Author: admin

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕರ್ನಿರೆ ಇದರ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಕರ್ನಿರೆ ವಿಶ್ವನಾಥ ಶೆಟ್ಟಿ ದಂಪತಿಗಳು ತಮ್ಮ ಮಕ್ಕಳ ಸಹಿತ ಶ್ರೀ ವಿಷ್ಣುಮೂರ್ತಿ ದೇವರಿಗೆ ಚಿನ್ನ ಲೇಪಿತ ಬಿಂಬಕ್ಕೆ ಕವಚವನ್ನು ಸಮರ್ಪಿಸಿದರು. ಈ ಸಂಧರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಕರ್ನಿರೆ ಗುತ್ತು ಹರಿಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

Read More

ಬಂಟರ ಸಂಘ ಮುಂಬಯಿ ಇಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅದರ ನೂತನ ಗೌರವ ಕೋಶಾಧಿಕಾರಿಯಾಗಿ ಮುಂಬಯಿಯ ಪ್ರತಿಷ್ಠಿತ ರಮೇಶ್ ಶೆಟ್ಟಿ ಎಂಡ್ ಕಂ. ಲೆಕ್ಕಪರಿಶೋಧಕ ಹಾಗೂ ವ್ಯಾಪಾರೋದ್ಯಮ ಸಂಬಂಧಿ ತೆರಿಗೆ ಸಲಹೆಗಾರ ಸಂಸ್ಥೆಯ ಸಿಎ ರಮೇಶ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು. ಬಾಲ್ಯದ ದಿನಗಳಿಂದಲೇ ತೀಕ್ಷ್ಣ ಹಾಗೂ ಕುಶಾಗ್ರಮತಿಯಾಗಿದ್ದ ರಮೇಶ್ ಶೆಟ್ಟಿ ತನ್ನ ಪ್ರಾಥಮಿಕ ಶಿಕ್ಷಣವನ್ನು ಕೈನಾಲ್ ಪ್ರಾಥಮಿಕ ಶಿಕ್ಷಣ ಸಂಸ್ಥೆ ಮತ್ತು ಮುಂಡ್ಕೂರು ಪ್ರಾಥಮಿಕ ಶಾಲೆಗಳಲ್ಲಿ ಪೂರೈಸಿದರು. ಹೈಸ್ಕೂಲು ಮತ್ತು ಪದವಿ ಪೂರ್ವ ಶಿಕ್ಷಣವನ್ನು ಮುಂಡ್ಕೂರಿನ ಪ್ರಸಿಧ್ಧ ವಿವಿಪಿಸಿಯಲ್ಲಿ ಮುಗಿಸಿದ ಬಳಿಕ ಮುಂದಿನ ಶಿಕ್ಷಣ ಪಡೆಯಲು ಮುಂಬಯಿಗೆ ಆಗಮಿಸಿದ ಯುವಕ ರಮೇಶ್ ಅವರು ವಡಲಾದ ಪ್ರತಿಷ್ಠಿತ ಎಸ್ ಐ ಡಬ್ಲ್ಯೂ ಎಸ್ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪೂರೈಸಿದವರು. ಅಲ್ಲಿಗೆ ತನ್ನ ಶಿಕ್ಷಣವನ್ನು ಕೊನೆಗೊಳಿಸದೆ ಉನ್ನತ ಶಿಕ್ಷಣ ಪಡೆಯುವ ಮಹತ್ವಾಕಾಂಕ್ಷೆಯಿಂದ ಐಸಿಎಐ ಮುಖಾಂತರ ವಿಶೇಷ ತರಬೇತಿ ಪಡೆದು ಸಿಎ ಪದವಿ ಮುಗಿಸಿದರು. ಬಳಿಕ ಆ ದಿನಗಳಲ್ಲಿ ಬಹಳ ಬೇಡಿಕೆಯಲ್ಲಿದ್ದ ಉದ್ಯಮದಲ್ಲಿ ತನ್ನನ್ನು…

