Author: admin

ಆಟಿ ತಿಂಗಳ ಮಹತ್ವವನ್ನು ಕೇವಲ ಸಂಪ್ರದಾಯಿಕವಾಗಿ ಆಚರಿಸುವುದಕ್ಕಿಂತ ವರ್ಷವಿಡೀ ಅನುಸರಿಸಿದರೆ ಜೀವನದಲ್ಲಿ ಸಂತೋಷ ಕಾಣಬಹುದು. ಇಂದು ನಾವು ಪ್ರಾಕೃತಿಕ ತಿಂಡಿ ತಿನಿಸುಗಳನ್ನು ಬದಿಗಿಟ್ಟು ರಾಸಾಯನಿಕ ಬೆರಕೆಯ ತಿನಿಸುಗಳನ್ನು ಬಯಸುತ್ತಿದ್ದೇವೆ. ಆದರಿಂದ ವಿವಿಧ ತರದ ರೋಗ ರುಜಿನಗಳನ್ನು ಆಹ್ವಾನಿಸುತ್ತಿದ್ದೇವೆ. ಮಕ್ಕಳಿಗೆ ಬಾಲ್ಯದಿಂದಲೇ ನಮ್ಮ ಪ್ರಾಕೃತಿಕ ತಿಂಡಿ ತಿನಿಸುಗಳನ್ನು ಪರಿಚಯಿಸುವ ಕಾರ್ಯವನ್ನು ಪಾಲಕರು ಮಾಡಬೇಕು ಎಂದು ಬಂಟ್ಸ್ ಫೋರಮ್ ಮೀರಾ – ಭಯಂದರಿನ ಅಧ್ಯಕ್ಷ ಇನ್ನ ಚಂದ್ರಹಾಸ ಕೆ. ಶೆಟ್ಟಿ ನುಡಿದರು. ಅವರು ಬಂಟ್ಸ್ ಫೋರಮ್ ಮೀರಾ – ಭಾಯಂದರಿನ ಮಹಿಳಾ ವಿಭಾಗದ ಮುಂದಾಳತ್ವದಲ್ಲಿ ಆ.2 ರಂದು ಮೀರಾರೋಡ್ ಪೂರ್ವದ ಸುರಭಿ ಹೋಟೆಲಿನ ಸಭಾಗ್ರಹದಲ್ಲಿ ನಡೆದ ಆಟಿದ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸಂಸ್ಥೆಯ ಗೌರವಾಧ್ಯಕ್ಷ ಸಂತೋಷ್ ರೈ ಬೆಳ್ಳಿಪಾಡಿ ಮಹಿಳಾ ವಿಭಾಗದ ಸದಸ್ಯೆಯರ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಂತೋಷ ವ್ಯಕ್ತಪಡಿಸಿ, ಮುಂದಿಗೂ ಇದೇ ರೀತಿಯಲ್ಲಿ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಸಹಕರಿಸಬೇಕು. ಇಂತಹ ಸಮಾರಂಭಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಭಾಗವಹಿಸುವಂತಾಗಬೇಕು. ನಮ್ಮ ಸಂಸ್ಕೃತಿಯನ್ನು ಉಳಿಸುವಲ್ಲಿ ಶ್ರಮಿಸಬೇಕು ಎಂದರು.…

