Author: admin
ಪಾಪಯ್ಯ ಬಟ್ಟೆಗಳ ವ್ಯಾಪಾರಿ, ಪರಮಲೋಭಿ, ಹಣ ಸಂಪಾದಿಸಲು ನಿದ್ರಾಹಾರಗಳನ್ನು ಬಿಟ್ಟಾದರೂ ಹಣ ಸಂಪಾದಿಸುತ್ತಾನೆ. ಭಿಕ್ಷುಕನಿಗೆ ಮಾತ್ರವಲ್ಲ ಬೆಕ್ಕಿಗೂ ನಾಲ್ಕು ಅಗಳು ಅನ್ನ ಹಾಕಲು ಆತನ ಮನಸ್ಸು ಸುತರಾಂ ಒಪ್ಪುವುದೇ ಇಲ್ಲ. ಹಣ ಖರ್ಚು ಮಾಡಬೇಕಾಗಿ ಬಂದರೆ ಸಿಡಿಮಿಡಿಗೊಳ್ಳುತ್ತಾನೆ. ಮುಖ್ಯವಾಗಿ ಯಾರ ಮನೆಗಾದರೂ ಶುಭ ಕಾರ್ಯಕ್ಕೆ ಕರೆದರೆ ಅವರು ಎಷ್ಟೇ ಸಮೀಪದವರಾಗಿರಲಿ ಅವರಿಗೆ ಕಾಣಿಕೆ ಕೊಡಬೇಕಾಗಿ ಬರುವುದೆಂದು ಯಾವುದೋ ಒಂದು ಕುಂಟು ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದನು. ಒಂದು ದಿನ ಆ ಊರಿನ ಜಮೀಂದಾರ್ ಮಗನ ಮದುವೆ ನಿಶ್ಚಯವಾಯಿತು. ಜಮೀಂದಾರ್ ಆಗಿರುವುದರಿಂದ ಎಲ್ಲರೂ ಭಾರಿ ಕಾಣಿಕೆಗಳನ್ನು ಕೊಡಬೇಕೆಂದು ನಿಶ್ಚಯಿಸಿಕೊಂಡರು. ಎಲ್ಲರಿಗೂ ಬಂದ ಹಾಗೆ ಪಾಪಯ್ಯನಿಗೂ ಆಹ್ವಾನ ಪತ್ರಿಕೆ ಬಂತು. ಅದನ್ನು ನೋಡುತ್ತಲೇ ಪಾಪಯ್ಯ ದಿಗಿಲಿನಿಂದ ಕುಗ್ಗಿ ಹೋದನು. ತಾನು ಕಾಣಿಕೆ ಕೊಡದೆ ಮದುವೆಗೆ ಹೋಗಬೇಕೆಂದು ಆಲೋಚಿಸಲು ಆರಂಭಿಸಿದನು. ಕಡೆಗೆ ಒಂದು ಗುಂಡಿಗೆ ಶತಾಬ್ಬಿ ಎಕ್ಸ್ಪ್ರೆಸ್ನಂತೆ ಜೋರಾಗಿ ಹೊಡೆದುಕೊಂಡಿತು. ಎಲ್ಲರೂ ಮದುವೆಗೆ ಹೋಗುತ್ತಾರೆ. ತಾನು ಹೋಗದಿದ್ದರೆ ಜಮಿಂದಾರರ ದೃಷ್ಟಿಯಲ್ಲಿ ತಾನು ಕೀಳಾಗಿ ಬಿಡುತ್ತೇನೆ. ತನ್ನ ಮೇಲಿನ…
ಸಾಮಾಜಿಕ ಕಾಳಜಿ ಹಾಗೂ ವೃತ್ತಿ ಬದ್ಧತೆಯ ಪತ್ರಕರ್ತರಾಗಿದ್ದ ದಿ. ಗುರುವಪ್ಪ ಬಾಳೆಪುಣಿ ಅವರು ತಮ್ಮ ಬರಹಗಳ ಮೂಲಕ ಸಾಮಾನ್ಯ ಸಾಧಕರು ಬದುಕು ಕಟ್ಟಿಕೊಂಡ ಬಗೆಯನ್ನು ಅನಾವರಣಗೊಳಿಸಿದ್ದಾರೆ ಎಂದು ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ| ಬಿ.ಎ. ವಿವೇಕ ರೈ ಹೇಳಿದರು. ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಹಿರಿಯ ಪತ್ರಕರ್ತ ದಿ. ಗುರುವಪ್ಪ ಬಾಳೆಪುಣಿ ಅವರ ‘ದೊಡ್ಡವರು ಇವರು ಸನ್ಮಾನ್ಯರು’ ಕೃತಿ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ‘ವೈಯಕ್ತಿಕ ಬದುಕಿನಲ್ಲಿ ನೈತಿಕತೆ ಕಾಪಾಡಿಕೊಂಡಿದ್ದ ಬಾಳೆಪುಣಿ ತಾವು ಪತ್ರಿಕೆಯ ಮೂಲಕ ಪರಿಚಯಿಸಿದ ಸಾಮಾನ್ಯರಲ್ಲಿ ಸಾಮಾನ್ಯ ಸಾಧಕರ ಬಗ್ಗೆ ಪುಸ್ತಕವಾಗಿ ಪ್ರಕಟಿಸುವ ಪ್ರಯತ್ನ ನಡೆಸಿದ್ದರು. ಈಗ ಅವರ ಅಗಲಿಕೆಯ ಬಳಿಕ ಈ ಪುಸ್ತಕ ಬಿಡುಗಡೆಯಾಗುತ್ತಿರುವುದು ನೋವಿನ ಸಂಗತಿ’ ಎಂದರು. ಕೃತಿಯ ಕುರಿತು ಮಾತನಾಡಿದ ಹೊಸದಿಗಂತ ಪತ್ರಿಕೆಯ ಸಿಇಒ ಪಿ.ಎಸ್. ಪ್ರಕಾಶ್ ‘ಹತ್ತು ಮಂದಿ ಸಾಧಕರ ಬಗ್ಗೆ ಬರೆದಿರುವ ಬಾಳೆಪುಣಿ ಅವರ ಸಾಧನೆಯ ಜತೆಗೆ ಜೀವನದ ಮಜಲುಗಳನ್ನು ತೆರೆದಿಟ್ಟಿದ್ದಾರೆ. ಇಂದಿಗೂ ನಮ್ಮ ಸುತ್ತಮುತ್ತಲಿನ ಸಮಾಜದ ಪರಿಸ್ಥಿತಿ…
ಮೂಡುಬಿದಿರೆ: ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ ವಿಭಾಗದ ವತಿಯಿಂದ `ಇನ್ಸ್ಪೀರಿಯಾ – 2025′ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು. ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಪಾನ್ ಮೂಲದ ಸಕ್ರಾ ವರ್ಲ್ಡ್ ಹಾಸ್ಪಿಟಲ್ನ ವ್ಯವಸ್ಥಾಪಕ ನಿರ್ದೇಶಕ ಡಾ. ಯುಚಿ ನಗಾನೊ ಮುಖ್ಯ ಅತಿಥಿಯಾಗಿ ಮಾತನಾಡಿ, ಕೃತಕ ಬುದ್ಧಿಮತ್ತೆ ಹಾಗೂ ಇನ್ನಿತರ ತಂತ್ರಜ್ಞಾನಗಳ ಪ್ರಗತಿಯೊಂದಿಗೆ ಆರೋಗ್ಯ ನಿರ್ವಹಣಾ ಕ್ಷೇತ್ರವು ಬಹಳಷ್ಟು ಮುಂದುವರಿದಿದೆ. ವೈದ್ಯಕೀಯ ಕ್ಷೇತ್ರವು ಸೋಂಕುಗಳನ್ನು ತಡೆಗಟ್ಟಿ ರೋಗಿಯ ಚೇತರಿಕೆಗೆ ಗಮನ ನೀಡುವುದರೊಂದಿಗೆ ಆಸ್ಪತ್ರೆಗಳು ಮನೆಯ ವಾತಾವರಣವನ್ನು ಕಲ್ಪಿಸಿಕೊಡುವಂತಿರಬೇಕು. ಆಸ್ಪತ್ರೆ ನಿರ್ವಹಣೆಯ ಕುರಿತು ಸೂಕ್ಷ್ಮದೃಷ್ಟಿ ಬೆಳೆಸಿಕೊಳ್ಳಲು ನಮ್ಮಲ್ಲಿರುವ ಜ್ಞಾನ, ಕನಸುಗಳು ಹಾಗೂ ಆಶಯಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಹೆಚ್ಚಿನ ಆಸ್ಪತ್ರೆಗಳನ್ನು ಕಾರ್ಪೋರೇಟ್ ಸಂಸ್ಥೆಗಳು ನಿರ್ವಹಿಸುವುದರಿಂದ ಜನಸಾಮಾನ್ಯರಿಗೆ ವ್ಯವಸ್ಥೆಗಳು ಬಳಸಿಕೊಳ್ಳಲು ಅನುಕೂಲಕರವಾಗಿಲ್ಲ.