Author: admin

ಲಯನ್ಸ್ ಕ್ಲಬ್ ಮೂಡುಬಿದಿರೆ ಇದರ ವತಿಯಿಂದ ಹಿರಿಯ ನಾಗರಿಕರ ದಿನಾಚರಣೆಯನ್ನು ಕ್ಲಬ್ ಅಧ್ಯಕ್ಷ ಲ. ಶಿವಪ್ರಸಾದ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಆಲಂಗಾರಿನ ಮೌಂಟ್ ರೋಸರಿ ವೃದ್ಧಾಶ್ರಮದಲ್ಲಿ ಆಚರಿಸಲಾಯಿತು. ಈ ಸಂದರ್ಭ ಆಶ್ರಮದ ನಿರ್ದೇಶಕ 94 ವರ್ಷ ವಯಸ್ಸಿನ ಮೋನ್ಸಿಂಜೊರ್ ಎಡ್ವಿನ್ ಸಿ. ಪಿಂಟೋ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಡ್ವಿನ್ ಸಿ. ಪಿಂಟೋ ಅವರು ಸನ್ಮಾನಕ್ಕೆ ಕೃತಜ್ಞತೆಗಳನ್ನು ತಿಳಿಸಿದರಲ್ಲದೆ ಈ ಸನ್ಮಾನವು 94ರ ವಯಸ್ಸಿನಲ್ಲಿ ತಾವು ವೃದ್ಧಾಶ್ರಮ ಮತ್ತು ಮೌಂಟ್ ರೋಸರಿ ಆಸ್ಪತ್ರೆಯ ಮೂಲಕ ಕೈಗೊಳ್ಳುವ ಸೇವಾ ಕಾರ್ಯಗಳಿಗೆ ಇನ್ನಷ್ಟು ಸ್ಪೂರ್ತಿ ತುಂಬಲಿದೆ ಎಂದರಲ್ಲದೆ ತಮ್ಮ ಆಸ್ಪತ್ರೆಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ಅತ್ಯುತ್ತಮ ರೀತಿಯಲ್ಲಿ ಡಯಾಲಿಸಿಸ್ ಚಿಕಿತ್ಸೆ ನೀಡುವ ಯೋಜನೆ ಹಾಕಿಕೊಂಡಿದ್ದು ದಾನಿಗಳು ಉದಾರ ಮನಸ್ಸಿನಿಂದ ಈ ಯೋಜನೆಗೆ ಮುಕ್ತ ಮನಸ್ಸಿನಿಂದ ಸಹಾಯ ನೀಡಬೇಕೆಂದು ವಿನಂತಿಸಿದರು. ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆಯವರು ಮಾತನಾಡಿ, ವಂ. ಎಡ್ವಿನ್ ಸಿ. ಪಿಂಟೋ ಅವರಿಗೆ ಉನ್ನತ ಸ್ಥಾನಮಾನಗಳು ಸಿಗುವ ಅವಕಾಶಗಳು ಪ್ರಾಪ್ತವಾಗಿದ್ದರೂ, ಅದನ್ನೆಲ್ಲಾ ನಿರಾಕರಿಸಿ 94ರ…