Read More

ದೇಶದಲ್ಲಿ ಕಳೆದೊಂದು ದಶಕದಿಂದೀಚೆಗೆ ತೀವ್ರ ಚರ್ಚೆಗೀಡಾಗಿರುವ ಸಮಾನ ನಾಗರಿಕ ಸಂಹಿತೆ(ಯುಸಿಸಿ) ಜಾರಿ ವಿಷಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೇಂದ್ರದಲ್ಲಿನ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ನೇತೃತ್ವ ವಹಿಸಿರುವ ಬಿಜೆಪಿ ಯುಸಿಸಿ ಜಾರಿಗೆ ಈ ಹಿಂದಿನಿಂದಲೂ ಒಲವು ತೋರುತ್ತಲೇ ಬಂದಿದೆ. ಬಿಜೆಪಿ ತನ್ನ ಚುನಾವಣ ಪ್ರಣಾಳಿಕೆಗಳಲ್ಲಿ ಯುಸಿಸಿ ಜಾರಿಯನ್ನು ಪ್ರಸ್ತಾವಿಸುತ್ತಲೇ ಬಂದಿದೆ. ಕಳೆದೆರಡೂ ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಬಹುಮತ ಗಳಿಸಿ ಮೈತ್ರಿ ಸರಕಾರದ ನೇತೃತ್ವ ವಹಿಸಿರುವುದರಿಂದ ಯುಸಿಸಿ ಜಾರಿಯ ಪರವಾಗಿರುವವರು ಸರಕಾರದ ಮೇಲೆ ತೀವ್ರ ಒತ್ತಡ ಹೇರುತ್ತಿರುವ ಹೊರತಾಗಿಯೂ ಕೇಂದ್ರ ಸರಕಾರ ಹೆಚ್ಚಿನ ಆತುರ ತೋರದೆ ಭಾರೀ ಎಚ್ಚರಿಕೆಯ ನಡೆಯನ್ನು ಅನುಸರಿಸುತ್ತ ಬಂದಿದೆ. ಯುಸಿಸಿ ಜಾರಿಗೊಳಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕಳೆದ ವರ್ಷ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ದೇಶದಲ್ಲಿರುವ ಬೇರೆ ಬೇರೆ ಧರ್ಮ, ಪಂಗಡಗಳಿಗೆ ಸೇರಿದ ಜನರು ಆಸ್ತಿ, ವಿವಾಹಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಕಾನೂನುಗಳನ್ನು ಅನುಸರಿಸುವುದು ದೇಶದ ಏಕತೆಗೆ…

Read More

ಅದು 20ನೇ ಶತಮಾನ!, ಚಿಗುರು ಮೀಸೆಯ ಯವ್ವನದ ದಿನ. ಕಾಲೇಜಿನ ಮೆಟ್ಟಿಲನ್ನು ಹತ್ತಿ ವಿದ್ಯಾಸರಸ್ವತಿಯನ್ನು ಒಲಿಸುವ ಸಂಧರ್ಭ, ಬಿಸಿ ರಕ್ತದ ಸಮಯ, ಎಲ್ಲದಕ್ಕೂ ಸಿದ್ದವಿದ್ದ ಹೊತ್ತು. ಹೀಗೆ ಕಾಲೇಜಿನ ದಿನಗಳಲ್ಲಿ ಪರಿಚಯವಾದ ಒಬ್ಬ ಅತೀ ಹತ್ತಿರದ ಗೆಳೆಯನ ಬಗ್ಗೆ ಇಂದಿನ ಲೇಖನ. ಸುದೃಡ ವ್ಯಕ್ತಿತ್ವ, ಮುಖದಲ್ಲಿ ಮಂದಹಾಸ, ಎಲ್ಲವನ್ನೂ ಗೆಲ್ಲುವ ಉತ್ಸಾಹ, ಹೀಗೆ ಮೊದಲ ಭೇಟಿಯಲ್ಲೇ ಡಿಫರೆಂಟ್ ಇಂಪ್ರೆಷನ್ ಮೂಡಿಸಿ ಪರಿಚಯವಾದ ಗೆಳೆಯನೇ ಮಿಥುನ್ ರೈ. ಹೌದು ! ನನ್ನ ಹಾಗೂ ಮಿಥುನ್ ರೈ ಗೆಳೆತನ ಇಂದು ನಿನ್ನೆಯದಲ್ಲ, ಕಾಲೇಜಿನ ದಿನಗಳಿಂದ ಮಿಥುನ್ ರೈಯ ಏಳು ಬೀಳುಗಳನ್ನು ಬಹಳ ಹತ್ತಿರದಿಂದ ನೋಡಿದವ ನಾನು. ಬಹಳ ಸರಳ ವ್ಯಕ್ತಿ, ಶ್ರೀಮಂತ ಮನೆತನದಿಂದ ಹುಟ್ಟಿ ಬಂದರೂ ಗೆಳೆತನ ಎಂಬ ವಿಚಾರ ಬಂದಾಗ ಎಲ್ಲರೊಂದಿಗೂ ಮೇಲು ಕೀಳು ಎಂಬ ಭೇಧ ಭಾವವಿಲ್ಲದೆ ಬೆರೆಯುವ ಗುಣ. ತನ್ನವರಿಗೊಂದು ಸಮಸ್ಯೆ ಎಂದರೆ ಮೊದಲು ನಿಲ್ಲುವ ಮನಸ್ಸು ! ಮಿಥುನ್ ರೈ ಎಲ್ಲಿಯ ಮಟ್ಟಿಗೆ ಡೌನ್ ಟು ಅರ್ಥ್ ವ್ಯಕ್ತಿಯೆಂದರೆ…

