Author: admin
ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದಕ್ಕೆ ಪೂರಕವಾಗಿ ರಾಜ್ಯ ಭಾಷೆಯನ್ನಾಗಿ ಘೋಷಿಸಬೇಕು ಎಂಬ ತುಳುನಾಡಿಗರ ಬೇಡಿಕೆ ಇನ್ನೂ ಈಡೇರಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ರಚಿಸಿದ ಸಮಿತಿಯ ವರದಿಯೇ ಬಹಿರಂಗಗೊಂಡಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ಕರಾವಳಿಗರೇ ಆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮೇಲೆ ತುಳುನಾಡಿಗರಿಗೆ ಅಪಾರ ನಿರೀಕ್ಷೆ ಇತ್ತು. ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸುವ ಭರವಸೆಯನ್ನೂ ನೀಡಿದ್ದರು. ಆದರೆ ಈಡೇರಲಿಲ್ಲ. ಇದೀಗ ಕಾಂಗ್ರೆಸ್ ನೂತನ ಸರಕಾರ ರಚನೆಯಾಗಿದ್ದು, ಮಂತ್ರಿಮಂಡಲವೂ ಅಸ್ತಿತ್ವಕ್ಕೆ ಬಂದಿದೆ. ಈಗ ಮತ್ತೆ ತುಳುನಾಡಿಗರ ಕೂಗು ಮುನ್ನೆಲೆಗೆ ಬಂದಿದೆ. ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವುದಕ್ಕೆ ಸಂಬಂಧಿಸಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಬಿಜೆಪಿ ಸರಕಾರವು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಸಮಿತಿಯು ಅಧ್ಯಯನ ನಡೆಸಿ ವಿಸ್ಕೃತ ವರದಿಯನ್ನು ಕೆಲವು ತಿಂಗಳ ಹಿಂದೆಯೇ ಸಲ್ಲಿಸಿತ್ತು. ಬಳಿಕ ಚುನಾವಣೆ ವಿಚಾರ ಮುನ್ನೆಲೆಗೆ ಬಂದ ಕಾರಣ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು, ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ಕಾರ್ಕಳದ ಬೋಳ ಗ್ರಾಮದ ನಿವಾಸಿ ಶ್ರೀಮತಿ ರತ್ನಾ ಶೆಟ್ಟಿ ಇವರಿಗೆ ಮನೆ ರಿಪೇರಿಗೆ ಮಂಜೂರಾದ ಪ್ರಥಮ ಕಂತಿನ ಧನಸಹಾಯದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಒಕ್ಕೂಟದ ಆಹ್ವಾನಿತ ಸದಸ್ಯರಾದ ಶ್ರೀ ರವಿ ಶೆಟ್ಟಿ ಹಾಗೂ ಫಲಾನುಭವಿಯ ಕುಟುಂಬಸ್ಥರು ಉಪಸ್ಥಿತರಿದ್ದರು.
