Author: admin

ಐತಿಹಾಸಿಕ, ಜಗತ್ಪ್ರಸಿದ್ದಿ ಶ್ರವಣಬೆಳಗೊಳದ ವಿಂಧ್ಯಗಿರಿ ತಾಣ ಅಪಾಯದ ಅಂಚಿನ ಮರೀಚಿಕೆ….! ಕಣ್ಣಿದ್ದು ಕುರುಡಾದ ಪುರಾತತ್ವ ಇಲಾಖೆ…!  ಸಹಸ್ರಾರು ವರ್ಷಗಳ ಹಿಂದಿನ ದಂತಕಥೆ ನೆಲಸಮದ ಭೀತಿಯಲ್ಲಿ…..! ಬಾಹುಬಲಿ ನೆಲೆಸಿರುವ ಬೆಟ್ಟದಿಂದ ಜಾರಿದೆ ಬೃಹದಾಕಾರದ ಕಲ್ಲುಗಳು, ಪುರಾತತ್ವ ಇಲಾಖೆ, ಅಧಿಕಾರಿಗಳು ಮೌನ….!? – ಕೆ. ಸಂತೋಷ ಶೆಟ್ಟಿ, ಮೊಳಹಳ್ಳಿ ಕುಂದಾಪುರ, ಉಡುಪಿ ಜಿಲ್ಲೆ (ಪತ್ರಕರ್ತರು ಮಾಧ್ಯಮ ವಿಶ್ಲೇಷಕರು) ಐತಿಹಾಸಿಕ ಪುರಾಣ ಪ್ರಸಿದ್ಧ ವಿಂಧ್ಯಗಿರಿ ಬೆಟ್ಟ ಕುಸಿಯುವ ಭೀತಿಯಲ್ಲಿದೆ. ಸಾವಿರ ಸಾವಿರ ಭಕ್ತರು ದಿನನಿತ್ಯ ವಿಂಧ್ಯಗಿರಿ ಬೆಟ್ಟಕ್ಕೆ ಭೇಟಿ ನೀಡಿ ಪ್ರವಾಸ ತಾಣದ ಅನುಭವ ಪಡೆದುಕೊಳ್ಳುತ್ತಾರೆ ಆದರೆ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ಜೀವಕ್ಕೆ ಕುತ್ತು ತರುವ ಭೀತಿ ಎದುರಾಗುತ್ತಿದೆ.ಅದು ವಿಶ್ವ ವಿಖ್ಯಾತ ತಾಣ.. ರಾಷ್ಟ್ರೀಯ ಸ್ಮಾರಕ ಎಂದು ಕೇಂದ್ರ ಸರ್ಕಾರದಿಂದ ಗುರ್ತಿಸಿಕೊಂಡಿರುವ, ಅಹಿಂಸಾ ಮೂರ್ತಿ ಬಾಹುಬಲಿ ಸ್ವಾಮಿ ನೆಲೆಸಿರೋ ಪುಣ್ಯ ಕ್ಷೇತ್ರ (shravanabelagola). ನಿತ್ಯ ಸಹಸ್ರಾರು ಭಕ್ತರು ಬಂದು ಇಲ್ಲಿನ ಬಾಹುಬಲಿ ಏಕ ಶಿಲಾ ವಿಗ್ರಹ ನೋಡಿ ಪುಳಕಿತರಾಗುತ್ತಾರೆ. ಇಂತಹ ಪುಣ್ಯ ಕ್ಷೇತ್ರವನ್ನ ಕೇಂದ್ರ ಪುರಾತತ್ವ…

