Author: admin

ಒಳ್ಳೆಯತನವೆನ್ನುವುದು ಸರಾಗವಾಗಿ ಬಂದು ನಮ್ಮ ಕಾಲಡಿ ಬೀಳುವುದಿಲ್ಲ. ಅದನ್ನು ನಾವೇ ಬೆನ್ನತ್ತಿಕೊಂಡು ಹೋಗಬೇಕು. ಆದರೆ ನನ್ನೀ ಗೆಳೆಯ ಬದುಕಿನ ಉರಿ ಬಿಸಿಲಿನ ವೇಳೆ ತಂಗಾಳಿಯಂತೆ ಸಿಕ್ಕಿ ಬಿಟ್ಟವ. ಅವನ ಬೆನ್ನನ್ನು ನಾನು ಬಿದ್ದೆನಾ? ನನ್ನ ಬೆನ್ನನ್ನು ಅವನು ಬಿದ್ದನಾ? ಗೊತ್ತಿಲ್ಲ. ಆದರೆ ನಮ್ಮಿಬ್ಬರನ್ನೂ ಆ ಸ್ನೇಹ ಬೆಂಬಿಡದೆ ಕಾಯುತ್ತಿರುವುದಂತೂ ಸತ್ಯವೇ. ದೂರ ಬಹುದೂರ ನಡೆದು ಬಂದವನಿಗೆ ಅಸ್ಪಷ್ಟ ಎನ್ನಿಸಿ ಬಿಡುವ ರಸ್ತೆಯ ತಿರುವು, ಸುತ್ತಲೂ ಕಾಣುವ ಪರಿಚಿತ ಅನ್ನಿಸಿಕೊಳ್ಳುವ ಅಪರಿಚಿತ ಮುಖಗಳು, ಹೊಳೆ ದಾಟಿ ಆಚೆ ಹೋಗೋಣ ಎಂದರೇ ಮುರಿದುಬಿದ್ದ ಸೇತುವೆಯ ನಿಸ್ಸಾಯಕತೆ, ನಿಂತ ನೆಲದ ಕಾವು ಇಡೀಯ ದೇಹ ವ್ಯಾಪಿಸಿದ ಬೆವರ ಕುದಿತದ ಬಳಲಿಕೆ, ಬೇಸರದ ಸಂಜೆಗಳಿಗೆ ಬೇಕೆನಗೆ ಹಿತದ ಮಾತೊಂದು ಎಂಬ ತನ್ಮಯದ ಕ್ಷಣಗಳಿಗೆ, ನಂಬಿಕೆ ದ್ರೋಹ ಎನ್ನುವ ಮರಮೋಸದ ಬಿಗಿಬಲೆಯ ಹಿಡಿತಕ್ಕೆ ಅಲುಗಾಡಲಾರದೆ ಮನಸು ನೀರಿಗೆ ಬಿದ್ದ ಗುಬ್ಬಚ್ಚಿ ಆದಾಗಲೆಲ್ಲ ನೆನಪಿಗೆ ಬಂದು ಬಿಡುವ ಗೆಳೆಯ ದಿವಾಕರ್ ಶೆಟ್ಟಿ ಅಡ್ಯಾರು. “ಉದಯ್ ನಮ್ಮದು ಭಾವುಕ ಪ್ರಪಂಚ ಕಣೋ,…

