Author: admin
ಸಮಾಜಸೇವಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಭವಾನಿ ಗ್ರೂಪ್ ಆಫ್ ಕಂಪನಿಸ್ ನ ಆಡಳಿತ ನಿರ್ದೇಶಕರಾದ ಶ್ರೀ ಕುಸುಮೋಧರ ಶೆಟ್ಟಿ ಚೆಲ್ಲಡ್ಕ ( ಕೆ ಡಿ ಶೆಟ್ಟಿ ) ಅವರ ಹುಟ್ಟುಹಬ್ಬವನ್ನು ಮಂಗಳೂರಿನ ಕೊಟ್ಟಾರದಲ್ಲಿರುವ ಕಚೇರಿಯಲ್ಲಿ ತನ್ನ ನೌಕರ ವೃಂದದವರೊಂದಿಗೆ ಸರಳವಾಗಿ ಆಚರಿಸಿಕೊಂಡರು. ಮುಂಬಯಿ ಕಚೇರಿಯ ನೌಕರ ವೃಂದದವರು ವಿಡಿಯೋ ಕಾಲ್ ಮೂಲಕ ಶುಭ ಹಾರೈಸಿದರು. ಶುಭ ಹಾರೈಸಿದ ಎಲ್ಲರಿಗೂ ಕೆ ಡಿ ಶೆಟ್ಟಿಯವರು ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಕೆ ಡಿ ಶೆಟ್ಟಿಯವರ ಧರ್ಮಪತ್ನಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಸ್ಥಾಪಕ ರಂಜಿತ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ದೊಡ್ಡಮನೆ ಹಾಗೂ ಭವಾನಿ ಗ್ರೂಪ್ ನ ನೌಕರ ವೃಂದದವರು ಉಪಸ್ಥಿತರಿದ್ದರು.
ಯುವ ಜನರಿಗೆ ಇಂದು ಬದುಕು ಕಟ್ಟಿಕೊಳ್ಳಲು ಹಿಂದಿನವರಂತೆ ಉದ್ಯೋಗವನ್ನು ಅರಸಿ ವಲಸೆ ಹೋಗಲೇಬೇಕೆಂಬ ಸ್ಥಿತಿ ಇಲ್ಲ. ಸಮರ್ಥರಿಗೆ ಈಗ ವಿಪುಲ ಉದ್ಯೋಗ ಅವಕಾಶಗಳಿವೆ. ಮನೆ ಬಾಗಿಲಿಗೆ ಉದ್ಯೋಗವಕಾಶವನ್ನು ಒದಗಿಸುವ ಕೆಲಸ ಮಾಡುತ್ತಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಪ್ರಯತ್ನ ಶ್ಲಾಘನೀಯ ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ಕುಂತಳ ನಗರ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಬೆಂಗಳೂರು ಎಂಆರ್ ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಡವನಾಗಿ ಹುಟ್ಟುವುದು ತಪ್ಪಲ್ಲ. ಆ ಆಯ್ಕೆ ನಮ್ಮ ಕೈಯಲ್ಲಿ ಇಲ್ಲ. ಆದರೆ ಬಡವನಾಗಿ ಸಾಯಬಾರದು. ಎಲ್ಲರಿಗೂ ಅವಕಾಶ ಇರುತ್ತದೆ. ಅದನ್ನು ಬಳಸಿಕೊಂಡು ಬದುಕಿನಲ್ಲಿ ಮೇಲೆ ಬರಬೇಕು ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಉಡುಪಿ…
