Author: admin
ಬಂಟರ ಸಂಘದ ಮುಂಬಯಿಯ ಕಾರ್ಯಕ್ರಮಗಳಲ್ಲಿ ಅತೀ ಮಹತ್ವದ ಹಾಗು ಪ್ರೀತಿಯ ಮನಸ್ಸಿಗೆ ಮುದ ನೀಡುವ ಕಾರ್ಯಕ್ರಮವೆಂದರೆ, ಸಮಾಜ ಕಲ್ಯಾಣ ಕಾರ್ಯಕ್ರಮ. ಸಮಾಜ ಬಾಂಧವರು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸುಮಾರು 2.5 ಕೋಟಿಗೂ ಮಿಕ್ಕಿ ಶೈಕ್ಷಣಿಕ ಸಹಾಯ ನೀಡುವ ಸಂಸ್ಥೆ ಬಂಟರ ಸಂಘ ಮುಂಬಯಿ ಎಂದು ಹೆಮ್ಮೆಯಿಂದ ಹೇಳಬಹುದು. ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸಮಾಜ ಬಾಂಧವರ ಕಷ್ಟಗಳಿಗೆ ಸ್ಪಂದಿಸುವ ಪ್ರಾಮಾಣಿಕ ಕಾರ್ಯವನ್ನು ಮಾಡುತ್ತಿದ್ದಾರೆ. ಅವರು ನಾಲಾಸೋಪಾರ ಪೂರ್ವದ ರಿಜೆನ್ಸಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಆರ್ಥಿಕ ನೆರವು ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಸಂಘದ ಶಿಕ್ಷಣ ಮತ್ತುಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಶಾಂತಾರಾಮ ಶೆಟ್ಟಿಯವರು ಮಾತನಾಡುತ್ತಾ ಇಂದು ನಾವು ಇತರರಿಗೆ ಸಹಾಯ ಮಾಡಿದರೆ ದೇವರು ಇನ್ನೊಂದು ವಿಧದಲ್ಲಿ ನಮಗೆ ಸಹಾಯ ಮಾಡುತ್ತಾರೆ. ಸಮಾಜ ಬಾಂಧವರಿಗೆ ಸಂಘದ ಶಿಕ್ಷಣ…
ನಿಶ್ಚಯದ ವೇದಿಕೆಗೆ ಗಂಡು ಮತ್ತು ಹೆಣ್ಣನ್ನು ಕರೆತರುವುದು ಅವರವರ ಹಿರಿಯ ಮುತ್ತೈದೆ ಹೆಂಗಳೆಯರು. ಗಂಡಿನ ಬಲಭಾಗದಲ್ಲಿ ಹೆಣ್ಣನ್ನು ಕೂರಿಸುವುದು. ನಿಶ್ಚಿತಾರ್ಥಕ್ಕೆ ನಿಲ್ಲುವ ದಿಕ್ಕುಗಳು : ಬಂಟ ಗುರಿಕ್ಕಾರ – ಉತ್ತರಾಭಿಮುಖವಾಗಿ ವಧುವಿನ ಹಿರಿಯರು – ಪೂರ್ವಾಭಿಮುಖವಾಗಿ ವರನ ಹಿರಿಯರು – ಪಶ್ಚಿಮಾಭಿಮುಖವಾಗಿ ಎಲ್ಲಾ ಹಿರಿಯರನ್ನು ವೇದಿಕೆಗೆ ಆಹ್ವಾನಿಸುವುದು. ಮಾತಾ ಪಿತೃಗಳಿಂದ ದೀಪ ಬೆಳಗಿಸುವುದು. ದೀಪ ಬೆಳಗಿಸುವಾಗ ಪೂರ್ವದಿಂದ ಆರಂಭಿಸಿ ಪ್ರದಕ್ಷಿಣಾಕಾರವಾಗಿ ಉರಿಸಬೇಕು. ಗಣಪತಿ ಸ್ತುತಿ : ಸುತ್ಯೆ ಇಡುವುದು ಪ್ರಾರ್ಥನೆ : ಗುರುಪೀಠಕ್ಕೆ, ಕುಲದೇವರಿಗೆ, ಕುಲದೈವಕ್ಕೆ ಗುರು ಕಾರ್ನವರಿಗೆ : ಸೀಮೆ ದೇವರಿಗೆ, ಗ್ರಾಮ ದೇವರಿಗೆ. ಗಂಡು ಹೆಣ್ಣಿನ ತಂದೆ ತಾಯಂದಿರ ಕುಟುಂಬದ ನಾಗಶಕ್ತಿಗಳು, ದೈವ ದೈವತಾ ಶಕ್ತಿಗಳು, ದೇವ ದೇವತಾ ಶಕ್ತಿಗಳು ಹಾಗೂ ಸ್ಥಳ ಸಾನಿಧ್ಯಕ್ಕೆ ಕ್ಷಮಾಪಣೆ ಪ್ರಾರ್ಥನೆ ಸಲ್ಲಿಸಿ ಕಾರ್ಯಕ್ರಮ ಆರಂಭಿಸಬೇಕು. ಗಂಡು ಹೆಣ್ಣಿನ ಪರಿಚಯವನ್ನು ಸಭೆಯ ಮುಂದಿಡುವುದು. ಎರಡು ಹರಿವಾಣಗಳಲ್ಲಿ 5+5 ವೀಳ್ಯದೆಲೆ, 1+1 ಅಡಿಕೆ, 1+1ಕುಂಕುಮದ ಕರಡಿಗೆ, 1+1 ಮಲ್ಲಿಗೆ ಚೆಂಡು ಇವುಗಳನ್ನು ಇಟ್ಟು ಟಿಪಾಯಿ…