Read More

ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು. ಆ ಮೂಲಕ ಭವಿಷ್ಯದ ಉತ್ತಮ ಪ್ರಜೆಗಳಾಗಿ ಸುಸಂಸ್ಕೃತ ಜೀವನ ನಡೆಸುವಂತಾಗಬೇಕೆಂಬ ದೃಷ್ಟಿಯಿಂದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಪ್ರಾರಂಭದಿಂದಲೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದೆ. ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಯೊಂದಿಗೆ ಯಾವಾಗಲೂ ಯಶಸ್ವಿ ಜೀವನದ ಬಗ್ಗೆ ಯೋಚಿಸಬೇಕು. ಕಠಿಣ ಪರಿಶ್ರಮ, ಶ್ರದ್ಧೆಯಿಂದ ಶಿಕ್ಷಣ ಪಡೆದು ಗುರಿ ತಲುಪಬೇಕು ಎಂದು ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿ ತಿಳಿಸಿದರು. ಜುಯಿ ನಗರದ ಬಂಟ್ಸ್ ಸೆಂಟರ್ ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದ ದಿ. ಪ್ರಮೋದ ಶಿವರಾಮ ಕೆ ಶೆಟ್ಟಿ ವೇದಿಕೆಯಲ್ಲಿ ಆಗಸ್ಟ್ 17 ರಂದು ಜರಗಿದ ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ವಾರ್ಷಿಕ ಶೈಕ್ಷಣಿಕ ನೆರವು ವಿತರಣಾ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಂಬೆ ಬಂಟ್ಸ್ ಅಸೋಸಿಯೇಷನ್ ಪ್ರತೀ ವರ್ಷ ಲಕ್ಷಾಂತರ ರೂಪಾಯಿಗಳನ್ನು ಶೈಕ್ಷಣಿಕ ನೆರವಿಗಾಗಿ ವಿನಿಯೋಗಿಸುತ್ತಿದೆ. ಸಮಾಜದ ದಾನಿಗಳು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ದಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.   …

Read More

ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ನ 29 ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಆಗಸ್ಟ್ 23 ರಂದು ಮಂಗಳೂರಿನ ಎಜೆ ಗ್ರ್ಯಾಂಡ್ ಹೋಟೆಲ್ ನಲ್ಲಿ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಎಜೆ ಶೆಟ್ಟಿ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮದ್ಯಾಹ್ನ 12 ಗಂಟೆಗೆ ಆಳ್ವಾಸ್ ಎಜುಕೇಶನ್ ಟ್ರಸ್ಟ್ ನ ಚೇರ್ಮನ್ ಡಾ. ಎಂ ಮೋಹನ್ ಆಳ್ವರವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಪ್ರದಾನ ಮಾಡಲಾಗುವುದು. ಯಕ್ಷಗಾನ ಕಲಾವಿದ ಸಂಜಯ್ ಕುಮಾರ್ ಶೆಟ್ಟಿ ಗೋಣಿಬೀಡುರವರಿಗೆ ದಿವಂಗತ ಡಿ.ಕೆ ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿಯವರಿಗೆ ದಿ ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 24 ನೇ ರಾಂಕ್ ಪಡೆದ ನಿಶ್ಚಲ್ ರೈ ಅವರಿಗೆ ಸಿಎ ವೈ ಆರ್ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ರಕ್ಷಾ ಆರ್ ಶೆಟ್ಟಿಯವರಿಗೆ ಸಿಎ ಗೋಪಾಲ ಬಿ ಶೆಟ್ಟಿ…

Read More

ಉಡುಪಿ, ಶಿವಮೊಗ್ಗ, ದಾವಣಗೆರೆ ಮತ್ತು ಭದ್ರಾವತಿ ರೆವೆನ್ಯೂ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317-ಸಿ ಇದರ 9 ರೀಜನ್ ಗಳಲ್ಲಿ 2024-25 ನೇ ಸಾಲಿನ “ಬೆಸ್ಟ್ ರೀಜನ್ ಚೆಯರ್ ಪರ್ಸನ್” ಪ್ರಶಸ್ತಿಯನ್ನು ರೀಜನ್-V ಇದರ ರೀಜನ್ ಚೆಯರ್ ಪರ್ಸನ್ ಲಯನ್ ಅಡ್ವೋಕೇಟ್ ಬನ್ನಾಡಿ ಸೋಮನಾಥ ಹೆಗ್ಡೆಯವರು ಪಡೆದರು. ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ಇತ್ತೀಚೆಗೆ ನಡೆದ “ಸಿಂಹ ಸಂಭ್ರಮ” ಅದ್ಧೂರಿ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನ ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ಮಹಮ್ಮದ್ ಹನೀಫ್ ಮತ್ತು ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭದ ಚೆಯರ್ ಮ್ಯಾನ್ ಲಯನ್ ಅರುಣ್ ಕುಮಾರ್ ಹೆಗ್ಡೆಯವರು ಲಯನ್ ಅಡ್ವೋಕೇಟ್ ಬನ್ನಾಡಿ ಸೋಮನಾಥ ಹೆಗ್ಡೆಯವರಿಗೆ ಪ್ರಶಸ್ತಿಯನ್ನು ವಿತರಿಸಿದರು. 2024-25 ನೇ ಸಾಲಿನ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಅಧ್ಯಕ್ಷರಾದ ಲಯನ್ ಬನ್ನಾಡಿ ಪ್ರವೀಣ್ ಹೆಗ್ಡೆ, ಲಯನ್ಸ್ ಕ್ಲಬ್ ಹಂಗಳೂರು ಇದರ ಅಧ್ಯಕ್ಷರಾದ ಲಯನ್ ರೋವನ್ ಡಿ’ಕೋಸ್ಟಾ, ಲಯನ್ಸ್ ಕ್ಲಬ್ ಆರ್ಡಿ- ಬೆಳ್ವೆ- ಗೋಳಿಯಂಗಡಿಯ ಅಧ್ಯಕ್ಷರಾದ ಲಯನ್ ಜಯರಾಮ್ ಶೆಟ್ಟಿ, ಲಯನ್ಸ್…

