Author: admin
ಈ ಸಿನಿಮಾ ಎಂಬ ಬಣ್ಣದ ಲೋಕದಲ್ಲಿ ಸ್ಟಾರ್ ಹೀರೋ ಹಾಗೂ ಹೀರೋಯಿನ್ ಆಗಬೇಕು ಅನ್ನೋ ಕನಸಿಟ್ಟುಕೊಂಡು ನೂರಾರು ಜನರು ಚಿತ್ರರಂಗಕ್ಕೆ ಬರುತ್ತಾರೆ. ಇದರಲ್ಲಿ ಕೆಲವರು ಯಶಸ್ಸು ಕಂಡು ಸಿನಿ ಕ್ಷೇತ್ರದಲ್ಲೇ ತಮ್ಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ. ಕೆಲವರು ನಟನೆ ಕಲಿತುಕೊಂಡು ಸಿನಿಮಾಗೆ ಎಂಟ್ರಿ ಕೊಟ್ಟರೆ, ಮತ್ತೆ ಕೆಲವರು ಮಾಡಲಿಂಗ್ ಕ್ಷೇತ್ರದಿಂದ ಬಂದು ಸಿನಿಮಾ ಜಗತ್ತಿನಲ್ಲಿ ಯಶಸ್ಸು ಕಾಣ್ತಾರೆ. ಇದೀಗ ಬಂಟ ಸಮಾಜದ ಪ್ರತಿಭೆ ಸಮೃದ್ದಿ ವಿ ಶೆಟ್ಟಿ ಅವರು ‘ಮಿಸ್ ಕ್ವೀನ್ ಆಫ್ ಇಂಡಿಯಾ 2023’ ಕಿರೀಟ ಮುಡಿಗೇರಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಆಗೋದಕ್ಕೆ ಸಜ್ಜಾಗಿದ್ದಾರೆ. ಮಿಸ್ ಕ್ವೀನ್ ಆಫ್ ಇಂಡಿಯಾ 2023 : ಕೇರಳದ ಕೊಚ್ಚಿಯಲ್ಲಿ ನಡೆದ ಸ್ಪರ್ಧೆಯಲ್ಲಿ ದೇಶದ 30 ರಾಜ್ಯಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಮಣಪ್ಪುರಂ ಫೈನಾನ್ಸ್ ಆಯೋಜಿಸಿದ್ದ ಮಿಸ್ ಕ್ವೀನ್ ಆಫ್ ಇಂಡಿಯಾ ಸ್ಪರ್ಧೆಯಲ್ಲಿ ಅಂತಿಮವಾಗಿ ಉಡುಪಿ ಮೂಲದ ಸಮೃದ್ದಿ ವಿ ಶೆಟ್ಟಿ ‘ಮಿಸ್ ಕ್ವೀನ್ ಆಫ್ ಇಂಡಿಯಾ 2023’ ಕಿರೀಟ ಮುಡಿಗೇರಿಸಿಕೊಂಡಿದ್ದು, ಕರ್ನಾಟಕದ ಹಾಗೂ ಬಂಟ…
ಅರ್ಥಪೂರ್ಣ ಹದಿನಾಲ್ಕು ವರ್ಷಗಳನ್ನು ಪೂರೈಸಿದ ನವಚೇತನ ಹಣಕಾಸು ಸಂಸ್ಥೆಯ ಯಶಸ್ಸಿನ ಗಾಥೆ ಮತ್ತದರ ಪ್ರಗತಿ ಶಿಲ್ಪಿ ಲೋಕೇಶ್ ಶೆಟ್ಟರ ಕಿರು ಪರಿಚಯ ಕುರಿತಂತೆ ಪ್ರಸ್ತುತ ಲೇಖನವನ್ನು ಸಮಸ್ತ ಬಂಟ ಸಮಾಜದ ಮುಂದೆ ಇಡಲು ಇಷ್ಟಪಡುತ್ತಿದ್ದೇವೆ. ನವಚೇತನ ಚಿಟ್ಸ್ ಕಂ ಫ್ರೈ.ಲಿ. ಸಂಸ್ಥೆಯು ಜೂನ್ 17, 2009 ರಲ್ಲಿ ತನ್ನ ವ್ಯವಹಾರವನ್ನು ಪ್ರಾರಂಭಿಸಿದ್ದು, ಮಂಗಳೂರಿನಲ್ಲಿ ತನ್ನ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆಯಲ್ಲದೆ ಕ್ರಮೇಣ ವರ್ಷಾಂತರಗಳಲ್ಲಿ ಮಂಗಳೂರು, ಉಡುಪಿ, ಪುತ್ತೂರು, ಹುಬ್ಬಳ್ಳಿ, ಬೆಳಗಾಂ, ಬಳ್ಳಾರಿ ಮೊದಲಾದ ಕಡೆಗೆ ತನ್ನ ಶಾಖೆಗಳನ್ನು