Author: admin

ಯುವ ಕ್ರಿಕೆಟಿಗ, ಕ್ರೀಡಾ ಸಂಘಟಕ ನಿತೇಶ್ ಶೆಟ್ಟಿ ಇವರ ಸಾರಥ್ಯದಲ್ಲಿ ರಾಷ್ಟ್ರೀಯ ಮಟ್ಟದ ಅದ್ಧೂರಿಯ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಪಾಂಚಜನ್ಯ ಟ್ರೋಫಿ-2023 ಇತ್ತೀಚಿಗೆ ಕೋಟ ಗಿಳಿಯಾರು ಶಾಂಭವಿ ಶಾಲಾ ಮೈದಾನದಲ್ಲಿ ಜರುಗಿತು. ಕುಂದಾಪುರ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಹಾಗೂ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷ ಗೌತಮ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಗೌತಮ್ ಶೆಟ್ಟಿ, “ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಬದುಕಿನಲ್ಲಿ ಎಂತಹ ಪರಿಸ್ಥಿತಿಯಲ್ಲೂ ಧೃತಿಗೆಡದೆ ಸಮರ್ಥವಾಗಿ ನಿಭಾಯಿಸುತ್ತಾರೆ‌. ಪಾಂಚಜನ್ಯದ ನಿತೇಶ್ ಶೆಟ್ಟಿ ಉತ್ತಮ ಸಂಘಟಕರು. ಕ್ರಿಕೆಟ್ ಗೆ ಹೊಸ ಆಯಾಮ ನೀಡುವುದರಲ್ಲಿ ನಿಸ್ಸೀಮರು. ಈ ಬಾರಿಯೂ ಪಂದ್ಯಾವಳಿಗೆ ಹೊಸ ಸ್ಪರ್ಶ ನೀಡಿದ್ದಾರೆ.” ಸಂಘಟಕರಾದ ನಿತೇಶ್ ಹಾಗೂ ಪಾಂಚಜನ್ಯದ ತಂಡವನ್ನು ಅಭಿನಂದಿಸಿ ಶುಭ ಹಾರೈಸಿದರು.

Read More

ವಿದ್ಯಾಗಿರಿ : ನಮ್ಮನ್ನು ನಾವು ಮೊದಲು ಬದಲಿಸಿಕೊಳ್ಳದೆ ಹೊರತು, ಸಮಾಜವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಆಳ್ವಾಸ್ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹ ಪ್ರಾಧ್ಯಪಕಿ ಡಾ. ಮೂಕಾಂಬಿಕಾ ಜಿ. ಎಸ್ ಹೇಳಿದರು. ಆಳ್ವಾಸ್ ಪದವಿ ಪೂರ್ವ ವಿಭಾಗದ ವತಿಯಿಂದ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಗುರುವಾರ ಆಂತರಿಕ ಸಮಿತಿ ಆಯೋಜಿಸಿದ್ದ ‘ಮಹಿಳಾ ದೌರ್ಜನ್ಯ ತಡೆ ಅರಿವು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ದೇಶದ ‘ಯತ್ರಾ ನಾರ್ಯಂತು ಪೂಜ್ಯಂತೆ’ ಶ್ಲೋಕವನ್ನು ನಾವು ಒಪ್ಪುತ್ತೇವೆ, ಆದರೆ ಪಾಲಿಸುವುದಿಲ್ಲವೇಕೆ? ಎಲ್ಲರಿಗೂ ದೌರ್ಜನ್ಯವಾಗುತ್ತದೆ, ಆದರೆ ಈ ತಕ್ಕಡಿಯಲ್ಲಿ ಮಹಿಳಾ ದೌರ್ಜನ್ಯದ ತಕ್ಕಡಿ ಮಾತ್ರ ನೆಲಮುಟ್ಟುವಷ್ಟು ತೂಕ ಹೊಂದಿದೆ. ಎಲ್ಲರನ್ನ ಗೌರವಿಸುವ ವ್ಯಕ್ತಿತ್ವ ಇದ್ದರೆ ಸಮಸ್ಯೆಗೆ ಪರಿಹಾರ ಸಾಧ್ಯ. ಪ್ರತಿ ಕಾನೂನುಗಳ ಹಿಂದೆ ಒಂದು ಇತಿಹಾಸವಿದೆ. ರಕ್ಷಣೆ ಕೊಡುವ ಕಾನೂನು ಇರುವಾಗ ಸಮಸ್ಯೆಗಳನ್ನು ತಿಳಿಸಲು ಹಿಂಜರಿಯುವುದು ಸೂಕ್ತವಲ್ಲ. ಪ್ರಕೃತಿಯ ಮುಂದೆ ಎಲ್ಲರೂ ಸಮಾನರು. ಅಸಮಾನತೆಯನ್ನು ನಮ್ಮಿಂದ ಮೊದಲು ದೂರ ತಳ್ಳಬೇಕು, ಎಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಪದವಿಪೂರ್ವ…

