Author: admin

“ಕೋರಿಡ ಕೇಂದ್ ಸಾಂಬಾರ್ ಕಡೆವೆರಾ” ಪಂದ್ ಒಂಜಿ ಗಾದೆ ಉಂಡು. ಅಂಚ ನಂಕ್ ನರಮಾನಿಗ್ ಬೋಡಾಯಿನದಗ ಕೋರಿದ ನಾಲಿ ಪಿಜೆಂಕುನು. ಅಂಚ ಇಪ್ಪುನಗ ಈ ಕೋರಿಗ್ ಪಂಚಾಂಗ ತೂದು ಜಾತಕ ಮಲ್ಪುವನಾ? ಪಾಪ, ಕೋರಿಲಾ ಭೀಷ್ಮಲೆಕ್ಕ ಇಚ್ಚಾ ಮರಣಿ ಆವೊಡು ಪಂದ್ ಕಠಿಣ ತಪಸ್ಸ್ ಮಲ್ತ್ಂಡ್ ಗೆ. ದೇವೆರ್ ಜೋಗೊಗು ಬತ್ತ್ ದ್ (ಪ್ರತ್ಯಕ್ಷ ಆದ್) ದಾದ ಒರ (ವರ) ಬೋಡು ಪಂದ್ ಕೇಂಡೆರ್. ಕೋರಿ ಪಂಡ್ “ಎಂಕ್ ಎನ್ನಿನದಗ ಮರಣ ಬರೊಡು”. ದೇವೆರ್ ಅಂಚೆನೆ ಆವಡ್ (ತಥಾಸ್ತು) ಪಂಡೆರ್. ಅಂಚ ಇತ್ತೆ ಕೋರ್ಲೆಗ್, ನರಮಾನಿ ಕೋರಿ ಅಡ್ಕ (ಕೈಪು ಮಲ್ಪುಗ) ಪಂದ್ ಎನ್ನಿನದಗ ಮರಣ. ಪಾಪದ ಕೋರಿ, “ಎಂಕ್ ‘ಯಾನ್’ ಎನ್ನಿನದಗ ಮರನ ಬರಡ್” ಪನರೆ ತತ್ತ್ ದ್ ಪೋಂಡು. ಇಪ್ಪಡ್, ಅಂಚ ಇಪ್ಪುನಗ ಕೋರಿ (ಕುಕ್ಕುಟ) ದಲಾ ಪಂಚಾಂಗ ಉಂಡಾ ಪಂದ್ ಕೇನರ್. ಅಂದ್ ಒಂಜಿ ನಲ್ಪ ವರ್ಸ ದುಂಬು, ಮಗ್ಗಿ ಪುಸ್ತಕದಾತೇ ಮಲ್ಲ ಕುಕ್ಕುಟ ಪಂಚಾಂಗ ಬೀಡದ…

Read More

ಮೂಡುಬಿದಿರೆ: ಜೀವಶಾಸ್ತ್ರದ ಶಿಕ್ಷಕರು ಈ ಕಾಲಕ್ಕಾನುಗುಣವಾದ ಕೌಶಲ್ಯಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಯನ್ನು ಪೂರೈಸುವಲ್ಲಿ ಕರ‍್ಯಪ್ರವೃತ್ತರಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತ್ರ ಉಪನ್ಯಾಸಕರ ಸಂಘದ ದಶಮನೋತ್ಸವದ ಹಿನ್ನಲೆಯಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತ್ರ ಉಪನ್ಯಾಸಕರ ಸಂಘ ಹಾಗೂ ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜುಗಳ ಪ್ರಾಚರ‍್ಯರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ‘’ಬಯೋದಶಕ, ಒಂದು ದಿನದ ಕರ‍್ಯಾಗಾರ’’ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಹೆಚ್ಚಿನ ವಿದ್ಯಾರ್ಥಿಗಳು ಡಾಕ್ಟರ್ ಅಥವಾ ಇಂಜಿಯರ್ ಆಗುವ ಬಯಕೆಯಿಂದ ಪದವಿಪೂರ್ವ ಹಂತದಲ್ಲಿ ಪಿಸಿಎಂಬಿ ವಿಷಯವನ್ನು ಆಯ್ಕೆ ಮಾಡಿಕೊಂಡಿರುತ್ತಾರೆ. ಈ ಹಂತದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಇಂದಿನ ಕಾಲಘಟ್ಟದಲ್ಲಿ ಪದವಿಪೂರ್ವ ಪರೀಕ್ಷೆಯ ಅಂಕಗಳಿಂದ ಸರಕಾರಿ ಕೋಟಾದಲ್ಲಿ ಸೀಟನ್ನು ಪಡೆಯಲು ಸಾಧ್ಯವಿಲ್ಲ. ಈ ಹಂತದಲ್ಲಿ ವಿದ್ಯಾರ್ಥಿಗಳನ್ನು ಎನ್‌ಸಿಇಆರ್‌ಟಿ ಪಠ್ಯಕ್ರಮದ ಜೊತೆಯಲ್ಲಿ ನೀಟ್, ಸಿಇಟಿ, ಕ್ಲಾಟ್, ಜೆಇಇಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಬೇಕಾದ ಜವಾಬ್ದಾರಿ…

