Author: admin

ಸಮರ್ಥ ಬಿಲ್ಡರ್ಸ್ ಗ್ರಾಹಕರಿಗೆ ಉತ್ತಮ ಮೌಲ್ಯವನ್ನು ತಂದುಕೊಡುವ ಉದ್ದೇಶದಿಂದ ನಿರ್ಮಾಣವಾದ ಸಂಸ್ಥೆ. ಇಂಟಿರಿಯರ್, ವ್ಯಾಪಾರಿ ಮತ್ತು ವಸತಿ ಸಮುಚ್ಛಯಗಳ ನಿರ್ಮಾಣದಲ್ಲಿ ಕಂಪೆನಿ ತೊಡಗಿಸಿಕೊಂಡಿದ್ದು ಉತ್ತಮ ಗುಣಮಟ್ಟದ ಉತ್ಪನ್ನಗಳ ತಯಾರಿಕೆಯಲ್ಲಿ ಹೆಸರುವಾಸಿಯಾಗಿದೆ. ಸಂದೀಪ್ ಶೆಟ್ಟಿ ಮಾಲಕತ್ವದ ಸಮರ್ಥ ಬಿಲ್ಡರ್ಸ್ ನ ನೂತನ ಆಡಳಿತ ಕಚೇರಿ ಮೂಡಬಿದಿರೆಯಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್, ಕಾಂಗ್ರೆಸ್ ಮುಖಂಡ ಮಿಥುನ್ ರೈ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಪುರಸಭೆಯ ಪ್ರಸಾದ್ ಭಂಡಾರಿ, ಉದ್ಯಮಿ ಅಚ್ಯುತ ಶೆಟ್ಟಿ ಬೆಳುವಾಯಿ, ಸಂದೀಪ್ ಶೆಟ್ಟಿಯವರ ಪೋಷಕರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾಗಿರುವ ಸಂದೀಪ್ ಶೆಟ್ಟಿಯವರು ಕಳೆದ ಹತ್ತು ವರ್ಷಗಳಿಂದ ಮಿತ ದರದಲ್ಲಿ ಉತ್ತಮ ಗುಣಮಟ್ಟದ ಮನೆಗಳನ್ನು, ಕಟ್ಟಿಕೊಡುವ ಸಂಸ್ಥೆಯನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಉದ್ಯಮದ ಜೊತೆಗೆ ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದು ಪ್ರಸ್ತುತ ಮೂಡಬಿದಿರೆ ಯುವ ಬಂಟರ ಸಂಘದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More

‘ಬರಿ ಹಣ ಇರುವವನು ಆಳಿಗೆ ಮಾತ್ರ ಯಜಮಾನ ಆದರೆ ಗುಣ ಇರುವವನು ಮನುಷ್ಯ ಕುಲಕ್ಕೆ ಯಜಮಾನ’ ಎಂಬ ಮಾತಿದೆ. ಶ್ರೀಯುತ ಚೇತನ್ ಎಸ್. ಶೆಟ್ಟಿಯವರು ಅತ್ಯಂತ ಕಿರಿಯ ವಯಸ್ಸಿನಲ್ಲಿ ಉದ್ಯಮಿಯಾಗಿ ಬೆಳೆದು ಯುವಕರಿಗೆ ಮಾದರಿಯಾದವರು. 19.02.1992 ರಲ್ಲಿ ಜನಿಸಿದ ಇವರು ಮೆಕ್ಯಾಟ್ರೋನಿಕ್ಸ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮೋ ಪದವಿದರರು. ತಂದೆ ದಿವಂಗತ ಸುಧಾಕರ ಶೆಟ್ಟಿ ಚಾರ ಮಣಿಬಟ್ಟಲು ಹೆಬ್ರಿ ಸಮೀಪದ ಒಂದು ಹಳ್ಳಿಯವರು. ತಾಯಿ ಸೂರಾಳು ಸಾವಂತ್ರಾಡಿ ವಸಂತಿ ಶೆಟ್ಟಿಯವರು. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾಗಿರುವ ಚೇತನ್ ಶೆಟ್ಟಿಯವರ ಇಬ್ಬರು ಸೋದರರು ಸಚಿನ್ ಶೆಟ್ಟಿ ಹಾಗೂ ನಿತಿನ್ ಶೆಟ್ಟಿ ಉನ್ನತ ಉದ್ಯೋಗದಲ್ಲಿದ್ದಾರೆ. ನಿತಿನ್ (ಅಸಿಸ್ಟೆಂಟ್ ಮ್ಯಾನೇಜರ್ ಫೆಡರಲ್ ಬ್ಯಾಂಕ್, ತಿಪಟೂರು, ತುಮಕೂರು ಜಿಲ್ಲೆ), ಸಚಿನ್ (ಟೀಮ್ ಲೀಡರ್ ಕ್ಯಾಶ್ ಫ್ರೀ ಪೇಮೆಂಟ್ ಇಂಡಿಯಾ ಲಿಮಿಟೆಡ್, ಬೆಂಗಳೂರು). ಪತ್ನಿ ದೀಪ್ತಿ ಶೆಟ್ಟಿಯವರು ಡಾಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳಗಾವಿಯಲ್ಲಿ ಹೋಟೇಲು ಉದ್ಯಮಿಯಾಗಿರುವ ಇವರು ಸೂರಜ್ ಬಾರ್ ಅಂಡ್ ರೆಸ್ಟೋರೆಂಟನ್ನು ಹೊಂದಿದ್ದಾರೆ. ತನ್ನ ತವರೂರು ಉಡುಪಿ…