ಸಾವಿರ ವರ್ಷಗಳ ಪ್ರಾಚೀನ ಇತಿಹಾಸ ಪ್ರಸಿದ್ಧ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಮತ್ತು ಶ್ರೀ ಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರ ಅಷ್ಠಬಂಧ ಸಹಿತ ಸಹಸ್ರ ಬ್ರಹ್ಮಕಲಶಾಭಿಷೇಕವು ವೇದಮೂರ್ತಿ ಷಡಂಗ ಶ್ರೀ ಬಿ. ಗುರುರಾಜ ತಂತ್ರಿಯವರ ನೇತೃತ್ವದಲ್ಲಿ ಮೇ 20 ರಿಂದ 25 ರವರೆಗೆ ಜರುಗಲಿದೆ. ಮೇ 20 ಶನಿವಾರ ಬೆಳಿಗ್ಗೆ ಗಂಟೆ 8:00 ರಿಂದ ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಸ್ವಸ್ತಿ ಪುಣ್ಯಾಹಾವಾಚನ ದೇವ ನಾಂದಿ, 12 ಕಾಯಿ ಗಣಹೋಮ, ನವಗ್ರಹ ಹೋಮ, ಅನ್ನಸಂತರ್ಪಣೆ, ಸಂಜೆ 5:00 ರಿಂದ ಧಾರ್ಮಿಕ ಸಭಾಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ವಸಂತ ಮಂಟಪ ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ ಹಾಗೂ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮಿಜಿ ಆಶೀರ್ವಚನ ನೀಡಲಿರುವರು. ಧಾರ್ಮಿಕ ಸಭಾ ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ಡಾ| ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಇದರ ಪ್ರವರ್ತಕರಾದ ಡಾ| ನಾಡೋಜ…
ಕೊಲ್ಲೂರು ಶ್ರೀ ಮೂಕಾಂಬಿಕೆಗೆ ಫೆ. 16ರಂದು ಸಮರ್ಪಣೆಗೊಳ್ಳಲಿರುವ ಬ್ರಹ್ಮರಥವನ್ನು ಕುಂಭಾಶಿಯ ಕಾರ್ಯಾಗಾರದಿಂದ ಕೊಂಡೊಯ್ಯುವ ದಾರಿಯಲ್ಲಿ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇಗುಲಕ್ಕೆ ಆಗಮಿಸಿದಾಗ ದೇಗುಲದ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ಐತಾಳ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಮುರ್ಡೇಶ್ವರದ ಉದ್ಯಮಿ ದಿ| ಆರ್.ಎನ್. ಶೆಟ್ಟಿ ಅವರ ಪುತ್ರ ಸುನಿಲ್ ಆರ್. ಶೆಟ್ಟಿ ಅವರು ಕೊಲ್ಲೂರು ದೇಗುಲಕ್ಕೆ ಸೇವಾ ರೂಪದಲ್ಲಿ ಬ್ರಹ್ಮರಥವನ್ನು ಸಮರ್ಪಿಸುತ್ತಿದ್ದು, ಕೋಟೇಶ್ವರದ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ನಿರ್ಮಿಸಲಾಗಿದೆ. 400 ವರ್ಷಗಳ ಬಳಿಕ ಕೊಲ್ಲೂರು ದೇಗುಲಕ್ಕೆ ನೂತನ ರಥ ನಿರ್ಮಾಣಗೊಂಡಿದೆ. ಹಳೆಯ ರಥದ ಮಾದರಿಯಲ್ಲೇ ಇದ್ದು, 1 ಕೋಟಿ ರೂ.ಗೂ ಅಧಿಕ ವೆಚ್ಚವಾಗಿದೆ. ರಥಕ್ಕೆ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇಗುಲದ ಬಳಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬಗ್ವಾಡಿ, ನೆಂಪು, ವಂಡ್ಸೆ, ಚಿತ್ತೂರು, ಇಡೂರು, ಜಡ್ಕಲ್, ಹಾಲ್ಕಲ್ ಮಾರ್ಗವಾಗಿ ಕೊಲ್ಲೂರಿಗೆ ಮೆರವಣಿಗೆಯಲ್ಲಿ ಒಯ್ಯಲಾಯಿತು. ಉಡುಪಿಯ ಅಪರ…
