Author: admin
ಎಚ್ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು. ಐವನ್ ಡಿ ಸೋಜಾ ಕ್ಲ್ಯಾಪ್ ಮಾಡಿದರು. ಪ್ರಕಾಶ್ ಪಾಂಡೇಶ್ವರ್ ಕ್ಯಾಮರ ಚಾಲನೆ ನೀಡಿದರು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ಉದ್ಘಾಟಿಸಿದರು. ಜಿಲ್ಲೆಯಲ್ಲಿ ಬಹಳಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಕಲಾವಿದರಿಗೆ ಅವಕಾಶ ದೊರೆತು ಅವರು ಸಮಾಜದ ಎದುರು ಬರಲಿ. ತುಳು ಸಿನಿಮಾಗಳನ್ನು ಎಲ್ಲಾ ಧರ್ಮದ ಪ್ರೇಕ್ಷಕರು ನೋಡಿ ಪ್ರೋತ್ಸಾಹಿಸ ಬೇಕೆಂದರು. ತುಳು ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳು ಭಾಷೆ ವಿಶ್ವದ ಎಲ್ಲೆಡೆ ಪಸರಿಸಿದೆ. ಇವತ್ತು ಭಾಷೆ ಉಳಿಯುವಲ್ಲಿ ತುಳು ನಾಟಕ, ತುಳು ಸಿನಿಮಾದ ಕೊಡುಗೆ ದೊಡ್ಡದಿದೆ. ತುಳು ಭಾಷೆಯ ರಾಯಭಾರಿಯಾಗಿ ನಾಟಕ, ಸಿನಿಮಾಗಳು ಕೆಲಸ ಮಾಡುತ್ತಿದೆ ಎಂದರು. ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಳ್ವರಿಸ್ ಮಾತನಾಡಿ, ಹಾಸ್ಯ ಸಿನಿಮಾದ ಜೊತೆಗೆ ಸದಭರುಚಿಯ ಸಮಾಜಕ್ಕೆ…
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಸೆ.7ರಿಂದ 9ರ ವರೆಗೆ ನಡೆಯುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭ ಜರಗಿತು. ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ 115 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಬಂಟರ ಮಾತೃ ಸಂಘದ ನೇತೃತ್ವದಲ್ಲಿ ಕಳೆದ 18 ವರ್ಷಗಳಿಂದ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುತ್ತಿರುವ ಇಲ್ಲಿನ ಗಣೇಶೋತ್ಸವ ಇನ್ನಷ್ಟು ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆ ನೀಡಿ ಎಲ್ಲರಿಗೂ ಶುಭ ತರಲಿ ಎಂದು ಹಾರೈಸಿದರು. ಬುದ್ಧಿವಂತರ ಜಿಲ್ಲೆ ಎಂದೇ ಖ್ಯಾತಿಯುಳ್ಳ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪ್ರಕೃತಿಗೆ ಹೆಚ್ಚಿನ ಮಹತ್ವ ನೀಡುವವರಾಗಿದ್ದು, ಗಣೇಶೋತ್ಸವದ ಸಂದರ್ಭದಲ್ಲಿ ತೆನೆ ವಿತರಣೆ ಮಾಡುವ ಮೂಲಕ ದೇವರ ಆರಾಧನೆ ಜೊತೆಗೆ ಪ್ರಕೃತಿಯೊಂದಿಗೆ ನಮ್ಮ ಬದುಕನ್ನು ಜೋಡಿಸಿಕೊಂಡಿರುವುದು ಪ್ರಶಂಸನೀಯವಾಗಿದೆ ಎಂದರು. ಸಾಂಕೇತಿಕ ತೆನೆ ವಿತರಿಸಿದ ಮೋಹನ್ ದೇವ ಆಳ್ವ ಅವರು ಮಾತನಾಡಿ,…