Read More

ಲೇಖನ – ವಿವೇಕ್ ಆಳ್ವ. ಕ್ಲಾಸಲ್ಲಿ ಗಮನವಿರದ ಒಬ್ಬ ವಿದ್ಯಾರ್ಥಿಯಲ್ಲಿ ಕಾರಣವೇನಿರಬಹುದು ಎಂದು ಮಾತನಾಡಿಸಿದಾಗ ಒಂದು ವಿಷಯ ಬೆಳಕಿಗೆ ಬಂತು. ಆತ 9 ಗಂಟೆಗೆ ಕ್ಯಾಂಪಸ್ ಗೆ ಕಾಲಿಡಬೇಕಾದರೆ ಬೆಳ್ಳಂಬೆಳಗ್ಗೆ 6.20ರ ಬಸ್ಸಿಗೆ ಹೊರಡಲೇಬೇಕಂತೆ. ಬಸ್ ಮಿಸ್ ಆಯಿತೆಂದರೆ ಮಧ್ಯಾಹ್ನ ನಂತರವೇ ಕ್ಲಾಸ್. ಇದು ದೂರದ ಹಳ್ಳೀ ಕಡೆಯಿಂದ ಬರುವ ಮಕ್ಕಳ ನೈಜ ಚಿತ್ರಣ. ಇದು ಒಂದು ಎಕ್ಸಾಂಪಲ್ ಅಷ್ಟೇ. ಅಮೇರಿಕಾದ ಶಾಲೆಗಳಲ್ಲಿ ಮಕ್ಕಳನ್ನು ಜಾಯಿನ್ ಮಾಡಬೇಕಾದರೆ ಶಾಲೆಯಿಂದ ಮೂರು ಮೈಲಿ ದೂರದೊಳಗಿನ ಶಾಲೆಗೇ ಸೇರಿಸಬೇಕಂತೆ. ಅದಕ್ಕೆ ಸ್ಕೂಲ್ ಡಿಸ್ಟ್ರಿಕ್ಟ್ ಅಂತ ಹೆಸರೂ ಕೊಟ್ಟಿದ್ದಾರೆ. ಅಂದರೆ ನೀವೇನಾದರೂ ದೂರದ ಶಾಲೆಗೆ ನಿಮ್ಮ ಮಗುವನ್ನು ಸೇರಿಸಬೇಕಾದರೆ ನೀವು ಮನೆಯನ್ನೇ ಶಾಲೆಗೆ ಹತ್ತಿರ ಬರುವ ರೀತಿಯಲ್ಲಿ ಬದಲಾಯಿಸಬೇಕಾಗುತ್ತದೆ..!. ಮಗುವಿನ ಮುಂದಿನ ಭವಿಷ್ಯದ ದೃಷ್ಟಿಯಿಂದ ಅವರು ಯಾವ ತ್ಯಾಗಕ್ಕೂ ಸಿಧ್ದವಿರಬೇಕು ಎಂಬ ಲೆಸನ್ ಅವರಿಂದ ಕಲಿತಂತಾಯಿತು. ಡಿಸ್ಟೆನ್ಸ್ ವಿಷಯ ನಮ್ಮಲ್ಲಿ ಸುಲಭವಿಲ್ಲ ಅಂತ ನನಗೂ ಗೊತ್ತು ನಿಮಗೂ ಗೊತ್ತು. ನಮ್ಮ ರಿಯಲ್ ಮ್ಯಾಟರ್ ಗೆ ಬರೋಣ.…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು ಇದರ ವತಿಯಿಂದ ಸಮಾಜ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪರಿಹಾರ ಧನ ವಿತರಿಸಲಾಯಿತು. ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಮಂಗಳೂರಿನ ತಲಪಾಡಿ ನಿವಾಸಿ ಜಯಲತಾ ಶೆಟ್ಟಿಯವರ ವೈದ್ಯಕೀಯ ಶಸ್ತ್ರಚಿಕಿತ್ಸೆಗಾಗಿ ಮಂಜೂರಾದ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು. ಮಂಗಳೂರಿನ ಆಶ್ರಯ ಕಾಲೋನಿ ನಿವಾಸಿ ರೇಷ್ಮಾ ಶೆಟ್ಟಿಯವರ ಪುತ್ರ 12 ವರ್ಷದ ರಿತ್ವಿಕ್ ಶೆಟ್ಟಿಯವರು ಅಂಗವೈಕಲ್ಯದಿಂದ ಬಳಲುತ್ತಿದ್ದು ನಡೆದಾಡಲು ಕಷ್ಟಕರವಾಗಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು. ಉಡುಪಿಯ ಹೆಗ್ಗುoಜೆ ಗ್ರಾಮದ ನಿವಾಸಿ ವಿಜಯ ನಾಯಕ್ ರವರು ಕಾಲಿನ ಅಂಗವೈಕಲ್ಯದಿಂದ ಬಳಲುತ್ತಿದ್ದು ನಡೆದಾಡಲು ಕಷ್ಟಕರವಾಗಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು. ಕಾಸರಗೋಡಿನ ನಿವಾಸಿ ರವೀಂದ್ರ ರೈಯವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರಾದ ಸಹಾಯ ಧನದ ಚೆಕ್ಕನ್ನು ಅವರ ಪತ್ನಿ ಸರಸ್ವತಿ ರೈ…

