Author: admin

ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿ ಜತೆಗೂಡಿ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಿರ್ಣಾಯಕ ಘಟ್ಟದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿಯುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ವಹಿಸಿದ್ದ ಸೂರ್ಯಕುಮಾರ್ ಯಾದವ್ ಇದೀಗ ಉಡುಪಿಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ. ಕರ್ನಾಟಕದ ಅಳಿಯ ಸೂರ್ಯಕುಮಾರ್ ಯಾದವ್‌, ಇಲ್ಲಿನ ಕಾಪು ಶ್ರೀ ಮಾರಿಗುಡಿಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆಹೌದು, ಸೂರ್ಯಕುಮಾರ್ ಯಾದವ್ ಮಂಗಳೂರು ಮೂಲದ ದೇವಿಶಾ ಶೆಟ್ಟಿಯನ್ನು ಮದುವೆಯಾಗಿದ್ದು, ಇದೀಗ ಟಿ20 ವಿಶ್ವಕಪ್ ಗೆಲುವಿನ ಬಳಿಕ ರಾಜ್ಯದ ಉಡುಪಿಗೆ ಭೇಟಿ ನೀಡಿದ್ದಾರೆ. ಇಲ್ಲಿನ ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಜತೆ ಆಗಮಿಸಿ, ಕಾಪು ಮಾರಿಯಮ್ಮನ ದರ್ಶನ ಪಡೆದರು. ಸೂರ್ಯಕುಮಾರ್ ಯಾದವ್ ದಂಪತಿ ದೇವಸ್ಥಾನಕ್ಕೆ ಭೇಟಿ ನೀಡುವಾಗ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ಉಡುಪಿಯ ಕಾಪು…

Read More

ಭಾರತೀಯ ಆಚಾರ ವಿಚಾರ ಸಂಸ್ಕಾರ ಸಂಸ್ಕೃತಿಗಳು ಅಳಿವಿನಂಚಿನಲ್ಲಿ ಸಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ರಾಷ್ಟ್ರ ವ್ಯಾಪಿಯಾಗಿ ಅವುಗಳನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಪ್ರತಿಯೊಬ್ಬ ಪ್ರಜೆಯೂ ಕೈಗೊಂಡಾಗ ಖಂಡಿತ ಮುಂದಿನ ದಿನಗಳಲ್ಲಿ ಕನಿಷ್ಠ ಪಕ್ಷ ನಮ್ಮ ನಮ್ಮ ಪೀಳಿಗೆಗಳು ಕೈ ಜೋಡಿಸಬಲ್ಲರು. ಇಂದಿನ ಮಕ್ಕಳೇ ಮುಂದಿನ ಜನಾಂಗ ಎನ್ನುವ ವ್ಯಾಖ್ಯಾನದಂತೆ ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಗಳಿಗೆ ವೇದಿಕೆಗಳನ್ನು ಒದಗಿಸಿಕೊಟ್ಟಾಗ ಶಿಕ್ಷಣದೊಂದಿಗೆ ಸಾಮಾಜಿಕ ಬದ್ಧತೆ, ಧಾರ್ಮಿಕ ನಂಬಿಕೆ, ಆಧ್ಯಾತ್ಮಿಕ ಚಿಂತನೆ, ಆಚಾರ ವಿಚಾರಗಳ ಜ್ಞಾನ ವೃದ್ಧಿಯಾಗಲು ಅವಕಾಶವಾಗಬಹುದು ಎಂದು ಶ್ರೀ ದೇವಿ ಯಕ್ಷಕಲಾ ನಿಲಯ ನಾಲಾಸೋಪಾರ ವಿರಾರ್ ಇದರ ಅಧ್ಯಕ್ಷರಾದ ಇನ್ನಂಜೆ ಶಶಿಧರ್ ಕೆ ಶೆಟ್ಟಿ ಅವರು “ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ ಮಹಾತ್ಮೆ” ಯಕ್ಷಗಾನ ಮುಹೂರ್ತ, ಭರತನಾಟ್ಯ, ಕನ್ನಡ ಕಲಿಕಾ ಕೇಂದ್ರ, ಪುಟ್ಬಾಲ್ ಮೊದಲಾದ ತರಬೇತಿ ಕೇಂದ್ರಗಳನ್ನು “ರಿಜೆನ್ಸಿ ಬ್ಯಾಂಕ್ವಿಟ್ ಹಾಲ್ ನಾಲಾಸೋಪಾರ” ಇಲ್ಲಿ 2024 -25 ಸಾಲಿನ ತರಬೇತಿಗಳ ಪ್ರಾರಂಭಿಸುತ್ತಾ ನುಡಿಗಳನ್ನಾಡಿದರು. ಯಕ್ಷಗಾನ ಗುರುಗಳಾದ ನಾಗೇಶ್ ಪೊಳಲಿಯವರು ಮಾತನಾಡುತ್ತಾ, ಸ್ವಾರ್ಥ ಪ್ರಪಂಚದಲ್ಲಿ ನಿಸ್ವಾರ್ಥ ಪ್ರೀತಿ ಸಿಗುವುದು ಮನಃಪೂರ್ವಕವಾಗಿ…

