Author: admin

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬಂಟರ ಸಂಘ ಮುಂಬಯಿಯ ವಸಾಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಕಾರ್ಯಧ್ಯಕ್ಷೆ ಉಷಾ ಶ್ರೀಧರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಂಟರ ಸಂಘ ಮುಂಬಯಿ ಇದರ ಪಶ್ಚಿಮ ವಲಯದ ಸಂಯೋಜಕರಾದ ಶಶಿಧರ್ ಕೆ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ನಾಲಾಸೋಪಾರದ ರೀಜೆನ್ಸಿ ಬ್ಯಾಂಕ್ವೆಟ್ ಹಾಲ್ ಇಲ್ಲಿ ಯೋಗ ಶಿಬಿರವು ಆರ್ಟ್ ಆಫ್ ಲಿವಿಂಗ್ ನ ಯೋಗ ಶಿಕ್ಷಕರಾದ ನರ್ಮದಾ ಮತ್ತು ಅವರ ತಂಡದ ನೆರವಿನಿಂದ ಜರಗಿತು. ಈ ಕಾರ್ಯಕ್ರಮದಲ್ಲಿ ವಸಾಯಿ ನಾಲಾಸೋಪಾರ ವಿರಾರ್ ಪರಿಸರದ ಹೆಚ್ಚಿನ ಮಹಿಳೆಯರು ಉಪಸ್ಥಿತರಿದ್ದು ಯೋಗ, ಪ್ರಾಣಾಯಾಮ ಹಾಗು ಧ್ಯಾನದ ಪ್ರಯೋಜನವನ್ನು ಪಡೆದರು. ಈ ಸಂದರ್ಭದಲ್ಲಿ ವಸಾಯಿ – ದಹಾಣು ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ಹರೀಶ್ ಪಾಂಡು ಶೆಟ್ಟಿ, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಧ್ಯಕ್ಷೆ ಜಯ ಅಶೋಕ್ ಶೆಟ್ಟಿ, ಮಂಜುಳಾ ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಧ್ಯಕ್ಷೆ ಉಮಾ ಸತೀಶ್ ಶೆಟ್ಟಿ, ಕಾರ್ಯದರ್ಶಿ…

Read More

ಮುಂಡ್ಕೂರು ಜಾರಿಗೆ ಕಟ್ಟೆ ನಿವಾಸಿ ತಾಳಿಪಾಳಿ ಮೂಡ್ರಗುತ್ತು ಲಯನ್ ರಮೇಶ್ ಶೆಟ್ಟಿ ಅವರು ನಿಧನ ಹೊಂದಿದರು. ಇವರು ಪ್ರಗತಿಪರ ಕೃಷಿಕರು ಆಗಿದ್ದು, ರೈಸ್ ಮಿಲ್ ಉದ್ಯಮದಿಂದ ಚಿರಪರಿಚಿತರಾಗಿ ಎಲ್ಲರ ಒಡನಾಡಿಗಳಾಗಿ ಬಾಳಿ ಬದುಕಿದವರು. ಮುಂಡ್ಕೂರು ಕಡಂದಲೆ ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾಗಿ ಲಯನ್ಸ್ ವಲಯದಲ್ಲಿ ಮನೆ ಮಾತಾಗಿ ಸೇವಾ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರ ಮನ ಗೆದ್ದವರು. ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿಕೊಂಡವರು. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾಗಿದ್ದ ರಮೇಶ್ ಶೆಟ್ಟಿಯವರು ಸಕ್ರಿಯವಾಗಿ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡಿ ಧನ್ಯತೆಯನ್ನು ಕಂಡವರು. ಇತ್ತೀಚೆಗೆ ತಾಳಿಪಾಡಿ ಮೂಡ್ರಗುತ್ತಿನ ಕಾರಣಿಕ ದೈವಗಳ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವದ ಧಾರ್ಮಿಕ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿ ನಿಂತು ಸೇವೆಯನ್ನು ಮಾಡಿ ಧರ್ಮ ದೈವಗಳ ಶ್ರೀರಕ್ಷೆಗೆ ಪಾತ್ರರಾದವರು. ಊರಿಗೆ ಊರೇ ಇವರನ್ನು ಕೊಂಡಾಡುವ ಸರಳ ಸಜ್ಜನಿಕೆಯ ಪ್ರತಿ ಮೂರ್ತಿಯಾಗಿ, ಪ್ರಾಮಾಣಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡವರು. ಇವರ ನಿಧನದಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಅವರನ್ನಗಲಿದ ಅವರ ಪತ್ನಿ ಅವರ ಮಕ್ಕಳು,…

Read More

ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ.‌ ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ.‌ ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ಆದೇಶ ತಪ್ಪದೆ ಪಾಲಿಸುತ್ತಾ ಬಂದಿದ್ದೇನೆ. ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ ಎಂದರು. ಜನರಿಗಾಗಿ ಸದಾ ಕೆಲಸ ಮಾಡುತ್ತೇನೆ. ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಇದರಿಂದ ಕಾರ್ಯಕರ್ತರು ಎದೆಗುಂದ ಬೇಕಾಗಿಲ್ಲ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ರಮಾನಾಥ ರೈ ಹೇಳಿದರು.

Read More

ಯು.ಎ.ಇ ಬಂಟ್ಸ್ ನ 46 ನೇ ವರ್ಷದ ಯು.ಎ.ಇ ಬಂಟೆರ್ನ ಕೂಡುಕಟ್ಟ್ ( Get Together) ಕಾರ್ಯಕ್ರಮವು ಎಪ್ರಿಲ್ 30 ರಂದು ಜರುಗಿತು. ಯು.ಎ.ಇ ದೇಶದ ಎಲ್ಲಾ ರಾಜ್ಯದಲ್ಲಿ ನೆಲೆಸಿರುವ ಸಾವಿರಾರು ಬಂಟ ಬಾಂದವರ ಸಮ್ಮುಖದಲ್ಲಿ ದುಬೈನ ದೇರಾದ ಬ್ರಿಸ್ಟೊಲ್ ಹೋಟೆಲ್ ಸಭಾಂಗಣದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಗಣ್ಯಾತಿ ಗಣ್ಯರನ್ನು ಆರತಿ ಎತ್ತಿ ತಿಲಕವನ್ನು‌ ಹಚ್ಚಿ ಕೇರಳದ ಚೆಂಡೆಯ ವಾದನ, ಸುಮಂಗಲೆಯರು ಪೂರ್ಣ ಕುಂಭ ಕಲಶ ಸ್ವಾಗತದ ಮೆರವಣಿಗೆಯ ಮೂಲಕ ವೇದಿಕೆಗೆ ಬರಮಾಡಿಕೊಳ್ಳಲಾಯಿತ್ತು. ನಂತರ ಗಣ್ಯರು 46 ನೇ ವರ್ಷದ ಕೂಡುಕಟ್ಟ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಂಟ ಗೀತೆ ಹಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ರ ವರೆಗೆ ಯು.ಎ.ಇ ಬಂಟರ ಪ್ರತಿಭೆಗಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಬಂಟ ವಿಭೂಷಣ ಪ್ರಶಸ್ತಿ ಪ್ರದಾನ : ವರ್ಷಂಪ್ರತಿ ಕೊಡಮಾಡುವ “ಬಂಟ ವಿಭೂಷಣ” ಪ್ರಶಸ್ತಿಯನ್ನು ಈ ವರ್ಷ ಆಳ್ವಾಸ್…

Read More

ಬಂಟರ ಸಂಘ ಪಿಂಪ್ರಿ- ಚಿಂಚ್ವಾಡ್ ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿದ್ದು ಮುಂದಿನ ಏಪ್ರಿಲ್ 16 ರಂದು ಸಂಘದ ರಜತ ಮಹೋತ್ಸವದ ಭವ್ಯ ಸಮಾರಂಭವು ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ ಇವರ ನೇತೃತ್ವದಲ್ಲಿ ದಿನಪೂರ್ತಿ ನಡೆಯಲಿದ್ದು ಮಾರ್ಚ್ 23 ರಂದು ಚಿಂಚ್ವಾಡ್ ನಲ್ಲಿರುವ ಸಂಘದ ಮಿನಿ ಸಭಾಗೃಹದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ, ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ ಶೆಟ್ಟಿ, ಕೆ. ಪದ್ಮನಾಭ ಶೆಟ್ಟಿ, ವಿಜಯ್ ಶೆಟ್ಟಿ ಕಟ್ಟಣಿಗೆ ಮನೆ ಬೋರ್ಕಟ್ಟೆ, ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಬೆಳ್ಳಂಪಳ್ಳಿ, ಗೌರವ ಕೋಶಾಧಿಕಾರಿ ಸುಧಾಕರ ಶೆಟ್ಟಿ ಪೆಲತ್ತೂರು ,ಶಿಕ್ಷಣ ಮತ್ತು ಸಮಾಜಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ಕೆ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜ್ಯೋತಿ ವಿಜಯ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಆಕಾಶ್ ಜೆ ಶೆಟ್ಟಿ ಸಂಘದ ಸದಸ್ಯರಾದ ಅವಿನಾಶ್ ಶೆಟ್ಟಿ ಮಂದಾಡಿಗುತ್ತು, ಸಂತೋಷ್ ಕಡಂಬ, ನಿಧೀಶ್ ಶೆಟ್ಟಿ ನಿಟ್ಟೆ, ಕಿರಣ್…

