Author: admin

ಪುಣೆ : ಪುಣೆ ಬಂಟರ ಸಂಘದ ಉತ್ತರ ವಲಯ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ವರ ಮಹಾಲಕ್ಷ್ಮಿ ಪೂಜೆಯ ಶುಭ ದಿನವಾದ ಅ 25 ಶುಕ್ರವಾರದಂದು ಅರಶಿನ ಕುಂಕುಮ ಕಾರ್ಯಕ್ರಮವು ಕನ್ನಡ ಸಂಘದ ಡಾ ಶ್ಯಾಮ್ ರಾವ್ ಕಲ್ಮಾಡಿ ಕನ್ನಡ ಶಾಲೆಯ ಸಭಾಂಗಣದಲ್ಲಿ ವಿವಿದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು . ಬಂಟರ ಸಂಘದ ಉತ್ತರ ವಲಯ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಅಧ್ಯಕ್ಷೆ ಪ್ರಮಿಳಾ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರಗಿದ ಈ ಅರಸಿನ ಕುಂಕುಮ ಕಾರ್ಯಕ್ರಮದಂಗವಾಗಿ ಮೊದಲಿಗೆ ಸಮಿತಿಯ ಪದಾಧಿಕಾರಿಗಳು ಶ್ರೀ ಮಹಾಲಕ್ಷ್ಮಿ ದೇವಿ ಫೋಟೋಗೆ ಪೂಜೆ ಗೈದು ಮಹಾಮಂಗಳಾರತಿ ಬೆಳಗಿದರು ,ನಂತರ ಅಧ್ಯಕ್ಷೆ ಪ್ರಮಿಳಾ ಶೆಟ್ಟಿ ಮತ್ತು ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಯಶೋದ ಎಂ.ಶೆಟ್ಟಿ ಪ್ರಾರ್ಥನೆ ಗೈದರು. ಮಹಿಳಾ ವಿಭಾಗದ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರಗಿತು , ನಂತರ ಪ್ರಧಾನ ಕಾರ್ಯಕ್ರಮವಾದ ಅರಶಿನ ಕುಂಕುಮ ಕಾರ್ಯಕ್ರಮ ನೆರೆವೇರಿತು ,ಮುತ್ತೈದೆಯರು ಪರಸ್ಪರ ಅರಶಿನ ಕುಂಕುಮ…

