Author: admin

ಭಾರತದ ಸಂಸ್ಕೃತಿ ತ್ಯಾಗ ಜೀವನವನ್ನು ಜಗತ್ತಿಗೆ ಬೋಧಿಸಿದೆ. ಯಾವುದನ್ನೂ ಯಾರ ಮೇಲೂ ಹೇರದ ಸಂಸ್ಕೃತಿಯನ್ನು ಹೊಂದಿದ ಭಾರತವನ್ನು ದೈವಿಕ ಶಕ್ತಿ ಕಾಪಾಡುತ್ತಿದೆ. ಅದು ಸಿದ್ಧರು, ಸಾಧುಗಳ ತಪಃ ಶಕ್ತಿಯ ಫ‌ಲ ಎಂದು ಹಿಂಜಾವೇ ಜಿಲ್ಲಾ ಸಮಿತಿ ಸದಸ್ಯ ಶ್ರೀಕಾಂತ್‌ ಶೆಟ್ಟಿ ಕಾರ್ಕಳ ಹೇಳಿದರು. ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ನಡೆದ ಅತಿರುದ್ರ ಮಹಾಯಾಗದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು. ಹಣಕ್ಕಿಂತ ಸಾತ್ವಿಕ ಶಕ್ತಿ ಮೇಲು ಎಂಬುದನ್ನು ಪ್ರಪಂಚಕ್ಕೆ ಭಾರತ ತೋರಿಸಿಕೊಟ್ಟಿದೆ. ನಾವು ಬದುಕ ಬೇಕು, ಇನ್ನೊಬ್ಬರನ್ನೂ ಬದುಕಲು ಬಿಡಬೇಕು ಎಂದು ಸಾರಿ ನಡೆಯು ತ್ತಿರುವ ದೇಶವಿದ್ದರೆ ಅದು ಭಾರತ. ಶಿವನ ಅಘೋರ ಮುಖದಿಂದ ದೈವಗಳ ಸಾಕ್ಷಾತ್ಕಾರ ಎಂಬ ಕಲ್ಪನೆ ತುಳು ನಾಡಿನಲ್ಲಿದೆ. ಆಂಗ್ಲ ಪ್ರಣೀತ ಶಿಕ್ಷಣ ಕ್ರಮದಿಂದ ಭಾರತದ ಪ್ರಗತಿ ಎಂದು ಕೆಲವು ಬುದ್ಧಿಜೀವಿಗಳು ಹೇಳಿ ದ್ದರೂ ಅಷ್ಟೊಂದು ಸುಶಿಕ್ಷಿತರಲ್ಲದ ನಮ್ಮ ತುಳುನಾಡಿನ ದೈವನರ್ತಕರು ಬಹಳ ಹಿಂದೆಯೇ ಭವ್ಯ ಭಾರತದ ವಿಸ್ತಾರದ ಅರಿವು ಹೊಂದಿದ್ದರು ಎಂದರು. ಧಾರ್ಮಿಕ ಸಭೆಯನ್ನು ಕೆಎಂಸಿ ಡೀನ್‌ ಡಾ| ಪದ್ಮರಾಜ್‌…