Read More

ದಶಮಾನೋತ್ಸವ ಆಚರಿಸಿರುವ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ನೂತನ ಕಾರ್ಯಾಧ್ಯಕ್ಷರಾಗಿ ಹೊಟೇಲು ಉದ್ಯಮಿ ಸುದೇಶ್ ಶೆಟ್ಟಿ ನೇಮಕಗೊಂಡಿದ್ದಾರೆ.

Read More

ಜ್ಞಾನ ಸರೋವರ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ದಿನಾಂಕ 15- 9 – 2023 ರಂದು ಪೋಷಕರ ಕ್ರೀಡಾಕೂಟವನ್ನು ಹಮ್ಮಿಕೊಂಡಿದ್ದು, ಬಹಳ ಉತ್ಸಾಹದಿಂದ ನಡೆಸಲಾಯಿತು. ಕಾರ್ಯಕ್ರಮವು ಬೆಳಿಗ್ಗೆ 10.30 ಕ್ಕೆ ಪ್ರಾರಂಭವಾಯಿತು. ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉತ್ಸಾಹದಿಂದ ಪೋಷಕರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಸುಧಾಕರ ಎಸ್ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಪೋಷಕರ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಕುರಿತು ಸಹ ಪ್ರೇರಕ ಭಾಷಣವನ್ನು ಮಾಡಿದರು. ಪ್ರತಿಯೊಬ್ಬರು ಕ್ರೀಡಾಕೂಟದಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಿದರು ಮತ್ತು ಕ್ರೀಡಾ ಚಟುವಟಿಕೆಗಳನ್ನು ಮಾಡುವುದರಿಂದ ಆಗುವ ಅನೇಕ ಪ್ರಯೋಜನಗಳನ್ನು ತಿಳಿಸಿದರು. ಮಕ್ಕಳಿಗೆ ಪಾಠ ಎಷ್ಟು ಮುಖ್ಯವೋ ಆಟವು ಅಷ್ಟೇ ಮುಖ್ಯ. ಕ್ರೀಡೆಯ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದವರೂ ಇದ್ದಾರೆ ಎಂದರು. ಶಾಲಾ ಕ್ರೀಡಾ ಇಲಾಖೆ ವತಿಯಿಂದ ವಿವಿಧ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಪೋಷಕರು ತಮ್ಮ ಆಸಕ್ತಿಗೆ ಅನುಗುಣವಾಗಿ ಭಾಗವಹಿಸಿದರು. ಶಾಲೆಯ ಒಳ ಸಭಾಂಗಣದಲ್ಲಿ ಎಲ್ಲಾ ಆಟಗಳನ್ನು ಆಯೋಜಿಸಲಾಗಿತ್ತು. ಎಲ್ಲಾ…

