Author: admin
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತ ಹೆಗ್ಡೆ, ಸತ್ಯವತಿ ಡಿ ಶೆಟ್ಟಿ ದೀಪ ಪ್ರಜ್ವಲನೆಗೈದರು. ಸಂಜೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನೃತ್ಯ ವಿದುಷಿ, ವಿಮರ್ಶಕಿ ಪ್ರತಿಭಾ ಎಲ್ ಸಾಮಗ ವಹಿಸಿದ್ದರು. ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರೂ ಕೂಡಾ ಯಕ್ಷಗಾನದಲ್ಲಿ ಮುಂಚೂಣಿಯಲ್ಲಿದ್ದು ಕಲಾಸೇವೆಗೈಯುತ್ತಿದ್ದಾರೆ. ಅದರಲ್ಲೂ ಮಕ್ಕಳು ಯಕ್ಷಗಾನದತ್ತ ಆಕರ್ಷಿತರಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಮಕ್ಕಳನ್ನು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವಂತೆ ಮಹಿಳಾ ಕೇಂದ್ರ ಸಮಿತಿ ಶ್ರಮ ಪಟ್ಟಿದೆ. ನೇಪಥ್ಯಕ್ಕೆ ಸರಿದ ಮತ್ತು ಸಾಧನೆಗೈದ ಮಹಿಳಾ ಕಲಾವಿದರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಕಾರ್ಯ ಎಂದರು. ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಪ್ರಸಾದ್ ಜೈನ್, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ವಿದ್ಯಾ ರಾಕೇಶ್, ಪೂರ್ಣಿಮಾ ಪ್ರಭಾಕರ ರಾವ್ ಪೇಜಾವರ, ಸುಜಾತ ಧನಂಜಯ ಶೆಟ್ಟಿ ಹೊಸಬೆಟ್ಟು, ಚೈತ್ರಾ ಶೆಟ್ಟಿ…
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ 2024ನೇ ಸಾಲಿನಲ್ಲಿ ನಡೆಸಿದ್ದ ಪದವಿ ಪರೀಕ್ಷೆಗಳ ರ್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಆಳ್ವಾಸ್ನ ವಿದ್ಯಾರ್ಥಿಗಳು ಒಟ್ಟು 10 ರ್ಯಾಂಕ್ಗಳಿಸಿದ್ದಾರೆ. ಪದವಿ ರ್ಯಾಂಕ್ಗಳು: ಬಿಬಿಎ ವಿಭಾಗದ ಕೃತಿ, ಬಿಎಸ್ಸಿ ಅನಿಮೇಷನ್ನ ಅಪೂರ್ವ ಪ್ರಥಮ ರ್ಯಾಂಕ್ ಗಳಿಸಿದರೆ, ಬಿವಿಎ ವಿಭಾಗದಲ್ಲಿ ಅರ್ಪಿತಾ ಹೆಗ್ಡೆ ದ್ವಿತೀಯ ರ್ಯಾಂಕ್ ಹಾಗೂ ಮೆಲ್ರೊಯಿ ತೃತೀಯ ರ್ಯಾಂಕ್ ಗಳಿಸಿದ್ದಾರೆ. ಬಿಎಸ್ಸಿ ಹಾಸ್ಪಿಟ್ಯಾಲಿಟಿ ಸೈನ್ಸ್ ವಿಭಾಗದಲ್ಲಿ ರಿತೇಶ್ ದ್ವಿತೀಯ ರ್ಯಾಂಕ್ ಪಡೆದರೆ, ಬಿಕಾಂನಲ್ಲಿ ದೀಕ್ಷಾ ಶೆಟ್ಟಿ 10ನರ್ಯಾಂಕ್ ಪಡೆದು ಪದವಿ ವಿಭಾಗದಲ್ಲಿ ಒಟ್ಟು 6 ರ್ಯಾಂಕ್ಗಳು ಆಳ್ವಾಸ್ ಕಾಲೇಜಿಗೆ ಲಭಿಸಿದೆ. ಸ್ನಾತಕೋತ್ತರ ರ್ಯಾಂಕ್ಗಳು: ಎಂಎಸ್ಸಿ ಆಹಾರ ವಿಜ್ಞಾನ ವಿಭಾಗದ ಭವ್ಯ ಕೆ, ಸಸ್ಯಶಾಸ್ತ್ರ ವಿಭಾಗದ ಪಿ.ಎಸ್. ನಿರಂಜನ ಹಾಗೂ ಮನಃಶಾಸ್ತ್ರ ವಿಭಾಗದ ಪ್ರಕೃತಿ ಎಸ್ಕೆ ಪ್ರಥಮ ರ್ಯಾಂಕ್ನೊAದಿಗೆ ಮೂರು ಪ್ರಥಮ ರ್ಯಾಂಕ್ಗಳು ಆಳ್ವಾಸ್ ಸ್ನಾತಕೋತ್ತರ ವಿದ್ಯಾರ್ಥಿಗಳು ಪಡೆದಿದ್ದಾರೆ. ದೈಹಿಕ ಶಿಕ್ಷಣ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವರ್ಷಿಣಿ ಪ್ರಥಮ ರ್ಯಾಂಕ್ಗಳಿಸಿದ್ದಾರೆ.ರ್ಯಾAಕ್ ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.…