Read More

ಮೀರಾ ಭಾಯಂದರ್ ಪರಿಸರದಲ್ಲಿ ಸಾಮಾಜಿಕದೊಂದಿಗೆ ಕಲಾ ಸೇವೆಯನ್ನು ಮಾಡುತ್ತಾ, ಜನಪ್ರಿಯತೆಯನ್ನು ಪಡೆದಿರುವ ಬಂಟ್ಸ್ ಫೋರಮ್ ಮೀರಾ ಭಾಯಂದರ್ ಸಂಸ್ಥೆಯ ಆಯೋಜನೆಯಲ್ಲಿ ಆಗಸ್ಟ್ 7 ರಂದು ಬುಧವಾರ ಅಪರಾಹ್ನ ಗಂಟೆ 3 ರಿಂದ ಭಾಯಂದರ್ ಪೂರ್ವದ ಮೀರಾ ಭಾಯಂದರ್ ರೋಡ್ ಕ್ರೌನ್ ಬಿಜಿನೆಸ್ ಹೋಟೇಲಿನ ಅಶ್ವಿನಿ ಬ್ಯಾಂಕ್ವೆಟ್ ಹಾಲ್ ಇಲ್ಲಿ ಕಲಾ ಪ್ರಕಾಶ ಪ್ರತಿಷ್ಠಾನ ಮುಂಬಯಿ ಇವರಿಂದ “ಭೀಷ್ಮ ವಿಜಯ” ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಈ ಸಂದರ್ಭದಲ್ಲಿ ಭಾಗವತರಾದ ಬಲಿಪ ಶಿವಶಂಕರ್ ಭಟ್, ಅರ್ಥಧಾರಿ ಯಕ್ಷಗಾನ ಕಲಾವಿದ ಜಬ್ಬಾರ್ ಸುಮೋ ಸಂಪಾಜೆ ಇವರನ್ನು ಸನ್ಮಾನಿಸಲಾಗುವುದು ಹಾಗೂ ಪರಿಸರದ ಪ್ರತಿಭೆಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು. ಮೀರಾಗಾಂವ್ ಶ್ರೀ ಮಹಾಲಿಂಗೇಶ್ವರ ಮಂದಿರದ ಪ್ರಧಾನ ಅರ್ಚಕ ಸಾಣೂರು ಸಾಂತಿಂಜ ಜನಾರ್ಧನ ಭಟ್ ಆಶೀರ್ವಚನ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾಜಿ ನಗರ ಸೇವಕ ಅರವಿಂದ್ ಆನಂದ್ ಶೆಟ್ಟಿ, ಸಮಾಜ ಸೇವಕ ಹೋಟೆಲು ಉದ್ಯಮಿ ಮುಂಡಪ್ಪ ಎಸ್. ಪಯ್ಯಡೆ, ಉದ್ಯಮಿ ಕಾಶಿ ಮೀರಾ ಭಾಸ್ಕರ್ ಶೆಟ್ಟಿ, ಬಂಟರ…

