Author: admin

ಸಂತ ಜ್ಞಾನೇಶ್ವರ ಮಹಾರಾಜ್ ಸಂತ ತುಕಾರಂ ಮಹರಾಜ್ ಪಲ್ಲಕ್ಕಿಯು ಪುಣೆಯಲ್ಲಿ ಎರಡು ದಿನದ ದರ್ಶನದ ನಂತರ ಪಂಡರಾಪುರಕ್ಕೆ ಹಡಪ್ಸರ್ ಮಾರ್ಗವಾಗಿ ಜೂನ್ 22ರಂದು ಬೆಳಿಗ್ಗೆ ಹೊರಟಿದ್ದು, ಈ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯ ವಾರ್ಕರಿಗಳಿಗೆ ಪುಣೆ ಬಂಟ್ಸ್ ಅಸೋಸಿಯೇಷನ್ ವತಿಯಿಂದ ವಾರ್ಕರಿಗಳಿಗೆ ಉಚಿತ, ಬಿಸ್ಕೆಟ್, ಹಣ್ಣು ಹಂಪಲು ವಿವಿಧ ಆಹಾರ ವಸ್ತುಗಳ ವಿತರಣೆಯು ಹಡಪ್ಸರ್ ನಲ್ಲಿ ಹಾಕಿದ ಬಂಟ್ಸ್ ಅಸೋಸಿಯೇಷನ್ ವಿತರಣಾ ಕೌಂಟರ್ ನಲ್ಲಿ ಬೆಳಿಗ್ಗೆ ಗಂಟೆ 6.00 ರಿಂದ ನಡೆಯಿತು. ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿಗುತ್ತು ಹಾಗೂ ಪದಾಧಿಕಾರಿಗಳ ಹಾಗೂ ದಾನಿಗಳ ನೇತೃತ್ವದಲ್ಲಿ ನಡೆದ ಈ ಆಹಾರ ವಿತರಣೆಯಲ್ಲಿ ಸಮಿತಿಯ ಸದಸ್ಯರು ತಮ್ಮ ಪ್ರಾಯೋಜಕತ್ವದ ವಿವಿಧ ಬಗೆಯ ಆಹಾರ ವಸ್ತುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬಂಟ್ಸ್ ಅಸೋಸಿಯೇಷನ್ ನ ಉಪಾಧ್ಯಕ್ಷ ಸತೀಶ್ ರೈ ಕಲ್ಲಂಗಳ ಗುತ್ತು, ಮಹಿಳಾ ಕಾರ್ಯಾಧ್ಯಕ್ಷೆ ರೇಷ್ಮಾ ಆರ್ ರೈ, ಯುವ ವಿಭಾಗದ ಕಾರ್ಯಾಧ್ಯಕ್ಷ ಅದೀಪ್ ಶೆಟ್ಟಿ, ಪ್ರಮುಖರಾದ ರವೀಂದ್ರ ಶೆಟ್ಟಿ, ತಾರಾನಾಥ್ ರೈ…

