Author: admin
ರೋಟರಿ ಕ್ಲಬ್ ಕಾರ್ಕಳ ಇದರ ಪ್ರಾಯೋಜಕತ್ವದಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ಇಲ್ಲಿ ಕಾರ್ಕಳ ಕ್ಲಬ್ಬಿನ ವತಿಯಿಂದ ಹತ್ತನೇ ಇಂಟರ್ಯಾಕ್ಟ್ ಕ್ಲಬ್ಬಿನ ಪದಗ್ರಹಣ ಸಮಾರಂಭವು ನಡೆಯಿತು. ಪದಗ್ರಹಣ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ರೋಟರಿಯ ಮಾಜಿ ಸಹಾಯಕ ಗವರ್ನರ್ ಹರಿಪ್ರಕಾಶ್ ಶೆಟ್ಟಿಯವರು ರೋಟರಿಯ ಇತಿಹಾಸ ಹಾಗೂ ಕಾರ್ಕಳ ರೋಟರಿಯ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿಯವರು ಇಂಟರ್ಯಾಕ್ಟ್ ಕ್ಲಬ್ಬಿನ ನೂತನ ಅಧ್ಯಕ್ಷ ಲೇಖನ್ ವಿ ಜೈನ್ ಮತ್ತು ಕಾರ್ಯದರ್ಶಿ ಅರುಷಿ ಪ್ರಭುರವರಿಗೆ ಪದ ಪ್ರದಾನ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿ ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ನಾಯಕರಾಗಬೇಕೆ ಹೊರತು ಹಿಂಬಾಲಕರಾಗಬಾರದು. ಭವಿಷ್ಯದಲ್ಲಿ ಸಮಾಜದ ಆಸ್ತಿಯಾಗಬೇಕು ಎಂದರು. ರೋಟರಿ ಕ್ಲಬ್ಬಿನ ಇಂಟರ್ಯಾಕ್ಟ್ ಚೇರ್ಮನ್ ಬಾಲಕೃಷ್ಣ ದೇವಾಡಿಗ ಇಂಟರಾಕ್ಟ್ ಕ್ಲಬ್ಬಿನ ವತಿಯಿಂದ ಮಾಡಬಹುದಾದ ಕಾರ್ಯಕ್ರಮಗಳ ಬಗ್ಗೆ ಸಂಕ್ಷಿಪ್ತ…
ಬಂಟ ಸಮಾಜದ ಜನರು ಮಾಡದ ಉದ್ಯೋಗ ಇಲ್ಲ. ಪ್ರಯತ್ನಿಸದ ಉದ್ಯಮ ವ್ಯಾಪಾರಗಳಿಲ್ಲ. ಮಿಂಚದ ಕಲಾ ಸಾಹಿತ್ಯ ಪ್ರಕಾರಗಳಿಲ್ಲ. ಬೆಳ್ತಂಗಡಿ ತಾಲೂಕಿನಲ್ಲಿ ತುಂಬಾ ಜವಾಬ್ದಾರಿಯಿಂದ ಕೂಡಿದ ಉಪ ತಹಶೀಲ್ದಾರ್ ವೃತ್ತಿ ನಿರ್ವಹಣೆಯಲ್ಲಿ ತನ್ನ ಕಾರ್ಯ ವೈಖರಿಯಿಂದ ಶ್ರೀ ರವೀಂದ್ರ ಶೆಟ್ಟಿ ಹೊಸೂರು ರವರು ಅಪಾರ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಕುಂದಾಪುರ ತಾಲೂಕಿನ ಹೊಸೂರು ಗ್ರಾಮದ ಶ್ರೀ ಸಂಜೀವ ಶೆಟ್ಟಿ ಮತ್ತು ಸುಶೀಲಾವತಿ ಶೆಟ್ಟಿ ದಂಪತಿಯರಿಗೆ ಸುಪುತ್ರರಾಗಿ ಜನಿಸಿದ ಶೆಟ್ಟರು ಬಿ ಎ ಪದವೀಧರರು. ಶ್ರೀಯುತರ ಧರ್ಮಪತ್ನಿ ಶ್ರೀಮತಿ ಸುಮಂಗಲಾ ಆರ್ ಶೆಟ್ಟಿ ಅವರು ವಿಜ್ಞಾನ ಮತ್ತು ಶಿಕ್ಷಣ ತರಬೇತಿ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿಧರೆ. ಎಂ.ಎಸ್ಸಿ, ಎಂ.