Author: admin

ವಿದ್ಯಾಗಿರಿ: ‘ಬದುಕಿನ ಯಶಸ್ಸು ಪಂಚ ‘ವ’ ಕಾರಗಳಲ್ಲಿ ಅಡಗಿದೆ’ ಎಂದು ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹೊಸ ವಿದ್ಯಾರ್ಥಿಗಳ ಸ್ವಾಗತ ‘ಪರಿಚಯ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ವಪು (ದೇಹ), ವಸ್ತ್ರ, ವಿದ್ಯೆ, ವಿನಯ, ವಾಕ್ (ಮಾತುಗಾರಿಕೆ) ಎಂಬ ಐದು ವಕಾರಗಳು ಪಂಚಸೂತ್ರಗಳಾಗಿವೆ’ ಎಂದು ವಿವರಿಸಿದ ಅವರು, ‘ಪತ್ರಿಕೋದ್ಯಮ ವಿದ್ಯಾರ್ಥಿಗಳೂ ಪತ್ರಿಕಾ ಧವರ್ವನ್ನು ಪಾಲಿಸಬೇಕು. ಉತ್ತಮ ಪತ್ರಕರ್ತರಾಗಲು ಪ್ರಯತ್ನಿಸಬೇಕು’ ಎಂದರು. ‘ಪ್ರತಿ ವ್ಯಕ್ತಿಯ ಜೀವನದಲ್ಲಿ ತಾಯಿ, ತಾಯಿನಾಡು, ತಾಯಿಭಾಷೆ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಗುರು ಬಹುಮುಖ್ಯ. ಇವುಗಳ ಅರಿವು ಬದುಕಿನ ಉನ್ನತಿಗೆ ಕಾರಣವಾಗುತ್ತವೆ’ ಎಂದರು. ‘ಯಾವಾಗಲೂ ಆಂತರ್ಯದಲ್ಲಿ ವಿನಯವನ್ನು ಹೊಂದಿದ ವ್ಯಕ್ತಿಯೇ ಸಮಾಜದಲ್ಲಿ ಜಯಿಸುತ್ತಾನೆ. ಅಹಂ ಹೊಂದಿದ ವ್ಯಕ್ತಿಯು ವಿನಯವಂತಿಕೆಯನ್ನು ನಟಿಸಿದರೂ ಪ್ರಯೋಜನ ಆಗದು. ಅದು ಮನಸ್ಸಿನ ಅಂತರಾಳದಿಂದ ಬರಬೇಕು’ ಎಂದರು. ‘ಎಲ್ಲರನ್ನೂ ಪ್ರೀತಿ- ಸಮಾನತೆಯಿಂದ ಕಾಣುವ, ಗೌರವಿಸುವ ವ್ಯಕ್ತಿತ್ವ ರೂಢಿಸಿಕೊಳ್ಳಿ. ನಿಮ್ಮ ಕೆಲಸಕ್ಕಿಂತ ಹೆಚ್ಚಾಗಿ ನಿಮ್ಮ…

Read More

ಬಂಟ್ಸ್ ಫ್ಯಾಮಿಲಿ ಯು.ಎ.ಇ. ವತಿಯಿಂದ ವರ್ಷಂಪ್ರತಿ ನಡೆಸುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ನವಂಬರ್ 19 ರಂದು ದುಬಾಯಿಯಲ್ಲಿ ನಡೆಯಲಿದೆ. ನವಂಬರ್ 19 ರಂದು ದುಬಾಯಿಯ ಅಲ್ ಗಿಸಾಸ್ ನ ಇಂಡಿಯನ್ ಅಕಾಡೆಮಿಕ್ ಸ್ಕೂಲ್ ಸಭಾಂಗಣದಲ್ಲಿ ಬೆಳಿಗ್ಗೆ ಒಂಬತ್ತರಿಂದ ಮಧ್ಯಾಹ್ನ ಎರಡು ಗಂಟೆಯ ವರೆಗೆ ಹಲವಾರು ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಹಾಗೂ ಯು.ಎ.ಇ.ಯಲ್ಲಿ ಇರುವ ಎಲ್ಲರೂ ಈ ಪೂಜೆಗೆ ಬಂದು ಶ್ರೀ ಸತ್ಯನಾರಾಯಣ ದೇವರ ಕೃಪೆಗೆ ಪಾತ್ರರಾಗಬೇಕೆಂದು ಯು.ಎ.ಇ. ಬಂಟ್ಸ್ ನ‌ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.), ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 02-10-2023 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ “ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಯೋಜಿಸಲಾದ” ಜನಜಾಗೃತಿ ಜಾಥಾ ಮತ್ತು ಸಮಾವೇಶ – 2023″ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಸತ್ಯಾನಂದ ನಾಯಕ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್…