Read More

ಪುಸ್ತಕಗಳನ್ನು ಓದಿ ಮೋಟಿವೇಟ್ ಆಗಬಹುದು. ಭಾಷಣಗಳನ್ನು ಕೇಳಿ ಮೋಟಿವೇಟ್ ಆಗಬಹುದು. ಗೆದ್ದವರ ಕತೆಗಳನ್ನು ಕೇಳಿಯೂ ಮೋಟಿವೇಟ್ ಆಗಬಹುದು ಅಥವಾ ನಾನೀಗ ಬರೆಯುತ್ತಿರುವಂತಹ ಬರಹಗಳನ್ನು ನೋಡಿಯೂ ಮೋಟಿವೇಟ್ ಆಗಬಹುದು. ಆದ್ರೆ ಅವೆಲ್ಲವೂ ತಾತ್ಕಾಲಿಕ. ಶಾಶ್ವತ ಯಾವುದು ಗೊತ್ತಾ? ಸೆಲ್ಫ್ ಮೋಟಿವೇಶನ್!! ಅದೊಂದು ಮಾತ್ರ ನಮ್ಮನ್ನು ಕಾಪಾಡಬಲ್ಲದು. ಸೆಲ್ಫ್ ಮೋಟಿವೇಶನ್ ಇದ್ದವನು ಹೇಗಿರ್ತಾನೆ ಅಂದರೆ, ಭೂಮಿಯ ಗುರುತ್ವಾಕರ್ಷಣೆಯಿಂದ ತಪ್ಪಿಸಿಕೊಳ್ಳಲು ಆಕಾಶಕ್ಕೆ ಚಿಮ್ಮುವ ರಾಕೆಟ್ಟಿನಂತಿರುತ್ತಾನೆ. ಅವನೊಳಗಿನ ಉತ್ಸಾಹದ ವೇಗಕ್ಕೆ ಸಾಟಿಯೇ ಇರುವುದಿಲ್ಲ! ಗೂಗಲ್ ಮ್ಯಾಪಿನಂತಿರುತ್ತೆ ಅವನ ಸ್ಪಷ್ಟತೆ. ಒಂದು ದಾರಿ ಮುಚ್ಚಿದರೂ ಇನ್ನೊಂದು ಹುಡುಕಿಕೊಂಡು ಹೊರಟುಬಿಡುತ್ತಾನೆ. ರೈಲಿನ ಹಳಿಯಂತಿರುತ್ತೆ ಅವನೊಳಗಿನ ಗುರಿ. ಯಾವುದೇ ಕಾರಣಕ್ಕೂ ಅವನು ಟ್ರ್ಯಾಕು ತಪ್ಪುವುದಿಲ್ಲ! ಮುಖ್ಯವಾಗಿ ರೇಸ್ ಕಾರಿನಷ್ಟು ಫಿಟ್ ಅಂಡ್ ಫೈನಾಗಿರ್ತಾನೆ ಅವನು. ಯಾವಾಗ ಆನ್ ಮಾಡಿದ್ರೂ ಸೌಂಡೇ ಸೌಂಡು! ಹಾಗಿದ್ದರೆ ಮಾತ್ರ ನಮ್ಮ ಬದುಕೆನ್ನೋದು ಯಾರೇ ಕೂಗಾಡಲಿ, ಊರೇ ಹೋರಾಡಲಿ ಅನ್ನೋ ತರ ನಡೆದು ಹೋಗುತ್ತೆ! ಇಲ್ಲವಾದ್ರೆ ಇದು ಯಾರು ಬರೆದ ಕತೆಯೋ, ನನಗಾಗಿ ಬಂದ ವ್ಯಥೆಯೋ.

Read More

ಪ್ರತಿಷ್ಠಿತ ಸೇನಾ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಪ್ರತಿ ವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗಳ ತರಬೇತಿಯನ್ನು ನೀಡುತ್ತಿದ್ದು, ಪ್ರಸ್ತುತ ವರ್ಷದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಶ್ರೀ ಈಶ್ವರ ಭಟ್ ರವರು ಶುಭವನ್ನು ಹಾರೈಸಿದರು.ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಭವಿಷ್ಯದ ಸೇನಾ ಯೋಧರಾಗುವ ನಿಟ್ಟಿನಲ್ಲಿ ಪ್ರಾರ್ಥಿಸಿ ಪ್ರಸಾದ ನೀಡಲಾಯಿತು.ಈ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಶ್ರೀ ಭಾಗ್ಯೇಶ್ ರೈ ಹಾಗೂ ಅವರ ಧರ್ಮಪತ್ನಿ, ತರಬೇತುದಾರೆ ಶ್ರೀಮತಿ ರಮ್ಯಾ ಭಾಗ್ಯೇಶ್ ರೈ ರವರು ಉಪಸ್ಥಿತರಿದ್ದು, ಪಂಜಿಗುಡ್ಡೆ ಈಶ್ವರ ಭಟ್ ರವರು ವಿದ್ಯಾಮಾತಾ ಅಕಾಡೆಮಿಯ ಎಲ್ಲಾ ಸಮಾಜಮುಖಿ ಚಿಂತನೆಗಳ ಅತ್ಯುತ್ತಮ ಕೆಲಸಗಳಿಗೆ ಹಾಗೂ ಮುಖ್ಯವಾಗಿ ದೇಶ ಕಾಯುವ ಸೇನಾ ಯೋಧರನ್ನು ತಯಾರು ಮಾಡುವ ಒಳ್ಳೆಯ ಕೆಲಸಕ್ಕೆ ಸದಾ ಕ್ಷೇತ್ರದ ಹಾಗೂ ನಮ್ಮ ವೈಯಕ್ತಿಕ ನೆಲೆಯಲ್ಲಿ…