Read More

ಮುಂಬಾಯಿ, ಜು.13:  ಕರ್ನಾಟಕ ಜಾನಪದ ಕಲೆಯನ್ನು ಉಳಿಸಿ ಬೆಳೆಸಿ ,  ಅದನ್ನು ಇಂದಿನಿಂದ ಮತ್ತು ಮುಂದಿನ ಜನಾಂಗಕ್ಕೆ ತಿಳಿಯ ಪಡಿಸಿ  ಬಾವೀ ಜನಾಂಗಕ್ಕೆ ಹಸ್ತಾಂತರಿಸುವ ̧ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ಕರ್ನಾಟಕ ಜಾನಪದ ಪರಿಷತ್ತು (ರಿ.)  ಬೆಂಗಳೂರು ಇದರ ಮಹಾರಾಷ್ಟ್ರ ಘಟಕವು ಇದೇ ಜು.೨೩ನೇ ಶನಿವಾರ ̧ಸಂಜೆ ೩.೦೦ ಗಂಟೆಯಿಂದ ಬಂಟರ  ಸಂಘ ಮುಂಬಾಯಿ ಇದರ ಅನೇಕ್ಸ್ ಕಟ್ಟಡದ ಎರಡನೇ ಮಹಡಿಯಲ್ಲಿನ ಶ್ರೀಮತಿ ರಂಜನಿ ಸುಧಾಕರ ಹೆಗ್ಡೆ ಸಮಾಜ ಕಲ್ಯಾಣ ಸಭಾ ಭವನದಲ್ಲಿ  ಕರ್ನಾಟಕ ಜಾನಪದ ಪರಿಷತ್ತು(ರಿ.) ಬೆಂಗಳೂರು ಮಹಾರಾಷ್ಟ್ರ ಘಟಕ ಇದರ ಅಧ್ಯಕ್ಷ ಡಾ| ಆರ್.ಕೆ ಶೆಟ್ಟಿಇವರ ಅಧ್ಯಕ್ಷತೆಯಲ್ಲಿ ಮುಂಬಾಯಿ ಮಹಾನಗರದಲ್ಲಿನ ಜನತೆಗೆ ‘ಜಾನಪದ  ಕಲೆಯ ಬೆಳವಣಿಗೆ,  ಉತ್ತರದಲ್ಲಿ-ದಕ್ಷಿಣದಲ್ಲಿ’  ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ಆಯೋಜಿಸಿದೆ. ಘಟಕದ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ  ಶ್ರೀನಿವಾಸ ಸಪಲ್ಯ ಇವರು  ‘ಜಾನಪದ ಕಲೆಯ ದಕ್ಷಿಣ ಕನ್ನಡದ ನಡಿಗೆ’ ಬಗ್ಗೆ ಮತ್ತು ಹಿರಿಯ  ಲೇಖಕಿ ಲಲಿತ ಅಂಗಡಿ ಇವರು ‘ಉತ್ತರ ಕನ್ನಡದಲ್ಲಿ  ಬೆಳೆಯುತ್ತಿರುವ ಜಾನಪದ ಕಲೆ’ ಬಗ್ಗೆ…

