Author: admin
ಭಾರತದ ಎಲ್ಲಾ ವಿವಿಗಳು ಸ್ನಾತಕೋತ್ತರ ಹಂತದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ಸೀಟನ್ನು ಮೀಸಲಿಡಬೇಕು. ಸ್ಕೌಟ್ಸ್ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಒಂದು ಸಶಕ್ತ ಶಿಕ್ಷಣ ನೀತಿ ಬೇಕು. ಸರ್ವ ಧರ್ಮಗಳ ಪ್ರಾರ್ಥನೆ ಹೆಸರಿಗಷ್ಟೆ ಜರುಗದೆ ನಿಜಾರ್ಥದಲ್ಲಿ ನಾವೆಲ್ಲಾ ಒಂದಾಗಿ ಸಹಿಷ್ಣುತೆಯಿಂದ ಬದುಕುವ ವಾತವರಣ ನಮ್ಮ ನಡುವೆ ಸೃಷ್ಠಿಯಾಗಬೇಕು ಎಂದು ಕರ್ನಾಟಕ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧಿಯಾ ನುಡಿದರು. ಅವರು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ರಾಷ್ಟ್ರ ಹಾಗೂ ರಾಜ್ಯ ಸಂಸ್ಥೆಗಳ ವತಿಯಿಂದ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಯುತ್ತಿರುವ ಐದು ದಿನಗಳ ರೊಬೊಟಿಕ್ಸ್, ಕೃತಕ ಬುದ್ದಿಮತ್ತೆ, ಯುವ ಉದ್ಯಮಶೀಲತೆ ಹಾಗೂ ಸ್ಟೆಮ್ ವಿಷಯಗಳನ್ನು ಒಳಗೊಂಡ ರಾಷ್ಟ್ರೀಯ ಮಟ್ಟದ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದ 12 ರಾಜ್ಯಗಳಿಂದ ವಿದ್ಯಾರ್ಥಿಗಳು ಈ ತರಬೇತಿ ಕಾರ್ಯಗಾರಕ್ಕೆ ಆಗಮಿಸಿರುವುದು ಸಂತಸದ ವಿಷಯ. ಕಾರ್ಯಗಾರವನ್ನು ತಮ್ಮ ಉನ್ನತಿಗೆ ಉಪಯೋಗಿಸಿಕೊಳ್ಳಿ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಡಾ.…
ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರ ಇಲ್ಲಿಯ ಮೊದಲ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ – 2025ರ ಉದ್ಘಾಟನಾ ಕಾರ್ಯಕ್ರಮವು ಪಿ. ಎಮ್. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ನಡೆಯಿತು. ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀ ಪುರಂದರ ಕೋಟ್ಯಾನ್ ಶಿಬಿರವನ್ನ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಸಂತೋಷ್ ನೆಲ್ಲಿಕಾರು ದಿಕ್ಸೂಚಿ ಭಾಷಣ ಮಾಡಿ, ಎನ್.ಎಸ್.