Author: admin

ವಿಜ್ಞಾನ ವಿಭಾಗ : ಆಸ್ತಿ ಎಸ್ ರಾಜ್ಯಕ್ಕೆ 4ನೇ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ವಾಣಿಜ್ಯ ವಿಭಾಗ : ಸಹನಾ ಮತ್ತು ತನ್ವಿ ರಾಜ್ಯಕ್ಕೆ 6ನೇ ಹಾಗೂ ಜಿಲ್ಲೆಗೆ 2ನೇ ಸ್ಥಾನ ಜ್ಞಾನಸುಧಾದ 722 ವಿಶಿಷ್ಟ ಶ್ರೇಣಿ ಗಣಿತನಗರ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 29 ವಿದ್ಯಾರ್ಥಿಗಳು 10ರೊಳಗಿನ ರ್ಯಾಂಕ್ ಪಡೆದಿದ್ದು, ಕಾರ್ಕಳ ಜ್ಞಾನಸುಧಾದ ವಿಜ್ಞಾನ ವಿಭಾಗದ ಆಸ್ತಿ ಎಸ್ 596 ಅಂಕಗಳೊಂದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು, ಶ್ರೀ ರಕ್ಷಾ ಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಅಪೂರ್ವ್ ವಿ ಕುಮಾರ್ 595 ಅಂಕಗಳೊಂದಿಗೆ ರಾಜ್ಯಕ್ಕೆ ಐದನೇ ಸ್ಥಾನಿಯಾಗಿ ಹಾಗೂ ಜಿಲ್ಲೆಗೆ 2ನೇ ಸ್ಥಾನವನ್ನು ಪಡೆದಿರುತ್ತಾರೆ. ಕಾರ್ಕಳ ಜ್ಞಾನಸುಧಾದ ಮಯೂರ್ ಗೌಡ, ಭಾರ್ಗವ್ ಎಚ್ ನಾಯಕ್, ವಿಷ್ಣು ಜಿ…

Read More

ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ 10 ರ‍್ಯಾಂಕ್‌ಗಳಲ್ಲಿ ಸ್ಥಾನವನ್ನು ಪಡೆಯುವ ಮೂಲಕ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ. ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಬಿಂದು ನವಲೆ, ರಾಜ ಯದು ವಂಶಿ ಯಾದವ್ ಹಾಗೂ ವಿಜೇತ್ ಜಿ ಗೌಡ 598 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಕ್ಷಯ್ ಎಂ. ಹೆಗ್ಡೆ ಹಾಗೂ ಪ್ರೇಕ್ಷಾ ಎಂ. ಎಸ್. 597 ಅಂಕಗಳೊAದಿಗೆ ತೃತೀಯ ಸ್ಥಾನ, ಪದ್ಮಾವತಿ ಮಲ್ಲೇಶಪ್ಪ 596 ಅಂಕಗಳೊAದಿಗೆ 4ನೇ ಸ್ಥಾನ, ದರ್ಶನ್ ಶೆಟ್ಟಿ 595 ಅಂಕಗಳೊAದಿಗೆ 5ನೇ ಸ್ಥಾನ, ವೈಭವ್ ಎಂ, ಚೈತನ್ಯ, ಸ್ಪಂದನ 594 ಅಂಕಗಳೊAದಿಗೆ 6ನೇ ಸ್ಥಾನ, ವರ್ಷಾ 593 ಅಂಕಗಳೊAದಿಗೆ 7ನೇ ಸ್ಥಾನ, ನೇತ್ರಾ ಪಾಲ್, ಸೃಷ್ಟಿ, ಚಿನ್ಮಯಿ, ಪ್ರಣಾಮ್ ಶೆಟ್ಟಿ, ಸುಧಾಂಶು,…

