Author: admin

ವಿಶ್ವ ಬಂಟ ಪ್ರತಿಷ್ಠಾನವು ಡಾ| ಡಿ.ಕೆ ಚೌಟ ದತ್ತಿನಿಧಿಯಿಂದ 2025ನೇ ಸಾಲಿನಲ್ಲಿ ನೀಡುವ ಯಕ್ಷಗಾನ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಹೆಸರಾಂತ ಸ್ತ್ರೀ ವೇಷಧಾರಿ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಆಯ್ಕೆಯಾಗಿದ್ದಾರೆ. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಬಡಗುತಿಟ್ಟಿನ ಪಂಚ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರನ್ನೊಳಗೊಂಡ ಸಲಹಾ ಸಮಿತಿಯು ಈ ಪ್ರಶಸ್ತಿಗೆ ಅವರ ಹೆಸರನ್ನು ಶಿಫಾರಸು ಮಾಡಿದೆ. ಪ್ರಶಸ್ತಿಯು ರೂ.25,000/- ನಗದು ಹಾಗೂ ಪ್ರಮಾಣ ಫಲಕವನ್ನೊಳಗೊಂಡಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ವೈ. ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಗೋಣಿಬೀಡಿನಲ್ಲಿ ದಿ. ಐತಪ್ಪ ಶೆಟ್ಟಿ ಮತ್ತು ಸುಂದರಿ ಶೆಟ್ಟಿ ದಂಪತಿಗೆ 1960 ಜೂನ್ 1ರಂದು ಜನಿಸಿದ ಸಂಜಯ ಕುಮಾರ್ ಶೆಟ್ಟಿಯವರು ತನ್ನ ಪ್ರೌಢಶಾಲಾ ವ್ಯಾಸಂಗ ಪೂರೈಸಿ ಧರ್ಮಸ್ಥಳ ಲಲಿತಕಲಾ ಕೇಂದ್ರದಲ್ಲಿ ದಿ. ಪಡ್ರೆ ಚಂದು ಅವರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು.16ನೇ ವಯಸ್ಸಿನಲ್ಲಿ ಪುತ್ತೂರು…

Read More

ತುಳುವ ಸಂಸ್ಕೃತಿ, ಇತಿಹಾಸ, ಮತ್ತು ಜನಪದ ಸಾಂಸ್ಕೃತಿಕ ನಾಯಕರ ಅಧ್ಯಯನದ ಕುರಿತು ಯುವ ಜನಾಂಗ ಆಸಕ್ತಿ ತಾಳಬೇಕಾಗಿದೆ. ಅಗೋಳಿ ಮಂಜಣ್ಣ ತುಳುನಾಡಿನ ವೀರ ನಾಯಕನಾಗಿದ್ದು, ಅವರ ಕುರಿತು ಇನ್ನಷ್ಟು ಅಧ್ಯಯನ ನಡೆಯಬೇಕು ಎಂದು ಎಸ್.ಆರ್. ಹೆಗ್ಡೆ ಚಾರಿಟೇಬಲ್ ನ ಅಧ್ಯಕ್ಷೆ ಮತ್ತು ಸಂಶೋಧಕಿ ಡಾ| ಇಂದಿರಾ ಹೆಗ್ಗಡೆ ನುಡಿದರು. ಎಸ್.ಆರ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ (ರಿ) ಆಶ್ರಯದಲ್ಲಿ ಚೇಳಾರು ಗುತ್ತು ಮನೆಯಲ್ಲಿ ಆಯೋಜಿಸಿದ್ದ ಸೋಣದ ಸಂಕ್ರಾಂತಿ ಮತ್ತು ಅಗೋಳಿ ಮಂಜಣ್ಣ ನೆಂಪು ಹಾಗೂ ಚೇಳಾರು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ತುಳುನಾಡ ಆಚರಣೆಯಲ್ಲಿ ಸೋಣ ಸಂಕ್ರಾಂತಿಗೆ ವಿಶೇಷ ಮಹತ್ವವಿದ್ದು, ವಾರ್ಷಿಕ ಆವರ್ತನದ ಕ್ರಮಗಳು ಕೃಷಿ ಬದುಕಿನೊಂದಿಗೆ ನಂಟನ್ನು ಹೊಂದಿದೆ ಎಂದರು. ವಿಶೇಷ ಉಪನ್ಯಾಸ ನೀಡಿದ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಮಾತನಾಡಿ, ಪ್ರತಿಯೊಂದು ಗ್ರಾಮಕ್ಕೂ ತನ್ನದೇ ಆದ ಇತಿಹಾಸವಿದ್ದು ಅವೆಲ್ಲಗಳ ಸೇರಿಗೆಯೇ…