Read More

ಜೀರ್ಣೋದ್ದಾರಗೊಳ್ಳಲಿರುವ ಮೂಡಬಿದಿರೆಯ ಶಿರ್ತಾಡಿ ವಾಲ್ಪಾಡಿ ಗ್ರಾಮಗಳ ಅರ್ಜುನಾಪುರದ ಸುಮಾರು 1000 ವರ್ಷಗಳ ಪುರಾತನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಪುಣೆಯ ಉದ್ಯಮಿ, ಸಮಾಜಸೇವಕ ನಾರಾಯಣ ಕೆ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ನಾರಾಯಣ ಶೆಟ್ಟಿಯವರು ಪುಣೆಯಲ್ಲಿ ಸಮಾಜಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಓಡಿಯೂರು ಶ್ರೀಗಳ ಷಷ್ಟಬ್ದ ಸಂಭ್ರಮ ಪುಣೆ ಸಮಿತಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಶ್ರೀ ಗುರುದೇವಾ ಸೇವಾ ಬಳಗ ಪುಣೆ, ಪುಣೆ ಬಂಟ್ಸ್ ಅಸೋಸಿಯೇಷನ್ ಇದರ ಅಧ್ಯಕ್ಷರಾಗಿಯೂ ಪ್ರಸ್ತುತ ಹಲವಾರು ಸಂಘ ಸಂಸ್ಥೆಗಳಿಗೆ ಸಲಹೆಗಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಪುರಾತನ ಹಾಗೂ ಕಾರಣೀಕದ ಕ್ಷೇತ್ರವಾಗಿದೆ. ದ್ವಾಪರ ಯುಗದಲ್ಲಿ ಅರ್ಜುನನು ಈ ಸ್ಥಳದಲ್ಲಿ ತಪಸ್ಸು ಮಾಡಿದ್ದರಿಂದ ಇಲ್ಲಿಗೆ ಅರ್ಜುನಾಪುರ ಎಂಬ ಹೆಸರು ಬಂದಿದೆ ಎನ್ನುವ ಪ್ರತೀತಿಯಿದೆ.ಜೀರ್ಣಾವಸ್ಥೆಯಲ್ಲಿರುವ ದೇವಾಲಯದೊಳಗೆ ಲಿಂಗರೂಪಿಯಾದ ಶಿವನು ಭಕ್ತರ ಬೇಡಿಕೆಯನ್ನು ಈಡೇರಿಸಿಕೊಂಡು ಬರುತ್ತಿದ್ದು ಸುತ್ತಮುತ್ತಲಿನ ಊರಿನ ಗ್ರಾಮಸ್ಥರಿಗೆ ಈ ದೇವಾಲಯವೇ ಭಕ್ತಿಯ ಆರಾಧನಾ ಕೇಂದ್ರವಾಗಿದೆ. ಇದೀಗ ದೇವಸ್ಥಾನದ ಜೀರ್ಣೋದ್ದಾರಕ್ಕೆ ಊರ ಪರವೂರ ಮಹನೀಯರು ಸೇರಿಕೊಂಡು ಸಂಕಲ್ಪ…

Read More

ವಿದ್ಯಾಗಿರಿ: ‘ಬದುಕಿನ ಯಶಸ್ಸು ಪಂಚ ‘ವ’ ಕಾರಗಳಲ್ಲಿ ಅಡಗಿದೆ’ ಎಂದು ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹೊಸ ವಿದ್ಯಾರ್ಥಿಗಳ ಸ್ವಾಗತ ‘ಪರಿಚಯ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ವಪು (ದೇಹ), ವಸ್ತ್ರ, ವಿದ್ಯೆ, ವಿನಯ, ವಾಕ್ (ಮಾತುಗಾರಿಕೆ) ಎಂಬ ಐದು ವಕಾರಗಳು ಪಂಚಸೂತ್ರಗಳಾಗಿವೆ’ ಎಂದು ವಿವರಿಸಿದ ಅವರು, ‘ಪತ್ರಿಕೋದ್ಯಮ ವಿದ್ಯಾರ್ಥಿಗಳೂ ಪತ್ರಿಕಾ ಧವರ್ವನ್ನು ಪಾಲಿಸಬೇಕು. ಉತ್ತಮ ಪತ್ರಕರ್ತರಾಗಲು ಪ್ರಯತ್ನಿಸಬೇಕು’ ಎಂದರು. ‘ಪ್ರತಿ ವ್ಯಕ್ತಿಯ ಜೀವನದಲ್ಲಿ ತಾಯಿ, ತಾಯಿನಾಡು, ತಾಯಿಭಾಷೆ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಗುರು ಬಹುಮುಖ್ಯ. ಇವುಗಳ ಅರಿವು ಬದುಕಿನ ಉನ್ನತಿಗೆ ಕಾರಣವಾಗುತ್ತವೆ’ ಎಂದರು. ‘ಯಾವಾಗಲೂ ಆಂತರ್ಯದಲ್ಲಿ ವಿನಯವನ್ನು ಹೊಂದಿದ ವ್ಯಕ್ತಿಯೇ ಸಮಾಜದಲ್ಲಿ ಜಯಿಸುತ್ತಾನೆ. ಅಹಂ ಹೊಂದಿದ ವ್ಯಕ್ತಿಯು ವಿನಯವಂತಿಕೆಯನ್ನು ನಟಿಸಿದರೂ ಪ್ರಯೋಜನ ಆಗದು. ಅದು ಮನಸ್ಸಿನ ಅಂತರಾಳದಿಂದ ಬರಬೇಕು’ ಎಂದರು. ‘ಎಲ್ಲರನ್ನೂ ಪ್ರೀತಿ- ಸಮಾನತೆಯಿಂದ ಕಾಣುವ, ಗೌರವಿಸುವ ವ್ಯಕ್ತಿತ್ವ ರೂಢಿಸಿಕೊಳ್ಳಿ. ನಿಮ್ಮ ಕೆಲಸಕ್ಕಿಂತ ಹೆಚ್ಚಾಗಿ ನಿಮ್ಮ…