Read More

ದಕ್ಷಿಣ ಕನ್ನಡ ಅಥ್ಲೆಟಿಕ್ಸ್ ಸಂಸ್ಥೆಯ ವತಿಯಿಂದ ನಡೆದ ದಕ್ಷಿಣ ಕನ್ನಡ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ವಿದ್ಯಾರ್ಥಿಗಳು 22 ಚಿನ್ನ, 21 ಬೆಳ್ಳಿ, 12 ಕಂಚಿನ ಪದಕದೊಂದಿಗೆ ಒಟ್ಟು 55 ಪದಕಗಳನ್ನು ಪಡೆದುಕೊಂಡರು. ಆಗಸ್ಟ್ 23 ರಿಂದ 25 ರವರೆಗೆ ಉಡುಪಿ ಜಿಲ್ಲೆಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಕಿರಿಯರ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನಿಂದ ಕಿರಿಯರ ವಿಭಾಗದಲ್ಲಿ 60 ವಿದ್ಯಾರ್ಥಿಗಳು ಹಾಗೂ ಹಿರಿಯರ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 90 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಲ್ಲಿ ಅತೀ ಹೆಚ್ಚು ಕ್ರೀಡಾಪಟುಗಳು ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನಿಂದ ಪ್ರತಿನಿಧಿಸುತ್ತಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸೈಂಟ್ ಫ್ರಾನ್ಸಿಸ್ ಕ್ಸೆವಿಯರ್ ಆಂಗ್ಲ ಮಾಧ್ಯಮ ಶಾಲೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವಯೋಮಾನದ ಬಾಲಕಿಯರ 56 ಕೆಜಿ ವಿಭಾಗದಲ್ಲಿ 10ನೇ ತರಗತಿಯ ಪ್ರತೀಕ್ಷಾ ಪಿ. ಮತ್ತು 10ನೇ ತರಗತಿಯ ಪ್ರೀತಂ ಕುಲಾಲ್ 17 ವಯೋಮಾನದ 58 ಕೆಜಿ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ವಿಜಯ ಶಾಲಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ, 17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ 9ನೇ ತರಗತಿಯ ಶ್ರಾವಣಿ ಶೆಟ್ಟಿ 60 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ವಿಜೇತರಿಗೆ ಸಮಾರೋಪ ಸಮಾರಂಭದಲ್ಲಿ ಪಾರಿತೋಷಕ, ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಪ್ರೋತ್ಸಾಹದ ನುಡಿಗಳನ್ನಾಡಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಕುಮಾರ್ ಮತ್ತು ಸೂರ್ಯ ಮಾರ್ಗದರ್ಶನ ನೀಡಿದ್ದರು.…

