Author: admin
2023 ವರ್ಷಾಂತ್ಯದ ಕೊನೆಯ ದಿನ ಡಿಸೆಂಬರ್ 30ನೇ ತಾರೀಕು ಬೆಳಗಿನ ಜಾವ 5.30 ಕ್ಕೆ ಜನಾನುರಾಗಿಯಾಗಿದ್ದ ಆತ್ಮೀಯರು ಶ್ರೀ ದೇವೆಶ್ ಆಳ್ವರವರು ಕೊನೆಯುಸಿರೆಳೆದ ಸುದ್ದಿ ಕ್ಷಣಾರ್ಧದಲ್ಲಿ ಯು.ಎ.ಇ.ಯ ಉದ್ದಗಲಗಳಲ್ಲಿ ಸ್ನೇಹಿತರೆಲ್ಲರಿಗೂ ದಿಗ್ರಭಮೆ ಮೂಡಿಸಿಸು. ಕೆಲವು ದಿನಗಳಿಂದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಮೂಲತ ಕರಾವಳಿ ಕರ್ನಾಟಕದ ತುಳುನಾಡಿನವರಾದ ದೇವೆಶ್ ಆಳ್ವ ಪ್ರತಿಷ್ಠಿತ ಕೆನರಾ ಕಾಲೇಜು ಮತ್ತು ಎಸ್.ಡಿ.ಎಂ.ಸಿ.ಇ.ಟಿ. ನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದವರು. ದುಬಾಯಿಗೆ ಬಂದು ಸೋಲಾಸ್ ಮರೀನ್ ಸರ್ವಿಸಸ್ ನಲ್ಲಿ ಮ್ಯಾನೆಜರ್ ಆಗಿ ಸೇವೆ ಸಲ್ಲಿಸುತಿದ್ದರು. ಸ್ವಂತ ಉಧ್ಯಮ ಪಯೋನಿರ್ ಮರೈನ್ ಸಂಸ್ಥೆಯನ್ನು ಸ್ಥಾಪಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಸುರದ್ರೂಪಿಯಾಗಿದ್ದು ಸುಂದರ ವ್ಯಕ್ತಿತ್ವ ಹೊಂದಿದ್ದ ದೇವೆಶ್ ಆಳ್ವರು ಜನಮಾನಸದಲ್ಲಿ ಸದಾ ನಗುಮುಖದ ವ್ಯಕ್ತಿಯಾಗಿದ್ದು ಸದಾ ಚೈತನ್ಯದ ಚಿಲುಮೆಯಂತೆ ಇದ್ದವರು. ಗಲ್ಫ್ ರಾಷ್ಟ್ರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾಕೂಟ, ಸ್ನೇಹಮಿಲನಗಳಿಗೆ ಸದಾ ಬೆಂಬಲ ನೀಡುತ್ತಾ ಪ್ರಾಯೋಜಕರಾಗಿ ಪ್ರೋತ್ಸಾಹ ನೀಡುತಿದ್ದ ಹೃದಯವಂತ ಅಗಲಿರುವುದು ಎಲ್ಲಾ ಬಂದುಬಳಗ ಸ್ನೇಹಿತ ವರ್ಗದವರಿಗೆ ಅತೀವ ನೋವಾಗಿದೆ. ಯು.ಎ.ಇ.…
‘ನಮ್ಮ ವ್ಯವಸ್ಥೆಯನ್ನು ನಾವು ಪ್ರೀತಿಸಬೇಕು’ ಮೂಡುಬಿದಿರೆ: ‘ಇತರರಿಗೆ ಕಲಿಸುವ ಮೊದಲು ನಾವು ನಮ್ಮ ವ್ಯವಸ್ಥೆಯನ್ನು ಪ್ರೀತಿಸುವುದು ಮುಖ್ಯ’ ಎಂದು ಉಡುಪಿಯ ತೋನ್ಸೆ ಹೆಲ್ತ್ ಸೆಂಟರ್ನ ವೈದ್ಯಕೀಯ ಅಧಿಕಾರಿ ಡಾ. ಶ್ರುತ ಮಾನ್ಯ ಹೇಳಿದರು. ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಯೋಗ ಸಭಾಂಗಣದಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ದಿನಾಚರಣೆಯಲ್ಲಿ ‘ಸಮಗ್ರ ವಿಧಾನಕ್ಕಾಗಿ ಪ್ರಕೃತಿ ಚಿಕಿತ್ಸೆ’ ಧ್ಯೇಯ ಕುರಿತು ಅವರು ಶನಿವಾರ ಅವರು ಮಾತನಾಡಿದರು. ‘ಕೋವಿಡ್ ನಂತರದ ದಿನಗಳಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಬಹಳ ಜಾಗೃತರಾಗಿದ್ದಾರೆ. ಸುತ್ತಮುತ್ತಲಿರುವ ವಿವಿಧ ರೀತಿಯ ಚಿಕಿತ್ಸೆಯನ್ನು ಕೇಳುವ ಮನೋಭಾವವಿದ್ದರೂ ಮನಸ್ಸಿಗೆ ತೋಚಿದಂತೆ ಚಿಕಿತ್ಸೆ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಚಿಕಿತ್ಸಾ ವಿಧಾನ ಆಯ್ಕೆ ಮಾಡಿಕೊಳ್ಳುವಾಗ ವೈಜ್ಞಾನಿಕ ಮನೋಭಾವ ಮುಖ್ಯ’ ಎಂದರು. ‘ಇಂದಿನ ಯುವಜನತೆ ಸಾಮಾಜಿಕ ಜಾಲತಾಣಗಳಿಗೆ ನೀಡುವ ಆದ್ಯತೆಯನ್ನು ಆರೋಗ್ಯಕ್ಕೆ ನೀಡುತ್ತಿಲ್ಲ. ಆರೋಗ್ಯ ಪಾಲನೆಯಲ್ಲಿ ‘ಪಂಚತಂತ್ರ’ ಪಾಲನೆ ಅತ್ಯವಶ್ಯ’ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ‘ಆರೋಗ್ಯದ ಕುರಿತು…
ಪುತ್ತೂರು ದೇವತಾ ಸಮಿತಿ ವತಿಯಿಂದ ಕಿಲ್ಲೆ ಮೈದಾನದಲ್ಲಿ ನಡೆಯಲಿರುವ 66 ನೇ ವರ್ಷದ ಸಾರ್ವಜನಿಕ ಮಹಾಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಪೈ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ವೇದಮೂರ್ತಿ ಸುಬ್ರಮಣ್ಯ ಹೊಳ್ಳರವರ ನೇತೃತ್ವದಲ್ಲಿ ದೇವತಾ ಸಮಿತಿಯ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ವಿಗ್ರಹ ರಚನೆಗೆ ಮುಹೂರ್ತ ನಡೆಸಲಾಯಿತು. ಮೂರ್ತಿ ರಚನೆ ಮಾಡುವ ರಮೇಶ್ ಪೂಜಾರಿಯವರು ಶ್ರೀ ಗಣೇಶನ ವಿಗ್ರಹ ರಚಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಪ್ರತೀ ವರ್ಷ ನಾಗರ ಪಂಚಮಿಯ ದಿನದಂದು ಕಿಲ್ಲೆ ಮೈದಾನದ ಗಣೇಶೋತ್ಸವಕ್ಕೆ ವಿಗ್ರಹ ಮುಹೂರ್ತ ಮಾಡಲಾಗುತ್ತಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ : ಶ್ರೀಮಹಾ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ದೇವತಾ ಸಮಿತಿಯ ಅಧ್ಯಕ್ಷ ಎನ್. ಸುಧಾಕರ್ ಶೆಟ್ಟಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಇದು ಗಣೇಶನ ಸಂಕಲ್ಪದಂತೆ ನಡೆಯುವ ಉತ್ಸವವಾಗಿದೆ. ಕಳೆದ 65 ವರ್ಷಗಳಿಂದ…
ತುಳುನಾಡ ಸಂಸ್ಕೃತಿ, ಆಚಾರ- ವಿಚಾರ, ನಡೆ-ನುಡಿ, ಜೀವನ ಪದ್ಧತಿ, ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರಸಿಕೊಂಡು ಕುತೂಹಲ ಹುಟ್ಟಿಸಿ ಸುಂದರವಾಗಿ ಮೂಡಿಬಂದಿರುವ ತುಳು ಸಿನಿಮಾ “ಕೊರಮ್ಮ”, ಇಂದಿನ ಯುವ ಜನತೆಯನ್ನು ಬೆರಗುಗೊಳಿಸುವಂತೆ ಮಾಡಿದೆ. ಈ ಸಿನಿಮಾವನ್ನು ತುಳು ನಾಡಿನ ಎಲ್ಲರೂ ನೋಡಿ ಪ್ರೋತ್ಸಾಹಿಸಬೇಕು ಎಂದು ನಿರ್ದೇಶಕ ಶಿವಧ್ವಜ್ ಶೆಟ್ಟಿ ತಿಳಿಸಿದರು. ಸುರತ್ಕಲ್ ನಲ್ಲಿರುವ ಸಿನಿಗ್ಯಾಲಕ್ಸಿ ಚಿತ್ರಮಂದಿರದಲ್ಲಿ ಕೊರಮ್ಮ ತುಳು ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಸಮಾರಂಭದಲ್ಲಿ ನಿರ್ಮಾಪಕ ಅಡ್ಯಾರ್ ಮಾಧವ ನಾಯ್ಕ್, ಸಿನಿಗ್ಯಾಲಕ್ಸಿ ಸಂಸ್ಥೆಯ ನಿರ್ದೇಶಕ ಶಶಿಕುಮಾರ್, ಕೃಷ್ಣ ಅಡ್ಯಂತಾಯ, ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ, ವೆಂಕಟರಮಣ, ದಿನೇಶ್ ಫರಂಗಿಪೇಟೆ, ಮಧು ಸುರತ್ಕಲ್, ನಟ ಮೋಹನ್ ಶೇಣಿ, ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಸರೋಜ ಟಿ ಶೆಟ್ಟಿ, ಸರಾಯು ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಸಿನಿಗ್ಯಾಲಕ್ಸಿಯ ದೀಪಕ್ ಮೊದಲಾದವರು ಉಪಸ್ಥಿತರಿದ್ದರು. ಮಂಗಳೂರು, ಸುರತ್ಕಲ್, ಪುತ್ತೂರು, ಪಡುಬಿದ್ರೆ, ಮುಂತಾದ ಕಡೆಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ ಎಂದು ನಿರ್ಮಾಪಕ ಅಡ್ಯಾರ್ ಮಾಧವ ನಾಯ್ಕ್…
ಭಾರತದ ಯುವ ಬ್ಯಾಡ್ಮಿಂಟನ್ ಪಟುಗಳಾದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸವನ್ನು ಬರೆದಿದ್ದಾರೆ. ಜಕಾರ್ತಾದಲ್ಲಿ ನಡೆದ ಬ್ಯಾಡ್ಮಿಂಟನ್ ಸೂಪರ್ 1000 ಫೈನಲ್ ನಲ್ಲಿ ಪ್ರಶಸ್ತಿಯನ್ನು ಗೆದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಡಬಲ್ಸ್ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಮತ್ತು ಕಳೆದ ವರ್ಷ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಕಂಚು ಗೆದ್ದಿದ್ದ ವಿಶ್ವದ ನಂ.6 ಜೋಡಿ, ಜಕಾರ್ತದಲ್ಲಿ ನಡೆದ 2 ಗೇಮ್ ಗಳ ಅದ್ಭುತ ಹೋರಾಟದಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕಾ ಅವರನ್ನು ಸೋಲಿಸಿದರು. ಇಂಡೋನೇಷ್ಯಾ ಓಪನ್ ನ ಪುರುಷರ ಡಬಲ್ಸ್ ಫೈನಲ್ ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಅವರು ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೋಹ್ ಅವರನ್ನು 21-17, 21-18 ರಿಂದ ಸೋಲಿಸಿದರು. ನಿಧಾನಗತಿಯ ಆರಂಭವನ್ನು ಪಡೆದರೂ ಭಾರತೀಯ ಜೋಡಿ ನೇರ ಗೇಮ್ ಗಳಲ್ಲಿ ಪಂದ್ಯವನ್ನು ಗೆದ್ದರು. ಭಾರತದ ಜೋಡಿ…
ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮಿà ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಎ. 9ರಿಂದ ವರ್ಷಾವಧಿ ಉತ್ಸವ ಮೊದಲ್ಗೊಂಡು ಎ.14ರ ತನಕ ವಿವಿಧ ವಿಧಿ ವಿಧಾನಗಳ ಮೂಲಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ. 12ರಂದು ಶ್ರೀ ಮನ್ಮಹಾರಥೋತ್ಸವ ಜರಗಲಿದೆ. ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಮನ್ಮಹಾರಥೋತ್ಸವ ಅಂಗವಾಗಿ ಎ. 9ರ ರವಿವಾರ ಧ್ವಜಾರೋಹಣ, ರಾತ್ರಿ ಭೇರಿ ತಾಡನ, ಕೌತುಕ ಬಂಧನ, ಶಿಬಿಕಾಯನೋತ್ಸವ ಜರಗಿತು. ಎ. 10ರಂದು ಸಿಂಹವಾಹನೋತ್ಸವ, ಎ. 11ರಂದು ಪುಷ್ಪಕ ವಾಹನೋತ್ಸವ, ಎ. 12 ರಂದು ಶ್ರೀ ಮನ್ಮಹಾರಥೋತ್ಸವ. ಎ. 13ರಂದು ಚೂರ್ಣೋತ್ಸವ ಹಾಗೂ ತುಲಾಭಾರ ಸೇವೆ, ಎ. 14ರಂದು ಅವಭೃಥ, ಮೃಗಯಾ ವಿಹಾರ, ಪೂರ್ಣಾಹುತಿ, ಧ್ವಜಾರೋಹಣ, ಕುಂಭಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ. . 13ರಂದು ನಡೆಯುವ ತುಲಾಭಾರ ಸೇವೆ ಮಾಡಲಿಚ್ಛಿಸುವವರು ಎ. 12ರ ಸಂಜೆ ಒಳಗೆ ತಿಳಿಸಬೇಕು. ಭಕ್ತರಿಗೆ ಮಧ್ಯಾಹ್ನದ ಊಟ ಮತ್ತು ರಾತ್ರಿಯ ವಸತಿ ವ್ಯವಸ್ಥೆ ಇದೆ ಎಂದು ದೇವಸ್ಥಾನದ ಮೊಕ್ತೇಸರ ಚಂದ್ರಶೇಖರ ಶೆಟ್ಟಿ ತಿಳಿಸಿದ್ದಾರೆ.
ತ್ರಿವಳಿ ಕಾರ್ಯಕ್ರಮಗಳನ್ನು ಆಯೋಜಿಸಿದ ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ಜಾನಪದ ಕಲಾರಾಧನೆಗೆ ಪ್ರೋತ್ಸಾಹದ ಅಗತ್ಯವಿದೆ: ಡಾ| ಆರ್.ಕೆ ಶೆಟ್ಟಿ (ಚಿತ್ರ / ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, ಜು.23: ಕಲೆಯು ಪಾವಿತ್ರ್ಯತೆಯುಳ್ಳದ್ದು ಇದಕ್ಕೆ ಭೇದವಿಲ್ಲ. ಆದುದರಿಂದ ಎಲ್ಲರಂತೆ ಜಾನಪದ ಕಲಾರಾಧನೆಗೂ ಪ್ರೇರಣೆಯ ಅಗತ್ಯವಿದ್ದು ನಮ್ಮ ಸದಾ ಪ್ರೋತ್ಸಾಹವಿದೆ. ಕಲೆಗಳು ಬೆಳೆಸಿ ಉಳಿಸುವ ನಿಟ್ಟಿನಲ್ಲಿ ಆಯೋಜಿಸಿದ ಈ ಕಾರ್ಯಕ್ರಮ ಕಲೆಯೊಂದಿಗೆ ಸಹಬಾಳ್ವೆಯನ್ನು ಕಲಿಸುವಂತಾಗಿದೆ. ಶ್ರೀನಿವಾಸ ಸಾಫಲ್ಯರ ಕಲ್ಪನೆಯ ಸುದಿನ ಇದಾಗಿದ್ದು ಮಹಾರಾಷ್ಟ್ರ ಘಟಕದ ಸದಸ್ಯರಲ್ಲಿ ಮತ್ತಷ್ಟು ಪ್ರೇರಣೆ ಮೊಳಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು ಇದರ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ| ಆರ್.