Read More

ಕಳೆದ ನಾಲ್ಕು ದಶಕಗಳಿಂದ ಮುಂಬಯಿಯ ಸಾಂಸ್ಕೃತಿಕ ಕ್ಷೇತ್ರದಲ್ಲಿ ವೈವಿಧ್ಯಮಯ, ಹಾಗೂ ಅರ್ಥಪೂರ್ಣ ತುಳು ಸಮ್ಮೇಳನ, ತುಳುವರ ಹಬ್ಬಗಳ ಆಚರಣೆ ಮತ್ತು ತುಳುವರ ಆಚಾರ ವಿಚಾರಗಳನ್ನು ತಿಳಿಸುವ ಭಿನ್ನ ರೀತಿಯ ಕಾರ್ಯಕ್ರಮಗಳನ್ನು ನಿರಂತರ ನೀಡುತ್ತಾ ಬಂದಿರುವ ಮುಂಬಯಿ ತುಳು ಕನ್ನಡಿಗರ ಹೆಮ್ಮೆಯ ಸಂಸ್ಥೆ “ಕಲಾ ಜಗತ್ತು ಮುಂಬಯಿ” ಜುಲೈ 23 ರಂದು ಸಾಂತಾಕ್ರೂಸ್ ಪೇಜಾವರ ಮಠ ಸಭಾಗೃಹದಲ್ಲಿ ಏರ್ಪಡಿಸಲಿರುವ ‘ಆಟಿದ ಪೊರ್ಲು ತಿರ್ಲ್ ‘ ತೋನ್ಸೆ ವಿಜಯಕುಮಾರ್ ಶೆಟ್ಟಿಯವರ ನೂತನ ಪರಿಕಲ್ಪನೆಯ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ತಾ.08/07/2023 ರಂದು ಸಂಜೆ ಬಿಲ್ಲವ ಭವನದಲ್ಲಿ ಏರ್ಪಡಿಸಲಾಗಿತ್ತು. ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಪ್ರಸಿದ್ಧ ನಾಟಕ ನಿರ್ದೇಶಕ ಶ್ರೀ ವಿಜಯಕುಮಾರ್ ಶೆಟ್ಟಿ ತೋನ್ಸೆ ಅವರು ಮಾತನಾಡುತ್ತಾ, ಈ ಕಾರ್ಯಕ್ರಮದ ಉದ್ದೇಶ ನಮ್ಮ ತುಳುನಾಡಿನ ಸಂಸ್ಕೃತಿಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದು ಮಾತ್ರವಲ್ಲದೆ ತುಳುವರ ಆರಾಧನೆ, ಆಚರಣೆಗಳ ಬಗ್ಗೆಯೂ ತಿಳುವಳಿಕೆಯನ್ನು ನೀಡುವುದಾಗಿದೆ. ಈ ಕಾರ್ಯಕ್ರಮಕ್ಕೆ ಒಳನಾಡಿನ ಹೆಸರಾಂತ ವಾಗ್ಮಿಗಳು ಆಗಮಿಸಲಿದ್ದು ಇದರ ಪ್ರಯೋಜನವನ್ನು ತುಳುವ ಕನ್ನಡಿಗರು ಪಡೆಯುವಂತಾಗಬೇಕು ಎಂದು ಅವರು…