Read More

ಐತಿಹಾಸಿಕ, ಜಗತ್ಪ್ರಸಿದ್ದಿ ಶ್ರವಣಬೆಳಗೊಳದ ವಿಂಧ್ಯಗಿರಿ ತಾಣ ಅಪಾಯದ ಅಂಚಿನ ಮರೀಚಿಕೆ….! ಕಣ್ಣಿದ್ದು ಕುರುಡಾದ ಪುರಾತತ್ವ ಇಲಾಖೆ…!  ಸಹಸ್ರಾರು ವರ್ಷಗಳ ಹಿಂದಿನ ದಂತಕಥೆ ನೆಲಸಮದ ಭೀತಿಯಲ್ಲಿ…..! ಬಾಹುಬಲಿ ನೆಲೆಸಿರುವ ಬೆಟ್ಟದಿಂದ ಜಾರಿದೆ ಬೃಹದಾಕಾರದ ಕಲ್ಲುಗಳು, ಪುರಾತತ್ವ ಇಲಾಖೆ, ಅಧಿಕಾರಿಗಳು ಮೌನ….!? – ಕೆ. ಸಂತೋಷ ಶೆಟ್ಟಿ, ಮೊಳಹಳ್ಳಿ ಕುಂದಾಪುರ, ಉಡುಪಿ ಜಿಲ್ಲೆ (ಪತ್ರಕರ್ತರು ಮಾಧ್ಯಮ ವಿಶ್ಲೇಷಕರು) ಐತಿಹಾಸಿಕ ಪುರಾಣ ಪ್ರಸಿದ್ಧ ವಿಂಧ್ಯಗಿರಿ ಬೆಟ್ಟ ಕುಸಿಯುವ ಭೀತಿಯಲ್ಲಿದೆ. ಸಾವಿರ ಸಾವಿರ ಭಕ್ತರು ದಿನನಿತ್ಯ ವಿಂಧ್ಯಗಿರಿ ಬೆಟ್ಟಕ್ಕೆ ಭೇಟಿ ನೀಡಿ ಪ್ರವಾಸ ತಾಣದ ಅನುಭವ ಪಡೆದುಕೊಳ್ಳುತ್ತಾರೆ ಆದರೆ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ಜೀವಕ್ಕೆ ಕುತ್ತು ತರುವ ಭೀತಿ ಎದುರಾಗುತ್ತಿದೆ.ಅದು ವಿಶ್ವ ವಿಖ್ಯಾತ ತಾಣ.. ರಾಷ್ಟ್ರೀಯ ಸ್ಮಾರಕ ಎಂದು ಕೇಂದ್ರ ಸರ್ಕಾರದಿಂದ ಗುರ್ತಿಸಿಕೊಂಡಿರುವ, ಅಹಿಂಸಾ ಮೂರ್ತಿ ಬಾಹುಬಲಿ ಸ್ವಾಮಿ ನೆಲೆಸಿರೋ ಪುಣ್ಯ ಕ್ಷೇತ್ರ (shravanabelagola). ನಿತ್ಯ ಸಹಸ್ರಾರು ಭಕ್ತರು ಬಂದು ಇಲ್ಲಿನ ಬಾಹುಬಲಿ ಏಕ ಶಿಲಾ ವಿಗ್ರಹ ನೋಡಿ ಪುಳಕಿತರಾಗುತ್ತಾರೆ. ಇಂತಹ ಪುಣ್ಯ ಕ್ಷೇತ್ರವನ್ನ ಕೇಂದ್ರ ಪುರಾತತ್ವ…