Read More

ಸೆಪ್ಟೆಂಬರ್ ತಿಂಗಳ 16ನೇ ತಾರೀಕು ಶನಿವಾರ ರಾತ್ರಿ 8:00 ಗಂಟೆಗೆ ಐಲೇಸಾ ದಿ ವಾಯ್ಸ್ ಆಫ್ ಒಷನ್ (ರಿ)ಡಿಜಿಟಲ್ ವೇದಿಕೆಯಲ್ಲಿ ‘ಗಂಟ್ ಕಲ್ವೆರ್’ ತುಳು ಚಲನಚಿತ್ರದ ಹಾಡು ಬಿಡುಗಡೆಯಾಗಲಿದೆ. ಜಾಗತಿಕ ತುಳು ಸಾಂಸ್ಕೃತಿಕ ರಾಯಭಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅಬುಧಾಬಿಯ ಸರ್ವೋತ್ತಮ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹಾಡನ್ನು ಬಿಡುಗಡೆಗೊಳಿಸಲಿದ್ದಾರೆ. ಚಿತ್ರದ ಪಾತ್ರವರ್ಗದ ನಾಯಕ ನಾಯಕಿ ಮತ್ತು ಹಾಸ್ಯ ನಟರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ವಿ ಮನೋಹರ್ ಅವರು ಸಂಗೀತ ನೀಡಿರುವ ಹಾಡನ್ನು ಐಲೇಸಾ ಸಂಸ್ಥೆಯ ಹೆಮ್ಮೆಯ ಹಾಡುಗಾರ ಸುಧಾಕರ್ ಶೆಟ್ಟಿಯವರು ಹಾಡಿದ್ದು ಚಿತ್ರವನ್ನು ಸುಧಾಕರ್ ಬನ್ನಂಜೆಯವರು ನಿರ್ದೇಶಿಸಿದ್ದಾರೆ. ಮಂಗಳೂರು, ಮೂಡಬಿದ್ರಿ ಮತ್ತು ಉಡುಪಿ ಪರಿಸರದಲ್ಲಿ ಚಿತ್ರೀಕರಣ ಮುಗಿಸಿರುವ ಹಾಸ್ಯಮಯ ಚಿತ್ರದಲ್ಲಿ ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಸುಂದರ್ ರೈ ಮಂದಾರ, ಉಮೇಶ್ ಮಿಜಾರ್, ಪ್ರದೀಪ್ ಆಳ್ವ ಕದ್ರಿ, ಪ್ರೇರಣಾ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ದಿಶಾ ಪುತ್ರನ್, ಸುಧೀರ್ ಕೊಟ್ಟಾರಿ ಇವರ ಭರ್ಜರಿ…