Read More

ಆಗಸ್ಟ್: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ ೧೦೪ನೇ ಜನ್ಮದಿನದ ಅಂಗವಾಗಿ ಆಗಸ್ಟ್ ೨೧ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ದಿನ ಬೆಳಗ್ಗೆ ಕೆ.ಎಂ.ಸಿ. ಬ್ಲಡ್ ಸೆಂಟರ್‌ನ ನೆರವಿನೊಂದಿಗೆ ರಕ್ತದಾನ ಶಿಬಿರ ನೆರವೇರಲಿರುವುದು. ಸನ್ಮಾನ ಕಾರ್ಯಕ್ರಮ : ಇದೇ ಸಂದರ್ಭ ಖ್ಯಾತ ಸಮಾಜ ಸೇವಕ ಶ್ರೀ ವಿಶು ಶೆಟ್ಟಿ, ಸ್ವಚ್ಛ ಕಾರ್ಕಳ ಬ್ರಿಗೇಡ್‌ನ ಶ್ರೀ ಫೆಲಿಕ್ಸ್ ವಾಝ್ ಹಾಗೂ ಕುಕ್ಕುಂದೂರು, ಬೈಲೂರು, ಹಿರ್ಗಾನ ಹಾಗೂ ಅಜೆಕಾರ್ ಗ್ರಾಮಗಳ ಸ್ವಚ್ಛತಾ ಕಾರ್ಮಿಕರಿಗೆ ಗೌರವ ಜರುಗಲಿರುವುದು. ರಕ್ತದಾನ ಶಿಬಿರವನ್ನು ಕಸ್ತೂರ್ಬಾ ಹಾಸ್ಪಿಟಲ್ ರಕ್ತನಿಧಿ ಹಾಗೂ ಎಚ್.ಬಿ.ಟಿ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಡಾ.ಗಣೇಶ್ ಮೋಹನ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ೩.೩೦ಕ್ಕೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ರೋಟರಿ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತಿರೋಗಶಾಸ್ತ ವಿಭಾಗದ ಮುಖ್ಯಸ್ಥ ಡಾ. ಸಂಜಯ್ ವಹಿಸಲಿದ್ದಾರೆ. ಕುಕ್ಕುಂದೂರು ಗ್ರಾಮ ಪಂಚಾಯತ್ ಸದಸ್ಯರಾದ ರಹಮತ್ತುಲ್ಲಾ ಮುಖ್ಯ ಅತಿಥಿಗಳಾಗಿ…