ಭಾರತ ದೇಶವು ವಿವಿಧ ಸಂಸ್ಕ್ರತಿ, ಸಂಸ್ಕಾರಗಳ ನೆಲೆವೀಡಾಗಿದ್ದು, ಹಬ್ಬ, ಉತ್ಸವಗಳು ಪರಸ್ಪರ ಬಾಂಧವ್ಯ ಬೆಳೆಸಲು ಪೂರಕವಾಗಿದೆ ಎಂದು ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆಯುತ್ತಿರುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಮೊದಲ ದಿನದ ಧಾರ್ಮಿಕ ಸಭೆಯ ಮುಖ್ಯ ಅತಿಥಿಯಾಗಿದ್ದರು. ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಅವರು ಮಾತನಾಡಿ, ಬಂಟ್ಸ್ ಹಾಸ್ಟೆಲ್ ಆವರಣದಲ್ಲಿ ಶೀಘ್ರದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಭವ್ಯ ಕಟ್ಟಡ ನಿರ್ಮಾಣಗೊಳ್ಳಲಿದ್ದು, ಸಮಗ್ರ ಸಮಾಜಕ್ಕೆ ನೂತನ ಕಟ್ಟಡದ ಪ್ರಯೋಜನ ಸಿಗಲಿದೆ ಎಂದರು. ಅತಿಥಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಾತನಾಡಿ, ಬಂಟರ ನೂತನ ಕಟ್ಟಡಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ಅಪೂರ್ವ ನಾಯಕತ್ವ ಗುಣ ಹೊಂದಿರುವ ಬಂಟ ಸಮಾಜ ಬಾಂಧವರು ಅತ್ಯಂತ…
ಎಚ್ ಪಿ ಆರ್ ಪ್ರೊಡಕ್ಷನ್ ಲಾಂಛನದಲ್ಲಿ ತ್ರಿಶೂಲ್ ಶೆಟ್ಟಿ ನಿರ್ದೇಶನ ಹರಿಪ್ರಸಾದ್ ರೈ ನಿರ್ಮಾಣದಲ್ಲಿ ತಯಾರಾಗುತ್ತಿರುವ “ಕಂಕನಾಡಿ” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಸೆಪ್ಟೆಂಬರ್ 8 ಭಾನುವಾರ ಬೆಳಿಗ್ಗೆ 9.30 ಕ್ಕೆ ಉರ್ವ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿದೆ. ತ್ರಿಶೂಲ್ ಶೆಟ್ಟಿ ಅವರು ಸಿನಿಮಾ ರಂಗದಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡಿದ್ದಾರೆ. ಪುಳಿಮುಂಚಿ ತುಳು ಸಿನಿಮಾವನ್ನು ನಿರ್ದೇಶಿಸಿ ಯಶಸ್ವಿಯಾದವರು.ಉದ್ಯಮಿ, ಸಮಾಜಸೇವಕ ಹರಿಪ್ರಸಾದ್ ರೈ ಸಿನಿಮಾ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದಾರೆ. ಒಂದೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಣ ನಡೆಸಲು ರೂಪುರೇಶೆ ಸಿದ್ದಪಡಿಸಿದ್ದಾರೆ. ತಾರಾಗಣದ ಆಯ್ಕೆ ನಡೆಯುತ್ತಿದೆ. ದಿಗ್ಗಜ ಕಲಾವಿದರೂ ಕಂಕನಾಡಿ ಸಿನಿಮಾದಲ್ಲಿದ್ದಾರೆ. ತ್ರಿಶೂಲ್ ಶೆಟ್ಟಿ ನಿರ್ದೇಶಿಸಿರುವ ಸಿನಿಮಾಕ್ಕೆ ಛಾಯಾಗ್ರಾಹಣ ಮಯೂರ್ ಆರ್ ಶೆಟ್ಟಿ, ಸಂಗೀತ ಕಿಶೋರ್ ಕುಮಾರ್ ಶೆಟ್ಟಿ, ಸಂಭಾಷಣೆ ಡಿಬಿಸಿ ಶೇಖರ್, ಕಲಾ ನಿರ್ದೇಶನ ಹರೀಶ್ ನಾಯಕ್, ಸಂಕಲನ ಗಣೇಶ್ ನಿರ್ಚೇಲ್, ಪಬ್ಲಿಸಿಟಿ ಡಿಸೈನರ್ ದೇವಿ ರೈ, ಸಾಹಸ ಚಂದ್ರು ಬಂಡೆ, ನೃತ್ಯ ದೀಕ್ಷಿತ್ ಕುಮಾರ್ ಮತ್ತು ನವೀನ್ ಇದ್ದಾರೆ.…