Read More

ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಾ ಪ್ರತಿಫಲಾಪೇಕ್ಷೆ ಇಲ್ಲದೇ ಕನ್ಯಾನ ಸದಾಶಿವ ಶೆಟ್ಟರ ಸಮಾಜ ಸ್ಪಂದನೆಯ ಕಲ್ಯಾಣ ಕಾರ್ಯ ಅನುಕರನೀಯವಾಗಿದೆ. ಅವರಿಗೆ ಅರ್ಹವಾಗಿಯೇ ಮಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿರುವುದರಿಂದ ಅವರ ಸಾಮಾಜಿಕ ಚಟುವಟಿಕೆ ನಿರಂತರವಾಗಿ ನಡೆಯಲಿ. ಇಂತಹ ಮಾನವೀಯ ಸಂಬಂಧದ ವ್ಯಕ್ತಿತ್ವದವರು ಸಮಾಜದಲ್ಲಿ ಹೆಚ್ಚಬೇಕು ಎಂದು ಆಧ್ಯಾತ್ಮಿಕ ವಿಶ್ವಗುರು, ಅಂತರಾಷ್ಟ್ರೀಯ ವಾಸ್ತು ತಜ್ಞರಾದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಬೆಂಗಳೂರಿನ ಆಶ್ರಮಕ್ಕೆ ಭೇಟಿ ನೀಡಿದ ಸಮಾಜ ಸೇವಕ ಡಾ| ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಆಶೀರ್ವಾದ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ನಿಂದ ಗೌರವಿಸಲ್ಪಟ್ಟಿರುವ ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಆಶ್ರಮದಿಂದ ವಿಶೇಷವಾಗಿ ಶಾಲು ಹೊದಿಸಿ, ಸ್ವರಣಿಕೆ ನೀಡಿ ಗೌರವಿಸಿದರು. ಚಿತ್ರನಟ ಹಾಗೂ ನಿರ್ಮಾಪಕ ಪಡುಬಿದ್ರಿ ಗುರುರಾಜ್ ಹೆಗ್ಡೆ, ಆಶ್ರಮದ ನಿರ್ದೇಶಕರಾದ ರಜನಿ ಸಿ. ಭಟ್, ರಾಘವ್ ಸೂರ್ಯ, ರಾಹುಲ್ ಸಿ ಭಟ್, ಆಶ್ರಮದ ಸಂಚಾಲಕ ಪುನೀತ್ ಕೃಷ್ಣ ಮತ್ತಿತರರು…

Read More

ಪುತ್ತೂರು ಹಾರಾಡಿಯ ಮೂಕಾಂಬಿಕಾ ಗ್ಯಾಸ್ ಏಜೆನ್ಸಿಸ್ ಸಂಸ್ಥೆಯ ಮಾಲಕ ಸಂಜೀವ ಆಳ್ವ ಇವರು ವಿವೇಕಾನಂದ ಕನ್ನಡ ಶಾಲೆಯ ‘ಅನ್ನಪೂರ್ಣ’ ಮಕ್ಕಳ ಮಧ್ಯಾಹ್ನದ ಬಿಸಿ ಊಟ ಯೋಜನೆಗೆ 1 ಲಕ್ಷ ರೂ ದೇಣಿಗೆ ನೀಡಿದ್ದಾರೆ. ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಅಶೋಕ ಕುಂಬಳೆ, ಪ್ರೌಢ ವಿಭಾಗದ ಮುಖ್ಯ ಶಿಕ್ಷಕರಾದ ಆಶಾ ಬೆಳ್ಳಾರೆ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ನಳಿನಿ ವಾಗ್ಲೆ ಇವರು ಎರಡು ಲಕ್ಷ ರೂಪಾಯಿ ಚೆಕ್ ಅನ್ನು ಸ್ವೀಕರಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘ, ಶಾಲಾ ಆಡಳಿತ ಮಂಡಳಿ, ಪೋಷಕ, ಶಿಕ್ಷಕ ಹಾಗೂ ವಿದ್ಯಾರ್ಥಿ ವೃಂದದವರ ಪರವಾಗಿ ಸಂಜೀವ ಆಳ್ವ ಹಾರಾಡಿಯವರಿಗೆ ಕೃತಜ್ಞತೆ ಅರ್ಪಿಸಿದರು

Read More

ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೋಂಕೆ ನಾರಾಯಣ ಶೆಟ್ಟಿಯವರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ವಿ ಶೆಟ್ಟಿಯವರು ಪುನರಾಯ್ಕೆಗೊಂಡಿದ್ದಾರೆ. ಸಮಿತಿ ಸದಸ್ಯರುಗಳಾಗಿ ಸುದರ್ಶನ್ ಭಟ್ ವಾಲ್ಪಾಡಿ, ಗೋಪಾಲ ಬಂಗೇರ ಗುಂಡಡಪ್ಪು, ಜನಾರ್ದನ ಸೇರಿಗಾರ ಹೆಮದೊಟ್ಟು, ಅನಿತಾ ಶೆಟ್ಟಿ ವಾಲ್ಪಾಡಿ, ಶಾಲಿನಿ ಕೋಟ್ಯಾನ್ ಹೆಗ್ಡೆ ಬಾಕ್ಯಾರು, ಉಮೇಶ್ ನಾಯ್ಕ್ ಮೂಡುಕೊಣಾಜೆ, ಸಂತೋಷ್ ಕೋಟ್ಯಾನ್ ಮೂಡುಕೊಣಾಜೆ ಆಯ್ಕೆಗೊಂಡಿದ್ದಾರೆ. ಮುಂದಿನ ಮೂರು ವರ್ಷಗಳ ಅವಧಿಗೆ ಈ ಸಮಿತಿ ಕಾರ್ಯ ನಿರ್ವಹಿಸಲಿದೆ.