Read More

ಸಾಂಸ್ಕೃತಿಕ ಸ್ಪರ್ಧಾ ವೇದಿಕೆಗಳು ಮಕ್ಕಳ ಪ್ರತಿಭೆಯನ್ನು ಹೊರತರಲು ಸಹಾಯಕವಾಗುತ್ತವೆ. ಮಕ್ಕಳೊಳಗಿನ ಭಯವನ್ನು ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುತ್ತವೆ ಎಂದು ‘ಸು ಫ್ರಮ್ ಸೋ’ ಸಿನಿಮಾ ನಟ ಸನಿಲ್ ಗೌತಮ್ (ರವಿಯಣ್ಣ) ಭಾನುವಾರ ಹೇಳಿದರು. ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಶಾಲೆಯ ಅಂಗಳದಲ್ಲಿ ಕೃಷ್ಟಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಮುದ್ದುಕೃಷ್ಣ ಸ್ಪರ್ಧೆ ಉದ್ಘಾಟನೆ ನೆರವೇರಿಸಿದ ಅವರು, ‘ಇಂತಹ ಸ್ಪರ್ಧೆಗಳೇ ನನಗೆ ಕಲಾವಿದನಾಗುವುದಕ್ಕೆ ಅಡಿಪಾಯವಾಗಿದ್ದು. ನಾನು ಮೊದಲು ಹಾಕಿದ್ದು ರಾಧೆಯ ವೇಷ. ನಂತರ ಕೃಷ್ಣ ವೇಷ ಹಾಕಿ ಮೂರು ಬಾರಿ ಬಹುಮಾನ ಗೆದ್ದಿದ್ದೇನೆ’ ಎಂದು ಬಾಲ್ಯದಲ್ಲಿ ತಮಗಾದ ಪ್ರಭಾವವನ್ನು ಮೆಲುಕು ಹಾಕಿದರು. ಇಂತಹ ಕಾರ್ಯಕ್ರಮಗಳ ಮೂಲಕ ಸುಜ್ಞಾನ ಸಂಸ್ಥೆಯು ಮಕ್ಕಳ ಬೆನ್ನೆಲುಬಾಗಿ ನಿಂತಿದೆ. ಇದರಿಂದ ಮಕ್ಕಳ ವ್ಯಕ್ತಿತ್ವ ರೂಪುಗೊಳ್ಳಲು ಸಹಾಯವಾಗುತ್ತದೆ ಎಂದು ಅವರು ಮೆಚ್ಚುಗೆಯ ನುಡಿಗಳನ್ನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಅವರು ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಪಠ್ಯದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುತ್ತೇವೆ. ಯುವ ಪೀಳಿಗೆಗೆ ಭಾರತೀಯ ಸಂಸ್ಕೃತಿ ಹಾಗೂ ಆಚರಣೆಯ…

Read More

ಕರಾವಳಿ ಭಾಗದಲ್ಲಿ ಹುಟ್ಟಿ ಬೆಳೆದ ಯಕ್ಷಗಾನವಿಂದು ಜಗದಗಲ ತನ್ನ ಪ್ರಭಾವವನ್ನು ಬೀರಲು ಅಲ್ಲಲ್ಲಿ ನೆಲೆಸಿರುವ ಕಲಾಸಕ್ತರು ಮತ್ತು ಕರಾವಳಿ ಮೂಲದ ಸಂಘ ಸಂಸ್ಥೆಗಳು ಪ್ರಮುಖ ಕಾರಣವೆನ್ನಬಹುದು. ಇದರಲ್ಲಿ ಮಠ ಮಂದಿರಗಳ ಕೊಡುಗೆಯೂ ಅಪಾರ. ದೇಶ ವಿದೇಶಗಳಲ್ಲಿರುವ ಪ್ರಸಿದ್ಧ ಸಂಸ್ಥಾನಗಳ ಶಾಖಾಮಠಗಳು ಯಕ್ಷಗಾನಕ್ಕೆ ವಿಶೇಷ ಪ್ರೋತ್ಸಾಹ ನೀಡಿವೆ. ಈ ನಿಟ್ಟಿನಲ್ಲಿ ಚೆಡ್ಡಾನಗರ ಶ್ರೀ ಸುಬ್ರಮಣ್ಯ ಮಠದಲ್ಲಿ ನಡೆಯುತ್ತಿರುವ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನಾರ್ಹವೆನಿಸಿವೆ. ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥರ ಮಾರ್ಗದರ್ಶನ ಮತ್ತು ಆರಿಕ್ಕಾಡಿ ಅಶೋಕ ಭಟ್ಟರಂತಹ ಸಂಸ್ಕೃತಿ ಪ್ರಿಯರ ಕಾರ್ಯಶೀಲತೆಯಿಂದ ಇದು ಸಾಧ್ಯವಾಗಿದೆ ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಯಕ್ಷಗಾನ ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಚೆಂಬೂರು ಪಶ್ಚಿಮದ ಚೆಡ್ಡಾ ನಗರ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ 24ನೇ ತಾಳಮದ್ದಳೆ ಸರಣಿ ಅಂಗವಾಗಿ ಆಗಸ್ಟ್ 14ರಂದು ಜರಗಿದ ‘ಶ್ರೀರಾಮ ನಿರ್ಯಾಣ’ ಯಕ್ಷಗಾನ ತಾಳಮದ್ದಳೆ…