Read More

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಕಾರ್ಯಕ್ರಮ ಆದಿತ್ಯವಾರ ಸಂಜೆ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಜರುಗಿತು. ಗುರ್ಮೆ ಸುರೇಶ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. “ಆಲದ ಮರದಂತೆ ನೊಂದವರ ಆಶಾಕಿರಣವಾಗಿರುವ ಪ್ರಕಾಶ್ ಶೆಟ್ಟಿ ಅವರು ತಾವು ಕಷ್ಟಪಟ್ಟು ದುಡಿದ ಹಣವನ್ನು ಕೂಡಿಡದೆ ಸಮಾಜಕ್ಕೆ ಇಂತಿಷ್ಟು ಪಾಲು ನೀಡುತ್ತಿದ್ದಾರೆ. ಇದು ಇನ್ನಷ್ಟು ಮಂದಿಗೆ ಸ್ಫೂರ್ತಿಯಾಗಲಿ. ನೊಂದವರು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಪ್ರಕಾಶ್ ಶೆಟ್ಟಿಯವರ ಸಂಖ್ಯೆ ಸಾವಿರವಾಗಲಿ. ಪ್ರತೀ ವರ್ಷ ತಮ್ಮ ಹುಟ್ಟುಹಬ್ಬದ ದಿನದಂದು ಸಮಾಜಕ್ಕೆ ನೆರವಿನ ಸಹಾಯಹಸ್ತ ಚಾಚುವ ಅವರ ಗುಣ ಶ್ಲಾಘನೀಯವಾದುದು. ಕಳೆದ ಬಾರಿ ಹೇಳಿದಂತೆ ಈ ಬಾರಿ ಮೂರು ಕೋಟಿ ರೂಪಾಯಿಯನ್ನು ಸಹಾಯಹಸ್ತದ ರೂಪದಲ್ಲಿ ವಿತರಣೆ ಮಾಡುತ್ತಿದ್ದಾರೆ ಅವರಿಗೆ ನಮ್ಮೆಲ್ಲರ ಆಶೀರ್ವಾದವಿರಲಿ” ಎಂದರು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಎಂಆರ್ ಜಿ ಗ್ರೂಪ್ ಚೇರ್ ಮೆನ್ ಕೆ. ಪ್ರಕಾಶ್ ಶೆಟ್ಟಿ ಅವರು, “ಇಂದಿನ ದಿನ ನನ್ನ ಜೀವನದಲ್ಲಿ ಅತ್ಯಂತ ಸಂತೋಷ…

Read More

ಕಾಯುತಿರುವುದು ಮಾನವ ನಿನಗಾಗಿ ಸಾಧನೆಯ ಪಕ್ಷಿ, ನಿನ್ನ ನಂಬಿಕೆಯೇ ಅದಕ್ಕೆ ಸಾಕ್ಷಿ, ಸದಾ ನಗಲು ಬಯಸ್ಸುವ ಮನಸ್ಸು, ಆ ಮನಸ್ಸಿಗೆಂದು ಪುಟ್ಟ ಕನಸ್ಸು, ನೀ ಯಾರೆಂದು ತೋರಿಸೇ ನಿನ್ನ ಪ್ರಯತ್ನಕ್ಕೆ ಜನರೆನ್ನುವರು ಆಕೆ ಸಾಧಿಸಿದಳೆಂದು. ಚಿಕ್ಕ ಜೀವನದಿಂದ, ಜಗತ್ತೆಂಬ ದೊಡ್ಡ ಸಾಗರದಲ್ಲಿ ನಾನು ಯಾರೆಂದು ತಿಳಿಯಲು ಸಾಧನೆ ಅನ್ನೋ ಮೀನಾಗಿರಬೇಕು. ಹೌದು ಕಲಾಭಿ ತಂಡದ ರತ್ನ, ಜನಮಾನಸದಲ್ಲಿ ನೆಲೆಸಿರೋ ಅರ್ಥಾತ್ ಶಾರದೇ, ನಾಟ್ಯಲೋಕದಲ್ಲಿ ಶಾಕುಂತಲೇ, ನಿರೂಪಣಾ ಕ್ಷೇತ್ರದ ಅಂಬೆಗಾಲ ಮಗು ತೃಷಾ ಶೆಟ್ಟಿ. ದಿನೇಶ್ ಆರ್ ಶೆಟ್ಟಿ ಕೊಟ್ಟಿಂಜ ಮತ್ತು ಚಂಚಲ ಶೆಟ್ಟಿಯವರ ಕುಟುಂಬದ ದೀಪಕ್ಕೆ ಬೆಳಕು ನೀಡಿದ ಮಗಳು ತೃಷಾ ಶೆಟ್ಟಿ. ಪ್ರಾಥಮಿಕ ಶಿಕ್ಷಣವನ್ನು ಹೋಲಿ ಫ್ಯಾಮಿಲಿ ಮೇರಮಜಲು, ಪ್ರೌಢ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಸೈಂಟ್ ಆಗ್ನೇಸ್ ಬಾಲಕಿಯರ ಕಾಲೇಜು ಬೆಂದೂರ್ ಮಂಗಳೂರಿನಲ್ಲಿ ಕಲಿತ ಇವರು, ಪ್ರಸ್ತುತ ಬಿ ಎ ಇನ್ ಜರ್ನಲಿಸಂ ಅನ್ನು ಸೈಂಟ್ ಆಗ್ನೇಸ್ ಕಾಲೇಜು ಮಂಗಳೂರಿನಲ್ಲಿ ಕಲಿಯುತ್ತಿದ್ದಾರೆ. ಬೆಳೆಯೋ ಚಿಕ್ಕ ಸಸಿಯ ಪೋಷಣೆಯ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ-ನಿರ್ದೇಶಕರು ಹಾಗೂ ಮುಂಬಯಿಯ ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಇದರ ಸಿ. ಎಂ. ಡಿ. ಶ್ರೀ ತೋನ್ಸೆ ಆನಂದ್ ಎಂ. ಶೆಟ್ಟಿಯವರ ಮಂಗಳೂರಿನ “ಶಶಿ ಮಹಲ್”ನ ಗೃಹಪ್ರವೇಶದ ಸಂಭ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿ ಶ್ರೀ ತೋನ್ಸೆ ಆನಂದ್ ಎಂ.ಶೆಟ್ಟಿ ಮತ್ತು ಶ್ರೀಮತಿ ಶಶಿರೇಖಾ ಆನಂದ್ ಶೆಟ್ಟಿಯವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಮಹಾದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ, ಪೋಷಕರಾದ ಶ್ರೀ ವಿವೇಕ್ ಶೆಟ್ಟಿ, ಶ್ರೀ ಶ್ರೀನಾಗೇಶ್ ಹೆಗ್ಡೆ, ಉಪಾಧ್ಯಕ್ಷರಾದ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಶ್ರೀ ಮೋಹನದಾಸ್ ಶೆಟ್ಟಿ, ಶ್ರೀ ಮನಮೋಹನ್ ಶೆಟ್ಟಿ ಮುಂಬೈ, ಶ್ರೀಮತಿ ಚಂದ್ರಿಕಾ ಐಕಳ ಹರೀಶ್ ಶೆಟ್ಟಿ, ಶ್ರೀಮತಿ ಲತಾ ಕರ್ನಿರೆ ವಿಶ್ವನಾಥ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ ಶ್ರೀ ಕೊಲ್ಲಾಡಿ ಬಾಲಕೃಷ್ಣ ರೈ, ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Read More

