Author: admin
ಹೈನಾ ಚಿತ್ರದ ಮೂಲಕ ಬಾಂಗ್ಲಾದೇಶದಿಂದ ನಡೆಯುವ ಗಡಿ ಮೀರಿ ಅಕ್ರಮ ಪ್ರವೇಶದಂತಹ ಗಂಭೀರ ವಿಷಯವನ್ನ ಎತ್ತಿಹಿಡಿದ ನಿರ್ದೇಶಕ ವೆಂಕಟ್ ಭಾರದ್ವಾಜ್, ಇದೀಗ ಹೇ ಪ್ರಭು ಚಿತ್ರದ ಮೂಲಕ ಮತ್ತೊಂದು ಸಮಾಜಮುಖಿ ಹಾಗೂ ಪ್ರಸ್ತುತ ಸನ್ನಿವೇಶಕ್ಕೆ ಸೂಕ್ತವಾದ ವಿಷಯವನ್ನು ಓಲೈಸಿದ್ದಾರೆ. ಈ ಬಾರಿ ಅವರು ಸ್ಪರ್ಶಿಸಿರುವ ವಿಷಯ ಫಾರ್ಮ ಲಾಬಿ ಮತ್ತು ವೈದ್ಯರ ಜೀವನ. ಹೇ ಪ್ರಭು ಎಂಬ ಚಿತ್ರವು ನಮ್ಮ ಗ್ರಾಮಗಳು ಮತ್ತು ಗ್ರಾಮಸ್ಥರು ದೇಶದ ಆರ್ಥಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ನೀಡುತ್ತಿರುವ ನಿರಂತರ ಬೆಂಬಲವನ್ನು ಮತ್ತು ಅವರ ಮಹತ್ವವನ್ನ ತೀವ್ರವಾಗಿ ಒತ್ತಿಹೇಳುತ್ತದೆ. ಹೇ ಪ್ರಭು ಚಿತ್ರ ವೀಕ್ಷಕರನ್ನು ನಗೆಯ ಕಡಲಲ್ಲಿ ಮುಳುಗಿಸುತ್ತದೆ ಎಂದು ನಿರ್ದೇಶಕರು ಹೇಳುತ್ತಾರೆ . ಪ್ರಚಲಿತ ಸೋಶಿಯಲ್ ಮೀಡಿಯಾ ಎಂಬ ಮಾಯೆಯ ಅಲೆಯಲ್ಲಿ ಮೇಲೆದ್ದು ಹೆಸರು ಮಾಡಿರುವ ವ್ಯಕ್ತಿಗಳ ಪರಿಚಯ ಸಿನಿಮಾದಲ್ಲಿ ತೋರಿಸಲಾಗಿದೆ. “from scratch to success” ಎಂಬಂತೆ ಕೆಲವು ನಿಜ ಘಟನೆ ಸಾರಾಂಶವನ್ನು ಇಲ್ಲಿ ಹೇ ಪ್ರಭು ಹೇಳುತ್ತಾನೆ. ಇಂದು ಸಾಮಾಜಿಕ ಜಾಲತಾಣಗಳಲ್ಲಿ “ಹೇ…
ಕಾರ್ಕಳ : ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ಐ.ಐ.ಎಸ್.ಇ.ಆರ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳಿಗೆ ಜನರಲ್ ಮೆರಿಟ್ನಲ್ಲಿ ಸಾವಿರದೊಳಗಿನ ರ್ಯಾಂಕುಗಳು ಬಂದಿದ್ದು, ಸಂಸ್ಥೆಯ ವಿದ್ಯಾರ್ಥಿ ಸರ್ವಜಿತ್ ಕೆ.ಆರ್ ಜನರಲ್ ಮೆರಿಟ್ ವಿಭಾಗದಲ್ಲಿ 90ನೇ ರ್ಯಾಂಕ್ ತನ್ನದಾಗಿಸಿಕೊಂಡಿದ್ದಾರೆ. 1. ಸರ್ವಜಿತ್ ಕೆ.