Author: admin

ಮೈಸೂರಿನ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ (ನಿ.) ವತಿಯಿಂದ ರಜತ ಮಹೋತ್ಸವ ವರ್ಷದ ಪ್ರಯುಕ್ತ ಹಮ್ಮಿಕೊಂಡಿದ್ದ ಬೆಳ್ಳಿಚಪ್ಪರ, ಸಾಧಕರಿಗೆ ಸನ್ಮಾನ, ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ, ಸ್ಮರಣ ಸಂಚಿಕೆಗೆ ಜಾಹೀರಾತು ಮತ್ತು ಲೇಖನಗಳು ಹಾಗೂ ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಪ್ರೋತ್ಸಾಹಿಸಿ ಯಶಸ್ವಿಗೊಳಿಸಿದ್ದಕ್ಕಾಗಿ ಮೈಸೂರಿನ ಜ್ಞಾನ ಸರೋವರ ಅಂತರಾಷ್ಟ್ರೀಯ ವಸತಿ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಸುಧಾಕರ್ ಎಸ್ ಶೆಟ್ಟಿ ಅವರನ್ನು ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ಪರವಾಗಿ ಅಧ್ಯಕ್ಷರಾದ ನಾರಾಯಣ ವಿ ಹೆಗ್ಡೆ ಅವರು ಅಭಿನಂದಿಸಿದರು.

Read More

ಹೀಗೆ ವಾಟ್ಸಾಪ್ ನೋಡುತ್ತಿದ್ದಾಗ ದಿಢೀರನೆ ಒಂದು ವಿಡಿಯೋ ನನ್ನ ಗಮನ ಸೆಳೆದಿತ್ತು. ಅದು ನೀರಿನ ಕುರಿತಾಗಿತ್ತು. ಮೊದಲು ನಮ್ಮ ಅಜ್ಜಂದಿರು ನೀರನ್ನು ನದಿಯಲ್ಲಿ ಕಾಣುತ್ತಿದ್ದರಂತೆ, ನಮ್ಮಪ್ಪಂದಿರು ಬಾವಿಯಲ್ಲಿ ಕಂಡರಂತೆ, ಮುಂದುವರಿಯುತ್ತಾ ನಮ್ಮ ಜನಾಂಗದವರು ನಳ್ಳಿಯಲ್ಲಿ ಕಂಡರಂತೆ, ಪ್ರಸ್ತುತ ಈಗಿನ ಮಕ್ಕಳು ಬಾಟಲಿಯಲ್ಲಿ ಕಂಡರೆ ಮುಂದಿನ ಜನಾಂಗದ ಮಕ್ಕಳು ಬಾಟಲಿಯಲ್ಲಿ ಕಾಣುವರೇ ಎಂಬ ಪ್ರಶ್ನಾರ್ಥಕ ಚಿಹ್ನೆ. ನಾವು ಇನ್ನೂ ಎಚ್ಚೆತ್ತು ಕೊಳ್ಳದಿದ್ದರೆ ಮನುಷ್ಯನ ಕಣ್ಣೀರಿನಲ್ಲಿ ಮಾತ್ರ ನೀರು ಕಾಣಲು ಸಾಧ್ಯ ಎಂಬುವುದು ಭಯಾನಕ ಸತ್ಯ. ಈಗಿನ ಪರಿಸ್ಥಿತಿ ನೋಡಿದರೆ ಇವೆಲ್ಲಾ ಮಾತುಗಳು ನಿಜ ಅನ್ಸುತ್ತೆ ಅಲ್ವಾ? ನೀರು ಪ್ರತಿಯೊಬ್ಬನಿಗೂ ಬೇಕಾದ ಅತ್ಯಮೂಲ್ಯ ದ್ರವ್ಯ. ಭೂಮಿಯ ಮೇಲಿನ ಪ್ರತಿಯೊಂದು ಜೀವಿಗಳು ಸರಿಯಾಗಿ ಕಾರ್ಯ ನಿರ್ವಹಿಸಲು ನೀರು ಅತ್ಯಗತ್ಯ ಎಂಬುದು ತಿಳಿದ ಸಂಗತಿ. ಸಂಕ್ಷಿಪ್ತವಾಗಿ ಹೇಳುವುದಾದರೆ ನಮ್ಮ ಅಸ್ತಿತ್ವದ ಅಡಿಪಾಯವೇ ನೀರಾಗಿದೆ. ಹೀಗೆ ನಾನಾ ಉಪಯೋಗಗಳನ್ನು ಒಳಗೊಂಡ ನೀರು ಇತ್ತೀಚಿನ ದಿನಗಳಲ್ಲಿ ಮನುಷ್ಯನಿಗೆ ಸರಿಯಾಗಿ ದೊರೆಯುತ್ತಿಲ್ಲ. ನೀರಿನ ತಾಣವೇ ಆಗಿರುವ ಕರ್ನಾಟಕದಲ್ಲಿ ಇಂದು ನೀರಿನ ಅಭಾವ…

