Author: admin

ಅಜೆಕಾರು ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿಯವರು ಜ್ಞಾನ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯ ಸ್ಪೂರ್ತಿದಾಯಕವಾದದ್ದು. ಭಯದಿಂದ ಕಾಣುವ ನಾಗದೇವರ ಪ್ರತಿಷ್ಠೆ ಮತ್ತು ನಾಗಬ್ರಹ್ಮಮಂಡಲೋತ್ಸವ ಮಾಡುವ ಮೂಲಕ ನಾಗದೇವರನ್ನು ಒಲಿಸಿಕೊಂಡಿರುವ ಅವರ ಕಾರ್ಯ ನಿತ್ಯನೂತನವಾಗಿರಲಿ ಎಂದು ಉಡುಪಿ ಕೃಷ್ಣಾಪುರ ಮಠದ ಪರಮಪೂಜ್ಯ ಸ್ವಾಮೀಜಿ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ಅವರು ಕಡಿಯಾಳಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಏಪ್ರಿಲ್ 6ರಂದು ಜರುಗಿದ ನಾಗಬ್ರಹ್ಮ, ರಕ್ತೇಶ್ವರಿ ಕ್ಷೇತ್ರದ ಪುನರ್ ಪ್ರತಿಷ್ಠೆ ಮತ್ತು ನಾಗಬ್ರಹ್ಮಮಂಡಲೋತ್ಸವ ಸಂದರ್ಭ ನಡೆದ ಸಮಾಜ ಸೇವಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿ, ಪರಮಪೂಜ್ಯ ಸ್ವಾಮೀಜಿಗಳಿಂದ ಪಡೆದ ಈ ಪುಣ್ಯ ಭೂಮಿಯಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ರೀಗಳ ಆಶೀರ್ವಾದವೆಂದು ಭಾವಿಸುತ್ತೇನೆ. ನಾಗಮಂಡಲದಿಂದ ನಾಡಿಗೆ ಮಂಗಳವಾಗಲಿ ಮತ್ತು ನಾಗ ಪ್ರತಿಷ್ಠೆಯಿಂದ ನಾಡಿನ ಪ್ರತಿಷ್ಠೆಯಾಗಲಿ ಎಂದು…

Read More

ಕೆಂಜಾರು ಗಂಡೊಟ್ಟು ಮನೆತನದ ನೂತನ ಧರ್ಮಚಾವಡಿಯ ಪ್ರವೇಶ, ಆರಾಧ್ಯ ದೈವ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ಪುನರ್ ಪ್ರತಿಷ್ಠೆ, ಕಲಶಾಭಿಷೇಕವು ಏಪ್ರಿಲ್ 8 ರಿಂದ 10 ತನಕ ಶ್ರೀ ಪ್ರಕಾಶ್ ಅಮ್ಮಣ್ಣಾಯ ಜೋತಿರ್ವಿಜ್ಞಾನಂ ಕಾಪು ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಏಪ್ರಿಲ್ 10 ರಂದು ಧೂಮಾವತಿ ಪರಿವಾರ ದೈವಗಳ ಧರ್ಮನೇಮ ದೈವದಾಣತಿಯಂತೆ ಕುಟುಂಬದ ಗುರುಹಿರಿಯರು ನಿಶ್ಚಯಿಸಿದಂತೆ ನಡೆಯಲಿದ್ದು, ಆ ಪ್ರಕಾರ ಅಂದು ಬೆಳಿಗ್ಗೆ 9 ಘಂಟೆಗೆ ತಾರಿಬರಿ ಜುಮಾದಿ ಬಂಟ ದೈವಗಳ ಭಂಡಾರ ಬಂದು, ಮಧ್ಯಾಹ್ನ 12.30 ಕ್ಕೆ ಪಲ್ಲ ಪೂಜೆ ಜರಗಲಿದೆ. ಮಧ್ಯಾಹ್ನ 12.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದ್ದು, ರಾತ್ರಿ 8.30 ಕ್ಕೆ ಧೂಮಾವತಿ ಪರಿವಾರ ದೈವಗಳಿಗೆ ಧರ್ಮ ನೇಮ ಜರಗಲಿದೆ. ಆಸ್ತಿಕ ಬಾಂಧವರು, ದೈವಾರಾಧಕ ಅಭಿಮಾನಿ ಬಂಧುಗಳು, ಕುಟುಂಬಿಕರು ಸಕಾಲದಲ್ಲಿ ಉಪಸ್ಥಿತರಿದ್ದು ಗಂಧಪ್ರಸಾದ ಸ್ವೀಕರಿಸಿ ದೈವಗಳ ಕೃಪಾ ಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಶ್ರೀಮತಿ ಮತ್ತು ಶ್ರೀ ರಾಮಣ್ಣ ಶೆಟ್ಟಿ, ಮೂಡಬಿದ್ರಿಯ ರುದ್ರಾಂಶ್ ಕನ್ಸ್ಟ್ರಕ್ಷನ್ ಮಾಲಕರಾದ ಅಜಯ್ ಶೆಟ್ಟಿ, ರಾಘವೇಂದ್ರ…

