Author: admin

ವಿದ್ಯಾಗಿರಿ: ಇಲ್ಲಿ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ 29ನೇ ಆಳ್ವಾಸ್ ವಿರಾಸತ್‍ನ ಅಂತಿಮ ದಿನವಾದ ಭಾನುವಾರ ಆಳ್ವಾಸ್ ಸಾಂಸ್ಕೃತಿಕ ಹಾಗೂ ಕ್ರೀಡಾ ತಂಡದ ವಿದ್ಯಾರ್ಥಿಗಳು ರೋಚಕ ಅನುಭವ ನೀಡುವ ಪ್ರದರ್ಶನ ನೀಡಿ, ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಮಲ್ಲಕಂಬ: ಆಳ್ವಾಸ್ ಕಾಲೇಜಿನ ಸುಮಾರು 130 ವಿದ್ಯಾರ್ಥಿಗಳು ಏಕಕಾಲದಲ್ಲಿ ಮಲ್ಲಕಂಬ ಸಾಹಸ ಪ್ರದರ್ಶನ ನೀಡಿದರು. ಪ್ರೇಕ್ಷಕರು ಬೆಕ್ಕಸ ಬೆರಗಾದರು. ಮಲ್ಲಕಂಬವು ಅಪ್ಪಟ ದೇಶೀಯ ಕ್ರೀಡೆ. ದೇಶಿ ಸಂಸ್ಕೃತಿ ಹಾಗೂ ಕ್ರೀಡೆಯನ್ನು ಪ್ರೋತ್ಸಾಹಿಸುತ್ತಿರುವ ಆಳ್ವಾಸ್, ಈ ಮಲ್ಲಕಂಬ ಸ್ಪರ್ಧೆಯಲ್ಲಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕ್ರೀಡೆಯಾಗಿದ್ದ ಮಲ್ಲಕಂಬಕ್ಕೆ ಪ್ರೇಕ್ಷಕರನ್ನು ಸೆಳೆಯಬೇಕು ಎಂಬ ದೂರದೃಷ್ಟಿಯನ್ನು ಇರಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು ಕಲಾ ರೂಪ ನೀಡಿದ್ದು, ಮಲ್ಲಕಂಬವು ವೇದಿಕೆ ಮೇಲೇರಿದೆ. ಎತ್ತರದ ಕಟ್ಟಿಗೆ ಕಂಬವನ್ನು ಕುಸ್ತಿ ಪಟ್ಟುಗಳ ಸಾಧನೆಗಾಗಿ ಬಳಸುತ್ತಿದ್ದರು. ಈ ಎತ್ತರದ ಕಂಬದ ಕುತ್ತಿಗೆ ಹಾಗೂ ಮೇಲಿನ ನಾಬ್‍ಗೆ ಎಣ್ಣೆಯನ್ನು ಸವರಿ ನಾಜೂಕುಗೊಳಿಸಲಾಗಿರುತ್ತದೆ. ಇನ್ನೊಂದೆಡೆ ಜೋತು ಬಿದ್ದ…

