Author: admin
ಜನವರಿ 24 ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಈ ದಿನದ ಸಂಭ್ರಮದಲ್ಲಿ ಯಾವ ಕಲ್ಪನೆಗೂ ಎಟುಕದಂತಹ ಕಾರ್ಯಸಿದ್ದಿಯ ತತ್ಪರತೆಯಲ್ಲೆ ಗೆಲುವು ಸಾಧಿಸುವಂತಹ ಹೆಣ್ಣು ಮಕ್ಕಳ ಬದುಕು ಭವಿಷ್ಯದ ಬಗ್ಗೆ ಯೋಚಿಸಬೇಕು.ಸರಕಾರ, ಸಮಾಜ, ಹಾಗೂ ಪಾಲಕರು ಹೆಚ್ಚಿನ ಮಹತ್ವ ಹೆಣ್ಣು ಮಕ್ಕಳ ಭವಿಷ್ಯದ ಬೆಳವಣಿಗೆಗೆ ಕೊಟ್ಟಲ್ಲಿ ಅವರ ಬದುಕು ಸುಖ ಶಾಂತಿ ಸಮೃದ್ದಿಯಿಂದ ತುಂಬಿ ಬಾಳು ಬಂಗಾರವಾಗಲಿದೆ. ಇಂದಿನ ಮಕ್ಕಳೆ ಮುಂದಿನ ಜನಾಂಗ ಭವ್ಯ ಭಾರತ ಕಟ್ಟುವ ಸರದಾರರು ಇವರು . ” ಬೆಳೆವ ಸಿರಿ ಮೊಳಕೆ ಯಲ್ಲಿ ನೋಡು” ಎಂಬಂತೆ ಶಿಸ್ತು, ಸರಳತೆ, ಶ್ರದ್ಧೆ, ಪ್ರಾಮಾಣಿಕತೆ, ಶೌರ್ಯ, ಧೈರ್ಯ, ವಿನಯ, ವಿಧೇಯತೆ ಯಂತಹ ಉತ್ತಮ ಗುಣಗಳು ಬಾಲ್ಯದಲ್ಲೇ ಮಕ್ಕಳಿಗೆ ಕಲಿಸಿದರೆ ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದಂತೆ . ಪಾಲಕರು ಕೆಲಸದ ಒತ್ತಡದಲ್ಲಿ ಮಕ್ಕಳ ಲಾಲನೆಪಾಲನೆಗೆ ಹೆಚ್ಚಿನ ಗಮನ ಕೊಡಲು ಅಸಮರ್ಥರಾಗುತ್ತಿದ್ದಾರೆ. ಚಿಕ್ಕ ಮಕ್ಕಳು ಮೃದು ಹಾಗೂ ಅನುಕರಣೆಯ ಸ್ವಭಾವ ಹೊಂದಿದ್ದು ಹೆತ್ತವರ ನಡೆ -ನುಡಿ ಆಚಾರ- ವಿಚಾರ ಉಡುಗೆ…
ಬಂಟ್ವಾಳ: ಬಂಟ್ವಾಳ ತಾಲೂಕು ಬಂಟರ ಸಂಘ ಯುವ ವಿಭಾಗದ ನೂತನ ಪದಾಧಿಕಾರಿಗಳ ಆಯ್ಕೆ ಬಂಟವಾಳದ ಬಂಟರ ಭವನದಲ್ಲಿ ಜರುಗಿತು. ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ರಂಗೋಲಿ ಇವರ ಅಧ್ಯಕ್ಷತೆಯಲ್ಲಿ ನಡೆದ ಯುವ ವಿಭಾಗದ ಕಾರ್ಯಕಾರಿಣಿ ಸದಸ್ಯರ ಸಭೆಯಲ್ಲಿ ನಿಶಾನ್ ಆಳ್ವ, ಸುಜೀರುಗುತ್ತು ಇವರನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಮಾಡಲಾಯಿತು. ಉಪಾಧ್ಯಕ್ಷರಾಗಿ ಕರುಣ್ ಶೆಟ್ಟಿ, ಕಾರ್ಯದರ್ಶಿಯಾಗಿ ಗೋಕುಲ್ ಭಂಡಾರಿ, ಖಜಾಂಚಿಯಾಗಿ ಶುಭಕರ್ ಮಾರ್ಲ ಮತ್ತು ಜೊತೆ ಕಾರ್ಯದರ್ಶಿಯಾಗಿ ದೀಪಕ್ ಶೆಟ್ಟಿ ಸರ್ವಾನುಮತದಿಂದ ಆಯ್ಕೆಗೊಂಡರು.