ಸೆಪ್ಟೆಂಬರ್ 10 ರಂದು ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ
ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ವೀಡಿಯೋ ಸಾಂಗ್ ಸೆಪ್ಟೆಂಬರ್ 10 ರಂದು ಮಂಗಳವಾರ ಸಂಜೆ 4 ಗಂಟೆಗೆ ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಹಿಂದೆಂದೂ ನಡೆಯದ ರೀತಿಯಲ್ಲಿ ವಿಜೃಂಭಣೆಯಿಂದ ಸಾರ್ವಜನಿಕರ ಹಾಗೂ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಆಗಲಿದೆ. ತುಳು ಸಿನಿಮಾ ರಂಗದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ತುಳು ಸಿನಿಮಾದ ಹಾಡೊಂದು ಸಿಂಗಲ್ ಥಿಯೇಟರ್ ನಲ್ಲಿ ಬಿಡುಗಡೆಗೊಳ್ಳುತ್ತಿರುವುದು ಇದೇ ಮೊದಲನೇ ಬಾರಿಯಾಗಿದೆ. ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ತಂಡದ ಬಹುತೇಕ ತಂತ್ರಜ್ಞರು, ಕಲಾವಿದರು ಇಲ್ಲಿ ದುಡಿದಿದ್ದಾರೆ. ಮುಖ್ಯವಾಗಿ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಇಲ್ಲೂ ನಿರ್ದೇಶಕರಾಗಿದ್ದಾರೆ. ವಿನೀತ್ ಕುಮಾರ್ ನಾಯಕ ನಟನಾಗಿ ಸಮತಾ ಅಮೀನ್ ನಾಯಕಿಯಾಗಿ ಹಾಗೂ ತುಳು ಚಿತ್ರರಂಗದ ಮೇರು ಕಲಾವಿದರಾದ ನವೀನ್ ಡಿ ಪಡೀಲ್,…
ಹೆಮ್ಮಾಡಿ ಕೊಲ್ಲೂರು ಮುಖ್ಯ ರಸ್ತೆಯ ಕಟ್ ಬೆಲ್ತೂರಿನಲ್ಲಿ ಶ್ರೀ ದುರ್ಗಾ ಎನರ್ಜಿ ಸ್ಟೇಷನ್ ಪೆಟ್ರೋಲ್ ಬಂಕ್ ಶುಕ್ರವಾರ ಉದ್ಘಾಟನೆಗೊಂಡಿತು. ಮಾಜಿ ಶಾಸಕ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಬಂಕ್ ನ ಕಚೇರಿಯನ್ನು ಉದ್ಘಾಟಿಸಿದರು. ಬೆಳಗ್ಗೆ ಲಕ್ಷ್ಮೀ ಪೂಜೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಭಕ್ತ ಚಂದ್ರಹಾಸ ಯಕ್ಷಗಾನ ಪ್ರದರ್ಶನಗೊಂಡಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಸ್. ರಾಜು ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಅರವಿಂದ ಪೂಜಾರಿ ನಾಡ, ಬೆಳ್ವೆ ಸತೀಶ್ ಕಿಣಿ, ಸಂಪಿಗೇಡಿ ಸಂಜೀವ ಶೆಟ್ಟಿ, ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಕೆರಾಡಿ ಪ್ರಸನ್ನ ಕುಮಾರ್ ಶೆಟ್ಟಿ, ಕಂಬದಕೋಣೆ ಪ್ರಕಾಶ್ ಚಂದ್ರ ಶೆಟ್ಟಿ ಮತ್ತಿತರ ಗಣ್ಯರು ಆಗಮಿಸಿ ಶುಭ ಹಾರೈಸಿದರು. ಶ್ರೀ ದುರ್ಗಾ ಎನರ್ಜಿ ಸ್ಟೇಶನ್ ನ ಮಾಲಕ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಸ್ವಾಗತಿಸಿದರು.