Read More

ಮುಂಬಯಿ (ಆರ್ ಬಿ ಐ), ಅ.12: ರಾಷ್ಟ್ರದ ಆರ್ಥಿಕ ರಾಜಧಾನಿ ಬೃಹನ್ಮುಂಬಯಿಯಲ್ಲಿನ ಹೆಸರಾಂತ ಆರ್ಥಿಕ ತಜ್ಞ, ಭಾರತೀಯ ಜೀವ ವಿಮಾ ನಿಗಮ (ಎಲ್‍ಐಸಿ ಆಫ್ ಇಂಡಿಯಾ) ಅಧಿಕಾರಿ ಡಾ| ಆರ್.ಕೆ ಶೆಟ್ಟಿ (ರಾಧಾಕೃಷ್ಣ ಕೃಷ್ಣ ಶೆಟ್ಟಿ) ಅವರು ಮಿಲಿಯನ್ ಡಾಲರ್ ರೌಂಡ್ ಟೇಬಲ್ (ಎಂಡಿಆರ್ ಟಿ) ಇದರ ಕ್ವಾರ್ಟರ್ ಸೆಂಚುರಿ ಕ್ಲಬ್ ಸದಸ್ಯರಾಗಿ ಆಯ್ಕೆ ಆಗಿರುತ್ತಾರೆ. ಎಂಡಿಆರ್ ಟಿ ಅಧ್ಯಕ್ಷ ರಾಂಡಿ ಎಲ್.ಸ್ಟ್ರಿಚ್ ಫೀಲ್ಡ್ ಅವರು ಡಾ| ಆರ್.ಕೆ ಶೆಟ್ಟಿ ಅವರಿಗೆ ಆಯ್ಕೆಯ ಅಧಿಕೃತ ಪ್ರಮಾಣ ಪತ್ರವನ್ನು ಕಳುಹಿಸಿ ಅಭಿನಂದಿಸಿರುವುದಾಗಿ ಎಂಡಿಆರ್ ಟಿ ವಕ್ತಾರರು ತಿಳಿಸಿದ್ದಾರೆ. ಎಂಡಿಆರ್ ಟಿಯ ಕ್ವಾರ್ಟರ್ ಸೆಂಚುರಿ ಕ್ಲಬ್ ಸದಸ್ಯರಾಗುವ ಕನಸು ಹೊತ್ತು ಅಂತಹ ಸಾಧನೆಯನ್ನು ಸಾಧಿಸಿದ ಭಾರತದ ಕೆಲವೇ ಸಾಧಕರಲ್ಲಿ ಡಾ| ಆರ್.ಕೆ ಓರ್ವರಾಗಿರುವರು. ಕ್ಲಬ್ ಸದಸ್ಯತ್ವ ಪಡೆಯುವ ಮುಖೇನ ಶೆಟ್ಟಿ ಅವರು ಎಂಡಿಆರ್ ಟಿ ಸ್ಟೋರ್ ನಿಂದ ವಿಶೇಷ ಕ್ವಾರ್ಟರ್ ಸೆಂಚುರಿ ಫಲಕ ಸ್ವೀಕರಿಸಲು ಆರ್ಹರೆಣಿಸಿರುವರು. ಕರ್ನಾಟಕದ ಚಿಕ್ಕಮಗಳೂರು ಇಲ್ಲಿನ ಕಂಬಿಹಳ್ಳಿಯಲ್ಲಿ ಕೃಷ್ಣ ಕೆ.ಶೆಟ್ಟಿ ಮತ್ತು…

Read More

ವಿದ್ಯಾಗಿರಿ: ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಜನವರಿ 29ರಿಂದ 31ರ ವರೆಗೆ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯವು ದ್ವಿತೀಯ ರನ್ನರ್ ಅಪ್ ಆಗಿದ್ದು, ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ 15 ಕ್ರೀಡಾಪಟುಗಳ ಪೈಕಿ 13 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು.ಈ ಪಂದ್ಯಾವಳಿಯಲ್ಲಿ ಕ್ಯಾಲಿಕಟ್ ವಿಶ್ವವಿದ್ಯಾನಿಲಯ ಪ್ರಥಮ ಸ್ಥಾನ ಪಡೆದಿದ್ದರೆ, ಔರಂಗಬಾದ್‍ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮರಥ್ವಾಡ ವಿಶ್ವವಿದ್ಯಾಲಯ ದ್ವಿತೀಯ ಸ್ಥಾನ ಪಡೆದಿದೆ. ಖೇಲೋ ಇಂಡಿಯಾ: ಯುವ ಖೇಲೋ ಇಂಡಿಯಾ ಖೋಖೋ ಪಂದ್ಯಾವಳಿಯು ಚೆನ್ನೈನಲ್ಲಿ ಜನವರಿ 26ರಿಂದ 30ರವರೆಗೆ ನಡೆದಿದ್ದು, ಯುವಕರ ಹಾಗೂ ಯುವತಿಯರ ವಿಭಾಗದ ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ತಲಾ ಇಬ್ಬರು ವಿದ್ಯಾರ್ಥಿಗಳು ಪ್ರತಿನಿಧಿಸಿದ್ದಾರೆ. ಯುವಕರ ತಂಡವನ್ನು ಆಳ್ವಾಸ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಸಂಗೀತ್ ಗೌಡ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಮೇಶ್ ಪ್ರತಿನಿಧಿಸಿದ್ದು, ಕರ್ನಾಟಕ ತಂಡವು ತೃತೀಯ ಸ್ಥಾನ ಪಡೆದಿದೆ. ಯುವತಿಯರ ತಂಡವನ್ನು ಆಳ್ವಾಸ್ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿನಿ ಹಿಮಾನಿ ಹಾಗೂ…

Read More

ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 29ನೇ ವರ್ಷದ ಆಳ್ವಾಸ್ ವಿರಾಸತ್‍ನ ಶ್ರೀಮತಿ ವಜನಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಭಾನುವಾರ ವಿಜಯ ಪ್ರಕಾಶ್ ಅವರ ಸ್ವರಮಾಧುರ್ಯ, ಮೈಸೂರು ಮಂಜುನಾಥ ಅವರ ವಯೋಲಿನ್ ವೈಭವ ಹಾಗೂ ಪ್ರವೀಣ್ ಗೋಡ್ಖಿಂಡಿ ಅವರ ಕೊಳಲಿನ ನಾದಕ್ಕೆ ಪ್ರೇಕ್ಷಕರು ತಲೆದೂಗಿದರು. ಆಳ್ವಾಸ್ ವಿರಾಸತ್ ಪ್ರಶಸ್ತಿ ಪುರಸ್ಕೃತ ಮೂವರ ಕಛೇರಿಯು ಅಭಿಮಾನಿಗಳನ್ನು ಸಂಗೀತ ಲೋಕಕ್ಕೆ ಕೊಂಡೊಯ್ದಿತು. ಅದು ವಿರಾಸತ್ ವೇದಿಕೆಯಲ್ಲಿ ನಡೆದ ತಾಳ ವಾದ್ಯ ಸಂಗೀತ ಕಾರ್ಯಕ್ರಮದ ನಿನಾದ. ಹಾಲು ಬೆಳದಿಂಗಳು ಚೆಲ್ಲಿದ ವಿದ್ಯುದಾಲಂಕಾರದ, ತುಂಬಿ ತುಳುಕಿದ ಸಭಾಂಗಣದಲ್ಲಿ ಸೇರಿದ ಶ್ರೋತೃಗಳ ಮನಸೂರೆಗೊಂಡಿತು. ಆರಂಭದಲ್ಲಿ ಹಂಸಧ್ವನಿ ರಾಗದ ಆಲಾಪನೆ ಮೂಲಕ ಕಛೇರಿ ಆರಂಭಗೊಂಡಿತು. ಗೋಡ್ಖಿಂಡಿ ಬಾನ್ಸುರಿಗೆ ಮೈಸೂರು ಮಂಜುನಾಥ್ ಜುಗಲ್ ಬಂಧಿಯಾದರು. ಮುಸ್ಸಂಜೆಯ ಗೋಧೋಳಿ ಲಗ್ನದಲ್ಲಿ ಮನೆ ಮನೆಗಳಲ್ಲಿ ದೀಪ ಬೆಳಗಿದಂತೆ, ಬೆಳಂದಿಗಳು ತುಂಬಿದ ವೇದಿಕೆಯಲ್ಲಿ ಗಣೇಶ ಸ್ತುತಿ ಮೂಲಕ ಹಂಸಧ್ವನಿ ರಾಗದ ವಾತಾಪಿ ಗಣಪತಿಂ ಭಜೇ..ನಾದ ಹೊನಲಾಯಿತು. ನಾದಸುಧೆಯ ಏರಿಳಿತವು ಸಭಾಂಗಣದಲ್ಲಿ ಸಂಭ್ರಮದ ಅಲೆಯನ್ನು ಸೃಷ್ಟಿಸಿತು.…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು  ಗೌರವ ಸನ್ಮಾನ ಕಾರ್ಯಕ್ರಮ  ಅಕ್ಟೋಬರ್ 22 ರಂದು ಶನಿವಾರ  ಬೆಳಿಗ್ಗೆ 10.00 ಗಂಟೆಗೆ ಬಂಟ್ಸ್  ಹಾಸ್ಟೇಲ್ ಬಳಿಯ ಸಿ.ವಿ. ನಾಯಕ್ ಹಾಲ್ ನ ಸಭಾಂಗಣದಲ್ಲಿ ಜರಗಲಿದೆ. ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿ ವಹಿಸಲಿದ್ದಾರೆ. ಸಮಾರಂಭದಲ್ಲಿ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ  ಶಿಕ್ಷಣ, ಮದುವೆ, ಮನೆ‌ ನಿರ್ಮಾಣ, ಕ್ರೀಡೆ, ವೈದ್ಯಕೀಯ ಮೊದಲಾದ  ಫಲಾನುಭವಿಗಳಿಗೆ  ಚೆಕ್ ಗಳನ್ನು ವಿತರಿಸಲಾಗುವುದು. ಮುಖ್ಯ ಅತಿಥಿಗಳಾಗಿ ವಲ್ಡ್  ಬಂಟ್ಸ್ ವೆಲ್ ಫೇರ್ ಎಸೋಸಿಯೇಶನ್ ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಜಾಗತಿಕ ಬಂಟ ಪ್ರತಿಷ್ಠಾನದ ಪೋಷಕ ಡಾ ಬಿ ಆರ್ ಶೆಟ್ಟಿ, ಮಾಜೀ ಅಧ್ಯಕ್ಷ ಡಾ ಎಂ.ಶಾಂತಾರಾಮ ಶೆಟ್ಟಿ, ಪ್ರತಿಷ್ಠಾನದ ಅಧ್ಯಕ್ಷ ಎ.ಜೆ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್  ರತ್ನಾಕರ ಹೆಗ್ಡೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ…