Read More

“ಹಸಿದವರು ವ್ಯಾಕರಣವನ್ನು ಉಣ್ಣಲಾರರು ; ಬಾಯಾರಿದವರು ಕಾವ್ಯರಸದಿಂದ ತಣಿಯಲಾರರು ವೇದಗಳನ್ನೋದಿ ಯಾರೂ ಕುಲೊದ್ಧಾರ ಮಾಡಿಕೊಂಡವರಿಲ್ಲ. ಆದ್ದರಿಂದ ಹಣ ಗಳಿಸು ಅದಿಲ್ಲದೆ ಗುಣಗಳಿಗೆ ಬೆಲೆಯಿಲ್ಲ” ಬಹುಶಃ ಹಳ್ಳಿ ಬಿಟ್ಟು ಪಟ್ಟಣ ಸೇರಿದ ಹೆಚ್ಚಿನವರ ಬದುಕಿನ ಹೆಜ್ಜೆಗುರುತನ್ನು ಅರಸುತ್ತ ಸಾಗಿದಾಗ ಮೇಲಿನ ಸುಭಾಷಿತದ ಆಳ ಅರಿವಾಗುತ್ತದೆ. ಉಳ್ತೂರು ಮೋಹನ್‍ದಾಸ್ ಶೆಟ್ಟಿ ಬಂಟರ ಪ್ರತಿಷ್ಠಿತ ಆರ್ಥಿಕ ಸಂಸ್ಥೆ ಮಾತೃ ಭೂಮಿ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‍ನಲ್ಲಿ ಉಪಕಾರ್ಯಾಧ್ಯಕ್ಷರಾಗಿ ಇದೀಗ ಕಾರ್ಯಾಧಕ್ಷರಾಗಿ ಆಯ್ಕೆಯಾಗಿರುವುದು ಅವರ ಸಾಧನೆಗೆ ಸಂದ ದೊಡ್ಡ ಗೌರವ. ಇವರು ಕಳೆದ 15 ವರ್ಷಗಳಿಂದ ಈ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸಂಸ್ಥೆಗೆ ಶೇರು ಬಂಡವಾಳ ಸಂಗ್ರಹಿಸುವುದರಲ್ಲಿ ಮೈಲಿಗಲ್ಲು ನಿರ್ಮಿಸಿದವರು. ಇವರ ಸಮಾಜ ಸೇವೆಯ ತುಡಿತಕ್ಕೆ ಸಂಘಟನಾ ಶಕ್ತಿಯ ಚಾತುರ್ಯಕ್ಕೆ ಇದು ಒಂದು ಉತ್ತಮ ಉದಾಹರಣೆ. ಉಳ್ತೂರು ಕಟ್ಟೆ ಮನೆ ಶ್ರೀ ದಾರಪ್ಪ ಶೆಟ್ಟಿ ಮತ್ತು ಶ್ರೀಮತಿ ಭಾಗೀರಥಿ ಶೆಟ್ಟಿಯವರ ಸುಪುತ್ರರಾದ ಇವರು ಉಳ್ತೂರಿನಲ್ಲಿ ತಮ್ಮ ಪ್ರಾಥಮಿಕ ವಿಧ್ಯಾಭ್ಯಾಸವನ್ನು ಪಡೆದರು. ನಂತರ 1982ರಲ್ಲಿ ಕುಂದಾಪುರದ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹತ್ವಕಾಂಕ್ಷಿ ಯೋಜನೆಯಾದ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿಶ್ಚಿತಾರ್ಥ, ಮೆಹೆಂದಿ, ಮದುವೆ, ಔತನಕೂಟ, ಹುಟ್ಟುಹಬ್ಬ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಎಂಬ ಹೆಸರಿನಲ್ಲಿ ತೆರೆದ ವೇದಿಕೆ ನಿರ್ಮಾಣವಾಗಲಿದೆ. ಈ ಓಪನ್ ಏರ್ ಗಾರ್ಡನ್ ನ ಸಂಪೂರ್ಣ ಪ್ರಾಯೋಜಕತ್ವವನ್ನು ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ಮುಂಬಯಿಯ ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಇದರ ಸಿ.ಎಂ.ಡಿ ತೋನ್ಸೆ ಆನಂದ್ ಎಂ. ಶೆಟ್ಟಿಯವರು ನೋಡಿಕೊಳ್ಳಲಿದ್ದಾರೆ. ತೋನ್ಸೆ ಆನಂದ್ ಎಂ.ಶೆಟ್ಟಿಯವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪರವಾಗಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ವಿಶೇಷ ಮಹಾ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ ಹಾಗೂ ಕೋಶಾಧಿಕಾರಿಯಾದ ಉಳ್ತೂರು ಮೋಹನ್ ದಾಸ್ ಶೆಟ್ಟಿಯವರು ಜೊತೆ ಸೇರಿ ಗೌರವ ಪೂರ್ವಕವಾಗಿ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು. ಓಪನ್ ಏರ್ ಗಾರ್ಡನ್ ಯೋಜನೆಯ ಪೂರ್ತಿ ಜವಾಬ್ದಾರಿಯನ್ನು ಮತ್ತು…