Read More

ಸಾಹಿತ್ಯ ಕ್ಷೇತ್ರ ಗೊಂದಲಮಯವಾಗಿದೆ. ಎಡ ಬಲ ಪಂಥದಿಂದಾಗಿ ಸಾಹಿತ್ಯ ಕ್ಷೇತ್ರ ಸೊರಗುತ್ತಿದೆ. ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ಮುಖ್ಯವಾಗುತ್ತಿದೆ. ಅರ್ಹತೆಗೆ ಪುರಸ್ಕಾರ ಸಿಗುವ ಬದಲು ಪಂಥದ ಮೇಲೆ ನಿರ್ಧರಿತವಾಗುತ್ತದೆ. ಇದರಿಂದಾಗಿ ಹೊಸ ಸಾಹಿತಿಗಳಲ್ಲಿ ಗೊಂದಲ ಮೂಡುತ್ತಿದೆ ಎಂದು ಬರಹಗಾರ್ತಿ ಡಾ| ಪಾರ್ವತಿ ಜಿ. ಹೇಳಿದರು. ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ವತಿಯಿಂದ ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆದ ವೀಣಾ ಟಿ. ಶೆಟ್ಟಿಯವರ ‘ಗೋಡೆಯ ಮೇಲಿನ ಚಿತ್ತಾರ’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಭಾವನೆ ಹಾಗೂ ಸಂವೇದನಶೀಲತೆಗೆ ‘ಗೋಡೆಯ ಮೇಲಿನ ಚಿತ್ತಾರ’ ವೇದಿಕೆಯಾಗಿದೆ. ನಿಜ ಜೀವನ ಹಾಗೂ ಪ್ರಕೃತಿಯೊಂದಿಗಿನ ಸಂಬಂಧ ತೆರೆದುಕೊಂಡಿದೆ. ಕೃತಿಯಲ್ಲಿ ಲೇಖಕಿಯ ವ್ಯಕ್ತಿತ್ವಕ್ಕೆ ಅಭಿವ್ಯಕ್ತಿ ಸಿಕ್ಕಿದೆ. ಬಾಲ್ಯದ ನೆನಪುಗಳನ್ನು ಮೆಲುಕು ಹಾಕಲು ಕಾರಣವಾಗಿದೆ. ಸರಳವಾದ ಲಲಿತವಾದ, ಶಕ್ತಿಯುತವಾದ ಲೇಖನಗಳಿದ್ದು, ಓದುಗರನ್ನು ಹಿಡಿದಿಟ್ಟುಕೊಳ್ಳುತ್ತದೆ. ಇಂತಹ ಮತ್ತಷ್ಟು ಸಾಹಿತ್ಯ ಕೃಷಿಯ ಅಗತ್ಯವಿದೆ ಎಂದರು. ಚಿಂತಕ ಡಾ| ಅರುಣ್ ಉಳ್ಳಾಲ್ ಅವರು ಕೃತಿ ಪರಿಚಯ ಮಾಡಿ ಮಾತನಾಡಿ, ಮುಖಪುಟದಲ್ಲೇ ಗೋಡೆಯ ಚಿತ್ತಾರ ಹೊಂದಿದ್ದು, ವಿವಿಧ ಆಯಾಮಗಳು,…