Read More

ಮುಂಬಯಿಯ ಪ್ರತಿಷ್ಠಿತ ಜಾತೀಯ ಸಂಘಟನೆ ಬೋಂಬೆ ಬಂಟ್ಸ್ ಎಸೋಸಿಯೇಶನ್ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಜಯ ಎನ್ ಶೆಟ್ಟಿ ಅವರಿಗೆ ಬೋಂಬೆ ಬಂಟ್ಸ್ ಎಸೋಸಿಯೇಶನ್ ವತಿಯಿಂದ ಶ್ರದ್ಧಾಂಜಲಿ ಸಭೆಯು ಜ 20 ರಂದು ಶನಿವಾರ ಸಂಜೆ 4:00ಗೆ ಸಯನ್ ನಿತ್ಯಾನಂದ ಸಭಾಗೃಹದಲ್ಲಿ ಜರಗಲಿದೆ. ಬೋಂಬೆ ಬಂಟ್ಸ್ ಎಸೋಸಿಯೇಶನ್ ಅಧ್ಯಕ್ಷ ಸಿಎ ಸುರೇಂದ್ರ ಕೆ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶ್ರದ್ಧಾಂಜಲಿ ಸಭೆಗೆ ಸದಸ್ಯರೆಲ್ಲರೂ ಹಾಗೂ ಜಯ ಎನ್ ಶೆಟ್ಟಿ ಅವರ ಅಭಿಮಾನಿಗಳು ಬಂಧು-ಬಳಗವು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಬೋಂಬೆ ಬಂಟ್ಸ್ ಎಸೋಸಿಯೇಶನ್ ಉಪಾಧ್ಯಕ್ಷ ನ್ಯಾ. ಡಿ ಕೆ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ್ ಶೆಟ್ಟಿ, ಜೊತೆ ಕಾರ್ಯದರ್ಶಿ ಅಡ್ವಕೇಟ್ ಗುಣಾಕರ್ ಶೆಟ್ಟಿ, ಜೊತೆ ಕೋಶಾಧಿಕಾರಿ ಸಿಎ ದಿವಾಕರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ತೇಜಾಕ್ಷಿ ಎಸ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯ ಶೆಟ್ಟಿ ಹಾಗೂ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರುಗಳು,…

Read More

ಮುಂಬಯಿ ಮಹಾನಗರದ ಪ್ರತಿಷ್ಠಿತ ಸಮಾಜಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ 2023 – 26 ರ ಮೂರು ವರ್ಷಗಳ ಅವಧಿಗೆ ಬಂಟರ ಸಂಘದ ಶ್ರೀಮತಿ ರಾಧಾಬಾಯಿ ಟಿ ಭಂಡಾರಿ ಸಭಾಗೃಹದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನೂತನ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಹಾಗೂ ನಿರ್ಗಮನ ಮತ್ತು ನೂತನ ಆಗಮನ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಚಿತ್ರಾ ಆರ್ ಶೆಟ್ಟಿಯವರನ್ನು ಆಯ್ಕೆ ಮಾಡಿರುವುದಾಗಿ ಪ್ರಕಟಿಸಿದರು. ಡಿಸೆಂಬರ್ 2 ರಂದು ಸಂಜೆ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಸಂಘದ ಎಲ್ಲಾ ವಿಶ್ವಸ್ಥರು, ಮಾಜಿ ಅಧ್ಯಕ್ಷರು, ನಿರ್ಗಮನ ಮತ್ತು ನೂತನ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದ ಚಿತ್ರಾ ಆರ್ ಶೆಟ್ಟಿಯವರನ್ನು ಸಂಘದ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾಗಿರುವುದನ್ನು ಅನುಮೋದಿಸಿ ಪುಷ್ಪ ಗೌರವ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಂಟರ ಸಂಘದ ಮಾಜಿ ಅಧ್ಯಕ್ಷ, ಜಾಗತಿಕ…