Read More

ಬಂಟ್ಸ್ ಫ್ಯಾಮಿಲಿ ಯು.ಎ.ಇ. ವತಿಯಿಂದ ವರ್ಷಂಪ್ರತಿ ನಡೆಸುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ನವಂಬರ್ 19 ರಂದು ದುಬಾಯಿಯಲ್ಲಿ ನಡೆಯಲಿದೆ. ನವಂಬರ್ 19 ರಂದು ದುಬಾಯಿಯ ಅಲ್ ಗಿಸಾಸ್ ನ ಇಂಡಿಯನ್ ಅಕಾಡೆಮಿಕ್ ಸ್ಕೂಲ್ ಸಭಾಂಗಣದಲ್ಲಿ ಬೆಳಿಗ್ಗೆ ಒಂಬತ್ತರಿಂದ ಮಧ್ಯಾಹ್ನ ಎರಡು ಗಂಟೆಯ ವರೆಗೆ ಹಲವಾರು ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಹಾಗೂ ಯು.ಎ.ಇ.ಯಲ್ಲಿ ಇರುವ ಎಲ್ಲರೂ ಈ ಪೂಜೆಗೆ ಬಂದು ಶ್ರೀ ಸತ್ಯನಾರಾಯಣ ದೇವರ ಕೃಪೆಗೆ ಪಾತ್ರರಾಗಬೇಕೆಂದು ಯು.ಎ.ಇ. ಬಂಟ್ಸ್ ನ‌ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.), ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 02-10-2023 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ “ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಯೋಜಿಸಲಾದ” ಜನಜಾಗೃತಿ ಜಾಥಾ ಮತ್ತು ಸಮಾವೇಶ – 2023″ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಸತ್ಯಾನಂದ ನಾಯಕ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್…

Read More

ಸೆಪ್ಟೆಂಬರ್ ತಿಂಗಳ 16ನೇ ತಾರೀಕು ಶನಿವಾರ ರಾತ್ರಿ 8:00 ಗಂಟೆಗೆ ಐಲೇಸಾ ದಿ ವಾಯ್ಸ್ ಆಫ್ ಒಷನ್ (ರಿ)ಡಿಜಿಟಲ್ ವೇದಿಕೆಯಲ್ಲಿ ‘ಗಂಟ್ ಕಲ್ವೆರ್’ ತುಳು ಚಲನಚಿತ್ರದ ಹಾಡು ಬಿಡುಗಡೆಯಾಗಲಿದೆ. ಜಾಗತಿಕ ತುಳು ಸಾಂಸ್ಕೃತಿಕ ರಾಯಭಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅಬುಧಾಬಿಯ ಸರ್ವೋತ್ತಮ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹಾಡನ್ನು ಬಿಡುಗಡೆಗೊಳಿಸಲಿದ್ದಾರೆ. ಚಿತ್ರದ ಪಾತ್ರವರ್ಗದ ನಾಯಕ ನಾಯಕಿ ಮತ್ತು ಹಾಸ್ಯ ನಟರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ವಿ ಮನೋಹರ್ ಅವರು ಸಂಗೀತ ನೀಡಿರುವ ಹಾಡನ್ನು ಐಲೇಸಾ ಸಂಸ್ಥೆಯ ಹೆಮ್ಮೆಯ ಹಾಡುಗಾರ ಸುಧಾಕರ್ ಶೆಟ್ಟಿಯವರು ಹಾಡಿದ್ದು ಚಿತ್ರವನ್ನು ಸುಧಾಕರ್ ಬನ್ನಂಜೆಯವರು ನಿರ್ದೇಶಿಸಿದ್ದಾರೆ. ಮಂಗಳೂರು, ಮೂಡಬಿದ್ರಿ ಮತ್ತು ಉಡುಪಿ ಪರಿಸರದಲ್ಲಿ ಚಿತ್ರೀಕರಣ ಮುಗಿಸಿರುವ ಹಾಸ್ಯಮಯ ಚಿತ್ರದಲ್ಲಿ ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಸುಂದರ್ ರೈ ಮಂದಾರ, ಉಮೇಶ್ ಮಿಜಾರ್, ಪ್ರದೀಪ್ ಆಳ್ವ ಕದ್ರಿ, ಪ್ರೇರಣಾ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ದಿಶಾ ಪುತ್ರನ್, ಸುಧೀರ್ ಕೊಟ್ಟಾರಿ ಇವರ ಭರ್ಜರಿ…