ಆರ್ 90ನೇ ರ್ಯಾಂಕ್, 2. ಆಕಾಶ್ ಎಚ್. ಪ್ರಭು 312ನೇ ರ್ಯಾಂಕ್ (ಕೆಟಗರಿಯಲ್ಲಿ 42ನೇ ರ್ಯಾಂಕ್), 3. ತನ್ಮಯ್ ಜಿ.ಎಸ್ 383ನೇ ರ್ಯಾಂಕ್, 4. ಆಕಾಶ್ ಡಿ 480ನೇ ರ್ಯಾಂಕ್ (ಕೆಟಗರಿಯಲ್ಲಿ 17ನೇ ರ್ಯಾಂಕ್), 5. ಸಿದ್ದಾರ್ಥ್ ಎ. 754ನೇ ರ್ಯಾಂಕ್ (ಕೆಟಗರಿಯಲ್ಲಿ 120ನೇ ರ್ಯಾಂಕ್), 6. ಸತೀಶ್ ಶ್ರೀಶೈಲ ಕರಗನ್ನಿ 931ನೇ ರ್ಯಾಂಕ್ (ಕೆಟಗರಿಯಲ್ಲಿ 159ನೇ ರ್ಯಾಂಕ್), 7. ವಿಶ್ವಾಸ್ ಆರ್ ಆತ್ರೇಯಾಸ್ 986ನೇ ರ್ಯಾಂಕ್, 8. ಮನೋಜ್ ಎಸ್ ಎ 1408ನೇ ರ್ಯಾಂಕ್, 9. ಅಭಿರಾಮ್ ತೇಜ ಪೆರಾ 1489ನೇ ರ್ಯಾಂಕ್, 10. ಚಿಂತನ್…
ಮಧ್ಯ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ 2025 – 26 ನೇ ಸಾಲಿನ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿಯನ್ನು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಉದ್ಘಾಟಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ, ಶಾಲೆಯ ಮುಖ್ಯ ಶಿಕ್ಷಕಿ ಕುಸುಮಾ, ಸುರತ್ಕಲ್ ಘಟಕದ ಪಟ್ಲ ಫೌಂಡೇಶನ್ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ , ಯಕ್ಷ ಗುರು ಪೂರ್ಣಿಮ ಯತೀಶ್ ರೈ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ಕಾವ್ಯ, ಸದಸ್ಯರಾದ ಅನಿಲ್ ಸೂರಿಂಜೆ, ಶಶಿಕಲಾ, ಪರಮೇಶ್ವರ, ರಿತೇಶ್ ಶೆಟ್ಟಿ, ಕೇಶವ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಘಟಕದ ಪಟ್ಲ ಫೌಂಡೇಶನ್ ಉಪಾಧ್ಯಕ್ಷ ಲೀಲಾಧರ ಶೆಟ್ಟಿ ಕಟ್ಲ ಇವರು ವಹಿಸಿದ್ದರು. ಶಿಕ್ಷಕಿ ಸುಜಯ ಧನ್ಯವಾದ ಸಮರ್ಪಿಸಿ, ಶಿಕ್ಷಕ ಹರೀಶ್ ಕಾರ್ಯಕ್ರಮ ನಿರೂಪಿಸಿದರು.
