Author: admin

ಬೆಂಗಳೂರು ವಿಶ್ವವಿದ್ಯಾನಿಲಯವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಸ್ನಾತಕ ‌ಪದವಿ ತರಗತಿಗಳಿಗೆ ಭಾಷಾ ಪಠ್ಯಪುಸ್ತಕಗಳನ್ನು ಅಧ್ಯಯನ ಕೇಂದ್ರದ ನಿರ್ದೇಶಕರ ನೇತೃತ್ವದಲ್ಲಿ ಪಠ್ಯಪುಸ್ತಕ ಸಿದ್ದಪಡಿಸಿದ್ದು ಅದರಲ್ಲಿ ಬಿ.ಎಸ್. ಡಬ್ಲ್ಯೂ (ಬ್ಯಾಚುಲರ್ ಓಫ್ ಸೋಶಿಯಲ್ ವರ್ಕ್) ವಿದ್ಯಾರ್ಥಿಗಳ ನಾಲ್ಕನೇ ಸೆಮಿಸ್ಟರ್ ಗೆ ಸಮಾಜ ಕಾರ್ಯ ಕನ್ನಡ ಭಾಷಾ ಪಠ್ಯದಲ್ಲಿ ಲತಾ ಸಂತೋಷ್ ಶೆಟ್ಟಿ ಮುದ್ದುಮನೆ ಬರೆದ ಕುಂದಾಪುರದ ಕಂಪು ಶಿರ್ಷಿಕೆಯ ಲೇಖನ ಪಠ್ಯರೂಪದಲ್ಲಿ ಪಾಠ ಪುಸ್ತಕದಲ್ಲಿ ಸೇರ್ಪಡೆಗೊಂಡಿದೆ. ಕನ್ನಡ ಅಧ್ಯಯನ ಕೇಂದ್ರ, ಸ್ನಾತಕ ಅಧ್ಯಯನ ಮಂಡಳಿ ಮತ್ತು ಬೆಂಗಳೂರು ವಿಶ್ವವಿದ್ಯಾಲಯಗಳು ರಾಜ್ಯ ಪಠ್ಯ ಕ್ರಮಗಳ ಸಮಿತಿಯ ನಿರ್ದೇಶನಗಳ ಅನುಸಾರ ಈ ಪಠ್ಯ ಪುಸ್ತಕದ ಸಿದ್ದತೆ ನಡೆದಿದೆ. ಸಾಹಿತ್ಯ, ಸಂಸ್ಕ್ರತಿ ಮತ್ತು ರಾಷ್ಟ್ರೀಯ ಮನೋಭಾವವನ್ನು ಇಂದಿನ ಶಿಕ್ಷಣ ವ್ಯವಸ್ಥೆಯು ಕಟ್ಟಿಕೊಡಬೇಕೆಂಬ ‌ನಿಟ್ಟಿನಲ್ಲಿ ವಿಷಯಾದಾರಿತ ಪಠ್ಯ ಪುಸ್ತಕಗಳನ್ನು ತಯಾರಿಸಿದೆ. ಈ ಪಠ್ಯ ಪುಸ್ತಕದಲ್ಲಿ 1)ಮಾಧ್ಯಮ ವಿಭಾಗ, 2)ಪ್ರಾದೇಶಿಕತೆ ವಿಭಾಗ, 3) ಜೀವನ ಚರಿತ್ರೆ ವಿಭಾಗ, 4) ಸಂಕೀರ್ಣ ವಿಭಾಗ ಎಂಬ ಈ ನಾಲ್ಕು ವಿಭಾಗಗಳಿವೆ. ಪ್ರಾದೇಶಿಕತೆ…

Read More

ಮುಂಬಯಿಯ ಜನಪ್ರಿಯ ಸಂಘಟಕ, ಸಮಾಜ ಸೇವಕ ಶ್ರೀ ಗಿರೀಶ್ ಶೆಟ್ಟಿ ಇನ್ನ ಕಾಚೂರು ಬಂಟರ ಸಂಘ ಮುಂಬಯಿಯ ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವುದು ಹೆಮ್ಮೆಯ ವಿಷಯ ಹಾಗೂ ಇದೊಂದು ಅತ್ಯಂತ ಅರ್ಹ ಆಯ್ಕೆಯೂ ಹೌದು. ಇತ್ತೀಚಿನ ವರ್ಷಗಳಲ್ಲಿ ಉನ್ನತ ಶಿಕ್ಷಣ ಪಡೆದ ಯುವಕರು ತಮ್ಮ ಸ್ವಜಾತಿ ಬಾಂಧವರ ಸಾಮಾಜಿಕ ಕಾಳಜಿಯ ಬಂಟರ ಸಂಘ ಮುಂಬಯಿ ಇದರ ಸದಸ್ಯತ್ವ ಪಡೆದು ಕ್ರಮೇಣ ತಮ್ಮ ಸಂಘಟನಾ ಸಾಮರ್ಥ್ಯ, ಪ್ರತಿಭಾ ವಿಶೇಷತೆಗಳನ್ನು ಮೆರೆಯುತ್ತಿರುವುದು ನಿಜಕ್ಕೂ ಆರೋಗ್ಯಕರ ಬೆಳವಣಿಗೆ ಎನ್ನಬಹುದು. ಶ್ರೀ ಯುತ ಗಿರೀಶ್ ಶೆಟ್ಟರು ಬಿಕಾಂ ಜಿಡಿಸಿಎ ಎಲ್.ಎಲ್.ಬಿ ಪದವಿ ವಿಭೂಷಿತರು. ದಿವಂಗತ ರಾಘು ಕೆ ಶೆಟ್ಟಿ ಪಡುಕುಡೂರು ಹಾಗೂ ಶ್ರೀಮತಿ ಶಾರದಾ ರಾಘು ಶೆಟ್ಟಿ ದಂಪತಿಯ ಸುಪುತ್ರ ಗಿರೀಶ್ ವಿದ್ಯಾರ್ಥಿ ದೆಸೆಯಿಂದಲೇ ಪ್ರತಿಭಾವಂತ ಹಾಗೂ ಕ್ರಿಯಾಶೀಲ ಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದರು. ಆಟ ಪಾಠಗಳಲ್ಲಿ, ಇನ್ನಿತರ ಚಟುವಟಿಕೆಗಳಲ್ಲಿ ಮುಂದಿದ್ದು ತನ್ನ ಅಭ್ಯಾಸವನ್ನೂ ಸಮಾಂತರವಾಗಿ ಕಾಯ್ದುಕೊಂಡು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿ ಉನ್ನತ ಶಿಕ್ಷಣ ಪಡೆದು ಪ್ರತಿಷ್ಠಿತ…

