Author: admin
ಮನುಷ್ಯ ಜೀವನದಲ್ಲಿ ದಾನ ಮತ್ತು ಧರ್ಮ ಕೇವಲ ಬಾಯಿ ಮಾತಿನ ಪದಗಳಾಗಿ ಉಳಿಯುವುದಿಲ್ಲ. ನಾವು ಕೈಯೆತ್ತಿ ನೀಡುವ ದಾನ, ಶ್ರದ್ಧೆಯಿಂದ ಆಚರಿಸುವ ಧರ್ಮ ಇವೆರಡೂ ಸ್ವಾರ್ಥ ರಹಿತವಾಗಿರಬೇಕು. ಉದ್ಯಮಿ ಕೆ.ಕೆ ಶೆಟ್ಟರು ತಮ್ಮ ನಡೆ ನುಡಿಗಳಿಂದ ಈ ಮಾತನ್ನು ಅರ್ಥವತ್ತಾಗಿಸಿದ್ದಾರೆ’ ಎಂದು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಮತ್ತು ಲೇಖಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ 2024 ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಅಹಮದ್ ನಗರದ ಉದ್ಯಮಿ ಹಾಗೂ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿ ಕುತ್ತಿಕಾರ್ ಅವರಿಗೆ ಅವರಿಗೆ ದೇವಸ್ಥಾನ ಆಡಳಿತ ಮಂಡಳಿ ಸೇವಾ ಸಮಿತಿ ಮತ್ತು ಊರವರ ವತಿಯಿಂದ ಶ್ರೀ ಕ್ಷೇತ್ರದ ಸಭಾಂಗಣದಲ್ಲಿ ಜರುಗಿದ ಸಾರ್ವಜನಿಕ ಅಭಿನಂದನಾ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ‘ಬಡವರಿಗೆ ಆರೋಗ್ಯ ಚಿಕಿತ್ಸೆ, ಗೃಹ ನಿರ್ಮಾಣ, ಶೈಕ್ಷಣಿಕ ನೆರವು, ಸಾಂಸ್ಕೃತಿಕ ಸಾಮಾಜಿಕ ಕಾರ್ಯಕ್ರಮಗಳಿಗೆ ಧನ ಸಹಾಯವಲ್ಲದೇ…
ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಬಿ. ರವೀಂದ್ರ ಶೆಟ್ಟಿ ಅವರಿಗೆ ಹಸನ್ ಹವ್ವಾ ಫೌಂಡೇಶನ್ ಕುದೊಳಿ ಸಂಸ್ಥಾಪಕ ಅಬ್ದುಲ್ಲಾ ಮಾದು ಮೂಲೆ ನೀಡುವ ದತ್ತಿನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಾಸರಗೋಡಿನ ಸೀತಾಂಗೋಳಿ ಅಲಯನ್ಸ್ ಕನ್ವೆನ್ಶನ್ ಸೆಂಟರ್ನಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡ ಲಾಯಿತು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕೆಯುಡಬ್ಲ್ಯುಜೆ ಕರ್ನಾಟಕ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಹರೀಶ್ ಪಾಂಡು ಶೆಟ್ಟಿ ಆಡಳಿತದ ಫಾರ್ಮ್ಹೌಸ್ ಸಮೂಹ ಹೋಟೇಲಿಗೆ ಎಕನಾಮಿಕ್ ಟೈಮ್ಸ್ ಮತ್ತು ಎಫ್ ಬಿ ಲೀಡರ್ಸ್ ಅವಾರ್ಡ್