Read More

ಮುಂಬಯಿಯ ಹಿರಿಯ ಕವಿ, ಸಾಹಿತಿ, ಪತ್ರಕರ್ತ ಕೋಡು ಭೋಜ ಶೆಟ್ಟಿಯವರು ಮುಲುಂಡ್ ಪಶ್ಚಿಮದ ಸಿಟಿ ಆಫ್ ಜೋಯ್ಸ್ ಇದರ ಹುರಾ ಅಪಾರ್ಟ್ಮೆಂಟ್ ನ ಸ್ವಗೃಹದಲ್ಲಿ ವಯೋಸಹಜ ಅಸ್ವಸ್ಥತೆಯಿಂದ ನಿಧನರಾದರು. ಓರ್ವ ಸಾಹಿತಿ, ನಾಟಕಕಾರ, ನಿರ್ದೇಶಕ, ಹೋಟೆಲು ಉದ್ಯಮಿಯಾಗಿ ಜನಾನುರಾಗಿಯಾಗಿದ್ದ ಮೃತರು ಸಾಮಾಜಿಕ ಕಾಳಜಿಯುಳ್ಳವರಾಗಿದ್ದು ಜನಪರ ಸೇವೆಯಲ್ಲಿ ನಿರತರಾಗಿದ್ದರು. ಸುಮಾರು 500 ಕ್ಕೂ ಮಿಕ್ಕಿ ಕತೆ, ಕವಿತೆ, ಲೇಖನಗಳನ್ನು ರಚಿಸಿದ್ದು ಹಾಸ್ಯ ಕವಿ ಎಂದೇ ಪ್ರಸಿದ್ದರಾಗಿದ್ದರು. ಇವರು ಸುಮಾರು 30 ಕ್ಕೂ ಅಧಿಕ ನಾಟಕಗಳನ್ನು ರಚಿಸಿದ್ದು ಅವುಗಳಲ್ಲಿ ಸುಮಾರು 15 ನಾಟಕಗಳು ಪ್ರಕಾಶಿತಗೊಂಡಿದ್ದವು. ಇವರು ರಚಿಸಿದ ಕಪ್ಪು ನೆತ್ತೆರ್ ನಾಟಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆ ಗೌರವ ಪ್ರಾಪ್ತಿಯಾಗಿತ್ತು. ಬಂಟರ ಸಂಘ ಮುಂಬಯಿ ಇದರ ಮುಖವಾಣಿ ಬಂಟರ ವಾಣಿ ಯ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಭೋಜ ಶೆಟ್ಟರು ಪತ್ನಿ, ಎರಡು ಹೆಣ್ಣು ಮಗಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಭೋಜ ಶೆಟ್ಟಿಯವರ ನಿಧನಕ್ಕೆ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,…

Read More

ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ಮನವಿ ಪತ್ರವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಬಿಡುಗಡೆ ಮಾಡಿದರು. ಒಕ್ಕೂಟದ ಮೂಲಕ ಈ ಧಾರ್ಮಿಕ ಕಾರ್ಯಕ್ಕೆ ಸಹಕಾರ ನೀಡುವುದಾಗಿ ಐಕಳ ಹರೀಶ್ ಶೆಟ್ಟಿ ನುಡಿದರು. ಈ ಸಂದರ್ಭದಲ್ಲಿ ವೇದವ್ಯಾಸ ಉಡುಪ, ಮುಂಬಯಿ ಸಮಿತಿ ಗೌರವಾಧ್ಯಕ್ಷರಾದ ರಾಜೇಂದ್ರ ಶೆಟ್ಟಿ ಮಾಗಂದಡಿ, ನಿತಿನ್ ಶೆಟ್ಟಿ ದೇವಸ್ಯ ಕೊಡೆತ್ತೂರುಗುತ್ತು, ಶ್ರೀಧರ ಆಳ್ವ ಮಾಗಂದಡಿ, ಶ್ರೀ ಜಯರಾಮ ಮುಕ್ಕಾಲ್ದಿ, ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಬ್ರಹ್ಮಕಲಶದ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ, ಮೋಹನ್ ಶೆಟ್ಟಿ ಮೂಡು ದೇವಸ್ಯ, ಬ್ರಹ್ಮಕಲಶ ಸಮಿತಿಯ ಕೋಶಾಧಿಕಾರಿ ಶೈಲೇಶ್ ಅಂಚನ್ ಉಪಸ್ಥಿತರಿದ್ದರು.