Read More

“ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪೋಟಿ ಬೇಡ”. “ನನ್ನ ಜೀವನದ ಪ್ರತಿಯೊಂದು ಘಟ್ಟದಲ್ಲೂ ಪತ್ರಕರ್ತ ಮಿತ್ರರು ನನ್ನ ಜೊತೆ ನಿಂತು ಪ್ರೋತ್ಸಾಹ ಮಾಡಿರುವ ಕಾರಣ ದೇಶ ವಿದೇಶಗಳಲ್ಲಿ ಸರ್ಕಸ್ ಸಿನಿಮಾ ಜನರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ. ಚಿತ್ರದ ನಿರ್ಮಾಪಕರು ಹಾಕಿರುವ ಬಂಡವಾಳ ವಾಪಾಸ್ ಬಂದಿದೆ. ಇದಕ್ಕಾಗಿ ಪ್ರತಿಯೊಬ್ಬ ಪ್ರೇಕ್ಷಕನಿಗೂ ಧನ್ಯವಾದಗಳು. ಗಿರಿಗಿಟ್, ಗಮ್ಜಾಲ್, ಸರ್ಕಸ್ ಮೂರೂ ಚಿತ್ರಗಳಿಗೆ ಸಂಭಾಷಣೆ ಬರೆದಿರುವ ಪ್ರಸನ್ನ ಶೆಟ್ಟಿ ಬೈಲೂರು ಅವರು ನನ್ನ ಬೆನ್ನೆಲುಬು. ಅವರಿಗೆ ನಾನು ಥ್ಯಾಂಕ್ಸ್ ಹೇಳಬೇಕು” ಎಂದು ಸರ್ಕಸ್ ಚಿತ್ರ ನಿರ್ದೇಶಕ ರೂಪೇಶ್ ಶೆಟ್ಟಿ ಹೇಳಿದರು. ಅವರು ತಮ್ಮ ನಿರ್ದೇಶನ ಮತ್ತು ಅಭಿನಯದ “ಸರ್ಕಸ್” ತುಳು ಸಿನಿಮಾ ಜೂನ್ 23ರಂದು ವಿಶ್ವದಾದ್ಯಂತ…

Read More

ಮೂಡುಬಿದಿರೆ: ಆಳ್ವಾಸ್  ಸೆಂಟ್ರಲ್ ಸ್ಕೂಲ್‍ನ  9ನೇ ತರಗತಿಯ ವಿದ್ಯಾರ್ಥಿ ಮಾಸ್ಟರ್ ಅಮೋಘ್ ಎ  ಹೆಬ್ಬಾರ್ 2024ರ ಮಾರ್ಚ್  ತಿಂಗಳ ಕೊನೆಯಲ್ಲಿ ಉತ್ತರ ಆಫ್ರಿಕಾದ  ಟ್ಯುನೀಶಿಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ವಾರ್ಷಿಕ ಮೆಗಾ ಸೈನ್ಸ್ ಫೆಸ್ಟಿವಲ್, IFESTನಲ್ಲಿ “ಕೀಟ ಮತ್ತು ಕಳೆಗಳನ್ನು ನಿಯಂತ್ರಿಸಲು ನೈಸರ್ಗಿಕ ವಿಧಾನ”ಎಂಬ ಶೀರ್ಷಿಕೆಯ ಸಂಶೋಧನಾ ಯೋಜನೆಯನ್ನು ಪ್ರಸ್ತುತಪಡಿಸಲು ಅರ್ಹತೆ ಪಡೆದಿದ್ದಾರೆ. ಗುಜರಾತ್‍ನ ರಾಜಕೋಟ್‍ನಲ್ಲಿ ಜನವರಿ 26, 2024 ರಂದು ನಡೆದ ರಾಷ್ಟೀಯ ಮಟ್ಟದ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್  ಮೇಳದಲ್ಲಿ ಬೆಳ್ಳಿ ಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾದೇಶಿಕ ಮಟ್ಟದಲ್ಲಿ ಚಿನ್ನದ ಪದಕ ಗಳಿಸಿದ್ದ ಅಮೋಘ್, ಇತ್ತೀಚಿಗೆ ಕಲ್ಬುರ್ಗಿಯಲ್ಲಿ ನಡೆದ  ರಾಜ್ಯ ಮಟ್ಟದ  ರಾಷ್ಟೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್ ಮೇಳದಲ್ಲಿ ತಮ್ಮ ಸಂಶೋಧನಾ ಯೋಜನೆಯನ್ನು ಪ್ರದರ್ಶಿಸಿದ್ದರು. ಆಳ್ವಾಸ್ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಎಚ್ ಅಜಿತ್ ಹೆಬ್ಬಾರ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಯ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್…