Read More

ಅಧ್ಯಾತ್ಮಿಕತೆಯೊಂದಿಗೆ ಕೂಡಿ ಬದುಕುವ ಕಲೆ ,ಜೀವನ ಮೌಲ್ಯ,ಆದರ್ಶಗಳಿಂದ ಸಂಸ್ಕಾರ ಯುತವಾದ ಜೀವನ ಸಾಧ್ಯ, ನಮ್ಮ ಪೌರಾಣಿಕ ಹಿನ್ನಲೆಯ ಯಕ್ಷಗಾನದಿಂದ ಭಾಷಾ ಶುದ್ದತಿ .ತತ್ವ ಮತ್ತು ಚರಿತ್ರೆಯನ್ನು ತಿಳಿದಂತೆ , ಭಕ್ತಿ ಮತ್ತು ಸಂಸ್ಕಾರ ಪಾಠವನ್ನು ಭಜನೆ ಕಳಿಸುತ್ತದೆ. ಸುಜ್ಞಾನದಿಂದ ಕೂಡಿದ ಉತ್ತಮ ವಿಚಾರಗಳೊಂದಿಗೆ ಮಕ್ಕಳಿಗೆ ಸಂಸ್ಕಾರ, ಧರ್ಮದ ಪ್ರಜ್ಞೆಯನ್ನು ಕಳಿಸುವ ಕಾರ್ಯ ಆಗಬೇಕು ,ಅದು ಇಂದು ಇಲ್ಲಿ ನಡೆದಿದೆ, ಉತ್ತಮ ಕಾರ್ಯ ಸೇವಾ ಬಳಗದಿಂದ ನಡೆದಿದೆ . ಭಾರತದ ಮೂಲ ಕೃಷಿ ಸಂಸ್ಕ್ರತಿಯಿಂದ ಹಳ್ಳಿಯಿಂದ ದೇಶದ ಪ್ರಗತಿಯಾದಂತೆ ಋಷಿ ಪರಂಪರೆಯಿಂದ, ಸಂಸ್ಕ್ರತಿ ,ಧರ್ಮ ಸಂರಕ್ಷಣೆ ಕಾರ್ಯ ಆಗುತಿದೆ. ತ್ಯಾಗ ಮತ್ತು ಸೇವೆಯಿಂದ ಸಮಾಜದ ಅಭಿವ್ರದ್ದಿ ಸಾದ್ಯ .ಪ್ರತಿಯೊಂದು ಉತ್ತಮ ವಿಚಾರಗಳು ಸಂಸ್ಕಾರಯುತವಾಗಿ ನಡೆದರೆ ಸದೃಡ ಸಮಾಜ ನಿರ್ಮಾಣ ಆಗಬಹುದು ಎಂದು ಒಡಿಯೂರು ಶ್ರೀ ಗುರುದೇವ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಜಿಯವರು ಆಶಿರ್ವಚನ ನೀಡಿದರು . ನವೆಂಬರ್ 26 ರಂದು ಪುಣೆಯ ಬಾಣೇರ್ ನಲ್ಲಿರುವ ಬಂಟರ ಭವನದ ಓಣಿಮಜಲು ಜಗನ್ನಾಥ್ ಶೆಟ್ಟಿ…