ಕ್ರೀಡಾ ಸ್ಪೂರ್ತಿಯೊಂದಿಗೆ ನ್ಯಾಯಯುತವಾಗಿ ಕ್ರೀಡಾ ಸ್ಪರ್ಧೆಗಳು ನಡೆದಾಗ ಆಟಗಾರರಿಗೆ ಮತ್ತು ಸ್ಪರ್ಧಿಗಳಿಗೆ ಸೌಜನ್ಯ, ನೈತಿಕ ನಡವಳಿಕೆ ಮತ್ತು ಸಮಗ್ರತೆಯೊಂದಿಗೆ ಸೋಲು ಮತ್ತು ಗೆಲುವನ್ನು ಸಮಾನಾಂತರವಾಗಿ ಸ್ವೀಕರಿಸುವ ಮನೋಬಲ ದೊರೆಯುತ್ತದೆ. ಇದರಿಂದ ಕ್ರೀಡಾಸಕ್ತರಲ್ಲಿ ಆಕಾಂಕ್ಷೆಗಳು ಮತ್ತಷ್ಟು ಚಿಗುರಿಕೊಂಡು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸ್ಪೂರ್ತಿಯನ್ನು ನೀಡುತ್ತದೆ. ಯಾವುದೇ ಸ್ಪರ್ಧಿ ಸೋಲು ಗೆಲುವಿಗಾಗಿ ಅಸೆ ಪಡದೆ ತಾನು ಕ್ರೀಡೆಯಲ್ಲಿ ಪಾಲು ಪಡೆದು ಹೇಗೆ ಆಡಿದ್ದೇನೆ ಎಂಬುದು ಮುಖ್ಯವಾಗಬೇಕು. ರಚನಾತ್ಮಕ ಸಂಬಂಧಗಳನ್ನು ಸೇರಿಸಿಕೊಂಡು ಪರಸ್ಪರ ವ್ಯಕ್ತಿಗತ ಪರಿಚಯ ಮತ್ತು ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಸಂಘ ಸಂಸ್ಥೆಗಳ ಮಹತ್ವ ಬಹಳಷ್ಟಿದೆ. ಇದಕ್ಕೆ ಸಂಬಂದಪಟ್ಟಂತೆ ಇಂತಹ ಕ್ರೀಡಾ ಕೂಟಗಳು ನಡೆಯಬೇಕು. ಪುಣೆ ಬಂಟರ ಸಂಘದ ಮೂಲಕ ವರ್ಷಂಪ್ರತಿ ಸಮಾಜ ಬಾಂಧವರಿಗಾಗಿ ಕ್ರೀಡಾಕೂಟ ನಡೆಯುತ್ತಾ ಬರುತ್ತಿದೆ. ಇದರಿಂದ ಸಮಾಜದ ನಮ್ಮ ಸಂಘಟನಾ ಸಾಮರ್ಥ್ಯಕ್ಕೆ ಬಲ ಸಿಗುತ್ತದೆ ಮತ್ತು ಕ್ರೀಡಾ ಕೂಟಗಳು ಸ್ಪರ್ಧಾತ್ಮಕವಾಗಿ ನಡೆದರೆ ಸಂಘಟಿತರಾಗಳು ವೇದಿಕೆಯಾಗುತ್ತದೆ ಎಂದು ಪುಣೆ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ, ತಮನ್ನಾ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ…
ಇದುವರೆಗೆ ಹಲವು ರೀತಿಯ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹೊಸ ಲೋಕವೇ ತೆರೆದಂತಿದೆ. ವಿಶಾಲ ಮೈದಾನದಲ್ಲಿ ಒಂದೆಡೆ ಕೋಣಗಳ ಓಟಕ್ಕೆ ಸಜ್ಜಾಗಿರುವ ಸುಂದರ ಕಂಬಳ ಕೆರೆಯಾದರೆ ಮತ್ತೊಂದೆಡೆ ಯಾವಾಗ ಸ್ಪರ್ಧೆ ಆರಂಭವಾಗುತ್ತದೆಯೋ ಎಂದು ಕಾದು ಕುಳಿತಿರುವ ಕೋಣಗಳು, ಯಜಮಾನರು. ಮೈದಾನದ ಮತ್ತೊಂದೆಡೆ ಸಾಂಸ್ಕೃತಿಕ ವೈಭವಕ್ಕೆ ಸಜ್ಜಾಗಿರುವ ವಿಶಾಲ ವೇದಿಕೆ, ಮತ್ತೊಂದೆಡೆ ಆಹಾರ ಮೇಳದ ಟೆಂಟ್ ಗಳಿಂದ ಘಮ್ಮನೆ ಬರುತ್ತಿರುವ ಸುವಾಸನೆ… ಇದಕ್ಕೆಲ್ಲ ಕಾರಣವಾಗಿರುವುದು ಐತಿಹಾಸಿಕ ದಾಖಲೆ ಬರೆಯಲು ಮುಂದಾದ ಬೆಂಗಳೂರು ರಾಜ ಮಹಾರಾಜಾ ಜೋಡುಕೆರೆ ಕಂಬಳ. ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶಾಲ ಪ್ರದೇಶದಲ್ಲಿ ಇದೆ ಮೊದಲ ಬಾರಿಗೆ ಕಂಬಳ ಆಯೋಜಿಸಲು ಬೆಂಗಳೂರು ಕಂಬಳ ಸಮಿತಿ ಮುಂದಾಗಿದೆ. ಕರಾವಳಿಯಿಂದ ಹೊರಗೆ ಇದೆ ಮೊದಲ ಬಾರಿಗೆ ಕಂಬಳ ನಡೆಯುತ್ತಿದೆ. ಹೀಗಾಗಿ ಕೇವಲ ಕಂಬಳ ಮಾತ್ರವಲ್ಲದೆ ಕರಾವಳಿ ಮಣ್ಣಿನ ಸೊಗಡಿನ ಕಂಪನ್ನು ರಾಜಧಾನಿ ಬೆಂಗಳೂರಿಗೆ ಪಸರಿಸಲು ಸಿದ್ಧತೆ ನಡೆಸಲಾಗಿದೆ. ಕಂಬಳ ಕರೆಯ ಪಕ್ಕದಲ್ಲಿರುವ ವಿಶಾಲ ಜಗದಲ್ಲಿ ಆಹಾರ ಮೇಳಕ್ಕೆ ಅವಕಾಶ ಕಲ್ಪಿಸಲಾಗಿದೆ. ಕರಾವಳಿಯ ಆಹಾರ…
ದಕ್ಷಿಣ ಮುಂಬಯಿಯ ವರ್ಲಿ ಪರಿಸರದಲ್ಲಿ ಧಾರ್ಮಿಕ ಶ್ರದ್ಧಾಳುಗಳಾದ ಪಡುಬಿದ್ರಿ ಬೆಂಗರೆ ರಮೇಶ್ ಗುರುಸ್ವಾಮಿಗಳಿಂದ ಸ್ಥಾಪಿತಗೊಂಡ ಪ್ರತಿಷ್ಠಿತ ಧಾರ್ಮಿಕ ಸಂಸ್ಥೆ ಶ್ರೀ ಅಪ್ಪಾಜಿ ಬೀಡು ಫೌಂಡೇಶನ್ (ರಿ), ವರ್ಲಿ ಸಂಸ್ಥೆಯು ನಿರಂತರವಾಗಿ ಕಲಿಯುಗ ವರದ ಶ್ರೀ ಅಯ್ಯಪ್ಪನ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದು, ಇದರ ನೂತನ ಅಧ್ಯಕ್ಷರಾಗಿ ಹೋಟೆಲ್ ಉದ್ಯಮಿ ಬಂಟರ ಸಂಘದ ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯದರ್ಶಿ ಪದ್ಮನಾಭ ಯಸ್ ಶೆಟ್ಟಿ ಪಡ್ಡಾಯಿಬೆಟ್ಟು ಸರಪಾಡಿ ಆಯ್ಕೆಯಾಗಿದ್ದಾರೆ. ಆಗಸ್ಟ್ 26ರ ಶನಿವಾರದಂದು ನಡೆದ ಸಭೆಯಲ್ಲಿ ಅಪ್ಪಾಜೀ ಬೀಡು ಫೌಂಡೇಷನ್ ಸಂಸ್ಥೆಯ ಸ್ಥಾಪಕರಾದ ರಮೇಶ ಗುರುಸ್ವಾಮಿ ಹಾಗೂ ಟ್ರಸ್ಟಿನ ಆಡಳಿತ ಟ್ರಸ್ಟಿ ಶಾಂಭವಿ ಗುರುಸ್ವಾಮಿ, ರೇ ರೋಡ್ ಅಯ್ಯಪ್ಪ ಭಕ್ತವೃಂದದ ಸಂಸ್ಥಾಪಕ ಸತೀಶ್ ಗುರುಸ್ವಾಮಿ, ಹಿರಿಯ ಟ್ರಸ್ಟೀಗಳು ರತ್ನಾಕರ್ ಶೆಟ್ಟಿ, ರಘುನಾಥ್ ಎನ್ ಶೆಟ್ಟಿ ಹಾಗೂ ರತ್ನಾಕರ್ ಶೆಟ್ಟಿ ಶಿವ್ ಸಾಗರ್ ಇವರ ಮಾರ್ಗದರ್ಶನದಿಂದ ಹಾಗೂ ಉಪಸ್ಥಿತರಿದ್ದ ಗಣ್ಯರ ಸಮ್ಮುಖದಲ್ಲಿ 2023-2026 ಕಾರ್ಯಕಾರಿ ಸಮಿತಿ ರಚನೆಯ ಪ್ರಕ್ರಿಯೆ ನಡೆಯಿತು. ಪದ್ಮನಾಭ್ ಶೆಟ್ಟಿಯವರನ್ನು ಸಂಸ್ಥೆಯ ನೂತನ ಅಧ್ಯಕ್ಷರನ್ನಾಗಿ…