Read More

ಕಲಾ ಸಂಘವನ್ನು ಹುಟ್ಟು ಹಾಕುವುದರ ಮುಖೇನ ಸಾಂಸ್ಕೃತಿಕ, ಕ್ರೀಡೆ, ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಜತೆಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘದ ಧ್ಯೇಯೋದ್ದೇಶ ಶ್ಲಾಘನೀಯವಾದದ್ದು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಕಟ್ಟಿನಮಕ್ಕಿ ಶ್ರೀ ಮಹಾಲಿಂಗೇಶ್ವರ ಕಲಾ ಸಂಘದ ಏಳನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ್ ಎನ್. ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು, ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೋಕ್ತೇಸರ ಚಂದ್ರಯ್ಯ ಆಚಾರ್ಯ ಕಳಿ, ಆಲೂರು ಪಂಚಾಯಿತಿ ಸದಸ್ಯರಾದ ಪ್ರಮೋದ ಕುಶಲ ಶೆಟ್ಟಿ, ರಾಜೇಂದ್ರ ದೇವಾಡಿಗ ಉಪಸ್ಥಿತರಿದ್ದರು. ಕಲಾ ಸಂಘದ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಪಾ ದೇವಾಡಿಗ ಸ್ವಾಗತಿಸಿದರು. ವಿಜೇಂದ್ರ ಆಚಾರ್ಯ ನಿರೂಪಿಸಿದರು. ಸವಿತಾ ವಂದಿಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಗಿಚ್ಚಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಅವರನ್ನು ಸನ್ಮಾನಿಸಲಾಯಿತು. ಕಲಾ ಸಂಘದ ಸದಸ್ಯರಿಂದ ಯಕ್ಷಗಾನ ಜರುಗಿತು.