ಮೂಡುಬಿದಿರೆ: ಇಲ್ಲಿನ ವಿದ್ಯಾಗಿರಿಯ ಕೃಷಿಸಿರಿ ಆವರಣದಲ್ಲಿ ರಮಝಾನ್ನ ಬೃಹತ್ ಇಫ್ತಾರ್ ಕೂಟವು ಶನಿವಾರ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ವತಿಯಿಂದ ನಡೆಸಲಾದ 22ನೇ ವರ್ಷದ ಇಫ್ತಾರ್ ಕೂಟದಲ್ಲಿ ವಿದ್ಯಾರ್ಥಿಗಳಲ್ಲದೆ ಸ್ಥಳೀಯರ ಸಹಿತ ಸುಮಾರು 12,000ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಇಫ್ತಾರ್ ಬಳಿಕ ಸಾಮೂಹಿಕ ನಮಾಝ್ಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ರಮ್ಜಾನ್ ಸಂದೇಶ ನೀಡಿದ ಜಮಾಅತೆ ಇಸ್ಲಾಮೀ ಹಿಂದ್ನ ರಾಜ್ಯ ಕರ್ಯದರ್ಶಿ ಹಾಗೂ ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞ, ಡಾ ಮೋಹನ ಆಳ್ವರ ನೇತೃತ್ವದಲ್ಲಿ ಆಳ್ವಾಸ್ ಸಂಸ್ಥೆ ನಡೆಸುತ್ತಿರುವ ಇಫ್ತರ್ ಕೂಟ ಸಮಾಜಕ್ಕೆ ಮಾದರಿ. ಕೆಡುಕನ್ನು ಕೆಡುಕಿನಿಂದ ನಿವಾರಿಸಲು ಅಸಾಧ್ಯ. ಅದನ್ನು ಒಳಿತು, ಪ್ರೀತಿಯ ಸಂದೇಶದ ಮೂಲಕ ನಿವಾರಿಸಬೇಕು. ಈ ನಿಟ್ಟಿನಲ್ಲಿ ಇದು ಸಮಾಜಕ್ಕೆ ಶಕ್ತಿಯುತ ಸಂದೇಶ ನೀಡುವ ಕರ್ಯಕ್ರಮ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಬೀದರ್ನ ಶಾಯಿನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ನ ಅಧ್ಯಕ್ಷ ಅಬ್ದುಲ್ ಖಾದಿರ್ ಶಾಯಿನ್ “ಮುಸಲ್ಮಾನರ ಸಂಪ್ರದಾಯದAತೆ ಇಫ್ತಾರ್ ಕೂಟ ಆಯೋಜಿಸಲಾಗಿದೆ. ದೇಶದ ಜನರು ಸೌಹಾರ್ದದಿಂದ ಬದುಕಬೇಕು. ಎಲ್ಲಾ…
ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ಹಾಗೂ ಬಿವೋಕ್ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಮಾಧ್ಯಮ ಪರ್ವ-2025ರಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳು ಒಟ್ಟು 4 ವಿಭಾಗದಲ್ಲಿ ಪ್ರಥಮ, ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದರು. ವಿದ್ಯಾರ್ಥಿಗಳಾದ ಇಶಿತ್ ಹಾಗೂ ಅಶ್ವಿನ್ ಕ್ರೈಸಿಸ್ ಮ್ಯಾನೇಜ್ಮೆಂಟ್ (ಬಿಕ್ಕಟ್ಟು ನಿರ್ವಹಣೆ) ನಲ್ಲಿ ಪ್ರಥಮ, ಪ್ರಧಾನ್ ಛಾಯಾಗ್ರಹಣದಲ್ಲಿ ಪ್ರಥಮ, ರುಧೀರ್ ಹಾಗೂ ಮಿಯಾರವರನ್ನು ಒಳಗೊಂಡ ತಂಡ ರಸಪ್ರಶ್ನೆಯಲ್ಲಿ ಪ್ರಥಮ, ರಚನ್, ಸರ್ವೇಶ್, ವಿಶಾಲ್, ದೀಕ್ಷಾ, ಸುರಕ್ಷಾ, ಆಕಾಶ್, ಸುಮಿತ್, ದಿಶಾ, ಪ್ರಗತಿ, ಸ್ವಾತಿ, ರಿಶಾಂತ್, ರಕ್ಷಿತಾ, ಶ್ರೀವಲ್ಲಿಯವರ ತಂಡ ವೆರೈಟಿ ಪ್ರದರ್ಶನದಲ್ಲಿ ( ವೈವಿಧ್ಯಮಯ ನೃತ್ಯ ಪ್ರಥಮ ಸ್ಥಾನ ಪಡೆದರು. ವೀಕ್ಷಿತಾ ಹಾಗೂ ರಾಹುಲ್ ಕ್ರಮವಾಗಿ ವರದಿಗಾರಿಕೆ ಹಾಗೂ ರೀಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಉಪನ್ಯಾಸಕ ಸುಧೀಂದ್ರ ಶಾಂತಿ…
ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನಡೆಯಲಿರುವ 2 ದಿನಗಳ ಟೆಕ್ ಉತ್ಸವ್ – 2025, ಅಂತರಕಾಲೇಜು ತಂತ್ರಜ್ಞಾನ ಸಂಬAಧಿ ಸ್ಪರ್ಧೆಗಳಿಗೆ ವಿದ್ಯಾಗಿರಿಯ ಡಾ ವಿ ಎಸ್ ಅಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಜ್ಯುಗೊ ಸ್ಟುಡಿಯೋ ಪ್ರೈ. ಲಿ. ನ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರಿದAತೆ ಅವುಗಳ ಬಳಕೆಗೆ ಅಗತ್ಯವಿರುವ ಪರಿಣತಿಯನ್ನು ಪಡೆದುಕೊಳ್ಳುವುದು ಬಹಳ ಅವಶ್ಯ. ಬದಲಾಗುತ್ತಿರುವ ತಂತ್ರಜ್ಞಾನದ ಅವಶ್ಯಕತೆ ಹಾಗೂ ಅವುಗಳ ಬಳಕೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕಳೆದ 15 ವರ್ಷಗಳ ತಾಂತ್ರಿಕ ಬದಲಾವಣೆ ಗಣನೀಯವಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯು ಇನ್ನಷ್ಟು ಪ್ರಗತಿ ಹೊಂದಲಿದೆ.ಟೆಕ್ಕಿಗಳು, ಇಂಜಿನಿಯರ್ ಗಳು ತಂತ್ರಜ್ಞಾನವನ್ನು ಬಳಸುವ ವಿಧಾನದ ಮೇಲೆ ಒಟ್ಟು ಸಮಾಜದ ರೀತಿ ಅವಲಂಬಿತವಾಗಿರುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ತಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಫೆಸ್ಟ್ಗಳಿಗೆ ಯಾವ ರೀತಿಯ ಹೆಚ್ಚು…
ಕನ್ನಡ ನಾಟ್ಯ ರಂಗ (ರಿ) ಹೈದರಾಬಾದ್ ಇದರ ವತಿಯಿಂದ ಮಾರ್ಚ್ 9ರಂದು ಹೈದರಾಬಾದ್ ನ ಸುಂದರಯ್ಯ ಕಲಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಕನ್ನಡ ನಾಟ್ಯ ರಂಗ(ರಿ.) ಇದರ ಅಧ್ಯಕ್ಷರಾದ ಶ್ರೀ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಹೈದರಾಬಾದ್ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ರತ್ನಾಕರ ರೈ, ಹೋಟೆಲ್ ಉದ್ಯಮಿಗಳಾದ ಅಲ್ತಾರು ದೇಬೆಟ್ಟು ಶ್ರೀ ಜಯರಾಮ ಶೆಟ್ಟಿ, ಶ್ರೀ ಅಣ್ಣಪ್ಪ ಶೆಟ್ಟಿ ಮಲ್ಯಾಡಿ ಮತ್ತು ನಾಟ್ಯರಂಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕುಳಾಯಿ ಎಂಬ ಹಳ್ಳಿಯು ಈಗಿನ ಚಿತ್ರಾಪುರ. ಇದು ಮಂಗಳೂರು ತಾಲ್ಲೂಕಿನಲ್ಲಿರುವ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ತಾಯಿ ದುರ್ಗಾಪರಮೇಶ್ವರಿಯನ್ನು ಪೂಜಿಸುತ್ತಾರೆ. ೧೩ ಶತಮಾನದಲ್ಲಿ ಮಧ್ವಾಮಠದ ಪೇಜಾವರ ಪೀಠವನ್ನು ವಿಜಯತೀರ್ಥ ಸ್ವಾಮೀಜಿಯವರು ಅಲಂಕರಿಸಿ ಇಲ್ಲಿ ದುರ್ಗಾಪರಮೇಶ್ವರಿಯನ್ನು ಲಿಂಗದ ರೂಪದಲ್ಲಿ ಪೂಜಿಸಿದರು. ಈ ದೇವಿಯು ಜಲದುರ್ಗೆಯ ಪುನರ್ಜನ್ಮ ಎಂಬ ನಂಬಿಕೆ ಇದೆ. ಈ ದೇವಿಯು ಅತಿ ಶಕ್ತಿಯುಳ್ಳ ದೇವತೆಯಾಗಿದ್ದಾಳೆ. ಪುರಾಣಗಳ ಪ್ರಕಾರ ಸಪ್ತದುರ್ಗಾ ಅಕ್ಕ ತಂಗಿಯರು ಈ ಜಾಗಗಳಲ್ಲಿ ಶಕ್ತಿದೇವತೆಯಾಗಿ ನೆಲೆಸಿದ್ದಾರೆ. ಅವುಗಳೆಂದರೆ ಚಿತ್ರಾಪುರ, ಸಸಿಹಿತ್ಲು, ಪೊಳಲಿ, ಕಟೀಲು, ಮುಂಡ್ಕೂರು, ಕುಂಜಾರು ಮತ್ತು ಬಪ್ಪನಾಡು ಸ್ಥಳಗಳಲ್ಲಿ ದಾರಿಗಾಸುರನನ್ನು ಕೊಂದ ನಂತರ ನೆಲೆಸಿದರು. ಈ ಸ್ಥಳಗಳು “ಶಕ್ತಿಕೇಂದ್ರ” ಎಂಬ ಹೆಸರಿನಿಂದ ಗುರುತಿಸಲ್ಪಟ್ಟಿವೆ. ಈ ಸ್ಥಳಕ್ಕೆ ಚಿತ್ರಾಪುರ ಎಂದು ಹೆಸರು ಬರಲು ಕಾರಣ ಸಪ್ತ ದುರ್ಗೆಯರಲ್ಲಿ ಅತಿ ಕಿರಿಯಳಾದ ಜಲದುರ್ಗೆ, ರಾಕ್ಷಸರಾದ ಚಿತ್ರಾಸುರ ಮತ್ತು ವಿಚಿತ್ರಾಸುರರನ್ನು ವಧಿಸಿದ್ದು. ರಾಕ್ಷಸರಾದ ಚಿತ್ರಾಸುರ ಮತ್ತು ವಿಚಿತ್ರಾಸುರರಿಗೆ ತಮ್ಮ ಗುರುಗಳನ್ನು ವಧಿಸಿದ ಜಲದುರ್ಗೆಯ ಮೇಲೆ ಸೇಡು ತೀರಿಸಿಕೊಳ್ಳುವ ಹಂಬಲವಿತ್ತು. ಈ ರಾಕ್ಷಸರ ಕಣ್ಣು ಓರ್ವ…
‘ಯಕ್ಷಗಾನ ತಾಳ ಮದ್ದಳೆ ಕಾರ್ಯಕ್ರಮಗಳು ಅಹೋರಾತ್ರಿ ನಡೆಯುತ್ತಿದ್ದ ಕಾಲವೊಂದಿತ್ತು. ಈಗಿನ ಯುವ ಸಮುದಾಯಕ್ಕೆ ಅದರ ಕಲ್ಪನೆಯೂ ಇರಲಾರದು. ಆದರೆ ವಿನಯ ಆಚಾರ್ಯರ ನೇತೃತ್ವದಲ್ಲಿ ನಡೆದ ವಿಶಿಷ್ಟ ಪರಿಕಲ್ಪನೆಯ ಶಾರದಾ ಮಾಸದ ಕೂಟವು ತಾಳಮದ್ದಳೆಯ ಗತಕಾಲದ ಇತಿಹಾಸವು ಮರುಕಳಿಸುವಂತೆ ಮಾಡಿದೆ’ ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದೊಂದಿಗೆ ಸುರತ್ಕಲ್ ಸಮೀಪ ಹೊಸಬೆಟ್ಟು ಮಾರುತಿ ಬಡಾವಣೆಯ ಶಾರದಾ ಮಂದಿರದಲ್ಲಿ ಇಡೀ ರಾತ್ರಿ ನಡೆದ ಶಾರದಾ ಮಾಸದ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಯಕ್ಷಗಾನ ಹಿಮ್ಮೇಳ ವಾದನಗಳ ನುಡಿತದೊಂದಿಗೆ ಜರಗಿದ ಉದ್ಘಾಟನೆಯನ್ನು ಹಿರಿಯ ವಿದ್ವಾಂಸ ಹೊಸಬೆಟ್ಟು ಗುರುರಾಜ ಆಚಾರ್ಯ ಜಾಗಟೆ ಬಾರಿಸುವುದರ ಮೂಲಕ ನೆರವೇರಿಸಿದರು. ಯಕ್ಷಗುರು ಶಂಕರನಾರಾಯಣ ಮೈರ್ಪಾಡಿ, ಕರ್ಣಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಾಜೇಶ ಕುಳಾಯಿ, ಉಜ್ವಲ್ ಎಂ. ಕೆ. ಅತಿಥಿಗಳಾಗಿ ಪಾಲ್ಗೊಂಡರು. ಕಾರ್ಯಕ್ರಮದ ಸಂಘಟಕರಾದ ವಿನಯ ಆಚಾರ್ಯ ಹೊಸಬೆಟ್ಟು ಸ್ವಾಗತಿಸಿ…
