Author: admin
ಹಬ್ಬಗಳ ಆಚರಣೆ ಕೇವಲ ಧಾರ್ಮಿಕತೆಗಳಿಗಷ್ಟೇ ಸೀಮಿತವಾಗಿರದೆ ಜೀವನದ ಸ್ವಾರಸ್ಯ ಹಾಗೂ ಪ್ರೀತಿ – ಬಾಂಧವ್ಯದ ಸಂಕೇತವೂ ಹೌದು. ಸಮೂಹ ಹಾಗೂ ಕುಟುಂಬದ ಹಿತ ಚಿಂತನೆಯು ಹಬ್ಬಗಳ ಮುಖ್ಯ ಆಶಯ. ಕುಟುಂಬ ಸಾಮರಸ್ಯದ ಪ್ರತೀಕವಾಗಿ ಬೆಳೆದು ಬಂದ ಹಬ್ಬ ರಕ್ಷಾಬಂಧನ. ಶ್ರಾವಣ ಮಾಸ ಪ್ರಾರಂಭವಾಗುತ್ತಲೇ ಹಬ್ಬಗಳು ಸಾಲು ಸಾಲಾಗಿ ಬರುತ್ತದೆ. ಶ್ರಾವಣ ಹುಣ್ಣುಮೆಯ ದಿನ ಆಚರಿಸುವ ಸೋದರ – ಸೋದರಿಯರ ಪವಿತ್ರ ಸಂಬಂಧವನ್ನು ಬೆಸೆಯುವ ಸಾಂಪ್ರದಾಯಿಕ ಹಬ್ಬ ರಕ್ಷಾಬಂಧನ ಅಥವಾ ರಾಖಿ ಹಬ್ಬ. ಪರಂಪರಾಗತವಾಗಿ ಆಚರಿಸಿಕೊಂಡು ಬರುವ ಹಬ್ಬ ಹರಿ ದಿನಗಳಲ್ಲಿ ಹಿರಿಯರು ಕೌಟುಂಬಿಕ ಬಾಂಧವ್ಯದ ಬೆಸುಗೆಗೆ ಕಂಡುಕೊಂಡ ಸಂಪ್ರದಾಯಗಳ ಆಚರಣೆಯ ಸಂಬಂಧಗಳನ್ನು ಗಟ್ಟಿಗೊಳಿಸಿವೆ. ಆತ್ಮೀಯ ಭ್ರಾತೃ ಸಂಬಂಧವನ್ನು ಭಾವ ಬಂಧದ ಮೂಲಕ ಬಂದಿಸುವ ಹಬ್ಬವೇ ರಕ್ಷಾ ಬಂಧನ. ಸಹೋದರರ ಯೋಗ ಕ್ಷೇಮ ಹಾರೈಸಿ, ತಮ್ಮ ರಕ್ಷಣೆಯ ಭಾರವನ್ನು ನೆನಪಿಸುವ ಹಬ್ಬವಿದು. ಅಣ್ಣ – ತಂಗಿಯರ ಬಾಂಧವ್ಯದ ಅನುಪಮ ಸಂಕೇತವಾಗಿರುವ ರಕ್ಷಾ ಬಂಧನದಂದು ಸಹೋದರಿಯರು ಸಹೋದರರ ಕೈಗೆ ರಾಖಿ ಕಟ್ಟುವುದೇ ಈ ಹಬ್ಬದ…
ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಚುನಾವಣೆಯಲ್ಲಿ ಮುರಳೀಧರ ಹೆಗ್ಡೆ ಅವರ ತಂಡ ಗೆಲುವು ಸಾಧಿಸಿದೆ. ಒಟ್ಟು 68 ಬೂತ್ ಗಳಲ್ಲಿ ನಡೆದ ಮತದಾನದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪೃಥ್ವಿರಾಜ್ ರೈ ಕೆ ಬಿ ವಿರುದ್ಧ ಮುರಳೀಧರ್ ಹೆಗ್ಡೆ ಅವರು ಸ್ಪರ್ಧಿಸಿ 5,000 ಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಡಾ ಜಗದೀಶ್ ವಿ ಶೆಟ್ಟಿ, ಮಹಿಳಾ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾಂಜಲಿ ಡಿ ಅಜಿಲ, ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಆನಂದರಾಮ ಶೆಟ್ಟಿ, ಸಹಕಾರ್ಯದರ್ಶಿ ಸ್ಥಾನಕ್ಕೆ ಶ್ಯಾಮಲಾ ಶೆಟ್ಟಿ, ಖಜಾಂಚಿ ಸ್ಥಾನಕ್ಕೆ ಅಮರನಾಥ್ ಶೆಟ್ಟಿ ಅವರುಗಳು ಸ್ಪರ್ಧಿಸಿ ಭರ್ಜರಿ ಗೆಲುವನ್ನು ಕಂಡಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅರವಿಂದ ಶೆಟ್ಟಿ, ಜಯಶ್ರೀ ಸಿ ರೈ, ಕೀರ್ತನ್ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಸಿ ಎ ಕಿಶೋರ್ ಶೆಟ್ಟಿ, ಮಾಲತಿ ಜೆ ಶೆಟ್ಟಿ, ನಿರಂಜನ್ ಶೆಟ್ಟಿ, ರಮೇಶ್ ಶೆಟ್ಟಿ, ಸದಾನಂದ ಸುಲಯ, ಸಂದೀಪ್ ಶೆಟ್ಟಿ, ಸತೀಶ್ ಕುಮಾರ್ ಶೆಟ್ಟಿ, ಶೋಭಾ ಶೇಖ,…