ವಿಸ್ತರಿಸಿಕೊಂಡು ಯಶಸ್ಸಿನ ಪಥದಲ್ಲಿ ಮುನ್ನಡೆಯುತ್ತಿದೆ. ತನ್ನ ನೋಂದಣಿತ ಕಛೇರಿಯು ಮಂಗಳೂರಿನ ಬಲ್ಮಠ ರಸ್ತೆಯಲ್ಲಿರುವ ಬ್ಯೂಟಿ ಪ್ಲಾಜಾ ಕಟ್ಟಡದ ತಳಮಹಡಿಯಲ್ಲಿ ಗುರುತಿಸಲ್ಪಟ್ಟು ಆಡಳಿತ ಕಛೇರಿಯಾಗಿಯೂ ಕಾರ್ಯ ನಿರ್ವಹಿಸಿಕೊಂಡು ತನ್ನ ವ್ಯವಹಾರಗಳನ್ನು ನಿಯಂತ್ರಿಸುತ್ತಿದೆ. ಲೋಕೇಶ್ ಶೆಟ್ಟಿ ಅವರು ಬಂಟ್ವಾಳ ವಲಯದ ಬಂಟರ ಸಂಘದ ಕೋಶಾಧಿಕಾರಿ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕರಾಗಿದ್ದುಕೊಂಡು ಬಿಡುವಿಲ್ಲದ ದುಡಿಮೆಯ ನಡುವೆಯೂ ಸಮಯ ಹೊಂದಿಸಿಕೊಂಡು ಸ್ವಜಾತಿ ಬಾಂಧವರ ಅಭ್ಯುದಯಕ್ಕಾಗಿ ಕಾರ್ಯಪ್ರವೃತ್ತರಾಗಿ ಸಮುದಾಯ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 40 ನೇ ನೂತನ ಉಡುಪಿ ಘಟಕದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಡುಪಿಯ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಉಡುಪಿಯ ಪುರುಷೋತ್ತಮ ಶೆಟ್ಟಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಎಂ.ಎಲ್. ಸಾಮಗ, ಟಿ.ಶಂಭು ಶೆಟ್ಟಿ, ಸುಧಾಕರ ಆಚಾರ್ಯರ ನೇತೃತ್ವದಲ್ಲಿ ನಡೆದ ಸಮಾಲೋಚನ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಉಜ್ವಲ್ ಡೆವಲಪರ್ಸ್ ನ ಪುರುಷೋತ್ತಮ ಶೆಟ್ಟಿ, ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದ ಧರ್ಮದರ್ಶಿ ಕೆ.ದಿವಾಕರ್ ಶೆಟ್ಟಿ ತೋಟದ ಮನೆ ಅವರನ್ನು ಆರಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರಿಂದ ಮಹೋನ್ನತ ಸಮಾಜ ಕಲ್ಯಾಣ ಕಾರ್ಯಕ್ರಮ : ಎಂ ಅರ್ ಜಿ ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ
ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಶ್ರೀ ಐಕಳ ಹರಿಶ್ ಶೆಟ್ಟಿಯವರ ಸಮರ್ಥ ಅಧ್ಯಕ್ಷತೆಯಲ್ಲಿ ಸಮಾಜಮುಖಿ ಕೆಲಸಗಳನ್ನು ಶ್ರದ್ಧಾ ಭಕ್ತಿಯಿಂದ ಇದ್ದವರಿಂದ ಪಡೆದು ಇಲ್ಲದವರಿಗೆ ಹಂಚಿ ಬಡವರ ಕಣ್ಣೊರೆಸುವ ಶ್ಲಾಘನೀಯ ಕೆಲಸ ಮಾಡುತ್ತಿದೆ ಸಮಾಜದ ಅರ್ಥರ ಧ್ವನಿಯಾಗಿ ನೋಂದವರ ಪಾಲಿಗೆ ಸದಾ ಸೃಜನ ಶೀಲ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಸಮಾಜದ ಪ್ರತಿಯೊಬ್ಬರಿಗೂ ಕೂಡ ಭರವಸೆಯ ಬೆಳಕನ್ನು ಮೂಡಿಸಿದೆ ಒಕ್ಕೂಟದ ಕೆಲಸ ಶ್ಲಾಘನೀಯ ನಾನು ನಿಮ್ಮ ಎಲ್ಲಾ ಕೆಲಸಗಳಿಗೆ ಬೆನ್ನೆಲುಬಾಗಿ ನಿಂತು ಸಂಪೂರ್ಣ ಸಹಕಾರ ನೀಡುತ್ತೇನೆ. ನೀವು ಇತಿಹಾಸ ನಿರ್ಮಾಣ ಮಾಡಿದ್ದೀರಿ ನಿಮ್ಮ ಕೆಲಸವು ಇನ್ನು ಮುಂದುವರಿಯಬೇಕಾದರೆ ನಾವೆಲ್ಲ ನಿಮ್ಮ ಜೊತೆ ಇರಬೇಕು, ಖಂಡಿತವಾಗಿಯೂ ನಿಮ್ಮ ಅಮೂಲ್ಯ ಚಟುವಟಿಕೆಗಳಿಗೆ ನಾವೆಲ್ಲರೂ ಜೊತೆಯಾಗಿದ್ದು ನಾನು ಸಂಪೂರ್ಣ ಹೃದಯಪೂರ್ವಕ ಬೆಂಬಲವನ್ನು ನೀಡುತ್ತೇನೆ ಎಂಬ ಭರವಸೆಯನ್ನು ಎಂ ಆರ್ ಜಿ ಗ್ರೂಪ್ ಆಫ್ ಕಂಪನೀಸ್ ಅಧ್ಯಕ್ಷ ಶ್ರೀ ಪ್ರಕಾಶ್ ಶೆಟ್ಟಿ ಕೆ ನುಡಿದರು. ಮುಂಬೈಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶ್ವ ಬಂಟರ ಸಮ್ಮೇಳನ ಹಾಗೂ ಮಹಾಧಿವೇಶನದ ಆಮಂತ್ರಣ ಪತ್ರಿಕೆಯನ್ನು…
ಸುಮಾರು ಎರಡು ತಾಸಿಗೂ ಮಿಕ್ಕಿ ಮುಂಬಯಿ ಮಹಾನಗರದ ಕಲಾವಿದರ ಅದ್ಭುತ ನಟನೆಯನ್ನು ಈ ವೇದಿಕೆಯಲ್ಲಿ ನೋಡಿದ್ದೇನೆ. ಸ್ಥಾನೀಯ ಕಲಾವಿದರಿಗೆ, ನಾಟಕ ತಂಡಗಳಿಗೆ ಅವಕಾಶಗಳನ್ನು ನೀಡಿದಾಗ ಉತ್ತಮ ನಾಟಕಗಳು ಪ್ರದರ್ಶನಗೊಳ್ಳಬಹುದು. ಮಹಾನಗರದ ಕಲಾ ಪ್ರೇಮಿಗಳು ಇಂದು ಉತ್ತಮ ಸಂದೇಶ ಭರಿತ ನಾಟಕವನ್ನು ನೋಡಿ ಆನಂದಿಸಿದ್ದಾರೆ. ಸದಾ ಗಂಭೀರ ಪಾತ್ರಗಳನ್ನು ಮಾಡುವ ಸುರೇಂದ್ರ ಕುಮಾರ್ ಹೆಗ್ಡೆಯರಂತಹ ಶ್ರೇಷ್ಠ ಕಲಾವಿದ ಇಂದು ಹಾಸ್ಯ ಪಾತ್ರವನ್ನು ಬಹು ಅಚ್ಚುಕಟ್ಟಾಗಿ ನಿಭಾಯಿಸಿ ಕಲಾ ರಸಿಕರನ್ನು ರಂಜಿಸಿದ್ದಾರೆ. ಪನ್ವಿ ಕ್ರಿಯೇಶನ್ಸ್ ನ ಸ್ಥಾಪಕ ಹರೀಶ್ ಶೆಟ್ಟಿ ಓರ್ವ ಉತ್ತಮ ಗಾಯಕ ಹಾಗೂ ರಂಗನಟ. ಈ ತಂಡಕ್ಕೆ ಕಲಾ ಮಾತೆಯ ಅನುಗ್ರಹ ಸದಾ ಲಭಿಸಲಿ. ಇದೇ ರಿತೀಯ ಉತ್ತಮ ಹಾಸ್ಯಮಯ ನಾಟಕ ಮತ್ತಷ್ಟು ಮೂಡಿ ಬರಲಿ ಎಂದು ಖ್ಯಾತ ಜೋತಿಷಿ ಅಶೋಕ್ ಪುರೋಹಿತ್ ನುಡಿದರು. ಅವರು ಜ.8ರ ಸೋಮವಾರದಂದು ಸಂಜೆ ಮಾಟುಂಗಾದ ಮೈಸೂರ್ ಅಸೋಸಿಯೇಷನ್ ನ ಸಭಾಗೃಹದಲ್ಲಿ ಪನ್ವಿ ಕ್ರಿಯೇಶನ್ಸ್ ಮುಂಬಯಿ ಇದರ ಯೋಜನೆಯಲ್ಲಿ ಕೆ. ವಿ. ಎಸ್ ಎಂಟರ್ಟೈನ್ಮೆಂಟ್ ನ…