ಎಡ್ ಪದವಿ ಪಡೆದ ಬಳಿಕ ಪ್ರಸ್ತುತ ಗುರುಪುರ ಹೋಬಳಿ ಕುಟಿನ್ಹೊ ಪದವು ಇಲ್ಲಿರುವ ಡಾ.ಅಂಬೇಡ್ಕರ್ ವಸತಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರವೀಂದ್ರ ಶೆಟ್ಟಿ ಅವರು ತನ್ನ ವೃತ್ತಿ ಕರ್ತವ್ಯದ ಜೊತೆಗೆ ಜನಸಾಮಾನ್ಯರಿಗೆ ಸಹಾಯ ಆಗುವ ಮಹತ್ತರವಾದ ಕೆಲಸಗಳನ್ನು ಮಾಡಿ ಕೊಡುತ್ತಾರೆ. ಕೆಲವು ದಾಖಲಾತಿ ಕುರಿತ ಮಾಹಿತಿ,…
ಬಂಟರು ಕರಾವಳಿ ಪ್ರದೇಶವನ್ನು ಧಾರ್ಮಿಕ, ಸಾಂಸ್ಕೃತಿಕವಾಗಿ ಸಮೃದ್ಧಗೊಳಿಸಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಪ್ರಬುದ್ಧರು. ಆಧ್ಯಾತ್ಮಿಕ, ಧಾರ್ಮಿಕವಾಗಿ ಹಿಂದುಳಿದಿದ್ದು, ದೇವ, ದೈವಗಳ ಕುರಿತು ಜಿಜ್ಞಾಸೆಗಳಿವೆ. ನಮ್ಮ ಸಂಪ್ರದಾಯಗಳನ್ನು ತಿಳಿದುಕೊಳ್ಳಲು ಕುಲಗುರುವಿನ ಅಗತ್ಯವಿದೆ ಎಂದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಡಾ. ವಿದ್ಯಾವಾಚಸ್ಪತಿ ವಿಶ್ವ ಸಂತೋಷಭಾರತಿ ಸ್ವಾಮೀಜಿ ಹೇಳಿದರು. ಆಡ್ಯಾರ್ ಗಾರ್ಡನ್ನಲ್ಲಿರುವ ವಿ.ಕೆ ಶೆಟ್ಟಿ ಸಭಾಂಗಣದಲ್ಲಿ ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡು ಶ್ರೀ ಸಂಸ್ಥಾನದ ದಶಮ ಸಂಭ್ರಮದ ಸಂಕಲ್ಪ ‘ಬಂಟ ಸಂಸ್ಕೃತಿ ಪರಂಪರೆ ಅನಾವರಣ’ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಹಾ ಮಂಡಲದ ಪದಗ್ರಹಣ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಮುಂಬಯಿ ಹೇರಂಭ ಇಂಡಸ್ಟ್ರೀಸ್ ಸಿಎಂಡಿ ಡಾ| ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಬಾರ್ಕೂರು ಮಹಾಸಂಸ್ಥಾನ ಟ್ರಸ್ಟ್ ಕಾರ್ಯಾಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಆಶಯ ನುಡಿಗಳ ಜತೆಗೆ ಎಂಟು ಮಂಡಲಗಳ ಪದಾಧಿಕಾರಿಗಳ ಘೋಷಣೆ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಚಿವ ಬಿ.ರಮಾನಾಥ ರೈ, ಬಂಟರ…