ಕಳತ್ತೂರು ಗುರ್ಮೆ ಪದ್ಮಾವತಿ ಪಿ ಶೆಟ್ಟಿಯವರ ನಾಲ್ಕನೇಯ ಪುಣ್ಯತಿಥಿಯ ಪ್ರಯುಕ್ತ ಸಮಾಜಸೇವಕ, ರಾಜಕೀಯ ಮುಂದಾಳು ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅವರ ಸಹೋದರರ ಸಾರಥ್ಯದಲ್ಲಿ ಕಾಪು ತಾಲೂಕಿನ ಗುರ್ಮೆ ಫೌಂಡೇಶನ್ ವತಿಯಿಂದ ಫೆಬ್ರವರಿ 20 ರಂದು ಸಂಜೆ 4 ಗಂಟೆಗೆ ಗುರ್ಮೆ ಗೋ ವಿಹಾರ ಲೋಕಾರ್ಪಣೆಯು ಜರಗಲಿದೆ. ಉದ್ಘಾಟನೆಯನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ನೆರವೇರಿಸಲಿದ್ದು ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಸ್ವಾಮೀಜಿ, ಪೇಜಾವರ ಮಠದ ಸ್ವಾಮೀಜಿ, ಗೌರಿ ಗದ್ದೆಯ ವಿನಯ್ ಗುರೂಜಿ, ಸಚಿವರಾದ ಅಂಗಾರ, ಕೋಟ ಶ್ರೀನಿವಾಸ್ ಪೂಜಾರಿ, ವಿ ಸುನೀಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಎಂ ಆರ್ ಜೆ ಗ್ರೂಪ್ ಛೇರ್ಮನ್ ಕೆ ಪ್ರಕಾಶ್ ಶೆಟ್ಟಿ, ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಡಾ ಮೋಹನ್ ಆಳ್ವ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನ ಹಾಗೂ ನೊಂದವರಿಗೆ ಸಾಂತ್ವನವೂ ನಡೆಯಲಿದೆ. ಶ್ರೀಕಾಂತ್ ಶೆಟ್ಟಿ ಕಾರ್ಕಳ ಮತ್ತು ಬಳಗ, ಸಂದೇಶ್ ನೀರುಮಾರ್ಗ ಮತ್ತು…
ಮುಲ್ಕಿ ಸೀಮೆಯ ಕರ್ನಿರೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಜನವರಿ ತಿಂಗಳ 17 ನೇ ತಾರೀಕಿನಿಂದ 23 ರವರೆಗೆ ನಡೆಯಲಿದೆ. ಆ ಪ್ರಯುಕ್ತ ಮುಂಬಯಿಯಲ್ಲಿ ನೆಲೆಸಿರುವ ಗ್ರಾಮದ ಭಕ್ತರನ್ನು, ಹಿತೈಷಿಗಳನ್ನು ವೈಯಕ್ತಿಕವಾಗಿ ಸಂಪರ್ಕಿಸಲು ಸಮಯಾವಕಾಶ ಸಿಗದ ಕಾರಣ, ವೈಯಕ್ತಿಕವಾಗಿ ಆಮಂತ್ರಿಸಲು ಹಾಗೂ ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಸಂಪೂರ್ಣ ಮಾಹಿತಿಯನ್ನು ನೀಡಲು ಸಮಾಲೋಚನೆ ಸಭೆಯನ್ನು ಜನವರಿ 3 ರಂದು ಬುಧವಾರ ಮುಂಬಯಿ ಗೋರೆಗಾವ್ ಪೂರ್ವದ ಸಿಟಿ ಫಿಲಂ ರಸ್ತೆಯ ಒಬೆರಾಯ್ ಮಾಲ್ ಬಳಿಯ ಹೋಟೆಲ್ ‘ಬಾಂಬೆ 63’ ಇಲ್ಲಿ ಸಂಜೆ 4 ಗಂಟೆಗೆ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಊರಿನ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿರುತ್ತಾರೆ. ಶ್ರೀ ವಿಷ್ಣುಮೂರ್ತಿ ದೇವರ ಭಕ್ತಾಭಿಮಾನಿಗಳು ಈ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವಾಧ್ಯಕ್ಷ ರವೀಂದ್ರ ಸಾಧು ಶೆಟ್ಟಿ ಹೊಸಮನೆ, ಕಾರ್ಯಧ್ಯಕ್ಷ ಹರಿಶ್ಚಂದ್ರ ಶೆಟ್ಟಿ ಕರ್ನಿರೆ…