ಅಶೋಕನಗರ ಉರ್ವ ಬಂಟರ ಸಂಘದ ವಾರ್ಷಿಕ ಮಹಾಸಭೆಯು ಉರ್ವಸ್ಟೋರ್ ಬಳಿಯ ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಜರಗಿದ್ದು, ಮುಂದಿನ ಎರಡು ವರ್ಷಗಳ ಅವಧಿಗೆ ರವಿಚಂದ್ರ ಶೆಟ್ಟಿ ಅವರು ಅಧ್ಯಕ್ಷರಾಗಿ ಪುನರಾಯ್ಕೆ ಆಗಿದ್ದಾರೆ. ಇವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಹಾಫ್ ಕಾಮ್ಸ್ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ವಿಶ್ವ ಹಿಂದೂ ಪರಿಷತ್ ಉರ್ವ ಇದರ ಅಧ್ಯಕ್ಷರಾಗಿ ಪ್ರತಿಷ್ಠಿತ ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ನ ಜೊತೆ ಕಾರ್ಯದರ್ಶಿಯಾಗಿ ಯಕ್ಷಧ್ರುವ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿಸುತ್ತಿದ್ದಾರೆ. ಮಂಗಳೂರಿನ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.
ಎಕ್ಸಲೆಂಟ್ ಕುಂದಾಪುರ ವಿದ್ಯಾಸಂಸ್ಥೆಯು ಶಿಕ್ಷಣದ ಜೊತೆ ಜೊತೆಗೆ ಕ್ರೀಡೆ, ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ತನ್ನದೇ ಆಗಿರುವ ಹೊಸ ಚಾಪನ್ನು ಮೂಡಿಸಿಕೊಂಡು ಬಂದು ಕೇವಲ ತಾಲೂಕು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೇ ಆಂತರ್ರಾಜ್ಯ ಮಟ್ಟದಲ್ಲೂ ಸಹ ತನ್ನ ವಿಜಯ ಪತಾಕೆಯನ್ನು ಹಾರಿಸಿದೆ. ಶಿವಮೊಗ್ಗದಲ್ಲಿ ನಡೆದಂತ ಅಂತರ್ರಾಜ್ಯ ಮಟ್ಟದ (ರಾಷ್ಟ್ರೀಯ) ಕರಾಟೆ ಸ್ಪರ್ಧೆಯಲ್ಲಿ ‘ಕಾಟ’ ವಿಭಾಗದಲ್ಲಿ ರಾಷ್ಟ್ರಕ್ಕೆ ದ್ವಿತೀಯ ಸ್ಥಾನವನ್ನು ನಮ್ಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಅನೀಶ್ ಆರ್ ಶೆಟ್ಟಿ ತನ್ನ ಮುಡಿಗೇರಿಸಿಕೊಂಡಿದ್ದಾರೆ. ಇವರು ಹಾಲಾಡಿ ರಮೇಶ್ ಶೆಟ್ಟಿ ಮತ್ತು ರಜನಿ ಆರ್ ಶೆಟ್ಟಿ ರವರ ಸುಪುತ್ರರಾಗಿದ್ದಾರೆ. ಇವರ ತರಬೇತುದಾರರಾಗಿ ಅಬ್ಜಲ್ ಕೆ.ಡಿ.ಎಫ್ ಕುಂದಾಪುರ ಇವರ ಮಾರ್ಗದರ್ಶನದಲ್ಲಿ ಬಹುಮಾನ ಪಡೆದಿರುತ್ತಾರೆ. ಇವರ ಸಾಧನೆಯನ್ನು ಎಮ್. ಎಮ್ ಹೆಗ್ಡೆ ಎಜುಕೇಶನಲ್ &ಚಿmಠಿ; ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಮ್ ಮಹೇಶ್ ಹೆಗ್ಡೆ ಹಾಗೂ ಕಾರ್ಯದರ್ಶಿಯಾದ ದೀಪಾ ಎಮ್ ಹೆಗ್ಡೆ, ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕೇತರ ಸಿಬ್ಬಂಧಿ üವರ್ಗದವರು ಅಭಿನಂದಿಸಿದ್ದಾರೆ.