Read More

ಸಣ್ಣ ಪ್ರಾಯದಲ್ಲೇ ಉದ್ಯಮ ಆರಂಭಿಸಿ ಯಶಸ್ಸಿನ ಪಥದಲ್ಲಿ ಸಾಗುತ್ತಿರುವ, ಕಠಿಣ ಪರಿಶ್ರಮಿಯಾಗಿರುವ ಕುಂದಾಪುರದ ಪ್ರಸಿದ್ಧ ಕೈಗಾರಿಕೋದ್ಯಮಿ ಶ್ರೀ ಜಯಕರ ಶೆಟ್ಟಿಯವರು 1960 ರಲ್ಲಿ ದಿವಂಗತ ಚಾರ್ಮಾಕ್ಕಿ ಸಂಜೀವ ಶೆಟ್ಟಿ ಮತ್ತು ದಿವಂಗತ ಗಿರಿಜಾ ಶೆಟ್ಟಿಯವರ ಸುಪತ್ರರಾಗಿ ಜನಿಸಿದರು. ಜಯಕರ ಶೆಟ್ಟಿಯವರು ತನ್ನ ಶಿಕ್ಷಣವನ್ನು ಬೆಂಗಳೂರಿನ ಬಾಲ್ಡ್ವಿನ್ ಶಾಲೆಯಲ್ಲಿ ಪ್ರಾರಂಭಿಸಿ, ಭಂಡಾರ್ ಕರ್ಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿ, ಮಣಿಪಾಲದ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಪೂರೈಸಿ ತನ್ನ ವೃತ್ತಿ ಜೀವನವನ್ನು ಬೆಂಗಳೂರಿನಲ್ಲಿ ಪ್ರಾರಂಭ ಮಾಡಿದರು. ಉದ್ಯೋಗ ಕ್ಷೇತ್ರದಲ್ಲಿ ಬೇರೆ ಬೇರೆ ರಂಗದಲ್ಲಿ ದುಡಿದರೂ ಅವರಿಗೆ ಪೂರ್ತಿ ತೃಪ್ತಿ ಸಿಗಲಿಲ್ಲ. ಅವರಲ್ಲಿರುವ ಸಾಧನೆಯ ತುಡಿತ ಹೆಚ್ಚುತ್ತಲೇ ಹೋಯಿತು. ಯಾವುದಾದರೂ ಸ್ವಂತ ಉದ್ಯಮ ಆರಂಭಿಸಿ ಹಲವರಿಗೆ ಉದ್ಯೋಗದಾತರಾಗುವ ಕನಸು ಕಂಡರು. ಇದರ ಫಲವಾಗಿ 1987 ರಲ್ಲಿ ಗಿರಿಜಾ ಟೈಲ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟರು. ಯಶಸ್ವೀ ಉದ್ಯಮಿ ಎಂದು ಗುರುತಿಸಿಕೊಂಡ ಜಯಕರ ಶೆಟ್ಟಿಯವರು ತನ್ನ ಉದ್ಯಮವನ್ನು…