Read More

ಮೂಡುಬಿದಿರೆ: ಮಂಗಳೂರು ವಿವಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು 20ನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಉಡುಪಿ ವಲಯ ಮಟ್ಟದಲ್ಲಿ ಅಜ್ಜರಕಾಡು ಪ್ರಥಮ ದರ್ಜೆ ಕಾಲೇಜಿನ  ವಿರುದ್ಧ  ನೇರ ಸೆಟ್‌ಗಳಿಂದ ಗೆದ್ದು ಅಂತರ ವಲಯ ಮಟ್ಟಕ್ಕೆ ಆಯ್ಕೆಯಾಗಿತ್ತು. ಐಕಳದ ಪೋಂಪೈ ಕಾಲೇಜಿನಲ್ಲಿ ನಡೆದ ಅಂತಿಮ ಹಂತದ ಹಣಾಹಣಿಯಲ್ಲಿ ಮಂಗಳೂರಿನ ಸಂತ ಅಲೋಷಿಯಸ್ ಡೀಮ್ಡ್ ಟುಬಿ ವಿವಿ ವಿರುದ್ಧ 25-13, 25-19 ಸೆಟ್‌ಗಳ ಅಂತರದಲ್ಲಿ   ಸೋಲಿಸಿ  ವಿಜೇತ ತಂಡವಾಗಿ ಹೊರಹೊಮ್ಮಿತು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಚೈತನ್ಯವನ್ನು ಮೂಡಿಸುವ ಹೊಸ ಆಲೋಚನೆಗಳನ್ನು ಬೆಳೆಸುವ ಅವಿಭಾಜ್ಯ ಅಂಗ ಕ್ರೀಡೆ ಎಂದು ಇಡ್ಯಾ ಸುರತ್ಕಲ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಐ ರಮಾನಂದ್ ಭಟ್ ನುಡಿದರು. ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಸುರತ್ಕಲ್ ಆಶ್ರಯದಲ್ಲಿ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್ -4 ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಂಗಳೂರು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಎಸ್ ಗಣೇಶ್ ರಾವ್ ಮಾತನಾಡಿ, ಜಾತಿ ಮತ ಪಕ್ಷ ಮರೆತು ಈ ಕ್ರೀಡೆಯಲ್ಲಿ ಹಿರಿಯರೆಲ್ಲರೂ ಭಾಗವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಕ್ರೀಡೆಯ ಜೊತೆಗೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದೆಯೂ ಇಂತಹ ಕಾರ್ಯ ನಿರಂತರ ನಡೆಯಲಿ ಎಂದರು.ವೇದಿಕೆಯಲ್ಲಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮಾಜಿ ಶಾಸಕ ಬಿ.ಎ ಮೊಯಿದಿನ್ ಬಾವ, ಜ್ಯೋತಿಷ್ಯರಾದ ನಾಗೇಂದ್ರ ಭಾರದ್ವಾಜ್, ಮಂಗಳೂರು…

Read More

ಸಾಧಕರ ಬದುಕಿನಲ್ಲಿ ಏಳು ಬೀಳುಗಳು ಸಹಜ. ಅವರ ಸಾಧನೆಯನ್ನು ಕೃತಿ ರೂಪದಲ್ಲಿ ದಾಖಲಿಸಿದರೆ ಅದು ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ. ಹಾಗೆಯೇ ಅಂಥವರ ಬದುಕು ಬವಣೆಗಳಿಂದ ನಾಳಿನ ಜನಾಂಗ ಸಾಕಷ್ಟು ಪಾಠವನ್ನೂ ಕಲಿತಂತಾಗುವುದು ಎಂದು ಮಾಜಿ ಸಚಿವ ಕೃಷ್ಣ.ಜೆ ಪಾಲೆಮಾರ್ ಹೇಳಿದರು. ಹರಿಕಥಾ ಪರಿಷತ್ ಮಂಗಳೂರು ಮತ್ತು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಎಪ್ರಿಲ್ 4 ರಂದು ಶುಕ್ರವಾರ ನಡೆದ ಸಮಾರಂಭದಲ್ಲಿ ಹರಿದಾಸ ‘ದೇವಕಿ ತನಯ’ ಮಹಾಬಲ ಶೆಟ್ಟಿ ಕೂಡ್ಲು ಅವರ ‘ಮಹಾಪರ್ವ’ ಅಭಿನಂದನಾ ಸಂಪುಟವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಹರಿಕಥಾ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಮಹಾಬಲ ಶೆಟ್ಟಿ ಅವರ ಸಾಧನೆಗಳು ‘ಮಹಾಪರ್ವ’ದಲ್ಲಿ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಮನೆ ಮನ ತಲುಪಲು ಸಾಧ್ಯವಾಗಲಿದೆ. ಭವಿಷ್ಯದ ಜನಾಂಗದ ಸಾಧನೆಗೆ ಅದುವೇ ಸ್ಫೂರ್ತಿಯಾಗುವುದು ಎಂದು ಅವರು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ| ಹರಿಕೃಷ್ಣ ಪುನರೂರು ಮಾತನಾಡಿ ‘ಮಕ್ಕಳಿಗೂ ಹರಿಕಥೆ ಕಲಿಸಿ ಅವರನ್ನು ಹರಿದಾಸರನ್ನಾಗಿ…