ಪಿಎಚ್ ಡಿ ಪದವಿ ಪಡೆದ ಡಾ. ಸುಧಾರಾಣಿ ಶೆಟ್ಟಿ ಅವರಿಗೆ ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಸನ್ಮಾನ ಸಮಾರಂಭ ಜರಗಿತು. ಬಂಟರ ಭವನದಲ್ಲಿ ನಡೆದ ಇಡ್ಯಾ ಗ್ರಾಮದ ವಲಯ ಸಂಘಟನಾ ಕಾರ್ಯಕ್ರಮದಲ್ಲಿ ಸುಧಾರಾಣಿ ಅವರು ಪಿಎಚ್ ಡಿ ಪದವಿ ಪೂರೈಸಿದ ಹಿನ್ನಲೆಯಲ್ಲಿ ಅವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯಕ್ಷೆ ಚಿತ್ರಾ ಜೆ ಶೆಟ್ಟಿಯವರು ವಹಿಸಿದ್ದರು. ಸುಧಾರಾಣಿ ಶೆಟ್ಟಿಯವರು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿದ್ದುಕೊಂಡು ಈಗ ಪಿಎಚ್ ಡಿ ಪದವಿಯನ್ನು ಪೂರೈಸಿದ್ದಾರೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸುಧಾರಾಣಿ ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಮನೆಯ ವಾತಾವರಣ ಮಹಿಳಾ ವೇದಿಕೆಯ ಸಂಘಟನೆಯಲ್ಲಿ ಕಾಣಬಹುದು ಎಂದರು. ಇದೇ ಸಂದರ್ಭದಲ್ಲಿ ಜೆಸಿಐ ಅಧ್ಯಕ್ಷೆಯಾಗಿ ಆಯ್ಕೆಗೊಂಡಿರುವ ಮಹಿಳಾ ವೇದಿಕೆಯ ಜತೆ ಕಾರ್ಯದರ್ಶಿ, ಜೆಸಿಐಯ ಅಂತರಾಷ್ಟ್ರೀಯ ತರಬೇತುದಾರೆ ರಾಜೇಶ್ವರಿ ಡಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ರಾಜೇಶ್ವರಿ ಶೆಟ್ಟಿ ಸಂಘಟನೆಯ ಕುರಿತು ಕಾರ್ಯಾಗಾರ ನಡೆಸಿದರು. ಸಂಘಟನೆಯ…
ವಿಶ್ವವಿದ್ಯಾನಿಲಯ ಕಾಲೇಜುಡ್ ಅಪ್ಪೆ ಎನ್ನಪ್ಪೆ ತುಳು ನಾಟಕ ಪ್ರದರ್ಶನನ್ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜುದ ಪ್ರಾಂಶುಪಾಲರಾಯಿನ ಡಾ. ಲಕ್ಷ್ಮೀ ದೇವಿ. ಎಲ್ ತುಡರ್ ಪೊತ್ತದ್ ಉದಿಪನ ಮಲ್ದೆರ್. ತುಳು ಎಂ. ಎ ಸ್ನಾತ್ತಕೋತ್ತರ ಅಧ್ಯಯನ ವಿಭಾಗದ ಉಪಾನ್ಯಾಸಕಿ ಶ್ರೀಮತಿ ಮಣಿ. ಎಂ. ರೈ ಪ್ರಾರ್ಥನೆ ಮಂತೆರ್. ತುಳು ಎಂ. ಎ ಉಪನ್ಯಾಸಕಿ ಶ್ರೀಮತಿ ಸಂಧ್ಯಾ ಆಳ್ವ ಕಾರ್ಯಕ್ರಮನ್ ನಿರೂಪಣೆ ಮಂತ್ ದ್ ಸೊಲ್ಮೆಲ್ ಸಂದಿಸಯೆರ್. ಶ್ರೀ ಪ್ರಸಾದ್ ಅಂಚನ್ ಕಾರ್ಯಕ್ರಮಗ್ ಸಹಕಾರ ಕೊರ್ತೆರ್. ಸಭಾ ಕಾರ್ಯಕ್ರಮ ಆಯಿ ಬೊಕ್ಕ ಶ್ರೀ. ಗುರುರಾಜ ಮಾರ್ಪಳ್ಳಿ ನಿರ್ದೇಶನ ಮಂತಿನ ‘ಅಪ್ಪೆ ಎನ್ನಪ್ಪೆ’ ತುಳು ನಾಟಕ ಪ್ರದರ್ಶನ ಆಂಡ್. ಕಾರ್ಯಕ್ರಮಡ್ ಮಾಜಿ ಉಪಮೆಯರ್ ಬಶೀರ್ ಬೈಕಂಪಾಡಿ, ಡಾ. ಮಾಧವ ಎಂ, ಸುಕುಮಾರ್ ಮೋಹನ್, ಡಾ. ರಾಜೇಶ್ ಆಳ್ವ, ಡಾ. ಯತೀಶ್ ಕುಮಾರ್ ಪಾಲ್ ಪಡೆದ್ ಇತ್ತೆರ್.