ಅನ್ನದಾತ ರಾಜೇಂದ್ರ ವಿ ಶೆಟ್ಟಿ ಸಾರಥ್ಯದ ಶ್ರೀ ಪಂಜುರ್ಲಿ ಪ್ಯಾಲೇಸ್ ಹಾಗೂ ಲೀಲಾವತಿ ಕಲ್ಯಾಣ ಮಂಟಪ ದಾವಣಗೆರೆಯಲ್ಲಿ ಲೋಕಾರ್ಪಣೆ.
ಹುಬ್ಬಳ್ಳಿ- ಧಾರವಾಡ, ಬೆಳಗಾವಿಯಲ್ಲಿ ತನ್ನದೇ ಆದ ವಿಶಿಷ್ಟ, ಶುಚಿ-ರುಚಿಯಾದ ಊಟ ಉಪಹಾರದ ಜೊತೆ, ದೇಶಪ್ರೇಮದ ಬೀಜ ಬಿತ್ತಿರುವ ಶ್ರೀ ಪಂಜುರ್ಲಿ ಎಲ್ಲರ ಮನೆಮಾತಾಗಿದೆ. ಇದೀಗ ಶ್ರೀ ಪಂಜುರ್ಲಿ ಬೆಣ್ಣೆ ನಗರಿ ಖ್ಯಾತಿಯ ದಾವಣಗೆರೆಗೆ ಹೆಜ್ಜೆಯಿಡುತ್ತಿದೆ. ದಾವಣಗೆರೆಯ ಗ್ರಾಹಕರಿಗೆ ತನ್ನದೇ ಆದ ವಿಶಿಷ್ಟವಾದ ಊಟ, ಉಪಹಾರದ ಜೊತೆ ದಾವಣಗೆರೆ ಜನತೆಗೆ ಒಂದು ಸುಂದರ, ವಿನೂತನವಾದ ಶ್ರೀ ಲೀಲಾವತಿ ಕಲ್ಯಾಣ ಮಂಟಪ ಅನ್ನದಾತ, ಸಮಾಜಸೇವಕ ರಾಜೇಂದ್ರ ವಿ ಶೆಟ್ಟಿ ಸಾರಥ್ಯದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಫೆಬ್ರವರಿ 23ರಂದು ಬುಧವಾರ ಬೆಳಿಗ್ಗೆ 9.30 ಕ್ಕೆ ಸತ್ಯನಾರಾಯಣ ಪೂಜೆಯೊಂದಿಗೆ ಆರಂಭಗೊಳ್ಳಲಿದೆ. ಶ್ರೀ ಪಂಜುರ್ಲಿ ಗ್ರೂಪ್ ನ ಮಾಲಕರಾದ ರಾಜೇಂದ್ರ ಶೆಟ್ಟಿ ಅವರ ಶ್ರಮ ನಿಜವಾಗಲೂ ಮೆಚ್ಚುವಂತದ್ದೇ, ತಾನು ಬೆಳೆದು ತಮ್ಮವರನ್ನು ಬೆಳೆಸಬೇಕೆಂಬ ಅವರ ದೊಡ್ಡ ಗುಣ, ಅವರನ್ನು ಆಕಾಶದೆತ್ತರಕ್ಕೆ ಕೊಂಡೊಯ್ಯುತ್ತಿದೆ. ಇದೆ 23ಕ್ಕೆ ಇದನ್ನೇ ಆಮಂತ್ರಣ ಎಂದು ಭಾವಿಸಿ, ಹೆಚ್ಚಿನ ಸಂಖ್ಯೆಯಲ್ಲಿ ದಾವಣಗೆರೆಗೆ ಆಗಮಿಸಿ, ಹೋಟೆಲ್ ಶ್ರೀ ಪಂಜುರ್ಲಿ ಪ್ಯಾಲೆಸ್ ಹಾಗೂ ಶ್ರೀ ಲೀಲಾವತಿ ಕಲ್ಯಾಣ ಮಂಟಪಕ್ಕೆ ಶುಭಾಶಯ ಕೋರಲು…