Read More

ನಮ್ಮ ಸಂಸ್ಕೃತಿ ಪರಂಪರೆಯನ್ನು ಮಕ್ಕಳಿಗೆ ಕಲಿಸುವ ಕೆಲಸ ನಮ್ಮ ತಾಯಿಂದಿರು ಮಾಡಬೇಕು. ಸಾಮಾಜಿಕ ಬದುಕಿನಲ್ಲಿ ಬಂಟರ ಪಾತ್ರ ಕುರಿತು ಎಲ್ಲರೂ ಅರಿಯಬೇಕು ಎಂದು ಲೇಖಕ ಶ್ರೀಕಾಂತ್ ಶೆಟ್ಟಿ ಹೇಳಿದರು. ಅವರು ಬಂಟರ ಯಾನೆ ನಾಡವರ ಸಂಘ ಹೆಬ್ರಿ ಅಜೆಕಾರು ವಲಯ ಇದರ ಆಶ್ರಯದಲ್ಲಿ ನಡೆದ ಬಂಟರ ವಾರ್ಷಿಕ ಸಮಾವೇಶದಲ್ಲಿ ಸಾಮಾಜಿಕ ಬದುಕಿನಲ್ಲಿ ಬಂಟರ ಪಾತ್ರ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಮಲ್ಲಿಕಾ ಸುಮಂತ್ ಶೆಟ್ಟಿ ಉದ್ಘಾಟಿಸಿದರು. ಬಂಟರ ಸಂಘದ ಅಧ್ಯಕ್ಷ ಸೀತಾನದಿ ವಿಠ್ಠಲ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ನ ಸಮಾಜ ಭಾಂದವರು ಸಕ್ರೀಯವಾಗಿ ಭಾಗವಹಿಸಿರುವ ಪರಿಣಾಮ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು. ಸಮಾರಂಭದಲ್ಲಿ ಉದ್ಯಮಿ ಹರೀಶ್ ಶೆಟ್ಟಿ, ಸಮಾವೇಶ ಸಮಿತಿಯ ಸಂಚಾಲಕರಾದ ಮುಟ್ಲುಪಾಡಿ ಸತೀಶ್ ಶೆಟ್ಟಿ, ಆಶಾಲತಾ ಬಿ.ಶೆಟ್ಟಿ, ಉಪಾಧ್ಯಕ್ಷರಾದ ವಾದಿರಾಜ್ ಶೆಟ್ಟಿ, ಹರ್ಷ ಶೆಟ್ಟಿ, ಕುಂಟಿನಿ ಭಾಸ್ಕರ್ ಶೆಟ್ಟಿ, ದಯಾನಂದ ಶೆಟ್ಟಿ, ಸುರೇಶ್ ಶೆಟ್ಟಿ, ಮಹಿಳ‍ಾ ಬಂಟರ ಸಂಘದ ಅಧ್ಯಕ್ಷೆ ಬಾನು ಪಿ.ಬಲ್ಲಾಳ್,…

