Author: admin
ಗೆಲ್ಲುವವರನ್ನು ಸೋಲಿಸುವ, ಸೋಲುವವರನ್ನು ಗೆಲ್ಲಿಸುವ ಶಕ್ತಿ ಬಂಟ ಸಮುದಾಯಕ್ಕೆ ಇದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಮತ್ತು ಉಡುಪಿ ಬಂಟರ ಸಂಘದ ಗೌರವಾಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದ್ದಾರೆ. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಜಾಗತಿಕ ಬಂಟರ ಸಂಘದ ಮೂಲಕ ಬಂಟರ ಬಹು ಅಗತ್ಯದ ಎರಡು ಬೇಡಿಕೆಗಳಾದ ಮೀಸಲಾತಿ ಅಂದರೆ ಹಿಂದುಳಿದ ವರ್ಗದ 3ಬಿಯಲ್ಲಿದ್ದ ಮೀಸಲಾತಿಯನ್ನು 2ಎ.ವರ್ಗಕ್ಕೆ ಸೇರಿಸಬೇಕು. ಆದೇ ರೀತಿಯಲ್ಲಿ ಬಂಟ ಸಮುದಾಯದವರಿಗೆ ನಿಗಮ ರೂಪಿಸಿಕೊಡಬೇಕು ಅನ್ನುವ ನಮ್ಮ ಈ ಎರಡು ಬೇಡಿಕೆಗಳನ್ನು ಕರ್ನಾಟಕ ಸರ್ಕಾರಕ್ಕೆ ಬಹು ವರುಷಗಳ ಹಿಂದೆಯೇ ಮನವಿ ಸಲ್ಲಿಸಿದ್ದೇವೆ. ಆದರೆ ಸರ್ಕಾರ ಈ ಎರಡು ಬಹು ಮುಖ್ಯ ಬೇಡಿಕೆಗಳ ಬಗ್ಗೆ ಗಂಭೀರ ಮೌನ ವಹಿಸಿರುವುದು ಬಂಟರ ಬಡ ವರ್ಗದಿಂದ ಹಿಡಿದು ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಮೀಣ ಪ್ರದೇಶದಿಂದ ಹಿಡಿದು ದೇಶ ವಿದೇಶಗಳಲ್ಲಿ ಬದುಕು ಕಟ್ಟಿಕೊಂಡಿರುವ ಬಂಟರಿಗೆ ಅತೀವ ಬೇಸರ ತಂದಿದೆ ಅನ್ನುವುದನ್ನು ನಮ್ಮ ರಾಜ್ಯದ ಬಿಜೆಪಿ ಘನ ಸರ್ಕಾರಕ್ಕೆ ನಮ್ಮೆಲ್ಲ…
ಬೆಂಗಳೂರಿನ ಕುಂದಲಹಳ್ಳಿ ಗೇಟ್ ನ ಬೇಕರಿಯ ಗಲಭೆ ಹಾಗೂ ಇಲೆಕ್ಟ್ರಾನಿಕ್ ಸಿಟಿಯ ವಿಲೇಜ್ ರೆಸ್ಟೊರೆಂಟ್ ಹತ್ತಿರ ಪುಡಿ ರೌಡಿಗಳು ಗಲಾಟೆ ಮಾಡಿ ದಾಂದಲೆ ನಡೆಸಿದ್ದರು. ಈ ಗಲಬೆಯನ್ನು ಉಲ್ಲೇಖಿಸಿ ಮಾನ್ಯ ಮುಖ್ಯಮಂತ್ರಿಯವರನ್ನು ಅವರ ಆರ್ ಟಿ ನಗರದ ನಿವಾಸದಲ್ಲಿ ಭೇಟಿ ಮಾಡಿ ಮಿತಿ ಮೀರಿದ ಪುಂಡರ ಹಾವಳಿಯನ್ನು ಹತ್ತಿಕ್ಕುವಲ್ಲಿ ಪೋಲಿಸ್ ಇಲಾಖೆಯಿಂದ ಕಠಿಣ ಕ್ರಮದ ಜಾರಿಗೆ ಒತ್ತಾಯಿಸಿ ಬೆಂಗಳೂರು ಬಂಟರ ಹೊಟೇಲು ಮಾಲಿಕರ ಸಂಘದ ವತಿಯಿಂದ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಧುಕರ ಎಂ ಶೆಟ್ಟಿ, ಗೌರವ ಕಾರ್ಯದರ್ಶಿ ಸಂತೋಷ ಕುಮಾರ ಶೆಟ್ಟಿ ಹಾಗೂ ಉಪಾದ್ಯಕ್ಷರಾದ ಶ್ರೀನಿವಾಸ ಶೆಟ್ಟಿ ಉಪಸ್ಥಿತರಿದ್ದರು.
