Author: admin
ಅಗ್ನಿವೀರ್ ನಂತಹ ಯೋಜನೆಗಳಲ್ಲಿ ಯುವ ಜನರು ಸೇರಿಕೊಂಡು ಸೇವೆಯಲ್ಲಿ ಸ್ವಲ್ಪ ವರ್ಷ ಸೇವೆ ಮಾಡಿ ಬಂದರೆ ಆತನ ಜೀವನ ಪೂರ್ತಿ ಶಿಸ್ತಿನಲ್ಲಿ ಬದುಕುತ್ತಾನೆ. ಎಲ್ಲಾ ಪ್ರಜೆಗಳು ಸೇನೆಯ ತರಬೇತಿ ಪಡೆದಾಗ ಶಿಸ್ತಿನ ಸ್ವಸ್ಥ ಜೀವನ ನಡೆಸುವುದು ಸಾಧ್ಯವಾಗುತ್ತದೆ. ಐಲೇಸಾ ಸಂಸ್ಥೆ ಸಂದೀಪ ನಂದಾದೀಪದಂತೆ ಕಾರ್ಯಕ್ರಮ ಮೂಲಕ ಸೈನಿಕರ ಬಗ್ಗೆ ಗೌರವ ಭಾವನೆ ಇಟ್ಟುಕೊಂಡಿರುವುದು ಅನುಕರಣೀಯ ಎಂದು ವಾಯುಸೇನೆಯ ಮಾಜಿ ವಾರಂಟ್ ಆಫೀಸರ್ ಆತ್ರಾಡಿ ಸುರೇಶ ಹೆಗ್ಡೆ ಅಭಿಪ್ರಾಯಪಟ್ಟರು. ಬೆಂಗಳೂರಿನ ಐಲೇಸಾ ದಿ ವಾಯ್ಸ್ ಆಫ್ ಒಶಿಯನ್ ಸಂಸ್ಥೆ ಜುಲೈ 14ರಂದು ಹುತಾತ್ಮ ಮೇಜರ್ ಸಂದೀಪ್ ಉನ್ನಿ ಕೃಷ್ಣನ್ ರಿಗೆ ಸಮರ್ಪಿಸಿದ ‘ನಂದಾದೀಪ ಸಂದೀಪ’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಮಾತನಾಡಿ, ಐಲೇಸಾ ಹೆಸರು ಕೇಳಿದ್ದೆ ಆದರೆ ಅವರ ಬಗ್ಗೆ ಅಷ್ಟೇನೂ ತಿಳಿದಿರಲಿಲ್ಲ. ಆದರೆ ಈ ಕಾರ್ಯಕ್ರಮ ನೋಡಿ ಸದಾ ನಿಮ್ಮ ಜತೆಗೆ ಇರಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದೇನೆ. ಇಂತಹ ಕಾರ್ಯಕ್ರಮಗಳು ಸೈನಿಕರ ಮತ್ತು ಅವರ ಮನೆಯವರ ಮನೋಸ್ಥೈರ್ಯವನ್ನು ಹೆಚ್ಚಿಸುತ್ತದೆ ಎಂದು ಪ್ರಶಂಸಿದರು.…
ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಇದರ ವತಿಯಿಂದ ಜುಲೈ 17 ರಂದು ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾಂಗಣದ ವಠಾರದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಬಿ. ಪ್ರವೀಣ್ ಹೆಗ್ಡೆ ಬನ್ನಾಡಿ ಇವರ ನೇತೃತ್ವದಲ್ಲಿ “ವನಮಹೋತ್ಸವ” ಆಚರಿಸಲಾಯಿತು.ಈ ಸಂದರ್ಭ ಕ್ಲಬ್ಬಿನ ಕಾರ್ಯದರ್ಶಿ ಲಯನ್ ಬನ್ನಾಡಿ ಅಶಿತ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಲಯನ್ ಬನ್ನಾಡಿ ಸೂರ್ಯಕಾಂತ್ ಶೆಟ್ಟಿ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಲಯನ್ ಸುರೇಂದ್ರ ಶೆಟ್ಟಿ ಅಚ್ಲಾಡಿ, ಮಾಜಿ ಅಧ್ಯಕ್ಷರಾದ ಲಯನ್ ಅಡ್ವೋಕೇಟ್ ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ ಹಾಗೂ ಲಯನ್ ಪ್ರೊ| ಕಲ್ಕಟ್ಟೆ ಚಂದ್ರ ಶೇಖರ್ ಶೆಟ್ಟಿ, ಲಯನ್ ಎಮ್ ಜೆ ಎಫ್ ವಸಂತ ಶೆಟ್ಟಿ ಅಚ್ಲಾಡಿ, ಲಯನ್ ಬನ್ನಾಡಿ ಪ್ರಭಾಕರ್ ಶೆಟ್ಟಿ, ಲಯನ್ ಕೆ ಸುಭಾಶ್ಚಂದ್ರ ಶೆಟ್ಟಿ, ಲಯನ್ ಸುಗುಣಾಕರ್ ಶೆಟ್ಟಿ, ಲಯನ್ ರಾಜೀವ ಶೆಟ್ಟಿ ಅಚ್ಲಾಡಿ, ಲಯನ್ ಕೂರಾಡಿ ಸಂತೋಷ್ ಶೆಟ್ಟಿ, ಲಯನ್ ಅಚ್ಲಾಡಿ ಸುಧಾಕರ್ ಶೆಟ್ಟಿ, ಲಯನ್ ಗುಂಡು ಶೆಟ್ಟಿ ಮಾನಂಬಳ್ಳಿ, ಲಯನ್ ಉಲ್ಲಾಸ್ ಶೆಟ್ಟಿ ಕಾವಡಿ, ಲಯನ್…
ರಾಜ್ಯದ ರಾಜಧಾನಿ ಬೆಂಗಳೂರು ವಲಯದ ಬಲು ಪ್ರತಿಷ್ಠಿತ ಬಂಟರ ಸಂಘದ ವಿವಿಧ ಸ್ಥಾನಗಳಿಗೆ ಘಟಾನುಘಟಿಗಳು ತೀವ್ರ ಪೈಪೋಟಿ ನಡೆಸುತ್ತಿದ್ದು, ಸಂಘದ ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹೆಸರಾಂತ ವಾಸ್ತು ವಿಶೇಷ ತಜ್ಞ ಅಶೋಕ್ ಕುಮಾರ್ ಶೆಟ್ಟಿ ಎಚ್ ಅವರೂ ಒಬ್ಬರು. ಸುಮಾರು ಮೂರು ದಶಕಗಳಿಂದ ಸಂಘದ ಸಕ್ರಿಯ ಸದಸ್ಯರಾಗಿ ಸೇವೆ ಸಲ್ಲಿಸಿದ ಅಶೋಕ್ ಕುಮಾರ್ ಶೆಟ್ಟಿ ಅವರು ಕೋಶಾಧಿಕಾರಿ ಪದಕ್ಕೆ ಸಮರ್ಥ ಅಭ್ಯರ್ಥಿ ಎಂದು ಬೆಂಗಳೂರು ಬಂಟ ಸಮುದಾಯದ ಜನರು ಆಡಿ ಕೊಳ್ಳುತ್ತಿದ್ದಾರೆ. ದಿವಂಗತ ಮಹಾಬಲ ಶೆಟ್ಟಿ ಮಾಲಾಡಿ ಹಾಗೂ ಹೆಗ್ಗುಂಜೆ ಶ್ರೀಮತಿ ಜಲಜಾಕ್ಷಿ ಎಂ ಶೆಟ್ಟಿ ದಂಪತಿಯ ಸುಪುತ್ರರಾದ ಶೆಟ್ಟರು ಬಂಟರ ಸಮುದಾಯಕ್ಕೆ ಮಾತ್ರವಲ್ಲದೇ ಸಾರ್ವಜನಿಕ ಚಟುವಟಿಕೆಗಳಲ್ಲಿಯೂ ಗುರುತಿಸಿ ಕೊಂಡವರು. ಸಂಘಟನೆ, ಸಮಾಜ ಸೇವೆಗೆ ಹೆಸರು ಗಳಿಸಿದ ಅಶೋಕ್ ಕುಮಾರ್ ಶೆಟ್ಟಿ ಅವರು ತನ್ನ ಪ್ರಾಥಮಿಕ, ಫ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಕ್ರಮವಾಗಿ ಮಂದಾರ್ತಿ, ತೆಕ್ಕಟ್ಟೆ ಮತ್ತು ಉಡುಪಿಯಲ್ಲಿ ಪೂರೈಸಿ ಮುಂದೆ ವಾಸ್ತು ಶಾಸ್ತ್ರ ಸಂಬಂಧಿ ಆಧುನಿಕ ವಿಧಾನ ಶಿಕ್ಷಣವನ್ನು ಪ್ರತಿಷ್ಠಿತ…