Read More

ವಿದ್ಯಾಗಿರಿ (ಮೂಡುಬಿದಿರೆ): ಸಂಗೀತ ಸಿರಿಯ ಕೆನ್ನೆಯ ಮೇಲೆ ಪ್ರೀತಿಯ ಕೆಂಬಣ್ಣದಂತೆ `ವಿರಾಸತ್ ವೇದಿಕೆಯು ಭಾನುವಾರ ಸಂಜೆ ವಿಜಯ್ ಪ್ರಕಾಶ್ ಹಾಗೂ ಸಂಗಡಿಗರ ರಸಸಂಜೆಗೆ ಸಾಕ್ಷಿಯಾಯಿತು. ಶ್ರೋತೃಗಳ `ಜೈ ಹೋ… ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 29ನೇ ವರ್ಷದ ಆಳ್ವಾಸ್ ವಿರಾಸತ್‍ನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಭಾನುವಾರ ರಾಗಗಳದ್ದೇ ನರ್ತನ. ಕನ್ನಡ ಹಾಡುಗಳ ರೋಮಾಂಚನ. `ಭಜರಂಗಿ ಸಿನಿಮಾದ `ನಂದ ನಂದ ಶ್ರೀ ಕೃಷ್ಣ ನನ್ನ ಬಂಧುವೇ ನೀ ಶ್ರೀ ಕೃಷ್ಣ ಹಾಡಿನ ಮೂಲಕ ಕಾಮನಬಿಲ್ಲಿನ ಬೆಳಕಿನ ವೇದಿಕೆಗೆ ಬಂದ ನೇರಳೆ ಧಿರಿಸಿನ ಮುದ್ದು ಮೊಗದ ಅಪ್ಪನ ಪ್ರೀತಿಯ ಹುಡುಗಿ ಅನುರಾಧ ಭಟ್, ಸಂಗೀತ ರಸಸಂಜೆಗೆ ಮುನ್ನುಡಿ ಬರೆದರು. ತಂದೆಯ ಬೆವರ ಹನಿಗೆ ಮಕ್ಕಳ ಪ್ರೀತಿಯ ಮುತ್ತುಗಳನ್ನು ತೊಡಿಸಿದ, ತಾನೇ `ಚೌಕ ಸಿನಿಮಾಕ್ಕೆ ಹಾಡಿದ `ನಾನು ನೋಡಿದ ಮೊದಲ ವೀರ … ಅಪ್ಪಾ ಐ ಲವ್ ಯೂ ಪಾ .. ಹಾಡಿದಾಗ ಪ್ರೇಕ್ಷಕ ವರ್ಗದಲ್ಲಿನ ತಂದೆ- ಮಗಳು- ಮಗ ಮಾತ್ರವಲ್ಲ…