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ಸಮೂಹ ವಿದ್ಯಾಸಂಸ್ಥೆಯಲ್ಲಿ ೭೯ನೇ ಸ್ವಾತಂತ್ರ್ಯ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ಸೇನೆಯ ನಿವೃತ್ತ ಹವಾಲ್ದಾರ್ ವೆಂಕಟೇಶ ಪ್ರಭು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ವಿದ್ಯಾರ್ಥಿಗಳ ಪಥಸಂಚಲನದ ಗೌರವ ವಂದನೆಯನ್ನು ಸ್ವಿಕರಿಸಿ ಮಾತನಾಡಿ ಸ್ವಾತಂತ್ರ÷್ಯ ದಿನಾಚರಣೆ ಕೇವಲ ಸಂಭ್ರಮಕ್ಕೆ ಸೀಮಿತವಾಗಿರಬಾರದು. ದೇಶಕ್ಕಾಗಿ ಹೋರಾಡಿದ ಮಾಹಾನ್ ನಾಯಕರ, ಸೈನಿಕರ ತ್ಯಾಗವನ್ನು ಸ್ಮರಿಸಬೇಕು. ಸಮವಸ್ತ್ರವನ್ನು ಧರಿಸಿಯೇ ದೇಶ ಸೇವೆ ಮಾಡಬೇಕಿಲ್ಲ, ಪ್ರತಿಯೊಬ್ಬರೂ ದೇಶಕ್ಕಾಗಿ ಸಮಾಜಕ್ಕಾಗಿ ಕೊಡುಗೆಯನ್ನು ಸಲ್ಲಿಸಬೇಕು. ವಿದ್ಯಾರ್ಥಿಗಳು ಆನ್‌ಲೈನ್ ಗೇಮ್, ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಶಿಕ್ಷಣ ಪಡೆದು ದೇಶವನ್ನು ಕಟ್ಟಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಇಂದು ಭಾರತ ವಿಜ್ಞಾನ, ತಂತ್ರಜ್ಞಾನದಲ್ಲಿ ಸಾಕಷ್ಟು ಸಾಧನೆಯನ್ನು ಮಾಡಿ ಆರ್ಥಿಕವಾಗಿ ಬಲಿಷ್ಟವಾಗಿ ಬೆಳೆಯುತ್ತಿದೆ. ಭಾರತಕ್ಕಾಗಿ ಹೋರಾಡಿದ, ಶ್ರಮಿಸಿದ ಎಲ್ಲಾ ಮಹಾನ್ ನಾಯಕರಿಗೆ ನಾವು ಗೌರವವನ್ನು ಸೂಚಿಸಬೇಕೆಂದರು. ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಧ್ವಜಾರೋಹಣವನ್ನು ನೆರವೇರಿಸಿ ಎಲ್ಲರಿಗೂ ಸ್ವಾತಂತ್ರ್ಯ ದಿನದ…

Read More

ಗಣಿತನಗರ : ಲಕ್ಷಾಂತರ ದೇಶಪ್ರೇಮಿಗಳ ತ್ಯಾಗ, ಬಲಿದಾನಗಳಿಗೆ ನಾವು ಧನ್ಯವಾದ ಹೇಳುವ ಅವರ ಚಿರಸ್ಮರಣೆ ಗೈಯ್ಯುವ ಶುಭದಿನ. ಸ್ವಾತಂತ್ರ್ಯವೆಂಬುದು ಉಚಿತವಾಗಿ ದೊರೆತುದಲ್ಲ. ಅದೊಂದು ಜವಾಬ್ದಾರಿಯ ಸಂಕೇತ ಎಂದು ಪದ್ಮಶ್ರೀ ಡಾ.ಎಂ.ಎo.ಜೋಷಿ ಸೇವಾಪ್ರಶಸ್ತಿ ಪುರಸ್ಕೃತ ನೇತ್ರತಜ್ಞ ಡಾ.ಶ್ರೀನಿವಾಸ್ ದೇಶಪಾಂಡೆ ಹೇಳಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರುಗಿದ ೭೯ನೇ ಸ್ವಾತಂತ್ರ್ಯದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪಿ.ಆರ್.ಒ ಜ್ಯೋತಿಪದ್ಮನಾಭ್ ಭಂಡಿ. ಪಿ.ಯು. ಉಪಪ್ರಾಂಶುಪಾಲರುಗಳಾದ ಶ್ರೀ ಸಾಹಿತ್ಯ, ಶ್ರೀಮತಿ ಉಷಾ ರಾವ್ ಯು, ಜ್ಞಾನಸುಧಾ ಆಂಗ್ಲಮಾಧ್ಯಮಪ್ರೌಢಶಾಲಾ ಉಪಪ್ರಾ0ಶುಪಾಲೆ ಶ್ರೀಮತಿ ವಾಣಿ ಕೆ, ಲೆಫ್ಟಿನೆಂಟ್ ಮ0ಜುನಾಥ್ ಮುದೂರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಮತಿ ಸೌಜನ್ಯ ಹೆಗ್ಡೆ, ರೇಶ್ಮಾ ಸಾಲಿಸ್, ಕಿರಣ್ ಕುಮಾರ್ ಮತ್ತು ದರ್ಶನ್ ಕುಮಾರ್ ಉಪಸ್ಥಿತರಿದ್ದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್ ವಂದಿಸಿ, ಜೀವಶಾಸ್ತ್ರ ಉಪನ್ಯಾಸಕ ಶ್ರೀ ಪ್ರಸಾದ್ ಆಚಾರ್ಯ ನಿರೂಪಿಸಿ ಸ್ವಾಗತಿಸಿದರು.