Read More

ಮುಂಬಾಯಿ, ಜು.13:  ಕರ್ನಾಟಕ ಜಾನಪದ ಕಲೆಯನ್ನು ಉಳಿಸಿ ಬೆಳೆಸಿ ,  ಅದನ್ನು ಇಂದಿನಿಂದ ಮತ್ತು ಮುಂದಿನ ಜನಾಂಗಕ್ಕೆ ತಿಳಿಯ ಪಡಿಸಿ  ಬಾವೀ ಜನಾಂಗಕ್ಕೆ ಹಸ್ತಾಂತರಿಸುವ ̧ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ಕರ್ನಾಟಕ ಜಾನಪದ ಪರಿಷತ್ತು (ರಿ.)  ಬೆಂಗಳೂರು ಇದರ ಮಹಾರಾಷ್ಟ್ರ ಘಟಕವು ಇದೇ ಜು.೨೩ನೇ ಶನಿವಾರ ̧ಸಂಜೆ ೩.೦೦ ಗಂಟೆಯಿಂದ ಬಂಟರ  ಸಂಘ ಮುಂಬಾಯಿ ಇದರ ಅನೇಕ್ಸ್ ಕಟ್ಟಡದ ಎರಡನೇ ಮಹಡಿಯಲ್ಲಿನ ಶ್ರೀಮತಿ ರಂಜನಿ ಸುಧಾಕರ ಹೆಗ್ಡೆ ಸಮಾಜ ಕಲ್ಯಾಣ ಸಭಾ ಭವನದಲ್ಲಿ  ಕರ್ನಾಟಕ ಜಾನಪದ ಪರಿಷತ್ತು(ರಿ.) ಬೆಂಗಳೂರು ಮಹಾರಾಷ್ಟ್ರ ಘಟಕ ಇದರ ಅಧ್ಯಕ್ಷ ಡಾ| ಆರ್.ಕೆ ಶೆಟ್ಟಿಇವರ ಅಧ್ಯಕ್ಷತೆಯಲ್ಲಿ ಮುಂಬಾಯಿ ಮಹಾನಗರದಲ್ಲಿನ ಜನತೆಗೆ ‘ಜಾನಪದ  ಕಲೆಯ ಬೆಳವಣಿಗೆ,  ಉತ್ತರದಲ್ಲಿ-ದಕ್ಷಿಣದಲ್ಲಿ’  ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ಆಯೋಜಿಸಿದೆ. ಘಟಕದ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ  ಶ್ರೀನಿವಾಸ ಸಪಲ್ಯ ಇವರು  ‘ಜಾನಪದ ಕಲೆಯ ದಕ್ಷಿಣ ಕನ್ನಡದ ನಡಿಗೆ’ ಬಗ್ಗೆ ಮತ್ತು ಹಿರಿಯ  ಲೇಖಕಿ ಲಲಿತ ಅಂಗಡಿ ಇವರು ‘ಉತ್ತರ ಕನ್ನಡದಲ್ಲಿ  ಬೆಳೆಯುತ್ತಿರುವ ಜಾನಪದ ಕಲೆ’ ಬಗ್ಗೆ…

Read More

ಜೀರ್ಣೋದ್ದಾರಗೊಳ್ಳಲಿರುವ ಮೂಡಬಿದಿರೆಯ ಶಿರ್ತಾಡಿ ವಾಲ್ಪಾಡಿ ಗ್ರಾಮಗಳ ಅರ್ಜುನಾಪುರದ ಸುಮಾರು 1000 ವರ್ಷಗಳ ಪುರಾತನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಪುಣೆಯ ಉದ್ಯಮಿ, ಸಮಾಜಸೇವಕ ನಾರಾಯಣ ಕೆ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ನಾರಾಯಣ ಶೆಟ್ಟಿಯವರು ಪುಣೆಯಲ್ಲಿ ಸಮಾಜಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಓಡಿಯೂರು ಶ್ರೀಗಳ ಷಷ್ಟಬ್ದ ಸಂಭ್ರಮ ಪುಣೆ ಸಮಿತಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಶ್ರೀ ಗುರುದೇವಾ ಸೇವಾ ಬಳಗ ಪುಣೆ, ಪುಣೆ ಬಂಟ್ಸ್ ಅಸೋಸಿಯೇಷನ್ ಇದರ ಅಧ್ಯಕ್ಷರಾಗಿಯೂ ಪ್ರಸ್ತುತ ಹಲವಾರು ಸಂಘ ಸಂಸ್ಥೆಗಳಿಗೆ ಸಲಹೆಗಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಪುರಾತನ ಹಾಗೂ ಕಾರಣೀಕದ ಕ್ಷೇತ್ರವಾಗಿದೆ. ದ್ವಾಪರ ಯುಗದಲ್ಲಿ ಅರ್ಜುನನು ಈ ಸ್ಥಳದಲ್ಲಿ ತಪಸ್ಸು ಮಾಡಿದ್ದರಿಂದ ಇಲ್ಲಿಗೆ ಅರ್ಜುನಾಪುರ ಎಂಬ ಹೆಸರು ಬಂದಿದೆ ಎನ್ನುವ ಪ್ರತೀತಿಯಿದೆ.ಜೀರ್ಣಾವಸ್ಥೆಯಲ್ಲಿರುವ ದೇವಾಲಯದೊಳಗೆ ಲಿಂಗರೂಪಿಯಾದ ಶಿವನು ಭಕ್ತರ ಬೇಡಿಕೆಯನ್ನು ಈಡೇರಿಸಿಕೊಂಡು ಬರುತ್ತಿದ್ದು ಸುತ್ತಮುತ್ತಲಿನ ಊರಿನ ಗ್ರಾಮಸ್ಥರಿಗೆ ಈ ದೇವಾಲಯವೇ ಭಕ್ತಿಯ ಆರಾಧನಾ ಕೇಂದ್ರವಾಗಿದೆ. ಇದೀಗ ದೇವಸ್ಥಾನದ ಜೀರ್ಣೋದ್ದಾರಕ್ಕೆ ಊರ ಪರವೂರ ಮಹನೀಯರು ಸೇರಿಕೊಂಡು ಸಂಕಲ್ಪ…