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನ.21 ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಮ್ಮೇಳನ ಬೆಳಗ್ಗೆ 9 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10 ರಿಂದ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಮ್ಮೇಳನದಲ್ಲಿ ‘ಪತ್ರಿಕೋದ್ಯಮದ ಹೊಸ ಆಯಾಮಗಳು’ ಎಂಬ ವಿಷಯದಲ್ಲಿ ಸಮ್ಮೇಳನದ ಪ್ರಮುಖ ಗೋಷ್ಠಿ ನಡೆಯಲಿದೆ. ಈ ಗೋಷ್ಠಿ ಉದಯವಾಣಿ ದೈನಿಕದ ಸಂಪಾದಕ ಅರವಿಂದ ನಾವುಡರ ಅಧ್ಯಕ್ಷತೆಯಲ್ಲಿ ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನೀಯ ಸಂಪಾದಕ ಬಿ.ರವೀಂದ್ರ ಶೆಟ್ಟಿ, ಡೆಕ್ಕನ್ ಹೆರಾಲ್ಡ್…
ಚಿಣ್ಣರ ಬಿಂಬ ಮುಂಬಯಿಯ ಇದರ ಮೀರಾರೋಡ್ ಶಿಬಿರದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ವರ್ಧೆ ಆ. 13 ರಂದು ಅಪರಾಹ್ನ 1 ರಿಂದ ಭಾಯಂದರ್ ಪೂರ್ವ, ಶಕ್ತಿ ನಗರ ಎಸ್ ಎನ್ ಕಾಲೇಜಿನ ಸಮೀಪದ ನ್ಯೂ ಸೈಂಟ್ ಆಗ್ನೇಸ್ ಹೈಸ್ಕೂಲ್ ಸಭಾಗೃಹದಲ್ಲಿ ನಡೆಯಲಿದೆ. ಪ್ರತಿಭಾ ಸ್ವರ್ಧೆ ಕಾರ್ಯಕ್ರಮವನ್ನು ಸುಮತಿ ಎಜುಕೇಶನಲ್ ಟ್ರಸ್ಟ್, ಸೈಂಟ್ ಅಗ್ನೇಸ್ ಇಂಗ್ಲಿಷ್ ಹೈಸ್ಕೂಲ್, ಮೆಹ್ತಾ ಸ್ಕೂಲ್ ಮತ್ತು ಜೂನಿಯರ್ ಕಾಲೇಜಿನ ಕಾರ್ಯಧ್ಯಕ್ಷ ಡಾ. ಅರುಣೋದಯ ರೈ ಬಿಳಿಯೂರು ಗುತ್ತು ಇವರು ಉದ್ಘಾಟಿಸಲಿದ್ದಾರೆ. ಬಂಟರ ಸಂಘ ಮುಂಬಯಿ ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಜತೆ ಕೋಶಾಧಿಕಾರಿ ರಮೇಶ್ ಎಂ. ಶೆಟ್ಟಿ ಸಿದ್ಧಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೀರಾರೋಡ್ ಶುಭಂ ಹೊಟೇಲ್ ನ ಮಾಲಕ ಉದಯ್ ಎಂ ಶೆಟ್ಟಿ ಮಲಾರಬೀಡು, ಸಾಯಿ ಬಾಲಾಜಿ ಹೌಸಿಂಗ್ ಕ್ರೆಡಿಟ್ ಸೊಸೈಟಿಯ ನಿರ್ದೇಶಕ ಯೋಗೇಂದ್ರ ಎಸ್. ಗಾಣಿಗ ಹಾಗೂ ನಿತ್ಯಾನಂದ ಸೇವಾ ಸಂಸ್ಥೆಯ ಮಹಿಳಾ ವಿಭಾಗದ ಅಧ್ಯಕ್ಷೆ ಜಯಶ್ರೀ ಬಾಲಕೃಷ್ಣ ಶೆಟ್ಟಿ…