ವಿದ್ಯಾರ್ಥಿ ವೇತನ ನೀಡುವ ಉದ್ದೇಶ ಶಿಕ್ಷಣಕ್ಕೆ ಸ್ಫೂರ್ತಿ ನೀಡುವುದು, ಇದರ ಜತೆಗೆ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸುವ ಕಾರ್ಯವಾಗಬೇಕು. ಸಮಾಜ ಸುಧಾರಣೆ ಮಾಡುವ ಒಳ್ಳೆಯ ಕಾರ್ಯವನ್ನು ಗುರುಪುರ ಬಂಟರ ಮಾತೃ ಸಂಘ ಮಾಡುತ್ತಿದೆ. ನಕಾರಾತ್ಮಕ ಚಿಂತನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಮಕ್ಕಳಿಗೆ ಮಾರ್ಗದರ್ಶನ, ಸಂಸ್ಕೃತಿಯ ತಿಳುವಳಿಕೆ ನೀಡುವ ಕಾರ್ಯವಾಗಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಹೇಳಿದರು. ಗುರುಪುರ ಬಂಟರ ಮಾತೃ ಸಂಘ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮಂಗಳೂರು ಹಾಗೂ ಬೆಂಗಳೂರು ಬಂಟರ ಸಂಘ ಇದರ ಸಹಯೋಗದೊಂದಿಗೆ ವಾಮಂಜೂರು ಚರ್ಚ್ ಹಾಲ್ ನಲ್ಲಿ ನಡೆದ ಗುರುಪುರ ಬಂಟರ ಮಾತೃ ಸಂಘದ ವಾರ್ಷಿಕ ಸಮಾವೇಶ, ಮಹಾಸಭೆ, ಸಾಧಕರಿಗೆ ಸಮ್ಮಾನ, ವಿದ್ಯಾರ್ಥಿವೇತನ ವಿತರಣೆ, ವಿದ್ಯಾರ್ಥಿ ಪುರಸ್ಕಾರ, ಬಂಟ ಯುವತಿಯರ ಸಮಾವೇಶ- ಯುವ ಸಂಗಮ, 2024-27 ರ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ,…
ಯಕ್ಷಧ್ರುವ ಪಟ್ಲ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಕನಸಿನ “ಪಟ್ಲ ಯಕ್ಷಾಶ್ರಯ” ಯೋಜನೆಯ 30 ನೇ ಮನೆಯನ್ನು ಫಲಾನುಭವಿ ಶ್ರೀ ಕಟೀಲು ಮೇಳದ ಒಂದನೇ ಮೇಳದ ಕಲಾವಿದ ಪ್ರಶಾಂತ್ ಕಲ್ಲಡ್ಕರವರಿಗೆ ಹಸ್ತಾಂತರಿಸಲಾಯಿತು. ಯಕ್ಷಧ್ರುವ ಪಟ್ಲ ಟ್ರಸ್ಟಿನ ಮಹಾದಾನಿ, ಪ್ರತಿಷ್ಠಿತ ಎಂ ಆರ್ ಜಿ ಸಮೂಹ ಸಂಸ್ಥೆಗಳ ಸಿಎಂಡಿ ಡಾ| ಕೊರಂಗ್ರಪಾಡಿ ಪ್ರಕಾಶ ಶೆಟ್ಟಿಯವರು ಕೊಡುಗೆಯಾಗಿ ನೀಡಿದ ಈ ಮನೆಯ ಕೀಲಿ ಕೈ ಹಸ್ತಾಂತರ ಸಂದರ್ಭದಲ್ಲಿ ಟ್ರಸ್ಟಿನ ಬಂಟ್ವಾಳ ಘಟಕದ ಅಧ್ಯಕ್ಷರಾದ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ, ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ ಅಡ್ಯಾರ್ ಹಾಗೂ ಶ್ರೀಕಾಂತ್ ಅರಳ ಉಪಸ್ದಿತರಿದ್ದರು.