Read More

ವಿದ್ಯಾಗಿರಿ: ‘ಬದುಕಿನ ಯಶಸ್ಸು ಪಂಚ ‘ವ’ ಕಾರಗಳಲ್ಲಿ ಅಡಗಿದೆ’ ಎಂದು ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹೊಸ ವಿದ್ಯಾರ್ಥಿಗಳ ಸ್ವಾಗತ ‘ಪರಿಚಯ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ವಪು (ದೇಹ), ವಸ್ತ್ರ, ವಿದ್ಯೆ, ವಿನಯ, ವಾಕ್ (ಮಾತುಗಾರಿಕೆ) ಎಂಬ ಐದು ವಕಾರಗಳು ಪಂಚಸೂತ್ರಗಳಾಗಿವೆ’ ಎಂದು ವಿವರಿಸಿದ ಅವರು, ‘ಪತ್ರಿಕೋದ್ಯಮ ವಿದ್ಯಾರ್ಥಿಗಳೂ ಪತ್ರಿಕಾ ಧವರ್ವನ್ನು ಪಾಲಿಸಬೇಕು. ಉತ್ತಮ ಪತ್ರಕರ್ತರಾಗಲು ಪ್ರಯತ್ನಿಸಬೇಕು’ ಎಂದರು. ‘ಪ್ರತಿ ವ್ಯಕ್ತಿಯ ಜೀವನದಲ್ಲಿ ತಾಯಿ, ತಾಯಿನಾಡು, ತಾಯಿಭಾಷೆ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಗುರು ಬಹುಮುಖ್ಯ. ಇವುಗಳ ಅರಿವು ಬದುಕಿನ ಉನ್ನತಿಗೆ ಕಾರಣವಾಗುತ್ತವೆ’ ಎಂದರು. ‘ಯಾವಾಗಲೂ ಆಂತರ್ಯದಲ್ಲಿ ವಿನಯವನ್ನು ಹೊಂದಿದ ವ್ಯಕ್ತಿಯೇ ಸಮಾಜದಲ್ಲಿ ಜಯಿಸುತ್ತಾನೆ. ಅಹಂ ಹೊಂದಿದ ವ್ಯಕ್ತಿಯು ವಿನಯವಂತಿಕೆಯನ್ನು ನಟಿಸಿದರೂ ಪ್ರಯೋಜನ ಆಗದು. ಅದು ಮನಸ್ಸಿನ ಅಂತರಾಳದಿಂದ ಬರಬೇಕು’ ಎಂದರು. ‘ಎಲ್ಲರನ್ನೂ ಪ್ರೀತಿ- ಸಮಾನತೆಯಿಂದ ಕಾಣುವ, ಗೌರವಿಸುವ ವ್ಯಕ್ತಿತ್ವ ರೂಢಿಸಿಕೊಳ್ಳಿ. ನಿಮ್ಮ ಕೆಲಸಕ್ಕಿಂತ ಹೆಚ್ಚಾಗಿ ನಿಮ್ಮ…