Read More

ಮೂಡುಬಿದಿರೆ: ಜೀವನದಲ್ಲಿ ಸಿಗುವ ಪ್ರತಿ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳುವುದು ನಮ್ಮ ಮೊದಲ ಆಯ್ಕೆ ಆಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಶಾಲೆಯು ಶುಕ್ರವಾರ ಕನ್ನಡ ಮಾಧ್ಯಮ ಸಭಾಂಗಣದಲ್ಲಿ ಹಮ್ಮಿಕೊಂಡ ‘ಪ್ರಶಸ್ತಿ ದಿನ 2023 ‘ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೆನ್ಸಿಲ್ ನಿಂದ ಗೀಚಲುಬಹುದು ಅಂತೆಯೇ ಅತ್ಯುತ್ತಮವಾಗಿ ಬರೆಯಬಹುದು. ಅದನ್ನು ಗೀಚುವ ಬದಲು ಬರವಣಿಗೆಯಲ್ಲಿ ಬಳಸಬೇಕಾದುದ್ದು ಮಾತ್ರ ನಮ್ಮ ಆಯ್ಕೆ ಎಂದರು. ಹುಟ್ಟುಹಬ್ಬದ ಸಂಭ್ರಮಕ್ಕೆ ಕೇಕ್ ಕತ್ತರಿಸುವ ಬದಲು, ಗಿಡಗಳನ್ನು ತರಿಸುವ ಮತ್ತು ಅದನ್ನು ಬೆಳೆಸಲು, ಗುರುತಿಸಲು ಕಲಿಯುವ ಎಂದು ಹೇಳಿದ ಅವರು ಮಕ್ಕಳನ್ನು ಪ್ರೋತ್ಸಾಹಿಸಿದರು. ಆಳ್ವಾಸ್ ಶಾಲೆಗಳ ಆಡಳಿತಾಧಿಕಾರಿ ಪ್ರೀತಮ್ ಕುಂದರ್, ಸಹಾಯಕ ಆಡಳಿತಾಧಿಕಾರಿ ರಾಜೇಶ್ ಕುಮಾರ್ ಶೆಟ್ಟಿ, ಆಳ್ವಾಸ್ ಕಿಂಡರ್ ಗಾರ್ಡನ್ ಆಡಳಿತಾಧಿಕಾರಿ ನಿತೇಶ್ ಮಾರ್ನಾಡ್, ಶಾಲೆಯ ಮುಖ್ಯಶಿಕ್ಷಕಿ ರಂಜಿಕಾ ರೈ, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಇದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ…