Read More

‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯ ವತಿಯಿಂದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭವು ನಗರದ ಬಲ್ಮಠ ಹೋಟೆಲ್ ಕುಡ್ಲ ಪೆವಿಲಿಯನ್ ನಲ್ಲಿ ಜುಲೈ 11 ರಂದು ಗುರುವಾರ ಜರಗಲಿದೆ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಯ ಸಂಸ್ಥೆಯಿಂದ 2024 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಸ್ವೀಕರಿಸಿರುವ ಯಕ್ಷಾಂಗಣದ ಗೌರವ ಉಪಾಧ್ಯಕ್ಷ, ಉದ್ಯಮಿ ಹಾಗೂ ಧಾರ್ಮಿಕ ಸೇವಾಕರ್ತ ಕೆ.ಕೆ.ಶೆಟ್ಟಿ ಅಹ್ಮದ್ ನಗರ, ಸಾಮಾಜಿಕ ಮತ್ತು ಶೈಕ್ಷಣಿಕ ಧುರೀಣ ರವೀಂದ್ರ ಶೆಟ್ಟಿ ಉಳಿದೊಟ್ಟು ಹಾಗೂ ಯಕ್ಷಾಂಗಣದ ಉಪಾಧ್ಯಕ್ಷರಾದ ನಿವೃತ್ತ ಬ್ಯಾಂಕ್ ಅಧಿಕಾರಿ ಮತ್ತು ಸಮಾಜ ಸೇವಾಸಕ್ತ ಲ|ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಗುವುದು. ಯಕ್ಷಾಂಗಣದ ಗೌರವಾಧ್ಯಕ್ಷ ಹಾಗೂ ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಎ ಜೆ. ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸುವರು. ಪ್ರಧಾನ…

Read More

ಹೌದು ಇದು ಅಲ್ಲ ಎಂದು ನೀವು ಯಾರೂ ಹೇಳುವ ಹಾಗಿಲ್ಲ. ಹಳ್ಳಿ ಡೆಲ್ಲಿ ಎಲ್ಲೆಲ್ಲಿ, ಭಿಕ್ಷುಕ, ಕ್ಷೌರಿಕ, ನೇತಾರ, ಸರದಾರ, ಸಂತ, ಸಾಧು, ಸನ್ಯಾಸಿ, ಮಾಲೀಕ, ಕಾವಲುಗಾರ, ಕೂಲಿ ಕಾರ್ಮಿಕ, ಬಡವ ಬಲ್ಲಿದ, ಹೆಣ್ಣು, ಗಂಡು ಈ ಯಾವ ಭೇದವೂ ಇರದೇ ಮನೆಯಲ್ಲಿ ಕಡಿಮೆ ಪಕ್ಷ ಒಂದು, ಇನ್ನು ಪ್ರತಿಯೊಬ್ಬನಲ್ಲೂ ಒಂದೊಂದು, ಇನ್ನೂ ಮುಂದುವರಿದ ಒಬ್ಬೊಬ್ಬನಲ್ಲಿ ಮೂರು ನಾಲ್ಕು ಮೊಬೈಲ್ ಇರುವವರೂ ಇದ್ದಾರೆ. ಒಟ್ಟಾರೆ ಹೇಳುವುದಾದರೆ ನಮ್ಮ ದೇಹದ ಒಂದು ಅವಿಭಾಜ್ಯ ಅಂಗದಂತಿದೆ. ಹಾಗಾಗಿಯೇ ಅಂದೆ ಇದೊಂದು ನಮ್ಮ ದೇಹದ ಅಂಗ ಈ ಮೊಬೈಲ್ ಎಂಬ ಕರ್ಣ ರಾಕ್ಷಸ ಇದು ಪೂಜೆಯ ಭಟ್ರ ಆರತಿ ತಟ್ಟೆಯ ಅಡಿಯಲ್ಲಿ, ಸೊಂಟದಲ್ಲಿ, ದರ್ಶನ ಪಾತ್ರಿಯ ಕಚ್ಚೆಯಲ್ಲಿ, ತೆಂಗಿನ ಮರ ಏರಿದವನ ಚಡ್ಡಿಯಲ್ಲಿ, ಮೀನು ವ್ಯಾಪಾರಿಯ ಬುಟ್ಟಿಯಲ್ಲಿ, ಮೇಸ್ತ್ರಿಯ ಸಿಮೆಂಟ್ ಚಟ್ಟಿಯಲ್ಲಿ, ಮಲ್ಲಿಗೆಯ ಅಟ್ಟಿಯಲ್ಲಿ ಎಲ್ಲೆಂದರಲ್ಲಿ ಗುಂಯ್ ಗುಡುತ್ತಿರುತ್ತದೆ. ಹಾಗಾಗಿ ಮುಂಚೆಯೆಲ್ಲಾ ಕೈಯೋ ಕಾಲೋ ಮುರಿದರೆ ಅಂಗ ಊನ ಎನ್ನುವರು. ಆದರೆ ಈಗ ಮೊಬೈಲ್ ಇಲ್ಲದ…