Read More

ಅಹಂಕಾರ ಎಂದರೆ ಜೀವದ ಸ್ವಕೃತ ಧರ್ಮ ಎನ್ನಬಹುದು. ಸ್ವಕೃತ ಎಂಬ ಶಬ್ದವನ್ನು “ಸ್ವ’ದ ಅರಿವಿನಿಂದ ಅಂದರೆ ತನ್ನತನದ ಅರಿವಿನಿಂದ ಜೀವವು ಸ್ವೀಕರಿಸಿದ ಕೃತಿಸ್ವರೂಪ ಕರ್ಮ ಎಂಬ ಅರ್ಥದಲ್ಲಿ ಬಳಸಬಹುದು. “ನನ್ನೊಳಗಿರುವ ನಾನು ಹೋದರೆ ಹೋದೇನು” ಎಂದು ಹೇಳಿದ ಕನಕದಾಸರ ಮಾತಿನಿಂದ ಮನುಷ್ಯನಲ್ಲಿನ ನನ್ನತನದ, ಅಂದರೆ ಅಹಂಭಾವದ ವ್ಯರ್ಥತೆಯು ತಿಳಿಯುತ್ತದೆ. ಅಹಂಭಾವವು ಮನುಷ್ಯನ ಲೌಕಿಕ ಮತ್ತು ಪಾರಮಾರ್ಥಿಕ ಸುಖದಲ್ಲಿನ ಒಂದು ದೊಡ್ಡ ಅಡಚಣೆಯಾಗಿದೆ. ಅಹಂ ಭಾವದ ಬೀಜವು ಮನುಷ್ಯ ಜನ್ಮದಲ್ಲಿಯೇ ಇರುವುದರಿಂದ ಇದಕ್ಕೆ ಹಿರಿಯ-ಕಿರಿಯ, ಬಡವ-ಬಲ್ಲಿದ, ಅಶಿಕ್ಷಿತ-ಸುಶಿಕ್ಷಿತ ಎಂಬ ಯಾವುದೇ ಭೇದ ಇಲ್ಲ. ಎಲ್ಲರಲ್ಲಿಯೂ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಅಹಂಕಾರ ಭಾವವು ಇದ್ದೇ ಇರುತ್ತದೆ. ಅಹಂಭಾವವು ಹೊಲದಲ್ಲಿ ಬೆಳೆಯುವ ಹುಲ್ಲಿನಂತೆ ಇರುತ್ತದೆ. ಎಲ್ಲಿಯವರೆಗೆ ನಾವು ಆ ಹುಲ್ಲನ್ನು ಬೇರುಸಹಿತವಾಗಿ ನಾಶ ಮಾಡುವುದಿಲ್ಲವೋ ಅಲ್ಲಿ ಯವರೆಗೆ ಆ ಹೊಲದಲ್ಲಿ ಉತ್ತಮ ಫ‌ಸಲು ಬರುವುದಿಲ್ಲ. ಆ ಹುಲ್ಲನ್ನು ಮನುಷ್ಯ ಪ್ರತೀ ದಿನವೂ ಸತತವಾಗಿ ನಾಶ ಮಾಡುತ್ತಲೇ ಇರಬೇಕಾಗುತ್ತದೆ. ಅದು ಸಾಧ್ಯವಾಗದಿದ್ದಲ್ಲಿ ಆ ಹುಲ್ಲು ಇಡೀ…