ಆಸ್ಪತ್ರೆಯ ನಿರ್ವಾಹಕರು ರೋಗಿಗಳ ಮೇಲೆ ಸಹಾನುಭೂತಿಯ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಹಸಿವು ಹೆಚ್ಚಾಗಬೇಕು…
ಬೆರ್ಮೆರೆ ಬಳಿ ಅಥವಾ ಬೆರ್ಮತಿ ಬನ್ನಾಯ ಬಳಿಯ ಬಂಟ ಮನೆತನದ ಪ್ರಸಿದ್ಧ ಮನೆ ಯೆಣ್ಮಕಜೆ. ಕಾಸರಗೋಡಿನಲ್ಲಿ ಬೆರಳೆಣಿಕೆಯಷ್ಟು ಗುತ್ತು ಮನೆತನಗಳ ಹೆಸರುಗಳು ಇಂದು ಪಂಚಾಯತುಗಳಾಗಿ ಗುರುತಿಸಲ್ಪಟ್ಟಿವೆ. ಉದಾಹರಣೆಗೆ ಹೇಳುವುದಾದರೆ ಇಚ್ಲಂಪಾಡಿ, ಕುಂಬ್ಡಾಜೆ, ಪುತ್ತಿಗೆ, ಬಂದಡ್ಕ, ಯೆಣ್ಮಕಜೆ ಮುಂತಾದವುಗಳು. ಈ ಎಲ್ಲಾ ಮನೆತನಗಳಿಗೆ ಪುರಾತನ ಇತಿಹಾಸ ಮತ್ತು ವಿಶಿಷ್ಟವಾದ ಗುರುತಿಸುವಿಕೆ ಇತ್ತು ಎನ್ನುವುದಕ್ಕೆ ಚರಿತ್ರೆಯ ಪುಟಗಳಲ್ಲಿ ಹಲವಾರು ಪುರಾವೆಗಳು ಲಭ್ಯವಿದೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕಾಸರಗೋಡು ಲೋಕಸಭಾ ವ್ಯಾಪ್ತಿಯಲ್ಲಿ ಯೆಣ್ಮಕಜೆ ಗ್ರಾಮ ಬರುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿ ಊರಿನ ಪಟೇಲರ ಮನೆಯೂ ಆಗಿದ್ದ ಈ ಯೆಣ್ಮಕಜೆ ಊರಿನ ನ್ಯಾಯ ತೀರ್ಮಾನದ ಚಾವಡಿಯಾಗಿತ್ತು.ಚೌಗ್ರಾಮದೊಡೆಯ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಾಲಯದ ಆಡಳಿತದಲ್ಲಿ ಸುಮಾರು 15 ವರ್ಷ ನಿರಂತರವಾಗಿ ಯೆಣ್ಮಕಜೆ ಬೀರಣ್ಣ ಬಂಟರು ಮೊಕ್ತೇಸರರಾಗಿ ನಿಭಾಯಿಸಿದ್ದ ದಾಖಲೆಗಳು ಇವೆ. ಅಲ್ಲಿಯೂ ನ್ಯಾಯ ತೀರ್ಮಾನದ ಹೊಣೆಗಾರಿಕೆ ಅವರದ್ದಾಗಿತ್ತು. ಕುಂಬಳೆ ಸೀಮೆಯ ಪಟ್ಟದ ಪಡ್ಪಿರೆ ಇಚ್ಲಂಪಾಡಿಯ ಬೀಗರ ಮನೆಯಾದ ಯೆಣ್ಮಕಜೆ ತರವಾಡು ಸೀಮೆಗಳ ಮೇರೆ ಮೀರಿ ಗುರುತಿಸಿಕೊಂಡಿದ್ದ ಪ್ರತಿಷ್ಠಿತ ಬಂಟ ಮನೆತನವಾಗಿತ್ತು.…