ಎಸ್. ಇತಿಹಾಸವನ್ನು ತಿಳಿಸಿ ಇದರಿಂದ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನಗಳ ಬಗ್ಗೆ ಹೇಳಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಶ್ರೀ ದಿಲೀಪ್ ಹೆಗ್ಡೆ ಶತಮಾನದ ಇತಿಹಾಸ ಹೊಂದಿರುವ ನಮ್ಮ ಊರಿನ ಶಾಲೆಯಲ್ಲಿ ಶಿಬಿರ ಯಶಸ್ವಿ ಯಾಗಲಿ ಎಂದು ಶುಭ ಹಾರೈಸಿದರು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಕಾಡೆಮಿಕ್ ಡೀನ್ ಡಾ.ಮಿಥುನ್. ಯು, ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ,…
ಸಹಬಾಳ್ವೆ ಸಮಾನತೆ ನಮ್ಮದಾಗಬೇಕೆಂಬ ಸದಾಶಯದ ಸಂದೇಶವನ್ನು ದೀಪಾವಳಿ ಸಾರುತ್ತದೆ. ನೀವು ನಾವು ಜೊತೆಗಿರಬೇಕು. ಸಂತೋಷವನ್ನು ಪರಸ್ಪರ ಹಂಚಿಕೊಳ್ಳಬೇಕೆನ್ನುವ ಸದುದ್ದೇಶದೊಂದಿಗೆ ಪ್ರೀತಿಯ ಉಡುಗೊರೆಯನ್ನು ಸಿಟಿ ಪ್ರಾದೇಶಿಕ ಸಮಿತಿ ವತಿಯಿಂದ ಕಾರ್ಯಾಧ್ಯಕ್ಷರು ಮತ್ತು ಅವರ ಬಳಗ ನೀಡುತ್ತಿದ್ದಾರೆ. ಕಷ್ಟಗಳೆಂಬ ಕತ್ತಲೆ ದೂರವಾಗಲಿ ಸುಖ ಸಂತೋಷ ಆರೋಗ್ಯದೊಂದಿಗೆ ಕಷ್ಟಗಳೆಂಬ ಕತ್ತಲೆ ದೂರವಾಗಲಿ ಸುಖ ಸಂತೋಷ ಆರೋಗ್ಯದೊಂದಿಗಿನ ಹರ್ಷದ ದಿನಗಳು ಬರಲಿ ಎಂದು ದೀಪಾವಳಿಯ ಶುಭವಸರದಲ್ಲಿ ಪ್ರಾರ್ಥಿಸೋಣ ಎಂದು ಬಂಟರ ಸಂಘ ಮುಂಬೈಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಹೇಳಿದರು. ಸಿಟಿ ಪ್ರಾದೇಶಿಕ ಸಮಿತಿ ವತಿಯಿಂದ ಬಂಟರ ಸಂಘ ಮುಂಬೈ ಇದರ ರಂಜನಿ ಸುಧಾಕರ ಹೆಗ್ಡೆ ಸಮಾಜ ಕಲ್ಯಾಣ ಎನೆಕ್ಸ್ ಕಟ್ಟಡದ ಮೂರನೇ ಮಹಡಿಯ ಸಭಾಗೃಹದಲ್ಲಿ ಅಕ್ಟೋಬರ್ 19 ರಂದು ಸಂಜೆ ನಡೆದ ‘ಪರ್ಬದ ತುಡರ್ ಅರ್ಲಡ್ ಇಲ್ಲಿಲ್ಲಲ್’ ಸಂಭ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ಸದಸ್ಯರ ಕಷ್ಟ ಕಾರ್ಪಣ್ಯಗಳಿಗೆ ಸದಾ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ನಮ್ಮ ಸಿಟಿ ಪ್ರಾದೇಶಿಕ ಸಮಿತಿ ಸದಾ ಹೊಸ ಹೊಸ ವಿಷಯಗಳ…
ರೋಟರಿ ಕ್ಲಬ್ ಕಾರ್ಕಳ : ಹಬ್ಬಗಳ ಆಚರಣೆಯ ಮೂಲಕ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಕೆಲಸವಾಗಬೇಕು – ದೇವಿಪ್ರಸಾದ್ ಶೆಟ್ಟಿ