ಸುರತ್ಕಲ್ನ ಅಭಿಷ್ ಬಿಸಿನೆಸ್ ಸೆಂಟರ್ನಲ್ಲಿ ಕಾಂಚೀವರಂ, ರೇಷ್ಮೆ ಸೀರೆಗಳ ಸಹಿತ ಅದ್ದೂರಿ ಬ್ರ್ಯಾಂಡೆಡ್ ಸೀರೆಗಳ ಮಳಿಗೆ ‘ಸಿರಿ ಎಕ್ಸ್ಕ್ಲೂಸಿವ್ ಸಾರಿ ಶಾಪ್’ ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡುತ್ತಾ, ‘ಸಿರಿ’ ಎಂದರೆ ಸಂಪತ್ತು. ಉದ್ಯಮಿ ಸುಧಾಕರ ಎಸ್ ಪೂಂಜಾ ಅವರು ತಮ್ಮ ವ್ಯವಹಾರ ಜೀವನದೊಂದಿಗೆ ಸಾಮಾಜಿಕ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಎಲ್ಲರ ಮನಸ್ಸು ಗೆದ್ದಿದ್ದಾರೆ. ಈಗ ಅವರ ಪುತ್ರಿ ಸ್ಫೂರ್ತಿ ಪೂಂಜ ಅವರು ಹೊಸ ಉದ್ಯಮ ಪ್ರಾರಂಭಿಸಿದ್ದು ಸಂತಸದ ಸಂಗತಿ. ಗ್ರಾಹಕರಿಗೆ ಪ್ರಾಮಾಣಿಕ ಸೇವೆ ನೀಡುವ ಮೂಲಕ ಯಶಸ್ಸು ಸಾಧಿಸಲಿ ಎಂದು ಆಶೀರ್ವದಿಸಿದರು. ಕಟೀಲು ಕ್ಷೇತ್ರದ ಕಮಲಾದೇವಿ ಆಸ್ರಣ್ಣ ಮಾತನಾಡಿ, ಭಾರತೀಯ ಉಡುಗೆ ತೊಡುಗೆಯಲ್ಲಿ ಸೀರೆಗೆ ಅಪಾರ ಮಹತ್ವವಿದೆ. ಭಾರತೀಯ ಸೀರೆಯ ಸೊಗಸು ವಿದೇಶೀಯರಿಗೂ ಮೆಚ್ಚುಗೆಗೆ ಪಾತ್ರವಾಗಿದೆ. ‘ಸಿರಿ’ ಮಳಿಗೆ ಮೂಲಕ ಸಾಂಪ್ರದಾಯಿಕ ಮತ್ತು ನವೀನ ವಿನ್ಯಾಸಗಳ ಸೀರೆಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಸಂಸ್ಥೆ ಇನ್ನಷ್ಟು…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸಂಘದ ನೂತನ ಪೋಷಕ ಸದಸ್ಯರಾಗಿ ಸೇರ್ಪಡೆಯಾದ ಹೈದರಾಬಾದ್ ನ ನಿರ್ಮಲ ಜಿಲ್ಲೆಯ ಯುವ ಹೋಟೆಲ್ ಉದ್ಯಮಿ ನಂದ್ರೋಳಿ ಹಣೆಮಕ್ಕಿ ಗಣೇಶ್ ಶೆಟ್ಟಿಯವರನ್ನು ಅವರ ಸ್ವಗೃಹ ಮುಳ್ಳಿಕಟ್ಟೆಯಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾದ ಅಶೋಕ್ ಶೆಟ್ಟಿ ಸಂಸಾಡಿ ಸನ್ಮಾನಿಸಿ ಗೌರವಿಸಿದರು. ಯುವ ಬಂಟರ ಸಂಘದ ನಿಕಟಪೂರ್ವ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಪ್ರಶಾಂತ್ ಶೆಟ್ಟಿ ಶಿರೂರು, ರಾಘವೇಂದ್ರ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಳೆಯ ತಲೆಮಾರಿನ ಹಿರಿಯ ಯಕ್ಷಗಾನ ಅರ್ಥಧಾರಿ ದಿ| ಎ.ಕೆ. ನಾರಾಯಣ ಶೆಟ್ಟಿ ಫರಂಗಿಪೇಟೆ ಅವರ ಧರ್ಮಪತ್ನಿ ಶ್ರೀಮತಿ ಕಾವೇರಿ ಎನ್. ಶೆಟ್ಟಿಯವರು ವಯೋ ಸಹಜ ಅನಾರೋಗ್ಯದಿಂದ ಅಕ್ಟೋಬರ್ 18ರಂದು ಬಜಪೆಯ ತಮ್ಮ ಮಗಳ ಮನೆಯಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೂಲತಃ ಪೆರುವಾಯಿ ಗುತ್ತು ಮನೆತನದವರಾದ ಕಾವೇರಿ ಅವರಿಗೆ ಎರಡು ಗಂಡು ಹಾಗೂ ಆರು ಮಂದಿ ಹೆಣ್ಣು ಮಕ್ಕಳು. ಪತಿಯ ಸೋದರಳಿಯ ಮಹೇಶ್ ಮೋಟಾರ್ಸ್ ಮಾಲಕ ಎ.ಕೆ. ಜಯರಾಮ ಶೇಖ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. ಜಯರಾಮ ಶೇಖ ಅವರು ತಮ್ಮ ಸೋದರ ಮಾವನ ನೆನಪಿಗಾಗಿ ಯಕ್ಷಾಂಗಣ ಮಂಗಳೂರು ಆಶ್ರಯದಲ್ಲಿ ಕಳೆದ 12 ವರ್ಷಗಳಿಂದ ನಡೆಸುತ್ತಿದ್ದ ‘ದಿ.ಎ.ಕೆ ನಾರಾಯಣಶೆಟ್ಟಿ ಸಂಸ್ಮರಣ ಕಾರ್ಯಕ್ರಮ’ದಲ್ಲಿ ಉತ್ಕಟ ಕಲಾಪ್ರೇಮಿಯಾಗಿದ್ದ ಕಾವೇರಿ ಶೆಟ್ಟಿಯವರು ಪ್ರತಿವರ್ಷ ತಪ್ಪದೆ ಭಾಗವಹಿಸುತ್ತಿದ್ದರು. ಶನಿವಾರ ಬಜಪೆಯಲ್ಲಿ ಜರಗಿದ ಅವರ ಅಂತ್ಯವಿಧಿಯಲ್ಲಿ ಊರವರು ಹಾಗೂ ಬಂಧುಗಳು ಅಪಾರ ಸಂಖ್ಯೆಯಲ್ಲಿ ಸೇರಿ ಚರಮಾಂಜಲಿ ಅರ್ಪಿಸಿದರು.
ಕಾರ್ಕಳ ರೋಟರಿ ಆ್ಯನ್ಸ್ ವತಿಯಿಂದ ರೋಟರಿ ಬಾಲ ಭವನದಲ್ಲಿ ಬಳೆ ಇಡುವ ಕಾರ್ಯಕ್ರಮ ಹಾಗೂ ನವರಾತ್ರಿ ನವರಂಗೋತ್ಸವ ಸಡಗರದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಆ್ಯನ್ಸ್ ಸದಸ್ಯೆಯರು ಉತ್ಸಾಹದಿಂದ ಭಾಗವಹಿಸಿ, ಸಾಂಸ್ಕೃತಿಕ ಪ್ರತಿಭೆ ಮತ್ತು ಸೃಜನಶೀಲತೆಯ ಪ್ರದರ್ಶನ ನೀಡಿದರು. ಮುಖ್ಯ ಅತಿಥಿಯಾಗಿ ಶ್ರೀಮತಿ ಶೈಲಜಾ ಭಟ್ (ಮಾತಾಜಿ, ಯು.ಎಸ್. ನಾಯಕ್ ಹೈಸ್ಕೂಲ್, ಪಟ್ಲ) ಅವರು ಉಪಸ್ಥಿತರಿದ್ದು, ಮಹಿಳೆಯರ ಸಕ್ರಿಯ ಪಾತ್ರ ಮತ್ತು ಸಾಮಾಜಿಕ ಬಾಂಧವ್ಯವನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ವಿಜಯ್ ಶ್ರೀ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಡಾ. ಆಶಾ ಹೆಗಡೆ ಅವರು ಸಂಪೂರ್ಣ ಬಳೆಯ ಪ್ರಾಯೋಜಕತ್ವ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಜ್ಯೋತಿ ಪದ್ಮನಾಭ ಅವರು ಸುಂದರವಾಗಿ ನಿರ್ವಹಿಸಿದರು. ಭಾಗವಹಿಸಿದ ಎಲ್ಲರಿಗೂ ಬಹುಮಾನಗಳನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ರೋಟರಿ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಚೇತನ್ ನಾಯಕ್, ಕೋಶಾಧಿಕಾರಿ ಹರ್ಷಿಣಿ ವಿಜಯರಾಜ್ ಶೆಟ್ಟಿ ಹಾಗೂ ಎಲ್ಲಾ ರೋಟರಿ ಸದಸ್ಯರು, ಆ್ಯನ್ಸ್ ಚೇರ್ಮನ್ ವೃಂದಾ ಶೆಟ್ಟಿ, ಆ್ಯನ್ಸ್ ಅಧ್ಯಕ್ಷೆ ಜಯಂತಿ…
