Author: admin

ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಅವರು ಹೊರನಾಡ ಕನ್ನಡ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಸಂಘ ಆಂಧೇರಿ (ರಿ) ಪ್ರಸ್ತುತ ಪಡಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಇವರ ಸಹಯೋಗದಲ್ಲಿ ಜೂನ್ 9 ರಂದು ಭಾನುವಾರ ರಾಧಾಬಾಯಿ ಟಿ. ಭಂಡಾರಿ ಸಭಾಗೃಹ, ಬಂಟರ ಭವನ ಕುರ್ಲಾ, ಮುಂಬಯಿಯಲ್ಲಿ ಬೆಳಿಗ್ಗೆ 9.30 ರಿಂದ ಆರಂಭವಾಗುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ 2024 ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಹೇರಂಬ ಇಂಡಸ್ಟ್ರೀಸ್‌ನ ಸಿ.ಎಂ.ಡಿ. ಕನ್ಯಾನ ಸದಾಶಿವ ಶೆಟ್ಟಿ ಮೊದಲಾದ ಗಣ್ಯರ ಸಮ್ಮುಖದಲ್ಲಿ ಡಾ. ಸುಧಾಕರ ಶೆಟ್ಟಿ ಅವರಿಗೆ ಹೊರನಾಡ ಕನ್ನಡ ಪ್ರಶಸ್ತಿ ಸೇರಿದಂತೆ ಹಲವು ಮಂದಿ ಸಾಧಕರಿಗೆ ವಿವಿಧ ಪ್ರಶಸ್ತಿ ಪ್ರದಾನ ನಡೆಯಲಿದೆ. ಡಾ. ಮೋಹನ್ ಆಳ್ವರ ಸಹಕಾರದೊಂದಿಗೆ ಮೂಡಬಿದ್ರೆಯಲ್ಲಿ ಬೇಬಿ ಫ್ರೆಂಡ್ ಸಂಚಾರಿ ಮಕ್ಕಳ ಕ್ಲಿನಿಕ್‌ನ್ನು ಕಳೆದ ಒಂದು ವರ್ಷದಿಂದ ಕಾರ್ಯಾಚರಿಸುತ್ತಾ ಬಂದಿರುವ ಕಠಿಣ ಪರಿಶ್ರಮಿ, ವೈದ್ಯಕೀಯ ಸಮಾಜ ಸೇವೆಗಾಗಿ ದಕ್ಷಿಣ ಕನ್ನಡ…

Read More

ವಸಾಯಿ ತಾಲೂಕಿನ ಹೋಟೆಲ್ ಉದ್ಯಮಿ, ತುಳುಕೂಟ ಫೌಂಡೇಶನ್ ನಾಲಾಸೋಪಾರ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು, ಶ್ರೀ ದೇವಿ ಯಕ್ಷಕಲಾ ನಿಲಯ ನಾಲಾಸೋಪಾರ ವಿರಾರ್ ನ ಅಧ್ಯಕ್ಷ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ, ಮುಂಬಯಿ ಬಂಟರ ಸಂಘದ ಜೊತೆ ಕೋಶಾಧಿಕಾರಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಶಶಿಧರ ಕೆ ಶೆಟ್ಟಿ ಇನ್ನಂಜೆಯವರಿಗೆ ಅವರ ಸಾಮಾಜಿಕ ಸೇವೆಗಳು ಮತ್ತು ಸಮಾಜದಲ್ಲಿ ಅಪರಾಧ ಕಾರ್ಯಗಳು ನಡೆಯದಂತೆ ಜನಜಾಗೃತಿಯ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿರುವುದನ್ನು ಗಮನಿಸಿ ನಾಲಾಸೋಪಾರ ಅಚೋಲೆ ಪೊಲೀಸ್ ಠಾಣೆಯ ವರಿಷ್ಠ ಪೊಲೀಸ್ ಅಧಿಕಾರಿಯವರು ಗೌರವ ಪ್ರಶಸ್ತಿ ಪತ್ರ ನೀಡಿ ಗೌರವಿಸಿದ್ದಾರೆ. ಶಶಿಧರ್ ಕೆ ಶೆಟ್ಟಿಯವರು ಪಾಲ್ಗರ್ ಜಿಲ್ಲೆಯಲ್ಲಿ ವಿವಿಧ ಭಾಷೆಯ ಸಂಘಟನೆಗಳ ಸೇವಾ ಕಾರ್ಯಗಳಿಗೆ ಪ್ರೋತ್ಸಾಹವನ್ನು ನೀಡುತ್ತಾ ಬಂದವರು. ಅಲ್ಲದೇ ವಸಾಯಿ ತಾಲೂಕಿನ ತುಳು – ಕನ್ನಡಿಗರ ಸಂಘ ಸಂಸ್ಥೆಗಳಿಗೆ ಧಾರ್ಮಿಕ ಕಾರ್ಯಗಳಿಗೆ ಮತ್ತಿತರ ಸಮಾಜ ಪರ ಸೇವಾ ಕಾರ್ಯಗಳಿಗೆ ಆರ್ಥಿಕ ಸಹಾಯ ಹಾಗೂ ಪ್ರೋತ್ಸಾಹವನ್ನು ನೀಡುತ್ತಾ ಪರಿಸರದ ಜನರಲ್ಲಿ ಒಗ್ಗಟ್ಟು, ಸಾಮರಸ್ಯ,…