Read More

ಬಂಟ್ಸ್ ಫ್ಯಾಮಿಲಿ ಯು.ಎ.ಇ. ವತಿಯಿಂದ ವರ್ಷಂಪ್ರತಿ ನಡೆಸುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ನವಂಬರ್ 19 ರಂದು ದುಬಾಯಿಯಲ್ಲಿ ನಡೆಯಲಿದೆ. ನವಂಬರ್ 19 ರಂದು ದುಬಾಯಿಯ ಅಲ್ ಗಿಸಾಸ್ ನ ಇಂಡಿಯನ್ ಅಕಾಡೆಮಿಕ್ ಸ್ಕೂಲ್ ಸಭಾಂಗಣದಲ್ಲಿ ಬೆಳಿಗ್ಗೆ ಒಂಬತ್ತರಿಂದ ಮಧ್ಯಾಹ್ನ ಎರಡು ಗಂಟೆಯ ವರೆಗೆ ಹಲವಾರು ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಹಾಗೂ ಯು.ಎ.ಇ.ಯಲ್ಲಿ ಇರುವ ಎಲ್ಲರೂ ಈ ಪೂಜೆಗೆ ಬಂದು ಶ್ರೀ ಸತ್ಯನಾರಾಯಣ ದೇವರ ಕೃಪೆಗೆ ಪಾತ್ರರಾಗಬೇಕೆಂದು ಯು.ಎ.ಇ. ಬಂಟ್ಸ್ ನ‌ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.), ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 02-10-2023 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ “ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಯೋಜಿಸಲಾದ” ಜನಜಾಗೃತಿ ಜಾಥಾ ಮತ್ತು ಸಮಾವೇಶ – 2023″ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಸತ್ಯಾನಂದ ನಾಯಕ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್…

Read More

ಸೆಪ್ಟೆಂಬರ್ ತಿಂಗಳ 16ನೇ ತಾರೀಕು ಶನಿವಾರ ರಾತ್ರಿ 8:00 ಗಂಟೆಗೆ ಐಲೇಸಾ ದಿ ವಾಯ್ಸ್ ಆಫ್ ಒಷನ್ (ರಿ)ಡಿಜಿಟಲ್ ವೇದಿಕೆಯಲ್ಲಿ ‘ಗಂಟ್ ಕಲ್ವೆರ್’ ತುಳು ಚಲನಚಿತ್ರದ ಹಾಡು ಬಿಡುಗಡೆಯಾಗಲಿದೆ. ಜಾಗತಿಕ ತುಳು ಸಾಂಸ್ಕೃತಿಕ ರಾಯಭಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅಬುಧಾಬಿಯ ಸರ್ವೋತ್ತಮ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹಾಡನ್ನು ಬಿಡುಗಡೆಗೊಳಿಸಲಿದ್ದಾರೆ. ಚಿತ್ರದ ಪಾತ್ರವರ್ಗದ ನಾಯಕ ನಾಯಕಿ ಮತ್ತು ಹಾಸ್ಯ ನಟರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ವಿ ಮನೋಹರ್ ಅವರು ಸಂಗೀತ ನೀಡಿರುವ ಹಾಡನ್ನು ಐಲೇಸಾ ಸಂಸ್ಥೆಯ ಹೆಮ್ಮೆಯ ಹಾಡುಗಾರ ಸುಧಾಕರ್ ಶೆಟ್ಟಿಯವರು ಹಾಡಿದ್ದು ಚಿತ್ರವನ್ನು ಸುಧಾಕರ್ ಬನ್ನಂಜೆಯವರು ನಿರ್ದೇಶಿಸಿದ್ದಾರೆ. ಮಂಗಳೂರು, ಮೂಡಬಿದ್ರಿ ಮತ್ತು ಉಡುಪಿ ಪರಿಸರದಲ್ಲಿ ಚಿತ್ರೀಕರಣ ಮುಗಿಸಿರುವ ಹಾಸ್ಯಮಯ ಚಿತ್ರದಲ್ಲಿ ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಸುಂದರ್ ರೈ ಮಂದಾರ, ಉಮೇಶ್ ಮಿಜಾರ್, ಪ್ರದೀಪ್ ಆಳ್ವ ಕದ್ರಿ, ಪ್ರೇರಣಾ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ದಿಶಾ ಪುತ್ರನ್, ಸುಧೀರ್ ಕೊಟ್ಟಾರಿ ಇವರ ಭರ್ಜರಿ…

Read More