Read More

ಮೂಡುಬಿದಿರೆ: ‘ಪೌಷ್ಟಿಕ ಆಹಾರ ಸೇವನೆಯ ಮೂಲಕ ಅನ್ನನಾಳದ ರೋಗಗಳು (ಡಿಸ್ಪೇಜಿಯ) ನಿವಾರಿಸಲು ಸಾಧ್ಯ ಎಂದು ಆಹಾರ ಚಿಕಿತ್ಸಕಿ, ಬೆಂಗಳೂರಿನ ಟ್ರಸ್ಟ್‍ವೆಲ್ ಆಸ್ಪತ್ರೆಯ ಶ್ರೀಮತಿ ವೆಂಕಟರಮಣ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಆಹಾರ ವಿಜ್ಞಾನ ಮತ್ತು ಪೌಷ್ಟಿಕಾಂಶ ವಿಭಾಗ ಹಾಗೂ ಐಎಪಿಇಎನ್ ಇಂಡಿಯಾ ಮಂಗಳೂರು ಅಧ್ಯಾಯದ ಜಂಟಿ ಆಶ್ರಯದಲ್ಲಿ ನಡೆದ ಶುಕ್ರವಾರ ಕಾಲೇಜಿನಲ್ಲಿ ನಡೆದ ‘ಅನ್ನನಾಳದ ರೋಗಗಳಿಗೆ ಪೌಷ್ಟಿಕಾಂಶದ ನಿರ್ವಹಣಾ ಕಾರ್ಯಾಗಾರ’ ದಲ್ಲಿ ಅವರು ಮಾತನಾಡಿದರು. ಅನ್ನನಾಳದ ರೋಗ ಲಕ್ಷಣ ಕಂಡುಬಂದಾಗ ಎಚ್ಚೆತ್ತುಕೊಳ್ಳುವುದು ಬಹುಮುಖ್ಯ. ಒಂದು ರೋಗವು ನಾನಾ ರೋಗಕ್ಕೆ ಕಾರಣವಾಗಬಹುದು, ಪೌಷ್ಟಿಕ ಆಹಾರ ಸೇವನೆಯೂ ಒಂದು ನಿವಾರಕ ಅಂಶ ಎಂದು ಅವರು ಮಾಹಿತಿ ನೀಡಿದರು. ಪೌಷ್ಟಿಕಾಂಶ ಆಹಾರ ಎಲ್ಲವನ್ನೂ ಗುಣಪಡಿಸುವ ಶಕ್ತಿ ಹೊಂದಿದೆ. ಕೋವಿಡ್ ನಂತರ ಜನರು ತಮ್ಮ ರೋಗ ನಿವಾರಿಸಲು ಮಾತ್ರೆಗಳನ್ನು ಸೇವಿಸುವುದಕ್ಕಿಂತ ಪೌಷ್ಟಿಕ ಆಹಾರ ಸೇವಿಸುವಲ್ಲಿ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅದನ್ನು ಮುಂದುವರೆಸುವುದು ಅವಶ್ಯಕವಾಗಿದೆ ಎಂದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಆಹಾರವು ಎಲ್ಲಾ ಜೀವರಾಶಿಗೂ ಮುಖ್ಯವಾದುದು.…

Read More

ಸೃಷ್ಟಿಕರ್ತ ಎಲ್ಲಾ ಜೀವಿಗಳಿಗೆ ಐದು ಅರಿವುಗಳನ್ನು ನೀಡಿದರೆ ಮನುಷ್ಯನಿಗೆ ಮಾತ್ರ ಆರು ಅರಿವುಗಳನ್ನು ನೀಡಿದ್ದಾರೆ. ಅದರಿಂದಾಗಿ ಮಾನವನು ವಿಚಾರದ ಬಗೆಗೆ ವಿವೇಚನೆ ವಿವೇಕಗಳನ್ನು ಉಪಯೋಗಿಸಿ ಸರಿಯಾದ ನಿರ್ಣಯಗಳನ್ನು ತೆಗೆದುಕೊಳ್ಳುತ್ತಾನೆ. ಎಲ್ಲಾ ಮತ ಧರ್ಮಗಳು ಲೋಕ ಕಲ್ಯಾಣಕ್ಕಾಗಿ ಕೆಲವೊಂದು ಮಾರ್ಗಸೂಚಿಗಳನ್ನು ತಿಳಿಸಿಕೊಟ್ಟರೂ ಸ್ವಾರ್ಥವನ್ನು ಹಾಸಿಗೆ ಹೊದ್ದುಕೊಂಡು ಮಲಗಿರುವ ಮಾನವ ಸಂತತಿ ಶೇಕಡವಾರು ಲೆಕ್ಕ ಹಾಕಿದರೆ ಮುಕ್ಕಾಲು ಭಾಗದಷ್ಟು ಜನರು ಸ್ವಾರ್ಥಕ್ಕಾಗಿಯೇ ಬದುಕುತ್ತಿದ್ದಾರೆ. ಉಳಿದಿರುವ ಕಾಲು ಭಾಗದಷ್ಟು ಜನರ ಸಜ್ಜನಿಕೆ, ನಿಸ್ವಾರ್ಥತೆ, ಸಹೃದಯತೆ, ಮಾನವಕಳಕಳಿ, ಜೀವಕಾರುಣ್ಯವೇ ಮೊದಲಾದ ಉನ್ನತ ಜೀವನಾರ್ಥಕ ನಡೆಯಿಂದಾಗಿ ಅಶಾಂತಿಯೂ ಉದ್ವೇಗ ಪೂರಿತ ಜೀವನ ಯಾತ್ರೆಯಲ್ಲಿ ಸ್ವಲ್ಪವಾದರೂ ಸಮಾಧಾನ, ನೆಮ್ಮದಿ ದೊರಕುತ್ತದೆ. ಸದಾ ತನಗೂ ಸಮಾಜಕ್ಕೂ ಇರುವ ಅವಿನಾಭಾವ ಸಂಬಂಧವನ್ನು ಅರಿತು ಸಮಾಜಕ್ಕೆ ತನ್ನಿಂದಾದಷ್ಟು ಕೊಡುಗೆಯನ್ನು ನೀಡಿ ಸಮಾಜದ ಋಣವನ್ನು ತೀರಿಸಬೇಕೆಂಬ ತುಡಿತವನ್ನು ಹಲವರಲ್ಲಿ ಕಾಣಬಹುದಾಗಿದೆ. ಇಂತಹ ಸಮಾಜಮುಖೀ ದ್ಯೇಯಾದರ್ಶಗಳೊಡನೆ ಮಿಂಚುತ್ತಿದ್ದಾರೆ ಉಮೇಶ್ ಶೆಟ್ಟಿ ಮಂದಾರ್ತಿಯವರು. ನೊಂದವರ ಬಾಳಿಗೆ ಆಸರೆಯಾಗಿ, ಸಾಂತ್ವನಕಾರರಾಗಿ, ಸಹಾಯಕರಾಗಿ, ಅಸಹಾಯಕರಿಗೆ ಊರುಗೋಲಾಗಿ, ಸಾಧಕರಿಗೆ, ಪ್ರೇರಕ ಶಕ್ತಿಯಾಗಿ ತಾನೇ…

Read More

ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮಹಾರಾಷ್ಟ ಘಟಕದ ದ್ವಿತೀಯ ವಾರ್ಷಿಕ ಸಾಂಸ್ಕೃತಿಕ ಜಾನಪದ ಸಿರಿ ಸಿಂಚನ ಸಂಭ್ರಮವು ಮಾ.24 ರಂದು ಅಪರಾಹ್ನ 2ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಅಪರಾಹ್ನ 2ರಿಂದ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ. ಆರ್. ಕೆ. ಶೆಟ್ಟಿ ಅಧ್ಯಕ್ಷತೆಯಲ್ಲಿ ಸುವರ್ಣ ಕರುನಾಡ ಸನಾತನ ಸಂಸ್ಕೃತಿಯ ಮೇರು ಕಲಾಪ್ರಕಾರಗಳಾದ ಜಾನಪದ ಸಿರಿಸಿಂಚನ, ಗಾಯನ,ನರ್ತನ, ಚಿಂತನ – ಮಂಥನ, ಸಮಗ್ರ ಸಂಗಮ ಕಾರ್ಯಕ್ರಮಗಳ ‘ಸಾಂಸ್ಕೃತಿಕ ಜಾನಪದ ಸಿರಿ ಸಿಂಚನ’ ಸಂಭ್ರಮವು ನಡೆಯಲಿದ್ದು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಬಿ. ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಂಜೆ 6 ರಿಂದ ಸಂಸ್ಥೆಯ ಪ್ರಶಸ್ತಿ ಪ್ರಧಾನ, ಸಮಾರೋಪ ಸಮಾರಂಭವು ಮಹಾರಾಷ್ಟ ಘಟಕ ಅಧ್ಯಕ್ಷ ಡಾ.ಆರ್. ಕೆ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಯಾಗಿ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಕಾರ್ಯಾಧ್ಯಕ್ಷ ವಿಶ್ರಾಂತ ಕುಲಪತಿ ಪ್ರೊ.ಹಿ.ಚಿ ಬೋರಲಿಂಗಯ್ಯ,…