Read More

ಕರ್ನಾಟಕದ ಕರಾವಳಿ ಜಿಲ್ಲೆಗಳ ಸಮುದ್ರಕ್ಕೆ ಹತ್ತಿರವಿರುವ ಪ್ರದೇಶಗಳಲ್ಲಿ ಸಮುದ್ರ ಕೊರತೆಗಳು ವಿಪರೀತವಾಗಿದ್ದು ಈ ಬಗ್ಗೆ ಸಂತಾಕ್ರೂಸ್ ಪೂರ್ವ ಬಿಲ್ಲವ ಭವನದ ಸಭಾಗೃಹದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಪತ್ರಿಕಾ ಗೋಷ್ಠಿ  ನಡೆಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷರಾದ ಎಲ್ ವಿ ಅಮೀನ್ ಅವರು ಕರಾವಳಿಯ ಕಡಲ ತೀರದ ಜನಸಾಮಾನ್ಯರ ರಕ್ಷಣೆ ಹಾಗೂ ಅವರ ಆಸ್ತಿ ಪಾಸ್ತಿ ರಕ್ಷಣೆಗೆ ಈ ತನಕ ಶಾಶ್ವತ ಪರಿಹಾರ ಸಿಗಲಿಲ್ಲ. ಸರಕಾರವು ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದರೂ ಅದಕ್ಕೆ ಶಾಶ್ವತ ಪರಿಹಾರ ಸಿಗಲಿಲ್ಲ. ಆದ್ದರಿಂದ ನಮ್ಮ ಸಮಿತಿಯು ಸರಕಾರಕ್ಕೆ ಈಗಾಗಲೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಸರಕಾರಕ್ಕೆ ಹಲವಾರು ಮಾರ್ಗದರ್ಶಕ ಸೂಚನೆಗಳನ್ನು ನೀಡಲು ಮನವಿಗಳನ್ನು ಸಿದ್ಧಪಡಿಸಿದೆ. ಮಳೆಯ ಸಂದರ್ಭದಲ್ಲಿ ನಮ್ಮ ಜಿಲ್ಲೆಯಲ್ಲಿ ಕಡಲು ಕೊರತೆ ಕಂಡುಬಂದಿದ್ದು ಅದಕ್ಕೆ ಸರಕಾರ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು. ಪ್ರತಿ ವರ್ಷ ಸರಕಾರ ಕೋಟಿಗಟ್ಟಲೆ ರೂಪಾಯಿಯನ್ನು ಖರ್ಚು ಮಾಡಿ ತಡೆಗೋಡೆ ಹಾಕುವುದಕ್ಕಿಂತ  ಭದ್ರವಾದ ಕಾಂಕ್ರೀಟ್ ಗೋಡೆ ನಿರ್ಮಾಣದಿಂದ…