Read More

ಯಕ್ಷಧ್ರುವ ಫೌಂಡೇಶನ್ ( ರಿ.) ಮಂಗಳೂರು ವತಿಯಿಂದ ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ ಯಕ್ಷ ಶಿಕ್ಷಣ ತರಗತಿಯನ್ನು ಯಕ್ಷ ಧ್ರುವ ಫೌಂಡೇಶನ್ ಮುಡಿಪು ಘಟಕದ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಯಕ್ಷ ಧ್ರುವ ಫೌಂಡೇಶನ್ ಮಂಗಳೂರು ಇದರ ಸಂಘಟನ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಯಕ್ಷಗಾನ ಗುರುಗಳಾದ ಅಶ್ವಥ್ ಮಂಜನಾಡಿ, ಶಾಲಾ ಸಂಚಾಲಕರಾದ ಕಡೆಂಜ ಸೋಮಶೇಖರ್ ಚೌಟ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ರಾಧಾಕೃಷ್ಣ ರೈ, ಹಿರಿಯ ಶಿಕ್ಷಕಿ ಶ್ರೀಮತಿ ಮೋಹಿನಿಯವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಸಂಸ್ಥೆಯ ಹಳೇ ವಿದ್ಯಾರ್ಥಿಯಾದ ಪ್ರದೀಪ್ ಆಳ್ವ, ಸಾಮಾಜಿಕ, ಧಾರ್ಮಿಕ ಮುಂದಾಳು ಹಾಗು ಸಂಸ್ಥೆಯ ಹಳೆ ವಿದ್ಯಾರ್ಥಿಯಾದ ಸಂತೋಷ್ ಕುಮಾರ್ ರೈ ಬೋಳಿಯಾರು, ಯಕ್ಷಗಾನ ಗುರುಗಳಾದ ಅಶ್ವಥ್ ಮಂಜನಾಡಿ ಇವರುಗಳನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ದೈಹಿಕ ಶಿಕ್ಷಣ…

Read More

ಮುಂದಿನ ದಿನಗಳಲ್ಲಿ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಜೀರ್ಣೋದ್ದಾರದ ಕಾರ್ಯವನ್ನು ಭಕ್ತಾಭಿಮಾನಿಗಳ ಸಹಕಾರದೊಂದಿಗೆ ವಿನೂತನ ಶೈಲಿಯಲ್ಲಿ ಲೋಕಕ್ಕೆ ಮಾದರಿಯಾಗಿ ನಿರ್ವಹಿಸಿ ಸಾಧಿಸಲಿರುವುದಾಗಿ ಬೆಂಗಳೂರಿನ ಎಂಆರ್ ಜಿ ಗ್ರೂಪ್ ನ ಸಂಸ್ಥಾಪಕ, ಆಡಳಿತ ನಿರ್ದೇಶಕ ಡಾ| ಕೆ.ಪ್ರಕಾಶ್ ಶೆಟ್ಟಿ ಹೇಳಿದರು. ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಾಂಗಣದಲ್ಲಿ ಮಂಗಳೂರು ವಿವಿ ಪ್ರದಾನಿಸಿದ ಗೌರವ ಡಾಕ್ಟರೇಟ್ ಗಾಗಿ ದೇವಳದ ಜೀರ್ಣೋದ್ದಾರ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರಿಂದ ಆಯೋಜಿಸಲ್ಪಟ್ಟ ‘ಪ್ರಕಾಶಾಭಿನಂದನೆ’ ಸ್ವೀಕರಿಸಿ ಮಾತನಾಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೇಗುಲದ ಅರ್ಚಕ ಶ್ರೀ ಹರಿ ಭಟ್ ಶುಭಾಶಂಸನೆ ನೀಡಿದರು. ಡಾ. ರಾಘವೇಂದ್ರ ರಾವ್ ಅಭಿನಂದನಾ ಭಾಷಣ ಮಾಡಿದರು. ಆಶಾ ಪ್ರಕಾಶ್ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಪಿ. ರಾಘವೇಂದ್ರ ನಾವಡ, ಪಡುಬಿದ್ರಿ ಗ್ರಾ.ಪಂ. ಅಧಕ್ಷೆ ಶಶಿಕಲಾ ವೈ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಕಮಿಷನರ್ ಪ್ರಶಾಂತ್ ಕುಮಾರ್ ಶೆಟ್ಟಿ, ದೇವಸ್ಥಾನದ ಅರ್ಚಕರಾದ ಗುರುರಾಜ ಭಟ್ ವೈ. ಮತ್ತು…

Read More

ಏರ್ ಪೋರ್ಟ್ಸ್ ಎವಿಯೇಶನ್ ಎಂಪ್ಲಾಯೀಸ್ ಯೂನಿಯನ್ (ಎಎಇಯು) ಮುಂಬಯಿ ಇದರ ಸಂಘಟನಾ ಕಾರ್ಯದರ್ಶಿಯಾಗಿ ಕಳತ್ತೂರು ವಿಶ್ವನಾಥ್ ಜಗನ್ನಾಥ್ ಶೆಟ್ಟಿ ಅವರನ್ನು ನೇಮಿಸಲು ಕೋರ್ ಕೆಮಿಟಿಯು ನಿರ್ಧರಿಸಿದೆ. ಈ ನೇಮಕಾತಿಯು ಎಎಇಯು ಅವಧಿಯದ್ದಾಗಿರುತ್ತದೆ. ನಾವು ಈ ವಿಷಯವನ್ನು ತಿಳಿಸಲು ತುಂಬಾ ಸಂತೋಷಪಡುತ್ತಿದ್ದೇವೆ. ನೀವು ನಿಮ್ಮ ಕೌಶಲ್ಯ ಮತ್ತು ಅನುಭವದೊಂದಿಗೆ, ನೀವು ಅತ್ಯುತ್ತಮ ಸೇವೆಯನ್ನು ಸಲಿಸುತ್ತೀರಿ ಮತ್ತು ನಮ್ಮ ಎಎಇಯು ಸಂಸ್ಥೆಯಲ್ಲಿ ಸಂಘಟನಾ ಕಾರ್ಯದರ್ಶಿಯಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತೀರಿ ಎಂದು ನಾವು ನಂಬುತ್ತೇವೆ. ಸಂಘಟನಾ ಕಾರ್ಯದರ್ಶಿಯಾಗಿ ನಾವು ನಿಮ್ಮನ್ನು ಎಎಇಯು ಕುಟುಂಬದಲ್ಲಿ ಸ್ವಾಗತಿಸುತ್ತೇವೆ ಮತ್ತು ನಿಮ್ಮ ಮುಂದಿನ ಪ್ರಯತ್ನಕ್ಕಾಗಿ ನಿಮಗೆ ಶುಭ ಹಾರೈಸುತ್ತೇವೆ ಎಂದು ಸಂಸ್ಥೆಯ ಅಖಿಲ ಭಾರತ ಅಧ್ಯಕ್ಷರಾದ ನಿತಿನ್ ಜಾಧವ್ ಹಾಗೂ ಪ್ರಧಾನ ಕಾರ್ಯದರ್ಶಿ ಸರ್ವಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿದ್ಯಾಗಿರಿ (ಮೂಡುಬಿದಿರೆ): ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ “ಅಂಕುರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ಸದಾ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಒತ್ತು ನೀಡಿದೆ. ಸಾಂಸ್ಕøತಿಕ, ಕ್ರೀಡಾ, ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ದತ್ತು ಸ್ವೀಕಾರದ ಅಡಿಯಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತಿದೆ. ಸಂಸ್ಥೆಯು ಈ ಹಿಂದೆ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಸಾಗಬೇಕಾದ ಅನಿವಾರ್ಯತೆ ಇತ್ತು. ಆಗ ಕೆಲವು ಸಮಸ್ಯೆಗಳು ಎದುರಾಗುತ್ತಿದ್ದವು. ಆದರೆ ಇದೀಗ ಸ್ವಾಯತ್ತ ಸ್ಥಾನಮಾನದೊಂದಿಗೆ ಗುಣಮಟ್ಟದ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷೆ, ಫಲಿತಾಂಶವನ್ನು…