ಬಂಟ್ಸ್ ಫ್ಯಾಮಿಲಿ ಯು.ಎ.ಇ ವತಿಯಿಂದ ಇತ್ತೀಚೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಭಕ್ತಿ ಸಡಗರದಿಂದ ಜರಗಿತು. ಯು.ಎ.ಇ.ಯ ಎಲ್ಲಾ ರಾಜ್ಯದ ಬಂಟ ಬಾಂಧವರು ಅಲ್ಲದೇ ಇತರ ಸಮಾಜದ ಸಾವಿರಾರು ಭಕ್ತರು ಪೂಜೆಗೆ ಆಗಮಿಸಿ ಶ್ರೀ ಸತ್ಯನಾರಾಯಣ ದೇವರ ಕೃಪೆಗೆ ಪಾತ್ರರಾದರು. ದುಬಾಯಿಯ ಅಲ್ ಗುಸೈಸ್ ನ ಇಂಡಿಯನ್ ಅಕಾಡೆಮಿ ಸ್ಕೂಲ್ ನ ಸಭಾಂಗಣದಲ್ಲಿ ಬೆಳಿಗ್ಗೆ ಒಂಬತ್ತರಿಂದ ಮಧ್ಯಾಹ್ನದವರೆಗೆ ಪುರೋಹಿತರಾದ ರಘು ಭಟ್ಟರ ಪೌರೋಹಿತ್ಯದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಪ್ರತಿನಿಧಿಯಾಗಿ ಧ್ರುವ ಶೆಟ್ಟಿ ಮತ್ತು ಶ್ರೀಮತಿ ದೀಕ್ಷಾ ಶೆಟ್ಟಿ ದಂಪತಿ ಹಾಗೂ ಪುರಂದರ ಶೆಟ್ಟಿ ಮತ್ತು ಶ್ರೀಮತಿ ಅಶ್ವಿನಿ ಶೆಟ್ಟಿ ದಂಪತಿಗಳು ಕುಳಿತುಕೊಂಡಿದ್ದರು. ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ದುಬೈ ವತಿಯಿಂದ ಭಕ್ತಿ ಭಜನೆ ಹಾಗೂ ಯು.ಎ.ಇ. ಬಂಟ್ಸ್ ಸದಸ್ಯ ಸದಸ್ಯೆಯರಿಂದ ನೃತ್ಯ ಭಜನೆ ಜರಗಿತು. ಯುಎಇಯ ಬಂಟ್ಸ್ ನ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿಯವರು ಪೂಜೆಗೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಪೂಜೆಗೆ ಸಹಕಾರ ನೀಡಿದ ಶ್ರೀ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ, ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ದಿನಾಂಕ 28.10.2023ರಂದು “ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆ”ಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾ ಕೂಟ” ಮತ್ತು ದಿನಾಂಕ 29.10.2023 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ “ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆ”ಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮಗಳ ಕುರಿತ ಎಂಟನೇ ಪೂರ್ವಭಾವಿ ಸಭೆಯು ದಿನಾಂಕ 04/10/2023 ರಂದು ಬಂಟರ ಸಂಘ ಪುಣೆಯ ಸಭಾಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಜರಗಿತು. ಸಭೆಯಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮದ ಕರಪತ್ರವನ್ನು ಬಂಟರ ಸಂಘ ಪುಣೆಯ ಅಧ್ಯಕ್ಷರಾದ ಶ್ರೀ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟುರವರು ಅನಾವರಣಗೊಳಿಸಿದರು. ಸಭೆಯಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಸಲಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು ಹಾಗೂ ವಿಶ್ವ ಬಂಟರ ಸಮ್ಮೇಳನದ…
ಬೆಳ್ತಂಗಡಿ ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮವು ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಕಾರ್ಯದರ್ಶಿ ಸಂಜೀವ ಶೆಟ್ಟಿ, ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ, ಕೋಶಾಧಿಕಾರಿ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀಯುತ ಐಕಳ ಹರೀಶ್ ಶೆಟ್ಟಿಯವರು ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಿದ್ದು, ಆ ಮೂಲಕ ಬೇರೆಲ್ಲಾ ಜಾತಿ ಸಂಘಟನೆಗಳಿಗೆ ನಿಗಮ ಮಾಡಿ ಸ್ಥಾನಮಾನ ನೀಡುವುದಾದರೆ ಬಂಟ ಸಮಾಜವನ್ನು ಕಡೆಗಣಿಸುವ ಉದ್ದೇಶವಾದರೂ ಏನು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಂಟ ಸಮಾಜಕ್ಕೂ ನಿಗಮದ ಅಗತ್ಯತೆ ಇದ್ದು ಸಮಾಜಕ್ಕೆ ಮನ್ನಣೆ ನೀಡದಿದ್ದಲ್ಲಿ ಪೂರ ಬಂಟ ಸಮಾಜ ಒಂದಾಗಿ ಮುಂಬರುವ ಚುನಾವಣೆಯಲ್ಲಿ ಸಮಾಜದ ಶಕ್ತಿಯನ್ನು ತೋರಿಸಿ ಕೊಡುತ್ತೇವೆ ಎಂದು ಐಕಳ ಹರೀಶ್ ಶೆಟ್ಟಿಯವರು ನೀಡಿದ ಹೇಳಿಕೆಗೆ ಇಡೀ ಬಂಟ ಸಮಾಜ ಬದ್ಧವಾಗಿದೆ ಎಂದು ಹೇಳ ಬಯಸುತ್ತೇನೆ. ಸರಕಾರಿ ನೌಕರಿ, ವಿದ್ಯಾಭ್ಯಾಸ ಮತ್ತು ಉನ್ನತ ಶಿಕ್ಷಣದಲ್ಲಿ ಬಂಟ ಸಮಾಜ ಹಿಂದುಳಿಯಲು ಸರಕಾರದ ಈ ನೀತಿಯೇ ಕಾರಣವಾಗಿದೆ. ಬಂಟ ಸಮಾಜದಲ್ಲಿ ಉಳ್ಳವರು ಬಹಳಷ್ಟು ಜನರು ಇದ್ದಾರೆ, ಆದರೆ ಒಪ್ಪತ್ತಿನ ಊಟಕ್ಕೂ ಪರಿತಪಿಸುವ ಬಹಳಷ್ಟು ಜನ ಬಂಟ ಬಾಂಧವರೂ ಇದ್ದಾರೆ. ನಮ್ಮ ಸಮಾಜದಲ್ಲಿ ಶಾಸಕ ಸಂಸದರಾದವರು ತಮ್ಮ ಜಾತೀಯ ಸಂಘಟನೆಯನ್ನು ಬಲಪಡಿಸುವತ್ತ, ಸಮಾಜವನ್ನು…