Read More

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ವಿಶ್ವದಲ್ಲಿಯೇ ಅತ್ಯಧಿಕ ಬೆಳವಣಿಗೆ ದಾಖಲಿಸುವ ಮೂಲಕ ಆರ್ಥಿಕ ದಿಗ್ಗಜ ರಾಷ್ಟ್ರಗಳನ್ನು ಹಿಮ್ಮೆಟ್ಟಲಿದೆ. ಆರ್ಥಿಕ ಹಿಂಜರಿತದ ಕಾರಣದಿಂದಾಗಿ ಅಮೆರಿಕ, ಬ್ರಿಟನ್‌, ಚೀನಾ ಸಂಕಷ್ಟವನ್ನು ಎದುರಿಸುತ್ತಿದ್ದರೆ, ಭಾರತ ಮಾತ್ರ ಆರ್ಥಿಕವಾಗಿ ಸುಭದ್ರ ಸ್ಥಿತಿಯಲ್ಲಿದ್ದು, ಇದೇ ಪರಿಸ್ಥಿತಿ ಹಾಲಿ ಹಣಕಾಸು ವರ್ಷಾಂತ್ಯದವರೆಗೂ ಮುಂದುವರಿಯಲಿದೆ ಮತ್ತು ತನ್ನ ಮುಂಚೂಣಿಯನ್ನು ಕಾಯ್ದುಕೊಳ್ಳಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಿಡುಗಡೆ ಮಾಡಿರುವ ತನ್ನ ಎಕಾನಮಿಕ್‌ ಔಟ್‌ಲುಕ್‌ ವರದಿಯಲ್ಲಿ ತಿಳಿಸಿದೆ. ಇದು ಭಾರತದ ಪಾಲಿಗೆ ಸಂತಸದ ಮತ್ತು ಆಶಾದಾಯಕ ವರದಿಯಾಗಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ಆರ್ಥಿಕ ಹಿಂಜರಿತ, ರಷ್ಯಾ-ಉಕ್ರೇನ್‌ ಸಮರದ ಪ್ರತ್ಯಕ್ಷ ಮತ್ತು ಪರೋಕ್ಷ ಪರಿಣಾಮಗಳಿಂದಾಗಿ ಆರ್ಥಿಕವಾಗಿ ಹಿನ್ನಡೆಯಲ್ಲಿವೆ. ಐಎಂಎಫ್ ವರದಿಯ ಪ್ರಕಾರ ಭಾರತದ ಜಿಡಿಪಿ ಪ್ರಸಕ್ತ ಸಾಲಿನಲ್ಲಿ ಶೇ.5.9ರಷ್ಟು ಬೆಳವಣಿಗೆ ಹೊಂದಲಿದೆ. ಇದು ಇಡೀ ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಇದೇ ವೇಳೆ ಭಾರತದ ಚಿಲ್ಲರೆ ಹಣದುಬ್ಬರ ದರವು ಕಳೆದ ವರ್ಷದ ಶೇ.6.7ರಿಂದ ಶೇ.4.9ಕ್ಕೆ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ವರದಿಯಲ್ಲಿ…

