Author: admin
ಪೊವಾಯಿ ಕನ್ನಡ ಸೇವಾ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಆರ್ ಜಿ ಶೆಟ್ಟಿಯವರು ಮೂಲತಃ ಉಡುಪಿ ಜಿಲ್ಲೆಯ ಕಳತ್ತೂರು ಕೋರಂಟ್ ಗುತ್ತು ದಿ. ಗೋಪಾಲ ಎನ್ ಶೆಟ್ಟಿ ಹಾಗೂ ಕುತ್ಯಾರು ಪಣಿಮಾರು ಗುತ್ತು ದಿ. ದೇವಕಿ ಶೆಟ್ಟಿ ದಂಪತಿಗಳ ಸುಪುತ್ರರು. ಇವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಎಳ್ಳೂರು ಕಸಬಾ ಇರಂದಾಡಿಯಲ್ಲಿ ಮುಗಿಸಿ ಪದವಿ ಶಿಕ್ಷಣವನ್ನು ಸಂತ ಮೇರಿ ಕಾಲೇಜು ಶಿರ್ವದಲ್ಲಿ ಮುಗಿಸಿದರು. ಕಾನೂನು ಪದವಿಯನ್ನು ಜೆ.ಸಿ ಲಾ ಕಾಲೇಜು ವಿಲೇಪಾರ್ಲೆ ಇಲ್ಲಿ ಪೂರೈಸಿದರು. ಕಾಲೇಜು ಜೀವನದಲ್ಲೇ ತನ್ನಲ್ಲಿರುವ ಪ್ರತಿಭೆಯನ್ನು ತೋರ್ಪಡಿಸಿದ ಇವರು ಸಂತ ಮೇರಿ ಹೈಸ್ಕೂಲ್ ಎನ್.ಎಸ್.ಎಸ್ ಗ್ರೂಫ್ ನಾಯಕರಾಗಿ, ಜೆ.ಸಿ ಲಾ ಕಾಲೇಜು ವಿಲೇಪಾರ್ಲೆ ಮುಂಬಯಿ ಇಲ್ಲಿ ಕ್ರೀಡಾ ಕಾರ್ಯದರ್ಶಿಯಾಗಿ ಅಂದೇರಿ ಕೋರ್ಟು ನ್ಯಾಯವಾದಿ ಬಾರ್ ಅಸೋಸಿಯೇಶನ್ ನ 2 ವರ್ಷ ಜತೆ ಕಾರ್ಯದರ್ಶಿಯಾಗಿ, 2 ವರ್ಷ ಪ್ರದಾನ ಕಾರ್ಯದರ್ಶಿಯಾಗಿ, 5 ವರ್ಷ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದ ಅನುಭವವನ್ನು ಹೊಂದಿದ್ದಾರೆ. ಕನ್ನಡ ಸೇವಾ ಸಂಘ ಪೊವಾಯಿ ಯ ಉಪಾಧ್ಯಕ್ಷರಾಗಿ ಸ್ಮರಣ…
ಹೊಟೇಲ್ ಆದರಾತಿಥ್ಯ ಕ್ಷೇತ್ರದಲ್ಲಿ ಅದ್ಭುತ ಯಶಸ್ಸು ಕಂಡ ಹಣಕಾಸು ಕ್ಷೇತ್ರದ ತಜ್ಞ ಶ್ರೀ ಪ್ರಭಾಕರ್ ವಿ ಶೆಟ್ಟಿ
ಉನ್ನತ ಶಿಕ್ಷಣ ಪಡೆದ ಯುವಕನೊಬ್ಬ ಅಕೌಂಟೆನ್ಸಿ ಆಂಡ್ ಫೈನಾನ್ಸ್ ಕ್ಷೇತ್ರದಲ್ಲಿ ಅಪರಿಮಿತ ಜ್ಞಾನ ಸಂಪಾದಿಸಿ ವಿದೇಶದ ನೆಲದಲ್ಲಿ ಉನ್ನತ ಹುದ್ದೆಯನ್ನಲಂಕರಿಸಿ ಅನೇಕ ವರ್ಷಗಳ ಬಳಿಕ ಸ್ವದೇಶಕ್ಕೆ ಹಿಂದಿರುಗಿ ಇಲ್ಲಿನ ಮಹಾರಾಷ್ಟ್ರದ ಪುಣೆಯಲ್ಲಿ ಹೋಟೇಲ್ ಅತಿಥಿ ಸತ್ಕಾರ ಗೃಹ ಉದ್ದಿಮೆ ನಡೆಸಿ ಈ ಕ್ಷೇತ್ರದಲ್ಲೂ ಗುರಿ ಮೀರಿದ ಸಾಧನೆಯಿಂದ ಪ್ರಸಿದ್ಧಿ ಯಶಸ್ಸು ಗಳಿಸಿದ ವ್ಯಕ್ತಿಯೋರ್ವರ ಸಾಧನೆಯ ಗಾಥೆ ಇಲ್ಲಿದೆ. ಇತಿಹಾಸ ಪ್ರಸಿದ್ಧ ಕಾರ್ಕಳದ ಕೌಡೂರು ಗ್ರಾಮದಲ್ಲಿ ಹುಟ್ಟಿದ ಪ್ರಭಾಕರ ಶೆಟ್ಟರ ತಂದೆ ಕೊರಂಗ್ರಪಾಡಿ ದೊಡ್ಡಮನೆ ವಿಠಲ ಶೆಟ್ಟಿ ಹಾಗೂ ತಾಯಿ ವನಂದೆಗುತ್ತು ಪುಷ್ಪಾವತಿ ಶೆಟ್ಟಿ. ಮುಂಬಯಿ ವಿಶ್ವವಿದ್ಯಾಲಯದಿಂದ ಎಂ.