ಬ್ರಹ್ಮಾವರ: ನ, 26:- ಭಾರತ ದೇಶ ಕಂಡ ಅತ್ಯಂತ ಉತ್ಕೃಷ್ಟವಾದ ದಿನ. ಯಾಕೆಂದರೆ ಅಂದು ದೇಶದ ಸಂವಿಧಾನ ರಚನಾ ಸಮಿತಿಯು ದೇಶಕ್ಕೆ ಅತಿದೊಡ್ಡ ಸಂವಿಧಾನವನ್ನು ನೀಡಲ್ಪಟ್ಟ ದಿನ. ಆದರೆ ದೇಶಕ್ಕೆ ಅರ್ಪಣೆಯಾದದ್ದು ಜನವರಿ 26, 1950 ರಂದು ರಚನಾ ದಿನವನ್ನು ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಪ್ರಾಸ್ತಾವಿಕ ಮಾತುಗಳೊಂದಿಗೆ, ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಸಮಾಜ ವಿಜ್ಞಾನ ಶಿಕ್ಷಕರಾದ ಶ್ರೀ ಪ್ರಸನ್ನ ಶೆಟ್ಟಿಯವರು ಸಂವಿಧಾನದ ಪ್ರಾಮುಖ್ಯತೆಯನ್ನು ಅತ್ಯಂತ ಗೌರವದಿಂದ ವಿದ್ಯಾರ್ಥಿಗಳಿಗೆ ತಿಳಿಸಿದರು. ವಿಭಾಗೀಯ ಮುಖ್ಯಸ್ಥರಾದ ಸೆಬಾಸ್ಟಿಯನ್ ಪಿ ಎಮ್ರವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ವತಿಯಿಂದ ಗುರು ಪೂರ್ಣಿಮೆಯ ಆಚರಣೆಯು, ಒಡಿಯೂರು ಸಂಸ್ಥಾನದ ಪರಮ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಜಿಯವರ ಶುಭಾಶಿರ್ವಾದದೊಂದಿಗೆ ಜುಲೈ 3 ರಂದು ಪುಣೆ ಶ್ರೀ ಗುರುದೇವ ಸೇವಾ ಬಳಗದ ಗೌರವ ಕಾರ್ಯದರ್ಶಿ ನಗ್ರಿಗುತ್ತು ರೋಹಿತ್ ಶೆಟ್ಟಿ ದಂಪತಿಗಳ ಅಯೋಜಕತ್ವದಲ್ಲಿ ಪುಣೆಯ ಬಾಣೇರ್ ನಲ್ಲಿಯ ಫಿಲಿವಿಲದಲ್ಲಿ ವಿವಿದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ. ಜರಗಿತು. ಗುರು ಪೂರ್ಣಿಮೆಯ ಅಂಗವಾಗಿ ಪುಣೆಯ ಖ್ಯಾತ ಪುರೋಹಿತರಾದ ಕಾತ್ರಜ್ ಹರೀಶ್ ಭಟ್ ಮತ್ತು ತಂಡದವರ ನೇತೃತ್ವದಲ್ಲಿ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಹಾಗೂ ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಸದಸ್ಯೆಯರು ಹಾಗೂ ಬಳಗದ ಸದಸ್ಯರಿಂದ ಭಜನಾ ಮಂಡಳಿಯ ಗುರುಗಳಾದ ಶ್ರೀ ದಾಮೋದರ ಬಂಗೇರರವರ ಮುಂದಾಳತ್ವದಲ್ಲಿ ಭಜನೆ ನಡೆಯಿತು. ಶ್ರೀ ರೋಹಿತ್ ಶೆಟ್ಟಿ ಶ್ರೀಮತಿ ಸ್ನೇಹಲತಾ ಅರ್.ಶೆಟ್ಟಿ ದಂಪತಿಗಳು ಗಣಹೋಮ, ಸತ್ಯನಾರಾಯಣ ಪೂಜೆಗೆ ಕುಳಿತು ಪೂಜಾ ವಿಧಿ ವಿಧಾನ ನೆರವೆರಿಸಿದರು. ನಂತರ…