ರೋಟರಿ ಕ್ಲಬ್ ಕಾರ್ಕಳ ವತಿಯಿಂದ ದೀಪಾವಳಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಇದರ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರು ಮಾತನಾಡುತ್ತಾ, ದೀಪಾವಳಿಯ ಆಚರಣೆಯು ಎಲ್ಲರ ಬಾಳಿನಲ್ಲಿ ಬೆಳಕನ್ನು ನೀಡುವ ಹಬ್ಬವಾಗಿದೆ. ಹಬ್ಬಗಳ ಆಚರಣೆಯ ಮೂಲಕ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಕೆಲಸವಾಗಬೇಕು. ಸಾಂಸ್ಕೃತಿಕ ಜಾಗೃತಿ ಮೂಡಿಸುವುದರ ಜೊತೆಗೆ ಸಾಮಾಜಿಕ ಸಾಮರಸ್ಯವನ್ನು ಜಾಗ್ರತೆಗೊಳಿಸುವ ಕೆಲಸವು ಇಂದಿನ ಕಾಲಘಟ್ಟದಲ್ಲಿ ಅನಿವಾರ್ಯವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡುತ್ತಾ, ರೋಟರಿ ಸಂಸ್ಥೆಯು ತನ್ನ ಸಹ ಸಂಸ್ಥೆಗಳ ಜೊತೆಗೂಡಿ ಮಾಡುವ ದೀಪಾವಳಿಯ ಆಚರಣೆಯು ಹೀಗೆಯೇ ಮುಂದುವರಿಯಲು ಎಲ್ಲರೂ ಪ್ರಯತ್ನಿಸೋಣ ಎಂದರು. ವೇದಿಕೆಯಲ್ಲಿ ವೇದಿಕೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ಬಿನ ಅಧ್ಯಕ್ಷ ಸಂದೇಶ್ ಕುಮಾರ್, ಎಂ.ಪಿ.ಎಂ ಕಾಲೇಜಿನ ಇಂಟರ್ಯಾಕ್ಟ್ ಅಧ್ಯಕ್ಷೆ ಸುವೀಕ್ಷಾ ಪೂಜಾರಿ, ಆರ್ಸಿಸಿ ಕ್ಲಬ್ ಕಾಳಿಕಾಂಬ ಅಧ್ಯಕ್ಷೆ ಆಶಾ ಜಗದೀಶ್ ಆಚಾರ್ಯ, ಕಲ್ಲಂಬಾಡಿ ಪದವಿನ ಅಧ್ಯಕ್ಷ…
ಐತಿಹಾಸಿಕ ಹಿನ್ನೆಲೆಯುಳ್ಳ ಹಾಗೂ ತುಳುನಾಡಿನ ಅಧಿದೇವತೆ ಎಂದೇ ಪ್ರಸಿದ್ಧವಾಗಿರುವ ಬಸ್ರೂರಿನ ಶ್ರೀ ತುಳುವೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಸಹಸ್ರ ಸಹಸ್ರ ದೀಪಗಳ ದೀಪೋತ್ಸವದ ವೈಭವ ಕಣ್ಮನ ಸೆಳೆಯಿತು. ದೇಗುಲದ ಪರಿಸರವು ಜಗಮಗಿಸುವ ದೀಪಗಳ ಅಲಂಕಾರದಿಂದ ಕಂಗೊಳಿಸಿತು. ವಿನಾಶದ ಅಂಚಿನಲ್ಲಿದ್ದರೂ, ಪ್ರಕೃತಿಯ ಆಲಯದಲ್ಲಿ ನೆಲೆಸಿರುವ ತುಳುವೇಶ್ವರನಿಗೆ ಸಮರ್ಪಿತವಾದ ಈ ದೀಪೋತ್ಸವವು ಭಕ್ತ ಸಮೂಹಕ್ಕೆ ಒಂದು ವಿಶಿಷ್ಟ ಆಧ್ಯಾತ್ಮಿಕ ಅನುಭವ ನೀಡಿತು. ಆಲದ ಮರದ ಬುಡದಲ್ಲಿರುವ ಶಿವಲಿಂಗದ ಸುತ್ತಲೂ ಹಾಗೂ ದೇವಸ್ಥಾನದ ಪ್ರಾಂಗಣದಲ್ಲಿ ಸಾವಿರಾರು ಮಣ್ಣಿನ ದೀಪಗಳನ್ನು ಬೆಳಗಿಸಲಾಗಿತ್ತು. ಆ ದೀಪಗಳ ಪ್ರಕಾಶದಲ್ಲಿ ದೇವಾಲಯದ ಶಿಥಿಲಗೊಂಡ ಗೋಡೆಗಳು ಮತ್ತು ಪ್ರಾಚೀನ ಶಿಲಾಕುರುಹುಗಳು ಮತ್ತಷ್ಟು ಪುರಾತನ ವೈಭವವನ್ನು ನೆನಪಿಸಿದವು. ದೀಪಾರಾಧನೆಯ ಸಂದರ್ಭದಲ್ಲಿ ಸೇರಿದ್ದ ಸಹಸ್ರಾರು ಭಕ್ತರು ಶಿವನಾಮ ಸ್ಮರಣೆ ಮಾಡುತ್ತಾ, ಭಕ್ತಿಪರವಶರಾಗಿ ‘ಓಂ ನಮಃ ಶಿವಾಯ’ ಪಂಚಾಕ್ಷರಿ ಮಂತ್ರವನ್ನು ಜಪಿಸಿದರು. ಭಕ್ತರ ಘೋಷಣೆ, ಮಂಗಳವಾದ್ಯಗಳ ನಿನಾದ ಮತ್ತು ದೀಪಗಳ ಪ್ರಕಾಶದಿಂದ ದೇವಳದ ವಾತಾವರಣ ಸಂಪೂರ್ಣವಾಗಿ ದೈವಿಕ ಶಕ್ತಿಯಿಂದ ತುಂಬಿಹೋಗಿತ್ತು. ಈ ಸಂದರ್ಭದಲ್ಲಿ ಶಿವನನ್ನು ಸ್ತುತಿಸುವ ವಿಶೇಷ ಭಜನೆ…
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ವೆಂಕಟ್ ಭಾರಧ್ವಜ್ ನಿರ್ದೇಶನದ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪುಣೆಯ ಮಕ್ಕಳ ವೈದ್ಯ ಡಾ. ಸುಧಾಕರ್ ಶೆಟ್ಟಿ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಬಹು ನಿರೀಕ್ಷೆಯ ‘ಹೇ ಪ್ರಭು’ ಸಿನಿಮಾ ನವೆಂಬರ್ 7 ರಂದು ಪ್ರಪಂಚದಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಳ್ಳಲಿದೆ. ಈ ಚಿತ್ರದ ಮೊದಲ ಹಾಡು ‘ಎದ್ದೇಳೋ ಈಗ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಪ್ರೇಕ್ಷಕರ ಹೃದಯವನ್ನು ಗೆದ್ದಿದೆ. ಸ್ಫೂರ್ತಿದಾಯಕ ಸಾಹಿತ್ಯ, ಉತ್ತಮ ಗಾಯನ ಮತ್ತು ಸಂಗೀತದೊಂದಿಗೆ ಈ ಹಾಡು ಸಂಗೀತ ಪ್ರಿಯರು ಹಾಗೂ ಚಿತ್ರಾಭಿಮಾನಿಗಳ ಹೃದಯದಲ್ಲಿ ಭಾವುಕ ಸ್ಪಂದನ ಮೂಡಿಸಿದೆ. ತೇಜಸ್ವಿ ಹರಿದಾಸ್ ಅವರ ಆತ್ಮಸ್ಪರ್ಶಿ ಕಂಠದಲ್ಲಿ ಮೂಡಿ ಬಂದಿರುವ ಈ ಹಾಡು ಆಸೆ, ಆತ್ಮವಿಶ್ವಾಸ ಮತ್ತು ಹೋರಾಟದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಚಿತ್ರ ಸಾಹಿತಿ ಅರಸು ಅಂತಾರೆ ಅವರ ಹೃದಯ ಮುಟ್ಟುವ ಸಾಹಿತ್ಯ ಮತ್ತು ಡ್ಯಾನಿ ಆಂಡರ್ಸನ್ ಅವರ ಉತ್ಸಾಹಭರಿತ ಸಂಗೀತ ಸಂಯೋಜನೆ ಜೊತೆಯಾಗಿ “ಎದ್ದೇಳೋ ಈಗ”…