ಜನನ-ಮರಣ ನೋಂದಣಿ ಪ್ರಕರಣಗಳನ್ನು ಜೆ.ಎಂ.ಎಫ್.ಸಿ. ನ್ಯಾಯಾಲಯದಿಂದ ಉಪವಿಭಾಗಾಧಿಕಾರಿ ಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವ ರಾಜ್ಯ ಸರಕಾರದ “ಅಧಿಸೂಚನೆ” ಯ ವಿರುದ್ದ ಕುಂದಾಪುರ ಬಾರ್ ಅಸೋಸಿಯೇಷನ್ ನ ಎದುರುಗಡೆ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆಯವರ ನೇತೃತ್ವದಲ್ಲಿ “ಪ್ರತಿಭಟನೆ” ಮಾಡಲಾಯಿತು. ಈ “ಪ್ರತಿಭಟನೆ” ಯಲ್ಲಿ ವಕೀಲರ ಸಂಘದ ಹಿರಿಯ-ಕಿರಿಯ-ಮಹಿಳಾ ವಕೀಲರು ಪಾಲ್ಗೊಂಡು ಪ್ರತಿಭಟನೆಯನ್ನು ಯಶಸ್ವೀ ಗೊಳಿಸಿದರು. ಈ ಸಂದರ್ಭ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್, ಉಪಾಧ್ಯಕ್ಷರಾದ ಶ್ರೀಮತಿ ಬೀನಾ ಜೊಸೆಫ್, ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಮತ್ತು ಜತೆ ಕಾರ್ಯದರ್ಶಿ ರಿತೇಶ್ ಬಿ. ಉಪಸ್ಥಿತರಿದ್ದರು.
ಕನ್ನಡ ಸೇವಾ ಸಂಘ ಪೊವಾಯಿ ಇದರ ಸದಸ್ಯರು, ಅಧ್ಯಕ್ಷ ನ್ಯಾಯವಾದಿ ಆರ್ ಜಿ ಶೆಟ್ಟಿ, ಶ್ರೀಮತಿ ಪ್ರಶಾಂತಿ ಡಿ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಶೋಭಾ ರಮೇಶ್ ರೈ ಇವರ ನೇತೃತ್ವದ ನಿಯೋಗವು ”ಸಲಾಂ ಬಾಲ ಆಶ್ರಮ”ಕ್ಕೆ ಸಂಘದ ರಜತ ಮಹೋತ್ಸವ ನಿಮಿತ್ತ ಭೇಟಿ ನೀಡಿ ಆಶ್ರಮದ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ನೋಟ್ ಬುಕ್ ಹಾಗೂ ಇನ್ನಿತರ ಪಠ್ಯ ಪರಿಕರಗಳನ್ನು ನೀಡಿದರು. ಪೊವಾಯಿ ಕನ್ನಡ ಸೇವಾ ಸಂಘವು ಇನ್ನೂ ಹತ್ತು ಹಲವಾರು ಯೋಜನೆಗಳನ್ನು ಕೈಗೊಂಡಿದ್ದು ತುಳು ಕನ್ನಡ ಭಾಷೆ, ಸಂಸ್ಕೃತಿಯನ್ನು ಮಹಾರಾಷ್ಟ್ರದಲ್ಲಿ ಉಳಿಸಿ ಬೆಳೆಸುವಲ್ಲಿ ಮಹತ್ತರವಾದ ಸಾಧನೆಯನ್ನು ಮಾಡಿದೆ.