ಬಂಟ ಸಮಾಜದ ಅಗ್ರಗಣ್ಯ ನೇತಾರ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ ಅವರ ಆಶೀರ್ವಾದದೊಂದಿಗೆ ಪತ್ರಿಕೋದ್ಯಮಿ ರಂಜಿತ್ ಶೆಟ್ಟಿಯವರು ಸರ್ವರಿಗೂ ಆರೋಗ್ಯ, ಸರ್ವರಿಗೂ ವಿದ್ಯಾಭ್ಯಾಸ, ಸರ್ವರಿಗೂ ಉದ್ಯೋಗ ಎಂಬ ಮೂರು ಪರಿಕಲ್ಪನೆ ಇಟ್ಟುಕೊಂಡು, ಬಂಟ ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಲು ಬಂಟ್ಸ್ ಬ್ರಿಗೇಡ್ ಸೇವಾ ಸಂಸ್ಥೆಯನ್ನು ಸ್ಥಾಪಿಸಲು ಮುಂದಾಗಿದ್ದಾರೆ. ನಾಳೆ ಗಣೇಶ ಚತುರ್ಥಿಯ ಶುಭ ದಿನದಂದು ಮಂಗಳೂರಿನಲ್ಲಿ ಬಂಟ್ಸ್ ಹಾಸ್ಟೆಲ್ ಓಂಕಾರ ನಗರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಬಂಟ್ಸ್ ಬ್ರಿಗೇಡ್ ಸೇವಾ ಸಂಸ್ಥೆಯ ಲೋಗೋ ಅನಾವರಣವನ್ನು ಗಣ್ಯರ ಸಮ್ಮುಖದಲ್ಲಿ ಅಜಿತ್ ಕುಮಾರ್ ರೈ ಮಾಲಾಡಿಯವರು ಮಾಡಲಿದ್ದಾರೆ. ಪ್ರತಿ ತಿಂಗಳು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಬಂಟ ಸಮಾಜ ಬಾಂಧವರಿಗೆ ಅರೋಗ್ಯ ತಪಾಸಣಾ ಶಿಬಿರ ಮಾಡಿಕೊಂಡು ಔಷಧಿ ಉಚಿತವಾಗಿ ನೀಡಲು, ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಅವರವರ ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ದೊರಕಿಸಿಕೊಡಲು, ಸರ್ವರಿಗೂ ವಿದ್ಯಾಭ್ಯಾಸ ದೊರೆಯಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ…
ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿ ಅಜ್ಜರಕಾಡುವಿನಲ್ಲಿ ವಿಶ್ವ ಬಂಟರ ಸಮ್ಮಿಲನ, ಕ್ರೀಡಾ ಸಂಗಮ ಹಾಗೂ ಸಾಂಸ್ಕೃತಿಕ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಅಂಬಾಗಿಲು ಅಮೃತಾ ಗಾರ್ಡನ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪೂರ್ವ ಭಾವಿ ಸಭೆಗಳನ್ನು ನಡೆಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಜಗತ್ತಿನಾದ್ಯಂತ ಇರುವ 150 ಬಂಟರ ಸಂಘಗಳ ಪ್ರತಿನಿಧಿಗಳು ಭಾಗವಹಿಸಲಿರುವರು. ಮುಂಬಯಿ, ಪುಣೆ, ಬೆಂಗಳೂರು, ಮೈಸೂರು ಹುಬ್ಬಳ್ಳಿ-ದಾರಾವಾಡ, ಯುಎಇ ಸೇರಿದಂತೆ ವಿವಿಧ ಕಡೆಗಳಿಂದ ಸುಮಾರು 10-15 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಕ್ರೀಡಾ ಸಂಗಮದಲ್ಲಿ ತ್ರೋಬಾಲ್, ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟವನ್ನು ಏರ್ಪಡಿಸಲಾಗುತ್ತದೆ. ಅದೇ ರೀತಿ ಸಾಂಸ್ಕೃತಿಕ ಸಂಭ್ರಮದಲ್ಲಿ ತಂಡಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಮುದಾಯದ ಹಲವು ದಾನಿಗಳು ಸಂಪೂರ್ಣ ನೆರವು ನೀಡಲಿದ್ದಾರೆ…