ಸನಾತನ ಧರ್ಮ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತಹ ಕಾರ್ಯ ನಿರಂತರವಾಗಿ ನಡೆಯುತ್ತಿರಬೇಕು. ಭಜನೆ, ಕುಣಿತ ಭಜನೆಗಳಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಸಂಘ ಸಂಸ್ಥೆಗಳು ಆಯೋಜಿಸುವುದರಿಂದ ಮಕ್ಕಳಲ್ಲಿ ಧರ್ಮ, ದೇವರ ಮೇಲೆ ಭಕ್ತಿ ಶ್ರದ್ಧೆ ಹೆಚ್ಚಾಗುತ್ತದೆ ಎಂದು ಬಾಂಬೆ ಬಂಟ್ಸ್ ಅಸೋಸಿಯೇಶನ್‌ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ ತಿಳಿಸಿದರು. ಬಾಂಬೆ ಬಂಟ್ಸ್ ಅಸೋಸಿಯೇಶನ್‌ನ ಮಹಿಳಾ ವಿಭಾಗವು ಜುಯಿ ನಗರದ ಬಂಟ್ಸ್ ಸೆಂಟರ್ ನಲ್ಲಿ ಆಯೋಜಿಸಿದ್ದ ಭಜನೆ ಮತ್ತು ಕುಣಿತ ಭಜನಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಂಟ್ಸ್ ಅಸೋಸಿಯೇಶನ್ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದೆ. ಮಹಿಳಾ ವೇದಿಕೆ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸದಾ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿರುವುದು ಅಭಿನಂದನೀಯ. ಇಂದಿನ ಕಾಲಘಟ್ಟದಲ್ಲಿ ಇಂತಹ ಧಾರ್ಮಿಕ ಯೋಜನೆ ಅಗತ್ಯವಿದೆ. ಇಂತಹ ಕಾರ್ಯಕ್ರಮಗಳಿಗೆ ಎಲ್ಲರೂ ಪ್ರೋತ್ಸಾಹಿಸಬೇಕಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಂಡಗಳು ಭಾಗವಹಿಸಿರುವುದು ಸಂತೋಷದ ವಿಷಯ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿದ್ದ ಶ್ರೀ ವಜ್ರಮಾತಾ…