Read More

ಮಂಗಳೂರು ಮತ್ತು ಮುಂಬಯಿ ಮಧ್ಯೆ ಪ್ರಯಾಣಿಸುವ ಹೆಚ್ಚಿನ ಪ್ರಯಾಣಿಕರ ಆಯ್ಕೆ ಮತ್ಸ್ಯಗಂಧ ಅಥವಾ ಮ್ಯಾಂಗಲೋರ್ ಎಕ್ಸ್ಪ್ರೆಸ್ ರೈಲುಗಳು. ಈ ರೈಲುಗಳಲ್ಲಿ ಪ್ರಯಾಣಿಕರ ಒಡವೆ, ಹಣ ಹಾಗೂ ಮೊಬೈಲ್ ಫೋನ್ ಕಳವಾಗುವ ಬಗ್ಗೆ ಆಗಾಗ ಕೇಳುತ್ತಿರುತ್ತೇವೆ. ಇದು ರೈಲ್ವೆ ಪೊಲೀಸರ ಮೂಗಿನ ಅಡಿಯಲ್ಲೇ ನಡೆಯುತ್ತಿದೆ ಅನ್ನೋದು ಸಂಶಯಾತೀತ. ಈಗ ನಾನು ಹೇಳ ಹೊರಟಿರುವುದು ಅದಕ್ಕಿಂತಲೂ ದೊಡ್ಡ ದರೋಡೆಯ ಬಗ್ಗೆ. ನಾನು ಮೊನ್ನೆ ದಿನಾಂಕ ಮೂಲ್ಕಿಯಿಂದ ಮಂಗಳೂರಿಗೆ 3 ಟೈಯರ್ ಎಸಿಯಲ್ಲಿ ಪ್ರಯಾಣಿಸುತ್ತಿದ್ದೆ. ರಾತ್ರಿ ಸುಮಾರು 8:30ರ ಹೊತ್ತಿಗೆ ಮಡ್ಗಾವ್ ನಲ್ಲಿ ಊಟ ಕೊಡುವವರು ಬಂದು ಊಟ ಬೇಕೆ ಅಂತ ಕೇಳುತ್ತಿದ್ದರು. ನಾನು ರೂಪಾಯಿ 95 ಕೊಟ್ಟು ಒಂದು ಎಗ್ ಬಿರಿಯಾನಿ ಖರೀದಿಸಿದೆ. ಎಗ್ ಬಿರಿಯಾನಿ ಕೊಟ್ಟವ ನನ್ನಿಂದ ಹಣ ಪಡೆದು ಅಲ್ಲಿಂದ ಮಾಯವಾದ. ಎಗ್ ಬಿರಿಯಾನಿಯ ಡಬ್ಬಿ ಓಪನ್ ಮಾಡಿದಾಗ ಅದರಲ್ಲಿ ಎರಡು ಬೇಯಿಸಿದ ಮೊಟ್ಟೆ ಹಾಗೂ ಸುಮಾರು 50 ಗ್ರಾಮಿನಷ್ಟು ಹಳದಿ ಬಣ್ಣದ ಅನ್ನ ಇತ್ತು. ಅದರಲ್ಲಿ ಯಾವುದೇ ರೀತಿಯ ಉಪ್ಪು…

Read More

ಯಕ್ಷಗಾನ ಕಲೆ ಅದ್ಭುತವಾದ ಕಲೆ. ಯಕ್ಷಗಾನ ಕಲೆಯಿಂದ ಜ್ಞಾನ, ಆರೋಗ್ಯ, ಆಯುಷ್ಯ, ಸಂಸ್ಕಾರ, ಸಂಸ್ಕೃತಿ ಬೆಳೆಯುತ್ತದೆ. ಪುರಾಣಗಳ ಪ್ರಸಂಗದಿಂದ ಮನಸ್ಸು ವಿಕಾಸವಾಗುತ್ತದೆ. ಯಕ್ಷಗಾನ ಕಲೆ ಕಲಿತ ಮಕ್ಕಳಲ್ಲಿ ಜ್ಞಾನ ವೃದ್ಧಿಯಾಗುವುದರೊಂದಿಗೆ ವಿದ್ಯಾಭ್ಯಾಸವು ವೃದ್ಧಿಯಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ| ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯ ಅಂಗವಾಗಿ ಸಿದ್ದಾಪುರ ಶ್ರೀ ರಂಗನಾಥ ಸಭಾಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ ಸಹಯೋಗದೊಂದಿಗೆ ಯಕ್ಷ ನುಡಿಸಿರಿ ಬಳಗ ಸಿದ್ದಾಪುರ ಇವರ 3ನೇ ವರ್ಷದ ಶಾಲಾ ಮಕ್ಕಳ ಯಕ್ಷಗಾನ ಹೆಜ್ಜೆ ತರಬೇತಿ ತರಗತಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ಮಾತನಾಡಿದರು. ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಎಸ್. ಸಚ್ಚಿದಾನಂದ ಚಾತ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿ ಕುಂದಾಪುರ ಆದರ್ಶ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಆದರ್ಶ ಹೆಬ್ಬಾರ್ ಮಾತನಾಡಿದರು. ಅತಿಥಿಗಳಾಗಿ ಸಿದ್ದಾಪುರ ಗ್ರಾ.ಪಂ. ಉಪಾಧ್ಯಕ್ಷ ಕೃಷ್ಣ ಪೂಜಾರಿ, ಯಕ್ಷಗುರು ಮಂಜುನಾಥ…