ತುಳು ರಂಗಭೂಮಿ ಹಾಗೂ ಚಿತ್ರರಂಗದ ಮೇರು ನಿರ್ದೇಶಕ, ನಿರ್ಮಾಪಕ ವಿಜಯಕುಮಾರ್ ಕೊಡಿಯಾಲ್ಬೈಲ್ ಅವರು ಕಳೆದ ಮೂರ್ನಾಲ್ಕು ವರ್ಷಗಳಿಂದ ಶಿವದೂತೆ ಗುಳಿಗೆ ನಾಟಕದಲ್ಲೇ ಮಗ್ನರಾಗಿದ್ದರು. ನಿರೀಕ್ಷೆಗೂ ಮೀರಿದ ಬೇಡಿಕೆಯಿಂದಾಗಿ ಅದ್ಭುತ ಯಶಸ್ಸು ಗಳಿಸಿರುವ ಶಿವದೂತೆ ಗುಳಿಗೆ ನಾಟಕವು ಸುಮಾರು 500 ಪ್ರದರ್ಶನಗಳ ಸನಿಹದಲ್ಲಿದೆ. ಆ ಮೂಲಕ ಎಲ್ಲರ ಗಮನವನ್ನೂ ತುಳು ರಂಗಭೂಮಿಯತ್ತ ಸೆಳೆದಿದ್ದಾರೆ. ಈ ನಾಟಕವು ಕನ್ನಡಕ್ಕೂ ಡಬ್ಬಿಂಗ್ ಆಗಿದ್ದು, ಮಲಯಾಳ, ಮರಾಠಿಯಲ್ಲೂ ಪ್ರದರ್ಶನ ಕಾಣಲಿದೆ. ದೇಶದ ಪ್ರಮುಖ ನಗರಗಳಲ್ಲಿ ದಿನವೊಂದರಲ್ಲೇ 2-3 ಪ್ರದರ್ಶನ ನೀಡಿ ಸುದ್ದಿಯಾಗಿದ್ದ ಈ ನಾಟಕವು ವಿದೇಶದಲ್ಲೂ ಭರ್ಜರಿ ಸದ್ದು ಮಾಡಿತ್ತು. ಈ ಎಲ್ಲ ಕಾರಣಗಳಿಂದ ಹೊಸ ನಾಟಕ ಪ್ರದರ್ಶನಕ್ಕೆ ಅವರಿಗೆ ಅವಕಾಶ ಸಿಗಲಿಲ್ಲ. ಎಲ್ಲರೂ ಶಿವದೂತ ಗುಳಿಗನನ್ನೇ ಕೇಳುವವರು. ಈಗ ಅವರ ಹೊಸ ನಾಟಕ “ಮೈತಿದಿ” ಪ್ರದರ್ಶನಕ್ಕೆ ಸಿದ್ಧವಾಗಿದೆ. ಇದನ್ನು ಹಿಂದೆಯೇ ರಚಿಸಿ ಸಿದ್ಧಪಡಿಸಿದ್ದ ವಿಜಯಕುಮಾರ್ ಅವರು ಗುಳಿಗನ ಕಾರಣದಿಂದ ಮುನ್ನೆಲೆಗೆ ತರಲು ಸಾಧ್ಯವಾಗಿರಲಿಲ್ಲ. ಈ ಬಾರಿ ಮೈತಿದಿಗೆ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟಂಬರ್ನಲ್ಲಿ ಈ ನಾಟಕ…
ಈ ವರ್ಷದ ಅತೀ ನಿರೀಕ್ಷಿತ ತುಳು ಸಿನಿಮಾ, ಗಿರಿಗಿಟ್ ಖ್ಯಾತಿಯ ಬಿಗ್ಬಾಸ್ ಚಾಂಪಿಯನ್ ರೂಪೇಶ್ ಶೆಟ್ಟಿ ನೇತೃತ್ವದ ತಂಡದ ಸರ್ಕಸ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿ ಗಮನ ಸೆಳೆದಿರುವ ಪುತ್ತೂರಿನ ಬಹುಮುಖ ಪ್ರತಿಭೆ ರಚನಾ ರೈ ಅವರಿಗೆ ಸಿನಿಮಾ ರಂಗದಲ್ಲಿ ಉಜ್ವಲ ಭವಿಷ್ಯ ಇರುವುದು ಮೇಲ್ನೋಟಕ್ಕೇ ಸ್ಪಷ್ಟವಾಗುತ್ತಿದೆ. ಅವರ ಆಕರ್ಷಕ ದೇಹ ಸೌಂದರ್ಯ, ರೂಪ, ಅಭಿನಯ, ಬಹುಮುಖ ರಂಗದಲ್ಲಿ ತೋರಿಸುತ್ತಿರುವ ಕಲಾ ಪ್ರೌಢಿಮೆಗಳೆಲ್ಲವೂ ಅವರ ಭವಿಷ್ಯದ ದಾರಿಯನ್ನು ಉಜ್ವಲಗೊಳಿಸಲಿದೆ. ಎಳವೆಯಲ್ಲೇ ಕ್ಯಾಮರಾ ಎದುರಿಸಿದ್ದ ಅವರು ಅದೇ ಕಾರಣದಿಂದ ಸರ್ಕಸ್ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರೊಂದಿಗೆ ಕಿಂಚಿತ್ತೂ ಅಳುಕಿಲ್ಲದೆ ನಟಿಸಿ ಉತ್ತಮ ಪ್ರದರ್ಶನವನ್ನೂ ನೀಡಿ ಎಲ್ಲರಿಂದಲೂ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಪತ್ರಿಕೋದ್ಯಮದಲ್ಲಿ ಪದವಿ ಮಾಡಿರುವ ಅವರು ಉತ್ತಮ ಭರತನಾಟ್ಯ ಕಲಾವಿದೆ, ಕ್ರೀಡಾಪಟು ಕೂಡ ಆಗಿರುವ ಇವರು ಪುತ್ತೂರಿನಲ್ಲೇ ಹುಟ್ಟಿ ಬೆಳೆದವರು. ಉಜಿರೆಯ ಎಸ್ಡಿಎಂ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿ. ವೃತ್ತಿಪರ ಬ್ಯಾಂಡ್ಮಿಂಟನ್ ಮತ್ತು ಫುಟ್ಬಾಲ್ ಕ್ರೀಡಾಪಟು ಕೂಡ ಆಗಿರುವ ಅವರು ಉತ್ತಮ ಚಿತ್ರಕಲಾವಿದೆಯೂ ಆಗಿದ್ದಾರೆ. ಚಿತ್ರಕಲೆಯಲ್ಲಿ ರಾಜ್ಯ…
ಯುವನಟ ಪ್ರವೀರ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸಿರುವ “ಸೈರನ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಸದ್ಯ ಸಿನಿಮಾದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ “ಸೈರನ್’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ “ಸೈರನ್’ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಟ ಡಾಲಿ ಧನಂಜಯ್, ನಟಿ ಸ್ಪರ್ಶ ರೇಖಾ, ನಿರ್ದೇಶಕ ಎಎಂಆರ್ ರಮೇಶ್, ಪತ್ರಕರ್ತ ರಂಗನಾಥ್ ಭಾರಧ್ವಾಜ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಹಾಜರಿದ್ದು, “ಸೈರನ್’ ಸಿನಿಮಾದ ಟ್ರೇಲರ್ ಅನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ನಟ ಪ್ರವೀರ್ ಶೆಟ್ಟಿ, “ಇದೊಂದು ಕಂಪ್ಲೀಟ್ ಆ್ಯಕ್ಷನ್ ಕಂ ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯ ಸಿನಿಮಾ. ಈ ಸಿನಿಮಾದಲ್ಲಿ ನಾನು ಇನ್ವೆಸ್ಟಿಗೇಟಿಂಗ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದೇನೆ. ಸಮಾಜದಲ್ಲಿ ಇಂದು ನಡೆಯುತ್ತಿರುವ ಕೆಲವು ಘಟನೆಗಳನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ.…