Read More

ವಿದ್ಯಾಗಿರಿ: ವಾಣಿಜ್ಯ ಅಧ್ಯಯನ ಕ್ಷೇತ್ರದಲ್ಲಿ ಅಕಾಡೆಮಿಕ್, ಸಂಶೋಧನೆ ಹಾಗೂ ತರಬೇತಿಯ ನಿಟ್ಟಿನಲ್ಲಿ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು ಮತ್ತು ದೆಹಲಿಯ ದಿ ಇನ್‍ಸ್ಟಿಟ್ಯೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡುವೆ ಮಂಗಳೂರಿನಲ್ಲಿ ಗುರುವಾರ ಮಹತ್ತರ ಒಡಂಬಡಿಕೆಗೆ ಸಹಿ ಮಾಡಲಾಯಿತು. ಈ ಒಡಂಬಡಿಕೆಯ ಅನ್ವಯ ಎರಡೂ ಸಂಸ್ಥೆಗಳಲ್ಲಿ ಬೌದ್ಧಿಕ ಹಾಗೂ ಸಾಂಸ್ಕøತಿಕ ಉನ್ನತೀಕರಣದ ನಿಟ್ಟಿನಲ್ಲಿ ಬಿ.ಕಾಂ, ಬಿ.ಕಾಂ.(ಹಾನರ್ಸ್), ಎಂ.ಕಾಂ ಮತ್ತು ಸರ್ಟಿಫಿಕೇಟ್ ಹಾಗೂ ಡಿಪ್ಲೊಮಾ ವಾಣಿಜ್ಯ ಕೋರ್ಸ್‍ಗಳ ಅಭಿವೃದ್ಧಿ ಹಾಗೂ ಪರಸ್ಪರ ಸಹಕಾರಕ್ಕೆ ನೆರವಾಗಲಿದೆ. ಅಕಾಡೆಮಿಕ್ ಮತ್ತು ವೃತ್ತಿಪರತೆ ವರ್ಧನೆಗಾಗಿ ಪರಸ್ಪರ ಸಹಕಾರ ನೀಡುವುದು ಹಾಗೂ ಸೌಹಾರ್ದ ಸಂಬಂಧವನ್ನು ಮುಂದುವರಿಸುವುದು. ಎರಡೂ ಸಂಸ್ಥೆಗಳ ಧ್ಯೇಯೋದ್ದೇಶವನ್ನು ಪರಸ್ಪರ ಗೌರವಿಸಿಕೊಂಡು ಅಕಾಡೆಮಿಕ್ಸ್, ಸಂಶೋಧನೆ ಮತ್ತು ತರಬೇತಿ ಕ್ಷೇತ್ರದಲ್ಲಿನ ಜ್ಞಾನ ಹಾಗೂ ಕೌಶಲ ವೃದ್ಧಿಗಾಗಿ ಕೈ ಜೋಡಿಸುವುದು. ಪಠ್ಯಕ್ರಮ ನಿರೂಪಣೆ, ಶೈಕ್ಷಣಿಕ ಸಿಬ್ಬಂದಿಗೆ ವಿಷಯ ಆಧಾರಿತ ತರಬೇತಿಗೆ ಐಸಿಎಐಯು ಸಂಪೂರ್ಣ ಬೆಂಬಲವನ್ನು ನೀಡಲಿದೆ. ಹೊಸ ಶಿಕ್ಷಣ ನೀತಿ (2020)ಗೆ ಪೂರಕವಾಗಿ ವಾಣಿಜ್ಯ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕ, ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ ನಿರ್ಮಾಣ ಮಾಡುವಲ್ಲಿ ದಾನ ನೀಡಿದ ದಾನಿ ಪ್ರವೀಣ್ ಬೋಜ ಶೆಟ್ಟಿ ಅವರು ಮುಂಬಯಿ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಐಕಳ ಹರೀಶ್ ಶೆಟ್ಟಿ ಗೌರವಿಸಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಸಾಮಾಜಿಕ ಕಳಕಳಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡ ಪ್ರವೀಣ್ ಭೋಜ ಶೆಟ್ಟಿ ಅವರು ಮುಂಬಯಿ ಬಂಟರ ಸಂಘದಲ್ಲಿ ಸುದೀರ್ಘ ಕಾಲದಿಂದ ವಿವಿಧ ಪದವಿಗಳನ್ನು ಅಲಂಕರಿಸಿ ಸಮರ್ಥ ರೀತಿಯಲ್ಲಿ ಕಾರ್ಯ ನಿರ್ವಹಿಸಿಕೊಂಡವರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸೇವಾ ಕಾರ್ಯಗಳನ್ನು ಮೆಚ್ಚಿಕೊಂಡು ಮಹಾ ನಿರ್ದೇಶಕರಾಗಿ ಮೂಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಗೆ ದೇಣಿಗೆಯನ್ನು ನೀಡಿ ಒಕ್ಕೂಟವನ್ನು ಬಲಿಷ್ಠಗೊಳಿಸುವಲ್ಲಿ ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್…