ಬಂಟರ ಸಂಘ ಬೆಂಗಳೂರಿನ ವೈದ್ಯಕೀಯ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ದಾನಿಗಳಾದ ಶ್ರೀ ಎನ್. ಎನ್. ಶೆಟ್ಟಿಯವರು ನೀಡಿದ ಮೊತ್ತ ಸೇರಿ ಒಟ್ಟು ಐವತ್ತೈದು ಸಾವಿರ ರೂ.ಗಳನ್ನು ಮೈಕ್ರೋ ಪ್ಲಾಸ್ಮಾದಂತಹ ಅತಿ ವಿರಳ ಕಾಯಿಲೆಯಿಂದ ಬಳಲುತ್ತಿದ್ದು, ಮಾರತಹಳ್ಳಿಯ ರೇನ್ಬೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಕಾಶ್ ಶೆಟ್ಟಿ ಅವರ ಮಗಳಾದ ಪ್ರತೀಕ್ಷಾಳ ನೆರವಿಗೆ ಚೆಕ್ ಮೂಲಕ ಕಾರ್ಯಕಾರಿ ಸಮಿತಿ ಸದಸ್ಯರುಗಳು ಹಸ್ತಾಂತರ ಮಾಡಿ ಆಸ್ಪತ್ರೆಯ ಪ್ರಮುಖ ವೈದ್ಯರಾದ ಡಾ. ರಕ್ಷಯ್ ಶೆಟ್ಟಿ ಅವರನ್ನು ಸಂಪರ್ಕಿಸಿ ಸುಮಾರು ಹತ್ತು ಲಕ್ಷದಷ್ಟು ರಿಯಾಯಿತಿ ಪಡೆಯಲು ಪ್ರಯತ್ನಿಸಿದರು.ಕುಂದಾಪುರ ತಾಲೂಕಿನ ಉಲ್ಲೂರು ೭೪ ಗ್ರಾಮದ ಶ್ರೀಮತಿ ರಾಜೀವಿ ಶೆಟ್ಟಿ ಅವರು ದೀರ್ಘಕಾಲದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಪತಿಯನ್ನು ಕಳೆದುಕೊಂಡಿದ್ದಾರೆ. ತೀರಾ ಆರ್ಥಿಕ ತೊಂದರೆಯಲ್ಲಿದ್ದ ಅವರಿಗೆ ಬೆಂಗಳೂರು ಬಂಟರ ಸಂಘದ ವೈದ್ಯಕೀಯ ವಿಭಾಗ ಮತ್ತು ದಾನಿಗಳಿಂದ ಸಹಾಯ ಪಡೆದ ಸುಮಾರು ಮೂವತ್ತೆರಡು ಸಾವಿರ ರೂಪಾಯಿಗಳನ್ನು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಒಪ್ಪಿಗೆ ಮೇರೆಗೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಸುರೇಂದ್ರ…
ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎ.ಕೆ ಜಯರಾಂ ರೈ ಅವರು ನಿಯುಕ್ತಿಗೊಂಡಿದ್ದಾರೆ. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಪೋಷಕರಾಗಿರುವ ಎ.ಕೆ ಜಯರಾಂ ರೈ ಅವರು ಪ್ರಗತಿಪರ ಕೃಷಿಕರಾಗಿದ್ದು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ರಂಗದಲ್ಲಿದ್ದುಕೊಂಡು ಸಮಾಜಸೇವಕರಾಗಿ ಗುರುತಿಸಿಕೊಂಡಿದ್ದಾರೆ.
ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿ ದೇವರ ಅನುಗ್ರಹಕ್ಕೆ ಪಾತ್ರರಾಗಿ : ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ
ಸರ್ವರ ಇಷ್ಟಾರ್ಥ ಪೂರೈಸುವ ಕಾಪು ಮಾರಿಯಮ್ಮ ನಮ್ಮ ತುಳುನಾಡಿಗೆ ಆರಾಧ್ಯ ದೇವತೆ. ಲಕ್ಷಾಂತರ ಭಕ್ತರು ಮಾರಿಯಮ್ಮನ ಸನ್ನಿಧಿಗೆ ಬಂದು ದರ್ಶನ ಪಡೆಯುತ್ತಾರೆ. ಸಮಿತಿಯ ಸಂಕಲ್ಪದಂತೆ ಪುರಾತನ ಕಾಪು ಮಾರಿಯಮ್ಮನ ದೇವಸ್ಥಾನವನ್ನು ಬಹಳ ದೊಡ್ಡ ಮಟ್ಟದಲ್ಲಿ ಅತ್ಯಂತ ಸುಂದರ ವಿನ್ಯಾಸದೊಂದಿಗೆ ಜೀರ್ಣೋದ್ಧಾರಗೊಳಿಸಲಾಗಿದೆ. ನಾವು ಕೂಡ ಈ ಕಾರ್ಯದಲ್ಲಿ ಕೈಜೋಡಿಸಿದ್ದೇವೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5ರವರೆಗೆ ನಡೆಯಲಿದ್ದು, ಎಲ್ಲರೂ ಭಾಗಿಯಾಗಿ ಮಾರಿಯಮ್ಮನ ಕೃಪೆಗೆ ಪಾತ್ರರಾಗುವಂತೆ ಪುಣೆ ಬಂಟರ ಸಂಘದ ಅಧ್ಯಕ್ಷ ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರ ಪುಣೆ ಸಮಿತಿಯ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ತಿಳಿಸಿದರು. ಕಾಪು ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ಪುಣೆ ಸಮಿತಿಯಿಂದ ನಡೆದ ಶ್ರೀ ಮಾರಿಯಮ್ಮನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಬಿಡುಗಡೆಗೊಳಿಸಿ ಮಾತನಾಡಿ, ಕಾಪು ಮಾರಿಯಮ್ಮನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ಪೂರಕವಾಗಿ ನಾವು ಪುಣೆಯಲ್ಲಿ 9 ಮಂದಿಯ ಸಮಿತಿ ರಚಿಸಿ, ನಂತರ ಉಪ ಸಮಿತಿಗಳ…