ಏರ್ಯ ಲಕ್ಷ್ಮೀ ನಾರಾಯಣ ಆಳ್ವರು ಎಂದರೆ ನಮಗೆ ನೆನಪಾಗೋದು ಅವರ ಸಾಹಿತ್ಯ, ಜನಪದ ಜ್ಞಾನ. ಸಾಹಿತಿಯಾಗಿ, ಅತ್ಯುತ್ತಮ ಸಂಘಟನಾ ಪಟುವಾಗಿ, ಸಮಾಜಸೇವಕರಾಗಿ ಅವರು ನೀಡಿದ ಕೊಡುಗೆ ಅಪಾರ ಮತ್ತು ಅನನ್ಯ. ತುಳು ಬರಹಗಾರರಾಗಿ ಅವರು ತುಳುನಾಡಿನ ಪರಂಪರೆ ಶ್ರೇಷ್ಠತೆಗಳನ್ನು ಎತ್ತಿ ಹಿಡಿಯುವ ಕಾಯಕವನ್ನು ಜೀವನದುದ್ದಕ್ಕೂ ಮಾಡಿಕೊಂಡು ಬಂದಿದ್ದಾರೆ. ಅಂಕಣಕಾರರಾಗಿದ್ದರು, ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ, ಅನೇಕ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳ ರೂವಾರಿಯೂ ಅವರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಡಂಕಾಪುವಿನಲ್ಲಿ 1926ರ ಮಾರ್ಚ್ 19ರಂದು ಲಕ್ಶ್ಮೀನಾರಾಯಣ ಆಳ್ವರು ಜನಿಸಿದರು, `ಏರ್ಯ ಬೀಡು’ ಎಂಬ ಪ್ರತಿಷ್ಠಿತ ಮಾತೃ ಮೂಲ ಪದ್ಧತಿಯ, ದೈವಾರಾಧನೆಯ, ಕೃಷಿ ಪ್ರಧಾನ ಬಂಟ ಮನೆತನಕ್ಕೆ ಸೇರಿದವರು. ತಾಯಿ ಸೋಮಕ್ಕ ಮತ್ತು ತಂದೆ ಸುಬ್ಬಯ್ಯ ಆಳ್ವ. ಅವರ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಬಂಟ್ವಾಳದಲ್ಲಿ. ಅವರು ಹೈಸ್ಕೂಲು ಓದಿದ್ದು ಕೆನರಾ ಹೈಸ್ಕೂಲು ಮಂಗಳೂರಿನಲ್ಲಿ. ಸ್ವಾತಂತ್ರ್ಯ ಹೋರಾಟಗಳು ತೀವ್ರವಾಗಿದ್ದ ಕಾಲದಲ್ಲಿ ಹುಟ್ಟಿದ್ದರಿಂದ ಸ್ವಾತಂತ್ರ್ಯಪೂರ್ವದ ಆದರ್ಶಗಳನ್ನು ಅವರು ಮೈಗೂಡಿಸಿಕೊಂಡಿದ್ದರು. ಹೋರಾಟಗಾರರ ಚಿಂತನೆಗಳು ಮತ್ತು…
ಆಳ್ವಾಸ್ನ ವರ್ಧಿತ ಜಲಜನಕ ಇಂಧನ ಕೋಶ’ ಕ್ಕೆ ಪೇಟೆಂಟ್ ಅನುಮೋದನೆ ಸುಸ್ಥಿರ ಭವಿಷ್ಯಕ್ಕಾಗಿ ಕ್ರಾಂತಿಕಾರಿ ಇಂಧನ: ಆಳ್ವಾಸ್ಎಂ ಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಿಂದ‘ವರ್ಧಿತ ಜಲಜನಕ ಇಂಧನ ಕೋಶ’
ಮೂಡುಬಿದಿರೆ: ‘ವರ್ಧಿತ ಜಲಜನಕ ಇಂಧನ ಕೋಶ’ (ಹೈಡ್ರೋಜನ್ ಫ್ಯುಯೆಲ್ ಸೆಲ್- ಎಚ್ಎಫ್ಸಿ) ತಂತ್ರಜ್ಞಾನಕ್ಕಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೊದಲ ಪೇಟೆಂಟ್ ಪಡೆದಿದ್ದು, ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಾರಥ್ಯದಲ್ಲಿ ಪ್ರಾಧ್ಯಾಪಕ ಡಾ.ರಿಚರ್ಡ್ ಪಿಂಟೊ ನೇತೃತ್ವದಲ್ಲಿ ಆವಿಷ್ಕಾರವು ಸಾಕಾರಗೊಂಡಿದೆ. ಪ್ರಾಧ್ಯಾಪಕ ರಿಚರ್ಡ್ ಪಿಂಟೊ ನೇತೃತ್ವದಲ್ಲಿ ಸಹೋದ್ಯೋಗಿ ಪ್ರಾಧ್ಯಾಪಕರಾದ ಪ್ರೀತಮ್ ಕ್ಯಾಸ್ಟೆಲಿನೊ, ಜಯರಾಮ ಅರಸಳಿಕೆ, ಸತ್ಯನಾರಾಯಣ ಮತ್ತು ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಾದ ಸೋಹನ್ ಪೂಜಾರಿ, ಸನ್ನಿ ರಾಮ್ನಿವಾಸ್ ಶರ್ಮಾ, ಪ್ರಶಾಂತ್ ಶೇಖರ್ ಪೂಜಾರಿ ಮತ್ತು ಚಿರಾಗ್ ಸತೀಶ್ ಪೂಜಾರಿ ಈ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿದ್ದಾರೆ. ಈ ಪೇಟೆಂಟ್ (ಪೇಟೆಂಟ್ ಸಂಖ್ಯೆ -201941035383) ನಾವಿನ್ಯ ಆವಿಷ್ಕಾರವಾಗಿದ್ದು, ‘ಆಲ್ಟ್ರಾ ವಯಲೆಟ್ ಕಿರಣಗಳಿಗೆ ಅತ್ಯುತ್ತಮವಾಗಿ ತೆರೆದುಕೊಂಡ ನೆಫಿಯಾನ್ ಎಂಬ ಪೊರೆಯ ವರ್ಧಿತ ಕಾರ್ಯಕ್ಷಮತೆ ನೀಡುವ ಜಲಜನಕ ಇಂಧನ ಕೋಶ’ ವಾಗಿದೆ. (ಹೈಡ್ರೋಜನ್ ಫ್ಯುಯೆಲ್ ಸೆಲ್ಸ್ ಹ್ಯಾವಿಂಗ್ ಎನ್ಹ್ಯಾನ್ಸ್ಡ್ ಫರ್ಮಾರೆನ್ಸ್ ವಿದ್ ನಫೀಯಾನ್ ಪ್ರೊಟಾನ್ ಎಕ್ಸ್ಚೇಂಜ್ ಮೆಂಬ್ರೇನ್ ಆಪ್ಟಿಮಲ್ ಎಕ್ಸ್ಪೋಸ್ಡ್ ಟು ಆಲ್ಟ್ರಾವಯಲೆಟ್ ರೇಸ್). ಆಳ್ವಾಸ್ ಎಂಜಿನಿಯರಿಂಗ್ ಮತ್ತು…
ಮಕ್ಕಳಿಗೆ ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯೂ ಅಗತ್ಯ. ಸಮಾಜದ ಅನೇಕ ಮಂದಿ ಜಗತ್ತಿನಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಸ್ತ್ರೀ – ಪುರುಷರೆಂಬ ಬೇಧವಿಲ್ಲದೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಸಾಧನೆ ಇತರರಿಗೆ ಮಾದರಿಯಾಗಬೇಕು ಎಂದು ಉದ್ಯಮಿ, ಮೂಡಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ ಹೇಳಿದರು. ಅವರು ಬಂಟರ ಸಂಘ ವಾಮದಪದವು ವಲಯ ವತಿಯಿಂದ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ ನೇತೃತ್ವದಲ್ಲಿ ಆಲದಪದವು ನಿವೇಶನದಲ್ಲಿ ಆಯೋಜಿಸಿದ್ದ ಪುರುಷರ ಮತ್ತು ಮಹಿಳೆಯರ ತಾಲೂಕು ಮಟ್ಟದ ಹಗ್ಗಜಗ್ಗಾಟ ಮತ್ತು ವಲಯ ಮಟ್ಟದ ಆಟೋಟ ಸ್ವರ್ಧೆ ಬಂಟ ಕ್ರೀಡೋತ್ಸವವನ್ನು ಉದ್ಘಾಟಿಸಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಾಮದಪದವು ವಲಯ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಅಮ್ಮು ರೈ ಹರ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ನಗರಸಭೆ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಇರಾ ವಲಯ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ರೈ ಬಾಲಾಜಿಬೈಲು ಶುಭ ಹಾರೈಸಿದರು. ಮಂಗಳೂರು ಬಂಟರ…