Read More

ಸ್ವಸ್ಥ ಸಮಾಜ ನಿರ್ಮಾಣದ ಪರಿಕಲ್ಪನೆ ಅವಶ್ಯ: ಆಳ್ವ ಮೂಡುಬಿದಿರೆ: ಮಾನವ ಬದುಕಿನುದ್ದಕ್ಕೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿμÁ್ಠನದ ಅಧ್ಯಕ್ಷ ಡಾ. ಎಂ .ಮೋಹನ ಆಳ್ವ ಹೇಳಿದರು ಮೂಡುಬಿದಿರೆಯ ಬಂಟರ ಸಂಘದ ಮಹಿಳಾ ಘಟಕದ ವತಿಯಿಂದ ಭಾನುವಾರ ಪಟ್ಟಣದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಎಲ್ಲ ಜಾತಿ ಸೇರಿದರೆ ಸಮಾಜ. ಮನುಷ್ಯ ದಾನ ಧರ್ಮದ ಮೂಲಕ ಸ್ವಸ್ಥ ಸಮಾಜ ನಿರ್ಮಿಸುವ ಪರಿಕಲ್ಪನೆ ಹೊಂದಿರಬೇಕು. ಬಡವ- ಶ್ರೀಮಂತ ಎನ್ನುವ ಅಂತರ ಕಡಿಮೆಗೊಳಿಸುವುದರತ್ತ ಪ್ರತಿಯೊಬ್ಬರೂ ಚಿತ್ತ ಹರಿಸಬೇಕು ಎಂದು ಸಲಹೆ ನೀಡಿದರು. ಇಂದು ಯುವ ಪೀಳಿಗೆ ಮೊಬೈಲ್ ಗೆ ಜೋತು ಬಿದ್ದು ಸಮಾಜಮುಖಿ ಜೀವನದಿಂದ ಪ್ರತ್ಯೇಕವಾಗಿದ್ದಾರೆ ಕೂಡುಕಟುಂಬದ ಮೂಲಕ ಸಂಸ್ಕಾರ ಪರಿಚಯಿಸಬೇಕಾಗಿದೆ. ಆಗ ಮಾತ್ರ ವ್ಯಕ್ತಿ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಉಪನ್ಯಾಸ ನೀಡಿ, ಬದಲಾದ ಕಾಲಘಟ್ಟದಲ್ಲಿ ಆಟಿಡೊಂಜಿ ದಿನ ಅನೇಕ ಬಗೆಯಲ್ಲಿ…