ಯುವ ಕ್ರಿಕೆಟಿಗ, ಕ್ರೀಡಾ ಸಂಘಟಕ ನಿತೇಶ್ ಶೆಟ್ಟಿ ಇವರ ಸಾರಥ್ಯದಲ್ಲಿ ರಾಷ್ಟ್ರೀಯ ಮಟ್ಟದ ಅದ್ಧೂರಿಯ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಪಾಂಚಜನ್ಯ ಟ್ರೋಫಿ-2023 ಇತ್ತೀಚಿಗೆ ಕೋಟ ಗಿಳಿಯಾರು ಶಾಂಭವಿ ಶಾಲಾ ಮೈದಾನದಲ್ಲಿ ಜರುಗಿತು. ಕುಂದಾಪುರ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಹಾಗೂ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷ ಗೌತಮ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಗೌತಮ್ ಶೆಟ್ಟಿ, “ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಬದುಕಿನಲ್ಲಿ ಎಂತಹ ಪರಿಸ್ಥಿತಿಯಲ್ಲೂ ಧೃತಿಗೆಡದೆ ಸಮರ್ಥವಾಗಿ ನಿಭಾಯಿಸುತ್ತಾರೆ. ಪಾಂಚಜನ್ಯದ ನಿತೇಶ್ ಶೆಟ್ಟಿ ಉತ್ತಮ ಸಂಘಟಕರು. ಕ್ರಿಕೆಟ್ ಗೆ ಹೊಸ ಆಯಾಮ ನೀಡುವುದರಲ್ಲಿ ನಿಸ್ಸೀಮರು. ಈ ಬಾರಿಯೂ ಪಂದ್ಯಾವಳಿಗೆ ಹೊಸ ಸ್ಪರ್ಶ ನೀಡಿದ್ದಾರೆ.” ಸಂಘಟಕರಾದ ನಿತೇಶ್ ಹಾಗೂ ಪಾಂಚಜನ್ಯದ ತಂಡವನ್ನು ಅಭಿನಂದಿಸಿ ಶುಭ ಹಾರೈಸಿದರು.