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ಇದರ ಮಾರ್ಗದರ್ಶನದೊಂದಿಗೆ ಮಹಿಳಾ ಬಂಟರ ವಿಭಾಗದ ಸಾರಥ್ಯದಲ್ಲಿ ಯುವ ಬಂಟರ ವಿಭಾಗ, ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಮಾರ್ಚ್ 11 ರಂದು ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಪುತ್ತೂರು ಎಂ ಸುಂದರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ತುಳು ಉಪನ್ಯಾಸಕಿ ಮಣಿ ಎಂ ರೈ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತುಳುನಾಡಿನ ಬಂಟ ಮಹಿಳೆಯರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಗಳಾದ ಅನೇಕ ಉದಾಹರಣೆಗಳಿವೆ. ಬಂಟ ಮಹಿಳೆಯರು ಕೃಷಿ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಬಂಟ ಸಮಾಜಕ್ಕೆ ಗೌರವವನ್ನು ತಂದಿದ್ದಾರೆ ಎಂದು ಹೇಳಿದರು. ಪುತ್ತೂರು ಬಂಟ ಸಮಾಜಕ್ಕೆ ಬಹುದೊಡ್ಡ ಹೆಸರನ್ನು ತಂದಿದ್ದ ಊರಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ,…
ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸರಕಾರವನ್ನು ಒತ್ತಾಯಿಸಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇರುವ ಬಂಟರ ಸಮುದಾಯವು ಒಟ್ಟು ಜನಸಂಖ್ಯೆಯಲ್ಲಿ ಶೇ.60 ಮಂದಿ ಬಡತನ ರೇಖೆಯಲ್ಲಿದ್ದು, ಶೇ.30 ರಷ್ಟು ಮಂದಿ ಮಧ್ಯಮ ವರ್ಗದಲ್ಲಿದ್ದು, ಕೇವಲ 10 ಶೇ. ಜನರು ಶ್ರೀಮಂತರಾಗಿದ್ದಾರೆ. ಈ ಬಂಟ ಸಮುದಾಯ ಕಡಿಮೆ ಜನರು ಇರುವ ಒಂದು ವಿಶಿಷ್ಟ ಸಮುದಾಯವಾಗಿದ್ದು, ತೀರ ಕೆಳಸ್ತರದ ಮಂದಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶ ನಮ್ಮದಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಬಡ ಜನರನ್ನು ಮುಖ್ಯವಾಹಿನಿಗೆ ಕರೆತರಲು ಸರಕಾರದ ಸಂಪೂರ್ಣ ಸಹಾಯ ಇದ್ದಲ್ಲಿ ಮಾತ್ರ ಸಾಧ್ಯ. ಅದಕ್ಕಾಗಿ ಕರ್ನಾಟಕ ಘನ ಸರಕಾರ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ, ಮುಂದಿನ ದಿನಗಳಲ್ಲಿ ಬಡ ಬಂಟರ ಉನ್ನತೀಕರಣ ಮಾಡಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಹಕ್ಕೊತ್ತಾಯ ಮಾಡುತ್ತಿದೆ ಎಂದು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.