Read More

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಧ್ವಜಾರೋಹಣವನ್ನು ನೆರವೇರಿಸಿ , ಸ್ವಾತಂತ್ರ್ಯ ಎಂಬುದು ಇಂದು ವಿಜ್ಞಾನದ ಮಾರ್ಗದಲ್ಲಿ ಸ್ವಾಯತ್ತತೆ, ಪ್ರಗತಿ ಮತ್ತು ಜನಕೇಂದ್ರಿತ ಸೇವೆಯ ಸಂಕೇತವಾಗಿದೆ. ನಾವು ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಮೂಲಕ ಹೊಸ ಸಾಮರಸ್ಯವನ್ನು ರೂಪಿಸುತ್ತಿದ್ದೇವೆ. ಅಂತರಿಕ್ಷ ಕ್ಷೇತ್ರ, ಅಣುಶಕ್ತಿ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಕೃಷಿ ಕ್ಷೇತ್ರ, ಮಾಹಿತಿ ತಂತ್ರಜ್ಞಾನ ಹೀಗೆ ಸ್ವತಂತ್ರ ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಕಾಶ ಮಟ್ಟದ ಸಾಧನೆಗಳನ್ನು ಕಾಣುತ್ತಿದೆ ಎಂದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ಕಾಲೇಜಿನಲ್ಲಿ ಹೊಸದಾಗಿ ಆರಂಭಗೊಂಡ 6/8 ನೌಕಾ ಉಪವಿಭಾಗ – ಎನ್.ಸಿ.ಸಿ ಉಡುಪಿ ಘಟಕ ಇದರ ಪ್ರಾಯೋಜಕರಾದ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹಾಗೂ CTO ಮಹೇಶ್ ಆರ್. ಶೆಣೈ. ಕೆ. ಇವರ ನೇತೃತ್ವದಲ್ಲಿ ಎನ್. ಸಿ.ಸಿ ಕೆಡೆಟ್ ಗಳಿಂದ…