ವಸಾಯಿ ತಾಲೂಕಿನಲ್ಲಿ ಹೋಟೆಲ್ ಉದ್ಯಮ ಮತ್ತು ಸಮಾಜ ಸೇವೆಯಲ್ಲಿ ಭಾರಿ ಜನಪ್ರಿಯತೆಯನ್ನು ಪಡೆದಿರುವ ಪಾಂಡು ಎಲ್ ಶೆಟ್ಟಿಯವರ ಸುಪುತ್ರರಾದ ಹರೀಶ್ ಪಾಂಡು ಶೆಟ್ಟಿ ಮತ್ತು ಭರತ್ ಶೆಟ್ಟಿಯವರ ಫಾರ್ಮ್ ಹೌಸ್ ಸಮೂಹ ಹೋಟೇಲಿಗೆ ಎಕನಾಮಿಕ್ ಟೈಮ್ಸ್ ಮತ್ತು ಎಫ್ ಬಿ ಲೀಡರ್ಸ್ ಅವಾರ್ಡ್ ಲಭಿಸಿದೆ. ಪ್ರಶಸ್ತಿಯನ್ನು ಜುಲೈ 1 ರಂದು ನಗರದ ರಾಡಿಸನ್ ಬ್ಲೂ ಇಂಟರ್ನ್ಯಾಶನಲ್ ಹೋಟೇಲಿನಲ್ಲಿ ಜರಗಿದ ಸಮಾರಂಭದಲ್ಲಿ ಪಾಂಡು ಎಲ್ ಶೆಟ್ಟಿ ಮತ್ತು ಹೋಟೆಲಿನ ನಿರ್ದೇಶಕ ಹರೀಶ್ ಶೆಟ್ಟಿ, ಪಾಂಡು ಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಚಿತ್ರ ನಟಿ ಮುಗ್ಧ ಗೋಡ್ಸೆಯವರಿಂದ ಸ್ವೀಕರಿಸಿದರು. 2011 ರಲ್ಲಿ ಸ್ಥಾಪಿತವಾದ, ಫಾರ್ಮ್ ಹೌಸ್ ಗ್ರೂಪ್ ಹೋಟೆಲ್ ಆಂಡ್ ರೆಸ್ಟೋರೆಂಟ್ ವಸಾಯಿ ಪರಿಸರದಲ್ಲಿ ಉದ್ಯಮವನ್ನು ನಡೆಸಿ ಹಂತ ಹಂತವಾಗಿ ಅಲ್ಪಾವಧಿಯಲ್ಲಿ ತನ್ನ ಉದ್ಯಮವನ್ನು ದೇಶ ವಿದೇಶಗಳಲ್ಲಿ ನಡೆಸುತ್ತಾ ರುಚಿ ಸುಚಿಕರವಾದ ಆಹಾರದಿಂದ ಗ್ರಾಹಕರ ಗಮನ ಸೆಳೆದಿದೆ. ರೆಸ್ಟೋರೆಂಟ್ ಬ್ರಾಂಡ್ ‘ಫಾರ್ಮ್ ಹೌಸ್’ ಉನ್ನತ ಮಟ್ಟಕ್ಕೇರಿ ಮುನ್ನಡೆಯುತ್ತಾ ಗ್ರಾಹಕರನ್ನು ಆತ್ಮೀಯವಾಗಿ ಸ್ವಾಗತಿಸುತ್ತಿದೆ. ಕುಟುಂಬದೊಂದಿಗೆ ಗುಣಮಟ್ಟದ…
ಮೂಡುಬಿದಿರೆ: 2024 ಮೇ ಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿ ಸೋಜಾ ಡಿ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ ಲೋಬೋ, ಪಲ್ಲವಿ ಹೆಚ್ ಆರ್, ಪ್ರಜ್ವಲ್, ವಿಲಿಟಾ ಆಲ್ವಿಶಾ ರೇಗೊ, ಆಂಚಲ್, ಸುಷ್ಮಾ ಎನ್, ಕಿರಣ್ ಚಂದ್ರಶೇಖರ್ ಶೇರಿಗಾರ್, ರೋಯ್ಡನ್, ಕೌಶಿಕ್, ಕಿರಣ್ ಭಾರಧ್ವಜ್, ರಜತ್ ಜೈನ್, ಶುಭಂಕರ್, ರಾಕೇಶ್, ಪ್ರಖ್ಯಾತ್, ಪವನ್, ನಾಗರಾಜ್ ಜಿ ಶೆಟ್ಟಿ, ಹೇಮಂತ್ ಕುಮಾರ್ ಡಿ.ಕೆ. , ಶ್ರೀನಿಧಿ ಎಸ್ ಶೆಟ್ಟಿ, ಖುಶ್ಬೂ ಮತ್ತು ಗೀತಾ ನಿಶಾ ಪಿರೇರಾ – ಒಟ್ಟು 25 ವಿದ್ಯಾರ್ಥಿಗಳು, ಹಾಗೂ ಜನವರಿ 2024ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಕ್ಲಾರ್ಸನ್, ಮೇಘಾ, ತೇಜಸ್, ವಾಣಿಶ್ರೀ, ಧಾಮಿನಿ, ದರ್ಶನ್ ಜಿ ಎಚ್, ಪ್ರಸಾದ, ನೌಫಾಲ್, ಅಂಕಿತಾ ಕಲ್ಲಪ್ಪ, ರಾಷ್ಟ್ರೀತ್ ಸಿ.ಜಿ, ಅವಿನಾಶ್, ಸುಕ್ಷ್ಮಾ, ಅಭಿಷೇಕ್ ಚೋಟಿ ಸೇರಿದಂತೆ 13 ವಿದ್ಯಾರ್ಥಿಗಳು, ಒಟ್ಟು…
“ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ಟ್ರಿಯಾಥ್ಲನ್, ಬೀಚ್ ಫೆಸ್ಟಿವಲ್ ಉದ್ಘಾಟನೆ ಕಾರ್ಯಕ್ರಮ ಆದಿತ್ಯವಾರ ಸಂಜೆ ನಗರದ ಟಿಎಂಎ ಪೈ ಸ್ಟಾರ್ ಕಾನ್ಫರೆನ್ಸ್ ಹಾಲ್ನಲ್ಲಿ ಜರುಗಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತಾಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಮಂಗಳೂರು ಟ್ರಿಯಾಥ್ಲನ್ ಹಾಗೂ ಮಂಗಳೂರು ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜನೆಯಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುತ್ತಿರುವ ತಪಸ್ಯ ಫೌಂಡೇಶನ್ ಸಾರ್ಥಕ ಕೆಲಸವನ್ನು ಮಾಡುತ್ತಿದೆ. ಸಂಘಟನೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಮಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡುತ್ತದೆ ಎನ್ನುವುದರಲ್ಲಿ ಸಂಶಯವಿಲ್ಲ. ಕ್ಯಾನ್ಸರ್ ಪೀಡಿತ ಮಕ್ಕಳ ಆರೈಕೆಗೆ 100 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸುತ್ತಿರುವ ಸಂಘಟನೆಯ ಜೊತೆಗೆ ಮಹಾನಗರ ಪಾಲಿಕೆ ನಿರಂತರ ಸಹಕಾರ ನೀಡಲಿದೆ” ಎಂದರು. ಮಂಗಳೂರು ಸಂಸದ ಕ್ಯಾ. ಬೃಜೇಶ್ ಚೌಟ ಮಾತಾಡಿ, “ತಪಸ್ಯ ಫೌಂಡೇಶನ್ ಮಾಡುತ್ತಿರುವ ಕಾರ್ಯ ನಿಜವಾದ ತಪಸ್ಸು. ನೀವು ಮಾಡುತ್ತಿರುವ ಕೆಲಸ ದೇವರ…
ಮುಂಬಯಿಯ ಪ್ರಸಿದ್ಧ ಕಲಾ ಸಂಘಟಕ ಅಜೆಕಾರು ಬಾಲಕೃಷ್ಣ ಶೆಟ್ಟಿ ಸಂಚಾಲಕತ್ವದ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಆಶ್ರಯದಲ್ಲಿ ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು ಮಹಿಳಾ ಯಕ್ಷಗಾನ ತಾಳಮದ್ದಳೆ ತಂಡದ ಮುಂಬಯಿ ಪ್ರವಾಸದ ಸರಣಿ ಯಕ್ಷಗಾನ ತಾಳಮದ್ದಳೆಯ ಉದ್ಘಾಟನೆ ಕಾರ್ಯಕ್ರಮವು ಜುಲೈ 6 ರಂದು ಸಂಜೆ ಕುರ್ಲಾ ಪೂರ್ವದ ಬಂಟರ ಭವನದ ಸಂಕುಲದಲ್ಲಿರುವ ಶ್ರೀ ವಿಷ್ಣುಮೂರ್ತಿ ಜ್ಞಾನ ಮಂದಿರ ಸಭಾಂಗಣದಲ್ಲಿ ನಡೆಯಿತು. ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಸರಣಿ ತಾಳಮದ್ದಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಜೆಕಾರು ಬಾಲಕೃಷ್ಣ ಶೆಟ್ಟಿ ಮುಂಬಯಿಯಲ್ಲಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ. ಯುವ ಜನರು, ಮಹಿಳೆಯರು ಇಂದು ಯಕ್ಷಗಾನಕ್ಕೆ ಹೆಚ್ಚು ಆಕರ್ಷಿತರಾಗುತ್ತಿರುವುದರೊಂದಿಗೆ ಯಕ್ಷಗಾನ ಕಲಿತು ಯಕ್ಷಗಾನ ಪ್ರದರ್ಶಿಸಲು ಮುಂದಾಗಿರುವುದು ಯಕ್ಷಗಾನಕ್ಕೆ ಯಾವುದೇ ಸಂಕಷ್ಟವಿಲ್ಲ ಎಂಬುದನ್ನು ತೋರಿಸುತ್ತದೆ. ಕಲೆ, ಕಲಾವಿದರನ್ನು ಗೌರವಿಸಿ ಸಹಕರಿಸುವುದು ಮುಂಬಯಿ ತುಳು ಕನ್ನಡಿಗರ ಹೆಗ್ಗಳಿಕೆ ಎಂದರು. ಬಂಟರ ಸಂಘ ಮುಂಬಯಿ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ನವೀನ್ ಶೆಟ್ಟಿ ಇನ್ನಾ…
ಕಾವೂರು ಬಂಟರ ಸಂಘದ 23 ನೇಯ ವಾರ್ಷಿಕ ಮಹಾಸಭೆಯು ಜುಲೈ 7 ರಂದು ಸಂಜೆ ಕಾವೂರು ಸಹಕಾರ ಭವನದಲ್ಲಿ ನಡೆಯಿತು. ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಂ ಆರ್ ಜಿ ಗ್ರೂಪ್ ನ ಸಿಎಂಡಿ ಡಾ ಕೆ ಪ್ರಕಾಶ್ ಶೆಟ್ಟಿಯವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿ ತ್ರಿಶೂಲ್ ಶೆಟ್ಟಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಡಾ ವೈ ಭರತ್ ಶೆಟ್ಟಿ, ಜೈರಾಜ್ ಬಿ ರೈ, ಟಿ ಪ್ರವೀಣ್ ಚಂದ್ರ ಆಳ್ವ, ಸಿಎ ರಾಮ್ ಮೋಹನ್ ರೈ, ವಸಂತ್ ಶೆಟ್ಟಿ, ರವಿರಾಜ್ ಶೆಟ್ಟಿ ನಿಟ್ಟೆ, ಡಾ ಪ್ರವೀಣ್ ಕುಮಾರ್ ರೈ ಉಪಸ್ಥಿತರಿದ್ದರು.
ಲಯನ್ಸ್ ಜಿಲ್ಲೆ 317ಸಿ, ಪ್ರಾಂತ್ಯ V ರ ಪ್ರಾಂತೀಯ ಅಧ್ಯಕ್ಷರಾಗಿ, ಕುಂದಾಪುರ ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಲಯನ್ ಅಡ್ವೋಕೇಟ್ ಬನ್ನಾಡಿ ಸೋಮನಾಥ ಹೆಗ್ಡೆ ಇವರನ್ನು ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ಮಹಮ್ಮದ್ ಹನೀಫ್ ನಿಯುಕ್ತಿಗೊಳಿಸಿದ್ದಾರೆ. ಬನ್ನಾಡಿ ಸೋಮನಾಥ ಹೆಗ್ಡೆ ಅವರು ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಸ್ಥಾಪಕಧ್ಯಕ್ಷರಾಗಿ, ಲಯನ್ಸ್ ರೀಜನ್ ಕೋ- ಆರ್ಡಿನೇಟರ್ ಆಗಿ, ಲಯನ್ಸ್ ವಲಯಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು. ಪ್ರಾಂತೀಯ ಕಾರ್ಯದರ್ಶಿಯಾಗಿ ನ್ಯೂ ಇಂಡಿಯಾ ಇನ್ಶೂರೆನ್ಸ್ ಕಂಪೆನಿಯ ನಿವೃತ್ತ ಮ್ಯಾನೇಜರ್ ಹಾಗೂ ಬ್ರಹ್ಮಾವರ ಲಯನ್ಸ್ ಕ್ಲಬ್ ನ ಲಯನ್ ಆನಂದ ಶೆಟ್ಟಿ ಕಬ್ಬೈಲ್ ಇವರನ್ನು ನೇಮಿಸಲಾಗಿದೆ. ಪ್ರಾಂತ್ಯ V, ವಲಯ 1ರ ವಲಯಾಧ್ಯಕ್ಷರನ್ನಾಗಿ ತೆಕ್ಕಟ್ಟೆ ಲಯನ್ಸ್ ಕ್ಲಬ್ ನ ಲಯನ್ ಧರ್ಮರಾಜ್ ಮುದಲಿಯಾರ್ ಮತ್ತು ವಲಯ ಕಾರ್ಯದರ್ಶಿಯಾಗಿ ಲಯನ್ ಅರುಣ್ ಕುಮಾರ್ ಶೆಟ್ಟಿ, ವಲಯ 11 ರ ವಲಯಾಧ್ಯಕ್ಷರನ್ನಾಗಿ ಹಂಗಳೂರು ಲಯನ್ಸ್ ಕ್ಲಬ್ ನ ಲಯನ್ ಬಾಲಕೃಷ್ಣ ಶೆಟ್ಟಿ ಮತ್ತು ವಲಯ ಕಾರ್ಯದರ್ಶಿಯಾಗಿ ಲಯನ್ ವಿಲ್ಫ್ರೆಡ್ ಮೆನೆಜಸ್ ಹಾಗೂ…
ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ೨೦೨೪-೨೫ ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಟಪಾಡಿ ಶ್ರೀನಿಕೇತನ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಿ. ಪ್ರವೀಣ್ ಹೆಗ್ಡೆ ಬನ್ನಾಡಿ ಇವರು ಆಯ್ಕೆ ಆಗಿದ್ದಾರೆ. ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ನೂತನ ಕಾರ್ಯದರ್ಶಿಯಾಗಿ ಬನ್ನಾಡಿ ಆಶಿತ್ ಕುಮಾರ್ ಶೆಟ್ಟಿ ಮತ್ತು ನೂತನ ಕೋಶಾಧಿಕಾರಿಯಾಗಿ ಬನ್ನಾಡಿ ಸೂರ್ಯಕಾಂತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಪ್ರಥಮ ಉಪಾಧ್ಯಕ್ಷರಾಗಿ ಬನ್ನಾಡಿ ಪ್ರಭಾಕರ್ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಕ್ಲಬ್ ಗ್ಲೋಬಲ್ ಮೆಂಬರ್ ಶಿಪ್ ಟೀಮ್ ನ ಕೋ ಆರ್ಡಿನೇಟರ್ ಆಗಿ ಚಂದ್ರ ಶೆಟ್ಟಿ ಯಾಳಕ್ಲು ವಡ್ಡರ್ಸೆ, ಕ್ಲಬ್ ಮಾರ್ಕೆಟಿಂಗ್ ಮತ್ತು ಕಮ್ಯುನಿಕೇಶನ್ ಆಫೀಸರ್ ಆಗಿ ಕರುಣಾಕರ ಶೆಟ್ಟಿ, ಕ್ಲಬ್ ಅಡ್ಮಿನಿಸ್ಟ್ರೇಟರ್ ಆಗಿ ರವಿರಾಜ್ ಶೆಟ್ಟಿ ವಡ್ಡರ್ಸೆ, ಕ್ಲಬ್ ಎಲ್.ಸಿ.ಐ.ಎಫ್. ಕೋ ಆರ್ಡಿನೇಟರ್ ಆಗಿ ಬನ್ನಾಡಿ ಸಂತೋಷ್ ಶೆಟ್ಟಿ, ಕ್ಲಬ್ ಮೆಂಬರ್ ಶಿಪ್ ಕಮಿಟಿ ಚೇರ್ ಮೆನ್ ಆಗಿ ಕೂರಾಡಿ ಸಂತೋಷ್ ಕುಮಾರ್ ಶೆಟ್ಟಿ, ಕ್ಲಬ್ ಸರ್ವೀಸ್ ಚೇರ್ ಪರ್ಸನ್ ಆಗಿ ಲಯನ್…
ಕದ್ರಿ ದೇವಸ್ಥಾನದ ಬಳಿ ಶ್ರೀವಾರಿ ಗ್ರಾಫಿಕ್ಸ್ ಮತ್ತು ಪ್ರಿಂಟಿಂಗ್ ಸಂಸ್ಥೆಯನ್ನು ಕಾರ್ಪೊರೇಟರ್ ಮನೋಹರ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ದೈವಜ್ಞರಾದ ಶ್ರೀರಂಗ ಐತಾಳ್ ಶುಭಾಶೀರ್ವಾದ ಮಾಡಿದರು. ಈ ಸಂದರ್ಭದಲ್ಲಿ ರಾಣೆಬೆನ್ನೂರಿನ ಪ್ರಕಾಶ್ ಆಲದ ಕಟ್ಟಿ ದಂಪತಿಗಳು, ಸಿಎ ಸುದೇಶ್ ರೈ, ಬಾಳ ಜಗನ್ನಾಥ ಶೆಟ್ಟಿ, ಯಕ್ಷಗಾನ ಅಕಾಡೆಮಿಯ ಸದಸ್ಯ ಮೋಹನ್ ಕೊಪ್ಪಳ, ರವಿಚಂದ್ರ ಶೆಟ್ಟಿ, ಕರುಣಾಕರ ಶೆಟ್ಟಿ, ವಿಜಯಲಕ್ಷ್ಮಿ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಮಾಲಕರಾದ ಪ್ರದೀಪ ಆಳ್ವ ಕದ್ರಿ ವಂದಿಸಿದರು.