ನಾವಿಂದು ಬದುಕುತ್ತಿರುವುದು ಅತಿರಂಜಿತವಾದ ಮಾಧ್ಯಮ ಯುಗದಲ್ಲಿ. ಡಿಜಿಟಲ್ ಮಾಧ್ಯಮಗಳು ತಮ್ಮ ಕದಂಬ ಬಾಹುಗಳನ್ನು ವಿಸ್ತರಿಸಿದ ರೀತಿಯನ್ನು ನೋಡಿದರೆ ಸಾಕು; ಅವು ಒಕ್ಟೋಪಸ್ ಮಾದರಿಯಲ್ಲಿ ಎಲ್ಲಾ ಕ್ಷೇತ್ರಗಳನ್ನು ವ್ಯಾಪಿಸಿ ಬಿಟ್ಟಿವೆ. ಎಲೆಕ್ಟ್ರಾನಿಕ್ ತಂತ್ರಜ್ಞಾನವು ಮುದ್ರಣ ಮಾಧ್ಯಮಗಳನ್ನು ಹಿಂದಿಕ್ಕಿ ವೇಗವಾಗಿ ಬೆಳೆಯುತ್ತಿರುವುದು ಅದ್ಭುತ ಅನಿಸಿದರೂ, ಅಷ್ಟೇ ಆತಂಕ ಹುಟ್ಟಿಸುತ್ತಿರುವುದು ಸುಳ್ಳಲ್ಲ. ದಿನ ಬೆಳಗಾದರೆ ಜಾಗತಿಕ ರಂಗದ ಸೂಕ್ಷ್ಮಾತಿ ಸೂಕ್ಷ್ಮ ವಿದ್ಯಮಾನಗಳು ಮಾಧ್ಯಮಗಳಲ್ಲಿ ಬಟಾ ಬಯಲಾಗುತ್ತವೆ. ಭಾಷೆ, ಸಂಸ್ಕೃತಿ –ಸಂಪ್ರದಾಯಗಳನ್ನು ಉಳಿಸುವ ಅಥವಾ ಅಳಿಸುವ ದಾಯಭಾಗಿತ್ವವೂ ಈ ಮಾಧ್ಯಮಗಳ ಮೇಲಿವೆ. ಇಂತಹ ಒಂದು ಸಂಕ್ರಮಣ ಕಾಲಘಟ್ಟದಲ್ಲಿ ತುಳುನಾಡಿಗರ ಆಶಾಕಿರಣವಾಗಿ ಮಂಗಳೂರಿನಲ್ಲಿ ಹುಟ್ಟುಪಡೆದ ತುಳುಭಾಷೆಯ ಪ್ರಪ್ರಥಮ ಟಿ.ವಿ ವಾರ್ತಾವಾಹಿನಿ ‘ನಮ್ಮಕುಡ್ಲ’. ತುಳು ಭಾಷೆ ಅಳಿವಿನಂಚಿಗೆ ಹೋಗುತ್ತಿದೆ ಎಂಬ ಬೇಜವಾಬ್ದಾರಿಯ ಹೇಳಿಕೆಗಳ ನಡುವೆಯೇ ತುಳು ಭಾಷೆಯಲ್ಲಿ ಮತ್ತು ಅದು ಆಡುನುಡಿಯಾಗಿರುವ ಈ ನಾಡಿನಲ್ಲಿ ಏನಿದೆ ಎಂಬುದನ್ನು ನಮ್ಮಕುಡ್ಲ ಹೇಳುತ್ತಾ ಬಂದಿದೆ. ಮುಂಬಯಿಯಲ್ಲಿ ಉದ್ಯಮಿಯಾಗಿದ್ದ ಬಿ.ಪಿ ಕರ್ಕೇರ ಮತ್ತು ಲಕ್ಷ್ಮೀ ಕರ್ಕೇರ ದಂಪತಿಯ ಮಕ್ಕಳು ಹರೀಶ್, ಸುರೇಶ್, ಮೋಹನ್, ಲೀಲಾಕ್ಷ…
ಕ್ರಿಯೇಟಿವ್ ಕಾಲೇಜಿನಲ್ಲಿ ರೋಟರಿ ಇಂಟರಾಕ್ಟ್ ಕ್ಲಬ್ನ ನೂತನ ಕ್ಲಬ್ ನ ಇನ್ಸ್ಟಾಲೇಶನ್ ಕಾರ್ಯಕ್ರಮ ನೆರವೇರಿತು. ಅತಿಥಿಯಾಗಿ ಆಗಮಿಸಿದ ರೋಟರಿ ಕ್ಲಬ್ ಕಾರ್ಕಳದ ಮಾಜಿ ಅಧ್ಯಕ್ಷರು ಹಾಗೂ ಇಸ್ರೋ ವಿಜ್ಞಾನಿ ಜನಾರ್ಧನ್ ಇದ್ಯಾರವರು ದೀಪ ಪ್ರಜ್ವಲಿಸಿ ಸಮಾರಂಭವನ್ನು ಉದ್ಘಾಟಿಸಿದರು. ನಂತರ ಅವರು ಇಂಟರಾಕ್ಟ್ ಚಟುವಟಿಕೆಗಳ ಮಹತ್ವ ಮತ್ತು ವಿದ್ಯಾರ್ಥಿಗಳ ಸಮಾಜಮುಖಿ ಬೆಳವಣಿಗೆಯ ಕುರಿತು ಮಾತನಾಡಿದರು. ನೂತನ ಇಂಟರಾಕ್ಟ್ ಅಧ್ಯಕ್ಷರಾಗಿ ಎಚ್.