ಕಾಂ. ವಾಣಿಜ್ಯ ಸ್ನಾತಕೋತ್ತರ ಪದವಿ ಗಳಿಸಿದ ಬಳಿಕ ಯುನೈಟೆಡ್ ಕಿಂಗ್ಡಮ್ ನ ಶಿಕ್ಷಣ ಸಂಸ್ಥೆಯ ಮೂಲಕ ಮ್ಯಾನೇಜ್ ಮೆಂಟ್ ಪ್ರಾಧಾನ್ಯದ ಚಾರ್ಟರ್ಡ್ ಅಕೌಂಟೆಂಟ್ ಪದವಿ ಸಂಪಾದಿಸಿದ ಬಳಿಕ ದೋಹಾ ಕತಾರ್ ಮೂಲದ ಪ್ರತಿಷ್ಠಿತ ಫೈನಾನ್ಸ್ ಆಂಡ್ ಅಕೌಂಟ್ಸ್ ಸಂಬಂಧಿತ ಸಂಸ್ಥೆಯೊಂದರಲ್ಲಿ ಅಧಿಕಾರಿಯಾಗಿ ಸುಮಾರು ಒಂದು ದಶಕ ಕಾಲ ಸೇವೆ ಸಲ್ಲಿಸಿದ ಬಳಿಕ ಪುಣೆಗೆ ಬಂದು…
ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ, ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದಲ್ಲಿ ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಧನೇಶ್ ಅವರು ವಾಮದಪದವು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ, ಬಂಟ್ವಾಳ ಎಸ್ವಿಎಸ್ ಪ.ಪೂ.ಕಾಲೇಜಿನಲ್ಲಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ ಪಡೆದು ಮೂಡುಬಿದಿರೆ ಮಹಾವೀರ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಹಾಗೂ ಬೆಂಗಳೂರುನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಶಾಲಾ, ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಸಕ್ತಿ ಬೆಳೆಸಿಕೊಂಡು ಆಡುತ್ತಿದ್ದು, ಉತ್ತಮ ಬ್ಯಾಟ್ಸ್ಮನ್ ಅಗಿರುವ ಅವರು ಇದೀಗ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಸರಕಾರದ ಮಾನ್ಯತೆ ಪಡೆದಿರುವ ಸ್ವರ್ದಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ಭಾಗ್ಯೆಶ್ ರೈ ಸಾರಥ್ಯದ ವಿದ್ಯಾಮಾತಾ ಅಕಾಡೆಮಿ ಇದರ ಚೊಚ್ಚಲ ಶಾಖೆ ಸೆ. 28 ರಂದು ಸುಳ್ಯ ರಥಬೀದಿಯಲ್ಲಿನ ಟಿ.ಎ.ಪಿ.ಸಿ.ಎಂ.