Read More

ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಶುಕ್ರವಾರ ಬೆಳಗ್ಗೆ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪ್ರೋತ್ಸಾಹ ನೀಡುತ್ತಿರುವುದು ಖುಷಿಯ ವಿಚಾರ ಎಂದರು. ತುಳು ಚಿತ್ರರಂಗಕ್ಕೆ ಕೆ.ಎನ್. ಟೇಲರ್ ಅವರಂತಹ ಹಿರಿಯರಿಂದ ಇಂದಿನ ಯುವ ಕಲಾವಿದರ ತನಕ ನೂರಾರು ಮಂದಿ ದುಡಿದಿದ್ದಾರೆ. ಅವರೆಲ್ಲರ ಶ್ರಮದಿಂದ ತುಳು ಸಿನಿಮಾಗಳು ತುಳುವರ ಪ್ರೀತಿಯನ್ನು ಗಳಿಸಿದೆ. ಸಿನಿಮಾವನ್ನು ನೋಡಿ ಬೆನ್ನುತಟ್ಟಿ ಪ್ರೋತ್ಸಾಹಿಸಿ” ಎಂದರು. ಬಳಿಕ ಮಾತಾಡಿದ ಭೋಜರಾಜ್ ವಾಮಂಜೂರು, “ಸರ್ಕಸ್ ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ಗಿರಿಗಿಟ್ ಬಳಿಕ ಮತ್ತೊಮ್ಮೆ ಅದೇ ತಂಡದ ಮೂಲಕ ನಾವೆಲ್ಲರೂ ಜೊತೆಯಾಗಿ ನಟಿಸಿದ್ದೇವೆ ಎಂದರು. ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಮಾತಾಡಿ, “ಸರ್ಕಸ್ ಚಿತ್ರ ತುಳುನಾಡಿನಲ್ಲಿ ಸಕ್ಸಸ್ ಆಗಲಿ. ಇನ್ನಷ್ಟು ತುಳು…

Read More

ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಭಾರತ ವಿಶ್ವದಲ್ಲಿಯೇ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿದ ರಾಷ್ಟ್ರವಾಗಿದೆ. ಈ ಮೂಲಕ ಭಾರತ ತನ್ನ ನೆರೆಯ ರಾಷ್ಟ್ರ ಚೀನವನ್ನು ಹಿಂದಿಕ್ಕಿದೆ. ಭೌಗೋಳಿಕ ವಿಸ್ತೀರ್ಣದಲ್ಲಿ ವಿಶ್ವದಲ್ಲಿ ಏಳನೇ ಸ್ಥಾನ ಹೊಂದಿರುವ ಭಾರತ ಈಗ 142.86 ಕೋಟಿ ಜನರನ್ನು ಹೊಂದುವ ಮೂಲಕ ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಒಟ್ಟಾರೆಯಾಗಿ ಅವಲೋಕಿ ಸಿದಾಗ ಭಾರತದ ಪಾಲಿಗೆ ಇದೊಂದು ಧನಾತ್ಮಕ ಬೆಳವಣಿಗೆಯಾಗಲಿ, ಹೆಮ್ಮೆಯ ವಿಷಯವೇನಲ್ಲ. ಹಾಗೆಂದು ಇದು ದೇಶದ ಪಾಲಿಗೆ ಬಲುದೊಡ್ಡ ಹೊರೆ ಎಂದು ಭಾವಿಸಿ ಆತಂಕ ಪಡುವ ಪರಿಸ್ಥಿತಿಯೇನೂ ಸೃಷ್ಟಿಯಾಗಿಲ್ಲ. ಕಾರಣ ದೇಶದ ಒಟ್ಟಾರೆ ಜನಸಂಖ್ಯೆಯನ್ನು ಪರಿಗಣಿಸಿದಾಗ 25.40ಕೋಟಿ ಜನರು 15-24 ವರ್ಷದೊಳಗಿನವರಾಗಿದ್ದಾರೆ. ಇದು ದೇಶದ ಪಾಲಿಗೆ ಆಶಾದಾಯಕ ಮತ್ತು ಇಷ್ಟೊಂದು ಬೃಹತ್‌ ಪ್ರಮಾಣದ ಯುವ ಸಮುದಾಯವನ್ನು ಹೊಂದಿರುವುದು ಹೆಮ್ಮೆಯ ಸಂಗತಿಯೇ. ಸದ್ಯ ಇಡೀ ವಿಶ್ವದ ಜನಸಂಖ್ಯೆಯಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದಲ್ಲಿ ಬಹುತೇಕ ದೇಶಗಳಲ್ಲಿ ಜನನ ಪ್ರಮಾಣ ಇಳಿಕೆಯಾಗುತ್ತಲೇ ಬಂದಿದೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವಿಚಾರದಲ್ಲಿ ಭಾರತವೂ…

Read More