Read More

ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆಗಸ್ಟ್ 10ರಂದು ಪುತ್ತೂರು ಬಂಟರ ಭವನದಲ್ಲಿ ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದಲ್ಲಿ ಮಿತ್ರಂಪಾಡಿ ಚೆನ್ನಪ್ಪ ರೈ ಸ್ಮರಣಾತ್ಮಕ ಉದ್ಯಮಿ ಜಯರಾಮ್ ರೈ ಮಿತ್ರಂಪಾಡಿ ಅಬುಧಾಬಿ ಇವರಿಂದ ಪ್ರಾಯೋಜಿತ ಸಮಾಜ ಸೇವಾ ಮಿತ್ರ ಪ್ರಶಸ್ತಿ ಪಡೆಯಲಿರುವ ಕುದ್ಕಾಡಿ ಶೀನಪ್ಪ ರೈ ಕೊಡೆಂಕೀರಿರವರಿಗೆ ಅವರ ನಿವಾಸದಲ್ಲಿ ಆಗಸ್ಟ್ 4ರಂದು ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತೃತ್ವದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ ಸಮಾರಂಭದ ಆಮಂತ್ರಣವನ್ನು ನೀಡಿ, ಗೌರವಿಸಲಾಯಿತು. ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ನಿಕಟಪೂರ್ವ ಸಹ ಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ತಾಲೂಕು ಬಂಟರ ಸಂಘದ ಕೋಶಾಧಿಕಾರಿ ಸಂತೋಷ್ ಶೆಟ್ಟಿ, ಮಾಜಿ ಕಾರ್ಯದರ್ಶಿ ಮೋಹನ್ ರೈ ನರಿಮೊಗರು, ಜೊತೆ ಕಾರ್ಯದರ್ಶಿ ಸ್ವರ್ಣಲತಾ ಜೆ. ರೈ, ನಿರ್ದೇಶಕರಾದ ದಂಬೆಕ್ಕಾನ ಸದಾಶಿವ ರೈ,…

Read More

ರಾಮಕೃಷ್ಣ ಮೋರ್ ನಾಟ್ಯ ಶಾಲೆ ಚಿಂಚ್ವಾಡ್ ಪುಣೆಯಲ್ಲಿ ಪ್ರದರ್ಶನಗೊಂಡ “ರಾತ್ರೆಗ್ ಈ ಪಗೆಲ್ ಗ್ ಯಾನ್” ತುಳು ನಾಟಕದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕರ್ ಶೆಟ್ಟಿಯವರು ಅತಿಥಿಯಾಗಿ ಭಾಗವಹಿಸಿದರು. ಈ ಸಂಧರ್ಭದಲ್ಲಿ ಖ್ಯಾತ ಮಕ್ಕಳ ತಜ್ಞ ಮತ್ತು ‘ಹೊರನಾಡ ಕನ್ನಡ ರತ್ನ ‘ಡಾ. ಸುಧಾಕರ್ ಶೆಟ್ಟಿಯವರನ್ನು ಪುಣೆ ತುಳು ಸಂಘದ ಅಧ್ಯಕ್ಷ ಕುರ್ಕಾಲ್ ಹರೀಶ್ ಶೆಟ್ಟಿಯವರು ಸನ್ಮಾನಿಸಿದರು. ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ಅಧ್ಯಕ್ಷ ರಾಕೇಶ್ ಶೆಟ್ಟಿ ಬೆಳ್ಳಾರೆ ಹಾಗೂ ನಗರಸೇವಕ ಭೌ ಸಾಹೇಬ್ ಭೋಯ್ರ್ ಅವರು ಉಪಸ್ಥಿತರಿದ್ದರು.