Read More

‘ಕರ್ನಾಟಕದಲ್ಲಿ ಪರಿಶುದ್ಧವಾದ ಕನ್ನಡ ಭಾಷೆಯನ್ನು ಬಳಸುವ ಒಂದು ಕಲಾಪ್ರಕಾರವಿದ್ದರೆ ಅದು ಯಕ್ಷಗಾನ ಮಾತ್ರ. ಕಳೆದ ಹತ್ತು ವರ್ಷಗಳಿಂದ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಪ್ರತಿ ನವೆಂಬರ್ ತಿಂಗಳಲ್ಲಿ ನಡೆಸುತ್ತಿರುವ ಯಕ್ಷಗಾನ ತಾಳಮದ್ದಳೆಯ ನುಡಿ ಹಬ್ಬ ಕನ್ನಡ ಜನತೆಗೆ ಯಕ್ಷಾಂಗಣದ ಮಹೋನ್ನತ ಕೊಡುಗೆ. ಅದಕ್ಕಾಗಿ ಈ ಬಾರಿ ಹನ್ನೊಂದನೇ ಸಪ್ತಾಹವು ಕಲಾಭಿಮಾನಿಗಳ ಪ್ರೋತ್ಸಾಹದಿಂದ ಯಶಸ್ವಿಯಾಗಲಿ’ ಎಂದು ಯಕ್ಷಾಂಗಣದ ಗೌರವಾಧ್ಯಕ್ಷ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಎ.ಜೆ. ಶೆಟ್ಟಿ ಹೇಳಿದ್ದಾರೆ‌. ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ನವೆಂಬರ್ 19 ರಿಂದ 25 ರವರೆಗೆ ಮಂಗಳೂರಿನಲ್ಲಿ ಆಯೋಜಿಸಿದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023: ಶ್ರೀಹರಿ ಚರಿತ್ರೆ’ ಸರಣಿಯ ಕರೆಯೋಲೆಯನ್ನು ಕದ್ರಿ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ ಮಹೇಶ್ ಮೋಟರ್ಸ್ ಮಾಲಕ ಎ.ಕೆ.ಜಯರಾಮ ಶೇಖ ಶುಭ ಹಾರೈಸಿದರು. ಯಶಸ್ಸಿಗೆ ಪ್ರಾರ್ಥನೆ: ಬಳಿಕ ದೇವರ ಮುಂದೆ ಆಮಂತ್ರಣ ಪತ್ರಿಕೆಯನ್ನಿರಿಸಿ…

Read More

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸಿಎನ್ ಜಿ ಉತ್ಪಾದನೆ ಘಟಕವನ್ನು ತನ್ನ ಒಡ್ಡೂರು ಫಾರ್ಮ್ಸ್ ನಲ್ಲಿ ಆರಂಭಿಸಿದ್ದು, ನಿರ್ಮಾಣ ಕಾರ್ಯ ಮುಕ್ತಾಯ ಹಂತದಲ್ಲಿದೆ. ಈ ಕುರಿತು ಒಡ್ಡೂರು ಫಾರ್ಮ್ಸ್ ನಲ್ಲಿ ಗುರುವಾರ ಸುದ್ಧಿಗಾರರೊಂದಿಗೆ ಮಾತನಾಡಿ ಶಾಸಕ ರಾಜೇಶ್ ನಾಯ್ಕ್, ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಈ ಘಟಕ ಅನುಷ್ಠಾನಗೊಂಡಿದ್ದು, ಶೀಘ್ರ ಕೇಂದ್ರ ಸಚಿವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಶಾಸಕ ರಾಜೇಶ್ ನಾಯ್ಕ್ ಮಾರ್ಗದರ್ಶನದಲ್ಲಿ ಅವರ ಪುತ್ರ ಉನ್ನತ್ ಆರ್. ನಾಯ್ಕ್ ಘಟಕದ ಉಸ್ತುವಾರಿ ನೋಡಿಕೊಳ್ಳಲಿದ್ದು ರೀಟ್ಯಾಪ್ ಸೊಲ್ಯೂಷನ್ ಸಂಸ್ಥೆ ಇದರ ಪೂರ್ತಿ ನಿರ್ವಹಣೆ ಮಾಡಲಿದೆ. ಸುಮಾರು 60 ಸೆಂಟ್ಸ್ ಜಮೀನಿನಲ್ಲಿ ಘಟಕ ಸುಸಜ್ಜಿತ ಹಾಗೂ ವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು, ಈಗಾಗಲೇ ಪ್ರಾಯೋಗಿಕವಾಗಿ ಸಾವಯವ ಗೊಬ್ಬರ ಮತ್ತು ಅನಿಲ ಉತ್ಪಾದನೆ ಆರಂಭಗೊಂಡಿದೆ. ಸದ್ಯಕ್ಕೆ ನಗರ ಮತ್ತು ಗ್ರಾಮೀಣ ಸ್ಥಳೀಯಾಡಳಿತ ಸಂಸ್ಥೆಗಳ ಹಸಿ ತ್ಯಾಜವನ್ನು ಬಳಸಿಕೊಂಡು ಸಾವಯವ ಗೊಬ್ಬರ ಮತ್ತು ಅನಿಲ ಉತ್ಪಾದನೆ ಮಾಡಲಾಗುತ್ತಿದ್ದು, ಇದರ ಮಾರಾಟಕ್ಕಾಗಿ ಪೆಸೊ (ಪೆಟ್ರೋಲಿಯಂ ಮತ್ತು…