ಕೆ ಶೆಟ್ಟಿ ತಿಳಿಸಿದರು. ಇಂದಿಲಿ ಶನಿವಾರ ಕುರ್ಲಾ ಪೂರ್ವದಲ್ಲಿನ ಬಂಟರ ಭವನದ ಅನೇಕ್ಸ್ ಕಾಂಪ್ಲೆಕ್ಸ್ನಲ್ಲಿನ ಶ್ರೀಮತಿ ರಂಜನಿ ಸುಧಾಕರ ಹೆಗ್ಡೆ ಸಮಾಜ ಕಲ್ಯಾಣ ಸಭಾ ಭವನದಲ್ಲಿ ಕಜಾಪ ಮಹಾರಾಷ್ಟ್ರ ಘಟಕವು ಆಯೋಜಿಸಿದ್ದ ಜಾನಪದ ಸಂಸ್ಕೃತಿಯ ಸಂವಾದ `ಆಷಾಡದ ಆಹ್ಲಾದಕರಸವಿ ಸಂಜೆ’ ಮತ್ತು ಜಾನಪದ ಗೀತಾ ಗಾಯನ `ಸಂವಾದ-ಚಿಂತನ-ಮಂಥನ’ ಕಾರ್ಯಕ್ರಮಗಳಸಭಾಧ್ಯಕ್ಷತೆ ವಹಿಸಿ ಗೀತಾ ಗಾಯನದ ಬಳಿಕ ದೀಪನಮನ ಮತ್ತು ನಾಡಗೀತೆಯೊಂದಿಗೆ ನಡೆಸಲ್ಪಟ್ಟ ಸಭಾ ಕಾರ್ಯಕ್ರಮದಲ್ಲಿ ನಾಮಫಲಕ ಅನಾವರಣಗೊಳಿಸಿ ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ವಿಭಾಗದ…
ಶ್ರೀ ಮಂದಾರ್ತಿ ಕ್ಷೇತ್ರದ ಯಕ್ಷಗಾನ ಮೇಳವೊಂದು ಮೊದಲ್ಗೊಂಡು ಅಂದಿನಿಂದ ಇಂದಿನವರೆಗೂ ಕೇವಲ ಭಕ್ತಾದಿಗಳ ಹರಕೆ ಸೇವೆಗೆ ಮಾತ್ರ ಮೀಸಲಿದ್ದು,ಕಾಲಾನುಕಾಲಕ್ಕೆ ಶ್ರೀ ದೇವಳದ ಮೇಳಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿ, ಪ್ರಸ್ತುತ ಐದು ಯಕ್ಷಗಾನ ಮೇಳಗಳನ್ನು ಹೊಂದಿದ್ದೂ ವರ್ಷಕ್ಕೆ ಸುಮಾರು 900 ಆಟಗಳನ್ನು ಆಡಿಯೂ 2042 – 43 ರ ಸಾಲಿನವರೆಗೆ ಹರಕೆ ಯಕ್ಷಗಾನ ಬಯಲಾಟ ಬುಕ್ಕಿಂಗ್ ಇರುವ ಏಕಮಾತ್ರ (ಬಹುಶಃ) ಮೇಳ ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮೇಳ, ಶ್ರೀ ಕ್ಷೇತ್ರ ಮಂದಾರ್ತಿ ಎಂದರೆ ತಪ್ಪಾಗಲಾರದು. ಹೀಗೊಂದು ಸೇವಾ ಮನೋಭಾವನೆಯನ್ನು ತಮ್ಮದಾಗಿಸಿಕೊಂಡು ತಲೆಮಾರುಗಳಿಂದ ಚಾಚೂ ತಪ್ಪದೆ ಮುನ್ನಡೆಸಿಕೊಂಡು ಬರುತ್ತಿರುವ ಮೊಕ್ತೇಸರ ಕುಟುಂಬದ ಹೆಸರು ಹೆಗ್ಗುಂಜೆ ನಾಲ್ಕು ಮನೆಯವರು. ಹಾಗೆಯೇ ಕುಟುಂಬದ ಹಿರಿಯರಿಂದ ಕಿರಿಯರಿಗೆ, ಮುಂದಿನ ತಲೆಮಾರಿಗೆ ವರ್ಗಾವಣೆಗೊಳ್ಳುತ್ತಾ ಬಂದು ಹೊಣೆಗಾರಿಕೆಯ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾಗಿ ಹೆಗ್ಗುಂಜೆ ಚಾವಡಿಮನೆ ಮಂದಾರ್ತಿ ಶ್ರೀ ಧನಂಜಯ ಶೆಟ್ಟಿ ಅವರು ಸೇವೆಯ ನೊಗಕ್ಕೆ ಹೆಗಲಾಗಿ ಮುನ್ನಡೆಸುತ್ತಿದ್ದಾರೆ. ಇವರು ಶ್ರೀ ದೇವಳದ ಮೊಕ್ತೇಸರರಾಗಿ ಅನುಪಮ…