Read More

ಹಳ್ಳಿಯ ಜನರ ಬೇಸಾಯದ ಆನಂತರದ ಭವಣೆ, ಅಂದಿನ ತೊಡರುಗಳನ್ನು, ಕಷ್ಟ ಕಾರ್ಪಣ್ಯಗಳನ್ನು ಇಂದಿನ ಪೀಳಿಗೆಗೆ ತಿಳಿಸುವ ಈ ಒಂದು ಆಟಿದ ನೆಂಪು ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಹಿಂದೆ ಊರಿನ ನಂಬಿಕೆಯ ದಿನಗಳಲ್ಲಿ ಆಷಾಢ ತಿಂಗಳಲ್ಲಿ ಯಾವುದೇ ಪವಿತ್ರ ಕಾರ್ಯಕ್ರಮಗಳು ಜರಗುತ್ತಿರಲಿಲ್ಲ. ಕಾರಣ ಆ ತಿಂಗಳು ಯಾವುದೇ ಕಾರ್ಯಕ್ರಮಕ್ಕೆ ಹೊಂದಾಣಿಕೆಯಾಗುತ್ತಿರಲಿಲ್ಲ. ದೈಹಿಕವಾಗಿ, ಮಾನಸಿಕವಾಗಿಯೂ ಆಷಾಢ ತಿಂಗಳು ಒಂದು ತಟಸ್ಥ ಮಾಸವಾಗಿತ್ತು ಎಂದು ಕೇಮಾರು ಸಂದೀಪನಿ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜೀ ನುಡಿದರು. ಅವರು ಮಂಗಳೂರು ಉರ್ವ ಸ್ಟೋರ್ ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಭಾಭವನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದ ವತಿಯಿಂದ “ಆಟಿದ ನೆಂಪು” ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಉದ್ಘಾಟಿಸಿ, ಮಾತನಾಡಿದರು. ಬದಲಾದ ಬದುಕಿನಲ್ಲಿ ಅಂದಿನ ಬದುಕಿನ ಆಚಾರ-ವಿಚಾರಗಳು ಕಟ್ಟುನಿಟ್ಟಿನ ಸಂಸ್ಕೃತಿ, ಸಂಪ್ರದಾಯದ ಪಾಲನೆಯ ಬಗ್ಗೆ ನಾವು ಇಂದಿನ ಮಕ್ಕಳಿಗೆ ಆಟಿಯ ಇಂತಹ ಕಾರ್ಯಕ್ರಮದ ಮೂಲಕ ತಿಳಿಸುವುದು ಅವಶ್ಯ. ಇಂದಿನ ಕಾರ್ಯಕ್ರಮಕ್ಕೆ ತುಳುನಾಡ ರಕ್ಷಣಾ ವೇದಿಕೆಯ…