Read More

ಕೊಡಿಯಾಲಬೈಲ್ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಇಸ್ಕಾನ್ ಧಾರ್ಮಿಕ ಸಂಸ್ಥೆಯ ಆಶ್ರಯದಲ್ಲಿ ಶ್ರೀ ರಾಮನವಮಿ ಮಹೋತ್ಸವ ಹಾಗೂ ಶ್ರೀ ರಾಮ ಲಕ್ಷ್ಮಣ ಅಲಂಕೃತ ಶೋಭಾಯಾತ್ರೆಯು ರವಿವಾರ ಸಂಸ್ಥೆಯ ಮುಖ್ಯಸ್ಥ ಶ್ರೀ ಗುಣಾಕರ ರಾಮ ದಾಸರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಧಾರ್ಮಿಕ ಉತ್ಸವವು ಪ್ರಾತಃಕಾಲ ಅರ್ಚಕ ಶ್ರೀ ದೇವಕಿತನಯದಾಸ ಅವರಿಂದ ಶ್ರೀ ರಾಮ, ಶ್ರೀ ಲಕ್ಷ್ಮಣ ಸೀತೆ ಮತ್ತು ಹನುಮಾನ್ ವಿಗ್ರಹಗಳಿಗೆ ಅಲಂಕಾರ ಮತ್ತು ಶೃಂಗಾರ ಪೂಜಾ ವಿಧಿ ವಿಧಾನಗಳೊಂದಿಗೆ ಪ್ರಾರಂಭವಾಯಿತು. ಸಂಜೆ ಶ್ರೀ ರಾಮ, ಶ್ರೀ ಲಕ್ಷ್ಮಣ, ಸೀತೆ ಮತ್ತು ಹನುಮಾನ್ ವಿಗ್ರಹಗಳನ್ನು ಆಕರ್ಷಕ ವಿಶೇಷ ಅಲಂಕೃತ ರಥದಲ್ಲಿ ಕೂರಿಸಿ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ರಥದಲ್ಲಿ ಹರಿಚರಣ್ ದಾಸ, ಗುಣಾಕರ ರಾಮದಾಸ ಅವರು ಪೂಜೆ ನೆರವೇರಿಸಿದರು. ಗಣ್ಯರು ಸೇರಿದಂತೆ ಭಕ್ತಾದಿಗಳು ರಥವನ್ನೆಳೆದರು. ಈ ಪವಿತ್ರ ಭವ್ಯ ರಥಯಾತ್ರೆಯು ಪಿ.ವಿ.ಎಸ್ ಸಂಕೀರ್ಣದಿಂದ ಮೆರವಣಿಗೆಯಲ್ಲಿ ಹೊರಟು, ಸಹಸ್ರಾರು ಭಕ್ತಾಭಿಮಾನಿಗಳು ಶ್ರಧ್ಧಾ ಭಕ್ತಿಯಿಂದ ಹರೇಕೃಷ್ಣ ಹರೇರಾಮ ಜಪದೊಂದಿಗೆ ಭಜನೆ, ಕೀರ್ತನೆ,…

Read More

ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್ ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ಚಲನಚಿತ್ರ ಎಪ್ರಿಲ್ 11 ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಈ ಚಿತ್ರವನ್ನು ಲಂಚುಲಾಲ್ ಕೆ.ಎಸ್ ನಿರ್ಮಿಸಿದ್ದು, ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರ ತುಳು ಚಿತ್ರರಂಗದಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ. ಈ ಚಿತ್ರ ತುಳು ಸಿನಿಮಾ ಇಂಡಸ್ಟ್ರಿಯಲ್ಲಿ ಮೊದಲ ಮಹಿಳಾ ಪ್ರಧಾನ ಚಿತ್ರವಾಗಿದೆ. ಚಿತ್ರದಲ್ಲಿ ಇಶಿತಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅರವಿಂದ್ ಬೋಳಾರ್, ಸ್ವರಾಜ್ ಶೆಟ್ಟಿ, ಜೆ.ಪಿ ತೂಮಿನಾಡು, ಪ್ರಕಾಶ್ ತೂಮಿನಾಡು, ಮಂಜು ರೈ ಮೂಳೂರು, ರೂಪಶ್ರೀ ವರ್ಕಾಡಿ, ಯತೀಶ್ ಪೂಜಾರಿ, ಅಶ್ವಥ್, ಬೇಬಿ ಲಕ್ಷ್ಯ ಎಲ್. ಮುಂತಾದ ಕೋಸ್ಟಲ್ ವುಡ್ ನ ಹೆಸರಾಂತ ಕಲಾವಿದರ ಜತೆ ಮುಂಬಯಿ ಮೂಲದ ತುಳು ಬ್ಲಾಗರ್ ನಟಿ ರಕ್ಷಿತಾ ಶೆಟ್ಟಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಕರಾವಳಿ ಭಾಗದ ಅನೇಕ ಪ್ರತಿಭೆಗಳೂ ಈ…