Read More

ಪುತ್ತೂರು ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಹಾಗೂ ವಿಶೇಷ ಅಹ್ವಾನಿತರ ಸಭೆಯು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಮಾತನಾಡಿ ಆಗಸ್ಟ್ 10 ರಂದು ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದ ಯಶಸ್ಸಿಗೆ ಬಂಟ ಸಮಾಜದ ಸರ್ವರ ಸಹಕಾರ ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಚಿನ್ನದ ಪದಕ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ, ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ. ಈ ವಿಶಿಷ್ಟ ಕಾರ್ಯಕ್ರಮದ ಆಮಂತ್ರಣ ಪತ್ರ ಅವಿಭಜಿತ ಪುತ್ತೂರು ತಾಲೂಕಿನ ಪ್ರತಿಯೊಬ್ಬ ಬಂಟ ಸಮಾಜ ಭಾಂದವರ ಮನೆ ಮನೆ ತಲುಪುವಂತೆ ಸಂಘದ ನಿರ್ದೇಶಕರುಗಳು ಹಾಗೂ ವಿಶೇಷ ಅಹ್ವಾನಿತರು ಕೆಲಸವನ್ನು ಮಾಡುವ ಮೂಲಕ, ಪುತ್ತೂರಿನಲ್ಲಿ ಅದ್ದೂರಿ ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಬೇಕು. ಜೊತೆಗೆ ಈ ಕಾರ್ಯಕ್ರಮದಲ್ಲಿ ಪೂರ್ತಿಯಾಗಿ ಭಾಗವಹಿಸುವಂತೆ ಸಮಾಜ ಭಾಂದವರಲ್ಲಿ…

Read More

ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಲಯನ್ಸ್ ಜಿಲ್ಲೆ 317ಸಿ ಮಾಜಿ ಗವರ್ನರ್ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಲಯನೆಸ್ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ, ಮಾಜಿ ಗವರ್ನರ್ ಶ್ರೀಧರ ಶೇಣವ, ಲಯನ್ಸ್ ಕ್ಲಬ್ ಮಲ್ಪೆಯ ನೂತನ ಅಧ್ಯಕ್ಷ ಸುಧಾಕರ ಪೂಜಾರಿ, ಪದಗ್ರಹಣ ಅಧಿಕಾರಿ ಡಾ.ಮೆಲ್ವಿನ್ ಡಿಸೋಜ, ಮುಖ್ಯ ಅತಿಥಿ ರೋ.ಹೇಮಂತ್ ಯು.ಕಾಂತ್, ಲಿಯೋ ಅಧ್ಯಕ್ಷ ನಂದನ್ ಡಿ.ಕುಂದರ್, ಕಾರ್ಯದರ್ಶಿ ರವೀಂದ್ರ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು. ಡಾ.ತಲ್ಲೂರು ಶಿವರಾಮ ಶೆಟ್ಟರು ತಮ್ಮ ಸಂಪಾದನೆಯ ಒಂದು ಪಾಲನ್ನು ಕಲಾವಿದರ ಶ್ರೇಯಸ್ಸಿಗೆ, ಕಲಾ ಪ್ರಚಾರಕ್ಕೆ, ಕಲೆಯ ಉಳಿವಿಗೆ ವ್ಯಯಿಸುವ ಮೂಲಕ ಸಮಾಜದ ಮನ ಗೆದ್ದಿದ್ದಾರೆ. ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ನಾಡಿನ ಸಾಂಸ್ಕೃತಿಕ ಲೋಕಕ್ಕೆ ನೀಡಿದ ಅನುಪಮ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ಸರಕಾರ ಅವರನ್ನು…

Read More

ವಿದ್ಯಾಗಿರಿ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ತಿಳಿಸಿದರು. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ‘ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ ದ ಕುರಿತು ಕರ‍್ಯಗಾರದಲ್ಲಿ ಮಾತನಾಡಿದರು. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳನ್ನು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ ಮತ್ತು ಕಲ್ಪನೆಗಳನ್ನು ಹಾಗೂ ತಮ್ಮದೇ ಆದ ವಿಶಿಷ್ಟ ಧ್ವನಿಗಳನ್ನು…

Read More