Read More

ಬಂಟರ ಸಂಘ ಸಾಲೆತ್ತೂರು ವಲಯದಿಂದ ಆಯೋಜಿಸಲಾದ  ? “ಆಟಿಡೊಂಜಿ ಬಂಟೆರ್ನ ಸ್ನೇಹಕೂಟ”  ವಿಜಯ್ ಶ್ರೀ ಕಲ್ಯಾಣ ಮಂಟಪ ಕುಡ್ತಮುಗೇರುವಿನಲ್ಲಿ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆ ಗಂಟೆ ಒಂಬತ್ತಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘ ಬಂಟ್ವಾಳದ ಕಾರ್ಯದರ್ಶಿ ಶ್ರೀ ಜಗನ್ನಾಥ ಚೌಟ ಮಾಣಿ ವಹಿಸಿಕೊಂಡರು. ಶ್ರೀ ದೇವಣ್ಣ ಆಳ್ವ ಎರ್ಮೆನಿಲೆ ಪ್ರಗತಿಪರ ಕೃಷಿಕರು, ಶ್ರೀ ಜತ್ತಪ್ಪ ಪೂಂಜ ಕೊಡಂಗೆ ಪ್ರಗತಿಪರ ಕೃಷಿಕರು, ಶ್ರೀ ಕೆ.ಎಂ. ಶಿವರಾಮ ಶೆಟ್ಟಿ, ನಿವೃತ ಸೀನಿಯರ್ ಮ್ಯಾನೇಜರ್ ವಿಜಯ ಬ್ಯಾಂಕ್ ಇವರುಗಳು ಗೌರವ ಉಪಸ್ಥಿತರಿದ್ದರು. ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಸಮಾಜದ ಬಂಟ ಬಂಧುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಸ್ವರ್ಧೆಗಳು, ರಸಮಂಜರಿ ಮನೋರಂಜನಾ ಕಾರ್ಯಕ್ರಮ ಮುಂತಾದವುಗಳು ಜರುಗಿದವು. ಮದ್ಯಾಹ್ನ 12 ರ ನಂತರ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ದೇವಪ್ಪ ಶೇಖ ಅಧ್ಯಕ್ಷರು ಬಂಟರ ಸಂಘ ಸಾಲೆತ್ತೂರು ವಹಿಸಿಕೊಂಡರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದಂತಹ ಶ್ರೀ ಲೋಕೇಶ್ ಶೆಟ್ಟಿ – ಕೋಶಾಧಿಕಾರಿ ಬಂಟರ…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ ಯೂರೋಪ್ ಪ್ರವಾಸದ ಮೊದಲ ದಿನದಂದು ಕನ್ನಡಿಗರು ಯು.ಕೆ ಆಶ್ರಯದಲ್ಲಿ ಲಂಡನ್ ನಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಯುನೈಟೆಡ್ ಕಿಂಗ್ಡಮ್ (ಯು.ಕೆ) ಸರಕಾರದ ಸಂಸದೆ ಸೀಮಾ ಮಲ್ಹೋತ್ರ, ಮತ್ತು ದೀಪಕ್ ಚೌಧರಿ ಸಚಿವರು (ಸಮನ್ವಯ) ಭಾರತದ ಹೈಕಮಿಷನ್ ಇವರು ಉದ್ಘಾಟಿಸಿದರು. ಯಕ್ಷಗಾನವನ್ನು ನೋಡಿ ಆನಂದಿಸಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಕಾರ್ಯ ವೈಖರಿಯನ್ನು ಶ್ಲಾಘಿಸಿ ಯಕ್ಷಗಾನದ ಈ ಕಲೆಗೆ ವಿಶ್ವಮಾನ್ಯತೆ ಸಿಗುವಲ್ಲಿ ನಮ್ಮ ಸಂಪೂರ್ಣ ಸಹಕಾರ ಇರುವುದಾಗಿ ಘೋಷಿಸಿದರು. ಕನ್ನಡಿಗರು ಯು.ಕೆ ಯ ಮುಖ್ಯಸ್ಥ ಗಣಪತಿ ಭಟ್, ಡಾ. ಅನಂತರಾಮ್ ಶೆಟ್ಟಿ, ಯುಎಸ್ಎ ಘಟಕದ ಮುಖ್ಯಸ್ಥರು ಉಳಿ ಯೋಗೀಂದ್ರ ಭಟ್, ಫೌಂಡೇಶನ್ ತಂಡದ ಮುಖ್ಯಸ್ಥರು ಪಣಂಬೂರು ವಾಸು ಐತಾಳ್ ಯುಎಸ್ ಎ, ಫ್ರೊ ಎಂ ಎಲ್ ಸಾಮಗ ಉಪಸ್ಥಿತರಿದ್ದರು. ಪಟ್ಲ ಫೌಂಡೇಶನ್ ತಂಡದವರಿಂದ ಕೃಷ್ಣಲೀಲೆ ಕಂಸವಧೆ ಎನ್ನುವ ಪ್ರಸಂಗ ನಡೆಯಿತು.

Read More

ಶಾಸ್ತ್ರದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಅಷ್ಟಬಂಧ ನಡೆಸಬೇಕು ಎಂದಿದ್ದರೂ ಅನಿವಾರ್ಯ ಕಾರಣಗಳಿಂದ ಕಳೆದ 21 ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯದೆ ಇದ್ದ ದೇವತಾ ಕಾರ್ಯ ನಡೆಸಲು ಈಗ ಕಾಲ ಕೂಡಿ ಬಂದಿದೆ. 21 ವರ್ಷಗಳ ಬಳಿಕ ದೇವಳದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ತಿಳಿಸಿದ್ದಾರೆ. ಕೊಲ್ಲೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಎ.30 ರಿಂದ ಮೇ 11 ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಎಲ್ಲರ ಅಭಿಪ್ರಾಯ ಪಡೆದುಕೊಂಡು ಉತ್ಸವ ದಿನಾಂಕ ನಿಶ್ಚಯ ಮಾಡಲಾಗಿದ್ದು, ಕ್ಷೇತ್ರದ ಅರ್ಚಕರ ಹಾಗೂ ಭಕ್ತರ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಲಾಗುವುದು. ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ಕೆ ಅಂದಾಜು 5 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದ್ದು, ದೇವಸ್ಥಾನದಿಂದ 2 ಕೋಟಿ ಬಳಸಿಕೊಳ್ಳಲು ಹಾಗೂ ಉಳಿದ 3 ಕೋಟಿಯನ್ನು ಭಕ್ತರಿಂದ ಸಂಗ್ರಹಿಸಿ ಖರ್ಚು ಮಾಡಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಹೃದಯ ಭಕ್ತರ ಸಹಕಾರವನ್ನು…