Read More

ಸಮಾಜದ ಆಶೋತ್ತರಗಳಿಗೆ ಸ್ಪಂದಿಸುವ ಜೊತೆಗೆ ಆರ್ಥಿಕ ಶಕ್ತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಾಪನೆಗೊಂಡಿರುವ ಶ್ರೀಶಂ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಆದಿ ಉಡುಪಿ ಎಪಿಎಂಸಿ ಬಿಲ್ಡಿಂಗ್ ನಲ್ಲಿ ಲೋಕಾರ್ಪಣೆಗೊಂಡಿತು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ ಜಯಕರ ಶೆಟ್ಟಿ ಇಂದ್ರಾಳಿ ಶ್ರೀಶಂ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯನ್ನು ಉದ್ಘಾಟಿಸಿ, ಸಹಕಾರಿ ಕ್ಷೇತ್ರ ಅಭಿವೃದ್ಧಿಗೊಂಡರೆ ದೇಶದ ಆರ್ಥಿಕತೆ ಶಕ್ತಿಯನ್ನು ಬಲಪಡಿಸಲು ಸಾಧ್ಯವಿದೆ. ರಾಷ್ಟ್ರೀಕತ ಬ್ಯಾಂಕುಗಳಿಗೆ ಪೈಪೋಟಿಯಂತೆ ಸಹಕಾರಿ ಕ್ಷೇತ್ರ ಬೆಳೆಯುತ್ತಿದ್ದು, ಈ ಸಾಲಿಗೆ ಶ್ರೀಶಂ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸೇರ್ಪಡೆಗೊಂಡಿದೆ. ಈ ಸಂಸ್ಥೆ ಉತ್ತುಂಗ ಶ್ರೇಣಿಯಲ್ಲಿ ಬೆಳವಣಿಗೆ ಕಾಣಲಿ ಎಂದರು. ಸಭಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಸಹಕಾರಿ ಮೂಲತತ್ವದ ಆಶಯದಂತೆ ಕಾರ್ಯಚರಿಸಿ ಸಂಸ್ಥೆ ಅಭಿವೃದ್ಧಿ ಕಾಣಲಿ ಎಂದು ಶುಭ ಹಾರೈಸಿದರು. ಕಚೇರಿ ದೀಪ ಪ್ರಜ್ವಲಿಸಿದ ಮಾಜಿ ಶಾಸಕ ಕೆ ರಘುಪತಿ ಭಟ್ ಮಾತನಾಡಿ, ಪ್ರಾಮಾಣಿಕತೆ ನಿಸ್ವಾರ್ಥ ಮನೋಭಾವ ನೆರವಿನ ಗುಣವಿದ್ದರೆ ಸಂಸ್ಥೆ ಏಳಿಗೆ ಸಾಧ್ಯ ಎಂದರು. ಗಣಕಯಂತ್ರ…

Read More

ಶ್ರೀ ಖಡ್ಗೇಶ್ವರ ಖಡ್ಗೇಶ್ವರಿ ದೇವಸ್ಥಾನ ಮಧ್ಯ ಇದರ ನೂತನ ವ್ಯವಸ್ಥಾಪನಾ ಸಮಿತಿಯ ಸಭೆಯು ದೇವಸ್ಥಾನದ ಅಡಳಿತಾಧಿಕಾರಿ ಸುಲೋಚನ ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಗಿರಿಜಾ ಶೆಟ್ಟಿ ಸಮುದಾಯ ಭವನದಲ್ಲಿ ಜರುಗಿತು. ಸಭೆಯಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಉಪಸ್ಥಿತರಿದ್ದರು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸಮಾಜಸೇವಕ, ವಿ.ಕೆ ಗ್ರೂಪ್ ನ ಸಿಎಂಡಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಮೂರನೇ ಬಾರಿ ಅಯ್ಕೆಗೊಂಡರು. ಸದಸ್ಯರಾಗಿ ಮೋಹನ್ ಚೌಟ ಮಧ್ಯ ಕುಜುಂಬತೋಟ, ಶಂಕರ ಹೆಗಡೆ ಮಧ್ಯಬೀಡು, ಬೋಜ ಅಂಚನ್ ಮಧ್ಯ, ದಿನೇಶ್ ದೇವಾಡಿಗ ಮಧ್ಯ, ಕೃಷ್ಣಮೂರ್ತಿ ಭಟ್ ಮಧ್ಯ, ಸೀತಾರಾಮ ಮಧ್ಯ, ಶೋಭಾ ಶೆಟ್ಟಿ ಕಟ್ಟೆಮಾರ್, ಪ್ರಭಾಲಾಕ್ಷಿ ಶೆಟ್ಟಿ ಕುಂಜರಬಾಳಿಕೆ ಅಯ್ಕೆಗೊಂಡರು.