ವಿದ್ಯಾಗಿರಿ : ನಮ್ಮನ್ನು ನಾವು ಮೊದಲು ಬದಲಿಸಿಕೊಳ್ಳದೆ ಹೊರತು, ಸಮಾಜವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಆಳ್ವಾಸ್ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹ ಪ್ರಾಧ್ಯಪಕಿ ಡಾ. ಮೂಕಾಂಬಿಕಾ ಜಿ. ಎಸ್ ಹೇಳಿದರು. ಆಳ್ವಾಸ್ ಪದವಿ ಪೂರ್ವ ವಿಭಾಗದ ವತಿಯಿಂದ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಗುರುವಾರ ಆಂತರಿಕ ಸಮಿತಿ ಆಯೋಜಿಸಿದ್ದ ‘ಮಹಿಳಾ ದೌರ್ಜನ್ಯ ತಡೆ ಅರಿವು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ದೇಶದ ‘ಯತ್ರಾ ನಾರ್ಯಂತು ಪೂಜ್ಯಂತೆ’ ಶ್ಲೋಕವನ್ನು ನಾವು ಒಪ್ಪುತ್ತೇವೆ, ಆದರೆ ಪಾಲಿಸುವುದಿಲ್ಲವೇಕೆ? ಎಲ್ಲರಿಗೂ ದೌರ್ಜನ್ಯವಾಗುತ್ತದೆ, ಆದರೆ ಈ ತಕ್ಕಡಿಯಲ್ಲಿ ಮಹಿಳಾ ದೌರ್ಜನ್ಯದ ತಕ್ಕಡಿ ಮಾತ್ರ ನೆಲಮುಟ್ಟುವಷ್ಟು ತೂಕ ಹೊಂದಿದೆ. ಎಲ್ಲರನ್ನ ಗೌರವಿಸುವ ವ್ಯಕ್ತಿತ್ವ ಇದ್ದರೆ ಸಮಸ್ಯೆಗೆ ಪರಿಹಾರ ಸಾಧ್ಯ. ಪ್ರತಿ ಕಾನೂನುಗಳ ಹಿಂದೆ ಒಂದು ಇತಿಹಾಸವಿದೆ. ರಕ್ಷಣೆ ಕೊಡುವ ಕಾನೂನು ಇರುವಾಗ ಸಮಸ್ಯೆಗಳನ್ನು ತಿಳಿಸಲು ಹಿಂಜರಿಯುವುದು ಸೂಕ್ತವಲ್ಲ. ಪ್ರಕೃತಿಯ ಮುಂದೆ ಎಲ್ಲರೂ ಸಮಾನರು. ಅಸಮಾನತೆಯನ್ನು ನಮ್ಮಿಂದ ಮೊದಲು ದೂರ ತಳ್ಳಬೇಕು, ಎಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಪದವಿಪೂರ್ವ…
ದಶಮಾನೋತ್ಸವ ಆಚರಿಸಿರುವ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ನೂತನ ಕಾರ್ಯಾಧ್ಯಕ್ಷರಾಗಿ ಹೊಟೇಲು ಉದ್ಯಮಿ ಸುದೇಶ್ ಶೆಟ್ಟಿ ನೇಮಕಗೊಂಡಿದ್ದಾರೆ.
ಜ್ಞಾನ ಸರೋವರ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ದಿನಾಂಕ 15- 9 – 2023 ರಂದು ಪೋಷಕರ ಕ್ರೀಡಾಕೂಟವನ್ನು ಹಮ್ಮಿಕೊಂಡಿದ್ದು, ಬಹಳ ಉತ್ಸಾಹದಿಂದ ನಡೆಸಲಾಯಿತು. ಕಾರ್ಯಕ್ರಮವು ಬೆಳಿಗ್ಗೆ 10.30 ಕ್ಕೆ ಪ್ರಾರಂಭವಾಯಿತು. ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉತ್ಸಾಹದಿಂದ ಪೋಷಕರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಸುಧಾಕರ ಎಸ್ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಪೋಷಕರ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಕುರಿತು ಸಹ ಪ್ರೇರಕ ಭಾಷಣವನ್ನು ಮಾಡಿದರು. ಪ್ರತಿಯೊಬ್ಬರು ಕ್ರೀಡಾಕೂಟದಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಿದರು ಮತ್ತು ಕ್ರೀಡಾ ಚಟುವಟಿಕೆಗಳನ್ನು ಮಾಡುವುದರಿಂದ ಆಗುವ ಅನೇಕ ಪ್ರಯೋಜನಗಳನ್ನು ತಿಳಿಸಿದರು. ಮಕ್ಕಳಿಗೆ ಪಾಠ ಎಷ್ಟು ಮುಖ್ಯವೋ ಆಟವು ಅಷ್ಟೇ ಮುಖ್ಯ. ಕ್ರೀಡೆಯ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದವರೂ ಇದ್ದಾರೆ ಎಂದರು. ಶಾಲಾ ಕ್ರೀಡಾ ಇಲಾಖೆ ವತಿಯಿಂದ ವಿವಿಧ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಪೋಷಕರು ತಮ್ಮ ಆಸಕ್ತಿಗೆ ಅನುಗುಣವಾಗಿ ಭಾಗವಹಿಸಿದರು. ಶಾಲೆಯ ಒಳ ಸಭಾಂಗಣದಲ್ಲಿ ಎಲ್ಲಾ ಆಟಗಳನ್ನು ಆಯೋಜಿಸಲಾಗಿತ್ತು. ಎಲ್ಲಾ…
ಹಳ್ಳಿಯ ಜನರ ಬೇಸಾಯದ ಆನಂತರದ ಭವಣೆ, ಅಂದಿನ ತೊಡರುಗಳನ್ನು, ಕಷ್ಟ ಕಾರ್ಪಣ್ಯಗಳನ್ನು ಇಂದಿನ ಪೀಳಿಗೆಗೆ ತಿಳಿಸುವ ಈ ಒಂದು ಆಟಿದ ನೆಂಪು ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಹಿಂದೆ ಊರಿನ ನಂಬಿಕೆಯ ದಿನಗಳಲ್ಲಿ ಆಷಾಢ ತಿಂಗಳಲ್ಲಿ ಯಾವುದೇ ಪವಿತ್ರ ಕಾರ್ಯಕ್ರಮಗಳು ಜರಗುತ್ತಿರಲಿಲ್ಲ. ಕಾರಣ ಆ ತಿಂಗಳು ಯಾವುದೇ ಕಾರ್ಯಕ್ರಮಕ್ಕೆ ಹೊಂದಾಣಿಕೆಯಾಗುತ್ತಿರಲಿಲ್ಲ. ದೈಹಿಕವಾಗಿ, ಮಾನಸಿಕವಾಗಿಯೂ ಆಷಾಢ ತಿಂಗಳು ಒಂದು ತಟಸ್ಥ ಮಾಸವಾಗಿತ್ತು ಎಂದು ಕೇಮಾರು ಸಂದೀಪನಿ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜೀ ನುಡಿದರು. ಅವರು ಮಂಗಳೂರು ಉರ್ವ ಸ್ಟೋರ್ ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಭಾಭವನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದ ವತಿಯಿಂದ “ಆಟಿದ ನೆಂಪು” ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಉದ್ಘಾಟಿಸಿ, ಮಾತನಾಡಿದರು. ಬದಲಾದ ಬದುಕಿನಲ್ಲಿ ಅಂದಿನ ಬದುಕಿನ ಆಚಾರ-ವಿಚಾರಗಳು ಕಟ್ಟುನಿಟ್ಟಿನ ಸಂಸ್ಕೃತಿ, ಸಂಪ್ರದಾಯದ ಪಾಲನೆಯ ಬಗ್ಗೆ ನಾವು ಇಂದಿನ ಮಕ್ಕಳಿಗೆ ಆಟಿಯ ಇಂತಹ ಕಾರ್ಯಕ್ರಮದ ಮೂಲಕ ತಿಳಿಸುವುದು ಅವಶ್ಯ. ಇಂದಿನ ಕಾರ್ಯಕ್ರಮಕ್ಕೆ ತುಳುನಾಡ ರಕ್ಷಣಾ ವೇದಿಕೆಯ…