ಬಂಟ ಜನಾಂಗದ ಯುವಕ, ಯುವತಿಯರಿಗೆ ಮಾರ್ಗದರ್ಶನ ನೀಡುವ ಆದರ್ಶ ಕಾರ್ಯಕ್ರಮ ಇದಾಗಿದೆ. ಇದು ಕೇವಲ ಗುರುಪುರ ಬಂಟರ ಮಾತೃ ಸಂಘಕ್ಕೆ ಮಾತ್ರ ಸೀಮಿತವಾಗಿರದೇ ದೇಶ ವಿದೇಶದಲ್ಲಿರುವ ಎಲ್ಲಾ ಮಾತೃ ಸಂಘದವರು ಮಕ್ಕಳಿಗೆ ಸರಿಯಾದ ಮಾಹಿತಿ ಕೊಡುವ ಇಂತಹ ಕಾರ್ಯಕ್ರಮದ ಅನಿವಾರ್ಯತೆ ಇದೆ. ಇದು ಕೇವಲ ಬಂಟ ಸಮಾಜಕ್ಕೆ ಮಾತ್ರವಲ್ಲ ದೇಶದ ಸಮಸ್ತ ಯುವಕ, ಯುವತಿಯರಿಗೆ ಕಾಲಕಾಲಕ್ಕೆ ಸರಿಯಾಗಿ ಮಾರ್ಗದರ್ಶನ ಕೊಡಬೇಕಾದ ಅಗತ್ಯ ಇದೆ. ದೇಶದ ಯುವ ಶಕ್ತಿಯ ಮೇಲೆ ನಂಬಿಕೆ ಇಡಲಾಗಿದೆ. ಯುವ ಶಕ್ತಿ ನಮ್ಮ ದೇಶದ ಸಂಪತ್ತು ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಹೇಳಿದರು. ಅವರು ಗುರುಪುರ ಬಂಟರ ಮಾತೃ ಸಂಘ ಇದರ ಆಶ್ರಯದಲ್ಲಿ ಬಂಟ ಯಾನೆ ನಾಡವರ ಮಾತೃಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮಂಗಳೂರು ಹಾಗೂ ಬೆಂಗಳೂರು ಬಂಟರ ಸಂಘ ಇದರ ಸಹಯೋಗದೊಂದಿಗೆ ಗುರುಪುರ ಬಂಟರ ಮಾತೃ ಸಂಘದ ವಾರ್ಷಿಕ ಸಮಾವೇಶ, ಮಹಾಸಭೆ, ಸಾಧಕರಿಗೆ ಸನ್ಮಾನ,…
ಪುಣೆ ತುಳುಕೂಟವು ರಜತ ಮಹೋತ್ಸವ ಸಂಭ್ರಮದಲ್ಲಿದ್ದು ನಿರಂತರ ಕಾರ್ಯಕ್ರಮಗಳು ನಡೆಯಲಿದೆ. ಈ ನಿಟ್ಟಿನಲ್ಲಿ ರಜತ ಮಹೋತ್ಸವ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಜುಲೈ 11ರ ಗುರುವಾರದಂದು ಪುಣೆ ವಾರ್ಜೆಯಲ್ಲಿರುವ ಶಿವರ್ಶ್ ಹೋಟೆಲ್ ನ ಬ್ಯಾಂಕ್ವೇಟ್ ಹಾಲ್ ನಲ್ಲಿ ತುಳುಕೂಟದ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು ಪುಣೆ ತುಳುಕೂಟದ ಮತ್ತು ಮುಂದೆ ನಡೆಯಲಿರುವ ರಜತ ಮಹೋತ್ಸವದ ಬಗ್ಗೆ ಪ್ರಾಸ್ತಾವಿಕವಾಗಿ ಸಭೆಗೆ ತಿಳಿಸಿದರು ಹಾಗೂ ರಜತ ಮಹೋತ್ಸವದ ಯಶಸ್ವಿಗೆ ಸಮಿತಿ ರಚನೆಯ ಬಗ್ಗೆ ತಿಳಿಸಿದರು. ಅದೇ ಪ್ರಕಾರವಾಗಿ ಸಮಿತಿಯನ್ನು ರಚಿಸಲಾಗಿದ್ದು, ರಜತ ಮಹೋತ್ಸವ ಸಮಿತಿಗೆ ಉಪಾಧ್ಯಕ್ಷರುಗಳಾಗಿ ಸದಾನಂದ ನಾಯಕ್ ಮಾಳ, ಸಂತೋಷ್ ಶೆಟ್ಟಿ ಮಟ್ಟಾರು, ಸದಾಶಿವ್ ಸಾಲ್ಯಾನ್ ಖುಷ್ಬೂ, ಹರೀಶ್ ಶೆಟ್ಟಿ ಕುರ್ಕಾಲ್, ವಿಶ್ವನಾಥ್ ಪೂಜಾರಿ ಅಂಬಿಕಾ, ಪ್ರಧಾನ ಕಾರ್ಯದರ್ಶಿಯಾಗಿ ರೋಹಿತ್ ಶೆಟ್ಟಿ ನಗ್ರಿ ಗುತ್ತು, ಕೋಶಾಧಿಕಾರಿಯಾಗಿ ಸಿಎ. ಮನೋಹರ್ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾಗಿ ಶರತ್ ಭಟ್ ಅತ್ರಿವನ, ಸಚ್ಚಿದಾನಂದ ಶೆಟ್ಟಿ, ಜೊತೆ ಕೋಶಾಧಿಕಾರಿಯಾಗಿ ಹರೀಶ್ ಶೆಟ್ಟಿ ಕಸ್ಬಾ, ಸ್ಮರಣ ಸಂಚಿಕೆ ಸಂಪಾದಕ ಮಂಡಳಿಗೆ ಹರೀಶ್…
ಅವಿಭಜಿತ ಮಂಗಳೂರು ತಾಲೂಕು ವ್ಯಾಪ್ತಿಯ, 2023 – 24ನೇ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ 95% ಮತ್ತು ಅಧಿಕ ಅಂಕಗಳನ್ನು ಪಡೆದ ಬಂಟ ಸಮಾಜದ ವಿದ್ಯಾರ್ಥಿಗಳನ್ನು ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಗೌರವ ಪುರಸ್ಕಾರವನ್ನು ಅಗೋಸ್ತು ತಿಂಗಳ 15ನೇ ತಾರೀಕಿನಂದು ಬೆಳಗ್ಗೆ 10.30 ಗಂಟೆಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ ಸಭಾಭವನದಲ್ಲಿ ನೆರವೇರಿಸುವುದೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಂಕಪಟ್ಟಿ, ಆಧಾರ್ ಕಾರ್ಡ್ನ ಪ್ರತಿ ಮತ್ತು ಒಂದು ಭಾವಚಿತ್ರ ಸಮೇತ ಬಂಟರ ಯಾನೆ ನಾಡವರ ಮಾತೃ ಸಂಘದ ಕಛೇರಿ, ಒಂದನೇ ಮಹಡಿ, ಅಮೃತೋತ್ಸವ ಕಟ್ಟಡ ಮಂಗಳೂರು, ಇಲ್ಲಿ ಜುಲೈ ತಿಂಗಳ 31ನೇ ತಾರೀಕಿನೊಳಗೆ ಸಲ್ಲಿಸಲು ವಿನಂತಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಕೃಷ್ಣಪ್ರಸಾದ್ ರೈಯವರನ್ನು 9480015895 ಸಂಪರ್ಕಿಸಬಹುದು.
ಎಂಆರ್ ಪಿಎಲ್ ನ 4 ನೇ ಹಂತದ ನಿರ್ವಸಿತರ ಕುಟುಂಬಗಳ ಉದ್ಯೋಗ ಹಾಗೂ ಪುನರ್ವಸತಿ ಬೇಡಿಕೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ
ಎಂಆರ್ ಪಿಎಲ್ 4ನೇ ಹಂತದ ಭೂ ನಿರ್ವಸಿತರಾಗುವ ಕುತ್ತೆತೂರು, ಪೆರ್ಮುದೆ, ಎಕ್ಕಾರು ಗ್ರಾಮದ ನಿವಾಸಿಗಳಿಗೆ ಸಿಗಬೇಕಾದ ಪುನರ್ವಸತಿ ಹಾಗೂ ಉದ್ಯೋಗ ಮತ್ತಿತ್ತರ ಬೇಡಿಕೆಗಳ ಈಡೇರಿಸುವ ಕುರಿತಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು. ದ.ಕ ಜಿಲ್ಲಾ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್, ವಿಶೇಷ ಭೂಸ್ವಾದಿನಾಧಿಕಾರಿ, ಎಂಆರ್ ಪಿಎಲ್ ನ ಅಧಿಕಾರಿಗಳ ಮತ್ತು ಭೂ ನಿರ್ವಸಿತರ ಹಿತರಕ್ಷಣ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸ್ಥಳೀಯ ಶಾಸಕರು ಮತ್ತು ದ.