Read More

ವಿದ್ಯಾಗಿರಿ (ಮೂಡುಬಿದಿರೆ): ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ವೇಟ್ ಲಿಫ್ಟಿಂಗ್  ಚಾಂಪಿಯನ್‍ಶಿಫ್‍ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಮಂಗಳೂರಿನ ಎಸ್‍ಡಿಎಂ ಬಿಬಿಎಂ ಕಾಲೇಜಿನಲ್ಲಿ ಮಾರ್ಚ್ 18 ಮತ್ತು 19 ರಂದು ನಡೆದ ಸ್ಪರ್ಧೆಯಲ್ಲಿ ಆಳ್ವಾಸ್ ಪುರುಷರ ಮತ್ತು ಮಹಿಳೆಯರ ತಂಡವು ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದು, ಕಾಲೇಜು ಸಮಗ್ರ ತಂಡ ಪ್ರಶಸ್ತಿ ಜಯಿಸಿದೆ. ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜು 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ ಒಟ್ಟು 61 ಅಂಕ ಪಡೆಯುವ ಮೂಲಕ ಅಗ್ರಸ್ಥಾನ ಪಡೆದಿದ್ದು, ಪ್ರೊ.. ರಿಚರ್ಡ್ ರೆಬೆಲ್ಲೊ ರೋಲಿಂಗ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. 40 ಅಂಕ ಪಡೆದ ಎಸ್‍ಡಿಎಂ ಕಾಲೇಜು ದ್ವಿತೀಯ ಹಾಗೂ ಅಷ್ಟೇ ಅಂಕ ಪಡೆದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ತೃತೀಯ ತಂಡ ಪ್ರಶಸ್ತಿ ಪಡೆಯಿತು. ಅತಿಥೇಯ ಎಸ್‍ಡಿಎಂ ಕಾಲೇಜು ಚತುರ್ಥ ತಂಡ ಪ್ರಶಸ್ತಿ ಪಡೆಯಿತು. ಮಹಿಳಾ ವಿಭಾಗದಲ್ಲಿ ಸತತ 20ನೇ ಬಾರಿ ತಂಡ ಪ್ರಶಸ್ತಿ ಪಡೆದ ಆಳ್ವಾಸ್ ಕಾಲೇಜು, ಒಟ್ಟು 5…

Read More

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಚಲನಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಗಬ್ಬರ್ ಸಿಂಗ್ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಸಿನಿಮಾ ಕತೆ ಚಿತ್ರಕತೆ ಸತೀಶ್ ಪೂಜಾರಿ ಬಾರ್ಕೂರ್, ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.…

Read More

ಪುಣ್ಯಭೂಮಿ ತುಳುನಾಡಿನಿಂದ ಕರ್ಮಭೂಮಿ ಮಹಾರಾಷ್ಟ್ರ ಸೇರಿದ ಬಂಟರು ಥಾಣೆ ಪರಿಸರದಲ್ಲಿ 19 ವರ್ಷಗಳ ಹಿಂದೆ ಒಟ್ಟು ಸೇರಿ ಸಮಾಜದ ಉನ್ನತಿಗಾಗಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಪ್ರಸ್ತುತ ಸಾಮಾಜಿಕ ಸೇವೆಯಲ್ಲಿ ಥಾಣೆ ಬಂಟ್ಸ್ ಬಲಿಷ್ಠ ಹಾಗೂ ಪರಿಪೂರ್ಣವಾದ ಸಂಸ್ಥೆಯಾಗಿದೆ. ಇದರ ಶ್ರೇಯಸ್ಸು ಅಸೋಸಿಯೇಷನನ್ನು ಕಟ್ಟಿ ಬೆಳೆಸಿದ ನಮ್ಮ ಹಿರಿಯರಿಗೆ ಸಲ್ಲುತ್ತದೆ. ವರ್ಷ ಕಳೆದಂತೆ ಸಂಘ-ಸಂಸ್ಥೆಗಳು ಗಟ್ಟಿಯಾಗುತ್ತದೆ. ಅಂತೆಯೇ ಥಾಣೆ ಬಂಟ್ಸ್ ಕೂಡಾ ತುಂಬಾ ಗಟ್ಟಿಯಾಗಿದ್ದು ಬೆಳೆಯುತ್ತಿದೆ. ಸಾವಿರಾರು ಮಂದಿ ಸಮಾಜ ಬಾಂಧವರು ಪಾಲ್ಗೊಂಡ ಈ ವಾರ್ಷಿಕೋತ್ಸವದಲ್ಲಿ ಥಾಣೆ ಬಂಟ್ಸ್ ನ ಶಕ್ತಿ ಸಾಮರ್ಥ್ಯ ಕೂಡಾ ತೋರಿ ಬಂದಿದೆ. ಎಲ್ಲಾ ಮಾಜಿ ಅಧ್ಯಕ್ಷರುಗಳೆಲ್ಲಾ ಈಗಲೂ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸೇವೆಯನ್ನು ಸಲ್ಲಿಸಿ ಮಾರ್ಗದರ್ಶನ ನೀಡುತ್ತಿರುವುದು ಅಸೋಸಿಯೇಷನ್ ನ ಉತ್ತಮ ಬೆಳವಣಿಗೆ ಪೂರಕವಾಗಿದೆ. ಸದಸ್ಯತ್ವ ಸಂಘ ಸಂಸ್ಥೆಗಳ ಬುನಾದಿ. ಹಾಗಿರುವಾಗ ಥಾಣೆ ಪರಿಸರದವರೆಲ್ಲರೂ ಥಾಣೆ ಬಂಟ್ಸ್ ನಲ್ಲಿ ಸದಸ್ಯರಾಗಬೇಕು. ಸದಸ್ಯತ್ವ ಹೆಚ್ಚಾದಂತೆ ಸಂಸ್ಥೆ ಮತ್ತಷ್ಟು ಬಲಿಷ್ಠಗೊಳ್ಳುತ್ತದೆ. ನಾವು ಮಾಡಿರುವ ಆಸ್ತಿ, ದುಡ್ಡು, ಸಂಪತ್ತು ಯಾವತ್ತೂ ನಮ್ಮ…