Read More

ಶ್ರೀ ಬೊಬ್ಬರ್ಯ ಕ್ಷೇತ್ರ, ಬೊಲ್ಯಾಲ (ಬೆಳ್ಕೆಳೆ) ತೆಂಕನಿಡಿಯೂರು ಉಡುಪಿ ಇಲ್ಲಿನ ನವೀಕೃತ ದೈವಸ್ಥಾನ ಸಮರ್ಪಣೆ, ಬ್ರಹ್ಮ ಕುಂಭಾಭಿಷೇಕದ ಕಾರ್ಯಕ್ರಮಕ್ಕೆ ಆಗಮಿಸಿದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಹುಬ್ಬಳ್ಳಿ ಧಾರವಾಡ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಮಾಜಿ ಅಧ್ಯಕ್ಷ ಮಹೇಶ್ ಶೆಟ್ಟಿ ಮತ್ತು ಭೋಜರಾಜ ಶೆಟ್ಟಿ ಕೋಟೇಶ್ವರರವರು ತಂತ್ರಿಗಳ ಮೂಲಕ ದೈವಸ್ಥಾನದ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಗೌರವಿಸಿದರು. ಡಾ. ಎ.ವಿ ಬಾಳಿಗಾ ಆಸ್ಪತ್ರೆಯ ಶ್ರೀಮತಿ ಸೌಜನ್ಯ ಶೆಟ್ಟಿ ದಂಪತಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಮೂಡುಬಿದಿರೆ: ‘ಕ್ರೀಡೆಯಲ್ಲಿ ಸಕ್ರಿಯರಾಗುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಹೇಳಿದರು. ನಗರದ ಸ್ವರಾಜ್ ಮೈದಾನದಲ್ಲಿ ಶುಕ್ರವಾರ ನಡೆದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಂಸ್ಥೆಗಳ ‘ಕ್ರೀಡಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಸಂಘಟಿಸುವ ಕಾರ್ಯಕ್ರಮ ಶಿಸ್ತು ಮತ್ತು ಅನನ್ಯತೆಗೆ ಸಾಕ್ಷಿಯಾಗಿರುತ್ತದೆ ಎಂದರು. ಇದು ಜೀವನದಲ್ಲಿ ನಾನು ಕಂಡ ಅನನ್ಯ ಕಾರ್ಯಕ್ರಮ ಎಂದು ಶ್ಲಾಘಿಸಿದರು. ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಸಾಧನೆ ಮಾಡಿದ ಪ್ರತಿಷ್ಠಾನದ ಎಂಟು ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ತಂದು, ಏಕಲವ್ಯ ಪ್ರಶಸ್ತಿ ಪುರಸ್ಕೃತ, ಅಂತರರಾಷ್ಟ್ರೀಯ ಕ್ರೀಡಾಪಟು, ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊಲೀಸ್ ಉಪ ನಿರೀಕ್ಷಕ ಅಭಿಷೇಕ ಎನ್. ಶೆಟ್ಟಿ ಅವರಿಗೆ ಹಸ್ತಾಂತರಿಸಿ, ಕ್ರೀಡಾ ಜ್ಯೋತಿ ಬೆಳಗಲಾಯಿತು.ವಿದ್ಯಾರ್ಥಿನಿ ವೀಕ್ಷಿತಾ ರಾಮಕೃಷ್ಣ ಗೌಡ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು.…