Read More

ಸವಣೂರು ಗ್ರಾ. ಪಂ. ಮಾಜಿ ಉಪಾಧ್ಯಕ್ಷ, ಸವಣೂರು ಸಿ.ಎ.ಬ್ಯಾಂಕ್ ಮಾಜಿ ಅಧ್ಯಕ್ಷ ಪುಣ್ಚಪ್ಪಾಡಿ ದೇವಸ್ಯ ಪಿ.ಡಿ. ಗಂಗಾಧರ್ ರೈ ಮತ್ತು ಸುವಾಸಿನಿ ಜಿ.ರೈ ಕಳ್ಳಿಗೆ ಬೀಡುರವರ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಸಮಾರಂಭವು ಅದ್ದೂರಿಯಾಗಿ ಮೇ 22 ರಂದು ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ನ ಸಭಾಭವನದಲ್ಲಿ ಜರಗಿತು. ಪುಣ್ಚಪ್ಪಾಡಿ ದೇವಸ್ಯ ತರವಾಡು ಮನೆಯ ಯಜಮಾನ ವಿಶ್ವನಾಥ ರೈ ದಂಪತಿ ದೀಪ ಬೆಳಗಿಸಿ, ಕಾರ್ಯಕ್ರಮಕ್ಕೆ ಚಾಲನೆಗೈದರು. ಗಂಗಾಧರ ರೈ ಮತ್ತು ಸುವಾಸಿನಿ ಜಿ. ರೈಯವರುಗಳು ಪರಸ್ಪರ ಹಾರಾರ್ಪಣೆಗೈದರು, ಬಳಿಕ ಕೇಕ್ ಕತ್ತರಿಸಿದರು. ಸರ್ವ ಕ್ಷೇತ್ರದಲ್ಲೂ ಸೈ ಎನಿಸಿದ ಗಂಗಣ್ಣ – ರಾಕೇಶ್ ರೈ : ಕಾರ್ಯಕ್ರಮದ ನಿರೂಪಕರಾದ, ದ. ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡಿಂಜಿರವರು ಮಾತನಾಡಿ ಪಿ.ಡಿ. ಗಂಗಾಧರ ರೈ ಮತ್ತು ಸುವಾಸಿನಿ ಜಿ. ರೈಯವರ ದಾಂಪತ್ಯ ಜೀವನದ ಸುವರ್ಣ ಮಹೋತ್ಸವ ಆಚರಣೆಯನ್ನು ನೋಡುವ ಸೌಭಾಗ್ಯ ನಮಗೆ ದೊರೆತಿರುವುದು ತುಂಬಾ ಸಂತೋಷದ ವಿಚಾರವಾಗಿದೆ. ಪಿ.ಡಿ. ಗಂಗಾಧರ ರೈಯವರು…