Read More

ಉಡುಪಿ ಕಲ್ಯಾಣಪುರದಲ್ಲಿ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಚರಿಸುತ್ತಿರುವ ತ್ರಿಶಾ ಪ. ಪೂ. ಕಾಲೇಜ್ ದ್ವಿತೀಯ ವರ್ಷದಲ್ಲೂ ಶೇಕಡ 100 ಫಲಿತಾಂಶದ ದಾಖಲಿಸಿದೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಮೃತ ಬಸವರಾಜ್ ಬಣಕರ್ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ ಪಡೆದು ಸಂಸ್ಥೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾರೆ. ಶ್ರೀರಕ್ಷಾ 589 ಅಂಕ, ಸುಶ್ಮಿತಾ 588 ಅಂಕ, ಆಕಾಶ್ ಶೇಥಿಯಾ 586 ಅಂಕ, ಶಶಾಂಕ್ ಎಸ್‌ ಭಟ್‌ 585 ಅಂಕಗಳನ್ನು ಗಳಿಸಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆಗೆ ಹಾಜರಾದ 162 ವಿದ್ಯಾರ್ಥಿಗಳಲ್ಲಿ 108 ಅತ್ಯುನ್ನತ ದರ್ಜೆ ಹಾಗೂ 54 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಪಡೆದಿದ್ದಾರೆ. ತ್ರಿಷಾ ವಿದ್ಯಾ ಸಂಸ್ಥೆಯು ತನ್ನ ಪ್ರಾರಂಭದ ವರ್ಷದಿಂದಲೂ ಶೇ 100ರ ಫಲಿತಾಂಶದ ದಾಖಲಿಸಿದ್ದು, ಅತ್ಯುತ್ತಮ ಬೋಧಕ ಮತ್ತು ಬೋಧಕೇತರ ವೃಂದದವರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆಯಾಗಿ ಬೆಳೆಯುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಶ್ರೇಣಿಯ ಫಲಿತಾಂಶ ದಾಖಲಿಸಿರುವ ಸಂಸ್ಥೆ ಉಡುಪಿ ಜಿಲ್ಲೆಯಲ್ಲಿ ಪ್ರಸಿದ್ಧವಾಗಿದೆ. ನೀಟ್, ಜೆ.ಇ.ಇ,…

Read More

2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ 4ನೇ ವರ್ಷವೂ ಶೇಖಡಾ 100 ಫಲಿತಾಂಶದೊಂದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ. ಪರೀಕ್ಷೆ ಬರೆದ ಎಲ್ಲಾ 692 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಮೇಘನಾ ಯು. ವೈ 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಅಮೃತ ಬಸವರಾಜ್ ಬಣಕಾರ್ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ, ಶ್ರೀನಿಧಿ ಡಿ 591 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ, ಪ್ರಜ್ವಲ್ ಎಸ್. ಎನ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ, ತೇಜಸ್ ವಿ. ನಾಯಕ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ ಗಳಿಸಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ 592 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು 97% ಕ್ಕಿಂತ ಅಧಿಕ, 168 ವಿದ್ಯಾರ್ಥಿಗಳು 95%ಕ್ಕಿಂತ ಅಧಿಕ, 379 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ, ಹಾಗೂ 557 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ…

Read More

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ವತಿಯಿಂದ ಕುಂದಾಪುರ ತಾಲ್ಲೂಕಿನ 74ನೇ ಉಳ್ಳೂರು ಗ್ರಾಮದಲ್ಲಿ 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೊರಗರ ಕಾಲೋನಿಯಲ್ಲಿ ನಿರ್ಮಾಣವಾಗಲಿರುವ 14 ಮನೆಗಳ ನಿರ್ಮಾಣ ಕಾಮಗಾರಿಗೆ ಪೇಜಾವರ ಮಠದ ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರ ಅಮೃತಹಸ್ತದಿಂದ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಶ್ರೀ ಕಿರಣ್‌ ಕುಮಾರ್‌ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ| ಹೆಚ್.‌ ಎಸ್. ಶೆಟ್ಟಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Read More