Read More

“ಭಯಾನಕ ಕಾಯಿಲೆ ಯನ್ನು ಹೊಡೆದೋಡಿಸಿ, ರೈತನಿಗೆ ಹೊಸ ಬದುಕು ತಂದುಕೊಟ್ಟ ಕೃಷಿ ಭೂಮಿ……!”ಕ್ಯಾನ್ಸರ್‌ ರೋಗದಿಂದ ಬದುಕಿನಲ್ಲಿ ಐಷಾರಾಮಿ ಗಲ್ಫ್ ಜೀವನ ಕ್ಯಾನ್ಸಲ್…..!” “ಕೊನೆಗೂ ಕೈ ಹಿಡಿದ ಭೂಮಿತಾಯಿ….!” ✍ಕೆ .ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ, ಉಡುಪಿ ಜಿಲ್ಲೆ. (santhoshmolahalli@gmail.com) ಸುದ್ದಿ @ಮಂಗಳೂರು: ಅವರು ಕೃಷಿ ಭೂಮಿಯಲ್ಲಿ ಜೀವ ಕಳೆದುಕೊಂಡ ಕುಟುಂಬ.ಕೃಷಿಗೆ ಜೀವನ  ಎಂದು ನಂಬಿಕೊಂಡು ಬದುಕುವ ಕುಟುಂಬ.ಆದರೆ ಆ ಕಾಲದಲ್ಲಿ ಕೃಷಿಯಿಂದ ಬೇಸತ್ತು ವಿದೇಶದತ್ತ ಪ್ರಯಾಣ ಬೆಳೆಸಿದ ಆ ವ್ಯಕ್ತಿ ಜೀವನವೇ ಬದಲಾಯಿಸಿದ್ದು ಭಯಾನಕ ಕಾಯಿಲೆ.ಕೃಷಿ ಮಾಡುವ ಚಾಕಚಕ್ಯತೆ, ಕೃಷಿಭೂಮಿ ಹದಗೊಳಿಸುವಿಕೆ ,ಕೃಷಿಯಲ್ಲಿ ತಾನು ಪಡೆದುಕೊಂಡಂತಹ ಲಾಭಾಂಶ ಇವೆಲ್ಲವೂ ಆ ವ್ಯಕ್ತಿಗೆ ಕೃಷಿಯ ಲಾಭಾಂಶದ  ಪರಿಜ್ಞಾನವಿದೆ.ಆದರೆ ಅದನ್ನು ಸರಿಯಾಗಿ ವಿನಿಯೋಗ ಮಾಡಿಕೊಳ್ಳದೆ, ಬಹುತೇಕವಾಗಿ ಅದರಲ್ಲಿನ ಕೃಷಿ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲಿಲ್ಲ.ಕೃಷಿ ಬದುಕನ್ನು ದೂರಗೊಳಿಸಿ ದೂರದ ಗಲ್ಫ್ ಪ್ರದೇಶಕ್ಕೆ ಹೋಗಿ ಬದುಕುವ ಆಸೆ ಕಂಡಿದ್ದರು.ಆದರೆ ಕೃಷಿ ಭೂಮಿಯ ಶಾಪವೋ ಏನೋ ಗೊತ್ತಿಲ್ಲ.ಪುನಃ ಆ ವ್ಯಕ್ತಿಯನ್ನ ಕೃಷಿ ಭೂಮಿಯತ್ತ ಸೆಳೆದ ಪರಿ ಆಶ್ಚರ್ಯ  ಸಂಗತಿ.ಹೌದು…

Read More

ವಿದ್ಯಾಗಿರಿ: ಯಾವುದೇ ಕೆಲಸದಲ್ಲೂ ಯಶಸ್ವಿಯಾಗಲು ಸ್ಪಷ್ಟತೆ ಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಮುಂಡ್ರೆದುಗುತ್ತು ಕೆ . ಅಮರನಾಥ ಶೆಟ್ಟಿ (ಕೃಷಿಸಿರಿ) ಸಭಾಂಗಣದಲ್ಲಿ ಬುಧವಾರ ನಡೆದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ‘ಪೋಷಕರ – ಶಿಕ್ಷಕರ ಸಭೆ ‘ಯಲ್ಲಿ ಅವರು ಮಾತನಾಡಿದರು. ‘ಎಲ್ಲಾ ವಿದ್ಯಾರ್ಥಿಗಳು ಆರಂಭದಲ್ಲಿ ಕನಸನ್ನು ಕಾಣುವುದು ಸಹಜ. ಆದರೆ ಕಂಡ ಕನಸನ್ನು ನನಸಾಗಿಸಲು ಸಾಗುವ ದಾರಿಯಲ್ಲಿ ಸ್ಪಷ್ಟತೆ ಇರುವುದಿಲ್ಲ. ವಿದ್ಯಾರ್ಥಿಗಳು ಪ್ರೌಢಾವಸ್ಥೆಗೆ ಬರುವಾಗ ದೈಹಿಕವಾಗಿ, ಮಾನಸಿಕವಾಗಿ, ವ್ಯಕ್ತಿತ್ವ ರೂಪಿಸುವಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ  ಎಂದರು . ಅದೇ ರೀತಿ ಪ್ರೌಢ ಶಿಕ್ಷಣದಿಂದ ಪದವಿ ಪೂರ್ವ ಶಿಕ್ಷಣಕ್ಕೆ ಕಾಲಿಡುವಾಗ ಕಲಿಕಾ ಬೋಧನಾ ಕ್ರಿಯೆ, ವಿದ್ಯಾಭ್ಯಾಸ , ಆಳವಾಗಿ ಅಧ್ಯಯನ ನಡೆಸುವ ಕ್ರಮದಲ್ಲಿ ಅನೇಕ ಬದಲಾವಣೆಗಳಾಗುತ್ತವೆ ಎಂದರು. ಶಿಕ್ಷಣ ಒಂದು ಪಂಚಾಂಗವಿದ್ದಂತೆ. ನೀವು ಯಾವ ಕ್ಷೇತ್ರಕ್ಕೆ ಹೋಗಬೇಕೆಂದು ನಿರ್ಧರಿಸಿದ್ದರೋ ಆ ಕ್ಷೇತ್ರದ ಪ್ರವೇಶಾತಿ ಪರೀಕ್ಷೆಯನ್ನು ಎದುರಿಸಲು ಬದ್ಧರಾಗಿರಬೇಕು ಎಂದು ಅವರು ಹೇಳಿದರು. ಪದವಿ…