Read More

ಮುಂಬಯಿ, ಜೂ.24: ವಾಕ್ಚತುರ್ಯ (ಭಾಷಣ) ಸ್ಪರ್ಧೆಗಳು ವಿದ್ಯಾಥಿರ್üಗಳು ಮತ್ತು ಶಿಕ್ಷಕರಲ್ಲಿ ಆತ್ಮವಿಶ್ವಾಸ ಮೂಡಿಸುವ ಶಕ್ತಿಯಾಗಿದೆ. ಭಾರತ ರಾಷ್ಟ್ರದ ಭವಿಷ್ಯದ ಬೆನ್ನೆಲುಬು ಆಗಿರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಉತ್ತಮ ವೇದಿಕೆಯ ನಿರ್ಮಾಣಕ್ಕೆ ಇದು ಸಹಕಾರಿಯಗಿದ್ದು ಇಂತಹ ಉದ್ದೇಶವನ್ನಿರಿಸಿ ನಮ್ಮ ಸಂಸ್ಥೆ ಪ್ರೇರೆಪಿಸಲು ಮುಂದಾಗಿದೆ. ಸಂವಹನದಲ್ಲಿ ವಾಗ್ಮಿ ಸ್ಪರ್ಧೆ ಅತ್ಯಗತ್ಯ. ಪ್ರೇಕ್ಷಕರ ಮುಂದೆ ಬರುವ ಸಂವಹನದೊಂದಿಗೆ ದಿಟ್ಟತನ, ಭರವಸೆಯನ್ನು ಹೆಚ್ಚಿಸಲೂ ಇದು ವೇದಿಕೆಯಾಗಿದೆ ಎಂದು ಬಂಟ್ಸ್ ಸಂಘ ಮುಂಬಯಿ ಸಂಚಾಲಿತ ಎಸ್.ಎಂ ಶೆಟ್ಟಿ ಶೈಕ್ಷಣಿಕ ಸಂಸ್ಥೆಯ ಕಾರ್ಯಾಧ್ಯ ಕಾರ್ಯಾಧ್ಯಕ್ಷ ಬಿ.ಆರ್ ಶೆಟ್ಟಿ ತಿಳಿಸಿದರು. ಇಂದಿಲ್ಲಿ ಶನಿವಾರ ಮಧ್ಯಾಹ್ನ ಪೆರುವಾಯಿಯಲ್ಲಿನ ಎಸ್.ಎಂ ಶೆಟ್ಟಿ ಹೈಸ್ಕೂಲ್‍ನ ಆರ್.ಎನ್ ಶೆಟ್ಟಿ ಒಳಾಂಗಣ ಸಭಾಗೃಹದಲ್ಲಿ ಬಂಟ್ಸ್ ಸಂಘದ ಎಸ್.ಎಂ ಶೆಟ್ಟಿ ಶೈಕ್ಷಣಿಕ ಸಂಸ್ಥೆಯು ತನ್ನ ರಜತೋತ್ಸವ ಸಂಭ್ರಮದ ಪ್ರಯುಕ್ತ ಮುಂಬಯಿ ಮತ್ತು ಉಪನಗರಗಳಲ್ಲಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಅಂತರ್ ಶಾಲಾ (ಇಂಟರ್ ಸ್ಕೂಲ್) ವಾಕ್ಚತುರ್ಯ (ಭಾಷಣ) ಸ್ಪರ್ಧೆಯನ್ನು ಉದ್ಘಾಟಿಸಿ ಬಿ.ಆರ್ ಶೆಟ್ಟಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಬಿ.ಆರ್ ಶೆಟ್ಟಿ…