Read More

ಉಳ್ಳಾಲ ಕೋಟೆಕಾರು ನೆತ್ತಿಲ ಪರಿಸರದ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋಟೆಕಾರು ಪಟ್ಟಣ ಪಂಚಾಯತ್‌ ಮುಂಬಾಗದಲ್ಲಿ ಕೋಟೆಕಾರು ಪರಿಸರದ ನಾಗರಿಕರು ಮತ್ತು ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರು ನೀರಿನ ಖಾಲಿ ಬಿಂದಿಗೆಗಳನ್ನು ಇಟ್ಟು ವಿನೂತನ ರೀತಿಯಲ್ಲಿ ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್‌ ಶೆಟ್ಟಿ ಜಪ್ಪು, ನೀರು ಪ್ರಕೃತಿಯ ನೈಸರ್ಗಿಕ ಕೊಡುಗೆಗಳಲ್ಲಿ ಪ್ರಮುಖವಾದುದು. ಆದ್ದರಿಂದ ಅದರ ಸದ್ಬಳಕೆ ಇಂದಿನ ಕಾಲಘಟ್ಟದಲ್ಲಿ ಅತಿ ಅವಶ್ಯಕ. ಕೋಟೆಕಾರು ನೆತ್ತಿಲ ಪ್ರದೇಶ ಉಳ್ಳಾಲ ತಾಲೂಕಿನ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರದೇಶಗಳಲ್ಲೊಂದು. ಇಲ್ಲಿ ಖಾಸಗಿ ಬಡಾವಣೆಗಳು ನಿರ್ಮಾಣವಾಗಿದ್ದು ಹಾಗೂ ಸಣ್ಣಗಾತ್ರದ ಕೈಗಾರಿಕೆಗಳು ಕಾರ್ಯಚರಿಸುತ್ತಿವೆ. ಸಹಜವಾಗಿ ಬೇಸಿಗೆ ಕಾಲದಲ್ಲಿ ಮಾರ್ಚ್ ತಿಂಗಳಿನಿಂದ ಇಲ್ಲಿ ನೀರಿಗಾಗಿ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅದರಲ್ಲೂ ಕಳೆದ ಕೆಲವು ವರ್ಷಗಳಿಂದ ಮನೆಗಳ ಬಾವಿಗಳು ಬೇಸಿಗೆ ಕಾಲದಲ್ಲಿ ಬತ್ತಿ ಹೋಗುತ್ತಿರುವುದು ಆತಂಕದ ವಿಷಯ. ಜನರು ತಮ್ಮ ಮೂಲಭೂತ ಅವಶ್ಯಕತೆಗಳಾದ ಶೌಚಾಲಯ ಹಾಗೂ ಅಡುಗೆ…

Read More

ಕಾಪುವಿನ ಸುಂದರ ಭವಿಷ್ಯಕ್ಕಾಗಿ ದೂರದರ್ಶಿತ್ವದ ಯೋಜನೆಗಳುಳ್ಳ ನೀಲ ನಕ್ಷೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇವೆ. ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕಲ್ಪನೆಯ ಸಾಕಾರಕ್ಕಾಗಿ ಮತ್ತು ಸರ್ವ ವ್ಯಾಪಿ, ಸರ್ವ ಸ್ಪರ್ಷಿ ಚಿಂತನೆಯೊಂದಿಗೆ ಎಲ್ಲಾ ಜಾತಿ, ಧರ್ಮ, ಮತ, ಸಮುದಾಯದ ಜನರ ಸೇವೆಗಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಕಾಪು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ವಿನಂತಿಸಿದ್ದಾರೆ. ಕಾಪು ಪುರಸಭಾ ವ್ಯಾಪ್ತಿಯ ಕರಾವಳಿ ವಾರ್ಡ್, ಪೊಲಿಪುಗುಡ್ಡೆ, ಭಾರತ್‌ನಗರ, ಕಲ್ಯ, ದಂಡತೀರ್ಥ, ಕೋತಲಕಟ್ಟೆ, ಕೈಪುಂಜಾಲು, ಕಾಪು ಪರಿಸರದಲ್ಲಿ ಮತಯಾಚನೆ ನಡೆಸಿ, ಜೇಸಿ ಭವನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಮಹತ್ವಾಕಾಂಕ್ಷಿಯ ಜನೋಪಯೋಗಿ ಜನ ಸೇವಾ ಕಾರ್ಯಕ್ರಮಗಳು ಬಿಜೆಪಿಯ ಗೆಲುವಿಗೆ ಪೂರಕವಾಗಲಿವೆ. ಅದರ ಜತೆಗೆ ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಕಳೆದ ಐದು ವರ್ಷಗಳಲ್ಲಿ…