ಎಂ. ಸಮೃದ್ಧ್ ಹಾಗೂ ಕಾರ್ಯದರ್ಶಿಯಾಗಿ ದಿಗಂತ್ ಅಧಿಕಾರ ಸ್ವೀಕರಿಸಿದರು. ತಮ್ಮ ತಂಡದ ಸದಸ್ಯರನ್ನು ಅವರು ಈ ಸಂದರ್ಭದಲ್ಲಿ ಪರಿಚಯಿಸಿದರು. ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಅವರು ನೂತನ ತಂಡದ ಪದಗ್ರಹಣ ನೆರವೇರಿಸಿ, ಹೊಸ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರಿಗೆ ಶುಭ ಹಾರೈಕೆಗಳನ್ನು ನೀಡಿದರು. ಅವರು “ಇಂಟರಾಕ್ಟ್ ಕ್ಲಬ್ನಲ್ಲಿ ಭಾಗಿಯಾಗುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಲು ಅವಕಾಶ ಸಿಗುತ್ತದೆ” ಎಂದು ಹೇಳಿದರು. ಇಂಟರಾಕ್ಟ್ ಚೇರ್ಮನ್ ಬಾಲಕೃಷ್ಣ ದೇವಾಡಿಗ ಅವರು ಇಂಟೆರೆಕ್ಟ್ ಸಕಾರಾತ್ಮಕ ಬಳಕೆ ಹಾಗೂ ಅದರ…
ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನ ಆಶ್ರಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಂಗಳೂರು ವಲಯ ವಾಲಿಬಾಲ್ ಟೂರ್ನಮೆಂಟ್ನ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ಸ್ ಆದರೆ, ಮಹಿಳೆಯರ ವಿಭಾಗದಲ್ಲಿ ಮಂಗಳೂರಿನ ಫಾದರ್ ಮುಲ್ರ್ಸ್ ನರ್ಸಿಂಗ್ ಕಾಲೇಜು ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷ ವಿಭಾಗ ವಿಜೇತರು: ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಮೂಡುಬಿದಿರೆ. ರನ್ನರ್ : ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ಮೂಡುಬಿದಿರೆ. ಮೊದಲ ರನ್ನರ್- ಅಪ್ : ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು, ಮೂಡುಬಿದಿರೆ. ಎರಡನೇ ರನ್ನರ್-ಅಪ್: ಕೆ.ವಿ.ಜಿ ಮೆಡಿಕಲ್ ಕಾಲೇಜು, ಸುಳ್ಯ ಮಹಿಳಾ ವಿಭಾಗ, ವಿಜೇತರು : ಫಾದರ್ ಮುಲ್ಲರ್ಸ್ ನರ್ಸಿಂಗ್ ಕಾಲೇಜು, ಮಂಗಳೂರು. ರನ್ನರ್ : ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು, ಮೂಡುಬಿದಿರೆ. ಮೊದಲ ರನ್ನರ್- ಅಪ್ : ಎಂ.ವಿ ಶೆಟ್ಟಿ ಫಿಸಿಯೋಥೆರಪಿ ಕಾಲೇಜು, ಮಂಗಳೂರು. ಎರಡನೇ ರನ್ನರ್- ಅಪ್ : ಕೊಡಗು ಮೆಡಿಕಲ್ ಕಾಲೇಜು, ಮಡಿಕೇರಿ.…