Read More

ಸನಾತನ ಹಿಂದೂ ಧರ್ಮ ಎಲ್ಲರಿಗೂ ಅವರವರ ಸ್ವಭಾವ, ಸಾಮರ್ಥ್ಯಗಳಿಗೆ ಅನುಸಾರವಾದ ಆರಾಧನೆಯ ವ್ಯವಸ್ಥೆಗಳನ್ನು ನೀಡಿದೆ. ಯಜ್ಞಯಾಗ ತಪಸ್ಸುಗಳ ಕ್ಲಿಷ್ಟ ಮಾರ್ಗಗಳಿದ್ದಂತೆ, ಜನ ಸಾಮಾನ್ಯರು ತಮ್ಮ ವ್ಯಾವಹಾರಿಕ ಜೀವನದ ಜತೆ ಜತೆಯಲ್ಲಿ ಸುಲಭವಾಗಿ ನಡೆಸಬಹುದಾದ ವ್ರತಗಳನ್ನು ಶಾಸ್ತ್ರ ಪುರಾಣಗಳು ಬೋಧಿಸುತ್ತವೆ. ಈಗ ನಡೆಯುತ್ತಿರುವ ಶ್ರಾವಣ ಮಾಸವು ಸುಲಭವಾದ, ಸಾರ್ವತ್ರಿಕವಾದ, ವಿಶೇಷವಾಗಿ ಮಹಿಳೆಯರಿಗೆ ಹೆಚ್ಚು ಸಂಭ್ರಮ ನೀಡುವ ವ್ರತಗಳ ಪರ್ವಕಾಲ. ವ್ರತ ಎಂದರೆ ‘ಆವೃಣೋತಿ ಕರ್ತಾರಂ’ ಎಂದು ದೇವತಾ ಕಾರ್ಯವನ್ನು ನಿಯಮ ನಿಷ್ಠೆಯಿಂದ ಮಾಡಿ ಅದರ ಪುಣ್ಯದ ರಕ್ಷಾ ಕವಚದಿಂದ ನಮ್ಮ ಜೀವನವನ್ನು ಸಂರಕ್ಷಿಸಿಕೊಳ್ಳುವುದು ಎಂದು ಅರ್ಥ. ವ್ರತಗಳ ಆಚರಣೆಯಿಂದ ನಮಗೆ ಇರುವ ಕಂಟಕಗಳು ದೂರವಾಗಿ ನಮ್ಮ ಇಷ್ಟಾರ್ಥಗಳು ಸಿದ್ಧಿಸುವುದು ತಾತ್ಕಾಲಿಕ ಫ‌ಲ. ವ್ರತಾಚರಣೆಗಳಿಂದ ನಮ್ಮ ತ್ರಿಕರಣಗಳು ಶುದ್ಧಿಯಾಗಿ ನಮ್ಮ ಜೀವನ ಯೋಗ್ಯತೆ ವೃದ್ಧಿಯಾಗುವುದು ಶಾಶ್ವತ ಫ‌ಲ. ಗೀತಾ ಭಾಷ್ಯಾದಲ್ಲಿ ಶ್ರೀಮನ್‌ ಮಧ್ವಾಚಾರ್ಯರು ಹೇಳುವಂತೆ ‘ಯಥಾ ದರ್ಶೋ ಮಲೇನಾವೃತಃ ತಥಾ ಅಂತಃಕರಣಂ ಪರಮಾತ್ಮದೇಃ ವ್ಯಕ್ತಿಹೇತುರ್ನ ಭವತಿ’. ಕನ್ನಡಿ ಕೊಳೆಯಾಗಿದ್ದರೆ ಪ್ರತಿಬಿಂಬ ಕಾಣದೇ ಹೋಗುವಂತೆ ಅಂತಃಕರಣ…