ಪಿಂಪ್ರಿ – ಚಿಂಚ್ವಾಡ್ ಬಂಟರ ಸಂಘ ಪುಣೆಯಲ್ಲಿ ಮೊದಲ ಬಾರಿಗೆ ಕುಣಿತ ಭಜನೆಯನ್ನು ಆಯೋಜಿಸಿ ಒಂದು ಉತ್ತಮ ದೇವತಾ ಕಾರ್ಯಕ್ಕೆ ನಾಂದಿ ಹಾಡಿದೆ . ಭಜನೆ ಎಂದರೆ ಭಗವಂತನನ್ನು ತೃಪ್ತಿ ಪಡಿಸುವುದು .ನಾವು ದೈನಂದಿನ ಜೀವನದಲ್ಲಿ ಭಗವಂತನನ್ನು ಮನಸ್ಸಿನಲ್ಲಿ ಸ್ಮರಣೆ ಮಾಡಿಕೊಂಡಿದ್ದರೆ ನಮ್ಮ ಬದುಕು ಪಾವನವಾಗುತ್ತದೆ . ನಮಗೆ ಬದುಕಿನಲ್ಲಿ ಯೋಗ ಹಾಗೂ ಯೋಗ್ಯತೆಯನ್ನು ಕರುಣಿಸುವವನೂ ದೇವರೇ ಆಗಿದ್ದಾರೆ . ದೇವರ ಆಶೀರ್ವಾ ದವೊಂದಿದ್ದರೆ ಆಯುರಾರೋಗ್ಯ ಸುಖ ಸಮೃದ್ಧಿ ಸಾಧ್ಯವಾಗುತ್ತದೆ . ಕನಕದಾಸರು ಕೃಷ್ಣನನ್ನು ಭಕ್ತಿಯಿಂದ ಭಜಿಸಿ ಕೃಷ್ಣ ದೇವರನ್ನು ಪ್ರತ್ಯಕ್ಷಗೊಳಿಸಿ ಸಾಕ್ಷಾತ್ಕಾರಗೊಳಿಸಿಕೊಂಡಿದ್ದಾರೆ .ನಾವು ಯಾವುದೇ ಭಾಷೆಯಿಂದಲೂ ಭಗವಂತನ ಭಜನೆಯನ್ನು ಮಾಡಿ ದೇವರನ್ನು ಸಂತೃಪ್ತಿಗೊಳಿಸಬಹುದಾಗಿದೆ. ಹಾಡಿ ,ಕುಣಿದು ,ಕುಳಿತು ಯಾವುದೇ ರೀತಿಯಿಂದಲೂ ಭಜನೆ ಮಾಡಿದರೆ ದೇವರ ಅನುಗ್ರಹ ಖಂಡಿತಾ ಸಿಗುತ್ತದೆ .ಆದುದರಿಂದ ಭಜನೆ ಮೋಕ್ಷಕ್ಕೆ ಸುಲಭ ಸಾಧನವಾಗಿದೆ ಎಂದು ಪುಣೆಯ ಪ್ರಸಿದ್ಧ ಪುರೋಹಿತ ಹಾಗೂ ಜ್ಯೋತಿಷ್ಯರಾದ ವೇದಮೂರ್ತಿ ಹರೀಶ್ ಐತಾಳ್ ನುಡಿದರು . ಅವರು ಡಿ . 10 ರಂದು ಶ್ರೀ…
ಪಿಂಪ್ರಿ ಚಿಂಚ್ವಾಡ್ ತುಳು ಸಂಘದ ದಶಮಾನೋತ್ಸವದ ಇಂದಿನ ಕಾರ್ಯಕ್ರಮ ನನ್ನ ಜೀವಮಾನದಲ್ಲಿ ಕಂಡ ಅತ್ಯಂತ ಸರ್ವಶ್ರೇಷ್ಠ ಕಾರ್ಯಕ್ರಮವಾಗಿದೆ. ಹೊರನಾಡಿನಲ್ಲಿದ್ದರೂ ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಕಾರ್ಯಕ್ರಮವನ್ನು ಅಚ್ಚುಕಟ್ಟಾ ಗಿಸಿದ ರೀತಿ, ಪ್ರತಿಯೊಬ್ಬರನ್ನೂ ಗೌರವಿಸುವ ಸಂಪ್ರದಾಯ ಅನನ್ಯವಾಗಿದ್ದು ಇದನ್ನು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ಸಂಘ ದೇಶದಾದ್ಯಂತ ಇರುವ ಅನ್ಯ ಸಂಘಗಳಿಗೆ ಮಾದರಿಯಾಗಿದೆ ಎಂದು ಕರ್ನಾಟಕ ಸರಕಾರದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಭಿಪ್ರಾಯಪಟ್ಟರು. ಅವರು ಡಿ .4 ರಂದು ಚಿಂಚ್ವಾಡ್ ನ ರಾಮಕೃಷ್ಣ ಮೋರೆ ಸಭಾಗೃಹದಲ್ಲಿ ನಡೆದ ಪಿಂಪ್ರಿ ಚಿಂಚ್ವಾಡ್ ತುಳು ಸಂಘದ ದಶಮಾನೋತ್ಸವ ಸಮಾರಂಭವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು. ನಾವೆಲ್ಲ ತುಳುವರೆಂಬ ಹೆಮ್ಮೆ ನಮಗಿದೆ. ನಮ್ಮ ಅವಳಿ ಜಿಲ್ಲೆಗಳು ಹತ್ತು ಹಲವು ವೈಶಿಷ್ಟ್ಯವನ್ನು ಹೊಂದಿದ ಜಿಲ್ಲೆಗಳಾಗಿದ್ದು ಶಿಕ್ಷಣ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿ ಗುರುತಿಸಿಕೊಳ್ಳುತ್ತಿದೆ. ದೇಶಕ್ಕೆ ೪ ರಾಷ್ಟ್ರೀಕೃತ ಬ್ಯಾಂಕ್ ಗಳನ್ನೂ ನೀಡಿದ ಹೆಗ್ಗಳಿಕೆ ನಮ್ಮ ಜಿಲ್ಲೆಗಳಿಗಿದೆ. ದೇಶದಲ್ಲಿಯೇ ಅಭಿವೃದ್ಧಿ ಹೊಂದಿದ ಜಿಲ್ಲೆಗಳಲ್ಲಿ ಮೊದಲ ಸ್ಥಾನ ನಮ್ಮ ಜಿಲ್ಲೆಗಳಿಗಿದೆ. ನಾವೆಲ್ಲ ತುಳುವರಾಗಿರುವುದರಿಂದಲೇ…
ಪುಣೆ ಬಂಟರ ಸಂಘದ ವತಿಯಿಂದ ಸಂಘದ ಕಾರ್ಯಕಾರಿ ಸಮಿತಿಯ ಸಮಾಲೋಚನಾ ವಿಶೇಷ ಸಭೆಯೊಂದು ಜೂನ್ 15 ರಂದು ನಗರದ ಕೊರೊನೇಟ್ ಹೋಟೆಲ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆಯಿತು . ಈ ಸಭೆಯಲ್ಲಿ ಸಂಘದ ಮೂಲಕ ಭವಿಷ್ಯದಲ್ಲಿ ಸಮಾಜಬಾಂಧವರಿಗೆ ಉಪಯೋಗವಾಗುವಂತಹ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು . ಈ ಸಂದರ್ಭ ಸಂತೋಷ್ ಶೆಟ್ಟಿಯವರು ಮಾತನಾಡಿ ಸಂಘದ ಮೂಲಕ ಸಮಾಜಕ್ಕೆ ನೆರವಾಗುವಂತಹ ವಿವಿಧ ಕಾರ್ಯಯೋಜನೆಗಳನ್ನು ಸದ್ಯೋಭವಿಷ್ಯದಲ್ಲಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗುವುದು . ಶಿಕ್ಷಣ ,ಆರೋಗ್ಯ ,ಸಾಂಸ್ಕೃತಿಕ ,ಧಾರ್ಮಿಕ ,ಸಾಮಾಜಿಕ ಕಾರ್ಯಗಳು ಸಂಘದ ಆದ್ಯತೆಯಾಗಿದ್ದು ಸಂಘದಿಂದ ಹಮ್ಮಿಕೊಳ್ಳುವ ಯಾವುದೇ ಯೋಜನೆಗಳು ಸಮಾಜಬಾಂಧವರ ಹಿತದೃಷ್ಟಿಯಿಂದ ರೂಪಿಸಲು ನಾವು ಚಿಂತನೆ ನಡೆಸುತ್ತಿದ್ದೇವೆ . ಇದರ ಅಂಗವೆಂಬಂತೆ ಆಗಸ್ಟ್ ಮೊದಲ ವಾರದಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು . ಈ ಸಂದರ್ಭ ಸಾಂಸ್ಕೃತಿಕ ಸಮಿತಿಯ ಆಯೋಜನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ,ಸಮಾಜದ ವಿವಿಧ ಕ್ಷೇತ್ರದ ಸಾಧಕರನ್ನು…