Read More

ಮುಂಗಾರು ಪೂರ್ವ ಮಳೆ ಕೈ ಕೊಟ್ಟರೂ ಮುಂಗಾರು ಶುಭಾರಂಭಗೊಂಡಿದೆ. ಮಳೆಗಾಲವೆಂದರೆ ಇಳೆ ತಂಪಾಗಿ ಜೀವ ಜಲ ಸಮೃದ್ದವಾಗುವ ಕಾಲ. ಗುಡುಗು ಸಿಡಿಲುಗಳ ಆರ್ಭಟದ ಜೊತೆಗೆ ನೆರೆಯ ಭೀತಿಯೂ ಮಳೆಗಾಲದಿಂದ ಹೊರತಾಗಿಲ್ಲ. ಮುಖ್ಯವಾಗಿ ಮಳೆಗಾಲದಲ್ಲಿ ಎಚ್ಚರಿಕೆಯಲ್ಲಿರಬೇಕಾದವರು ವಾಹನ ಸವಾರರು. ಅದರಲ್ಲಿಯೂ ಬೈಕ್ ಸವಾರರು. ನಿಮ್ಮ ಮನೆಯಲ್ಲಿ ಬೈಕ್ ಕ್ರೇಝ್ ಇರುವ ಮಕ್ಕಳಿದ್ದರೆ ಅವರನ್ನ ಕರೆದು ಇಂದೇ ತಿಳಿಹೇಳಿರಿ, ಮಳೆಗಾಲದಲ್ಲಿ ರಸ್ತೆ ಜಾರುತ್ತಿರುತ್ತದೆ. ವಾಹನಗಳ ಓಡಾಟದಿಂದಾಗಿ ಲೀಕೇಜ್ ಆಗುವ ಪ್ಯೂಯಲ್, ವಾಹನಗಳು ಹೊರಬಿಡುವ ಹೊಗೆಯ ಕಾರಣಕ್ಕೆ ಎಣ್ಣೆಯಂತೆ ಜಾರುವ ಅಂಶಗಳು ರಸ್ತೆಯಲ್ಲಿರುತ್ತವೆ. ಹಾಗಾಗಿ ಮಳೆಗಾಲದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತಗಳಾಗುವ ಸಂಭವ ಅತೀ ಹೆಚ್ಚು. ವಾಹನಗಳ ಬ್ರೇಕ್ ನಿರೀಕ್ಷೆಯಂತೆ ಕೆಲಸ ಮಾಡುವುದಿಲ್ಲ! ಕೆಲವು ರಸ್ತೆಗಳು ಹೊಂಡಗಳಿಂದ ಕೂಡಿರುತ್ತವೆ ಎಲ್ಲೆಲ್ಲಿ ಹೊಂಡಗಳಿವೆ, ಮ್ಯಾನ್ ಹೋಲುಗಳಿವೆ? ಚರಂಡಿ ಓಪನ್ ಆಗಿದೆ ಎನ್ನುವುದನ್ನ ಊಹಿಸುವುದೂ ಸಾಧ್ಯವಿಲ್ಲ. ಹಾಗಾಗಿ ಎಚ್ಚರಿಕೆಯ ಕಣ್ಣೊಂದು ಆ ಕಡೆಗಿದ್ದರೆ ಉತ್ತಮ. ಸರ್ಕಸ್ ಮಾಡಲೇ ಬೇಡಿ : ಕೆಲವು ಸವಾರರಿಗೆ ಒಂದು ಛೇಷ್ಠೆ ಇದ್ದೇ ಇರುತ್ತದೆ.…