ಎಸ್. ಸಂಕೀರ್ಣದಲ್ಲಿ ಶುಭಾರಂಭಗೊಳ್ಳಲ್ಲಿದೆ. ವಿದ್ಯಾಮಾತಾ ಇದರ ಮಾತೃ ಸಂಸ್ಥೆ ವಿದ್ಯಾಮಾತ ಫೌಂಡೇಶನ್ ಈಗಾಗಲೇ 3 ರಾಜ್ಯಮಟ್ಟದ ಉದ್ಯೋಗ ಮೇಳ, ಸುಮಾರು 500 ಕ್ಕೂ ಹೆಚ್ಚು ನೇರ ಉದ್ಯೋಗ ಸಂದರ್ಶನಗಳ ಮೂಲಕ 5000 ಕ್ಕೂ ಮಿಕ್ಕಿದ್ದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವಲ್ಲಿ ಸಫಲತೆ ಕಂಡಿದೆ. ಕರಾವಳಿಯಲ್ಲಿ ಸ್ವರ್ದಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮತ್ತು ತರಬೇತಿ ನೀಡಿ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಇಲಾಖೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲೂ ಸಂಸ್ಥೆಯ ಶ್ರಮದ ಜೊತೆಗೆ ವಿದ್ಯಾರ್ಥಿಗಳ ಪ್ರಯತ್ನ ಸಾಕಾಷ್ಟಿದೆ. ಅಕಾಡೆಮಿಯ ವೈಶಿಷ್ಟತೆಗಳು : 20 ಕ್ಕೂ ಹೆಚ್ಚು ವಿವಿಧ ಸ್ವರ್ದಾತ್ಮಕ ಪರೀಕ್ಷೆಗಳಿಗೆ 6 ತಿಂಗಳ ಅವಧಿಯಲ್ಲಿ ಏಕಕಾಲದಲ್ಲಿ ತರಬೇತಿ ಪಡೆಯುವ…
ಪ್ರಕೃತಿಯನ್ನು ಮಾತೆಯನ್ನಾಗಿ ಆರಾಧಿಸುತ್ತಾ ಬಂದಿರುವ ಪರಂಪರೆ ನಮ್ಮದು. ಪ್ರಕೃತಿಯಲ್ಲೇ ಹುಟ್ಟಿ ಪ್ರಕೃತಿಯಲ್ಲೇ ಲೀನವಾಗುವ ಎಂಬತ್ತ ನಾಲ್ಕು ಲಕ್ಷ ಜೀವರಾಶಿಯ ಬಾಳು ಅವ್ಯಕ್ತವಾದುದು. ಪಂಚಭೂತಗಳಿಂದ ಆವೃತವಾಗಿರುವ ಪ್ರಕೃತಿಯ ಹಂಗು-ಋಣದಲ್ಲಿ ಮತ್ತು ಪ್ರಕೃತಿ ಮಾತೆಗೆ ಕೃತಜ್ಞರಾಗಿರಬೇಕಾಗಿರುವುದು ಇಲ್ಲಿನ ಜೀವಿಗಳ ಪರಮ ಕರ್ತವ್ಯ. ನಿಸರ್ಗದ ಎಲ್ಲಾ ಜೀವಿಗಳಲ್ಲಿ ತನ್ನ ಬುದ್ಧಿಮತ್ತೆ, ವಿವೇಚನೆಯಿಂದ ಉಳಿದ ಜೀವಿಗಳಿಗಿಂತ ವಿಶಿಷ್ಟ ಮತ್ತು ಭಿನ್ನನಾಗಿರುವ ಮಾನವನ ಪ್ರಕೃತಿಯೊಂದಿಗಿನ ಒಡನಾಟ ಪ್ರಸ್ತುತ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬುದನ್ನು ಪ್ರಶ್ನಿಸುವ ಹಂತಕ್ಕೆ ಬಂದು ನಾವಿಂದು ನಿಂತಿದ್ದೇವೆ. ಪ್ರಕೃತಿಯ ವೈಚಿತ್ರ್ಯ, ಕೊಡುಗೆ ವರ್ಣನೆಗೆ ಸಿಗುವಂತಹುದಲ್ಲ, ಉಪಮೆಗೂ ನಿಲುಕುವಂತಹುದಲ್ಲ. ಪ್ರಕೃತಿ ಏನು ತಾನೇ ಕೊಟ್ಟಿಲ್ಲ. ವಾಸಿಸಲು ನಿರ್ಮಲ ಭೂಮಿ, ಉಸಿರಾಡಲು ಪರಿಶುದ್ಧ ಗಾಳಿ, ಕುಡಿಯಲು ಶುದ್ಧ ನೀರು, ನಿಸರ್ಗದತ್ತ ಆಹಾರ ವೆೃವಿಧ್ಯ… ಹೀಗೆ ನಾವೆಲ್ಲರೂ ಸಮಗ್ರವಾಗಿ ಬದುಕಲು ಪೂರಕ, ಪ್ರೇರಕವಾದ ಸುಂದರ ವ್ಯವಸ್ಥೆಯನ್ನು ಈ ಪ್ರಕೃತಿ ರೂಪಿಸಿಕೊಟ್ಟಿದೆ. ಇಂಥ ಪ್ರಕೃತಿ ನಮಗೆಲ್ಲರಿಗೂ ಮಾತೃ ಸಮಾನ. ಹಾಗೆಂದು ನಾವು ನಮ್ಮ ನಿಸರ್ಗವನ್ನು ಹಬ್ಬಹರಿದಿನಗಳ ಆಚರಣೆ ಸಂದರ್ಭದಲ್ಲೋ ಪೂಜಿಸುತ್ತೇವೆ ಮತ್ತು…