ಬೆಂಗಳೂರು ಪ್ರಾದೇಶಿಕ ಕಛೇರಿ ವ್ಯಾಪ್ತಿಯ ತುಮಕೂರು ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯು ತುಮಕೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಈ ಸಭೆಯನ್ನು ಉಪಾಧ್ಯಕ್ಷರಾದ ಶ್ರೀ ಅಮರನಾಥ ಶೆಟ್ಟಿ ಕೆಂಜೂರು ಮನೆಯವರು ದೀಪ ಬೆಳಗಿಸಿ ಚಾಲನೆ ನೀಡಿದರು. ಸಭೆಗೆ ಆಗಮಿಸಿದ ಎಲ್ಲಾ ಗಣ್ಯರನ್ನು ಜಿಲ್ಲಾ ನಿರ್ದೇಶಕರಾದ ಶ್ರೀಮತಿ ದಯಾಶೀಲ ಇವರು ಸ್ವಾಗತ ಮಾಡಿದರು. ಇದುವರೆಗೂ ತುಮಕೂರು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಇತ್ತೀಚಿಗೆ ನಿಧನರಾದ ಶ್ರೀ ಪ್ರೆಸ್ ರಾಜಣ್ಣ ಅವರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರು ಪ್ರಾದೇಶಿಕ ಕಛೇರಿಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಶೀನಪ್ಪ ಸರ್ ಇವರು ಕ್ರಿಯಾ ಯೋಜನೆ ಅನುಷ್ಠಾನದ ಕುರಿತು ಜನಜಾಗೃತಿ ಕಾರ್ಯಕ್ರಮಗಳಾದ ಮಧ್ಯವರ್ಜನ ಶಿಬಿರ, ನವ ಜೀವನ ಸಮಿತಿ ಬಲಪಡಿಸುವಿಕೆ, ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ, ತಂಬಾಕು ವಿರೋಧಿ ದಿನಾಚರಣೆ, ಮಾದಕ ವಸ್ತು ವಿರೋಧಿ ದಿನಾಚರಣೆ, ಗಾಂಧಿ ಜಯಂತಿ ಕಾರ್ಯಕ್ರಮ, ಇನ್ನಿತರ ಜನಜಾಗೃತಿ ಕಾರ್ಯಕ್ರಮವನ್ನು…
ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಒಂದು ಹೆಮ್ಮೆಯ ಕಲೆ, ಯಕ್ಷಗಾನ ಸಂಶೋಧನೆಯ ಮೂಲಕ ನೋಡಿದಾಗಲೂ ಯಕ್ಷಗಾನ ವಿಶ್ವಪ್ರಸಿದ್ದಿಯನ್ನು ಪಡೆದ ಕಲೆಯಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹೊಸ ಭಾಷ್ಯೆಯನ್ನು ಬರೆದಿದೆ ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಷಿ ತಿಳಿಸಿದರು. ಅಡ್ಯಾರ್ ಗಾರ್ಡನ್ ನಲ್ಲಿ ಜರಗಿದ ಯಕ್ಷಧ್ರುವ ಪಟ್ಲ ಸಂಭ್ರಮ 2023 ರ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಟ್ಲ ಭಾಗವತರ ಜನಪ್ರಿಯತೆ ಮತ್ತು ಜವಾಬ್ದಾರಿ ಏನು ಎಂಬುದನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನ ಮೂಲಕ ತಿಳಿಯಬಹುದು. ಪ್ರಸ್ತಾವಿಕವಾಗಿ ಮಾತನಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಮಾತನಾಡಿ ಯಕ್ಷಗಾನದ ಪಾರಂಪರಿಕೆ, ಸೊಗಡನ್ನು ಉಳಿಸುವ ಪ್ರಯತ್ನವೇ ಯಕ್ಷಗಾನ ಸ್ಪರ್ಧೆಯ ಉದ್ದೇಶವಾಗಿದೆ ಎಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಲ್ಕೂರ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಹೇಶ್ ಮೋಟರ್ಸ್ ಸಂಸ್ಥೆಯ ಮಾಲಕ ಜಯರಾಮ ಶೇಖ, ಬಹರೈನ್ – ಸೌದಿ ಘಟಕದ ಅಧ್ಯಕ್ಷ ವಿ…