Read More

ಜ್ಞಾನಸರೋವರ ಅಂತರ್ರಾಷ್ಟ್ರೀಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜ್ಞಾನಸರೋವರ ಅಂತರಾಷ್ಟ್ರೀಯ ವಸತಿ ಶಾಲೆಯ ಸಂಸ್ಥಾಪಕರಾದ ಶ್ರೀ ಸುಧಾಕರ ಎಸ್ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡುತ್ತ, ನಾಯಕತ್ವ ಎನ್ನುವುದು ಒಂದು ರೀತಿಯ ಜವಾಬ್ದಾರಿಯೇ ಹೊರತು ಅಧಿಕಾರವಲ್ಲ ಎಂದು ಹೇಳುವುದರ ಜೊತೆಗೆ ಪೋಷಕರು ತಮ್ಮ ಮಕ್ಕಳಿಗೆ ಸರಿಯಾದ ಮಾರ್ಗದರ್ಶನವನ್ನು, ಆತ್ಮ ವಿಶ್ವಾಸವನ್ನು ತುಂಬಬೇಕು ಎಂದು ಹೇಳಿದರು. ಯಾವುದೇ ಧರ್ಮ ಬೇಧವಿಲ್ಲದೆ ನಾವೆಲ್ಲರೂ ಸಮಾನರು, ನಾವೆಲ್ಲರೂ ಒಂದೇ ಎನ್ನುವಂತಹ ಮನೋಭಾವನೆ ವಿದ್ಯಾರ್ಥಿಗಳಲ್ಲಿ ಮೂಡಿ ಬರಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೈಸೂರಿನ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಮತಿ ಸ್ವರ್ಣ ಜಿ ಎಸ್ ರವರು ಮಾತನಾಡುತ್ತ ನಾಯಕತ್ವ ಎಂಬುದು ಒಂದು ಹಡಗಿನಂತೆ ವಿದ್ಯಾರ್ಥಿಗಳು ನಾವಿಕರಂತೆ ಎಂದು ಹೇಳುವುದರ ಜೊತೆಗೆ ಜ್ಞಾನಸರೋವರ ಅಂತರ್ರಾಷ್ಟ್ರೀಯ ವಸತಿ ಶಾಲೆಯು, ಅಂತರರಾಷ್ಟ್ರೀಯ ಮಟ್ಟದ ಶಾಲೆ ಆಗಿದ್ದರೂ ನಮ್ಮ ಭಾರತೀಯ ಸಂಸ್ಕೃತಿಯನ್ನು ಬಿಟ್ಟುಕೊಟ್ಟಿಲ್ಲ ಎಂಬುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆ ತಮ್ಮ ಹದಿಮೂರು ವರ್ಷದ ವೃತ್ತಿಜೀವನದಲ್ಲಿ…

Read More

ವಿದ್ಯಾಗಿರಿ: ಆಳ್ವಾಸ್ ಪದವಿ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಹಯೋಗದ ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು 2023- 2024ರ ಜನವರಿ ಆವೃತ್ತಿಯ ಪ್ರಥಮ ವರ್ಷದ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಸ್ನಾತಕೋತ್ತರ (ಪಿಜಿ)ದಲ್ಲಿ ಎಂ.ಎ- ಶಿಕ್ಷಣ, ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ಇತಿಹಾಸ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಉರ್ದು, ಸಂಸ್ಕೃತ, ಸಮಾಜಶಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಎಂ.ಎಸ್.ಡಬ್ಲ್ಯೂ, ಎಂ.ಬಿ.ಎ-ಆನ್‍ಲೈನ್ ಪ್ರವೇಶ ಪರೀಕ್ಷೆ ಮೂಲಕ (ಫೈನಾನ್ಸ್, ಮಾರ್ಕೆಟಿಂಗ್, ಎಚ್.ಆರ್. ಆಪರೇಷನ್. ಟೂರಿಸಂ ಕಾಪ್ರೊರೇಟ್ ಲಾ, ಇನ್‍ಫರ್ಮನೇಷನ್ ಟೆಕ್ನಾಲಜಿ, ಆಸ್ಪತ್ರೆ ಮತ್ತುಆರೋಗ್ಯ ಕಾಳಜಿ ನಿರ್ವಹಣೆ.), ಎಂ.ಕಾಂ ಡ್ಯುಯೆಲ್ ಸ್ಪೆಷಲೈಜೇಷನ್ ( ಅಕೌಂಟಿಂಗ್ ಮತ್ತು ಫೈನಾನ್ಸ್ / ಎಚ್‍ಆರ್ ಎಂ ಮಾರ್ಕೆಟಿಂಗ್ ಮ್ಯಾನೇಜ್‍ಮೆಂಟ್ ಮತ್ತು ಎಚ್‍ಆರ್‍ಎಂ / ಫೈನಾನ್ಸ್), ಎಂ.ಸಿ.ಎ, ಎಂ.ಲಿಬ್.ಐ.ಎಸ್‍ಸಿ, ಎಂ.ಎಸ್‍ಸಿ (ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ, ಬಯೋಕೆಮಿಸ್ಟ್ರಿ, ಬಯೋಟೆಕ್ನಾಲಜಿ, ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯಟಿಷಿಯನ್, ಪರಿಸರ…