ರಂಗಭೂಮಿಯಲ್ಲಿ ಶ್ರೀ ಲಲಿತೆ ಕಲಾವಿದರ ತಂಡ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರಿಗೆ ಹೊಸತನವನ್ನು ನೀಡಿದೆ. ಅದರಲ್ಲೂ ಶ್ರೀಲಲಿತೆ ಕಲಾವಿದರು ತಂಡದಿಂದ ಪ್ರದರ್ಶನಗೊಂಡ ಗರುಡ ಪಂಚಮಿ ನಾಟಕದಲ್ಲಿ ವಿಶಿಷ್ಠವಾದ ರಂಗ ವಿನ್ಯಾಸವನ್ನು ಬಳಸಲಾಗಿದೆ. ಕಿಶೋರ್ ಡಿ ಶೆಟ್ಟಿ ಅವರು ರಂಗಭೂಮಿಗೆ ಬಹಳಷ್ಟು ಉತ್ತಮ ಮೌಲ್ಯಯುತ ನಾಟಕಗಳನ್ನು ನೀಡಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶವೂ ಇದೆ ಎಂದು ಯಕ್ಚಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಮಂಗಳೂರು ಪುರಭವನದಲ್ಲಿ ಶ್ರೀಲಲಿತೆ ಕಲಾವಿದರು (ರಿ) ಅರ್ಪಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ನಡೆದ ಗರುಡ ಪಂಚಮಿ ನಾಟಕದ 50 ನೇ ಪ್ರದರ್ಶನದ ಸಂಭ್ರಮಾಚರಣೆ ಮತ್ತು ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಅವರಿಗೆ ನೀಡಲಾದ ರಂಗಕಲಾ ಬಂಧು ಬಿರುದು ಪ್ರದಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮೇಯರ್ ಸುಧೀರ್ ಶೆಟ್ಟ ಕಣ್ಣೂರು ಅಧ್ಯಕ್ಷತೆ ವಹಿಸಿದ್ದರು. ಕಿಶೋರ್ ಡಿ ಶೆಟ್ಟಿ ಅವರು ಅನೇಕ ವರ್ಷಗಳಿಂದ ನಾಟಕ ತಂಡಗಳನ್ನು ಕಟ್ಟಿ ಕಲಾವಿದರಿಗೆ…
ಮೂಡುಬಿದಿರೆ: ‘ವೈಯಕ್ತಿಕ ಮಾಹಿತಿಯ ರಕ್ಷಣೆಯೇ ಇಂದಿನ ಸವಾಲು’ ಎಂದು ರಾಜ್ಯ ಸರ್ಕಾರದ ಸೈಬರ್ಸೆಕ್ ಕೇಂದ್ರದ ಮುಖ್ಯಸ್ಥ ಕಾರ್ತಿಕ್ ಬಪ್ಪನಾಡ್ ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಸೋಮವಾರ 2023-24 ಶೈಕ್ಷಣಿಕ ವರ್ಷದ ‘ಸೈಬರ್ ಸೆಕ್ಯುರಿಟಿ ಕ್ಲಬ್’ನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ‘ಇತ್ತೀಚಿನ ದಿನಗಳಲ್ಲಿ ವೈಯುಕ್ತಿಕ ಮಾಹಿತಿಯ ದುರ್ಬಳಕೆ ಹೆಚ್ಚಾಗುತ್ತಿದ್ದು, ಈ ಮಾಹಿತಿಯ ಭದ್ರತೆ ಹಾಗೂ ಸುರಕ್ಷತೆಯು