Read More

“ತುಳುನಾಡು” ಪರಶುರಾಮ ಸೃಷ್ಟಿ ಎಂಬುದು ಲೋಕ ಪ್ರತೀತಿ. ದ್ರಾವಿಡ ಮೂಲದ ಜನರು ಹೆಚ್ಚಾಗಿ ವಾಸಿಸುತ್ತಿರುವ ತುಳುನಾಡಿನಲ್ಲಿ ಬಂಟರು ಮೂಲ ಹಾಗೂ ಪ್ರಮುಖ ಪಂಗಡದವರಾಗಿ ಕಂಡು ಬರುತ್ತಾರೆ. ಬಂಟರ ಮಾತೃಭಾಷೆ ತುಳು. ತುಳುನಾಡಿನ ಬಲಿಷ್ಟ ಕುಲ ಕುಟುಂಬದವರಾಗಿ ಬಂಟರು ಹಲವಾರು ಪೌರುಷಗಳನ್ನು ಮೆರೆದಿದ್ದಾರೆ. ಬಂಟರು ತುಳುನಾಡಿನ ರಕ್ಷಣೆಗಾಗಿ ಪರಶುರಾಮರ ಆಣತಿಯಂತೆ ನೆಲೆನಿಂತ “ನಾಗವಂಶಿ ಕ್ಷತ್ರಿಯರು” ಎಂದು ತಿಳಿದುಬರುತ್ತದೆ. ತುಳು ನಾಡಿನ ಬಂಟರು ನಾಗವಂಶಿ ಕ್ಷತ್ರಿಯರಾಗಿದ್ದು ನಾಗಬ್ರಹ್ಮ ದೇವರನ್ನು ಮೂಲ ಮತ್ತು ಕುಲ ದೇವರಾಗಿ ನಂಬುತ್ತಾರೆ. ತುಳು ನಾಡಿನಲ್ಲಿ ನಾಗರಪಂಚಮಿ ಬಹಳ ವಿಶೇಷವಾದ ಹಾಗೂ ಪರ್ವಗಳ ಸಾಲಿನಲ್ಲಿ ಬರುವ ಪ್ರಥಮ ಹಬ್ಬ. ಇದಲ್ಲದೆ ತುಳುನಾಡಿನ ಬಂಟರು ನಾಗಮಂಡಲ, ಆಶ್ಲೇಷ ಬಲಿ, ದಕ್ಕೆದ ಬಲಿ ಎಂಬಿತ್ಯಾದಿ ವಿಶೇಷ ನಾಗದೇವರ ಆರಾಧನೆಗಳನ್ನು ಮಾಡುತ್ತಾರೆ. ನಾಗರ ಪಂಚಮಿಯಂದು ಎಲ್ಲಾ ಕುಲ ಕುಟುಂಬದವರು ಮೂಲದ ನಾಗದೇವರಿಗೆ ಹಾಲೆರೆಯುತ್ತಾರೆ. ವಿಶೇಷವಾಗಿ ಬಂಟರ ಮೂಲಸ್ಥಾನಗಳಿಗೆ ಆದಿ ಎಂದು ಹೇಳುತ್ತಾರೆ. ಇದರಿಂದ ಬಂಟರ ಮೂಲಸ್ಥಾನ ತುಳುನಾಡು ಎಂಬುದಕ್ಕೆ ಪೂರ್ಣ ಸ್ಪಟೀಕರಣ ಸಿಕ್ಕಂತಾಗುತ್ತದೆ. ಹಲವಾರು ಸಹಸ್ರ…

Read More