Read More

ಆಕರ್ಷಕ ಪಥಸಂಚಲನ, ಕ್ರೀಡಾ ಜ್ಯೋತಿ ಆಗಮನ, ಧ್ವಜಾರೋಹಣ, ಕ್ರೀಡಾ ಪ್ರತಿಜ್ಞೆ ಸ್ವೀಕಾರ – ಇತ್ಯಾದಿಗಳೊಂದಿಗೆ 2023 – 24 ನೇ ಸಾಲಿನ ಕರ್ನಾಟಕ ವಿದ್ಯಾಸಂಸ್ಥೆಗಳು ಮಾಣಿ ಇದರ ವಾರ್ಷಿಕ ಕ್ರೀಡೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕರಾದ ಬಿ. ಕೆ. ಭಂಡಾರಿ ಮುಖ್ಯ ಅತಿಥಿಯಾಗಿ ಆಗಮಿಸಿ “ಪಾಠ ಮತ್ತು ಆಟ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಆಟಗಳಿಂದ ಆತ್ಮಸ್ಥೈರ್ಯ ಮತ್ತು ಮಾನಸಿಕ ಕ್ಷಮತೆ ಹೆಚ್ಚಾಗುತ್ತದೆ” ಎಂದರು. ಇನ್ನೋರ್ವ ಮುಖ್ಯ ಅತಿಥಿಯಾದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಲಯನ್ಸ್ ಕ್ಲಬ್ ಮಾಣಿ ಇದರ ಸ್ಥಾಪಕಾಧ್ಯಕ್ಷರಾದ ಲಯನ್ ಗಂಗಾಧರ್ ರೈ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ ಮಾಡಿದರು. ವಿದ್ಯಾಭಿವರ್ಧಕ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ರೊ. ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಜಿ‌. ಇಬ್ರಾಹಿಂ, ಗ್ರಾ.ಪಂ. ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಮೆಲ್ವಿನ್ ಕಿಶೋರ್ ಮಾರ್ಟಿಸ್, ಶಿಕ್ಷಕ – ರಕ್ಷಕ ಸಂಘದ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಅಕ್ಟೋಬರ್ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ-2023 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬುಧವಾರ ಸಂಜೆ ನಗರದ ಗೋಲ್ಡ್ ಫಿಂಚ್ ಖಾಸಗಿ ಹೋಟೆಲ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, “ಐಕಳ ಹರೀಶ್ ಶೆಟ್ಟಿಯವರು ಬಂಟ ಸಮಾಜದ ಅತ್ಯಧ್ಭುತ ನಾಯಕ. ಅವರಲ್ಲಿನ ಸಂಘಟನಾ ಶಕ್ತಿ ಇತರರಿಗೆ ಮಾದರಿ. ಇಂದು ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದ್ದೇವೆ. ಇದು ಬಂಟ ಸಮಾಜದ ಮನೆ ಮನೆಗೆ ತಲುಪಲಿ ಆ ಮೂಲಕ ಒಂದೇ ವೇದಿಕೆಯಡಿಯಲ್ಲಿ ಸಮಾಜದ ಎಲ್ಲರೂ ಪಾಲ್ಗೊಳ್ಳುವಂತಾಗಲಿ, ಸಮ್ಮೇಳನದಿಂದ ಸಮಾಜಕ್ಕೆ ಪ್ರಯೋಜನವಾಗಲಿ” ಎಂದು ಶುಭ ಹಾರೈಸಿದರು. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, “ಕಾರ್ಯಕ್ರಮ ಖಂಡಿತಾ ಯಶಸ್ವಿಯಾಗುತ್ತದೆ. ಆದರೆ ದೊಡ್ಡ ಸಂಖ್ಯೆಯಲ್ಲಿ…