ಉಳ್ಳಾಲ ಕೋಟೆಕಾರು ನೆತ್ತಿಲ ಪರಿಸರದ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋಟೆಕಾರು ಪಟ್ಟಣ ಪಂಚಾಯತ್ ಮುಂಬಾಗದಲ್ಲಿ ಕೋಟೆಕಾರು ಪರಿಸರದ ನಾಗರಿಕರು ಮತ್ತು ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರು ನೀರಿನ ಖಾಲಿ ಬಿಂದಿಗೆಗಳನ್ನು ಇಟ್ಟು ವಿನೂತನ ರೀತಿಯಲ್ಲಿ ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು, ನೀರು ಪ್ರಕೃತಿಯ ನೈಸರ್ಗಿಕ ಕೊಡುಗೆಗಳಲ್ಲಿ ಪ್ರಮುಖವಾದುದು. ಆದ್ದರಿಂದ ಅದರ ಸದ್ಬಳಕೆ ಇಂದಿನ ಕಾಲಘಟ್ಟದಲ್ಲಿ ಅತಿ ಅವಶ್ಯಕ. ಕೋಟೆಕಾರು ನೆತ್ತಿಲ ಪ್ರದೇಶ ಉಳ್ಳಾಲ ತಾಲೂಕಿನ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರದೇಶಗಳಲ್ಲೊಂದು. ಇಲ್ಲಿ ಖಾಸಗಿ ಬಡಾವಣೆಗಳು ನಿರ್ಮಾಣವಾಗಿದ್ದು ಹಾಗೂ ಸಣ್ಣಗಾತ್ರದ ಕೈಗಾರಿಕೆಗಳು ಕಾರ್ಯಚರಿಸುತ್ತಿವೆ. ಸಹಜವಾಗಿ ಬೇಸಿಗೆ ಕಾಲದಲ್ಲಿ ಮಾರ್ಚ್ ತಿಂಗಳಿನಿಂದ ಇಲ್ಲಿ ನೀರಿಗಾಗಿ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅದರಲ್ಲೂ ಕಳೆದ ಕೆಲವು ವರ್ಷಗಳಿಂದ ಮನೆಗಳ ಬಾವಿಗಳು ಬೇಸಿಗೆ ಕಾಲದಲ್ಲಿ ಬತ್ತಿ ಹೋಗುತ್ತಿರುವುದು ಆತಂಕದ ವಿಷಯ. ಜನರು ತಮ್ಮ ಮೂಲಭೂತ ಅವಶ್ಯಕತೆಗಳಾದ ಶೌಚಾಲಯ ಹಾಗೂ ಅಡುಗೆ…
ಕಾಪುವಿನ ಸುಂದರ ಭವಿಷ್ಯಕ್ಕಾಗಿ ದೂರದರ್ಶಿತ್ವದ ಯೋಜನೆಗಳುಳ್ಳ ನೀಲ ನಕ್ಷೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇವೆ. ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕಲ್ಪನೆಯ ಸಾಕಾರಕ್ಕಾಗಿ ಮತ್ತು ಸರ್ವ ವ್ಯಾಪಿ, ಸರ್ವ ಸ್ಪರ್ಷಿ ಚಿಂತನೆಯೊಂದಿಗೆ ಎಲ್ಲಾ ಜಾತಿ, ಧರ್ಮ, ಮತ, ಸಮುದಾಯದ ಜನರ ಸೇವೆಗಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಕಾಪು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ವಿನಂತಿಸಿದ್ದಾರೆ. ಕಾಪು ಪುರಸಭಾ ವ್ಯಾಪ್ತಿಯ ಕರಾವಳಿ ವಾರ್ಡ್, ಪೊಲಿಪುಗುಡ್ಡೆ, ಭಾರತ್ನಗರ, ಕಲ್ಯ, ದಂಡತೀರ್ಥ, ಕೋತಲಕಟ್ಟೆ, ಕೈಪುಂಜಾಲು, ಕಾಪು ಪರಿಸರದಲ್ಲಿ ಮತಯಾಚನೆ ನಡೆಸಿ, ಜೇಸಿ ಭವನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಮಹತ್ವಾಕಾಂಕ್ಷಿಯ ಜನೋಪಯೋಗಿ ಜನ ಸೇವಾ ಕಾರ್ಯಕ್ರಮಗಳು ಬಿಜೆಪಿಯ ಗೆಲುವಿಗೆ ಪೂರಕವಾಗಲಿವೆ. ಅದರ ಜತೆಗೆ ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಕಳೆದ ಐದು ವರ್ಷಗಳಲ್ಲಿ…