Read More

ಸ್ವಸ್ಥ ಸಮಾಜ ನಿರ್ಮಾಣದ ಪರಿಕಲ್ಪನೆ ಅವಶ್ಯ: ಆಳ್ವ ಮೂಡುಬಿದಿರೆ: ಮಾನವ ಬದುಕಿನುದ್ದಕ್ಕೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿμÁ್ಠನದ ಅಧ್ಯಕ್ಷ ಡಾ. ಎಂ .ಮೋಹನ ಆಳ್ವ ಹೇಳಿದರು ಮೂಡುಬಿದಿರೆಯ ಬಂಟರ ಸಂಘದ ಮಹಿಳಾ ಘಟಕದ ವತಿಯಿಂದ ಭಾನುವಾರ ಪಟ್ಟಣದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಎಲ್ಲ ಜಾತಿ ಸೇರಿದರೆ ಸಮಾಜ. ಮನುಷ್ಯ ದಾನ ಧರ್ಮದ ಮೂಲಕ ಸ್ವಸ್ಥ ಸಮಾಜ ನಿರ್ಮಿಸುವ ಪರಿಕಲ್ಪನೆ ಹೊಂದಿರಬೇಕು. ಬಡವ- ಶ್ರೀಮಂತ ಎನ್ನುವ ಅಂತರ ಕಡಿಮೆಗೊಳಿಸುವುದರತ್ತ ಪ್ರತಿಯೊಬ್ಬರೂ ಚಿತ್ತ ಹರಿಸಬೇಕು ಎಂದು ಸಲಹೆ ನೀಡಿದರು. ಇಂದು ಯುವ ಪೀಳಿಗೆ ಮೊಬೈಲ್ ಗೆ ಜೋತು ಬಿದ್ದು ಸಮಾಜಮುಖಿ ಜೀವನದಿಂದ ಪ್ರತ್ಯೇಕವಾಗಿದ್ದಾರೆ ಕೂಡುಕಟುಂಬದ ಮೂಲಕ ಸಂಸ್ಕಾರ ಪರಿಚಯಿಸಬೇಕಾಗಿದೆ. ಆಗ ಮಾತ್ರ ವ್ಯಕ್ತಿ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಉಪನ್ಯಾಸ ನೀಡಿ, ಬದಲಾದ ಕಾಲಘಟ್ಟದಲ್ಲಿ ಆಟಿಡೊಂಜಿ ದಿನ ಅನೇಕ ಬಗೆಯಲ್ಲಿ…

Read More

ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಶುಕ್ರವಾರ ಬೆಳಗ್ಗೆ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪ್ರೋತ್ಸಾಹ ನೀಡುತ್ತಿರುವುದು ಖುಷಿಯ ವಿಚಾರ ಎಂದರು. ತುಳು ಚಿತ್ರರಂಗಕ್ಕೆ ಕೆ.ಎನ್. ಟೇಲರ್ ಅವರಂತಹ ಹಿರಿಯರಿಂದ ಇಂದಿನ ಯುವ ಕಲಾವಿದರ ತನಕ ನೂರಾರು ಮಂದಿ ದುಡಿದಿದ್ದಾರೆ. ಅವರೆಲ್ಲರ ಶ್ರಮದಿಂದ ತುಳು ಸಿನಿಮಾಗಳು ತುಳುವರ ಪ್ರೀತಿಯನ್ನು ಗಳಿಸಿದೆ. ಸಿನಿಮಾವನ್ನು ನೋಡಿ ಬೆನ್ನುತಟ್ಟಿ ಪ್ರೋತ್ಸಾಹಿಸಿ” ಎಂದರು. ಬಳಿಕ ಮಾತಾಡಿದ ಭೋಜರಾಜ್ ವಾಮಂಜೂರು, “ಸರ್ಕಸ್ ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ಗಿರಿಗಿಟ್ ಬಳಿಕ ಮತ್ತೊಮ್ಮೆ ಅದೇ ತಂಡದ ಮೂಲಕ ನಾವೆಲ್ಲರೂ ಜೊತೆಯಾಗಿ ನಟಿಸಿದ್ದೇವೆ ಎಂದರು. ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಮಾತಾಡಿ, “ಸರ್ಕಸ್ ಚಿತ್ರ ತುಳುನಾಡಿನಲ್ಲಿ ಸಕ್ಸಸ್ ಆಗಲಿ. ಇನ್ನಷ್ಟು ತುಳು…