Read More

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಂಗಳೂರು (D.K.M.U) ಇದರ ನಾಮನಿರ್ದೇಶನ ನಿರ್ದೇಶಕರಾಗಿ ಕಾಡೂರು ಸುರೇಶ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಸುರೇಶ್ ಶೆಟ್ಟರು ಉದ್ಯಮಿಯಾಗಿಯೂ, ಸಮಾಜಸೇವಕರಾಗಿಯೂ ಕುಂದಾಪುರ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದಾರೆ.

Read More

ಸಮಾಜಸೇವಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಭವಾನಿ ಗ್ರೂಪ್ ಆಫ್ ಕಂಪನಿಸ್ ನ ಆಡಳಿತ ನಿರ್ದೇಶಕರಾದ ಶ್ರೀ ಕುಸುಮೋಧರ ಶೆಟ್ಟಿ ಚೆಲ್ಲಡ್ಕ ( ಕೆ ಡಿ ಶೆಟ್ಟಿ ) ಅವರ ಹುಟ್ಟುಹಬ್ಬವನ್ನು ಮಂಗಳೂರಿನ ಕೊಟ್ಟಾರದಲ್ಲಿರುವ ಕಚೇರಿಯಲ್ಲಿ ತನ್ನ ನೌಕರ ವೃಂದದವರೊಂದಿಗೆ ಸರಳವಾಗಿ ಆಚರಿಸಿಕೊಂಡರು. ಮುಂಬಯಿ ಕಚೇರಿಯ ನೌಕರ ವೃಂದದವರು ವಿಡಿಯೋ ಕಾಲ್ ಮೂಲಕ ಶುಭ ಹಾರೈಸಿದರು. ಶುಭ ಹಾರೈಸಿದ ಎಲ್ಲರಿಗೂ ಕೆ ಡಿ ಶೆಟ್ಟಿಯವರು ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಕೆ ಡಿ ಶೆಟ್ಟಿಯವರ ಧರ್ಮಪತ್ನಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಸ್ಥಾಪಕ ರಂಜಿತ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ದೊಡ್ಡಮನೆ ಹಾಗೂ ಭವಾನಿ ಗ್ರೂಪ್ ನ ನೌಕರ ವೃಂದದವರು ಉಪಸ್ಥಿತರಿದ್ದರು.

Read More

ಯುವ ಜನರಿಗೆ ಇಂದು ಬದುಕು ಕಟ್ಟಿಕೊಳ್ಳಲು ಹಿಂದಿನವರಂತೆ ಉದ್ಯೋಗವನ್ನು ಅರಸಿ ವಲಸೆ ಹೋಗಲೇಬೇಕೆಂಬ ಸ್ಥಿತಿ ಇಲ್ಲ. ಸಮರ್ಥರಿಗೆ ಈಗ ವಿಪುಲ ಉದ್ಯೋಗ ಅವಕಾಶಗಳಿವೆ. ಮನೆ ಬಾಗಿಲಿಗೆ ಉದ್ಯೋಗವಕಾಶವನ್ನು ಒದಗಿಸುವ ಕೆಲಸ ಮಾಡುತ್ತಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಪ್ರಯತ್ನ ಶ್ಲಾಘನೀಯ ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ಕುಂತಳ ನಗರ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಬೆಂಗಳೂರು ಎಂಆರ್ ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಡವನಾಗಿ ಹುಟ್ಟುವುದು ತಪ್ಪಲ್ಲ. ಆ ಆಯ್ಕೆ ನಮ್ಮ ಕೈಯಲ್ಲಿ ಇಲ್ಲ. ಆದರೆ ಬಡವನಾಗಿ ಸಾಯಬಾರದು. ಎಲ್ಲರಿಗೂ ಅವಕಾಶ ಇರುತ್ತದೆ. ಅದನ್ನು ಬಳಸಿಕೊಂಡು ಬದುಕಿನಲ್ಲಿ ಮೇಲೆ ಬರಬೇಕು ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಉಡುಪಿ…