Read More

ಒಂದು ಮನೆಯಲ್ಲಿನ ನಾಯಿ ಮತ್ತು ಬೆಕ್ಕು ಸ್ನೇಹದಲ್ಲಿರುವುದನ್ನು ನಾವು ನೋಡಿದ್ದೇವೆ. ಒಂದು ಕೊಟ್ಟಿಗೆಯಲ್ಲಿನ ಹಸುಗಳು ಮತ್ತು ಮೇಕೆಗಳು ಸಹಬಾಳ್ವೆಯಿಂದ ಬದುಕುವುದನ್ನು ಗಮನಿಸಿದ್ದೇವೆ. ಆನೆ, ಕುದುರೆ ಮುಂತಾದ ಪ್ರಾಣಿಗಳು ತನ್ನ ಮಾಲಕನ ಜತೆಗೆ ಸಹಕಾರದಿಂದ ಇರುವುದನ್ನು ನಾವು ಕಾಣುತ್ತೇವೆ. ಆಲದ ಮರವು ನೂರಾರು ಪ್ರಾಣಿಗಳಿಗೆ ನೆರಳನ್ನು ನೀಡುತ್ತದೆ. ಮರದಲ್ಲಿ ಹತ್ತಾರು ಪಕ್ಷಿಗಳು ಆಶ್ರಯ ಪಡೆಯುತ್ತವೆ. ಸಸ್ಯಗಳು ಪ್ರಾಣಿಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಕಾರ ನೀಡುತ್ತಾ ಬಂದಿವೆ. ಉಸಿರಾಡಲು ಆಮ್ಲಜನಕ, ತಿನ್ನಲು ಆಹಾರ ನೀಡುತ್ತಾ ಬಂದಿವೆ. ಇಲ್ಲೆಲ್ಲೂ ಸ್ವಾರ್ಥವೆಂಬುದಿಲ್ಲ. ಆದರೆ ಬುದ್ಧಿಜೀವಿಯಾದ ಮನುಷ್ಯ ಮನುಷ್ಯರ ನಡುವೆ ಸಹಕಾರದ ಕೊರತೆ ಏಕೆ ಎದ್ದು ಕಾಣುತ್ತಿದೆ? ಹಾಗಾದರೆ ಸಹಬಾಳ್ವೆಯಿಂದ ಜೀವನ ನಡೆಸಲು ಮನುಷ್ಯರಿಗೆ ಸಾಧ್ಯವಿಲ್ಲವೇ?… ಖಂಡಿತ ಸಾಧ್ಯವಿದೆ. ನಾನು, ನನ್ನದು ಎಂಬ ಸ್ವಾರ್ಥ ಮನೋಭಾವ, ನಾನೇ ಎಲ್ಲ, ನನ್ನಿಂದಲೇ ಎಲ್ಲ, ನಾನು ಎಣಿಸಿದಂತೆ ನಡೆಯಬೇಕು ಎಂಬ ದುರಹಂಕಾರವು ಮನುಷ್ಯನ ಬುದ್ಧಿಯನ್ನು ವಿಕಾರಗೊಳಿಸುತ್ತದೆ. ಕೂಡಿ ಬಾಳಿದರೆ ಸ್ವರ್ಗ ಸುಖ ಎಂಬ ಮಾತಿನಂತೆ ಮನೆ ಮಂದಿಯೆಲ್ಲ ಒಗ್ಗಟ್ಟಿನಿಂದ ಬಾಳಿದರೆ ಖಂಡಿತ…