Read More

“ಸೋಲೆಂಬ ರೋಗವನ್ನು ಕೊಲ್ಲಲು ಆತ್ಮವಿಶ್ವಾಸ ಮತ್ತು ಶ್ರಮವೇ ಮದ್ದು” ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರವರ ಮಾತಿದು. ತೀರ ಕಿರಿಯ ವಯಸ್ಸಿನಲ್ಲಿ ದೊಡ್ಡ ಸಾಧನೆ ಮಾಡಿರುವ ಶ್ರೀಯುತ ಹಾಲಾಡಿ ಆದರ್ಶ್ ಶೆಟ್ಟಿಯವರ ಬದುಕಿನಲ್ಲಿ ಈ ಮಾತು ನೂರಕ್ಕೆ ನೂರು ಸತ್ಯ. “ತಾಳ್ಮೆ ಕಹಿ ಎನ್ನುವುದು ನಿಜ ಆದರೆ ಅದರ ಫಲ ಸಿಹಿಯಾಗುತ್ತದೆ” ಶ್ರೀಯುತ ಹಾಲಾಡಿ ಆದರ್ಶ್ ಶೆಟ್ಟಿ ನಂಬಿದ ಜೀವನ ಮೌಲ್ಯವಿದು. ಹೋಟೆಲು ಉದ್ಯಮದಲ್ಲಿ 18 ವರ್ಷದ ಸುದೀರ್ಘ ಅನುಭವವಿರುವ ಶ್ರೀಯುತ ಹಾಲಾಡಿ ಆದರ್ಶ್ ಶೆಟ್ಟಿಯವರು ಈ ಎತ್ತರಕ್ಕೆ ಬೆಳೆದು ನಿಲ್ಲಲು ಕಾರಣವಾದದ್ದು ವೃತ್ತಿಯುದ್ಧ ಅವರು ನಡೆಸಿಕೊಂಡು ಬಂದ ಆತ್ಮಾವಲೋಕನ ಮತ್ತು ತಾಳ್ಮೆ. ಸ್ನೇಹ ಜೀವಿಯಾಗಿ, ಸಂಘಟನಾ ಶಕ್ತಿಯಾಗಿ ಈ ಉದ್ಯಮದಲ್ಲಿ ಅವರು ಬೆಳೆದು ನಿಂತ ಕಥೆ ಇತರರಿಗೆ ಮಾದರಿಯಾಗುವಂತಹದ್ದು. ಸ್ವಭಾವತಃ ಆದರ್ಶ್ ಶೆಟ್ಟಿ ಆಹಾರ ಪ್ರಿಯ, ಭೋಜನ ಪ್ರಿಯರು. ಯಾವುದೇ ಆಹಾರವಿರಲಿ ಅದರ ಸ್ವಾದದಲ್ಲಿರುವ ವಿಶೇಷತೆಯನ್ನು ಗುರುತಿಸಿ ಅದು ಬಹುಜನಪ್ರಿಯವಾಗುವಂತೆ ರೂಪಿಸುವಲ್ಲಿ ಇವರು ನಿಸ್ಸೀಮರು. ತನ್ನಲ್ಲಿರುವ ಈ ವಿಶೇಷತೆಯನ್ನು ವೃತ್ತಿಯಾಗಿಸಿಕೊಂಡು…