Read More

ಜೂನ್ ೨೭ರಂದು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಹಾಗೂ ಹೈಸ್ಕೂಲ್ ಇದರ ಆಶ್ರಯದಲ್ಲಿ ಕಾನೂನು ಅರಿವು ಮತ್ತು ನಶಾ ಮುಕ್ತ ಭಾರತ ಎನ್ನುವ ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈಗಿನ ಯುವ ಪೀಳಿಗೆಯು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎನ್ನುವ ನಿಟ್ಟಿನಲ್ಲಿ ಕೋಟ ಪೋಲಿಸ್ ಠಾಣೆಯ ಸಬ್ ಇನ್ಸಪೆಕ್ಟರ್ ಆಗಿರುವ ರಾಘವೇಂದ್ರ ಸಿ ಅವರು ಅತಿಥಿಯಾಗಿ ಆಗಮಿಸಿ ಈ ವಿಚಾರವಾಗಿ ಪ್ರಸ್ತಾಪಿಸಿ, ಇಂದಿನ ಯುವಜನತೆ ಮಾದಕ ವಸ್ತುಗಳ ದಾಸರಾಗುತ್ತಿರುವುದು ಅಪಾಯಕಾರಿಯ ಅಂಶವಾಗಿದೆ. ಮಾದಕ ವ್ಯಸನ ಮಾಡಿದ ವ್ಯಕ್ತಿಗೆ ಮಾತ್ರವಲ್ಲದೆ ಕುಟುಂಬವೂ ಸಹ ಅದರ ಪರಿಣಾಮಕ್ಕೆ ಕರಣರಾಗುತ್ತಾರೆ ಎಂದು ಹಲವರು ನಿದರ್ಶನಗಳ ಮೂಲಕ ತಮ್ಮ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಮನದಟ್ಟಾಗಿಸಿದರು. ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ ಯವರು ಈ ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯರ‍್ಥಿಗಳು ಮಾದಕ ದ್ರವ್ಯ ವ್ಯಸನದ ವಿರುದ್ಧ ಪ್ರತಿಜ್ಞಾವಿಧಿಯನ್ನ ಸ್ವೀಕರಿಸಿದರು. ಎಕ್ಸಲೆಂಟ್ ಪದವಿ ಪರ‍್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಪ್ರಾಸ್ತವಿಕವಾಗಿ ಮಾತನಾಡಿದರು. ಹೈಸ್ಕೂಲ್ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ…

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಫ್ರೆಶರ್ಸ್ ಡೇ ಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿ ಅಂಬಲಪಾಡಿಯ ಖ್ಯಾತ ವೈದ್ಯೆ ಡಾ. ರೂಪಶ್ರೀಯವರು ಆಗಮಿಸಿದ್ದರು. ಅವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಕಲಿಕೆಯಷ್ಟೇ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಪ್ರತಿನಿತ್ಯ ವ್ಯಾಯಾಮ ಮಾಡುವುದರ ಮೂಲಕ ತಮ್ಮ ಆರೋಗ್ಯವನ್ನು ಹಾಗೂ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಹೊಸ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಶುಭ ಹಾರೈಸಿ ಮಾತನಾಡಿ ಮುಂಜಾನೆ ಬೇಗನೆ ಎದ್ದು ನಮ್ಮ ದಿನಚರಿಗಳನ್ನು ಪ್ರಾರಂಭಿಸಬೇಕು. ಸಮಯವನ್ನು ವ್ಯರ್ಥ ಮಾಡದೆ ಒಂದಲ್ಲಾ ಒಂದು ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಸಂಸ್ಥೆಗೆ ಹೊಸದಾಗಿ ಸೇರಿಕೊಂಡ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭಕೋರಿದರು. ಶಿಕ್ಷಕವೃಂದ, ವಿದ್ಯಾರ್ಥಿಗಳು ತಮ್ಮ ಪ್ರತಿಭಾ ಪ್ರದರ್ಶನ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ ಜಿ ಎಮ್ ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲರಾದ ಪ್ರಣವ್ ಶೆಟ್ಟಿ,…