Read More

ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕಳೆದ ಶುಕ್ರವಾರ ಆಗಸ್ಟ್ 15 ರಂದು ಬೆಳಿಗ್ಗೆ 8:30ಕ್ಕೆ ಮನಾಮದ ಕನ್ನಡ ಭವನ ಸಮುಚ್ಛಯದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವು ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರು ಭಾರತೀಯ ತ್ರಿವರ್ಣ ಧ್ವಜಾರೋಹಣ ಮಾಡುವುದರ ಮೂಲಕ ಆರಂಭಗೊಂಡಿತು. ನಂತರ ಉಪಾಧ್ಯಕ್ಷ ನಿತಿನ್ ಶೆಟ್ಟಿ ಅವರು ಬಹ್ರೈನ್ ರಾಷ್ಟ್ರಧ್ವಜಾರೋಹಣಗೈದರು. ನೆರೆದಿದ್ದ ನೂರಾರು ಸದಸ್ಯರು ಧ್ವಜಕ್ಕೆ ವಂದನೆ ಸಲ್ಲಿಸಿ, ರಾಷ್ಟ್ರಗೀತೆಯನ್ನು ಹಾಡಿದರು. ಸಮಾರಂಭದ ಅತಿಥಿಗಳಾಗಿ ಜಯಶಂಕರ್, ಮೊಹಮ್ಮದ್ ಮನ್ಸೂರ್, ಸಿಎ ಅಜಯ್, ನಿಕಟಪೂರ್ವ ಅಧ್ಯಕ್ಷ ಅಮರನಾಥ ರೈ ಹಾಗೂ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದು, ಸ್ವಾತಂತ್ರ್ಯ ದಿನದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಅಧ್ಯಕ್ಷ ಅಜಿತ್ ಬಂಗೇರ ಅವರು ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಭಾಗವಾಗಿ ಕನ್ನಡ ಭವನ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನ ವಿಶೇಷ ಛದ್ಮವೇಷ ಸ್ಪರ್ಧೆ ಮತ್ತು ಸಂಘದ ಸದಸ್ಯರ ಪರಿವಾರದಿಂದ ಮನರಂಜನಾತ್ಮಕ ನೃತ್ಯ ಪ್ರದರ್ಶನಗಳು ನಡೆಯಿತು. ಸೌರವ್ ರಾಕೇಶ್ ಹಾಗೂ ಫೆಲ್ಸಿ ಫಿಲೊಮೇನಾ…

Read More

ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ‍್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್‌ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಮಾತನಾಡಿ, ರ‍್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ದಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನಲೆಯಲ್ಲಿ ದೇಶದಾದ್ಯಂತ ಎಲ್ಲಾ ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ತಡೆಗಟ್ಟಲು ನಿಯಮಾವಳಿಗಳನ್ನು ಜಾರಿಗೊಳಿಸಲಾಗಿದೆ. ಕಾನೂನು ಉಲ್ಲಂಘನೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದರು. ಒನ್ ಪೆಗ್, ಒನ್ ದಮ್‌ನಿಂದ ಆರಂಭ : ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್‌ನಿಂದ ಆರಂಭವಾಗುವ ಚಟ, ನಿಧಾನವಾಗಿ ಮಾದಕ ವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಒನ್ ಪೆಗ್, ಒನ್ ದಮ್‌ನಿಂದ ಆರಂಭವಾಗುವ ವ್ಯಸನಗಳು ಮುಂದೆ ದುಶ್ಚಟಗಳ ದಾಸರಾಗುವಂತೆ ಮಾಡುತ್ತವೆ. ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರಬೇಕು ಎಂದರು. ಎಫ್‌ಐಆರ್ ದಾಖಲಾದರೆ ಬದುಕೇ ದುರ್ಭರ ವಿದ್ಯಾರ್ಥಿಯ ನೆಲೆಯಲ್ಲಿ…

Read More