ಬಂಟರ ಯಾನೆ ನಾಡವರ ಮಾತೃ ಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಹಾಗೂ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ನಾರೀಕೇಳ ಮಹಾಗಣಾಯಾಗವು ಸೆಪ್ಟೆಂಬರ್ ತಿಂಗಳ ತಾರೀಕು 7ರಿಂದ ಸೆಪ್ಟೆಂಬರ್ ತಿಂಗಳ ತಾರೀಕು 9ರವರೆಗೆ ಮಂಗಳೂರಿನ ‘ಓಂಕಾರ ನಗರ’, ಬಂಟ್ಸ್ ಹಾಸ್ಟೆಲ್ ಇಲ್ಲಿ ಜರಗಲಿದೆ ಎಂದು ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ ಆಶಾಜ್ಯೋತಿ ರೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ದಿನಾಂಕ 06.09.2024ರ ಶುಕ್ರವಾರ ಶರವು ದೇವಸ್ಥಾನದ ಬಳಿಯಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ ಶ್ರೀ ರಾಮದಾಸ್ ಆಚಾರ್ ರವರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ನ ‘ಓಂಕಾರ ನಗರ’ಕ್ಕೆ ಬರ ಮಾಡಿಕೊಳ್ಳುವುದು. ದಿನಾಂಕ 07.09.2024ರ ಬೆಳಿಗ್ಗೆ ಶನಿವಾರ 8.00 ಗಂಟೆಗೆ ಧ್ವಜರೋಹಣಾ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ತೆನೆ ವಿತರಣಾ ಕಾರ್ಯಕ್ರಮ…
“ಬೇಗನೆ ಗುರುತಿಸುವಿಕೆ, ಸೂಕ್ತ ಚಿಕಿತ್ಸೆಯಿಂದ ಕ್ಯಾನ್ಸರ್ ಹಿಮ್ಮೆಟ್ಟಿಸಲು ಸಾಧ್ಯ” -ಡಾ. ಶಾಂತಾರಾಮ್ ಶೆಟ್ಟಿ
ತಪಸ್ಯ ಫೌಂಡೇಶನ್, ಎಲ್ ಸಿಐಎಫ್, ಲಯನ್ಸ್ ಇಂಟರ್ ನ್ಯಾಷನಲ್ ಮತ್ತು ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ಬಾಲ್ಯದ ಕ್ಯಾನ್ಸರ್ ಆರೈಕೆ ಕಾರ್ಯಕ್ರಮ “ಶೌರ್ಯ” ಇದರ ಉದ್ಘಾಟನಾ ಸಮಾರಂಭ ಗುರುವಾರ ಬೆಳಗ್ಗೆ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ತಪಸ್ಯ ಫೌಂಡೇಶನ್ ಸ್ಥಾಪಕರಾದ ಸಬಿತಾ ಆರ್. ಶೆಟ್ಟಿ ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಬಳಿಕ ಮಾತಾಡಿದ ಲಯನ್ಸ್ ಜಿಲ್ಲಾ ಗವರ್ನರ್ ಭಾರತಿ ಬಿ.ಎಂ. ಅವರು, “ಮಕ್ಕಳಿಗೆ ಕ್ಯಾನ್ಸರ್ ಬಂದಾಗ ಅವರ ಇಡೀ ಕುಟುಂಬ ಅದರಲ್ಲಿ ಬಲಿಪಶು ಆಗುತ್ತದೆ. ಮಕ್ಕಳ ಕ್ಯಾನ್ಸರ್ ಆರೈಕೆಯನ್ನು ಮಾಡುತ್ತಿರುವ ತಪಸ್ಯ ಫೌಂಡೇಶನ್ ಶ್ಲಾಘನೀಯ ಕಾರ್ಯವನ್ನು ಮಾಡುತ್ತಿದೆ. ಲಯನ್ಸ್ ಸಂಸ್ಥೆ ಮನೆ ಮನೆಗೆ ಹೋಗಿ ಕ್ಯಾನ್ಸರ್ ರೋಗಿಗಳನ್ನು ಗುರುತಿಸಿ ಅವರಿಗೆ ಔಷಧಿ ಸಹಿತ ಆರ್ಥಿಕ ಸಹಾಯವನ್ನು ಮಾಡುವಲ್ಲಿ ತಪಸ್ಯ ಫೌಂಡೇಶನ್ ನೆರವನ್ನು ನೀಡುತ್ತಿದೆ. ಕ್ಯಾನ್ಸರ್ ಯಾವ ಪ್ರಾಯದಲ್ಲಿ ಬೇಕಾದರೂ ಬರಬಹುದು. ಅದು ಗಂಭೀರ ಸ್ಥಿತಿ ತಲುಪಿದಾಗ ಮಾತ್ರ ಜನರು ಚಿಕಿತ್ಸೆ ಪಡೆಯುತ್ತಾರೆ.…















