Author: admin
ಕಳೆದ ಐದು ದಶಕಗಳಿಂದ ತೆಂಕುತಿಟ್ಟಿನ ಡೇರೆ ಹಾಗೂ ಬಯಲಾಟ ಮೇಳಗಳಲ್ಲಿ ಕಲಾ ಸೇವೆಗೈದಿರುವ, ಕಟೀಲು ಮೇಳದಲ್ಲಿ ಎರಡು ದಶಕಗಳಿಂದ ವೇಷಧಾರಿಯಾಗಿ ಹಾಗೂ ಪ್ರಬಂಧಕರಾಗಿ ದುಡಿಯುತ್ತಿರುವ ಖ್ಯಾತ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ಅವರಿಗೆ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ ನೀಡಲಾಯಿತು. ಕದ್ರಿ ಕಂಬಳಗುತ್ತು ವಾಸವಿ ಬಾಲಕೃಷ್ಣ ಶೆಟ್ಟಿ ಮತ್ತು ಮಕ್ಕಳು ಸಂಯೋಜನೆ ಮಾಡಿದ್ದ ಶ್ರೀ ಕಟೀಲು ಮೇಳದ ಸೇವೆ ಆಟ ಸಂಧರ್ಭದಲ್ಲಿ ಕದ್ರಿ ಕಂಬಳ ಸಂಯೋಜಕರಾಗಿ, ಹವ್ಯಾಸಿ ತಾಳಮದ್ದಳೆ ಕಲಾವಿದರಾಗಿ, ಸಂಘ ಪರಿವಾರದ ಹಿರಿಯ ನಾಯಕನಾಗಿದ್ದ ಬಾಲಕೃಷ್ಣ ಶೆಟ್ಟಿ ಅವರ ನೆನಪಿನಲ್ಲಿ ಪ್ರಶಸ್ತಿ ನೀಡಲಾಯಿತು. ಕಟೀಲು ಲಕ್ಷ್ಮೀನಾರಾಯಣ ಆಸ್ರಣ್ಣರು ಕದ್ರಿ ಕಂಬಳ ಗುತ್ತು ಪರಿವಾರದ ಕಲಾಪ್ರೀತಿಯನ್ನು ಶ್ಲಾಘಿಸಿದರು. ಹಿರಿಯ ವಿದ್ವಾಂಸ ಡಾ. ಎಮ್ ಪ್ರಭಾಕರ ಜೋಶಿ, ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ ಕಲ್ಕೂರ, ಡಾ. ಬಿ.ನಿಶಾಕಾಂತ್ ಶೆಟ್ಟಿ ಬೆಂಗಳೂರು, ಸುರೇಶ ಹೆಗ್ಡೆ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಶಿವರಾಮ್ ಶೆಟ್ಟಿ ಇಂದ್ರಾಳಿ, ಸಿದ್ಧಾರ್ಥ್ ಶೆಟ್ಟಿ, ಅರ್ಜುನ್ ಹೆಗ್ಡೆ, ಸಾಕೇತ್ ಶೆಟ್ಟಿ…
ಜಿಲ್ಲೆಯ ಕ್ರೀಡಾಪಟುಗಳಿಗೆ ಸಹಾಯ ಮತ್ತು ತರಬೇತಿ ನೀಡುವ ಮೂಲಕ ಅವರನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುವುದು ನಮ್ಮ ಕರ್ತವ್ಯ. ರಾಜಕೀಯ ರಹಿತವಾಗಿ ಕ್ರೀಡೆ ಮೇಲೆ ಅಭಿಯಾನ ಇಟ್ಟುಕೊಂಡು ಮುಂದೆ ಸಾಗಬೇಕು ಎಂದು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಪೂರ್ವಾಧ್ಯಕ್ಷ ಅಶೋಕ್ ಅಡ್ಯಂತಾಯ ಹೇಳಿದರು. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಬೆಳ್ಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, 1999 ರಲ್ಲಿ ಆರಂಭವಾದ ಸಂಸ್ಥೆ ಇಂದಿನವರೆಗೆ ಎರಡು ರಾಷ್ಟ್ರೀಯ ಮಟ್ಟದ, ಐದು ರಾಜ್ಯ ಮಟ್ಟದ ಹಾಗೂ ಹಲವಾರು ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸಿದೆ. ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ನೂರಾರು ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ತರಬೇತಿ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಭಾರತಕ್ಕೆ ಉತ್ತಮ ಕ್ರೀಡಾಪಟುಗಳನ್ನು ನೀಡಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪೂರ್ವಾಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ ಕೊಕ್ಕರ್ಣೆ, ರಘುರಾಮ್ ನಾಯಕ್, ಅಶೋಕ…
ಡಾ. ತೇಜಸ್ವಿ ಭಂಡಾರಿ ಇವರು ಡಾ ಪಾರಿ ಕೆ ಎ ಇವರ ಮಾರ್ಗದರ್ಶನದಲ್ಲಿ ಸಂಭಾವ್ಯ ಪ್ರೊಬಯೋಟಿಕ್ ಬ್ಯಾಕ್ಟೀರಿಯಾದ ಮೇಲೆ ಮಾಡಿದ ಸಂಶೋಧನೆಗಾಗಿ ಬೆಂಗಳೂರಿನ ಕ್ರೈಸ್ತ್ ಯೂನಿವರ್ಸಿಟಿ ಡಾಕ್ಟರೇಟ್ ಪದವಿಯನ್ನು ಕೊಟ್ಟು ಗೌರವಿಸಿದೆ. ಇವರು ಪ್ರಸ್ತುತ ಬೆಂಗಳೂರಿನ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಕಾಲೇಜ್ ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬೈಲು ಮೂಡುಕರೆ ಮಂಜುನಾಥ ಭಂಡಾರಿ ಶೆಡ್ಯೆ ಮತ್ತು ಅಮ್ಮುಂಜೆ ಬಡಕಬೈಲು ಅನುಸೂಯ ಭಂಡಾರಿಯವರ ಪುತ್ರಿ ಹಾಗೂ ಮಲ್ಲೂರು ಪರಾರಿ ಸಿದ್ದಾರ್ಥ ರೈಯವರ ಪತ್ನಿಯಾಗಿದ್ದಾರೆ.
ಖ್ಯಾತ ತಮಿಳು ಹಾಸ್ಯ ನಟ ಯೋಗಿಬಾಬು ಜತೆಗೆ ನಟಿಸಲಿರುವ ನಮ್ಮೂರಿನ ಬಿಗ್ಬಾಸ್ ವಿನ್ನರ್ ನಮ್ಮ ಕರಾವಳಿಯ ರೂಪೇಶ್ ಶೆಟ್ಟಿ ಗಡಿ ದಾಟಿ ಹೋಗಿ ಸಿನೆಮಾ ರಂಗದಲ್ಲಿ ಸಾಧನೆ ಮಾಡುತ್ತಿದ್ದು, ಅದಕ್ಕೆ ಈಗ ಅವರು ತಮಿಳಿನಲ್ಲಿ ನಟಿಸುವ ಅವಕಾಶ ಪಡೆದುಕೊಂಡಿರುವುದು ಹೊಸ ಸೇರ್ಪಡೆ. ಬಿಗ್ ಬಾಸ್ ವಿನ್ನರ್ ಆದ ಬಳಿಕ ಅವರ ವೃತ್ತಿ ಜೀವನ ಮತ್ತೊಂದು ಎತ್ತರಕ್ಕೆ ಹೋಗಿದೆ. ಅದಕ್ಕೂ ಮೊದಲು ಅವರು ಮಾಡಿರುವ ಸಾಧನೆ, ಗಳಿಸಿರುವ ಜನಪ್ರಿಯತೆಯಿಂದಲೇ ಅವರಿಗೆ ಬಿಗ್ಬಾಸ್ನಲ್ಲಿ ಅವಕಾಶ ಸಿಕ್ಕಿದ್ದು, ಬಳಿಕ ಬಿಗ್ಬಾಸ್ ಮನೆಯಲ್ಲಿ ತೋರಿದ್ದ ನಿರ್ವಹಣೆಯಿಂದ ವಿನ್ನರ್ ಆದಾಗ ತುಳುನಾಡಿನ ಜತೆಗೆ ಇಡೀ ರಾಜ್ಯವೇ ಸಂಭ್ರಮಿಸಿತ್ತು. ಗಿರಿಗಿಟ್, ಗಮ್ಜಾಲ್, ಸರ್ಕಸ್ ಮುಂತಾದ ಹಿಟ್ ಸಿನಿಮಾಗಳನ್ನು ನೀಡಿರುವ ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನ ಸುದೀಪ್ ಮುಂತಾದ ಫಟಾನುಫಟಿಗಳ ಜತೆಗೆ ಸ್ನೇಹ ಸಂಪಾದಿಸಿದ್ದಾರೆ. ಬಿಗ್ ಬಾಸ್ ವಿನ್ನರ್ ಆದ ಮೇಲೆ ರೂಪೇಶ್ ಕನ್ನಡದಲ್ಲಿ ಅಭಿನಯಿಸಿದ ಅಧಿಪತ್ರ ಸಿನಿಮಾದ ಚಿತ್ರೀಕರಣ ಪೂರೈಸಿದೆ. ಅವರು ಕನ್ನಡದಲ್ಲಿ ಅಭಿನಯಿಸಿದ “ಮಂಕುಭಾಯ್ ಫಾಕ್ಸಿರಾಣಿ” ಯಶಸ್ಸನ್ನು ಕಂಡಿದೆ. ಅಲ್ಲದೇ…
ಪೆರಾರ ಮುಂಡಬೆಟ್ಟು ಮೂಲದ ಅಕ್ಷಯಾ ತನ್ನ ಎಳವೆಯಿಂದಲೇ ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಅತೀವ ಆಸಕ್ತಿ ಹೊಂದಿದ್ದು ಬೆಳೆಯುತ್ತಿದ್ದಂತೆ ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡು ಸಾಹಿತ್ಯಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಪ್ರಸ್ತುತ ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಸಹಾಯಕ ಪ್ರಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಈಕೆ ಬಹುಮುಖ ಪ್ರತಿಭೆಯ ಮೇಧಾವಿಯಾಗಿದ್ದು ಸಾಹಿತ್ಯದಲ್ಲಿ ತನ್ನದೇ ಆದ ವಿಶಿಷ್ಟ ಶೈಲಿಯ ಛಾಪು ಮೂಡಿಸಿದ್ದು ಈಗಾಗಲೇ ನಾಡಿನ ಹೆಸರಾಂತ ಸಾಹಿತ್ಯ ವಿಮರ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೈಕ್ರೋ ಬಯಾಲಜಿಯಲ್ಲಿ ವಿಜ್ಞಾನ ಪದವಿ, ಕನ್ನಡ ಸಾಹಿತ್ಯದ ಎಂ.ಎ ಸ್ನಾತಕೋತ್ತರ ಶಿಕ್ಷಣ ಪಡೆದ ಧೀಮಂತೆ. ಅಷ್ಟಕ್ಕೇ ಸಾಲದೆಂಬಂತೆ ಮಾನವ ಸಂಪನ್ಮೂಲ ವಿಷಯ ಕುರಿತು ಎಂ.ಬಿ.ಎ ವ್ಯಾಸಂಗವನ್ನೂ ಪೂರ್ತಿಗೊಳಿಸಿದ್ದು ಪ್ರಾಧ್ಯಾಪಕಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಜನಮೆಚ್ಚಿದ ಸಾಹಿತಿಯಾಗಿ ಗಮನೀಯ ಸಾಧನೆಗೈದ ಅಕ್ಷಯಾ ಅವರ ಅರ್ಹತೆಯನ್ನು ಗುರುತಿಸಿ ಇದೀಗ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ಗೌರವ ಸದಸ್ಯೆಯಾಗಿಯೂ ಆಯ್ಕೆ ಮಂಡಳಿ ಆರಿಸಿದ್ದು ಆಕೆಯ…
ಸಂಶೋಧನೆ ಮತ್ತು ಕಥನ ನಮ್ಮಲ್ಲಿ ಸದಾ ಜಿಜ್ಞಾಸೆ ಹುಟ್ಟಬೇಕು. ಜಿಜ್ಞಾಸೆ ಹುಟ್ಟಿದರೆ ಮಾತ್ರ ಕಥೆ ರಚನೆ ಸಾಧ್ಯ ಎಂದು ಸಾಹಿತಿ ರಾಜಶ್ರೀ ರೈ ಪೆರ್ಲ ಹೇಳಿದರು. ಉಜಿರೆ ಶ್ರೀಧ. ಮಂ. ಕಾಲೇಜಿನಲ್ಲಿ ಕನ್ನಡ ಸಂಘವು ಆಯೋಜಿಸಿದ್ದ ಕಥೆ ಕಟ್ಟುವ ಬಗೆ ಕಥಾ ರಚನಾ ಕಮ್ಮಟ ಉದ್ಘಾಟಿಸಿ ಅವರು ಮಾತನಾಡಿದರು. ಹೊಸತನ ಮತ್ತು ಅವಲೋಕನವಿದ್ದರೆ ಮಾತ್ರ ಕಥೆ ಪರಿಪೂರ್ಣವಾಗುತ್ತದೆ ಕಥೆಗಾರರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಕಥೆ ಯಾವುದೇ ಬರೆದರೂ ಅದನ್ನು ಓದುವ ವರ್ಗವು ಮುಖ್ಯವಾಗಿರುತ್ತದೆ. ಕಥೆಗಾರ ತನ್ನತನವನ್ನು ಹುಟ್ಟುಹಾಕಿ, ಬೆಳೆಸಿ, ತನ್ಮೂಲಕ ಓದುಗನಿಗೆ ತಲಪುವಂತೆ ಇರಬೇಕು ಎಂದರು. ನಾವು ಬರೆದ ಕಥೆಯನ್ನು ಓದುಗರು ಗುರುತಿಸಿದ್ದಾರೆ ಎಂದರೆ ಅದು ನಮ್ಮ ಪರಿಪೂರ್ಣತೆ ಅಲ್ಲ. ನಾವು ಕಥೆಯಲ್ಲಿ ಬರೆದ ಯಾವುದೋ ಒಂದು ಹೊಸ ವಿಷಯ ನಮ್ಮನ್ನು ಗುರುತಿಸುವಂತೆ ಮಾಡಿರಬಹುದು. ಆದ್ದರಿಂದ ಕಥೆ ಬರೆಯುವಾಗ ಹೊಸ ಸಂದರ್ಭ, ಹೊಸ ಸನ್ನಿವೇಶ, ಸಂದೇಶವನ್ನು ನೀಡುತ್ತ ಬರೆಯಬೇಕು.ಆ ಶಕ್ತಿ ಕಥೆಗಾರರಲ್ಲಿ ಇರಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ…
ಇತ್ತೀಚಿನ ದಿನಗಳಲ್ಲಿ ಯಕ್ಷಗಾನದತ್ತ ಯುವ ಸಮುದಾಯ ಆಕರ್ಷಿತಗೊಳ್ಳುತ್ತಿದೆ. ಆದರೆ ಇಂತಹ ಶ್ರೇಷ್ಠ ಎಲ್ಲರಿಗೂ ಒಲಿಯವುದಿಲ್ಲ. ನಿರಂತರ ಅಭ್ಯಾಸ, ಅಧ್ಯಯನ ಶೀಲತೆ, ಕಲೆಯ ಮೇಲಿನ ಒಲುಮೆ, ಪ್ರೀತಿ, ಅಭಿಮಾನ ಆ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಮಾಡುತ್ತದೆ. ಬಂಟ್ವಾಳದ ಎಂಜಿನಿಯರ್ ವಿದ್ಯಾರ್ಥಿಯೋರ್ವನಿಗೆ ಯಕ್ಷಗಾನ ಕಲೆ ಒಲಿದಿದೆ. ಬಾಲ್ಯದಿಂದಲೂ ಯಕ್ಷಗಾನ ಮೇಲಿನ ಆಸಕ್ತಿ ಇಂದು ಈ ಕಲಾವಿದನನ್ನು ಯಕ್ಷ ಲೋಕದಲ್ಲಿ ಸಾಧನೆ ಮಾಡುವಂತೆ ಮಾಡಿದೆ. ಯಕ್ಷಗಾನದ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಬಾಚಿಕೊಳ್ಳುತ್ತಾ ವಿದ್ಯಾಭ್ಯಾಸದೊಂದಿಗೆ ಯಕ್ಷಗಾನ ಕ್ಷೇತ್ರದಲ್ಲೂ ಪರಿಣತಿಯನ್ನು ಪಡೆದುಕೊಳ್ಳುತ್ತಿದ್ದಾನೆ. ಆತನೇ ಅನ್ವೇಶ್ ಆರ್ ಶೆಟ್ಟಿ. ತಾಂತ್ರಿಕ ಪದವಿ (ಇಂಜಿನೀಯರಿಂಗ್) ಶಿಕ್ಷಣದ ಜತೆ ಕಲೋಪಾಸನೆಯಲ್ಲಿ ತೊಡಗಿಸಿಕೊಂಡಿರುವ ಕೆಲವೇ ಮಂದಿ ವಿದ್ಯಾರ್ಥಿಗಳಲ್ಲಿ ಅನ್ವೇಷ್ ಆರ್.ಶೆಟ್ಟಿ ಓರ್ವರು. ಯಕ್ಷಗಾನ ರಂಗದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಅನ್ವೇಷ್ ವಿದ್ಯಾರ್ಥಿ ಯಕ್ಷ ಸಾಧಕ. ಚಿಕ್ಕ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ತನ್ನನ್ನು ಗುರುತಿಸಿಕೊಂಡು ಯಶಸ್ಸು ಪಡೆಯುತ್ತಿರುವುದು ಇವರ ಸಾಧನೆಯಾಗಿದೆ. ಮೂಲತ: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ನಿವಾಸಿ ಪತ್ರಕರ್ತ, ಕಲಾವಿದ ರತ್ನದೇವ್ ಶೆಟ್ಟಿ ಮತ್ತು ಶಿಕ್ಷಕಿ ಸುಜಾತಾ ದಂಪತಿಯ ಪುತ್ರ…
ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೈಸೆಕ್- ಸೈಬರ್ ಸೆಕ್ಯುರಿಟಿ ಫಿನಿಶಿಂಗ್ ಸ್ಕೂಲ್’ ಸಮಾರೋಪ ಸಮಾರಂಭ ‘ಗುಣಮಟ್ಟದ ಕಲಿಕೆಗೆ ಪರಿಶ್ರಮ ಪ್ರಾಮುಖ್ಯ’
ಮೂಡುಬಿದಿರೆ: ಕಲಿಕೆಯುವ ಮಾಹಿತಿ ಯಾವುದೇ ಇರಲಿ, ಗುಣಮಟ್ಟದ ಕಲಿಕೆಗೆ ಪರಿಶ್ರಮ ಪ್ರಾಮುಖ್ಯವಾಗುತ್ತದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್ಒ ಜಾಕ್ಸಿನ್ ಫೆನಾರ್ಂಡಿಸ್ ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಎಂಬಿಎ ಸೆಮಿನಾರ್ ಸಭಾಂಗಣದಲ್ಲಿ ತ್ರಿಶಾಕ ಫೌಂಡೇಶನ್, ಸೈಸೆಕ್ ಸಹಯೋಗದಲ್ಲಿ ಆಯೋಜಿಸಿದ್ದ ‘ಸೈಸೆಕ್- ಸೈಬರ್ ಸೆಕ್ಯುರಿಟಿ ಫಿನಿಶಿಂಗ್ ಸ್ಕೂಲ್’ ಸಮಾರೋಪ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡಿದರು. ಬದುಕಿನಲ್ಲಿ ಚಿಂತನೆಯ ಪ್ರಕ್ರಿಯೆಯನ್ನು ಅಳವಡಿಸಿಕೊಳ್ಳಿ, ಕಲಿಕೆಯುವ ವಿಷಯವು ಸಣ್ಣ ಅಥವಾ ದೊಡ್ಡದಾಗಿರಲಿ. ನಿಮ್ಮ ಪರಿಶ್ರಮ ಇರಲೇ ಬೇಕು ಎಂದ ಅವರು, ಪ್ರತಿಯೊಬ್ಬರಿಗೂ ಜ್ಞಾನವಿದೆ, ಆದರೆ, ಕಲಿಯುವ ಹಂಬಲ ಇರಬೇಕು. ಈ ದಿನಗಳ ಕಲಿಕೆಯೇ ಮುಂದಿನ ದಿನಗಳ ಮಾರ್ಗದರ್ಶಿ ಎಂದು ಅವರು ವಿಶ್ಲೇಷಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸಮಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ. ಸಮಯ ಹಣಕ್ಕಿಂತ ಮುಖ್ಯ. ಸಕಾರಾತ್ಮಕ ಪರಿಸರ ಇದ್ದರೆ, ಪ್ರತಿಯೊಬ್ಬ ವ್ಯಕ್ತಿಯು ಉತ್ತಮವಾಗಿ ಬೆಳೆಯಲು ಸಾಧ್ಯ ಎಂದರು. ಯಾವುದೇ ವ್ಯಕ್ತಿಯನ್ನು ನಿರ್ದಿಷ್ಟತೆಗೆ ಬ್ರ್ಯಾಂಡ್…
ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ; ಮಾರ್ಚ್ 23ರಂದು ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ ಅರ್ಜಿ ವಿತರಣೆ