Read More

ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ. ಎಂದು ಶ್ರೀ ಕೆ. ರಾಜೇಂದ್ರ ಭಟ್ ತಿಳಿಸಿದರು. ಕ್ರಿಯೇಟಿವ್ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜರುಗಿತು. ರಾಷ್ಟ್ರೀಯ ಮಟ್ಟದ ಜೆಸಿಐ ತರಬೇತುದಾರರು ಹಾಗೂ ಖ್ಯಾತ ವಾಗ್ಮಿಗಳಾದ ಶ್ರೀ ಕೆ.ರಾಜೇಂದ್ರ ಭಟ್ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶರೀರದ ಒಳಗಿನಿಂದ ಎನರ್ಜಿ ಸೃಷ್ಟಿಸಿಕೊಂಡಾಗ ದೊರೆಯುವುದೇ ಸ್ಫೂರ್ತಿ, ವಿದ್ಯಾರ್ಥಿಗಳು ಪ್ರಯೋಗ ಮಾಡಬಹುದಾದ 10 ಸ್ಪೂರ್ತಿಗಳ ಬಗ್ಗೆ ಉದಾಹರಣೆಗಳನ್ನು ನೀಡುತ್ತಾ ತಿಳಿಸಿದರು. ಎಲ್ಲ ಮಕ್ಕಳು ಅದ್ಭುತವನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಓದುವಿಕೆಯಲ್ಲಿ ಮೌನ ಓದುವಿನಿಂದಾಗುವ ಅನೇಕ ಲಾಭಗಳನ್ನು ತಿಳಿಸುತ್ತಾ, ಸ್ಮಾರ್ಟ್ ವರ್ಕ್ ಮಾಡಿದರೆ ಯಾವುದೇ ವಿಷಯಗಳು ಕಠಿಣವೆನಿಸುವುದಿಲ್ಲ ಕಡಿಮೆ ಪರಿಶ್ರಮ ಹಾಕಿ, ಆಸಕ್ತಿಯಿಂದ ಕೆಲಸ…

Read More

ಅಮ್ಮನ ನೆರವು ಟ್ರಸ್ಟ್(ರಿ) ಸಂಸ್ಥೆಯಿಂದ ಬೈಲೂರು ಮತ್ತು ಸುತ್ತಮುತ್ತಲ ಶಾಲೆಗಳ ಪ್ರತಿಭಾವಂತ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮವು ಬೈಲೂರು ಜ್ಯೂನಿಯರ್ ಕಾಲೇಜಿನ ಸಭಾಂಗಣದಲ್ಲಿ ಜೂನ್ 26 ರಂದು ನಡೆಯಿತು. ಕಾರ್ಕಳದ ಶಾಸಕರಾದ ವಿ.ಸುನೀಲ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅವರು ಮಾತನಾಡಿ ಅಕ್ಷರ ಕ್ರಾಂತಿಯಿಂದ ಸಮಗ್ರ ಸಮಾಜದ ಅಭಿವೃದ್ಧಿ ಆಗುತ್ತದೆ. ಅಮ್ಮನ ನೆರವು ಟ್ರಸ್ಟ್ ಸರಕಾರಿ ಶಾಲೆಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ದೊಡ್ಡ ಮೊತ್ತದ ವಿದ್ಯಾರ್ಥಿ ವೇತನವನ್ನು ನೀಡುವುದರ ಮೂಲಕ ಒಂದು ಉತ್ತಮ ಮೇಲ್ಪಂಕ್ತಿ ಹಾಕಿಕೊಟ್ಟಿದೆ ಎಂದರು. ಟ್ರಸ್ಟ್ ನ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿಯಂತಹ ಯುವಕರು ಈ ಟ್ರಸ್ಟ್ ಸ್ಥಾಪನೆ ಮಾಡಿದ್ದು ತಾಲೂಕಿನಾದ್ಯಂತ ನೂರಾರು ವಿದ್ಯಾರ್ಥಿಗಳಿಗೆ ಅಂದಾಜು 16 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದವರು ಹೇಳಿದರು. ತಾಲೂಕಿನ ಏಳು ಕೇಂದ್ರಗಳಲ್ಲಿ ಈ ವಿದ್ಯಾರ್ಥಿ ವೇತನ ವಿತರಣೆಯ ಕಾರ್ಯಕ್ರಮಗಳು ನಡೆಯಲಿದ್ದು, ಅದರ ಮೊದಲ ಹಂತದ…