Read More

ಅವಿಭಕ್ತ ದಕ್ಷಿಣ ಕನ್ನಡ ಜಿಲ್ಲೆಯ ಬಂಟರು ಉದ್ಯಮಶೀಲರು, ಸಾಹಸಿಗಳು ಮತ್ತು ಪರಿಶ್ರಮಿಗಳು. ತಾವು ತಮ್ಮ ಲಕ್ಷ್ಯವನ್ನು ಹಿಂಬಾಲಿಸುವಲ್ಲಿ ಎದುರಾಗುವ ಕಷ್ಟನಷ್ಟಗಳನ್ನು ಸವಾಲು ಎಂಬಂತೆ ಸ್ವೀಕರಿಸುತ್ತಾ ಕೊನೆಗೊಂದು ದಿನ ಯಶಸ್ಸಿನ ತುತ್ತ ತುದಿಯಲ್ಲಿದ್ದು ತಮ್ಮನ್ನು ಗುರುತಿಸಿಕೊಳ್ಳುತ್ತಾರೆ. ಶ್ರೀ ಕೆ. ಎಂ. ಶೆಟ್ಟಿ ಹೆಸರು ದೇಶಾದ್ಯಂತ ಪರಿಚಿತ. 1975 ರ ಸುಮಾರಿಗೆ ವಿ. ಕೆ. ಇಂಜಿನಿಯರ್ಸ್ ಎಂಬ ಹೆಸರಿನೊಂದಿಗೆ ಉದ್ಯಮ ರಂಗ ಪ್ರವೇಶಿಸಿದ ಕೆ. ಎಂ ಶೆಟ್ಟರು ಟೂಲ್ ರೂಂ ವರ್ಕ್ ಶಾಪ್ ಯಂತ್ರೋಪಕರಣಗಳ ಮೂಲಕ ತಮ್ಮ ಕಾರ್ಯಾಗಾರವನ್ನು ಪ್ರಾರಂಭಿಸಿದರು. ಉದ್ಯಮ ಕ್ಷೇತ್ರದಲ್ಲಿ ಅತ್ಯುತ್ತಮ ಗುಣಮಟ್ಟದ ಇಂಜೆಕ್ಷನ್ ಮೌಲ್ಡಿಂಗ್ ಉಪಕರಣಗಳನ್ನು ಉತ್ಪಾದಿಸುವ ಮೂಲಕ ಅತ್ಯಂತ ಕಡಿಮೆ ಅವಧಿಯಲ್ಲಿ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡರು. ತನ್ನ ಉದ್ಯಮ ಅಪೂರ್ವ ಯಶಸ್ಸು ಕಂಡ ಬಳಿಕ ದೇಶದ ಅನ್ಯಭಾಗಗಳಲ್ಲಿ ಗ್ರಾಹಕರ ಬೇಡಿಕೆಗಳನ್ನು ಅನುಸರಿಸಿ ಶಾಖೆಗಳನ್ನು ತೆರೆದು ಉದ್ಯಮ ವ್ಯಾಪ್ತಿಯನ್ನು ವಿಸ್ತರಿಸಿ ಕೊಂಡರು. ಕೆ. ಎಂ ಶೆಟ್ಟರು ಇದರ ಕಾರ್ಯಾಧ್ಯಕ್ಷರಾಗಿ, ಆಡಳಿತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸತೊಡಗಿದರು. ಪ್ರಸ್ತುತ ಈ ಕಂಪನಿಯಲ್ಲಿ ಗೃಹೋಪಯೋಗಿ…

Read More