Author: admin
ಪ್ರವಾಸೋದ್ಯಮದ ಕುರಿತು ಮಂಡಿಸಿದ ಪ್ರಬಂಧಕ್ಕೆ ಹೇಮಂತ್ ರೈ ಮನವಳಿಕೆಗುತ್ತು ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಅವರು ಮಂಗಳೂರು ವಿಶ್ವವಿದ್ಯಾಲಯದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗದ ಪ್ರೊಫೆಸರ್ ಟಿ.ಎನ್ ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ISSUE’S AND PROSPECTS OF SUSTAINABLE TOURISM IN WESTERN GHATS – A STUDY OF KODAGU AND UTTARA KANNADA DISTRICTS KARNATAKA ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ. ಹೇಮಂತ್ ರೈ ಅವರು ಕೇವಲ ಉದ್ಯಮಿಯಾಗಿರದೆ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕ, ಕ್ರೀಡಾ ಕ್ಷೇತ್ರಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡವರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಚೆನ್ನೈ ಘಟಕದ ಸಂಚಾಲಕರಾಗಿ, ರಾಷ್ಟ್ರೀಯ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಮಂಗಳೂರು ಇದರ ಚೆನ್ನೈ ಘಟಕದ ಸಂಚಾಲಕರಾಗಿ, ಭಾರತ ಮಾಲ್ಡಿವ್ಸ್ ಟ್ರೇಡ್ ಕೌನ್ಸಿಲ್ ನ ಉಪಾಧ್ಯಕ್ಷರಾಗಿ, ಕಾರವಾರ ರೋಟರಿ ಕ್ಲಬ್ ನ ಅಂತರಾಷ್ಟ್ರೀಯ ನಿರ್ದೇಶಕರಾಗಿ ಸೇವೆ ಸಲ್ಲಿಸಿರುತ್ತಾರೆ. ವಿದ್ಯಾಭ್ಯಾಸ, ಕಲೆ, ಯಕ್ಷಗಾನ ಕಾರ್ಯಕ್ರಮಗಳಿಗೆ ಪ್ರೋತ್ಸಾಹ…
ಸಮಾಜಸೇವಕ, ಯುವ ಉದ್ಯಮಿ, ರಾಜಕೀಯ ಮುಖಂಡ ಅನಿಲ್ ಶೆಟ್ಟಿ ಅವರ ಮೊದಲ ಚಿತ್ರದ ಟೈಟಲ್ ಟೀಸರ್ ಗಣೇಶ ಚತುರ್ಥಿಯ ದಿನ ಲಾಂಚ್ ಆಗಿದೆ. ಚಿತ್ರಕ್ಕೆ ‘ಲಂಭೋದರ 2.0’ ಎಂದು ಹೆಸರಿಡಲಾಗಿದೆ. ಸಿನಿಮಾದ ರೂಪದಲ್ಲಿ ಗಣೇಶ ಯಾವಾಗ ಬರುತ್ತಾನೆ ಎಂಬ ಭಕ್ತರ ಪ್ರಶ್ನೆಗೆ ಉತ್ತರಿಸುತ್ತ ಗಣೇಶ, ‘ನಿಮ್ಮ ಬಳಿಗೆ ಒಬ್ಬನನ್ನು ಕಳುಹಿಸುತ್ತಿದ್ದೇನೆ. ಆದರೆ ನಿಮ್ಮ ಮೊಬೈಲ್ ಪಾಸ್ವರ್ಡ್ ಗೆ ನೀವೇ ಜವಾಬ್ದಾರರು’ ಎಂದು ಭಕ್ತರನ್ನು ಎಚ್ಚರಿಸುವ ಟೈಟಲ್ ಟೀಸರ್ ಇದೀಗ ವೈರಲ್ ಆಗಿದೆ. ಲಂಬೋದರ 2.0 ಚಿತ್ರದಲ್ಲಿ ಅನಿಲ್ ಶೆಟ್ಟಿ ನಾಯಕ ನಟರಾಗಿ ಅಭಿನಯಿಸುತ್ತಿದ್ದು, ನಿರ್ದೇಶಕ ಅಭಿಜಿತ್ ಮಹೇಶ್ ಲಂಬೋದರ 2.0 ಸಿನಿಮಾಾಕೆ ಚಿತ್ರಕಥೆ ಮತ್ತು ಸಂಭಾಷಣೆ ಬರೆಯುತ್ತಿದ್ದಾರೆ. ಸದ್ಯದಲ್ಲೇ ಚಿತ್ರತಂಡದ ಬಗ್ಗೆ ವಿವರ ಘೋಷಣೆಯಾಗಲಿದೆ.