Read More

ಬಂಟರ ಸಂಘ ಮುಂಬಯಿ ಕ್ರೀಡಾ ಸಮಿತಿಯ ಆಶ್ರಯದಲ್ಲಿ ಪ್ರತೀ ವರ್ಷ ಆಚರಿಸಿಕೊಂಡು ಬರುತ್ತಿರುವ ಕ್ರೀಡಾಕೂಟವು ಸಂಘದ ಮಹತ್ವದ ಕಾರ್ಯಕ್ರಮಗಳಲ್ಲಿ ಅತೀ ಹೆಚ್ಚಿನ ಪ್ರಾಧಾನ್ಯತೆ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಆರಂಭದಿಂದ ಇಂದಿನವರೆಗೂ ಕ್ರೀಡಾಕೂಟ ಬಂತೆಂದರೆ ಬಂಟರಲ್ಲಿ ನವೋಲ್ಲಾಸ ಸಂತಸ ತುಂಬಿ ತುಳುಕುವುದನ್ನು ಕಾಣಬಹುದಾಗಿದೆ. ಬಂಟರ ಕ್ರೀಡಾಕೂಟವೆನ್ನುವುದು ಬಂಟರಿಗೆ ಸ್ನೇಹ ಸಮ್ಮಿಲನವೂ ಹೌದು. ಪ್ರೀತಿ, ಸೌಹಾರ್ದತೆ ಮತ್ತು ಬಾಂಧವ್ಯದ ಸಂಕೇತವೂ ಹೌದು ಎಂದು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ನುಡಿದರು. ಮಾ.17ರಂದು ರವಿವಾರ ಕಾಂದಿವಲಿ ಪಶ್ಚಿಮದ ಪೊಯಿಸರ್ ಜಿಮ್ಖಾನದಲ್ಲಿ ಜರಗಿದ ಸಂಘದ 36ನೇ ವಾರ್ಷಿಕ ಬಂಟರ ಕ್ರೀಡಾಕೂಟ -2024ನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬಳಿಕ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘದ ಕ್ರೀಡಾಕೂಟದಲ್ಲಿ ಮೈದಾನವಿಡೀ ತುಂಬಿ ತುಳುಕುತ್ತಿರುವ ಕ್ರೀಡಾ ಸ್ಪರ್ಧಿಗಳು, ಮಕ್ಕಳಿಂದ ಹಿಡಿದು ಯುವಕ, ಯುವತಿಯರು, ಮಹಿಳೆಯರು ಹಾಗೂ ವಯಸ್ಕರ ಕ್ರೀಡಾಸಕ್ತಿಯನ್ನು ಕಂಡು ಅಚ್ಚರಿಯಾಗುತ್ತಿದೆ. ಕ್ರೀಡೆಯು ದೈಹಿಕ, ಮಾನಸಿಕ ಬೆಳವಣಿಗೆಗೆ ಚೇತೋಹಾರಿ. ಅದನ್ನು ಸದಾ ಮುಂದುವರೆಸಿಕೊಂಡು ಬರುವ ಅಗತ್ಯವಿದೆ. ಹಬ್ಬದ ವಾತಾವರಣವನ್ನು…

Read More