ಬಂಟರ ಸಂಘ ಮುಂಬಯಿಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ್ ಶೆಟ್ಟಿಯವರ ನೇತೃತ್ವದಲ್ಲಿ ಪ್ರತೀ ವರ್ಷ ಸಮಾಜ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಕೊಡಲ್ಪಡುವ ಧನ ಸಹಾಯ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಮಾಜದ ಬಂಟ ಬಂಧುಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, ವಾರ್ಷಿಕ ವಿಧವಾ ವೇತನ, ಮತ್ತು ಮಾನಸಿಕ ಅಸ್ವಸ್ಥೆಯಲ್ಲಿರುವ ಯಾ ವಿಕಲಾಂಗ ಚೇತನರಿಗೆ ಆರ್ಥಿಕ ಧನ ಸಹಾಯ ವಿತರಣೆಯು ಜೂನ್ ತಿಂಗಳಲ್ಲಿ ನಡೆಯಲಿದೆ. ಆ ಪ್ರಯುಕ್ತ ಅರ್ಜಿ ವಿತರಣೆಯು ಬಂಟರ ಸಂಘ ಮುಂಬಯಿ ಇದರ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿಯವರ ಸಮಕ್ಷಮದಲ್ಲಿ ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಸಂಪತ್ ಶೆಟ್ಟಿ ಪಂಜದಗುತ್ತು ಇವರ ಮುಂದಾಳಾತ್ವದಲ್ಲಿ ಮಾರ್ಚ್ 23ರ ಶನಿವಾರದಂದು ಹೋಟೆಲ್ ಕ್ರೌನ್ ಬಿಸಿನೆಸ್, ಗೋಲ್ಡನ್ ನೆಸ್ಟ್ ಸರ್ಕಲ್ ಬಳಿ, ಮೀರಾ -ಭಾಯಂದರ್ ರೋಡ್ ಇಲ್ಲಿ ಸಂಜೆ 6:00 ರಿಂದ 7ರ ತನಕ…
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ “ಒಂದು ದೇಶ-ಒಂದು ಚುನಾವಣೆ’ ನೀತಿಯ ಜಾರಿಗೆ ಶಿಫಾರಸು ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಿ, ಮುಂದಿನ 100 ದಿನಗಳಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಸಮಿತಿ ತನ್ನ ವರದಿಯಲ್ಲಿ ಸಲಹೆ ನೀಡಿದೆ. ಸುದೀರ್ಘ ಅಧ್ಯಯನ, ವಿಚಾರ-ವಿಮರ್ಶೆ ನಡೆಸಿ ಸಮಿತಿಯು “ಒಂದು ದೇಶ-ಒಂದು ಚುನಾವಣೆ’ಗೆ ಸಂಬಂಧಿಸಿದಂತೆ ಸಮಗ್ರ ವರದಿಯನ್ನು ಸಲ್ಲಿಸಿದೆ. ಕಳೆದ ಕೆಲವು ವರ್ಷಗಳಿಂದ ಕೇಂದ್ರದಲ್ಲಿನ ಹಾಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಈ ಬಗ್ಗೆ ಒಲವು ವ್ಯಕ್ತಪಡಿಸುತ್ತಲೇ ಬಂದಿತ್ತು. ಈ ವಿಷಯದ ಕುರಿತಂತೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕಳೆದ ವರ್ಷದ ಸೆಪ್ಟಂಬರ್ನಲ್ಲಿ ಕೇಂದ್ರ ಸರಕಾರ ಈ ಸಂಬಂಧ ಅಧ್ಯಯನ ನಡೆಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿತ್ತು. ಈಗ ಈ ಸಮಿತಿಯೂ “ಒಂದು ದೇಶ-ಒಂದು ಚುನಾವಣೆ’ಗೆ ಶಿಫಾರಸು ಮಾಡಿದ್ದು, 2029ರಿಂದಲೇ ದೇಶದಲ್ಲಿ ಈ ನೀತಿಯನ್ನು…