Read More

ಮೂಡುಬಿದಿರೆ: ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ಶ್ರಮವಹಿಸುತ್ತಿದ್ದಾರೆ ಎಂದು ಭಾರತೀಯ ಸೇನೆ ನಿವೃತ್ತ ಅಧಿಕಾರಿ ಲೆ. ಜನರಲ್ ಅರುಣ್ ಅನಂತನಾರಾಯಣ್ ಹೇಳಿದರು. ವಿದ್ಯಾಗಿರಿಯ ಕೆ. ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ವತಿಯಿಂದ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಗೈದು ಮಾತನಾಡಿದ ಅವರು, ಇಂದಿನ ಪೀಳಿಗೆಗೆ ಸ್ವಾತಂತ್ರ‍್ಯವೆoದರೆ ಏನನ್ನಾದರೂ ಸಾಧಿಸುವ ಅವಕಾಶ ಎಂದು ಭಾಸವಾಗಬಹುದು, ಆದರೆ ನಮ್ಮ ಹಿರಿಯರು ಸರಿಯಾದ ಶಿಕ್ಷಣ ವೈದ್ಯಕೀಯ ಸೌಲಭ್ಯ ಮತ್ತು ಇನ್ನಿತರ ಮೂಲಭೂತ ಸೌಲಭ್ಯಗಳಿಲ್ಲದೇ ಬದುಕಿದ್ದರು. ನಿಜವಾದ ಸ್ವಾತಂತ್ರ‍್ಯ ಎಂದರೆ ಅಭಿವೃದ್ಧಿ ಪ್ರತಿಯೊಬ್ಬರಿಗೂ ತಲುಪಿದಾಗ ಹಾಗೂ ಪ್ರತಿಯೊಬ್ಬರೂ ಈ ಅಗತ್ಯ ಸೌಲಭ್ಯಗಳನ್ನು ಪಡೆದಾಗ ಸಾಧ್ಯವಾಗುವುದು. ಸ್ವಾತಂತ್ರ‍್ಯ ಹೋರಾಟದಲ್ಲಿ ಹಿರಿಯರು ನೀಡಿದ ತ್ಯಾಗಗಳಿಗೆ ಗೌರವ ಸಲ್ಲಿಸಿದ ಅವರು, “ಆಧುನಿಕ ಭಾರತವನ್ನು ಒಬ್ಬ ವ್ಯಕ್ತಿ ಮಾತ್ರ ನಿರ್ಮಿಸಲು ಸಾಧ್ಯವಿಲ್ಲ,ಅದಕ್ಕೆ ಸಮೂಹ ಶ್ರಮ ಅಗತ್ಯ. ಶಿಕ್ಷಕರು ಕೇವಲ ವೃತ್ತಿಯಲ್ಲಿಲ್ಲ, ಸೇವೆಯಲ್ಲಿ ಇದ್ದು, ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಆಧುನಿಕ ಭಾರತವನ್ನು ಕಟ್ಟುವವರಾಗಿದ್ದಾರೆ…

Read More

ಗಣಿತನಗರ : ಸ್ವದೇಶವೇ ಹೆಚ್ಚು ನಮಗೆ ಪ್ರಾಣಪ್ರಿಯವಾಗಿರುವುದು. ತೃಪ್ತಿಯನ್ನು ಹಾಗೂ ಆನಂದವನ್ನು ಮಾತೃಭೂಮಿ ಮಾತ್ರ ನೀಡಲು ಸಾಧ್ಯ. ಅದೆಷ್ಟೋ ವೀರಸೇನಾನಿಗಳ ತ್ಯಾಗ, ಬಲಿದಾನಗಳಿಗೆ ದೇಶಭಕ್ತಿಯ ಸ್ಪೂರ್ತಿಗೆ ಸ್ವದೇಶ ಮಂತ್ರವೇ ಅಸ್ತçವಾಗಿತ್ತು ಎಂದು ಮೈಸೂರಿನ ವಿವೇಕವಂಶಿ ಫೌಂಡೇಶನ್‌ನ ಸ್ಥಾಪಕರಾದ ಶ್ರೀ ನಿತ್ಯಾನಂದ ಎಸ್.ಬಿ ನುಡಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-೩೯ರಲ್ಲಿ ‘ಸ್ವದೇಶಿ ಚಿಂತನೆ- ಯುವಕರಲ್ಲಿ ರಾಷ್ಟ್ರಭಕ್ತಿಯ ಬೆಳವಣಿಗೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು. ಈಗಿನ ಶಿಕ್ಷಣ ಕೇವಲ ಹೊಟ್ಟೆಪಾಡಿನ ಗುರಿಯಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಮೌಲ್ಯಶಿಕ್ಷಣ ಕೂಡ ಅತ್ಯಗತ್ಯ. ನಮ್ಮ ಸಮಾಜ ಸುಂದರವಾಗಬೇಕಾದರೆ, ಅದರ ಭವಿಷ್ಯವನ್ನು ನಿರ್ಮಾಣ ಮಾಡುವ ಭಾವಿ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಸಿಗಲೇ ಬೇಕಾದ ನೈತಿಕತೆಯನ್ನು ಈ ಮೌಲ್ಯಸುಧಾದ ಮೂಲಕ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಕೊಡುತ್ತಿರುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ…

Read More