Read More

ಸಂಘಟಕ, ಸಮಾಜ ಸೇವಕ, ಯುವ ಉದ್ಯಮಿ ರಾಕೇಶ್ ಶೆಟ್ಟಿ ಬೆಳ್ಳಾರೆ ಅವರು ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿರುವ ರಾಕೇಶ್ ಶೆಟ್ಟಿ ಅವರು ಅತಿಥಿ ಎಂಬ ಸಸ್ಯಾಹಾರಿ ಹೋಟೆಲ್ ನ ಮಾಲಕರಾಗಿದ್ದಾರೆ. ತನ್ನ ಸರಳ ಶಿಸ್ತಿನ ಗುಣ ನಡತೆಯಿಂದ ಎಲ್ಲರೊಂದಿಗೆ ಬೆರೆತು ಸುಖ ದುಃಖ ಗಳಿಗೆ ಸದಾ ಬೆರೆಯುವ ಶ್ರೀಯುತರ ಸಾಧನೆ, ಸಮಾಜಸೇವೆಗೆ ಧರ್ಮಪತ್ನಿ ಪೆಲತ್ತೂರು ಸುನೀತಾ ಶೆಟ್ಟಿ ಹಾಗೂ ಪುತ್ರಿ ಶ್ರೀಖಾ, ಪುತ್ರ ಕವಿನ್ ರವರು ಪ್ರೋತ್ಸಾಹಿಸುತ್ತಾ ಬರುತ್ತಿದ್ದಾರೆ.

Read More

ಕರ್ಮ ಕಾರ್ಯ ಮಾಡುವಾಗ ನಾನಲ್ಲ, ಸಮಾಜಕ್ಕಾಗಿ ಮಾಡುವವನು ಎಂಬ ಆತ್ಮ ಸ್ಮರಣೆ ನಮ್ಮಲ್ಲಿರಬೇಕು. ಕರ್ಮಫಲವನ್ನು ಅನುಭವಿಸುವವನು ಕೂಡಾ ನಾನಲ್ಲ. ಸಮಾಜಕ್ಕಾಗಿ ಮಾಡಿದೆ ಎಂಬ ಹೆಮ್ಮೆ ನಮ್ಮಲ್ಲಿರಲಿ. ಯಾವುದೇ ಕಾರ್ಯ ಇರಲಿ ಧನಾತ್ಮಕವಾಗಿ ನಡೆದಾಗ ಅದಕ್ಕೆ ಫಲ ಸಿಗುವುದು ಅದು ಸೃಷ್ಠಿಯ ನಿಯಮ. ಒಳ್ಳೆಯ ಕಾರ್ಯಕ್ಕೆ ಉತ್ತಮ ಫಲ ಸಿಕ್ಕಿಯೇ ಸಿಗುತ್ತದೆ. ನಮ್ಮ ಶ್ರೀಮಂತ ಸಂಸ್ಕ್ರತಿಗೆ ತಕ್ಕಂತೆ ಕೈಗೊಂಡ ಕಾರ್ಯ ಪರಿಪೂರ್ಣಗೊಳ್ಳುವ ತನಕ ವಿರಮಿಸದೆ ಸಮಾಜಕ್ಕಾಗಿ ಅರ್ಪಣೆ ಮಾಡುವ ಛಲವೊಂದಿದ್ದರೆ ಅದು ಬಂಟರಲ್ಲಿ ಕಾಣಬಹುದು. ನಿರ್ಮಲ ಮನಸ್ಸಿನ ಸೇವೆಯಿಂದ ಚಿತ್ತ ಶುದ್ದಿಯನ್ನು ಪಡೆಯಲು ಸಾದ್ಯ. ನಮ್ಮಲ್ಲಿರುವ ವಿವೇಕ ಚಿಂತನೆಯಿಂದ ಯಾವುದೇ ಪ್ರತ್ಯಾಪೇಕ್ಷೆ ಇಲ್ಲದೇ ಮಾಡುವ ಕಾರ್ಯವೇ ಶ್ರೇಷ್ಠವಾದುದು ಎಂದು ಮಣಿಪಾಲ್ ಹಾಸ್ಪಿಟಲ್ ನ ಕಾರ್ಯಾಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ನುಡಿದರು. ಬಂಟರ ಸಂಘ ಪುಣೆ ಇದರ ವಾರ್ಷಿಕೊತ್ಸವ ಸ್ನೇಹ ಸಮ್ಮಿಲನ ಸಮಾರಂಭವು ಜ 26ರಂದು ಬಾಣೇರ್ ನಲ್ಲಿರುವ ಪುಣೆ ಬಂಟರ ಭವನದ ಓಣಿಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದ ಲತಾ ಸುಧೀರ್ ಶೆಟ್ಟಿ…