Read More

ಕ್ರೀಡೆಯ ಮೂಲಕ ಸಮಾಜದ ಸಂಘಟನೆ: ಸುಧಾಕರ ಪೂಂಜ ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ನಡೆದ ಬಂಟರ ಕ್ರೀಡೋತ್ಸವದಲ್ಲಿ ಸುರತ್ಕಲ್ ಗ್ರಾಮ ಅತ್ಯಧಿಕ ಅಂಕ ಗಳಿಸಿ ಸಮಗ್ರ ಚಾಂಪ್ಯನ್ ಪ್ರಶಸ್ತಿ ಪಡೆದುಕೊಂಡಿದೆ. ಕೂಟದಲ್ಲಿ ಚೇಳಾರ್ ಗ್ರಾಮ ದ್ವೀತೀಯ, ಇಡ್ಯಾ ಗ್ರಾಮ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಪಥ ಸಂಚಲನ ವಿಭಾಗದಲ್ಲಿ ಇಡ್ಯಾ ಗ್ರಾಮ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಿದ್ದರು. ಸುರತ್ಕಲ್ ಬಂಟರ ಸಂಘವು ಸಾಂಸ್ಕೃತಿಕ, ಸಮಾಜ ಸೇವೆಯ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಾ ಬಂದಿರುತ್ತದೆ. ಸುರತ್ಕಲ್ ಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ಕ್ರೀಡಾಳುಗಳಿದ್ದಾರೆ. ಕ್ರೀಡಾಳುಗಳನ್ನು ಪ್ರೋತ್ಸಾಹಿಸುವ ಕೆಲಸವೂ ಸಂಘದಿಂದ ನಡೆದಿದೆ. ಕ್ರೀಡೆಯ ಮೂಲಕ ಸಮಾಜವನ್ನು ಸಂಘಟಿಸುವ ಕೆಲಸವೂ ನಡೆಯುತ್ತಿದೆ ಎಂದರು. ಮುಖ್ಯ ಅತಿಥಿಯಾಗಿ…

Read More

ಪುಣೆಯ ತುಳು ಕನ್ನಡಿಗರ ಸ್ವಾಭಿಮಾನಿ ಸಂಘಟನೆ ತುಳುನಾಡ ಪೌಂಡೇಶನ್ ಪುಣೆ ಇದರ ಗೌರವಾಧ್ಯಕ್ಷರಾಗಿ ತಾರಾನಾಥ ರೈ ಮೇಗಿನಗುತ್ತು, ಸ್ಥಾಪಕಾಧ್ಯಕ್ಷರಾಗಿ ಖ್ಯಾತ ಸಮಾಜಸೇವಕ, ನ್ಯಾಯವಾದಿ ರೋಹನ್ ಪುರುಷೋತ್ತಮ ಶೆಟ್ಟಿಯುವರು ಆಯ್ಕೆಯಾಗಿದ್ದು, ಅವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ನೂತನ ಸಂಸ್ಥೆಯ ಉಪಾಧ್ಯಕ್ಷರಾಗಿ ವಿಕೇಶ್ ರೈ ಶೇಣಿ , ಅಕ್ಷಿತ್ ಸಾಲ್ಯಾನ್ , ಸುಪ್ರೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುಜಯ್ ದಿನೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ರತನ್ ಸಾಲ್ಯಾನ್ ಮತ್ತು ಸಮೀಕ್ಷಾ ಪೂಜಾರಿ, ಕೋಶಾಧಿಕಾರಿಯಾಗಿ ಕಿರಣ್ ಮೂಲ್ಯ, ಜೊತೆ ಕೋಶಾಧಿಕಾರಿಯಾಗಿ ಸೂರಜ್ ಬಂಗೇರ ಮತ್ತು ಪ್ರೀತಮ್ ಶೆಟ್ಟಿ, ಸಾಮಾಜಿಕ ಸಮಿತಿ ಸದಸ್ಯರಾಗಿ ಪೂಜಾ ಜಹಗೀರದಾರ್, ಸಂತೋಷ್ ಶೆಟ್ಟಿ ಹಾಗೂ ಅಹಾನ್ ದೇವಾಡಿಗ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಸಮಿತಿಗಾಗಿ ವಿಂದಿ ಪೂಜಾರಿ, ಮಲ್ಲಣ್ಣ ಲಿಂಗಾಯತ್, ಪ್ರತೀಕ್ ಪೂಜಾರಿ ಮತ್ತು ಸಮೀಕ್ಷಾ ಶೆಟ್ಟಿ, ಕ್ರೀಡಾ ಸಮಿತಿಗಾಗಿ ವಿನೀತ್ ಪೂಜಾರಿ, ದೀಕ್ಷಾ ಶೆಟ್ಟಿ, ರಾಜೇಂದ್ರ ಕೋಟ್ಯಾನ್ ಮತ್ತು ಕೌಶಿಕ್ ಶೆಟ್ಟಿ, ಸಾಂಸ್ಕೃತಿಕ ಸಮಿತಿಗಾಗಿ ರವಿರಾಜ್ ಶೆಟ್ಟಿ, ರೇಷ್ಮಾ ನಾಯ್ಕ್, ಸ್ವಾತಿ…