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಮಾಚ್೯ 7 ರಂದು ಸೋಮವಾರ ಮಧ್ಯಾಹ್ನ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಲಿದೆ. ಈ ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ವಹಿಸಲಿದ್ದಾರೆ. ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಚೆಕ್ ಗಳನ್ನು ವಿತರಿಸಲಾಗುವುದು. ಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತರಾದ ಎನ್. ಶಶಿ ಕುಮಾರ್, ಗೌರವಾನ್ವಿತ ಅತಿಥಿಯಾಗಿ ಮುಂಬಯಿ ವಿ.ಕೆ.ಗ್ರೂಪ್ ನ ಚೆಯರ್ ಮೆನ್ ಕೆ.ಎಂ. ಶೆಟ್ಟಿ ಮಧ್ಯಗುತ್ತು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ, ರಾಷ್ಟ್ರಪತಿಗಳ ಸೇವಾ ಪದಕ ಪುರಸ್ಕೃತ ವಿಜಯ ಕಾಂಚನ್ ಬೈಕಂಪಾಡಿ, ಸಂಸ್ಕಾರ ಭಾರತಿ ಮಂಗಳೂರು ಇದರ ಅಧ್ಯಕ್ಷ ಕೆ ಪುರುಷೋತ್ತಮ ಭಂಡಾರಿ ಅಡ್ಯಾರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್…
ತುಳುನಾಡಿನ ಧಾರ್ಮಿಕ ಆಚರಣೆಗಳ ಐತಿಹಾಸಿಕ ಹಿನ್ನೆಲೆಯಿರುವ ಶಿರ್ವ ನಡಿಬೆಟ್ಟು ಚಾವಡಿ ಮನೆಯು ಸುಮಾರು 500-600 ವರ್ಷಗಳ ಇತಿಹಾಸವನ್ನು ಹೊಂದಿದೆ. ಚಾವಡಿಯ ಮರದ ಕಂಬಗಳಲ್ಲಿ ಮತ್ತು ಮೇಲ್ಛಾವಣಿಯಲ್ಲಿ ಕಲಾತ್ಮಕ ಶೈಲಿಯ ಕೆತ್ತನೆಯ ಕುಸುರಿಗಳನ್ನು ಹೊಂದಿದೆ. ಕರ್ನಾಟಕ ರಾಜ್ಯದ ಲಾಂಛನ ಗಂಡಬೇರುಂಡ ಶತಮಾನಗಳ ಹಿಂದೆಯೇ ಚಾವಡಿಯ ಕಂಬದಲ್ಲಿ ಕೆತ್ತಲ್ಪಟ್ಟಿದ್ದು, ತುಳುನಾಡಿನ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಗತ ವೈಭವವನ್ನು ಸಾರುತ್ತಿದೆ. ಮನೆಯ ಚಾವಡಿ ಹತ್ತಲು 9 ಮೆಟ್ಟಿಲುಗಳಿದ್ದು, ಮೊದಲ ಮೆಟ್ಟಿಲು ಹಾಸುಗಲ್ಲು ಆಗಿದೆ. ಪಾಪನಾಶಿನಿ ನದಿಯ ನೆರೆ ನೀರು ಚಾವಡಿಯ ಮೊದಲ ಮೆಟ್ಟಿಲು ಹಾಸುಗಲ್ಲು ಸ್ಪರ್ಶಿಸಿದ ಕೂಡಲೇ ಮನೆಯ ಮುತ್ತೈದೆ ಗಂಗಾ ಮಾತೆಗೆ ಬಾಗಿನ ಸಮರ್ಪಿಸುವುದು ಮನೆತನದ ಸಂಪ್ರದಾಯ. ಮೆಟ್ಟಿಲಿನ ಇಕ್ಕೆಲದಲ್ಲಿ ನ್ಯಾಯ ತೀರ್ಮಾನದ ಕಟ್ಟೆ ಇದ್ದು, ಚಾವಡಿಯಲ್ಲಿ ಪಟ್ಟದ ಮಂಚವಿದೆ. ಇದು ಯಜಮಾನರ ಆಳ್ವಿಕೆಯ ಆಸ್ಮಿತೆಯ ಕುರುಹಾಗಿದೆ. ಮನೆಯ ಇತಿಹಾಸದ ಬಗ್ಗೆ ಇತಿಹಾಸ ತಜ್ಞ ದಿ. ಡಾ|ಪಾದೂರು ಗುರುರಾಜ ಭಟ್ ತನ್ನ ತುಳುನಾಡಿನ ಇತಿಹಾಸ ಪುಸ್ತಕದಲ್ಲಿ ಉಲ್ಲೇಖೀಸಿದ್ದಾರೆ. ಜೀರ್ಣಾವಸ್ಥೆಯಲ್ಲಿದ್ದ ಮನೆಯು 2003ರಲ್ಲಿ ಶಿರ್ವ ನಡಿಬೆಟ್ಟು…
ಭಾರತದ ರಾಯಭಾರ ಕಚೇರಿಯ ಅಡಿಯಲ್ಲಿ ಇಂಡಿಯನ್ ಕಲ್ಚರಲ್ ಸೆಂಟರ್ ಸಹವರ್ತಿ ಸಂಘಗಳಲ್ಲಿ ಒಂದಾದ ಬಂಟ್ಸ್ ಕತಾರ್ ತನ್ನ ಸದಸ್ಯರಿಗೆ ವೇದಿಕೆಯನ್ನು ಒದಗಿಸುವ ಮತ್ತು ಉತ್ತೇಜಿಸುವ ಮತ್ತು ರವಾನಿಸುವ ಮುಖ್ಯ ಉದ್ದೇಶದೊಂದಿಗೆ 2011ರಲ್ಲಿ ಸ್ಥಾಪನೆಯಾದಾಗಿನಿಂದ ಯುವ ಪೀಳಿಗೆಗೆ ಸ್ಥಳೀಯ ಸಂಸ್ಕೃತಿ, ವಿವಿಧ ಸಾಮಾಜಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಬಂಟ್ಸ್ ಕತಾರ್ 13ನೇ ಅಕ್ಟೋಬರ್ 2023 ರಂದು ವಾರ್ಷಿಕ ಸಾಮಾನ್ಯ ಸಭೆಯಲ್ಲಿ 2023-25 ನೇ ಸಾಲಿನ ಹೊಸ ಆಡಳಿತ ಸಮಿತಿಯನ್ನು ಆಯ್ಕೆ ಮಾಡಿದರು ಮತ್ತು ಅದರ ನೂತನ ಅಧ್ಯಕ್ಷರಾಗಿ ಶ್ರೀ ನವೀನ್ ಶೆಟ್ಟಿ ಇರುವೈಲ್ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದರು. ಶ್ರೀ ನವೀನ್ ಶೆಟ್ಟಿಯವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ಸಮೀಪದ ಇರುವೈಲ್ ಮೂಲದವರು. ಅವರು ಕತಾರ್ ಮತ್ತು ಬಹರೈನ್ ನಲ್ಲಿ ವಿವಿಧ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶ್ರೀ ನವೀನ್ ಅವರು ಸಮೃದ್ಧ ಭಾಷಣಕಾರರು ಮತ್ತು ದಕ್ಷ ನಿರೂಪಕರಾಗಿದ್ದಾರೆ. ಕತಾರ್ ಮತ್ತು ಬಹರೈನ್ ನ ವಿವಿಧ ಸಂಘಗಳ ವೇದಿಕೆಗಳಲ್ಲಿ ನಾಟಕ…
