಛಿಸುವವರು ಎ. 12ರ ಸಂಜೆ ಒಳಗೆ ತಿಳಿಸಬೇಕು. ಭಕ್ತರಿಗೆ ಮಧ್ಯಾಹ್ನದ ಊಟ ಮತ್ತು ರಾತ್ರಿಯ ವಸತಿ ವ್ಯವಸ್ಥೆ ಇದೆ ಎಂದು ದೇವಸ್ಥಾನದ ಮೊಕ್ತೇಸರ ಚಂದ್ರಶೇಖರ ಶೆಟ್ಟಿ ತಿಳಿಸಿದ್ದಾರೆ.
ತ್ರಿವಳಿ ಕಾರ್ಯಕ್ರಮಗಳನ್ನು ಆಯೋಜಿಸಿದ ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ಜಾನಪದ ಕಲಾರಾಧನೆಗೆ ಪ್ರೋತ್ಸಾಹದ ಅಗತ್ಯವಿದೆ: ಡಾ| ಆರ್.ಕೆ ಶೆಟ್ಟಿ (ಚಿತ್ರ / ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, ಜು.23: ಕಲೆಯು ಪಾವಿತ್ರ್ಯತೆಯುಳ್ಳದ್ದು ಇದಕ್ಕೆ ಭೇದವಿಲ್ಲ. ಆದುದರಿಂದ ಎಲ್ಲರಂತೆ ಜಾನಪದ ಕಲಾರಾಧನೆಗೂ ಪ್ರೇರಣೆಯ ಅಗತ್ಯವಿದ್ದು ನಮ್ಮ ಸದಾ ಪ್ರೋತ್ಸಾಹವಿದೆ. ಕಲೆಗಳು ಬೆಳೆಸಿ ಉಳಿಸುವ ನಿಟ್ಟಿನಲ್ಲಿ ಆಯೋಜಿಸಿದ ಈ ಕಾರ್ಯಕ್ರಮ ಕಲೆಯೊಂದಿಗೆ ಸಹಬಾಳ್ವೆಯನ್ನು ಕಲಿಸುವಂತಾಗಿದೆ. ಶ್ರೀನಿವಾಸ ಸಾಫಲ್ಯರ ಕಲ್ಪನೆಯ ಸುದಿನ ಇದಾಗಿದ್ದು ಮಹಾರಾಷ್ಟ್ರ ಘಟಕದ ಸದಸ್ಯರಲ್ಲಿ ಮತ್ತಷ್ಟು ಪ್ರೇರಣೆ ಮೊಳಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು ಇದರ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ| ಆರ್.ಕೆ ಶೆಟ್ಟಿ ತಿಳಿಸಿದರು. ಇಂದಿಲಿ ಶನಿವಾರ ಕುರ್ಲಾ ಪೂರ್ವದಲ್ಲಿನ ಬಂಟರ ಭವನದ ಅನೇಕ್ಸ್ ಕಾಂಪ್ಲೆಕ್ಸ್ನಲ್ಲಿನ ಶ್ರೀಮತಿ ರಂಜನಿ ಸುಧಾಕರ ಹೆಗ್ಡೆ ಸಮಾಜ ಕಲ್ಯಾಣ ಸಭಾ ಭವನದಲ್ಲಿ ಕಜಾಪ ಮಹಾರಾಷ್ಟ್ರ ಘಟಕವು ಆಯೋಜಿಸಿದ್ದ ಜಾನಪದ ಸಂಸ್ಕೃತಿಯ ಸಂವಾದ `ಆಷಾಡದ ಆಹ್ಲಾದಕರಸವಿ ಸಂಜೆ’ ಮತ್ತು ಜಾನಪದ ಗೀತಾ ಗಾಯನ `ಸಂವಾದ-ಚಿಂತನ-ಮಂಥನ’ ಕಾರ್ಯಕ್ರಮಗಳಸಭಾಧ್ಯಕ್ಷತೆ ವಹಿಸಿ ಗೀತಾ ಗಾಯನದ ಬಳಿಕ ದೀಪನಮನ ಮತ್ತು ನಾಡಗೀತೆಯೊಂದಿಗೆ ನಡೆಸಲ್ಪಟ್ಟ ಸಭಾ ಕಾರ್ಯಕ್ರಮದಲ್ಲಿ ನಾಮಫಲಕ ಅನಾವರಣಗೊಳಿಸಿ ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ವಿಭಾಗದ…