Read More

ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಭಾರತ ವಿಶ್ವದಲ್ಲಿಯೇ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿದ ರಾಷ್ಟ್ರವಾಗಿದೆ. ಈ ಮೂಲಕ ಭಾರತ ತನ್ನ ನೆರೆಯ ರಾಷ್ಟ್ರ ಚೀನವನ್ನು ಹಿಂದಿಕ್ಕಿದೆ. ಭೌಗೋಳಿಕ ವಿಸ್ತೀರ್ಣದಲ್ಲಿ ವಿಶ್ವದಲ್ಲಿ ಏಳನೇ ಸ್ಥಾನ ಹೊಂದಿರುವ ಭಾರತ ಈಗ 142.86 ಕೋಟಿ ಜನರನ್ನು ಹೊಂದುವ ಮೂಲಕ ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಒಟ್ಟಾರೆಯಾಗಿ ಅವಲೋಕಿ ಸಿದಾಗ ಭಾರತದ ಪಾಲಿಗೆ ಇದೊಂದು ಧನಾತ್ಮಕ ಬೆಳವಣಿಗೆಯಾಗಲಿ, ಹೆಮ್ಮೆಯ ವಿಷಯವೇನಲ್ಲ. ಹಾಗೆಂದು ಇದು ದೇಶದ ಪಾಲಿಗೆ ಬಲುದೊಡ್ಡ ಹೊರೆ ಎಂದು ಭಾವಿಸಿ ಆತಂಕ ಪಡುವ ಪರಿಸ್ಥಿತಿಯೇನೂ ಸೃಷ್ಟಿಯಾಗಿಲ್ಲ. ಕಾರಣ ದೇಶದ ಒಟ್ಟಾರೆ ಜನಸಂಖ್ಯೆಯನ್ನು ಪರಿಗಣಿಸಿದಾಗ 25.40ಕೋಟಿ ಜನರು 15-24 ವರ್ಷದೊಳಗಿನವರಾಗಿದ್ದಾರೆ. ಇದು ದೇಶದ ಪಾಲಿಗೆ ಆಶಾದಾಯಕ ಮತ್ತು ಇಷ್ಟೊಂದು ಬೃಹತ್‌ ಪ್ರಮಾಣದ ಯುವ ಸಮುದಾಯವನ್ನು ಹೊಂದಿರುವುದು ಹೆಮ್ಮೆಯ ಸಂಗತಿಯೇ. ಸದ್ಯ ಇಡೀ ವಿಶ್ವದ ಜನಸಂಖ್ಯೆಯಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದಲ್ಲಿ ಬಹುತೇಕ ದೇಶಗಳಲ್ಲಿ ಜನನ ಪ್ರಮಾಣ ಇಳಿಕೆಯಾಗುತ್ತಲೇ ಬಂದಿದೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವಿಚಾರದಲ್ಲಿ ಭಾರತವೂ…

Read More

ಐತಿಹಾಸಿಕ ಹಿನ್ನೆಲೆಯಿದ್ದು,ಸುಮಾರು 2200 ವರ್ಷದ ಇತಿಹಾಸವಿರುವ ಶಿರ್ವ ಮಟ್ಟಾರು ಶ್ರೀ ಬಬ್ಬರ್ಯ ದೈವಸ್ಥಾನದಲ್ಲಿ ಎಲ್ಲೂರು ಸೀಮೆಯ ಆಗಮ ಪಂಡಿತ ವೇ|ಮೂ|ಕುತ್ಯಾರು ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ,ವೇ|ಮೂ| ಕುತ್ಯಾರು ಕೇಂಜ ಭಾರ್ಗವ ತಂತ್ರಿ ಮತ್ತು ವೇ|ಮೂ| ರಘುಪತಿ ಗುಂಡು ಭಟ್‌ ಅವರ ಪೌರೋಹಿತ್ಯದಲ್ಲಿ ಬ್ರಹ್ಮಕಲಶಾಭಿಷೇಕವು ಸೋಮವಾರ ನಡೆಯಿತು. ಸೋಮವಾರ ಪುಣ್ಯಾಹ,ಗಣಯಾಗ,ಬ್ರಹ್ಮಕಲಶ ಪ್ರತಿಷ್ಠೆ,ಪ್ರಧಾನ ಯಾಗ, 8-45ರ ಮೀನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಾಶಾಭಿಷೇಕ,ಮಹಾಪೂಜೆ ನಡೆದು ಸಾನಿಧ್ಯಕ್ಕೆ ಸಂಬಂಧಪಟ್ಟ ನಾಗಬನದಲ್ಲಿ ತನುತಂಬಿಲ ಸೇವೆ ನಡೆಯಿತು. ಸಂಪ್ರದಾಯದಂತೆ ಮಧ್ಯಾಹ್ನ ಧ್ವಜಾರೋಹಣ ನಡೆದು ದೈವ ಸಂದರ್ಶನ,ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಿ ಅನ್ನ ಪ್ರಸಾದ ಸ್ವೀಕರಿಸಿದರು. ರಾತ್ರಿ ನಂದಿಗೋಣ ಮತ್ತು ದೈವ ಬಬ್ಬರ್ಯನ ನೇಮ ನಡೆದು ಮಂಗಳವಾರ ಬೆಳಿಗ್ಗೆ ನೀಚ ದೈವದ ನೇಮ ನಡೆಯಿತು. ದೈವಸ್ಥಾನದ ಮೊಕ್ತೇಸರ ಮಟ್ಟಾರು ಅರಂತಡೆ ಎಂ. ಗಿರೀಶ್‌ ಹೆಗ್ಡೆ, ಆಡಳಿತ ಮಂಡಳಿಯ ಅಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ, ಶಿರ್ವ ನಡಿಬೆಟ್ಟು ಮನೆತನದ ಚಂದ್ರಶೇಖರ ಹೆಗ್ಡೆ, ಬರೊಡಾದ ಉದ್ಯಮಿ ಶಶಿಧರ…

Read More

ಕನ್ನಡ ಕರಾವಳಿ ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಗಾಧ ಮತ್ತು ಅನನ್ಯ. ಆಧುನಿಕ ವೈದ್ಯವಿಜ್ಞಾನದ ಜೊತೆಜೊತೆಗೆ ಆಯುರ್ವೇದ ವಿಜ್ಞಾನದ ಬೆಳವಣಿಗೆ ಮತ್ತು ವಿಸ್ತಾರ ಅಷ್ಟೇ ವೇಗವಾಗಿ ಸಾಗಿದೆ. ಆಯುರ್ವೇದ ವೈದ್ಯ ವಿಜ್ಞಾನದ ಅಭ್ಯಾಸ, ಅನ್ವೇಷಣೆ, ಮಾನಕೀಕರಣ,ಪ್ರಯೋಗಶೀಲತೆ ಹಾಗೂ ವೃತ್ತಿಪರತೆ ಸಾವಿರಸಾವಿರ ಸಂಖ್ಯೆಯ ರೋಗಿಗಳ ಮೊಗದಲ್ಲಿ ನಗು ಹೊಮ್ಮಿಸಿದೆ. ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಆಯುರ್ವೇದ ವೃತ್ತಿಪರ ಸಂಸ್ಥೆಗಳನ್ನು ಹೊರತುಪಡಿಸಿ ಅಲೋಪತಿ ನರ್ಸಿಂಗ್ ಹೋಮ್ ಗಳಂತೆ ಸುಸಜ್ಜಿತ ಖಾಸಗಿ ಆಯುರ್ವೇದ ಆಸ್ಪತ್ರೆಗಳು ರಾಜ್ಯದಲ್ಲಿ ಕೇವಲ ಬೆರಳೆಣಿಕೆಯಷ್ಟು. ಆರ್ಥಿಕ ಸವಾಲುಗಳನ್ನು ಎದುರಿಸಿ ದೂರಗಾಮಿ ಸ್ಥಿರತೆಯನ್ನು ಕಾಪಾಡಿಕೊಂಡು ಉನ್ನತ ಸೇವಾತತ್ಪರತೆಯನ್ನು ಮೆರೆಯುವುದು ನಿಜಕ್ಕೂ ಕಠಿಣ. ಹಾಗಾಗಿಯೇ ಏನೋ ಬಡ ಮಧ್ಯಮವರ್ಗದ ಜನರಿಗೆ ಆಯುರ್ವೇದ ಔಷಧ, ಚಿಕಿತ್ಸೆ, ಶುಶ್ರೂಷೆ ಮರೀಚಿಕೆಯಾಗಿದ್ದು ಮಾತ್ರವಲ್ಲದೆ ಆಯುರ್ವೇದದ ಬಗೆಗಾಗಿನ ಪ್ರಚಾರ ಪ್ರಸಾರ ತೀರಾ ನೀರಸವಾಯಿತು. ಲಾಭಾನಾಂ ಶ್ರೇಯಃ ಆರೋಗ್ಯಮ್ – ಬದುಕಿನಲ್ಲಿ ಸಂಪಾದಿಸುವ ಎಲ್ಲಾ ಲಾಭಗಳಿಗಿಂತ ಆರೋಗ್ಯ ಸಂಪಾದನೆ ಶ್ರೇಷ್ಠ ಲಾಭ. ಆಯುರ್ವೇದ ಜೀವನ ಪದ್ಧತಿ ಸಾರ್ವಕಾಲಿಕ ಮತ್ತು ಸರ್ವಮಾನ್ಯ. ಆರೋಗ್ಯ…