Read More

ಮುಂಬೈ ಕಲಾಜಗತ್ತು ಕ್ರಿಯೇಷನ್ಸ್ ವತಿಯಿಂದ ಶ್ರೀ ಕ್ಷೇತ್ರ ವಜ್ರೇಶ್ವರೀ ಪರಶುರಾಮ ಕುಂಡ, ತುಂಗರೇಶ್ವರ ಬಾಲಯೋಗಿ ಶ್ರೀ ಸದಾನಂದ ಮಹಾರಾಜ ಸ್ವಾಮೀಜಿಯವರ ಗುರುವಂದನಾ ಸಮಾರಂಭ ಹಾಗೂ ಡಾ| ಜಿ.ಪಿ ಕುಸುಮಾರವರು ಭಾಷಾಂತರಗೊಳಿಸಿದ ಸ್ವಾಮೀಜಿಯವರ ಐತಿಹಾಸಿಕ ಸಂಗೀತ ನಾಟಕ ‘ಚೋಖಾ ಮೇಳ’ ಕನ್ನಡ ನಾಡಿನ ನಾಮಾಂಕಿತ ಸಂಗೀತ ಕಲಾವಿದರ ಸಮಾಗಮದಲ್ಲಿ ಪ್ರದರ್ಶನಗೊಳ್ಳಲಿದೆ. ರಂಗಭೂಮಿಯಲ್ಲಿ ಲಿಮ್ಕಾ ಬುಕ್ ರಾಷ್ಟ್ರೀಯ ದಾಖಲೆ ಮಾಡಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ತೋನ್ಸೆ ವಿಜಯಕುಮಾರ್ ಶೆಟ್ಟಿ ನಿರ್ದೇಶನದ ಕನ್ನಡ ಸಂಗೀತ ನಾಟಕ ‘ಚೋಖಾ ಮೇಳ’ ಅದ್ಬುತ ಸಂಯೋಜನೆಯಲ್ಲಿ ಸಂಗೀತ ನಾಟಕದ ಪ್ರಥಮ ಪ್ರದರ್ಶನಗೊಳ್ಳಲಿದೆ. ಶತಕಗಳ ಹಿಂದೆ ಮಹಾರಾಷ್ಟ್ರದಲ್ಲಿ ಪಂಡರಪುರದ ವಿಠ್ಟೋಭ ದೇವರ ಮಹಿಮೆಯನ್ನು ತನ್ನ ಅಭಂಗ ಹಾಡುಗಳ ಮೂಲಕ ಹಾಡಿ ಹೊಗಳುತ್ತಿದ್ದ ಸಂತ ಚೋಖಾನ ಕಥೆಯಿದು. ಈ ಕಥೆಯನ್ನು ಅವಧೂತ ಭಗವಾನ್ ಶ್ರೀ ನಿತ್ಯಾನಂದರ ಅನುಯಾಯಿ ಸ್ವಾಮಿ ಸದಾನಂದ ಮಹಾರಾಜ ಮರಾಠಿಯಲ್ಲಿ ಬರೆದ ‘ಚೋಖಾ ಮೇಳ’ ಎಂಬ ಸಂಗೀತ ನಾಟಕವನ್ನು ಡಾ| ಜಿ.ಪಿ ಕುಸುಮಾ ಕನ್ನಡಕ್ಕೆ ಭಾಷಾಂತರಿಸಿದ್ದಾರೆ. ಇದು ರಂಗ…