Read More

ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಮರುದಿನವೇ ಶಕ್ತಿಸೌಧದ ಹೊಸ್ತಿಲಲ್ಲೇ ಮಳೆಯ ಅಬ್ಬರಕ್ಕೆ ಮೊದಲ ಸಾವು ಸಂಭವಿಸಿದೆ. ಹೈದರಾಬಾದ್‌ ಮೂಲದ ಆರು ಜನರ ಕುಟುಂಬ ಬೆಂಗಳೂರಿಗೆ ಬಂದ ವೇಳೆ ಮಳೆನೀರು ತುಂಬಿಕೊಂಡಿದ್ದ ಕೆ.ಆರ್‌. ವೃತ್ತದಲ್ಲಿನ ಅಂಡರ್‌ಪಾಸ್‌ ಮೂಲಕ ಹಾದುಹೋಗುವಾಗ ಆ ಕುಟುಂಬದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸರಕಾರ “ಹನಿಮೂನ್‌ ಮೂಡ್‌’ಗೆ ಜಾರುವ ಮುನ್ನವೇ ಈ ಘಟನೆ ನಡೆದಿದೆ. ಇದರೊಂದಿಗೆ ಸವಾಲಿನ ದಿನಗಳ ಸೂಚನೆ ಸಿಕ್ಕಿದೆ. ಮುಂಗಾರು ಇನ್ನೂ ಆರಂಭಗೊಂಡಿಲ್ಲ. ಮಳೆಗಾಲದ ಅವಾಂತರಗಳನ್ನು ಎದುರಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಷ್ಟರಮಟ್ಟಿಗೆ ಸಜ್ಜುಗೊಂಡಿದೆ ಎಂಬುದನ್ನು ಈ ಘಟನೆ ಬಯಲುಗೊಳಿಸಿದೆ. ಅಷ್ಟೇ ಅಲ್ಲ, ಸರಕಾರವು ಅಧಿಕಾರಿಗಳಿಗೆ ಚಾಟಿ ಬೀಸದಿದ್ದರೆ ಮುಂದಿನ ದಿನಗಳು ಇನ್ನೂ ಭಯಾನಕ ಆಗಿರಲಿವೆ ಎಂಬ ಎಚ್ಚರಿಕೆಯನ್ನೂ ವರುಣ ನೀಡಿದಂತಿದೆ. ಹಾಗೆ ನೋಡಿದರೆ ಸರಕಾರದ ಯೋಜನೆ ಪ್ರಕಾರ ಅಂಡರ್‌ಪಾಸ್‌ಗಳು ಮತ್ತು ಎತ್ತರಿಸಿದ ಮಾರ್ಗಗಳ ನಿರ್ಮಾಣದ ಉದ್ದೇಶ ಸುಗಮ ಸಂಚಾರ ಕಲ್ಪಿಸುವುದಾಗಿದೆ. ಆದರೆ ಆ ಅಂಡರ್‌ಪಾಸ್‌ಗಳೇ ಸಾವಿಗೆ ರಹದಾರಿಗಳಾಗುತ್ತಿರುವುದು ವಿಪರ್ಯಾಸ. ಘಟನೆ ನಡೆದ ಸ್ಥಳ…

Read More

ಬಾಳ ತೊತ್ತಾಡಿ ಶ್ರೀ ನಾಗಬ್ರಹ್ಮ ಸ್ಥಾನ ಶ್ರೀ ಕ್ಷೇತ್ರದ ಆರಾಧ್ಯ ಶ್ರೀ ನಾಗಬ್ರಹ್ಮ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಭಕ್ತ ಸಮುದಾಯದ ಸಮ್ಮುಖದಲ್ಲಿ‌ ನಡೆಯಿತು. ಕ್ಷೇತ್ರದ ತಂತ್ರವರೇಣ್ಯರಾದ ಅನಂತ ಪದ್ಮನಾಭ ಪಾಂಗಳ ಇವರ‌ ನೇತ್ರತ್ವದಲ್ಲಿ ಕ್ಷೇತ್ರದ ಅರ್ಚಕ ಗುರುರಾಜ ಭಟ್ ಉಪಸ್ಥಿತಿಯಲ್ಲಿ ಬ್ರಹ್ಮ ಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು‌ ನಡೆದವು. ‌ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಚಿತ್ತರಂಜನ್ ಭಂಡಾರಿ ಐಕಳಬಾವ, ಆಡಳಿತ ಸಮಿತಿಯ ಅಧ್ಯಕ್ಷ ದೇವದಾಸ ಶೆಟ್ಟಿ ಬಾಳ ಸಾನದ ಹೊಸಮನೆ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅನಿಲ್ ಶೆಟ್ಟಿ, ಮುಂಬಯಿ ಸಮಿತಿಯ ಅಧ್ಯಕ್ಷ ಕುಶಲ್ ಭಂಡಾರಿ ಐಕಳಬಾವ, ಕರುಣಾಕರ ಶೆಟ್ಟಿ ಬಾಳದಗುತ್ತು , ಬಾಲಕೃಷ್ಣ ಶೆಟ್ಟಿ ಗುತ್ತಿನಾರ್ ಉಳಾಯಿಬೆಟ್ಟು, ಶಿವಪ್ರಸಾದ್ ಬಾಳ, ಜಯಲಕ್ಷೀ ಶೆಟ್ಟಿ ಮೇಗಿನ ಮನೆ, ಭಾಸ್ಕರ ರಾವ್ ಬಾಳ, ಜೆ ಡಿ ವೀರಪ್ಪ, ಮುಕ್ತಾನಂದ ಮೇಲಾಂಟ, ಅರುಣ್ ಚೌಟ ಬಾಳದ ಗುತ್ತು, ಸಂತೋಷ್ ಪೂಂಜ ಬಾಳದ ಗುತ್ತು , ಬಾಳ ಮೇಗಿನ‌ಮನೆ ಜಗನ್ನಾಥ ಭಂಡಾರಿ, ಸುಧಾಮ ಶೆಟ್ಟಿ, ನಾಗೇಶ್ ಶೆಟ್ಟಿ ಬಾಳ ಸಾನದ…