ಪುತ್ತೂರು ಬಂಟರ ಸಂಘಕ್ಕೆ 5.5 ಎಕರೆ ಜಾಗ ಮಂಜೂರುಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ ಜನಮನ ಕಾರ್ಯಕ್ರಮದಲ್ಲಿ ಪುತ್ತೂರು ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಇಷ್ಟು ವರ್ಷದಲ್ಲಿ ಬಂಟರ ಸಂಘಕ್ಕೆ ಒಂದಿಂಚು ಜಾಗವನ್ನು ಯಾರೂ ನೀಡಿರಲಿಲ್ಲ. ಶಾಸಕ ಅಶೋಕ್ ರೈ ಅವರ ಮುತುವರ್ಜಿಯಿಂದ ನಮ್ಮ ಸಂಘಕ್ಕೆ 5.5 ಎಕರೆ ಜಾಗವನ್ನು ನೀವು ಮಂಜೂರಾತಿ ನೀಡಿದ್ದೀರಿ. ಇದಕ್ಕಾಗಿ ಬಂಟರ ಸಂಘ ಎಂದೆಂದೂ ಚಿರಋಣಿಯಾಗಿರುತ್ತದೆ. ಸಂಘದ ವತಿಯಿಂದ ಮಾಡುವ ಸನ್ಮಾನವನ್ನು ಸ್ವೀಕರಿಸಬೇಕೆಂದು ಮುಖ್ಯಮಂತ್ರಿಗಳ ಬಳಿ ಕೇಳಿಕೊಂಡರು. ಬಂಟರ ಸಂಘದ ವತಿಯಿಂದ ನೀಡಿದ ಸನ್ಮಾನವನ್ನು ಮುಖ್ಯಮಂತ್ರಿಗಳು ಸ್ವೀಕರಿಸಿ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪುತ್ತೂರು ಶಾಸಕ ಅಶೋಕ್ ರೈ, ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಸುಮಾ ಅಶೋಕ್ ರೈ, ಗ್ಯಾರಂಟಿ…
ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಇದರ ನೂತನ ಅಧ್ಯಕ್ಷರಾಗಿ ಲಕುಮಿ ತಂಡದ ನಿರ್ದೇಶಕ, ಉದ್ಯಮಿ, ಸಮಾಜಸೇವಕ ಕಿಶೋರ್ ಡಿ ಶೆಟ್ಟಿಯವರು ಪುನರಾಯ್ಕೆಯಾಗಿದ್ದಾರೆ. ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟ ಇದರ 2024- 25 ನೇ ಸಾಲಿನ ವಾರ್ಷಿಕ ಮಹಾಸಭೆಯು ಕದ್ರಿ ಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಿಶೋರ್ ಡಿ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿಯವರು ಸರ್ವಾನುಮತದಿಂದ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ ಮತ್ತು ತಾರಾನಾಥ ಶೆಟ್ಟಿ ಬೋಳಾರ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷಣ್ ಕುಮಾರ್ ಮಲ್ಲೂರ್, ಕೋಶಾಧಿಕಾರಿಯಾಗಿ ಮೋಹನ ಕೊಪ್ಪಲ ಕದ್ರಿ, ಕ್ಷೇಮನಿಧಿ ಪ್ರಧಾನ ಸಂಚಾಲಕರಾಗಿ ಪ್ರದೀಪ್ ಆಳ್ವ ಕದ್ರಿ, ಕ್ಷೇಮನಿಧಿ ಸಂಚಾಲಕರಾಗಿ ರಾಘವೇಂದ್ರ ರಾವ್, ಜೊತೆ ಕಾರ್ಯದರ್ಶಿಯಾಗಿ ತುಳಸೀ ದಾಸ್ ಉರ್ವ, ಸಲಹಾ ಸಮಿತಿ ಸದಸ್ಯರಾಗಿ ತಮ್ಮ ಲಕ್ಷ್ಮ್ಮಣ್, ಶೋಭಾ ಶೆಟ್ಟಿ, ಶರತ್ ಶೆಟ್ಟಿ ಮುಂಡ್ಕೂರು, ಸಂಘಟನಾ ಕಾರ್ಯದರ್ಶಿಯಾಗಿ…
ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಆಳ್ವಾಸ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲೆ ಡಾ| ವನಿತಾ ಶೆಟ್ಟಿಯವರಿಗೆ ಆರೋಗ್ಯ ವಿಜ್ಞಾನದ ಶೈಕ್ಷಣಿಕ ವಲಯಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಪ್ರಶಸ್ತಿ ನೀಡಿ ಗೌರವಿಸಿದರು. ಇವರು ಆಳ್ವಾಸ್ ನ್ಯಾಚುರೋಪಥಿ ಕಾಲೇಜಿನಲ್ಲಿ ಕಳೆದ ೧೮ ವರ್ಷಗಳಿಂದ ಪ್ರಾಚಾರ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ನಾಟಕದ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ ಕಾಲೇಜುಗಳ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ತುಳುನಾಡ್ ಡ್ ಪರ್ಬ ಪಂಡ ದೀಪಾವಳಿ ಪಂದ್ ಅರ್ಥ. ಬೆನ್ನಿದೊಂಬುಗೆದ ಬದ್ಕ್ಡ್ ನೆಕ್ಕ್ ಎಡ್ಡೆ ಪುಗರ್ತೆ ಉಂಡು. ಹಿರಿಯಕ್ಲೆ ಆಚರಿಪು, ನಂಬೊಲಿಗೆದ ಪಿರವು ಎಡ್ಡೆಪುದ ಕಾರಣ ಇತ್ತ್ದ್, ಆಚರಣೆಡ್ ಪ್ರದೇಶವಾರು ಪರಾಕ್ ಇತ್ತ್ಂಡಲಾ ಆಶಯ ಒಂಜೆ ಆದಿತ್ತ್ಂಡ್ ಪಂದ್ ಸುರತ್ಕಲ್ ಗೋವಿಂದದಾಸ ಕಾಲೇಜ್ ಉಪನ್ಯಾಸಕಿ ಅಕ್ಷತಾ ವಿ ಕೆನರಾ ಕಾಲೇಜ್ ಸಭಾಂಗಣಡ್ ನಡತಿ ತುಲುವೆರೆ ಕಲ ಟ್ರಸ್ಟ್ (ರಿ)ದ ಪದಗ್ರಹಣ ಬೊಕ್ಕ ತುಡರ್ ಪರ್ಬ ಲೇಸ್ಡ್ ಪಾತೆರೊಂದು ಪಂಡೆರ್. ತುಲುವೆರೆ ಕಲ ಟ್ರಸ್ಟ್ ಗುರ್ಕಾರ್ದಿ ಗೀತಾ ಲಕ್ಷ್ಮೀಶ್ ಗುರ್ಕಾರ್ಮೆದ ಲೇಸ್ನ್ ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಗುರ್ಕಾರ್ರ್ ರಾಜೇಶ್ ಬಿ ಉದಿಪನ ಮಲ್ತೆರ್. ತುಲುವೆರೆ ಕಲತ್ತ ಗೌರವಾಧ್ಯಕ್ಷೆರಾಯಿನ ಮುದ್ದು ಮೂಡುಬೆಳ್ಳೆ, ಮಾರ್ಗದರ್ಶಕೆ ಸದಾನಂದ ನಾರಾವಿ ದುಂಬಾಯಿನಕ್ಲ್ ಲೇಸ್ದ ಮಿತ್ತರ್ಮೆಡಿತ್ತೆರ್. ಪ್ರಶಾಂತ್ ಆಚಾರ್ಯ ಎಡಪದವು ದೇವೆರೆನ್ ಸುಗಿತ್, ರೇಣುಕಾ ಕಣಿಯೂರು ಲೇಸ್ ಸುಧಾರಿಕೆ ಮಲ್ತೆರ್. ಸಾಹಿತಿ, ಉಪನ್ಯಾಸಕೆ ರಘು ಇಡ್ಕಿದು ಗುರ್ಕಾರ್ಮೆದ ತುಡರ್ ಕಬಿಕೂಟೊಡು ವಿಶ್ವನಾಥ ಕುಲಾಲ್ ಮಿತ್ತೂರು, ಡಾ. ಸುರೇಶ್ ನೆಗಳಗುಳಿ,…