Read More

ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರು ತಾಲೂಕು ವ್ಯಾಪ್ತಿಯ ಬಂಟ ಸಮಾಜದ 2024-25ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡ 95 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಸ್ವಯಂ ಲಿಖಿತ ಅರ್ಜಿಯ ಜೊತೆ ಆಧಾರ್ ಕಾರ್ಡಿನ ಪ್ರತಿ ಮತ್ತು ಅಂಕಪಟ್ಟಿಯ ಪ್ರತಿ, ಒಂದು ಪಾಸ್‌ಪೋರ್ಟ್ ಸೈಜ್ ಪೊಟೋವನ್ನು ಜುಲೈ 10 ರ ಒಳಗೆ ಬಂಟರ ಯಾನೆ ನಾಡವರ ಮಾತೃಸಂಘ ಕಛೇರಿ, ಅಮೃತೋತ್ಸವ ಕಟ್ಟಡ, ಬಂಟ್ಸ್ ಹಾಸ್ಟೇಲ್ ಮಂಗಳೂರು ಇಲ್ಲಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9343562173, 9448858292, 9480015895 ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

Read More

ಹೈನಾ ಚಿತ್ರದ ಮೂಲಕ ಬಾಂಗ್ಲಾದೇಶದಿಂದ ನಡೆಯುವ ಗಡಿ ಮೀರಿ ಅಕ್ರಮ ಪ್ರವೇಶದಂತಹ ಗಂಭೀರ ವಿಷಯವನ್ನ ಎತ್ತಿಹಿಡಿದ ನಿರ್ದೇಶಕ ವೆಂಕಟ್ ಭಾರದ್ವಾಜ್, ಇದೀಗ ಹೇ ಪ್ರಭು ಚಿತ್ರದ ಮೂಲಕ ಮತ್ತೊಂದು ಸಮಾಜಮುಖಿ ಹಾಗೂ ಪ್ರಸ್ತುತ ಸನ್ನಿವೇಶಕ್ಕೆ ಸೂಕ್ತವಾದ ವಿಷಯವನ್ನು ಓಲೈಸಿದ್ದಾರೆ. ಈ ಬಾರಿ ಅವರು ಸ್ಪರ್ಶಿಸಿರುವ ವಿಷಯ ಫಾರ್ಮ ಲಾಬಿ ಮತ್ತು ವೈದ್ಯರ ಜೀವನ. ಹೇ ಪ್ರಭು ಎಂಬ ಚಿತ್ರವು ನಮ್ಮ ಗ್ರಾಮಗಳು ಮತ್ತು ಗ್ರಾಮಸ್ಥರು ದೇಶದ ಆರ್ಥಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ನೀಡುತ್ತಿರುವ ನಿರಂತರ ಬೆಂಬಲವನ್ನು ಮತ್ತು ಅವರ ಮಹತ್ವವನ್ನ ತೀವ್ರವಾಗಿ ಒತ್ತಿಹೇಳುತ್ತದೆ. ಹೇ ಪ್ರಭು ಚಿತ್ರ ವೀಕ್ಷಕರನ್ನು ನಗೆಯ ಕಡಲಲ್ಲಿ ಮುಳುಗಿಸುತ್ತದೆ ಎಂದು ನಿರ್ದೇಶಕರು ಹೇಳುತ್ತಾರೆ . ಪ್ರಚಲಿತ ಸೋಶಿಯಲ್ ಮೀಡಿಯಾ ಎಂಬ ಮಾಯೆಯ ಅಲೆಯಲ್ಲಿ ಮೇಲೆದ್ದು ಹೆಸರು ಮಾಡಿರುವ ವ್ಯಕ್ತಿಗಳ ಪರಿಚಯ ಸಿನಿಮಾದಲ್ಲಿ ತೋರಿಸಲಾಗಿದೆ. “from scratch to success” ಎಂಬಂತೆ ಕೆಲವು ನಿಜ ಘಟನೆ ಸಾರಾಂಶವನ್ನು ಇಲ್ಲಿ ಹೇ ಪ್ರಭು ಹೇಳುತ್ತಾನೆ. ಇಂದು ಸಾಮಾಜಿಕ ಜಾಲತಾಣಗಳಲ್ಲಿ “ಹೇ…

Read More