Read More

ಮುಂಬಯಿ (ಆರ್‍ಬಿಐ), ಮಾ.12: ಕಾಸರಗೋಡು ಉಪ್ಪಳ ಅಲ್ಲಿನ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಮಠಾಧಿಪತಿ ಶ್ರೀ ಯೋಗನಂದ ಸರಸ್ವತಿ ಸ್ವಾಮೀಜಿ ಅವರು ಇಂದಿಲ್ಲಿ ಉಪನಗರ ಥಾಣೆಗೆ ಪಾದಾರ್ಪಣೆಗೈದು ಶ್ರೀ ನಿತ್ಯಾನಂದ ಯೋಗಾಶ್ರಮ ಸಮಿತಿ ಮುಂಬಯಿ ಇದರ ಭಕ್ತರ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಅವರಿಗೆ ಆರತಿ ಬೆಳಗಿಸಿ ಅನುಗ್ರಹಿಸಿದರು. ಯೋಗಾಶ್ರಮ ಸಮಿತಿ ಮುಂಬಯಿ ಇದರ ಕಾರ್ಯದರ್ಶಿ ಹರೀಶ್ ಕೆ.ಚೇವಾರ್ ಅವರು ಥಾಣೆ ಕಾಪೂರ್ ಬಾವ್ಡಿ ಅಲ್ಲಿನ ಸಮಿತಿಯ ಕೋಶಾಧಿಕಾರಿ ಸದಸ್ಯ, ಭಾರತ್ ಬ್ಯಾಂಕ್‍ನ ಮಾಜಿ ನಿರ್ದೇಶಕ ಅಶೋಕ್ ಎಂ.ಕೋಟ್ಯಾನ್ ಅವರ ಕೋಸ್ಮಸ್ ಹಾಬಿಟಾಟ್ ನಿವಾಸದಲ್ಲಿ ಆಯೋಜಿಸಿದ್ದ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೆರೆದ ಭಗವದ್ಭಕ್ತರಿಗೆ ಹರಸಿದರು. ಈ ಸಂದರ್ಭದಲಿ ಶ್ರೀ ನಿತ್ಯಾನಂದ ಯೋಗಾಶ್ರಮ ಸಮಿತಿ ಮುಂಬಯಿ ಸಮಿತಿಯ ಅಧ್ಯಕ್ಷ ರಾಜೇಶ್ ರೈ, ಮಾಜಿ ಗೌ| ಪ್ರ| ಕಾರ್ಯದರ್ಶಿ ನಿತ್ಯಾನಂದ ಡಿ.ಕೋಟ್ಯಾನ್, ತೋನ್ಸೆ ಸಂಜೀವ ಪೂಜಾರಿ, ಯಶೋಧಾ ಭಟ್ಟಿಪಾಡಿ, ರಮೇಶ್ ಕೋಟ್ಯಾನ್, ಜಯರಾಮ ಪೂಜಾರಿ, ಎಸ್.ಎಸ್ ಪೂಜಾರಿ.ಎಸ್.ಸುಧಾಕರ್, ಜಾನಕಿ ಅಶೋಕ್…

Read More