ನಿಮ್ಮ ಆದ್ಯತೆಯಾಗಬೇಕು’ ಎಂದರು. ‘ತಂತ್ರಜ್ಞಾನಗಳ ಈ ಕಾಲದಲ್ಲಿ ನಮ್ಮ ವ್ಯವಹಾರ ಮತ್ತು ವೈಯಕ್ತಿಕ ವಿವರಗಳ (ಪ್ರೊಫೈಲ್)ಆಧಾರದ ಮೇಲೆ ಸೈಬರ್ಕ್ರೈಂ ಗಳು ನಡೆಯುತ್ತವೆ. ನಮ್ಮ ಭವಿಷ್ಯದ ಒಳಿತಿಗಾಗಿ ಬಹುವಿಧದ ಭದ್ರತೆ ನೀಡಲು, ನಮಗೆ ತಂತ್ರಜ್ಞಾನದ ಹಿಡಿತ ಇರಬೇಕು’ ಎಂದರು. ಲಭ್ಯತೆ, ಸಮಗ್ರತೆ, ಗೌಪ್ಯತೆ ಎಂಬ ಮೂರು ಅಂಶಗಳನ್ನು ನಮ್ಮಲ್ಲಿ ನಾವು ಅಳವಡಿಸಿಕೊಂಡಾಗ ನಮ್ಮ ಮಾಹಿತಿ ಮತ್ತು ಡೇಟಾಗಳನ್ನ ಭದ್ರಪಡಿಸಿಕೊಳ್ಳಲು ಸಾಧ್ಯ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ‘ ವಿದ್ಯಾರ್ಥಿಗಳು ರೂಪಿಸುವ ಪ್ರಾಜೆಕ್ಟ್ಗಳು ಕೇವಲ ಚಿತ್ರ ಹಾಗೂ ಅಂಕಿ…
“ಈ ಪ್ರಪಂಚವನ್ನು ತಾನು ಕಂಡದ್ದಕ್ಕಿಂತ ಹೆಚ್ಚು ಸಂತೋಷದಾಯಕವಾಗಿ ಮತ್ತು ಸುಂದರವಾಗಿ ಮಾಡುವವನು ಸುಸಂಸ್ಕೃತ ” ಎಂದು ಖ್ಯಾತ ಪಾಶ್ಚಾತ್ಯ ಚಿಂತಕ ಅಡ್ವಿನ್ ಅರ್ನಾಲ್ಡ್ ಹೇಳುತ್ತಾರೆ. ಕಳೆದ ಮೂರು ದಶಕಗಳಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಕಿರಣ್ ರೈ, ಕೃಷಿ ಅಭಿವೃದ್ಧಿ ಅಧಿಕಾರಿಯಾಗಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಇಲ್ಲಿ 1986 ರಿಂದ 2015ರ ವರೆಗೆ ಬ್ಯಾಂಕಿಂಗ್ ಕ್ಷೇತ್ರದ ಅಭಿವೃದ್ಧಿಯನ್ನು ವಿವಿಧ ಕ್ಷೇತ್ರಗಳಲ್ಲಿ ಕೈಯಾಡಿಸಿ ಪರಿಣಿತರಾದ ಶ್ರೀಯುತರು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ದೇಶದ ವಿವಿಧ ರಾಜ್ಯಗಳ ಶಾಖೆಗಳಲ್ಲಿ ಸೇವೆ ಸಲ್ಲಿಸಿ ತಮ್ಮ ಅನುಭವವನ್ನು ವಿಸ್ತರಿಸಿಕೊಂಡರು. ಮುಂಬಾಯಿಯಲ್ಲಿದ್ದುಕೊಂಡು ಅವರು ಬ್ಯಾಂಕಿಂಗ್ ಕ್ಷೇತ್ರದ ಅಭಿವೃದ್ಧಿಯಲ್ಲಿ ನೀಡಿದ ಸೇವೆ ಅವರಿಗೆ ಕೀರ್ತಿಯನ್ನು ತಂದಿತು. ಈ ಬ್ಯಾಂಕಿನ ಅತ್ಯುನ್ನತ ಹುದ್ದೆಯಾದ ಜನರಲ್ ಮ್ಯಾನೆಜರ್ ಆಗಿಯೂ ಬಡ್ತಿ ಹೊಂದಿ ಇವರ ಸೇವೆಯನ್ನು ಗಮನಿಸಿ ಸರಕಾರವು ಇವರನ್ನು ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ನ ಅಧ್ಯಕ್ಷರಾಗಿ ನಾಮ ನಿರ್ದೇಶನ ಮಾಡಿತು. ಇಲ್ಲಿ 1 1/2 ವರ್ಷ…