‘ತಾಯ್ನಾಡಿನ ಯಕ್ಷಗಾನಕ್ಕೆ ಬಹುದೊಡ್ಡ ಇತಿಹಾಸವಿದೆ. ವಿಶಾಲ ಬಯಲಿನಲ್ಲಿ ಬೇರೆ ಬೇರೆ ಮೇಳಗಳ ಜೋಡು ರಂಗಸ್ಥಳವನ್ನು ಹಾಕಿ ನಡೆಸುತ್ತಿದ್ದ ಸ್ಪರ್ಧೆಯ ಜೋಡಾಟವನ್ನು ನೋಡುವುದೇ ಒಂದು ಹಬ್ಬ. ಆದರೆ ಈಗ ಅದು ಕಾಣಸಿಗುವುದಿಲ್ಲ. ಅಜೆಕಾರು ಬಾಲಕೃಷ್ಣ ಶೆಟ್ಟರು ಮುಂಬಯಿ ಕಲಾರಸಿಕರಿಗೆ ಅಂತಹ ಒಂದು ಅಪೂರ್ವ ಅನುಭವ ನೀಡಲಿದ್ದಾರೆ. ಸೆಪ್ಟೆಂಬರ್ 21ರಂದು ಮುಂಬಯಿ ಬಂಟರ ಸಂಘದ ಸಭಾಂಗಣದಲ್ಲಿ ಅವರು ಏರ್ಪಡಿಸಿರುವ ಅಮೋಘ ಜೋಡಾಟದ ಮೂಲಕ ಯಕ್ಷಗಾನದ ಗತವೈಭವ ಮರುಕಳಿಸಲಿದೆ’ ಎಂದು ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಹೇಳಿದ್ದಾರೆ. ಬಂಟರ ಸಂಘ ಮುಂಬೈ ಜೋಗೇಶ್ವರಿ ದಹಿಸರ್ ಸಮಿತಿ ವತಿಯಿಂದ ಕಾಂದಿವಲಿ ಪಶ್ಚಿಮದ ಮಹಾವೀರ ನಗರದಲ್ಲಿರುವ ಕಮಲ ವಿಹಾರ್ ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ಊರಿನ ಪ್ರಸಿದ್ಧ ಕಲಾವಿದರಿಂದ ಜರಗಿದ ‘ಕೃಷ್ಣರಾಜಿ ಪರ್ಸಂಗೊ – ಅಂಕೊದ ಬೂಲ್ಯ’ ತುಳು ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ 24ನೇ ವಾರ್ಷಿಕೋತ್ಸವ ‘ಚತುರ್ವಿಂಶತಿ ಸಂಭ್ರಮ ಮತ್ತು ಪ್ರಚಂಡ ಜೋಡಾಟ’ದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಯಕ್ಷಾಂಗಣ…
ಖ್ಯಾತ ಪತ್ರಕರ್ತೆ ಅಂಕಣಕಾರ್ತಿ ಶ್ರೀಮತಿ ಕವಿತಾ ಅಡೂರ್ ಅವರ ಸಾಹಿತ್ಯದ ಉತ್ಕಟ ಪ್ರೀತಿ ಅಭಿವ್ಯಕ್ತದ ಗೀತೆಯನ್ನು ವಿ ಮನೋಹರ್ ಸಂಗೀತ ಸಂಯೋಜನೆಯಲ್ಲಿ ಐಲೇಸಾದ ಯುವ ಗಾಯಕಿ ಸುಮಾ ಕೋಟೆ ಭಾವಪೂರ್ಣವಾಗಿ ಹಾಡಿದ್ದಾರೆ. ಐಲೇಸಾದಲ್ಲಿ ಈ ಹಿಂದೆ ತುಳುವೆರ್ ಸಿಂಗಾಪುರ ಕೂಟದ ಸ್ಥಾಪಕ ಅಧ್ಯಕ್ಷ ರಾಜೇಶ್ ಆಚಾರ್ಯ ಕೃತಕ ಬುದ್ಧಿಮತ್ತೆಯ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರು. ಮೊದಲ ಬಾರಿಗೆ AI ತಂತ್ರಜ್ಞಾನ ಬಳಸಿ ಐಲೇಸಾ ಮ್ಯೂಸಿಕ್ ಚಾನೆಲ್ ಈ ಹಾಡಿನ ವಿಡಿಯೋವನ್ನು ತಯಾರಿಸಿದ್ದು ತುಳುವೆರ್ ಸಿಂಗಾಪುರದ ಸಹಕಾರದಲ್ಲಿಯೇ ಈ ಹಾಡನ್ನು ಬಿಡುಗಡೆಗೊಳಿಸಲು ಬಯಸಿತ್ತು. ರಾಜೇಶ್ ಆಚಾರ್ಯ ತಮ್ಮ ಸಂಸ್ಥೆಯ ಸದಸ್ಯರ ಜೊತೆ ಸೇರಿಕೊಂಡು ಬ್ರಹ್ಮಾವರ ರಾಕೇಶ್ ಶೆಟ್ಟಿ, ಪ್ರಶಾಂತ್ ರಾವ್ ಪೇಜಾವರ, ನಲ್ಲೂರು ಆನಂದ ಶೆಟ್ಟಿ, ಭರಣಗೆರೆ ನಿತ್ಯಾನಂದ ಹೆಗ್ಡೆ, ರಾಜೇಶ್ ಹಯವದನ ಆಚಾರ್ಯ ಇವರ ಮುತುವರ್ಜಿಯಿಂದ ಈ ಹಾಡಿನ ಲೋಕಾರ್ಪಣೆಗೆ ಸಹಕಾರವಿತ್ತಿದ್ದಾರೆ. ಗುಜರಾತಿನ ರಾಮ್ ಪಟೇಲ್ ವೀಡಿಯೊ ತಯಾರಿಸಿದರೆ ಸುಮಾ ಕೋಟೆ ಸಹಕರಿಸಿದ್ದಾರೆ. ಹಾಡನ್ನು ಈ ತಿಂಗಳ 31 ರಂದು ಸಂಜೆ ಆರು ಗಂಟೆಗೆ…
ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ : ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಹಗ್ಗಜಗ್ಗಾಟ, ತ್ರೋ ಬಾಲ್ ಪಂದ್ಯಾಟದಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ
ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ ಸ್ಫರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ಸದಸ್ಯರು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ತ್ರೋಬಾಲ್ ಪಂದ್ಯಾಕೂಟದಲ್ಲಿ ದ್ವಿತೀಯ ಪ್ರಶಸ್ತಿ ಗಳಿಸಿದರು. ಪ್ರಶಸ್ತಿಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ, ಲೋಟಸ್ ಪ್ರಾಪರ್ಟಿಸ್ ನ ಎಂಡಿ ಸಂಪತ್ ಶೆಟ್ಟಿ, ಗಣೇಶ್ ಶೆಟ್ಟಿ, ಸುಂದರ ಶೆಟ್ಟಿ, ರತ್ನಾಕರ ಶೆಟ್ಟಿ, ರವೀಂದ್ರನಾಥ ಶೆಟ್ಟಿ, ಉದಯಕುಮಾರ್ ಶೆಟ್ಟಿ, ಜಯಶೀಲ ಅಡ್ಯಂತಾಯ, ವಸಂತ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಸುಬ್ಬಯ್ಯ ರೈಯವರು ವಿತರಿಸಿದರು. ಪ್ರಶಸ್ತಿಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರು ಹಾಗೂ ಮಹಿಳಾ ಕ್ರೀಡಾ ಕಾರ್ಯದರ್ಶಿ ಬಬಿತಾ ಶೆಟ್ಟಿ ಸ್ವೀಕರಿಸಿದರು. ಸಂಘದ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ…
ಮಂಗಳೂರು ವಿಮಾನ ನಿಲ್ದಾಣಕ್ಕೆ ಮಂಗಳೂರು ಮತ್ತು ಉಡುಪಿಯಿಂದ ಬಸ್ ಸೇವೆ : ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮನವಿ
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಒಂದು ಸರ್ಕಾರೇತರ ಸಂಸ್ಥೆಯಾಗಿದ್ದು, ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ ಜನರ ಜೀವನಶೈಲಿಯನ್ನು ಸುಧಾರಿಸಲು ಹಾಗೂ ಅವಳಿ ಜಿಲ್ಲೆಗಳ ಕೈಗಾರಿಕಾ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಗೆ ನಿರಂತರವಾಗಿ ಶ್ರಮಿಸುತ್ತಿದೆ. ಸಮಿತಿಯ ಈ ಬೆಳ್ಳಿಹಬ್ಬದ ವರ್ಷದಲ್ಲಿ, ಮುಂಬಯಿಯ ಕೇಂದ್ರ ಸಮಿತಿಯ ಪದಾಧಿಕಾರಿಗಳು ಹಾಗೂ ಸಮಿತಿಯ ಜಿಲ್ಲಾ ಸಮಿತಿಯ ( ದಕ್ಷಿಣ ಕನ್ನಡ/ ಉಡುಪಿ) ಪದಾಧಿಕಾರಿಗಳು ನಿರಂತರ ಕಾರ್ಯ ಚಟುವಟಿಕಿಯೊಂದಿಗೆ ಹಲವಾರು ಜನಪರ ಕಾರ್ಯಗಳತ್ತ ಗಮನ ಹರಿಸಿ ಅವಿರತವಾಗಿ ಪ್ರಯತ್ನಿಸುತ್ತಿದ್ದಾರೆ. ಈ ಹಂತದಲ್ಲಿ ಸಮಿತಿಯ ಈಗಿನ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಎಂ ಶೆಟ್ಟಿ ಇವರು ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ ಅವರನ್ನು ಭೇಟಿ ಮಾಡಿ ಎರಡು ಹೊಸ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯನ್ನು ಪ್ರಾರಂಭಿಸಲು ಮನವಿ ಮಾಡಿದರು. ಈ ಮನವಿಯಲ್ಲಿ ಒಂದು ಮಾರ್ಗವು ಸ್ಟೇಟ್ಬ್ಯಾಂಕ್ ಮಂಗಳೂರು – ಮಂಗಳೂರು ವಿಮಾನ ನಿಲ್ದಾಣ- ಸ್ಟೇಟ್ ಬ್ಯಾಂಕ್ ಮಂಗಳೂರು ಆಗಿರುತ್ತದೆ. ಎರಡನೇ ಮಾರ್ಗವು ಮಣಿಪಾಲ (ಉಡುಪಿ ಮೂಲಕ) -…
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರಾದ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟರು. “ತಂದೆ ತಾಯಿ ಮತ್ತುಗುರುಗಳಿಗೆ ಗೌರವ ನೀಡಿ ಓದಿನಲ್ಲಿ ಕಠಿಣ ಶ್ರಮವನ್ನು ಹಾಕಿದ್ದಲ್ಲಿ ಖಂಡಿತ ಉತ್ತುಂಗ ಮಟ್ಟಕ್ಕೆ ಏರಬಹುದು. ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಪ್ರತಿಕ್ಷಣವೂ ಕೂಡ ಅಮೂಲ್ಯವಾದದ್ದು, ಋಣಾತ್ಮಕ ಚಿಂತನೆಯನ್ನು ಬಿಟ್ಟು ಧನಾತ್ಮಕವಾಗಿ ಆಲೋಚಿಸಿದಾಗ ನಮ್ಮ ಪ್ರಗತಿ ಸಾಧ್ಯ.” ಎಂದು ವಿದ್ಯಾರ್ಥಿಗಳೊಂದಿಗೆ ಗಾದೆ, ಮನೋರಂಜನೆಯ ಆಟಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತುಗಳನ್ನಾಡಿದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸಹ ಸಂಸ್ಥಾಪಕರಲ್ಲಿ ಓರ್ವರಾದ ಶ್ರೀ ಆದರ್ಶ ಎಂ.ಕೆ. ಮತ್ತು ಉಪನ್ಯಾಸಕ ವರ್ಗ, ಬೋಧಕೇತರ…
ಗಣೇಶ ಚತುರ್ಥಿಗೆ ಐತಿಹಾಸಿಕ ಹಿನ್ನಲೆ ಇದೆ. ಪರಕೀಯರನ್ನು ದೂರ ಮಾಡಿದ ಶಕ್ತಿ ಗಣೇಶನಿಗೆ ಇದೆ. ಹೀಗಾಗಿ ಗಣೇಶೋತ್ಸವ ಸಮಾರಂಭದಲ್ಲಿ ಶಿಸ್ತು ಶ್ರದ್ದೆ ಮುಖ್ಯ. ಗಣೇಶೋತ್ಸವ ಕೇವಲ ಧಾರ್ಮಿಕ ಸಭೆ ಸಮಾರಂಭಗಳಿಗೆ ಸೀಮಿತವಾಗದಿರಲಿ. ಗಣೇಶೋತ್ಸವ ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಪಣ ತೊಡೋಣ. ನಮಗೆ ಪರಿಸರ ಕಾಳಜಿಯೂ ಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮಂಗಳೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಲೆಫ್ಟಿನೆಂಟ್ ಕಮಂಡರ್ ರಮಾನಾಥ ಶೆಟ್ಟಿ ಮತ್ತು ಕ್ಷಮಾ ರಮಾನಾಥ ಶೆಟ್ಟಿ ಧ್ವಜಾರೋಹಣಗೈದರು. ಡಾ. ಮಹಾಬಲ ರೈ ಮತ್ತು ಮಲ್ಲಿಕಾ ಎಂ ರೈ ತೆನೆ ವಿತರಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ…
ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಾರ್ಷಿಕ ಸಮಾವೇಶ ಆಗಸ್ಟ್ 24ರಂದು ಬೆಳ್ಮಣ್ ನ ಹೋಟೆಲ್ ಸೂರಜ್ ಇನ್ ಸಭಾಂಗಣದಲ್ಲಿ ನಡೆಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿಯವರು ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ನೆರವೇರಿಸಿ ಪ್ರತಿಜ್ಞಾವಿಧಿ ಬೋಧಿಸಿದರು. ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮುನಿಯಾಲ್ ಸಂದರ್ಭೋಚಿತ ಮಾತುಗಳನ್ನಾಡಿದರು. ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಪನ್ಯಾಸಕಿ ಸುಧಾರಾಣಿಯವರು ಬಂಟ ಸಮುದಾಯದ ಹಿನ್ನೆಲೆ, ಸಂಪ್ರದಾಯದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಂಬೈಯ ಉದ್ಯಮಿ ಕೃಷ್ಣ ಶೆಟ್ಟಿ ಕಾಪಿಕೆರೆ ನಂದಳಿಕೆ, ಬಾಂಬೆ ಬಂಟ್ಸ್ ಅಸೋಸಿಯೇಷನ್ ಇದರ ನಿಕಟಪೂರ್ವ…
ಬೇರೆಯವರಲ್ಲಿ ನಿರೀಕ್ಷಿಸುವ ಗುಣಮಟ್ಟ ನಮ್ಮಲ್ಲೂ ಇರಬೇಕು. ಜೀವನದಲ್ಲಿ ಒಮ್ಮೆಯಾದರೂ ಸತ್ಯ, ನ್ಯಾಯ, ಆದರ್ಶ ಮೌಲ್ಯಕ್ಕಾಗಿ ದೃಢವಾಗಿ ನಿಂತರೆ ನಿಮ್ಮ ಜೀವನ ಸಾರ್ಥಕ ಎಂದು ಜಿಲ್ಲಾ ಎಸ್ ಪಿ ಹರಿರಾಮ್ ಶಂಕರ್ ಹೇಳಿದರು. ಆಗಸ್ಟ್ 24 ರಂದು ಕುಂದಾಪುರ ಬಂಟರ ಭವನದ ಆರ್.ಎನ್ ಶೆಟ್ಟಿ ಸಭಾಭವನದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಡೆದ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ, ದಿ. ಎಂ ಗೋಪಾಲಕೃಷ್ಣ ಶೆಟ್ಟಿ ಸಂಸ್ಮರಣ ಪ್ರಗತಿಪರ ಕೃಷಿಕ ಪ್ರಶಸ್ತಿ, ಹಿರಿಯ ಸಾಧಕ ಗಣ್ಯರಿಗೆ ಗೌರವಾರ್ಪಣೆ, ದಿ. ಡಾ| ಮಧುಕರ ಶೆಟ್ಟಿ ಸಂಸ್ಮರಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಜೆ.ಎನ್.ಎಸ್ ಕನ್ಸ್ಟ್ರಕ್ಷನ್ ಮತ್ತು ಮನಿಷ್ ಗ್ರೂಪ್ ಆಫ್ ಹೋಟೆಲ್ಸ್ ಇದರ ಸಿಎಂಡಿ ಜಯಶೀಲ ಶೆಟ್ಟಿ ಘಟಪ್ರಭಾ, ಹೆರಂಭ ಗ್ರೂಪ್ ನ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ನೀರ್ಕೋಡ್ಲು ಚಂದ್ರಶೇಖರ ಶೆಟ್ಟಿ ಅವರಿಗೆ ದಿ. ಎಂ…