Read More

ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಇದರ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಆಗೋಸ್ಟ್ 13 ರಂದು ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಸಂಘದ ಮಾಜಿ ಅಧ್ಯಕ್ಷ ಎಂ ದೇವಾನಂದ ಶೆಟ್ಟಿ ಕಾರ್ಯಕ್ರಮ‌ ಉದ್ಘಾಟಿಸಲಿದ್ದಾರೆ. ಮಂಗಳೂರು ಸಂಧ್ಯಾ ಕಾಲೇಜು ವಿಶ್ವವಿದ್ಯಾನಿಲಯ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಉಪನ್ಯಾಸಕಿ ಜಯಲಕ್ಷ್ಮೀ ಆರ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಕುವೆಂಪು ವಿಶ್ವ ವಿದ್ಯಾನಿಲಯದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ ಸದಾನಂದ ಶೆಟ್ಟಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ ವೈ ಭರತ್ ಶೆಟ್ಟಿ, ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಎ ಕೋಟ್ಯಾನ್, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಲಿದ್ದಾರೆ.…

Read More

ಇತ್ತೀಚಿನ ದಿನಗಳಲ್ಲಿ ಎಲ್ಲ ವಯಸ್ಸಿನವರಲ್ಲೂ ಗ್ಯಾಸ್ಟ್ರಿಕ್‌, ಹೈಪರ್‌ ಆ್ಯಸಿಡಿಟಿ, ಅಲ್ಸರ್‌ಗಳು ಸಾಮಾನ್ಯವಾಗಿ ಕಾಡುತ್ತಿವೆ. ಗ್ಯಾಸ್ಟ್ರಿಕ್‌ ಎಂದರೆ ಜಠರಕ್ಕೆ ಸಂಬಂಧಿಸಿದ್ದಾಗಿದೆ. ಯೋಗ, ಪ್ರಾಣಾಯಾಮ, ಧ್ಯಾನದ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈ ರೀತಿಯ ತೊಂದರೆಗೆ ಮಾನಸಿಕ ನೆಮ್ಮದಿ ಕಾಯ್ದುಕೊಳ್ಳುವುದು ಅತ್ಯುತ್ತಮ ಚಿಕಿತ್ಸೆಯಾಗಿರುತ್ತದೆ. ಭಾವನಾತ್ಮಕ ವಿಷಯಗಳು ಅಧಿಕವಾದಾಗ ಮಾನಸಿಕ ಒತ್ತಡ ಹೆಚ್ಚಿ ಅದು ಮೆದುಳಿನ ಲಿಂಬಿಕ್‌ ಸೆಂಟರ್‌ನ ಮೇಲೆ ಪ್ರಭಾವ ಬೀರುತ್ತದೆ. ಈ ಲಿಂಬಿಕ್‌ ಸೆಂಟರ್‌ ಹೈಪೋಥೆಲಾಮಸ್‌ನ ಮೇಲೆ ಒತ್ತಡ ಹೇರಲಾರಂಭಿಸಿ ತನ್ಮೂಲಕ ನರಗಳ ಮೇಲೆ ಪ್ರಭಾವ ಬೀರುತ್ತದೆ. 2 ಮುಖ್ಯ ನರಗಳ ವ್ಯವಸ್ಥೆಗಳಾದ ಸಿಂಪಥೆಟಿಕ್‌ ಮತ್ತು ಪ್ಯಾರಾಸಿಂಪಥೆಟಿಕ್‌ ನರಗಳಲ್ಲಿ ಏರು-ಪೇರಾಗುತ್ತದೆ. ಈ ಪ್ಯಾರಾಸಿಂಪಥೆಟಿಕ್‌ ಏರು-ಪೇರಿನಿಂದ ಇದು 2 ರೀತಿಯಲ್ಲಿ ಜಠರ ಹಾಗೂ ಜಠರ ರಸಗಳ ಮೇಲೆ ಪ್ರಭಾವ ಬೀರುತ್ತದೆ. ಪ್ಯಾರಾಸಿಂಪಥೆಟಿಕ್‌ ನರವಾದ ವೇಗಸ್‌ ನರವು ಹೆಚ್ಚಿನ ಗ್ಯಾಸ್ಟ್ರಿಕ್‌ ಹಾರ್ಮೋನ್‌ನ್ನು ಉತ್ಪಾದಿಸಲು ಪ್ರಚೋದಿಸಿ ಇದು ಹೆಚ್ಚಿನ ಹೈಡ್ರೋಕ್ಲೋರಿಕ್‌ ಆಮ್ಲವನ್ನು ಉತ್ಪತ್ತಿಗೊಳಿಸುತ್ತದೆ. ಪ್ಯಾರಾಸಿಂಪಥೆಟಿಕ್‌ ನರಗಳು ನೇರವಾಗಿ ಆಕ್ಸಿಂಟಿಕ್‌ ಜೀವಕೋಶಗಳನ್ನು ಪ್ರಚೋದಿಸಿ ಹೆಚ್ಚಿನ ಹೈಡ್ರೋಕ್ಲೋರಿಕ್‌ ಆಮ್ಲದ ಉತ್ಪಾದಿಸುತ್ತದೆ.…