Read More

ಬಂಟ ಸಮಾಜದ ಅಗ್ರಗಣ್ಯ ನೇತಾರ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ ಅವರ ಆಶೀರ್ವಾದದೊಂದಿಗೆ ಪತ್ರಿಕೋದ್ಯಮಿ ರಂಜಿತ್ ಶೆಟ್ಟಿಯವರು ಸರ್ವರಿಗೂ ಆರೋಗ್ಯ, ಸರ್ವರಿಗೂ ವಿದ್ಯಾಭ್ಯಾಸ, ಸರ್ವರಿಗೂ ಉದ್ಯೋಗ ಎಂಬ ಮೂರು ಪರಿಕಲ್ಪನೆ ಇಟ್ಟುಕೊಂಡು, ಬಂಟ ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಲು ಬಂಟ್ಸ್ ಬ್ರಿಗೇಡ್ ಸೇವಾ ಸಂಸ್ಥೆಯನ್ನು ಸ್ಥಾಪಿಸಲು ಮುಂದಾಗಿದ್ದಾರೆ. ನಾಳೆ ಗಣೇಶ ಚತುರ್ಥಿಯ ಶುಭ ದಿನದಂದು ಮಂಗಳೂರಿನಲ್ಲಿ ಬಂಟ್ಸ್ ಹಾಸ್ಟೆಲ್ ಓಂಕಾರ ನಗರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಬಂಟ್ಸ್ ಬ್ರಿಗೇಡ್ ಸೇವಾ ಸಂಸ್ಥೆಯ ಲೋಗೋ ಅನಾವರಣವನ್ನು ಗಣ್ಯರ ಸಮ್ಮುಖದಲ್ಲಿ ಅಜಿತ್ ಕುಮಾರ್ ರೈ ಮಾಲಾಡಿಯವರು ಮಾಡಲಿದ್ದಾರೆ. ಪ್ರತಿ ತಿಂಗಳು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಬಂಟ ಸಮಾಜ ಬಾಂಧವರಿಗೆ ಅರೋಗ್ಯ ತಪಾಸಣಾ ಶಿಬಿರ ಮಾಡಿಕೊಂಡು ಔಷಧಿ ಉಚಿತವಾಗಿ ನೀಡಲು, ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಅವರವರ ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ದೊರಕಿಸಿಕೊಡಲು, ಸರ್ವರಿಗೂ ವಿದ್ಯಾಭ್ಯಾಸ ದೊರೆಯಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿ ಅಜ್ಜರಕಾಡುವಿನಲ್ಲಿ ವಿಶ್ವ ಬಂಟರ ಸಮ್ಮಿಲನ, ಕ್ರೀಡಾ ಸಂಗಮ ಹಾಗೂ ಸಾಂಸ್ಕೃತಿಕ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಅಂಬಾಗಿಲು ಅಮೃತಾ ಗಾರ್ಡನ್‌ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪೂರ್ವ ಭಾವಿ ಸಭೆಗಳನ್ನು ನಡೆಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಜಗತ್ತಿನಾದ್ಯಂತ ಇರುವ 150 ಬಂಟರ ಸಂಘಗಳ ಪ್ರತಿನಿಧಿಗಳು ಭಾಗವಹಿಸಲಿರುವರು. ಮುಂಬಯಿ, ಪುಣೆ, ಬೆಂಗಳೂರು, ಮೈಸೂರು ಹುಬ್ಬಳ್ಳಿ-ದಾರಾವಾಡ, ಯುಎಇ ಸೇರಿದಂತೆ ವಿವಿಧ ಕಡೆಗಳಿಂದ ಸುಮಾರು 10-15 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಕ್ರೀಡಾ ಸಂಗಮದಲ್ಲಿ ತ್ರೋಬಾಲ್, ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟವನ್ನು ಏರ್ಪಡಿಸಲಾಗುತ್ತದೆ. ಅದೇ ರೀತಿ ಸಾಂಸ್ಕೃತಿಕ ಸಂಭ್ರಮದಲ್ಲಿ ತಂಡಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಮುದಾಯದ ಹಲವು ದಾನಿಗಳು ಸಂಪೂರ್ಣ ನೆರವು ನೀಡಲಿದ್ದಾರೆ…

Read More