Read More

ವಿದ್ಯಾಗಿರಿ (ಮೂಡುಬಿದಿರೆ): ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯ ಶ್ಲಾಘಿಸಿದರು. ಇಲ್ಲಿನ ವಿದ್ಯಾಗಿರಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 29ನೇ ಆಳ್ವಾಸ್ ವಿರಾಸತ್ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ನಾಲ್ಕು ದಿನಗಳ ಪ್ರದರ್ಶನ ಹಾಗೂ ಮಹಾಮೇಳವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ವಿರಾಸತ್ ಇಂದು ರಾಜ್ಯದಾದ್ಯಂತ ಮನೆಮಾತಾಗಿದೆ. ಡಾ.ಎಂ. ಮೋಹನ ಆಳ್ವ ಅವರು ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದ ಅದ್ವಿತೀಯ ನಾಯಕರಾಗಿದ್ದಾರೆ. ಪ್ರತಿ ಮನುಷ್ಯನನ್ನು ಮನುಷ್ಯನನ್ನಾಗಿ ನೋಡುವ ಅವರ ಗುಣ ಹಾಗೂ ಶೈಕ್ಷಣಿಕ ಬದಲಾವಣೆಗೆ ತ್ವರಿತವಾಗಿ ಸ್ಪಂದಿಸುವ ರೀತಿ ಅನನ್ಯ ಎಂದರು. ಸ್ಕೌಟ್ಸ್ ಗೈಡ್ಸ್ ಒಳ್ಳೆಯ ವ್ಯಕ್ತಿಗಳನ್ನು ರೂಪಿಸುವ ಅಂತರ ರಾಷ್ಟ್ರೀಯ ಚಳವಳಿ, 200 ದೇಶಗಳಲ್ಲಿದೆ.…

Read More

ಮೀರಾ ಭಾಯಂದರ್ ಪರಿಸರದಲ್ಲಿ ಸಾಮಾಜಿಕ, ಧಾರ್ಮಿಕ ಸೇವೆಗಳನ್ನು ಮಾಡುತ್ತಾ ಸಂಘಟಕರಾಗಿ, ಬಂಟರ ಸಂಘದ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯದರ್ಶಿಯಾಗಿ, ನವತರುಣ ಮಿತ್ರ ಮಂಡಳಿಯ ಗೌ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿರುವ ಬಳ್ಕುಂಜೆ ಗುತ್ತು ಗುತ್ತಿನಾರ್ ರವೀಂದ್ರ ಶೆಟ್ಟಿ (ಕೊಟ್ರಪಾಡಿ) ಅವರನ್ನು ಭಾರತೀಯ ಜನತಾ ಪಕ್ಷದ ದಕ್ಷಿಣ ಭಾರತೀಯ ಘಟಕ ಮೀರಾ ಭಾಯಂದರ್ ನ ಅಧ್ಯಕ್ಷರಾಗಿ ಮಹಾರಾಷ್ಟ್ರ ಬಿಜೆಪಿ ಸಮಿತಿಯು ಆಯ್ಕೆ ಮಾಡಿದೆ. ಆಯ್ಕೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಬಿಜೆಪಿ ಸಮಿತಿಯ ಪದಾಧಿಕಾರಿಗಳು, ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್, ಮೀರಾ ಭಾಯಂದರ್ ನ ಮಾಜಿ ಬಿಜೆಪಿ ಎಂಎಲ್ ಎ ನರೇಂದ್ರ ಮೆಹ್ತಾ, ಮೀರಾ ಭಾಯಂದರ್ ನ ಬಿಜೆಪಿ ಅಧ್ಯಕ್ಷ ಕಿಶೋರ್ ಶರ್ಮಾ, ಮೀರಾ ಭಾಯಂದರ್ ನ ನಗರ ಸೇವಕ ಅರವಿಂದ ಆನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ನರೇಂದ್ರ ಮೆಹ್ತಾ ಅವರ ಶಿಫಾರಸ್ಸಿನ ಮೇಲೆ ರವೀಂದ್ರ ಶೆಟ್ಟಿ ಕೊಟ್ರಪಾಡಿ ಅವರು ದ. ಭಾರತೀಯ ಘಟಕದ ಅಧ್ಯಕ್ಷರಾಗಿ…