Read More

ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಜುಲೈ ಕೊನೆಯ ವಾರ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಉಳ್ಳಾಲ ತಾಲೂಕು ಮಟ್ಟದ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದಲ್ಲಿ ‘ಮಕ್ಕಳ ಅಬ್ಬಕ್ಕ’ ಕಾರ್ಯಕ್ರಮದ ಬಗ್ಗೆ ನಡೆಸುವ ಬಗ್ಗೆ ಚಿಂತನಾ ಸಭೆಯೊಂದು ತೊಕ್ಕೊಟ್ಟು ರತ್ನಂ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರು ”ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ, ಸಾಂಸ್ಕೃತಿಕ ಪ್ರಜ್ಞೆ ಮತ್ತು ಸ್ಥಳೀಯ ಇತಿಹಾಸದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ‘ಮಕ್ಕಳ ಅಬ್ಬಕ್ಕ’ ಎಂಬ ಹೊಸ ಪರಿಕಲ್ಪನೆಯ ಕಾರ್ಯಕ್ರಮವನ್ನು ನಡೆಸಲಾಗುವುದು. ಇದರಲ್ಲಿ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ‘ಪಠ್ಯ ಪುಸ್ತಕದಲ್ಲಿ ಅಬ್ಬಕ್ಕ’ ಎಂಬ ಪ್ರಬಂಧ ಸ್ಪರ್ಧೆ ಮತ್ತು ‘ನನ್ನ ಕಲ್ಪನೆಯಲ್ಲಿ ಅಬ್ಬಕ್ಕನ ಚಿತ್ರ’ ಎಂಬ ಚಿತ್ರಕಲಾ ಸ್ಪರ್ಧೆಯನ್ನು ಪೂರ್ವಭಾವಿಯಾಗಿ ಏರ್ಪಡಿಸಲಾಗಿದೆ” ಎಂದರು. ಜಿಲ್ಲಾ ಸಾಹಿತ್ಯ ಪರಿಷತ್ತಿನ ಉಳ್ಳಾಲ ಘಟಕದ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಭಾಸ್ಕರ ರೈ ತಿಳಿಸಿದರು. ಸಂಚಾಲಕ ರವೀಂದ್ರ ಶೆಟ್ಟಿ…

Read More