Read More

ಪ್ರಪಂಚ ಎನ್ನುವ ಹೂಗಿಡದಿಂದ ನಾಳೆಗೆ ಅರಳುವ ಮೊಗ್ಗುಗಳನ್ನು ಮಾತ್ರ ತೋಟಗಾರರಂತೆ ಬಿಡಿಸಿಕೊಳ್ಳಬೇಕೆ ಹೊರತು, ಇದ್ದಿಲು ಮಾಡುವವನ ಹಾಗೆ ಬುಡಕ್ಕೆ ಪೆಟ್ಟು ಹಾಕಬಾರದು ಎಂದು ಉಪದೇಶ ಮಹಾಭಾರತ 21 ನೇ ಶತಮಾನದಲ್ಲಿ ಬದುಕುತ್ತಿರುವ ನಮಗೆ ಇದಕ್ಕಿಂತ ಪ್ರಸ್ತುತವಾದ ಉಪದೇಶ ಕಿವಿಮಾತು ಇನ್ನೊಂದು ಇರಲಿಕ್ಕೆ ಸಾಧ್ಯವಿಲ್ಲ. ಶಿಲಾಯುಗ, ಲೋಹಗಳ ಯುಗವನ್ನು ದಾಟಿ ಈಗ ಇಲೆಕ್ಟ್ರಾನಿಕ್ಸ್ ಯುಗದಲ್ಲಿದ್ದೇವೆ. ಕೈಗಾರಿಕಾ ಕ್ರಾಂತಿಯಿಂದ ಪಡೆದ ಲಾಭವನ್ನು ಈಗ ತೀವ್ರಗತಿಯಲ್ಲಿ ಪಡೆಯಲು ಕಾತರರಾಗಿದ್ದೇವೆ. ಇದರಿಂದಾಗಿ, ಆಧುನಿಕ ಮನುಷ್ಯನ ಆಸೆ, ದುರಾಸೆಯಾಗಿದೆ. ತಾನೂ ಒಂದು ಪ್ರಾಣಿ ಪ್ರಬೇಧ ಎಂಬುದನ್ನು ಮರೆತು ಉಳಿದ ಪ್ರಾಣಿ ವರ್ಗದ ಮೇಲೆ ಸಸ್ಯ ವರ್ಗದ ಮೇಲೆ, ಅಷ್ಟೇ ಸಾಲದು ಎಂಬಂತೆ ಗಾಳಿ, ನೀರು, ನೆಲ, ಆಕಾಶಗಳ ಮೇಲೂ ಪ್ರಭುತ್ವ ಹೊರಟಿದ್ದಾನೆ. ಇಂದಿನ ಮಾನವನ ಆಕ್ರಮಣಕಾರಿ, ಅತಿಕ್ರಮಣಕಾರಿ, ಸ್ವಾರ್ಥ ಮನೋಭಾವ, ಪ್ರಕೃತಿಯ ಸಮತೋಲನವನ್ನು ಹಾಳುಮಾಡಿದೆ. ಕೃತಕ ಸರೋವರಗಳನ್ನು ನಿರ್ಮಿಸುವುದು, ವನ್ಯಮೃಗಗಳ ಆಹಾರ ವಿಹಾರ ವಸ್ತುಗಳಿಗೆ ಕೊಂದು, ಕಳ್ಳಸಾಗಣಿಕೆ ಮಾಡುವುದು, ನೈಸರ್ಗಿಕ ಕಾಡುಗಳನ್ನು ಹಾಳು ಮಾಡಿ ವನಗಳನ್ನು ಬೆಳೆಸುವುದು, ಭೂಗರ್ಭದಲ್ಲಿ,…

Read More

ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರ ನೂತನ ಅಧ್ಯಕ್ಷರಾಗಿ ತಾಲೂಕು ಯುವ ಬಂಟರ ಸಂಘದ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಉದಯ ಕುಮಾರ ಶೆಟ್ಟಿ ಮಚ್ಚಟ್ಟು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಉಪನ್ಯಾಸಕ ವೆಂಕಟರಮಣ ನಾಯಕ್ ಬೈಂದೂರು, ಕೋಶಾಧಿಕಾರಿಯಾಗಿ ಅಂಪಾರು ಸಂಜಯ ಗಾಂಧಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಉದಯಕುಮಾರ್ ಆಯ್ಕೆಯಾಗಿದ್ದಾರೆ ಎಂದು ಕ್ಲಬ್ ನ ಪ್ರಕಟಣೆ ತಿಳಿಸಿದೆ.