Read More

ಮೂಡುಬಿದಿರೆ: ಸ್ನಾತಕೋತ್ತರ ಹಂತದಲ್ಲಿ ಪ್ರತಿ ವಿದ್ಯಾರ್ಥಿ ತಾನು ಆಯ್ಕೆ ಮಾಡಿಕೊಂಡಿರುವ ವಿಷಯದ ಕ್ಷೇತ್ರದಲ್ಲಿ ಬದುಕನ್ನು ರೂಪಿಸಿಕೊಳ್ಳುವ ನೆಲೆಯಲ್ಲಿ ತನ್ನನ್ನು ತಯಾರಿ ಮಾಡಿಕೊಳ್ಳುತ್ತಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ನುಡಿದರು. ಆಳ್ವಾಸ್ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗುರುವಾರ ಕುವೆಂಪು ಸಭಾಂಗಣದಲ್ಲಿ ಏರ್ಪಡಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಆಸಕ್ತಿಯ ಕ್ಷೇತ್ರದ ಉದ್ದೇಶಗಳ ಅರಿವು ಅತ್ಯವಶ್ಯಕ. ಯಾವುದೇ ಕ್ಷೇತ್ರಕ್ಕೆ ಹೆಜ್ಜೆಯನ್ನಿಡುವ ಮೊದಲು ಆ ಕ್ಷೇತ್ರಕ್ಕೆ ಸಂಬಂಧಿಸಿದ ಜವಾಬ್ದಾರಿ ಮತ್ತು ಪ್ರಾಯೋಗಿಕ ಕೌಶಲದ ತಿಳುವಳಿಕೆ ಅಪೇಕ್ಷಿಣೀಯ. ಪ್ರತಿಯೊಬ್ಬರು ತಮ್ಮ ಮನೋರಂಜನೆಯ ವ್ಯಾಖ್ಯಾನವನ್ನು ಮರುವ್ಯಾಖ್ಯಾನಿಸಬೇಕು. ಈ ಹಂತದಲ್ಲಿ ಓದು, ಕೌಶಲಗಳ ವೃದ್ಧಿ, ಕ್ರೀಯಾಶೀಲ ಚಟುವಟಿಕೆಗಳು ಬದುಕಿನ ಆನಂದದ ಮೂಲವಾಗಬೇಕು. ಸ್ನಾತಕೋತ್ತರ ಪದವಿ ಆಯ್ಕೆ ಮಾಡಿಕೊಂಡ ನಂತರ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳುವುದು ಅತ್ಯಗತ್ಯ. ಭಾರತದಲ್ಲಿ 14 ಶೇಕಡಾದಷ್ಟು ವಿದ್ಯಾರ್ಥಿಗಳು ಮಾತ್ರ ಸ್ನಾತಕೋತ್ತರ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಆ ವರ್ಗದಲ್ಲಿ ತಾವು ಒಳಗೊಂಡಿರುವುದಕ್ಕೆ ಹೆಮ್ಮೆ ಪಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್…

Read More