ಹೌದು, ಕನ್ಸ್ಟ್ರಕ್ಷನ್ಸ್ ಕ್ಷೇತ್ರದಲ್ಲೀಗ ದೊಡ್ಡ ಹೆಸರೇ ರುದ್ರಾಂಶ ಕನ್ಸ್ಟ್ರಕ್ಷನ್ಸ್. ಹೆಸರು ಹೇಗೆ ವಿಶಿಷ್ಟವಾಗಿ ಕಾಣುತ್ತದೋ ಅಷ್ಟೇ ವಿಶಿಷ್ಟವಾಗಿ ಕಟ್ಟಡ ಕಾಮಗಾರಿಗಳು ಈ ಹೆಸರಿನ ಕನ್ಸ್ಟ್ರಕ್ಷನ್ ನಡಿ ನಡೆಯುತ್ತಿದೆ. ಮೂಡುಬಿದಿರೆ ಮಾರ್ಪಾಡಿ ಬಳಿ ಅಜಯ್ ಶೆಟ್ಟಿ ಎನ್ನುವ ಯುವಕನ ಕಲ್ಪನೆಯಲ್ಲಿ ಮೂಡಿಬಂದು, ಅದು ಕಾರ್ಯರೂಪಕ್ಕಿಳಿದು ಕೇವಲ ಮೂರೇ ವರ್ಷಗಳಲ್ಲಿ ಉಭಯ ಜಿಲ್ಲೆಯಾದ್ಯಂತ ಬಹಳಷ್ಟು ಜನಪ್ರಿಯತೆ ಗಳಿಸುತ್ತಿದೆ. ಪ್ರತಿಯೊಬ್ಬರಿಗೂ ಒಂದು ಸುಂದರವಾದ ಮನೆ ನಿರ್ಮಾಣದ ಕನಸ್ಸು ಇರುತ್ತದೆ. ಬೇರೆ ಬೇರೆ ರೀತಿಯ ಐಡಿಯಾಗಳೂ ಇರುತ್ತದೆ. ಇದೆಲ್ಲವನ್ನೂ ಮನಗಂಡು ಅತಿ ಕಡಿಮೆ ವೆಚ್ಚದಲ್ಲಿ ಅತೀ ವೇಗದಲ್ಲಿ ಜನರ ಆಶಯಗಳಿಗೆ ಪೂರಕವಾಗಿ, ಅವರ ಕನಸುಗಳಿಗನುಗುಣವಾಗಿ ಪೂರ್ಣಗೊಳಿಸಿ ಸಂತೃಪ್ತಿ ಪಡಿಸಿದ ಹೆಗ್ಗಳಿಕೆ ರುದ್ರಾಂಶ ಕನ್ಸ್ಟ್ರಕ್ಷನ್ಸ್ ಗಿದೆ. ವಿನ್ಯಾಸ, ಗುಣಮಟ್ಟ, ಸಾಮಾಗ್ರಿಗಳಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿರುವ ಈ ಸಂಸ್ಥೆಯಲ್ಲಿ ನುರಿತ ಇಂಜಿನಿಯರ್ಸ್, ಅನುಭವಿ ಸಿಬ್ಬಂದಿಗಳಿದ್ದಾರೆ. ಈಗಾಗಲೇ ದ.ಕ, ಉಡುಪಿ ಜಿಲ್ಲೆಗಳಲ್ಲಿ ತನ್ನದೇ ಆದ ಛಾಪನ್ನೊತ್ತಿರುವ ರುದ್ರಾಂಶ ಕನ್ಸ್ಟ್ರಕ್ಷನ್ಸ್ ಅತಿವೇಗವಾಗಿ ಬೆಳೆದ ಸಂಸ್ಥೆ ಎನ್ನುವ ಪ್ರಶಂಸೆಯನ್ನೂ ಪಡೆದಿದೆ. ನಿರ್ದಿಷ್ಟ ವೆಚ್ಚದಲ್ಲಿ,…
ಯಕ್ಷಗಾನ ಕ್ಷೇತ್ರದ ಹಿರಿಯ ಪೌರಾಣಿಕ ಯಕ್ಷಗಾನ ಪ್ರಸಂಗಕರ್ತರು ಹಾಗೂ ವಿಶ್ರಾಂತ ಶಿಕ್ಷಕರು, ಯಕ್ಷ ಸಾಹಿತಿ, ಅರ್ಥದಾರಿಗಳು, ಯಕ್ಷಗಾನ ಕ್ಷೇತ್ರದ ದಿಗ್ಗಜರಾದ ಕಂದಾವರ ರಘುರಾಮ ಶೆಟ್ಟಿಯವರಿಗೆ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಕೆಂಪೇಗೌಡ ರಾಜ್ಯ ಪ್ರಶಸ್ತಿಯನ್ನು ಪರಮ ಪೂಜ್ಯ ಶ್ರೀ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕರ್ನಾಟಕ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಸಿ.ಎನ್ ಅಶ್ವಥ್ ನಾರಾಯಣ್ ರವರ ನೇತೃತ್ವದಲ್ಲಿ ಗಣ್ಯ ಮಾನ್ಯರ ಸಮ್ಮುಖದಲ್ಲಿ ನಡೆಯಲಿರುವ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಕಂದಾವರ ರಘುರಾಮ ಶೆಟ್ಟಿ ಪ್ರತಿಷ್ಠಾನದ ನಿರ್ದೇಶಕರಾದ ಬೇಲೂರು ಸಂತೋಷ ಕುಮಾರ ಶೆಟ್ಟಿ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಈ ಅದ್ದೂರಿಯ ವಿಜೃಂಭಣೆಯಿಂದ ನಡೆಯುತ್ತಿರುವ ಭವ್ಯ ದಿವ್ಯ ವೇದಿಕೆಯಲ್ಲಿ ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಭಾಜನರಾದ ಯಕ್ಷ ಸಂಪತ್ತು ಎಂಟು ದಶಕಗಳಿಂದ ಯಕ್ಷ ಸೇವೆಯನ್ನು ಯಾವುದೇ ಸ್ವಾರ್ಥವಿಲ್ಲದೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಕಂದಾವರ ರಘುರಾಮ ಶೆಟ್ಟಿ…