Read More

ನಿವೃತ್ತ ಪ್ರಾಧ್ಯಾಪಕ, ಸಾಹಿತಿ, ಅರ್ಥಧಾರಿ ಮತ್ತು ಮಾಧ್ಯಮ ತಜ್ಞ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಮೇ 24 ರಂದು ಪುತ್ತೂರು ತಾಲೂಕು ಬೆಟ್ಟಂಪಾಡಿಯಲ್ಲಿ ‘ಹುಟ್ಟೂರ ಸಮ್ಮಾನ’ ಜರಗಲಿದೆ. ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪತ್ತನಾಜೆ ಉತ್ಸವ ಸಂದರ್ಭ ಜರಗುವ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವ ಸಲುವಾಗಿ ಕ್ಷೇತ್ರದ ‘ಬಿಳ್ವ ಶ್ರೀ’ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಬಹುಮುಖೀ ಸಾಧಕ ಭಾಸ್ಕರ ರೈ ಕುಕ್ಕುವಳ್ಳಿ: ಯಕ್ಷಗಾನ, ಸಾಹಿತ್ಯ, ಶಿಕ್ಷಣ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರು ವಿರಳ ಪಂಕ್ತಿಗೆ ಸೇರಿದ ಓರ್ವ ಬಹುಶ್ರುತ ವಿದ್ವಾಂಸರು. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪ್ರತಿಷ್ಠಿತ ಬಾಲ್ಯೊಟ್ಟು ಗುತ್ತು ಇರ್ದೆ ಬೆಟ್ಟಂಪಾಡಿಯಲ್ಲಿ ದಿ. ಕಲ್ಲಡ್ಕ ಕರಿಯಪ್ಪ ರೈ ಮತ್ತು ಗಿರಿಜಾ ರೈ ಕುಕ್ಕುವಳ್ಳಿ ದಂಪತಿಯ ಸುಪುತ್ರರು. ದರ್ಬೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪ್ರಾರಂಭಿಸಿ, ಪ್ರೌಢ ಶಿಕ್ಷಣವನ್ನು ಬೆಟ್ಟಂಪಾಡಿಯ ನವೋದಯ ಪ್ರೌಢಶಾಲೆ ಮತ್ತು ಕಾಲೇಜು…

Read More

ಮೂಡುಬಿದಿರೆ: ಸಂಚಾರ ನಿಯಮ ಪಾಲಿಸಿಕೊಂಡು ವಾಹನ ಚಲಾಯಿಸಿದರೆ, ಅಪಘಾತ ತಡೆಗಟ್ಟಲು ಸಾಧ್ಯ ಎಂದು ಎಚ್‍ಎಸ್‍ಇ ಆ್ಯಂಡ್ ಟಿ ಏಷಿಯಾ ಫೆಸಿಫಿಕ್ ವ್ಯವಸ್ಥಾಪಕ ಸಂಜಯ್ ಕರಾಜಗಿಕರ್ ಹೇಳಿದರು ಆಳ್ವಾಸ್ ಎಂಜಿನಿಯರಿಂಗ್ ಹಾಗೂ ತಂತ್ರಜ್ಞಾನ ಕಾಲೇಜಿನ ಶೋಭಾವನ ಸಭಾಂಗಣದಲ್ಲಿ ಬುಧವಾರ ಒಶಾಯಿ ಫೌಂಡೇಷನ್ ಹಾಗೂ ಬಿಎಸಿಸಿಇ ಫೌಂಡೇಷನ್ ಸಹಯೋಗದಲ್ಲಿ ನಡೆದ ಸೇಫ್ಟಿ ಹ್ಯಾಕಥಾನ್- ‘ಜಾಗೃತಿ -2024’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಾಹನದಲ್ಲಿ ಪ್ರಯಾಣಿಸುವಾಗ ಪ್ರತಿಯೊಬ್ಬರೂ ಸೀಟ್ ಬೆಲ್ಟ್ ಧರಿಸಬೇಕು. ಇದರಿಂದ ಅವಘಡದ ಪರಿಣಾಮವನ್ನು ಶೇ50 ರಷ್ಟು ತಡೆಗಟ್ಟಬಹುದು ಎಂದರು. ಪ್ರತಿದಿನವೂ ನಾವು ಸ್ವ ಸುರಕ್ಷತೆಯನ್ನು ಮಾಡಿಕೊಳ್ಳಬೇಕು. ನಮ್ಮ ಸುತ್ತಮುತ್ತಲು ಸುರಕ್ಷತೆಯ ಅನುಸರಿಸುವಂತೆ ಜಾಗೃತಿ ಮೂಡಿಸಬೇಕು ಎಂದರು. ಬದುಕಿನಲ್ಲಿ ನೀತಿ ನಿಯಮವನ್ನು ಪಾಲಿಸುವುದರಿಂದ, ಉನ್ನತ ಸ್ಥಾನಕ್ಕೆ ತಲುಪಬಹುದು. ಸುರಕ್ಷತಾ ಭಾವನೆಯನ್ನು ಮೂಡಿಸಬಹುದು ಎಂದರು. ಎಸ್‍ಎಫ್‍ಇಜಿಒ ಮತ್ತು ಒಶಾಯಿ ಫೌಂಡೇಷನ್ ನಿರ್ದೇಶಕ ಅವ್‍ದೇಶ್ ಮಲಯ್ಯಾ ಮಾತನಾಡಿ, ಮನುಷ್ಯ ಸಂಪನ್ಮೂಲವಾಗಿದ್ದು, ಅವನ ಜೀವವನ್ನು ಉಳಿಸುವುದರಿಂದ ಸಮಾಜ ಮತ್ತು ದೇಶ ಅಭಿವೃದ್ಧಿ ಸಾಧ್ಯ ಹಾಗೂ ಮನುಷ್ಯ ಸತ್ತಾಗ ಮಾತ್ರ ಅವನ…