Read More

ನಾವೆಲ್ಲ ಹುಟ್ಟುತ್ತಲೇ ಮಾತೃ ಋಣ, ಪಿತೃ ಋಣ ಹಾಗೂ ಸಮಾಜದ ಋಣವನ್ನು ಕೂಡಿಕೊಂಡೇ ಹುಟ್ಟುತ್ತೇವೆ. ಈ ಋಣಗಳನ್ನು ನಮ್ಮ ಜೀವಮಾನದಲ್ಲಿ ತೀರಿಸಲು ಸಾಧ್ಯವಿಲ್ಲ. ಕಿಂಚಿತ್ ಪ್ರಮಾಣದಲ್ಲಿಯಾದರೂ ಋಣಭಾರವನ್ನು ಹಗುರ ಮಾಡಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕಾದುದು ಪ್ರತಿಯೊಬ್ಬ ಮಾನವನ ಕರ್ತವ್ಯ. ಈ ದೆಸೆಯಲ್ಲಿ ಕೆಲವರಾದರೂ ಪ್ರಯತ್ನ ಶೀಲರಾಗಿ ಸತತ ಸಂಘರ್ಷಗಳಿಂದ ಇಂಥ ಪಥದಲ್ಲಿ ಅಗ್ರೇಸರರಾಗಿ ಸಮಾಜದಲ್ಲಿ ಗುರುತಿಸಿ ಕೊಂಡಿರುವುದಷ್ಟೇ ಅಲ್ಲದೇ ತಮ್ಮ ಮಾತಾಪಿತರ ಹಾಗೂ ಹುಟ್ಟಿದ ಊರಿನ ಹೆಸರನ್ನು ಗೌರವದಿಂದ ಆಡಿಕೊಳ್ಳುವಂತೆ ಸಾಧನೆ ಮಾಡಿದವರನ್ನು ನೆನೆಸಿ ಕೊಂಡರೆ ಹೆಮ್ಮೆಯೆನಿಸುತ್ತದೆ. ಇಂಥವರ ಸಾಲಿನಲ್ಲಿ ನಿಸ್ಸಂಶಯವಾಗಿ ಹೆಸರಿಸಬಹುದಾದ ಹೆಸರು ಕಾರ್ಕಳ ತಾಲೂಕಿನ ಅಜೆಕಾರು ಮೂಲದ ಸಂಘಟಕ, ಸಮಾಜಸೇವಕ, ಜನಪರ ಕಾಳಜಿಯ ಸ್ನೇಹಜೀವಿ ಶ್ರೀ ವಿಜಯ್ ಶೆಟ್ಟಿ ಅವರದ್ದು. ಕಾರ್ಕಳ ತಾಲೂಕಿನ ಅಜೆಕಾರು ಕೊರಗ ಶೆಟ್ಟಿ ಹಾಗೂ ಶ್ರೀಮತಿ ಸರಸ್ವತಿ ಕೆ ಶೆಟ್ಟಿ ದಂಪತಿಗಳಿಗೆ ಆರನೇ ಪುತ್ರನಾಗಿ ಜನಿಸಿದ ವಿಜಯ್ ಶೆಟ್ಟಿ ಅವರು ಅಜೆಕಾರು ಪ್ರಾಥಮಿಕ ಶಾಲೆಯಲ್ಲಿ ಆರಂಭಿಕ ಶಿಕ್ಷಣ ಹಾಗೂ ಅಜೆಕಾರು ಜ್ಯೋತಿ ಹೈಸ್ಕೂಲ್ ನಲ್ಲಿ…

Read More