ಆಳ್ವಾಸ್ ಪುನರ್ಜನ್ಮ ಸಮಗ್ರ ವೈದ್ಯಕೀಯ ಚಿಕಿತ್ಸೆಯ ದುಶ್ಚಟ ನಿವಾರಣಾ ಕೇಂದ್ರದಲ್ಲಿ ‘ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಣಿಕೆ ತಡೆ ದಿನ’ದಂದು ಆಳ್ವಾಸ್ ಹೋಮಿಯೋಪತಿ ಕಾಲೇಜು ಸಭಾಂಗಣದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಮೂಡುಬಿದಿರೆ ಪೋಲೀಸ್ ಠಾಣಾ ಉಪನಿರೀಕ್ಷಕಿ ಪ್ರತಿಭಾ ಮಾತನಾಡಿ, ಮಾದಕ ದ್ರವ್ಯಗಳ ವ್ಯಸನಕ್ಕೆ ಹೆಚ್ಚಾಗಿ ಯುವಕರು ಮತ್ತು ಯುವತಿಯರು ಬಲಿಯಾಗುತ್ತಿದ್ದಾರೆ. ಇವುಗಳ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕ್ಷೀಣಿಸುತ್ತದೆ. ಇದರಿಂದ ಕೇವಲ ಸೇವಿಸುವವನಿಗೆ ಮಾತ್ರವಲ್ಲ, ಸಮಾಜಕ್ಕೂ ತೊಂದರೆಯಾಗುತ್ತಿದೆ. ಸಮಾಜದಲ್ಲಿ ನಡೆಯುವ ಅಪರಾಧ ಕೃತ್ಯಗಳಾದ ಕಳ್ಳತನ, ಕೊಲೆ, ಅತ್ಯಾಚಾರ ಇತ್ಯಾದಿಗಳಿಗೆ ತೊಡಗಿರುವ ೭೦% ಆರೋಪಿಗಳು ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗಿರುತ್ತಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಪುನರ್ಜನ್ಮ ವೈದ್ಯಕೀಯ ನಿರ್ದೇಶಕ ಡಾ. ವಿನಯ್ ಆಳ್ವ, ‘೨೦೧೯ರಲ್ಲಿ ಭಾರತದಲ್ಲಿ ನಡೆದ ಸಮೀಕ್ಷೆಯ ಪ್ರಕಾರ ೧೭ ಕೋಟಿ ಮದ್ಯಪಾನ, ೫.೧ ಕೋಟಿ ಓಪಿಯಂ, ೩.೨ ಕೋಟಿ ಗಾಂಜಾ ಸೇವಿಸುವವರಿದ್ದು, ಆದರೆ ಕೇವಲ ೬೧೨ ನೋಂದಾಯಿಸಲ್ಪಟ್ಟ ದುಶ್ಚಟ ನಿವಾರಣಾ ಕೇಂದ್ರಗಳಿವೆ.…
ಗಣಿತನಗರ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ತಾರೀಕು 28, ಶನಿವಾರದಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ರಾಮಕೃಷ್ಣ – ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರಿನ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದು, ‘ಸ್ವನಿಯಂತ್ರಣ : ಬಂಧನವೋ? ಸ್ವಾತಂತ್ರ್ಯವೋ?’