ಕ ಜಿಲ್ಲಾ ಸಂಸದರು ಮಾತನಾಡಿ, ಎಂಆರ್ ಪಿಎಲ್ ನ ವಿಸ್ತರಣೆಗಾಗಿ ಸ್ಥಳಿಯರು ಭೂಮಿಯನ್ನು ತ್ಯಾಗ ಮಾಡುತ್ತಿದ್ದು ಅವರಿಗೆ ದೊರಕಬೇಕಾದ ಸವಲತ್ತುಗಳನ್ನು ಯಾವುದೇ ನಿಬಂದನೆಗಳಿಲ್ಲದೆ ಅಧಿಸೂಚನೆಗೆ ಮೊದಲು ಇದ್ದ ಎಲ್ಲಾ ಮನೆಗಳಿಗೆ ಸೂಕ್ತ ಪುನರ್ವಸತಿ ಮತ್ತು ಉದ್ಯೋಗವನ್ನು ವಿಳಂಬ ಮಾಡದೆ ಶೀಘ್ರವಾಗಿ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಆಗ್ರಹಿಸಲಾಯಿತು. ಸುಧೀರ್ಘ ಸಭೆಯಲ್ಲಿ ಕೊನೆಗೆ ಜಿಲ್ಲಾಧಿಕಾರಿಗಳು ಮತ್ತು ಎಂಆರ್ ಪಿಎಲ್ ನ ಅಧಿಕಾರಿಗಳು ಎಲ್ಲಾ ಬೇಡಿಕೆಗಳಿಗೆ ಒಪ್ಪಿಗೆ…
ಓರ್ವ ನಿಷ್ಠಾವಂತ ಸ್ವಯಂ ಸೇವಕ, ಸಮಾಜಮುಖಿ ಸಂಘಟಕ ಹಾಗೂ ಪ್ರಾಮಾಣಿಕ ಲೆಕ್ಕ ಪರಿಶೋಧಕ ಸಿಎ ಅಶೋಕ ಶೆಟ್ಟಿ ಎಂ ಅವರು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಪದವಿಗೆ ಸ್ಪರ್ಧಿಸುತ್ತಿದ್ದು, ಚುನಾವಣೆಯಲ್ಲಿ ತಾನು ಯಶಸ್ಸು ಸಂಪಾದಿಸುವೆನೆಂಬ ಆತ್ಮ ವಿಶ್ವಾಸದಲ್ಲಿದ್ದಾರೆ. ಕಾರಣ ಅವರು ಈಗಾಗಲೆ ತನ್ನ ಸಾಮಾಜಿಕ, ಸಾರ್ವಜನಿಕ ಸಂಘಟನೆಗಳಲ್ಲಿ ದುಡಿದ ಅನುಭವ ಹೊಂದಿದ್ದು ನಗರದಲ್ಲಿ ವ್ಯಾಪಕ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಕಾರ್ಕಳ ಸಂಬೆಟ್ಟು ಶೀನಪ್ಪ ಶೆಟ್ಟಿ ಮತ್ತು ಮುಲ್ಲಾಡ್ ಲಕ್ಷ್ಮಿ ಶೆಟ್ಟಿ ದಂಪತಿಯವರಿಗೆ ಕಿರಿಯ ಪುತ್ರನಾಗಿ ಜನಿಸಿದ ಅಶೋಕ ಶೆಟ್ಟಿ ಅವರು ತನ್ನ ಸಿಎ ಪದವಿಯನ್ನು ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಪೂರೈಸಿ ಬಳಿಕ ತನ್ನದೇ ಆದ ಲೆಕ್ಕ ಪರಿಶೋಧನೆ ಸಂಸ್ಥೆಯನ್ನು ಹುಟ್ಟು ಹಾಕಿ ಓರ್ವ ಯಶಸ್ವಿ ಜನಪ್ರಿಯ ಲೆಕ್ಕ ಪರಿಶೋಧಕರೆಂಬ ಪ್ರಸಿದ್ಧಿ ಪಡೆದಿದ್ದಾರೆ. ಎಂ.ಎಂ.ಎಸ್ ಎಂಡ್ ಕೊ. ಎಂಬ ಸಂಸ್ಥೆಯ ಸ್ಥಾಪನೆ ಮುಖಾಂತರ ಅನೇಕ ಪ್ರತಿಷ್ಠಿತ ಕಂಪೆನಿಗಳು ಹಾಗೂ ಬ್ಯಾಂಕ್ ಗಳ ಲೆಕ್ಕಪರಿಶೋಧಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಯುತರು ಮೂಲತಃ ಓರ್ವ ಸಾಮಾಜಿಕ, ಸಾಮುದಾಯಿಕ ಕಳಕಳಿ…