Read More

ಮೂಡುಬಿದಿರೆ: ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿವಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳಾ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿವಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ತಂಡದ 10 ಜನ ಆಟಗಾರ್ತಿಯರ ಪೈಕಿ ನಾಯಕಿ ಸಹನಾ ಎಚ್. ಎಂ ಸೇರಿದಂತೆ 9 ಕ್ರೀಡಾಪಟುಗಳು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಕ್ವಾಟರ್‌ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿವಿಯು ತಮಿಳುನಾಡಿನ ಯೂನಿವರ್ಸಿಟಿ ಆಫ್ ಮದ್ರಾಸ್ ತಂಡವನ್ನು 35-23, 35-29 ನೇರ ಸೆಟ್‌ನಲ್ಲಿ ಸೋಲಿಸಿ 18ನೇ ಬಾರಿಗೆ ಲೀಗ್ ಹಂತಕ್ಕೆ ಆಯ್ಕೆಯಾಗಿತ್ತು. ಲೀಗ್ ಹಂತದಲ್ಲಿ ತಮಿಳುನಾಡಿನ ಮಧುರೈಯ ಕಾಮರಾಜ್ ವಿವಿ ತಂಡವನ್ನು 35-15, 35-26 ಅಂತರಗಳಿ0ದ, ಮಹಾತ್ಮಾ ಗಾಂಧಿ ವಿವಿಯನ್ನು 35-18, 35-14 ನೇರ ಅಂತರಗಳಿ0ದ ಸೋಲಿಸಿ ಫೈನಲ್ ಪ್ರವೇಶಿಸಿತು. ಅಂತಿಮ ಸುತ್ತಿನಲ್ಲಿ ತಮಿಳುನಾಡಿನ ಅಣ್ಣಾ ವಿವಿಯೊಂದಿಗಿನ ರೋಚಕ ಪಂದ್ಯಾಟದಲ್ಲಿ ರನ್ನರ್ ಅಪ್ ಸ್ಥಾನ ಗಳಿಸುವಲ್ಲಿ ಯಶಸ್ವಿಯಾಯಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಕನ್ನಡ ಸಂಘ ಸಾಂತಾಕ್ರೂಜ್ ತನ್ನ 67 ನೇ ವಾರ್ಷಿಕೋತ್ಸವವು ಮಾರ್ಚ್ 29 ರಂದು ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿನ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ಸುಜಾತ ಆರ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರಂಭವನ್ನು ಬಾಬಾ’ಸ್ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ, ಬಂಟರ ಸಂಘ ಮುಂಬಯಿ ಇದರ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಿಲ್ಲವರ ಅಸೋಸಿಯೇಷನ್ ಮುಂಬೈ ಅಧ್ಯಕ್ಷ ಹರೀಶ್ ಜಿ. ಅಮೀನ್, ಬಂಟರ ಸಂಘ ಮುಂಬಯಿಯ ಪೊವಾಯಿ ಎಜುಕೇಶನ್ ಸಮಿತಿ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಜವಾಬ್ ಅಧ್ಯಕ್ಷ ರಾಜೇಶ್ ಬಿ. ಶೆಟ್ಟಿ, ಪ್ರಸಿದ್ಧ ಜ್ಯೋತಿಷಿ, ವಾಸ್ತುತಜ್ಞ ಅಶೋಕ್ ಪುರೋಹಿತ್ ಗೌರವ ಅತಿಥಿಗಳಾಗಿ ಆಗಮಿಸಿದ್ದು, ಸಂಘವು ವಾರ್ಷಿಕವಾಗಿ ಕೊಡ ಮಾಡುವ ಸಾಧಕ ಸನ್ಮಾನಗಳನ್ನು ಪ್ರಧಾನಿಸಿ ಸಂಘವು ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಕೊಡ ಮಾಡುವ ಶೈಕ್ಷಣಿಕ ಆರ್ಥಿಕ ನೆರವು, ಆರೋಗ್ಯ ನಿಧಿ ವಿತರಿಸಿ ವಿದ್ಯಾರ್ಥಿಗಳ ದತ್ತು ಸ್ವೀಕಾರಗೈದರು.ಇದೇ ಸಂದರ್ಭದಲ್ಲಿ ಸಂಘದ ಮಹಾದಾನಿ, ಚೀನಾದ…

Read More