ಬಂದರು, ವಿಮಾನಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನಗರದ ಓಷಿಯನ್ ಪರ್ಲ್ ಹೊಟೇಲ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜ.5 ರಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ. ಪ್ರಾಂಜಲ್ ಗೌರವಾರ್ಥ ನಡೆಯಲಿರುವ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಪಿ ಅನಾವರಣಗೊಳಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿಭಿನ್ನತೆಯೇನೆಂದರೆ ಸಾಂಸ್ಕೃತಿಕ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳು ಮುಂದುವರಿದಿದ್ದು, ದೇಶದಲ್ಲಿ ಇಂತಹ ಸ್ವಚ್ಛ, ಸೌಹಾರ್ದತೆಯ ಮತ್ತೊಂದು ನಗರವನ್ನು ಕಾಣಲು ಸಾಧ್ಯವಿಲ್ಲ. ಇಂತಹ ನಾಡಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ನಡೆಯುತ್ತಿರುವುದು ಬ್ರ್ಯಾಂಡ್ ಮಂಗಳೂರಿಗೆ ಮತ್ತಷ್ಟು…
ಈಚೆಗೆ ವಿಶ್ವ ಬಂಟ ಸಮ್ಮೇಳನದಲ್ಲಿ ನಿರುದ್ಯೋಗ ಸಮಸ್ಯೆ ಕೇಂದ್ರೀಕರಿಸಿ ಒಂದು ವಿಚಾರಗೋಷ್ಠಿ ನಡೆದಿತ್ತು. ಅದರಲ್ಲಿ ಖ್ಯಾತ ಉದ್ಯಮಿಗಳು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಅವರೆಲ್ಲರೂ ಮಂಡಿಸಿದ ಒಂದು ಸಮಾನ ವಿಚಾರವೆಂದರೆ – ಈಗಿನ ಸುಶಿಕ್ಷಿತ ಪದವೀಧರರಲ್ಲಿ ಉದ್ಯೋಗಕ್ಕೆ ಬೇಕಾದ ಕೌಶಲಗಳಿಲ್ಲ ಎಂಬುದು! ನಮ್ಮ ಮಕ್ಕಳು ಉನ್ನತ ಶಿಕ್ಷಣ ಮಾಡಿ ದೊಡ್ಡ ದೊಡ್ಡ ಪದವಿಗಳನ್ನು ಪಡೆದುಕೊಂಡಿರುತ್ತಾರೆ. ಉತ್ತಮ ಅಂಕ ಪಟ್ಟಿಯೂ ಅವರಲ್ಲಿದೆ. ಆದರೆ ಕಲಿತ ವಿಷಯದಲ್ಲಾಗಲೀ, ಉದ್ಯೋಗಕ್ಕೆ ಅಗತ್ಯವಿರುವ ವಿಷಯದಲ್ಲಾಗಲೀ ಅವರಲ್ಲಿ ಕೌಶಲ ಇರುವುದಿಲ್ಲ. ಆದ್ದರಿಂದಲೇ ಕಂಪೆನಿಗಳಲ್ಲಿ ಉದ್ಯೋಗ ಖಾಲಿ ಇದ್ದರೂ ಸೂಕ್ತ ಅಭ್ಯರ್ಥಿಗಳು ಸಿಗದೆ ಅವುಗಳನ್ನು ತುಂಬಿಸಲಾಗುತ್ತಿಲ್ಲ. ಕೆಲವು ಅನಿವಾರ್ಯ ಸಂದರ್ಭಗಳಲ್ಲಿ ಕೆಲವರನ್ನು ಉದ್ಯೋಗಕ್ಕೆ ಸೇರಿಸಿಕೊಂಡ ಬಳಿಕ ತಮಗೆ ಬೇಕಾದಷ್ಟು ತರಬೇತಿ ಕೊಟ್ಟು ಕೆಲಸ ಮಾಡಿಸುತ್ತೇವೆ ಎಂಬುದು ಸಂಪನ್ಮೂಲ ವ್ಯಕ್ತಿಗಳ ಅಭಿಪ್ರಾಯವಾಗಿತ್ತು. ಇಂದು ಎಂಜಿನಿಯರಿಂಗ್ ಸಹಿತ ಬೇರೆ ಬೇರೆ ಉನ್ನತ ಕೋರ್ಸ್ ಮಾಡಿದವರಿಗೆ ಕೊರತೆಯಿಲ್ಲ. ಜತೆಗೆ ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗವೂ ಇದೆ. ಕೆಲವರು ತಾವು ಮಾಡಿರುವ ಕೋರ್ಸ್ ಬಿಟ್ಟು ಬೇರೆಯೇ ಕ್ಷೇತ್ರದಲ್ಲಿ ಉದ್ಯೋಗ ಮಾಡುತ್ತಿರುತ್ತಾರೆ.…