ಚಂದ್ರನ ಅಂಗಳ ನೋಡಿದ್ದಾಯ್ತು. ಈಗ ಸೂರ್ಯನತ್ತ ಇಸ್ರೋ ಕಣ್ಣುನೆಟ್ಟಿದೆ! ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ನೆಲೆ ನಿಂತಿದೆ. ಈಗಾಗಲೇ ಅದು ತನ್ನ ಕಾರ್ಯಾಚರಣೆಯನ್ನೂ ಶುರುಮಾಡಿದೆ. ಈ ಸಾಧನೆಯು ಈಗ ಭಾರತದ ನಿರೀಕ್ಷೆಗಳನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಿದೆ. ಇದಾದ ನಂತರ ಭಾರತದ ಮೊದಲ ಸೋಲಾರ್ ಮಿಷನ್ ‘ಆದಿತ್ಯ ಎಲ್ 1’ ಅನ್ನು ಇಸ್ರೋ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ಈ ಮೂಲಕ ಸೂರ್ಯನ ಸಂಶೋಧನೆಗೆ ಮುಂದಾಗುತ್ತಿದೆ. ಸೂರ್ಯನ ಮೇಲೆ ಮಾತ್ರವಲ್ಲ; ಶುಕ್ರ, ಮತ್ತೂಮ್ಮೆ ಮಂಗಳ, ಗಗನಯಾತ್ರಿಗಳೊಂದಿಗೆ ಬಾಹ್ಯಾಕಾಶಕ್ಕೆ ಪಯಣ ಬೆಳೆಸುವುದು ಹೀಗೆ ಹಲವು ಯೋಜನೆಗಳನ್ನು ಮುಂದೊಂದು ದಶಕದಲ್ಲಿ ಕಾರ್ಯರೂಪಕ್ಕೆ ತರುವ ಗುರಿಯನ್ನು ಭಾರತದ ವಿಜ್ಞಾನಿಗಳು ಹೊಂದಿದ್ದಾರೆ. ಇದಕ್ಕಾಗಿ ಸಿದ್ಧತೆಗಳು ಈಗಿನಿಂದಲೇ ನಡೆದಿದೆ. ಚಂದ್ರನ ಮೇಲೆ ಬೀಡುಬಿಟ್ಟ ‘ವಿಕ್ರಂ’ ಮತ್ತು ‘ಪ್ರಗ್ಯಾನ್’ ನೀಡುವ ಮಾಹಿತಿಗಳನ್ನು ಕಲೆಹಾಕಿ, ಅವುಗಳ ವಿಶ್ಲೇಷಣೆ ಮಾಡಬೇಕಿದೆ. ಅಗತ್ಯಬಿದ್ದರೆ ಚಂದ್ರಯಾನ-4 ಕೈಗೆತ್ತಿಕೊಳ್ಳಬೇಕಾಗುತ್ತದೆ. ಇದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮೇಲೆ ಜವಾಬ್ದಾರಿಗಳನ್ನೂ ಹೆಚ್ಚಿಸಿದೆ. ಅದನ್ನು ಇಷ್ಟೇ ಚಾಕಚಕ್ಯತೆಯಿಂದ ನಿಭಾಯಿಸುವ ಹೊಣೆ ವಿಜ್ಞಾನಿಗಳ…
ಯುವ ಬಂಟರ ಸಂಘ ಗ್ರಾಮ ಸಮಿತಿ ದರೆಗುಡ್ಡೆ ಇದರ 12ನೇ ಮಾಸಿಕ ಸಭೆಯು ದರೆಗುಡ್ಡೆ ಮಿತ್ತ ಬೆಟ್ಟು ಪ್ರೇಮ ಶೆಟ್ಟಿ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಬಂಟರ ಸಂಘ ಮೂಡುಬಿದರೆ ಇದರ ಅಧ್ಯಕ್ಷರಾದ ಜಯಕುಮಾರ್ ಶೆಟ್ಟಿ, ಯುವ ಬಂಟರ ಸಂಘ ಗ್ರಾಮ ಸಮಿತಿ ದರೆಗುಡ್ಡೆ ಇದರ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ಶೆಟ್ಟಿ, ಶೃತಿ ಶೆಟ್ಟಿ, ಸುಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ, ರಾಜೇಶ್ ಶೆಟ್ಟಿ, ರಘುನಾಥ್ ಶೆಟ್ಟಿ, ಮೋಹನ್ ಶೆಟ್ಟಿ, ಪ್ರತಿಕ್ಷ ಶೆಟ್ಟಿ, ಶ್ರೀಯಾ ಶೆಟ್ಟಿ, ದೀಕ್ಷಾ ಶೆಟ್ಟಿ, ಸುನಿಲ್ ಶೆಟ್ಟಿ, ಪ್ರಭಾಕರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.