ಮುಲುಂಡ್ ಬಂಟ್ಸ್ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟದಲ್ಲಿ ಥ್ರೋ ಬಾಲ್ ವಿಭಾಗದಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಮಹಿಳೆಯರು ಭಾಗವಹಿಸಿದರು
ಮುಲುಂಡ್ ಬಂಟ್ಸ್ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟದಲ್ಲಿ ಥ್ರೋ ಬಾಲ್ ವಿಭಾಗದಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಮಹಿಳೆಯರು ಭಾಗವಹಿಸಿದರು. ಈ ಸಂಧರ್ಭದಲ್ಲಿ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಮುಲುಂಡ್ ಬಂಟ್ಸ್ ನ ಅಧ್ಯಕ್ಷ ವಸಂತ್ ಶೆಟ್ಟಿ, ರವೀಂದ್ರ ಶೆಟ್ಟಿ ಕೊಟ್ರಪಾಡಿ ಗುತ್ತು, ಮೋಹನ್ ದಾಸ್ ಶೆಟ್ಟಿ, ಗಿರೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. Bunts Institute of Heritage and Culture BUNTS WELFARE SOCIETY BANGALORE
ಸಂಘಟನೆಯೆನ್ನುವುದು ಒಂದು ರಥದಂತೆ. ಆ ರಥವನ್ನು ಒಬ್ಬರೋ ಇಬ್ಬರೋ ಎಳೆಯಲು ಸಾಧ್ಯವಿಲ್ಲ. ಸಮಾಜದ ಎಲ್ಲರೂ ಒಂದಾಗಿ ಆ ರಥವನ್ನು ಎಳೆದಾಗ ಆ ರಥ ಸರಾಗವಾಗಿ ಸಾಗಿ ರಥೋತ್ಸವ ಯಶಸ್ವಿಯಾಗುತ್ತದೆ ಎಂದು ಬಹರೈನ್ ದ್ವೀಪದ ಅನಿವಾಸಿ ಬಂಟರ ಸಂಘಟನೆಯ ಇಪ್ಪತ್ತನೇ ವಾರ್ಷಿಕೋತ್ಸವದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ಕಳೆದ ಇಪ್ಪತ್ತು ವರುಷಗಳಿಂದ ಸಮಾಜದ ನೋವು ನಲಿವುಗಳಿಗೆ ಸ್ಪಂದಿಸುತ್ತಾ ದ್ವೀಪದ ಬಂಟ ಬಾಂಧವರನ್ನು ತನ್ನ ಮುಖ್ಯವಾಹಿನಿಯಲ್ಲಿ ಸೇರಿಸಿಕೊಂಡು ಕಾರ್ಯ ನಿರ್ವಹಿಸುತ್ತಾ ಬಂದಿರುವ ಬಂಟ್ಸ್ ಬಹರೈನ್ ಸಂಘಟನೆಯ ಪ್ರಸಕ್ತ ಅಧ್ಯಕ್ಷರಾಗಿರುವ ಸೌಕೂರು ಅರುಣ್ ಶೆಟ್ಟಿಯವರ ಸಾರಥ್ಯದಲ್ಲಿ ಇಲ್ಲಿನ ಪಂಚತಾರಾ ಹೊಟೇಲ್ ಕ್ರೌನ್ ಪ್ಲಾಜಾದ ಸಭಾಂಗಣದಲ್ಲಿ ಇಪ್ಪತ್ತನೆಯ ವಾರ್ಷಿಕೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಬಂಟ ಸಮುದಾಯದ ಸಾಧಕರಾದ ಸಮಾಜ ಸೇವಕರೂ, ಕಾಪು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರೂ ಆಗಿರುವ ಗುರ್ಮೆ ಸುರೇಶ್ ಶೆಟ್ಟಿ, ತುಳು, ಕನ್ನಡ ಚಲನಚಿತ್ರ ರಂಗದ ಖ್ಯಾತ…