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸ ಬಹುದೆಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾಗಿರಿ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಾದಕ ವ್ಯಸನ ಜಾಗೃತಿ ಸಮಿತಿಯಿಂದ ‘ವಿಶ್ವ ತಂಬಾಕು ರಹಿತ ದಿನದ’ ಅಂಗವಾಗಿ ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ವಿ ಎಸ್ ಆಚಾರ್ಯ ಸಭಾ ಭವನದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್ನಿಂದ ಆರಂಭವಾಗುವ ಚಟಗಳು ನಿಧಾನವಾಗಿ ಮಾದಕವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಮೊದಲು ಗ್ರಾಹಕನಾಗಿರುವ ವ್ಯಕ್ತಿ ನಂತರ ಹಣದ ಆಸೆಯಿಂದ ಮಾದಕದ್ರವ್ಯಗಳ ವ್ಯಾಪಾರಕ್ಕೆ ಇಳಿಯುತ್ತಾನೆ. ಸಮಾಜದಲ್ಲಿ ಇಂತಹ ಕೃತ್ಯಕ್ಕೆ ವಿದ್ಯಾರ್ಥಿಗಳನ್ನೇ ಬಲೆ ಬೀಸಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರಬೇಕು. ಮಕ್ಕಳ ಇಂತಹ ಕೃತ್ಯದಿಂದ ತಂದೆ ತಾಯಂದಿರು ಅವಮಾನ ಎದುರಿಸುವಂತಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯಲ್ಲಿ ನಿರತರಾಗಿರುವುದು ಹಾಗೂ ಒಳ್ಳೆಯ ಗೆಳೆಯರ ಸ್ನೇಹ ಬೆಳೆಸುವುದು ಅಗತ್ಯ ಎಂದರು. ಮೊದಲ ಬಾರಿ ಡ್ರಗ್ಸ್ ಸೇವನೆ ಮಾಡಿದವರಿಗೆ ರೂ 10,000 ದಂಡ ಅಥವಾ 6 ತಿಂಗಳು ಅಥವಾ 1…
ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT–2025) ಫಲಿತಾಂಶವನ್ನು ಜೂನ್ 24, 2025 ರಂದು ಪ್ರಕಟಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಸಂಸ್ಥೆಯ ವಿದ್ಯಾರ್ಥಿ ಮೋಹಿತ್ ಎಂ ಅವರು ರಾಷ್ಟ್ರಮಟ್ಟದಲ್ಲಿ 4ನೇ ರ್ಯಾಂಕ್ ( ಕೆಟಗರಿ ವಿಭಾಗದಲ್ಲಿ) ಜನರಲ್ ಮೆರಿಟ್ ನಲ್ಲಿ 1845ನೇ ರ್ಯಾಂಕ್ ಗಳಿಸಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ (IISER) ಪ್ರವೇಶ ಪರೀಕ್ಷೆಯಲ್ಲಿ ದೇಶದಾದ್ಯಂತ ಸಾವಿರಾರು ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಮೋಹಿತ್ ಅವರ ಸಾಧನೆ ಸಂತೋಷದ ಸಂಗತಿಯಾಗಿದೆ. ಉಳಿದಂತೆ ಎಂ. ಮಂಜುನಾಥ್ 1457, ಚೇತನ್ ಗೌಡ ಎನ್.ಎಸ್ 1718 ( ಕೆಟಗರಿ ರ್ಯಾಂಕ್ 314 ), ತೇಜಸ್ ವಿ ನಾಯಕ್ 2423 ( ಕೆಟಗರಿ ರ್ಯಾಂಕ್ 460), ಶ್ರೀರಕ್ಷಾ 3127, ವೀರೇಂದ್ರ ಮುಟ್ಟೂರು 3960, ಹರ್ಷಿತ್ ರಾಜು ಎಚ್. ಎಂ…
ಮುಂಬಯಿಯ ಖ್ಯಾತ ಉದ್ಯಮಿಗಳಾದ ಸುಧಾಕರ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಸೊಲ್ಯೂಷನ್ 1 ಇಂಟಿರಿಯರ್ಸ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ಪಾಲುದಾರರಾಗಿರುವ ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.