Read More

ವಿದ್ಯಾಗಿರಿ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದ 69ನೇ ಮಹಿಳೆಯರ ಹಿರಿಯ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕ ತಂಡವು ಜಯಭೇರಿಯಾಗಿದ್ದು, ರಾಜ್ಯ ತಂಡವನ್ನು ಪ್ರತಿನಿಧಿಸಿದ 10 ಆಟಗಾರರ ಪೈಕಿ 8 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ಎಂ. ಮುನ್ನಡೆಸಿದ್ದು, ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರ್ತಿಯರಿಗೆ ನೀಡುವ ‘ಸ್ಟಾರ್ ಆಫ್ ಇಂಡಿಯಾ’ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಪಲ್ಲವಿ ಬಿ.ಎಸ್. ಹಾಗೂ ಸಹನಾ ಎಚ್.ವೈ. ಮುಡಿಗೇರಿಸಿಕೊಂಡಿದ್ದಾರೆ. ಕರ್ನಾಟಕ ತಂಡವು ಫೈನಲ್‍ನಲ್ಲಿ ತಮಿಳುನಾಡು ತಂಡವನ್ನು 35-29, 35-26 ಅಂಕಗಳ ನೇರ ಸೆಟ್‍ಗಳಿಂದ ಮಣಿಸಿ, ಪ್ರಶಸ್ತಿಗೆ ಮುತ್ತಿಕ್ಕಿತ್ತು. ಇದಕ್ಕೂ ಮೊದಲು ನಡೆದ ಸೆಮಿಫೈನಲ್‍ನಲ್ಲಿ 35-11, 35-16 ಅಂಕಗಳಿಂದ ಕೇರಳ ತಂಡಕ್ಕೆ ಸೋಲುಣಿಸಿತು. ವಿಜೇತ ಕರ್ನಾಟಕ ತಂಡ ಹಾಗೂ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಆಳ್ವಾಸ್ ಕಾಲೇಜಿನ ಆಟಗಾರ್ತಿಯರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಬಂಟರ ಸಂಘ ಮುಂಬಯಿ ಸಂಚಾಲಿತ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ನ ಗೌರವ ಕಾರ್ಯದರ್ಶಿಯಗಿ ಕಾರ್ಯನಿರ್ವಹಿಸಿಕೊಂಡಿರುವ ಪ್ರವೀಣ್ ಭೋಜ ಶೆಟ್ಟಿ ಅವರು ಮುಂಬಯಿ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು ಅವರನ್ನು ನವಂಬರ್ 27ರಂದು ಕುರ್ಲಾ ಪೂರ್ವದ ಬಂಟರ ಭವನದ ಅನೆಕ್ಸ್ ಸಂಕೀರ್ಣದಲ್ಲಿರುವ ಮಾತೃಭೂಮಿಯ ಕಚೇರಿಯಲ್ಲಿ ನಡೆದ ಆಡಳಿತ ಸಭೆಯಲ್ಲಿ ಸೊಸೈಟಿಯ ಕಾರ್ಯಾಧ್ಯಕ್ಷರಾದ ಉಳ್ತೂರು ಮೋಹನದಾಸ್ ಶೆಟ್ಟಿಯವರು ಮತ್ತು ಆಡಳಿತ ಪದಾಧಿಕಾರಿಗಳು ಗೌರವಿಸಿದರು. ಗೌರವವನ್ನು ಸ್ವೀಕರಿಸಿದ ಪ್ರವೀಣ್ ಭೋಜ ಶೆಟ್ಟಿ ಕೃತಜ್ಞತೆ ಸಲ್ಲಿಸುತ್ತಾ ಅಧ್ಯಕ್ಷನಾಗಿ ಪ್ರಥಮ ಗೌರವ ಇದಾಗಿದೆ. ಈ ಗೌರವ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ಸಲ್ಲುತ್ತದೆ. ನನ್ನ ಮುಂದಿನ ಸೇವಾ ಕಾರ್ಯಗಳಿಗೆ ತಾವೆಲ್ಲರೂ ಸಹಕರಿಸಬೇಕು ಎಂದು ನುಡಿದರು. ಸೊಸೈಟಿಯ ಕಾರ್ಯಾಧ್ಯಕ್ಷರಾದ ಉಳ್ತೂರು ಮೋಹನದಾಸ್ ಶೆಟ್ಟಿಯವರು ಪ್ರವೀಣ್ ಭೋಜ ಶೆಟ್ಟಿ ಅವರು ಮಾತೃಭೂಮಿಗೆ ನೀಡಿದ ಸೇವಾ ಕಾರ್ಯಗಳನ್ನು ನೆನಪಿಸಿಕೊಂಡು ಬಂಟರ ಸಂಘದ ಮೂಲಕ ಸಮಾಜದ ಉತ್ತಮ ಸೇವಾ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು. ಈ…

Read More