ಮೂಲತಃ ಕರ್ನಾಟಕದಿಂದ ಬಂದು ಕರ್ಮ ಭೂಮಿಯಾದ ಈ ಮಹಾರಾಷ್ಟ್ರದಲ್ಲಿ ತನ್ನ ಅಚಲ ಪರಿಶ್ರಮದೊಂದಿಗೆ ಒರ್ವ ಯಶಸ್ವೀ ಉದ್ಯಮಿಯಾಗಿ, ರಾಜಕೀಯ ನೇತಾರನಾಗಿ, ಜನರ ಸುಖ-ದುಖಃಗಳಲ್ಲಿ ಭಾಗಿಯಾಗಿ ಸಮಾಜ ಸೇವೆ ಮಾಡುತ್ತಿರುವ ಅರವಿಂದ್ ಶೆಟ್ಟಿಯವರ ಜೀವನದ ನಡೆ ನುಡಿಯ ಹಾದಿ ಶ್ಲಾಘನೀಯ. ಪರಿವಾರದ ಸದಾ ಪ್ರೋತ್ಸಾಹದಿಂದ ಅರವಿಂದ ಶೆಟ್ಟಿಯವರು ಇಂದು ಯಶಸ್ವೀ ರಾಜಕೀಯ ನೇತಾರನಾಗಿ ಮುಂದುವರಿಯುತ್ತಿರುವುದು ಸಂತೋಷದಾಯಕವಾಗಿದೆ. ದೇವರ ಅನುಗ್ರಹದ ಸಾಕಾರದಿಂದ ಅರವಿಂದ ಶೆಟ್ಟಿಯವರು ಇಂದು ಉನ್ನತ ಸ್ಥಾನಮಾನವನ್ನು ಪಡೆದಿದ್ದಾರೆ. ಅರವಿಂದ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದಲ್ಲಿ ಮಹಾದಾನಿಯಾಗಿದ್ದು ದಾನರೂಪದ ಹಣದಿಂದ ಸಮಾಜದ ಒಳಿತಿಗಾಗಿ ವಿನಿಯೋಗಿಸಲಾಗುತ್ತಿದೆ. ಹೀಗೆ ಉಳ್ಳವರ ಮಹಾದಾನದಿಂದ ಹಿಂದುಳಿದ ವರ್ಗದ ಜನತೆಯ ಶ್ರೇಯೋಭಿವೃದ್ದಿಗಾಗಿ ವಿನಿಯೋಗಿಸಲಾಗುತ್ತಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ನುಡಿದರು. ಅವರು ಇಲ್ಲಿನ ಕನಕಿಯ ರೋಡ್ ನಲ್ಲಿರುವ ಶೆಹಣಾಯಿ ಸಭಾಗೃಹದಲ್ಲಿ ಮೀರಾ ಭಯಂದರ್ ದಕ್ಷಿಣ ಭಾರತೀಯ ಬಿಜೆಪಿ ಘಟಕ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ಆಯೋಜಿಸಿದ ಉದ್ಯಮಿ ಹಾಗೂ ರಾಜಕೀಯ ನೇತಾರ…
ಟಿವಿ ವರದಿಗಾರರಿಗೆ ಮೂರು ‘ಸಿ’ ಮುಖ್ಯ: ಪ್ರಕಾಶ್ ಡಿ. ರಾಂಪುರ ವಿದ್ಯಾಗಿರಿ: ‘ಯಶಸ್ವಿ ಟಿವಿ ವರದಿಗಾರರಾಗಲು ಮೂರು ‘ಸಿ’ ಬಹುಮುಖ್ಯ. ವಿಷಯ (ಕಂಟೆಂಟ್), ಸಂಪರ್ಕ (ಕಾನ್ಟ್ಯಾಕ್ಟ್ಸ್) ಹಾಗೂ ಸಂವಹನ (ಕಮ್ಯುನಿಕೇಷನ್)ದಿಂದ ಉತ್ತಮ ವರದಿ ನೀಡಬಹುದು’ ಎಂದು ಪಬ್ಲಿಕ್ ಟಿವಿ ವರದಿಗಾರ ಪ್ರಕಾಶ್.ಡಿ.