Read More

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ತುಳು ಕನ್ನಡಿಗರು ಒಂದಿಲ್ಲೊಂದು ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಪ್ರತಿಭಾ ಸಂಪನ್ನತೆಯಿಂದ ಗುರುತಿಸಿಕೊಂಡವರು. ಅದು ವ್ಯಾಪಾರ ಉದ್ಯಮವಿರಲಿ, ವೈದ್ಯಕೀಯ ತಾಂತ್ರಿಕ ಕ್ಷೇತ್ರಗಳಿರಲಿ, ರಾಜಕೀಯ ರಂಗವಿರಲಿ ನಮ್ಮವರು ಸಾಧಿಸಿದ ವಿಕ್ರಮಗಳು ಜಗಜ್ಜಾಹೀರಾಗಿ ವಿಶ್ವದ ಮೂಲೆ ಮೂಲೆಗಳಿಂದ ಪ್ರಶಂಸೆಗೆ ಪಾತ್ರವಾಗಿದೆ. ಆದರೆ ಇನ್ನೊಂದು ವರ್ಗದ ಜನ ಸಾಹಿತ್ಯ, ಕಲೆ, ಶಿಕ್ಷಣ, ಸಾಂಸ್ಕೃತಿಕ ಸಂಘಟನೆ, ಸಂಗೀತ, ನಾಟಕ, ಯಕ್ಷಗಾನ, ಚಿತ್ರಕಲೆ, ಸಮಾಜಸೇವೆ ಹೀಗೆ ಭಿನ್ನವಾದ ತಮಗೆ ಅಭಿರುಚಿ ಇರುವ ಮನಸ್ಸಿಗೆ ಖುಷಿ ನೀಡುವ ಒಟ್ಟಾರೆಯಾಗಿ ಹೇಳುವುದಾದರೆ ತಮಗೆ ದೈವದತ್ತವಾಗಿಯೋ, ಪಾರಂಪರಿಕ ಹಿನ್ನೆಲೆಯಿಂದಲೋ ಬಂದ ಸ್ವಸಾಮರ್ಥ್ಯ ಪ್ರತಿಭೆಗಳನ್ನು ಅರ್ಥಮಾಡಿಕೊಂಡು ನಿರಂತರ ಸಾಧನೆ ಅಧ್ಯಯನ ಮೂಲಕ ಗುರಿ ಮೀರಿದ ಸಾಧನೆಗಳಿಂದ ಗುರುತಿಸಿಕೊಂಡಿರುತ್ತಾರೆ. ತಾವು ಹುಟ್ಟಿದ ನೆಲದಲ್ಲಿ ಆರ್ಥಿಕ ಪ್ರಗತಿಗೆ ತೊಡಕಾದಾಗ ಅಥವಾ ಸಂಪನ್ಮೂಲಗಳ ಕೊರತೆ ಕಂಡಾಗ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಕೌಟುಂಬಿಕ ಜೀವನದಲ್ಲಿ ಏಳಿಗೆ ಕಂಡುಕೊಳ್ಳಲು ಹುಟ್ಟಿದ ಊರನ್ನು ಬಿಟ್ಟು ಭವಿಷ್ಯದ ಕನಸಿನ ಮೂಟೆ ಕಟ್ಟಿಕೊಂಡು ನಗರಗಳನ್ನೋ ಕೊಲ್ಲಿ ರಾಷ್ಟಗಳನ್ನೋ ಸೇರಿ…

Read More