ಮೂಡುಬಿದಿರೆ: ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ ಆಶ್ರಯದಲ್ಲಿ ನಡೆದ ಎರಡು ದಿನಗಳ ರಾಜ್ಯ ಮಟ್ಟದ ಪದವಿ ಪೂರ್ವ ಶಿಕ್ಷಣ-ಮುಕ್ತ ಸಮ್ಮೇಳನ ಸಮಾರೋಪ ಸಮಾರಂಭವು ಆಳ್ವಾಸ್ನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಸಭಾಂಗಣದಲ್ಲಿ ಶನಿವಾರ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕುಪ್ಮಾದ ರಾಜ್ಯ ಕಾರ್ಯದರ್ಶಿ ನರೇಂದ್ರ ಎಲ್ ನಾಯಕ್, ಈ ಸಮ್ಮೇಳನದ ಮೂಲಕ ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿ ಕಾಲೇಜುಗಳ ಜವಾಬ್ದಾರಿ, ಎದುರಿಸುತ್ತಿರುವ ಸವಾಲುಗಳ ಕುರಿತು ವಿಸ್ತ್ರತವಾಗಿ ಚರ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಸರಕಾರದೊಂದಿಗೆ ಹೆಚ್ಚಿನ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಎಲ್ಲಾ ಕಾಲೇಜುಗಳು ಇಡಬೇಕಾದ ಹೆಜ್ಜೆ ಹಾಗೂ ಪಾಲಿಸಬೇಕಾದ ಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲು ಅವಕಾಶ ಲಭಿಸಿದೆ ಎಂದರು. ಕುಪ್ಮಾ ರಾಜ್ಯ ಸಮಿತಿ ಗುರುತಿಸಲ್ಪಟ್ಟ ಜಿಲ್ಲಾವಾರು ಸಂಯೋಜಕರು ಜಿಲ್ಲಾ ಮಟ್ಟದಲ್ಲಿ ಹತ್ತು ಸದಸ್ಯರುಗಳನ್ನೊಳಗೊಂಡ ಜಿಲ್ಲಾ ಕಾರ್ಯಕಾರಿಣಿ ಸಮಿತಿಯನ್ನು ಸಂಯೋಜನೆ ಮಾಡಿ 30 ದಿನಗಳೊಳಗೆ ರಚಿಸಿ ವರದಿಯನ್ನು ನೀಡುವುದಾಗಿ ನಿರ್ಧರಿಸಲಾಯಿತು. ಕುಪ್ಮಾದ ಮೊದಲ ಸಮ್ಮೇಳನ ಯಶಸ್ವಿಯಾಗಿ…
ಮೂರ್ನಾಲ್ಕು ದಶಕಗಳ ಹಿಂದೆ “ಗುಜರಿಗೆ ಹಾಕುವುದು’ ಎಂಬ ಪರಿಕಲ್ಪನೆಯೇ ಇರಲಿಲ್ಲ. ದಿನಬಳಕೆಯಲ್ಲಿ ಇದ್ದುದು ಕೆಲವೇ ಕೆಲವು ಪ್ಲಾಸ್ಟಿಕ್ ವಸ್ತುಗಳು. ಯಾವುದನ್ನೇ ಆದರೂ ಅದರ ಪೂರ್ಣ ಬಾಳಿಕೆಯ ವರೆಗೆ ಉಪಯೋಗಿಸುವುದು ಮತ್ತು ಆ ಬಳಿಕ ಅದನ್ನು ಬೇರಾವುದಾದರೂ ರೂಪದಲ್ಲಿ ಮರುಬಳಕೆ ಮಾಡುವುದು. ಒಂದು ಅಂಗಿಯನ್ನು ತೆಗೆದುಕೊಂಡರೆ, ಅದು ಪೇಟೆಗೆ ಧರಿಸುವ ಯೋಗ್ಯತೆಯನ್ನು ಕಳೆದುಕೊಂಡ ಮೇಲೆ ಮನೆಯಲ್ಲಿ ಧರಿಸುವುದು. ಆ ಬಳಕೆಗೂ ಹಳತಾದ ಬಳಿಕ ನೆಲ ಒರೆಸಲು ಅಥವಾ ನಾಯಿಗೆ ಮಲಗುವುದಕ್ಕಾಗಿ ಅಡಿಗೆ ಹಾಸಲು ಉಪಯೋಗ. ಪ್ರತಿಯೊಂದು