Read More

ಬ್ರಹ್ಮಾವರ ಮೇ 23: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಸಂಸ್ಥೆಯ ಶಿಕ್ಷಕರಿಗೆ ನೂತನ ಪಠ್ಯಕ್ರಮ ‘ಓರಿಯೆಂಟ್ ಬ್ಲ್ಯಾಕ್ಸ್ವಾನ್’ ಕುರಿತು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಅಂತರಾಷ್ಟ್ರೀಯ ಮಟ್ಟದ ತರಬೇತುದಾರ ಜಾನ್ ನೌಗ್ಸಾರಿಯಾ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಅವರು ನೂತನ ಪಠ್ಯಕ್ರಮದ ಗುರಿ, ಉದ್ದೇಶ, ಬೋಧನೆ, ಕಲಿಕಾ ಉಪಕರಣಗಳು ಮತ್ತು ಮೌಲ್ಯಮಾಪನದ ಕುರಿತು ತರಬೇತಿ ನೀಡಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಇಂದು ಶಾಲೆಗಳಲ್ಲಿವಿವಿಧ ಪ್ರಕಾಶನ ಪುಸ್ತಕಗಳನ್ನು ಪಠ್ಯಕ್ರಮದಲ್ಲಿ ಬಳಸುತ್ತಿದ್ದು ಶಿಕ್ಷಕರಿಗೆ ಅವುಗಳ ಬೋಧನೆಯ ಅರಿವಿದ್ದರೆ ಮಾತ್ರ ಮಕ್ಕಳಲ್ಲಿ ಪರಿಪೂರ್ಣ ಕಲಿಕೆ ಸಾಧ್ಯ, ಜಿ ಎಮ್ ಅತ್ಯಾಧುನಿಕ ಪಠ್ಯಕ್ರಮದ ಜೊತೆಗೆ ಶಿಕ್ಷಕರಿಗೆ ಪರಿಣಾಮಕಾರಿ ಬೋಧನೆಯ ತರಬೇತಿಯನ್ನು ನೀಡುತ್ತಿದೆ ಎಂದರು. ಕಾರ್ಯಾಗಾರದಲ್ಲಿ ‘ಓರಿಯೆಂಟ್ ಬ್ಲ್ಯಾಕ್ಸ್ವಾನ್’ ನ ಚೇತನ್, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Read More

2023-2024 ನೇ ಶೈಕ್ಷಣಿಕ ಸಾಲಿನ 12 ನೇಯ ತರಗತಿಯ ಪರೀಕ್ಷಾ ಫಲಿತಾಂಶದಲ್ಲಿ ವಸಾಯಿ ವರ್ತಕ್ ಕಾಲೇಜಿನ ವಿದ್ಯಾರ್ಥಿ ಲಕ್ಷ ಎಸ್ ಶೆಟ್ಟಿಗೆ ಶೇ 85.17 ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ. ಈತ ಸಾಣೂರು ಹೊಸಮನೆ ಸುರೇಶ್ ಎಂ ಶೆಟ್ಟಿ ಹಾಗೂ ಕರ್ನಿರೆ ಹೊಸಮನೆ ಲೋಲಾಕ್ಷಿ ಎಸ್ ಶೆಟ್ಟಿ ದಂಪತಿಯ ಸುಪುತ್ರ.

Read More