Read More

ಬಂಟರ ಸಂಘ (ರಿ) ಸುರತ್ಕಲ್, ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಸಹಯೋಗದೊಂದಿಗೆ ಬಂಟರ ಕ್ರೀಡೋತ್ಸವವು ರವಿವಾರ ಇಲ್ಲಿನ ಗೋವಿಂದದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, “ಸುರತ್ಕಲ್ ಬಂಟರ ಸಂಘ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇತರ ಸಂಘಟನೆಗಳಿಗೆ ಮಾದರಿಯಾಗಿ ಬೆಳೆದಿದೆ. ಸಂಘದ ಕಾರ್ಯ ಚಟುವಟಿಕೆಗಳು ಇದೇ ರೀತಿ ನಿತ್ಯ ನಿರಂತರವಾಗಿ ಮುಂದುವರಿಯಲಿ” ಎಂದು ಶುಭ ಹಾರೈಸಿದರು. ಬಳಿಕ ಮಾತಾಡಿದ ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆಎಂ ಶೆಟ್ಟಿ ಮಾತನಾಡಿ ಕ್ರೀಡೆಗೆ ಉತ್ತೇಜನ‌ ನೀಡುವ ಅಗತ್ಯ ಇದೆ. ಕ್ರೀಡೆಯಲ್ಲಿ ಬಹಳಷ್ಟು ಮಂದಿ ಬಂಟ ಪ್ರತಿಭಾವಂತರಿದ್ದಾರೆ ಎಂದರು. ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಪೇರ್ ಟ್ರಸ್ಟ್ ನ ಸಂಘಟನಾ ಕಾರ್ಯದರ್ಶಿ ರಾಜ್ ಗೋಪಾಲ್ ರೈ ಅವರು, “ಬಂಟರಲ್ಲಿ…

Read More

ಅಚ್ಲ್ಯಾಡಿ ವಿದ್ಯಾರ್ಥಿ ಮಿತ್ರ ಸೇವಾ ಟ್ರಸ್ಟ್ (ರಿ) ಅಚ್ಲಾಡಿ ಇವರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಬನ್ನಾಡಿ ವಡ್ದರ್ಸೆ ಇವರ ಪ್ರಾಯೋಜಕತ್ವದಲ್ಲಿ ವಿವೇಕ ಪದವಿ ಪೂರ್ವ ಕಾಲೇಜು ಕೋಟ ಇಲ್ಲಿಯ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಆತಂಕ ಮತ್ತು ಪರಿಹಾರೋಪಾಯಗಳು ಕುರಿತು ಆಪ್ತ ಸಮಾಲೋಚನೆ ಮತ್ತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬನ್ನಾಡಿ ವಡ್ದರ್ಸೆಯ ಕಾರ್ಯದರ್ಶಿ ಹಾಗೂ ವಿದ್ಯಾರ್ಥಿ ಮಿತ್ರ ಸೇವಾ ಟ್ರಸ್ಟ್‌ನ ಸದಸ್ಯರು ಆದ ಅಜಿತ್ ಶೆಟ್ಟಿ ಕೊತ್ತಾಡಿ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಗಿರೀಶ್ ಎಂ ಎನ್ , ವಿವೇಕ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ್ ನಾವಡ ಸ್ವಾಗತಿಸಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ವೆಂಕಟೇಶ ಉಡುಪ ಧನ್ಯವಾದ ಸಮರ್ಪಿಸಿದರು.

Read More