ವಸ್ತುವೂ ಹೀಗೆಯೇ. ಈಗಿನ ಪರಿಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ. ದಿನವೊಂದಕ್ಕೆ ಎಷ್ಟು ಪ್ಲಾಸ್ಟಿಕ್ ವಸ್ತುಗಳು ನಮ್ಮ ಮನೆಯೊಳಕ್ಕೆ ಬರುತ್ತವೆ ಎಂಬುದನ್ನು ಒಂದು ಕ್ಷಣ ಕಣ್ಮುಚ್ಚಿ ಧ್ಯಾನಿಸಿ ನೋಡಿ. ಕ್ಯಾರಿ ಬ್ಯಾಗ್, ಹಾಲಿನ ತೊಟ್ಟೆ, ಜ್ಯೂಸ್ ಬಾಟಲಿ, ಸ್ಟ್ರಾ, ವಿವಿಧ ವಸ್ತುಗಳ ಪ್ಯಾಕಿಂಗ್, ತಿಂಡಿ ತಿನಿಸುಗಳ ಪೊಟ್ಟಣಗಳು… ಹೀಗೆ ಒಂದು ದಿನಕ್ಕೆ ಕಿಲೋಗಟ್ಟಲೆ ಪ್ಲಾಸ್ಟಿಕ್ ಮನೆಯೊಳಗೆ ಬಂದು ಬೀಳುತ್ತದೆ. ಹಿಂದೆ ಪೆನ್ನಿನ ರೀಫಿಲ್ ಖಾಲಿಯಾದರೆ ಹೊಸ ರೀಫಿಲ್ ಹಾಕುತ್ತಿದ್ದೆವು.…
ದೆಹಲಿ ಕರ್ನಾಟಕ ಸಂಘದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ದೆಹಲಿ ಘಟಕ ಮತ್ತು ಸುಳ್ಯದ ಬೆಳ್ಳಾರೆಯ ತಂಟೆಪ್ಪಾಡಿ ನಿನಾದ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ ‘ಯಕ್ಷಧ್ರುವ ಪಟ್ಲ ಸಂಭ್ರಮ-2023’ನ್ನು ದಿನಾಂಕ 30-09-2023ರಂದು ಹಿರಿಯ ಕಲಾವಿದ, ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಉದ್ಘಾಟಿಸಿದರು. ಅವರು ಮಾತನಾಡುತ್ತಾ “ಸಂಪೂರ್ಣ ಕಲೆಗಾರಿಕೆಯನ್ನು ಯಕ್ಷಗಾನದಲ್ಲಿ ಮಾತ್ರ ಕಾಣಲು ಸಾಧ್ಯ. ಅದೊಂದು ಅದ್ಭುತ ಲೋಕ. ಇಂದು ಯಕ್ಷಗಾನ ಕೇವಲ ದೇಶ ಮಾತ್ರವಲ್ಲ, ಜಾಗತಿಕವಾಗಿ ತನ್ನ ಹೆಜ್ಜೆಗುರುತನ್ನು ಮೂಡಿಸಿದೆ. ಭಾಗವತ ಪಟ್ಲ ಸತೀಶ್ ಶೆಟ್ಟಿಯವರು ತಾವು ಮಾತ್ರ ಬೆಳೆಯದೆ ತಮ್ಮೊಂದಿಗಿರುವವರನ್ನೂ ಬೆಳೆಸಿದ್ದಾರೆ. ಯಕ್ಷಧ್ರುವ ಪಟ್ಲ ಫೌಂಡೇಷನ್ ಮೂಲಕ ಹತ್ತಾರು ಪ್ರತಿಭೆಗಳು ಹೊರಬರುವಂತೆ ಮಾಡಿದ್ದಾರೆ” ಎಂದು ಹೇಳಿದರು. ವಿಶೇಷ ಅತಿಥಿಯಾಗಿ ಪಾಲ್ಗೊಂಡ ಜಮ್ಮು-ಕಾಶ್ಮೀರ ಸರ್ಕಾರದ ಪ್ರಿನ್ಸಿಪಲ್ ಸೆಕ್ರೆಟರಿ ರಾಜೇಶ್ ಪ್ರಸಾದ್ ಹಿರಿಯಡ್ಕ, “ಇಂದಿನ ಮಕ್ಕಳಿಗೆ ನಾವು ನಮ್ಮ ಸಂಸ್ಕೃತಿ, ಪರಂಪರೆಗಳನ್ನು ಕಲಿಸಬೇಕು. ಪಟ್ಲ ಸತೀಶ್ ಶೆಟ್ಟಿ ಅವರಿಗೆ ಹಾಡುಗಾರಿಕೆಯ ದೈವಿಕ ಶಕ್ತಿ ಒಲಿದಿದೆ. ಒಂದು ಜನಸಮೂಹವನ್ನೇ ಸೆಳೆಯುವಂತಹ ಅದ್ಭುತ ಸಾಮರ್ಥ್ಯವನ್ನು ಅವರಿಗೆ ದೇವರು ಕಲ್ಪಿಸಿದ್ದಾನೆ.…