Read More

ಪನ್ವೇಲ್ ನ ಪ್ರಸಿದ್ಧ ಕ್ರೀಡಾ ಸಂಸ್ಥೆ ಕರಾವಳಿ ಸ್ಪೋರ್ಟ್ಸ್ ಮತ್ತು ಎಜುಕೇಶನಲ್ ಟ್ರಸ್ಟ್ (ರಿ.) ಇದರ 12 ನೇ ವಾರ್ಷಿಕೋತ್ಸವ ಸಮಾರಂಭವು ನ್ಯೂ ಪನ್ವೇಲ್ ಪಶ್ಚಿಮ ಖಾಂದ ಕಾಲೊನಿಯ ಬಿಜೆಪಿ ಜನ ಸಂಪರ್ಕ ಕಾರ್ಯಾಲಯದ ಸಭಾಂಗಣದಲ್ಲಿ ಧಾರ್ಮಿಕ ಹಾಗೂ ಸನ್ಮಾನ ಕಾರ್ಯಕ್ರಮದೊಂದಿಗೆ ಅದ್ದೂರಿಯಾಗಿ ಸಂಪನ್ನಗೊಂಡಿತು. ಅದೇ ದಿನ ಪ್ರಧಾನಿ ನರೇಂದ್ರ ಮೋದಿಯವರಿಂದ ಅಯೋಧ್ಯೆಯಲ್ಲಿ ರಾಮಮಂದಿರದ ಮಹಾ ಉದ್ಘಾಟನಾ ಕಾರ್ಯಕ್ರಮವು ಜರಗಿದ ಹಿನ್ನಲೆಯಲ್ಲಿ ಕರಾವಳಿ ನಿರ್ವಹಣಾ ತಂಡವು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳ ಬದಲಿಗೆ ಸಂಪೂರ್ಣವಾಗಿ ಧಾರ್ಮಿಕ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಿತ್ತು. ಕರಾವಳಿ ಸ್ಪೋರ್ಟ್ಸ್ ಮತ್ತು ಎಜುಕೇಶನಲ್ ಟ್ರಸ್ಟ್ ನ ಗೌರವಾಧ್ಯಕ್ಷ ಮಹಾಬಲ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕಾಳಿಕಾಂಬಾ ವಿನಾಯಕ ಟ್ರಸ್ಟ್ (ರಿ.) ಅಧ್ಯಕ್ಷ ಸಿಎ ಶ್ರೀಧರ ಆಚಾರ್ಯ ಮುಖ್ಯ ಅತಿಥಿಯಾಗಿ ಹಾಗೂ ಡಾ. ಆರತಿ ಮಲಿಕ್, ಎಂ.ಡಿ., (ಪ್ಯಾಥೋ), ಆರತಿ ಮಲಿಕ್ ಲ್ಯಾಬ್, ನ್ಯೂ ಪನ್ವೇಲ್ ಮತ್ತು ಡಾ. ಸ್ವಾತಿ ಲಿಖಿತೆ, ಎಂಬಿಬಿಎಸ್, ಡಿಸಿಎಚ್ (ಲಿಖಿತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ,…

Read More