ಕಾರ್ಕಳದಲ್ಲಿ ನಡೆದ ಕ್ರೀಡಾಕೂಟದಲ್ಲಿ ಮೂಡಬಿದಿರೆ ವಲಯದ ಯುವ ಬಂಟರು ಅತೀ ಹೆಚ್ಚು ಪ್ರಶಸ್ತಿಗಳನ್ನು ಗೆಲ್ಲುವುದರ ಮೂಲಕ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಕಾರ್ಕಳ ಯುವ ಬಂಟರ ಸಂಘದ ವತಿಯಿಂದ ನಡೆದ ಕ್ರೀಡಾಕೂಟದಲ್ಲಿ ಮೂಡಬಿದಿರೆ ಯುವ ಬಂಟರ ಸಂಘವು ವಾಲಿಬಾಲ್ – ಪ್ರಥಮ, ತ್ರೋ ಬಾಲ್ – ಪ್ರಥಮ, ನೃತ್ಯ ಸ್ಪರ್ಧೆ – ತೃತೀಯ ಸ್ಥಾನವನ್ನು ಪಡೆದುಕೊಂಡು ಬಂಟ ಸಮಾಜದ ಪ್ರಶಂಸೆಗೆ ಪಾತ್ರವಾಯಿತು. ಯುವ ಬಂಟರ ಸಂಘದ ಅಧ್ಯಕ್ಷ ಜಯಕುಮಾರ್ ಶೆಟ್ಟಿ, ಗೌರವ ಸಲಹೆಗಾರರಾದ ಮನೋಜ್ ಕುಮಾರ್ ಶೆಟ್ಟಿ, ಅರುಣ್ ಶೆಟ್ಟಿ, ಪ್ರ ಕಾರ್ಯದರ್ಶಿ ಸಂದೀಪ್ ಶೆಟ್ಟಿ, ಉಪಾಧ್ಯಕ್ಷರಾದ ರಮೇಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ಶೃತಿ ಶೆಟ್ಟಿ, ಆದರ್ಶ್ ಶೆಟ್ಟಿ, ಸುಧೀರ್ ಶೆಟ್ಟಿ, ದೀಪಕ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಯುವಶಕ್ತಿ ನಿಜವಾದ ರಾಷ್ಟ್ರಶಕ್ತಿ ಎಂಬ ಘೋಷ ವಾಕ್ಯವನ್ನು ಆಗಾಗ ಉಲ್ಲೇಖಿಸುವ ನಮ್ಮ ನೆಚ್ಚಿನ ಪ್ರಧಾನಮಂತ್ರಿ ಮೋದೀಜಿಯವರ ಮಹಾದಿಚ್ಛೆಗೆ ಬಲ ತುಂಬುವ ಮಹಾನ್ ಕಾರ್ಯನಿರತ ರಾಕೇಶ್ ಅಜಿಲರ ಸಾಧನೆಯ ಕತೆ ನಿಜಕ್ಕೂ ರೋಚನೀಯ. ಅಜಿಲರು ಆರಿಸಿದ ಕ್ಷೇತ್ರ ಹಣ ಸಂಪಾದನೆಯದಲ್ಲ. ಆದರೆ ಅದೆಷ್ಟೋ ರಾಷ್ಟ್ರಪ್ರೇಮಿ ಯುವಕರಿಗೆ ಯೋಗ್ಯ ತರಬೇತಿ ನೀಡಿ NCC ಮತ್ತು ARMY ಗೆ ಆಯ್ಕೆಯಾಗಲು ಬೇಕಾಗುವ ಶಿಸ್ತು, ಆತ್ಮಸ್ಥೈರ್ಯ, ಕಷ್ಟ ಸಹಿಷ್ಣುತೆ, ದೇಹಬಲ ಹಾಗೂ ರಾಷ್ಟ್ರ ಪ್ರೇಮದ ತೇಜಸ್ಸು ತುಂಬುವ ಮಹಾನ್ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದನ್ನು ನೆನೆಸಿಕೊಂಡರೆ ಯಾರಿಗಾದರೂ ಅಭಿಮಾನ ಮೂಡದೇ ಇರದು. ರಾಕೇಶ್ ಅಜಿಲರು ಕವತ್ತಾರು ಬೈಲಗುತ್ತು ರಮೇಶ್ ಅಜಿಲ ಹಾಗೂ ಪಾಂಡ್ಯಾರು ಬರ್ಪಾಣಿ ಪ್ರಮೀಳಾ ಅಜಿಲ ದಂಪತಿಯರಿಗೆ ಹಿರಿಯ ಪುತ್ರನಾಗಿ ಜನಿಸಿದರು. ಹಾಸನದ ಕಡ್ಲೂರು ಎಂಬಲ್ಲಿ ತನ್ನ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿದರು. ಮುಂದೆ STDP ಕಟೀಲು ಹಾಗೂ ಪೂರ್ಣ ಪ್ರಜ್ಞ ಅದಮಾರು ಇಲ್ಲಿ ಶಿಕ್ಷಣ ಮುಂದುವರಿಸಿದರು. ಪದವಿ ಪೂರ್ವ ತರಗತಿಯ ಹನ್ನೆರಡನೆ ತರಗತಿಯ ಇತಿಹಾಸ ವಿಷಯದಲ್ಲಿ ರಾಜ್ಯಕ್ಕೆ ಮೂರನೇ…