ಸದಾ ಭಿನ್ನ ವಿಭಿನ್ನ ಸೇವಾ ಚಟುವಟಿಕೆಗಳನ್ನು ಸಂಘಟಿಸುತ್ತಾ, ಅಶಕ್ತರಿಗೆ ನೆರವಾಗುತ್ತಾ ಸೇವೆಯೇ ಪರಮ ಧರ್ಮ ಎಂದು ಪ್ರತಿವಾದಿಸುತ್ತಾ ಮುನ್ನಡೆಯುತ್ತಿರುವ ಶಿವಾಯ ಫೌಂಡೇಶನ್ ಸಂಸ್ಥೆ ವತಿಯಿಂದ ಪಂಜ ನಲ್ಕಗುತ್ತು ದಾಮೋದರ್ ಶೆಟ್ಟಿಯವರ ರಾಮ್ ಪಂಜಾಬ್ ಹೋಟೆಲ್ ಕಾಟನ್ ಗ್ರೀನ್ ಪರಿಸರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಫೆಬ್ರವರಿ 16ರಂದು ನಡೆಯಿತು. ರಕ್ತದಾನ ಶಿಬಿರದಲ್ಲಿ ಶಿವಾಯ ಫೌಂಡೇಶನ್ ಸದಸ್ಯರು, ಹಿತೈಷಿಗಳು, ಮುಂಬಯಿ ಮತ್ತು ನವಿಮುಂಬಯಿಯ ಹಲವಾರು ಮಂದಿ ಪಾಲ್ಗೊಂಡಿದ್ದರು. ಮುಖ್ಯ ಅತಿಥಿಯಾಗಿದ್ದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ, ಶಿವಾಯ ಸಂಸ್ಥೆಯ ಹಿತೈಷಿ ಶ್ಯಾಮ್ ಎನ್. ಶೆಟ್ಟಿ ದೀಪ ಪ್ರಜ್ವಲಿಸಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಶಿವಾಯದ ಕೆಲಸವನ್ನು ನಾನು ತುಂಬಾ ಹತ್ತಿರದಿಂದ ನೋಡಿದವನು. ಈ ಸಂಸ್ಥೆಯ ಯುವಕ, ಯುವತಿಯರ ಸೇವಾ ಮನೋಭಾವಕ್ಕೆ ಬೆಲೆ ಕಟ್ಟಲಾಗದು. ಶಿವಾಯದ ಕೆಲಸದ ವೇಗ ನೋಡಿದರೆ ಸಂಸ್ಥೆ ಅತೀ ಎತ್ತರದ ಸ್ಥಾನಕ್ಕೆ ಏರುವ ದಿನ ದೂರವಿಲ್ಲ ಎಂದರು. ಮುಖ್ಯ ಅತಿಥಿಯಾಗಿ ಕಿಶನ್ ಗುರಾವ್, ಆನಂದ್ ರಾಯ್ ಮಾನೆ ಉಪಸ್ಥಿತರಿದ್ದರು.…
ಕಲಾಸಂಗಮ, ಮಂಗಳಾ ಕಲಾವಿದೆರ್ ಸಹಿತ ಬೇರೆ ಬೇರೆ ನಾಟಕ ತಂಡಗಳಲ್ಲಿ ಅಭಿನಯಿಸುವ ಮೂಲಕ ಒರಿಯರ್ದೊರಿ ಅಸಲ್ ನಾಟಕ ಸಿನಿಮಾದ ತಾರಾಯಿ ದೆಪ್ಪುನ ನಾಥನ್ನ ಖ್ಯಾತಿಯ ಅಶೋಕ್ ಅಂಬ್ಲಮೊಗರು ಕಳೆದ ಕೆಲವು ತಿಂಗಳ ಹಿಂದೆ ನಿಧನರಾಗಿದ್ದು, ಅವರ ಕುಟುಂಬ ಕಡುಬಡತನದಲ್ಲಿ ಜೀವನ ನಡೆಸಿರುವುದನ್ನು ಮನಗಂಡು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದಿಂದ ಆರ್ಥಿಕ ನೆರವು ನೀಡಿದ್ದಾರೆ. ಅಶೋಕ್ ಶೆಟ್ಟಿ ಅಂಬ್ಲಮೊಗರು ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ತಂಡದಲ್ಲಿದ್ದರು. ಬಳಿಕ ತನ್ನದೇ ಆದ ಮಂಗಳ ಕಲಾವಿದೆರ್ ನಾಟಕ ತಂಡವನ್ನು ಕಟ್ಟಿ ಕಟ್ಟೆದ ಗುಳಿಗೆ ನಾಟಕವನ್ನು ರಚಿಸಿ ನಾಟಕ ಪ್ರದರ್ಶಿಸಿದ್ದರು. ಆರಂಭದ ದಿನಗಳಲ್ಲಿ ಸುಧೀರ್ ರಾಜ್ ಉರ್ವ ಅವರ ನಾಟಕ ತಂಡದಲ್ಲಿ ಕಾಣಿಸಿಕೊಂಡಿದ್ದರು. ನಾಟಕದ ಜೊತೆಗೆ ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅವರು ಸಾಯುವ ಮುನ್ನ ವಿಜಯ ರಾಘವೇಂದ್ರ ಜೊತೆ ಪ್ರಮುಖ ಪಾತ್ರವೊಂದರಲ್ಲಿ ಇಪ್ಪತ್ತು ದಿನಗಳ ಕಾಲ ಶೂಟಿಂಗ್ ನಲ್ಲಿದ್ದರು. ಕೆಲವು ದಿನಗಳ ಬಳಿಕ ಹೃದಯಾಘಾತಕ್ಕೊಳಗಾಗಿ ಮೃತ ಪಟ್ಟಿದ್ದರು.…
ಕಾಪು ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹೊರೆಕಾಣಿಕೆಯನ್ನು ಸಮಸ್ತ ಬಂಟರ ವತಿಯಿಂದ ನೀಡಲಾಗುವುದು ಎಂದು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಮುಂಬಯಿಯ ಜಾಗತಿಕ ಬಂಟರ ಸಂಘದ ಅನೇಕ ಪದಾಧಿಕಾರಿಗಳು, ದಾನಿಗಳು ಮಾರಿಯಮ್ಮ ದೇವಸ್ಥಾನಕ್ಕೆ ಅನೇಕ ದೇಣಿಗೆ ಕೊಡುಗೆಗಳನ್ನು ನೀಡಿದ್ದಾರೆ ಎನ್ನಲು ಖುಷಿಯಾಗುತ್ತದೆ ಎಂದರು. ಹೊರೆ ಕಾಣಿಕೆ ಸಮಿತಿಯ ಅಧ್ಯಕ್ಷ ಐಕಳ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಮಾರ್ಚ್ 25 ರಿಂದ 9 ದಿನಗಳ ಕಾಲ ವೈಭವದ ಬ್ರಹ್ಮಕಲಶೋತ್ಸವ ನಡೆಯಲಿದೆ. ಅನೇಕ ದೇವಸ್ಥಾನಗಳ ಬ್ರಹ್ಮಕಲಶೋತ್ಸವಗಳಲ್ಲಿ ತೊಡಗಿಸಿಕೊಂಡ ಐಕಳ ಹರೀಶ ಶೆಟ್ಟರ ಮುತುವರ್ಜಿಯಲ್ಲಿ ಹೊರೆಕಾಣಿಕೆ ಬಂಟರ ಸಂಘಗಳ ಒಕ್ಕೂಟದಿಂದ ಬರಲಿದೆ. ಮುಂಬಯಿ ಹಾಗೂ ನಾನಾ ಕಡೆಗಳ ಊರ ದಾನಿಗಳ ಸಹಕಾರದಿಂದ 99 ಕೋಟಿ ರೂಪಾಯಿಯಲ್ಲಿ ದೇಗುಲ ನಿರ್ಮಾಣ ಅತ್ಯಂತ ಸುಂದರವಾಗಿ ಆಗಿದೆ. ಮೂಲ್ಕಿಯ ಒಕ್ಕೂಟದ ಕಚೇರಿಗೆ ಹೊರಕಾಣಿಕೆ ನೀಡುವವರು ತಲುಪಿಸಬಹುದು ಎಂದು ಹೇಳಿದರು.ಫೆಬ್ರವರಿ 22ಕ್ಕೆ ದಕ್ಷಿಣ ಕನ್ನಡದಿಂದ ಹಾಗೂ 23ಕ್ಕೆ ಉಡುಪಿ ಜಿಲ್ಲೆಯಿಂದ ಹೊರ ಕಾಣಿಕೆ ಬರಲಿದೆ. ಎಲ್ಲಾ ಬಂಟ ಸಂಘಗಳ…