ರಾಂಪುರ ಅಭಿಪ್ರಾಯ ವ್ಯಕ್ತಪಡಿಸಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಭಿವ್ಯಕ್ತಿ ವೇದಿಕೆ ಶುಕ್ರವಾರ ಹಮ್ಮಿಕೊಂಡ ‘ಹಿರಿಯ ವಿದ್ಯಾರ್ಥಿ ಜೊತೆ ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ವಿದ್ಯಾರ್ಥಿ ದೆಸೆಯಲ್ಲಿ ಪತ್ರಿಕೋದ್ಯಮದ ವಿವಿಧ ಕೌಶಲಗಳನ್ನು ಕರಗತ ಮಾಡಿಕೊಳ್ಳಬೇಕು. ಒಂದು ಕೌಶಲಕ್ಕೆ ಸೀಮಿತವಾಗಬೇಡಿ. ಎಲ್ಲವನ್ನು ಕಲಿತಾಗ ಒಂದರಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದರು. ‘ವೃತ್ತಿಯಲ್ಲಿ ಆತ್ಮವಿಶ್ವಾಸ ಮುಖ್ಯ. ಪತ್ರಿಕೋದ್ಯಮದಲ್ಲಿ ಕೆಲವೊಮ್ಮೆ ಭಂಡ ಧೈರ್ಯ ಬೇಕಾಗುತ್ತದೆ. ಛಲದಿಂದ ಮುಂದಡಿ ಇಡಬೇಕು’ ಎಂದು ಅವರು ತಮ್ಮ ಅನುಭವಗಳನ್ನು ಬಿಚ್ಚಿಟ್ಟರು. ರಕ್ಷಣಾ ಸಚಿವಾಲಯದಿಂದ ಅಧಿಕೃತವಾಗಿ ಯುದ್ಧ ವರದಿಗಾರಿಕೆಗೆ ತರಬೇತಿ ಪಡೆದ ಕುರಿತು ವಿವರಿಸಿದ ಅವರು, ‘ಭಾರತೀಯ ರಕ್ಷಣಾ ಮಂತ್ರಾಲಯವು ಯುದ್ಧ ವರದಿಗಾರಿಕೆ ಸಂದರ್ಭದಲ್ಲಿ…
ಕೃಷ್ಣಾಪುರ–ಕಾಟಿಪಳ್ಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 45ನೇ ಗಣೇಶೋತ್ಸವದ ಪ್ರಯುಕ್ತ ಕೃಷ್ಣಾಪುರ ಯುವಕ ಮಂಡಲವು ಕೇಂದ್ರ ಮೈದಾನದಲ್ಲಿ ಯಕ್ಷಗಾನ ಸ್ಪರ್ಧೆಯನ್ನು ಏರ್ಪಡಿಸಿತ್ತು. ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಆಹ್ವಾನಿತ ಕಾಲೇಜು ಯಕ್ಷತಂಡಗಳ ಅಂತರ್ ಜಿಲ್ಲಾ, ಅಂತರ್ ಕಾಲೇಜು ತೆಂಕುತಿಟ್ಟಿನ ಯಕ್ಷಗಾನ ಸ್ಪರ್ಧೆಯು ದಿನಾಂಕ 10-09-2023ರಂದು ಜರಗಿತು. ಈ ಕಾರ್ಯಕ್ರಮವನ್ನು ಪಟ್ಲ ಫೌಂಡೇಶನ್ ಯಕ್ಷಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ್ ಉದ್ಘಾಟಿಸಿ ಮಾತನಾಡುತ್ತಾ “ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಕಲೆಗಳ ಅಧ್ಯಯನ ಹಾಗೂ ಕಾರ್ಯ ವಿಸ್ತಾರಕ್ಕೆ ಮಹತ್ವ ನೀಡಲಾಗಿದ್ದು, ಯಕ್ಷ ಶಿಕ್ಷಣ ಪರಿಗಣನೆಗೆ ಸೂಕ್ತವಾಗಿದೆ. ಯಕ್ಷಗಾನ ಸರ್ವಾಂಗ ಸುಂದರ ಕಲೆ, ಕಲಾ ಪೋಷಣೆಗೆ ಪ್ರೇಕ್ಷಕರ ಪ್ರೋತ್ಸಾಹವು ಅಗತ್ಯ. ಪಟ್ಲ ಫೌಂಡೇಶನ್ ವತಿಯಿಂದ 37 ಶಾಲೆಗಳಲ್ಲಿ ಉಚಿತ ಯಕ್ಷ ಶಿಕ್ಷಣ ಪ್ರಾರಂಭಗೊಂಡಿದ್ದು, ಮುಂದಿನ 10 ವರ್ಷಗಳಲ್ಲಿ 15,000 ವಿದ್ಯಾರ್ಥಿಗಳಿಗೆ ಯಕ್ಷಗಾನವನ್ನು ಕಲಿಸುವ ಗುರಿಯಿದೆ” ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ…