Author: admin
ಯೋಗ ನಮ್ಮ ಭಾರತೀಯ ಆಧ್ಯಾತ್ಮಿಕ ಪರಂಪರೆಯ ಒಂದು ಅಂಗ ಮತ್ತು ಪುರಾತನ ಕಾಲದಿಂದ ಬಹಳ ಅಭಿವೃದ್ದಿ ಪಥದಲ್ಲಿ ನಡೆದು ಬಂದಿರುವ ಕಲೆ. ಮನಸ್ಸು ಮತ್ತು ದೇಹವನ್ನು ಒಂದಕ್ಕೊಂದು ಸಂಪರ್ಕಿಸುವ ಪ್ರಾಚೀನ ಕಲೆ. ಪ್ರತಿನಿತ್ಯ ಯೋಗದಿಂದ ನಮ್ಮ ದೇಹ ಸದೃಡಗೊಳ್ಳಬಹುದು ಮತ್ತು ಏಕಾಗ್ರತೆಯಿಂದ ಮನಸ್ಸಿಗೆ ಶಾಂತಿಯನ್ನು ಪಡೆಯಬಹುದು. ಸ್ಥಿರ ಉತ್ತಮ ಅರೋಗ್ಯ ಪಡಯಲು ಯೋಗ ಬಹು ಮುಖ್ಯ ಸಾಧನ. ಯೋಗ ದೇಹಕ್ಕೆ ರೋಗ ನೀರೋಧಕ ಶಕ್ತಿಯನ್ನು ನೀಡುತ್ತದೆ. ಯೋಗದಲ್ಲಿ ನಾವೆಲ್ಲರೂ ಜ್ಞಾನ ಪಡೆದಂತೆ ನಮ್ಮ ಮಕ್ಕಳಿಗೆ ಸಣ್ಣ ಪ್ರಾಯದಲ್ಲೇ ಯೋಗದ ಮಹತ್ವವನ್ನು ತಿಳಿಸುವ ಅಗತ್ಯತೆ ಇದೆ. ಯೋಗದಿಂದ ಅರೋಗ್ಯ ಭಾಗ್ಯ ಪಡೆಯಬಹುದು ಎಂದು ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಗಣೇಶ್ ಹೆಗ್ಡೆ ಪುಣ್ಚೂರ್ ನುಡಿದರು. ಪುಣೆ ಬಂಟ್ಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 21 ಶುಕ್ರವಾರದಂದು ವಾನ್ ವಾಡಿಯ ಮಹಾತ್ಮ ಪುಲೆ ಸಾಂಸ್ಕ್ರತಿಕ ಭವನದಲ್ಲಿ ಭಾರತೀಯ ಯೋಗ ಸಂಸ್ಥಾನ ಪುಣೆ ವಿಭಾಗದ ಮುಖ್ಯಸ್ಥರಾದ ಕೆಮ್ತೂರು…
ಬಾರ್ಕೂರು ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಗಣೇಶ್ ಶೆಟ್ಟಿ ಬಿ, ಕಾರ್ಯದರ್ಶಿಯಾಗಿ ಹೆಚ್ ಅಜಿತ್ ಕುಮಾರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳಾಗಿ ಯು ಕೆ ವಾಸುದೇವ್ ಶೆಟ್ಟಿ, ಆನಂದ ಶೆಟ್ಟಿ, ಕೆ ಬಾಬು ನಾಯಕ್, ಹರೀಶ್ ಕುಂದರ್, ಆರ್ ರತ್ನಾಕರ್ ಶೆಟ್ಟಿ, ಗಣೇಶ್ ಆಚಾರ್ಯ, ರಾಜು ಪೂಜಾರಿ, ಸುಧಾಕರ್ ರಾವ್, ಕಿಶೋರ್ ಶೆಟ್ಟಿ, ಜಯಶ್ರೀ ಶೆಟ್ಟಿ, ಶ್ರೀನಿವಾಸ್ ಶೆಟ್ಟಿಗಾರ್, ಸತೀಶ್ ಲಿಮಿನ್, ಡಾ. ಸುರೇಶ್ ಶೆಟ್ಟಿ, ಪ್ರಕಾಶ್ ತಂತ್ರಿ, ಎ ರತ್ನಾಕರ್ ಶೆಟ್ಟಿ, ರತ್ನಾಕರ್ ಶೆಟ್ಟಿ ಬಿ, ಸೀತಾರಾಮ್ ಎಸ್ ಆಯ್ಕೆಯಾಗಿದ್ದಾರೆ. ಯುವ ಸಂಘಟಕರಿಗೆ ಸಂಸ್ಥೆಯ ಹೊಣೆ : ಗಣೇಶ್ ಶೆಟ್ಟಿ ಅವರು ಹಲಸು ಮೇಳ ಸೇರಿದಂತೆ ಅನೇಕ ಕಾರ್ಯಕ್ರಮ ಆಯೋಜನೆ ಮೂಲಕ ಕರಾವಳಿಯಲ್ಲಿ ತಮ್ಮದೇ ಹೆಸರು ಹೊಂದಿದ್ದು, ಸ್ವದೇಶಿ ಆಯುರ್ವೇದ ಸಂಸ್ಥೆಯ ಮಾಲೀಕರಾಗಿ, ಸದ್ಗುರು ಆಯುರ್ವೇದ ಸಂಸ್ಥೆಯ ಕರಾವಳಿ ಮುಖ್ಯಸ್ಥರಾಗಿ, ನಮ್ಮೂರ್ ಬಾರ್ಕೂರು ಸಂಘಟಕರಾಗಿ, ಬೆಣ್ಣೆ ಕುದ್ರು ಗಣೇಶೋತ್ಸವದ ಅಧ್ಯಕ್ಷರಾಗಿ, ಯುವ ಉದ್ಯಮಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾರ್ಯದರ್ಶಿಯಾಗಿರುವ ಹೆಚ್ ಅಜಿತ್ ಕುಮಾರ್…
ಪ್ರೋ ನರೇಂದ್ರ ಎಲ್ ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸಂಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ ಮೂಡುಬಿದಿರೆ: ಮೂಲತಃ ಕೃಷಿ ಕುಟುಂಬದಿಂದ ಬಂದ ಪ್ರೋ ನರೇಂದ್ರ ನಾಯಕ್ರು ಶೈಕ್ಷಣಿಕ ಕ್ಷೇತ್ರದಲ್ಲೂ ಕೃಷಿಯ ಮೂಲಸತ್ವಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶೈಕ್ಷಣಿಕ ಕೃಷಿಕ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ(ಕುಪ್ಮಾ) ಅಧ್ಯಕ್ಷ ಡಾ ಎಂ ಮೋಹನ ಆಳ್ವ ನುಡಿದರು. ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಮೂಡುಬಿದಿರೆಯ ಆಳ್ವಾಸ್ನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಕಲಾ ಪ್ರೇಮಿ, ಶಿಕ್ಷಣ ತಜ್ಞ ಪ್ರೋ ನರೇಂದ್ರ ಎಲ್ ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸಂಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಸಾಧನೆಯಿಂದ ಪ್ರೇರೆಪಿತರಾಗೋಣ ಒಬ್ಬ ಕೃಷಿಕನಲ್ಲಿರುವ ಎಲ್ಲಾ ಮೂಲ ಗುಣಗಳನ್ನು ತಾನು ಸ್ಥಾಪಿಸಿರುವ ಎಕ್ಸಪರ್ಟ್ ಕಾಲೇಜಿನಲ್ಲಿ ಆಳವಡಿಸಿಕೊಳ್ಳಲಾಗಿದೆ. ಹಚ್ಚ ಹಸಿರಿನ ಪ್ರಕೃತಿ…
ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 6 ವಿದೇಶ ಗಣ್ಯರು ಸೇರಿದಂತೆ 60 ಸಾಧಕರಿಗೆ 2024 ರ ಸಾಲಿನ 49 ನೇಯ ವಾರ್ಷಿಕ ‘ಆರ್ಯಭಟ ಅಂತರ್ ರಾಷ್ಟ್ರೀಯ ಪ್ರಶಸ್ತಿ’ಯನ್ನು ಪ್ರಕಟಿಸಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಉಚ್ಚನ್ಯಾಯಾಲಯದ ಗೌರವಾನ್ವಿತ ನಿವೃತ್ತ ನ್ಯಾಯಮೂರ್ತಿಗಳಾದ ಡಾ| ಹೆಚ್.ಬಿ.ಪ್ರಭಾಕರ ಶಾಸ್ತ್ರಿಯವರು ನೆರವೇರಿಸಲಿದ್ದು, ಮುಖ್ಯ ಅಥಿತಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ| ಮಹೇಶ್ ಜೋಶಿಯವರು, ಖ್ಯಾತ ಚಲನಚಿತ್ರ ನಿರ್ದೇಶಕರಾದ ಡಾ. ಎಸ್.ನಾರಾಯಣ್ ರವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಆರ್ಯಭಟ ಸಂಸ್ಥೆಯ ಸಂಸ್ಥಾಪಕರಾದ ಡಾ. ಹೆಚ್.ಎಲ್.ಎನ್.ರಾವ್ ರವರು ವಹಿಸಲಿದ್ದಾರೆ. ಕಾನೂನು ಮತ್ತು ನ್ಯಾಯಾಂಗ ವಿಭಾಗದಿಂದ ಸಿ.ಕೆ. ವಿರೇಶ್ಕುಮಾರ್, ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ರಕ್ಷಿತ್ ಶೆಟ್ಟಿ, ಪತ್ರಕರ್ತರಾದ ವೈ.ಎಸ್.ಎಲ್.ಸ್ವಾಮಿ. ಸರ್ಕಲ್ ಇನ್ಸ್ಪೆಕ್ಟರ್ ಆರ್.ಪಿ.ಅನಿಲ್, ಅಬುಧಾಬಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಿತ್ರಂಪಾಡಿ ಜಯರಾಂ ರೈ, ಕತಾರ್ನಿಂದ ಅನಿಲ್ ಚಂದ್ರಶೇಖರ್ ಬಾಸಗಿ, ಲಂಡನ್ನಿಂದ ಡಾ. ಸತ್ಯವತಿ ಮೂರ್ತಿ, ಅಮೇರಿಕಾದಿಂದ ಪ್ರದ್ಯುಮ್ನ ಕಶ್ಯಪ್, ಕೃಷ್ಣ ಆದೋನಿ ಸೇರಿದಂತೆ…
ವ್ಯಕ್ತಿಯ ಬದುಕು ಮತ್ತು ಸಾಧನೆಗಳನ್ನು ವಿವರಿಸುವ ಕೃತಿಗಳಲ್ಲಿ ಎರಡು ವಿಧಗಳಿವೆ. ೧. ಆತ್ಮ ಕಥನ ೨. ಜೀವನ ಚರಿತ್ರೆ. ಲೇಖಕನೇ ತನ್ನ ಹುಟ್ಟು ಶಿಕ್ಷಣ ಉದ್ಯೋಗ ಸಾಧನೆಗಳನ್ನು ನಾನು, ನನ್ನದು ಎಂದು ಮಂಡಿಸುತ್ತಾ ಬರೆದರೆ ಅದು ಆತ್ಮಕಥನವಾಗುತ್ತದೆ. ಒಬ್ಬ ಸಾಧಕನ ಬಗ್ಗೆ ಮತ್ತೊಬ್ಬ ಲೇಖಕ ಬರೆದರೆ ಅದು ಜೀವನ ಚರಿತ್ರೆಯಾಗುತ್ತದೆ. ಈ ಬಗೆಯ ರಚನೆಗಳ ತುಲನೆಗೆ ನಾನಿಲ್ಲಿ ಹೋಗುವುದಿಲ್ಲ. ನಾವು ಗಮನಿಸಬೇಕಾದ ಒಂದು ಮುಖ್ಯ ಅಂಶವನ್ನು ಹೇಳುತ್ತೇನೆ. ಆತ್ಮ ಕಥನ ಪದವನ್ನು ಗಮನಿಸಿ. ದೇಹದ ಕಥನ ಎಂದು ಕರೆಯುವುದಿಲ್ಲ, ಬದುಕಿನ ಕಥನ ಎಂದು ಹೇಳುವುದಿಲ್ಲ, ದೇಹ ಬದುಕಿನ ವಿವರಗಳೆಲ್ಲವನ್ನು ಒಳಗೊಂಡಿದ್ದರೂ ಕೂಡ . ಆತ್ಮ ಕಥನಗಳಲ್ಲಿ ಆತ್ಮ ಸಾಕ್ಷಿ ಮುಖ್ಯವಾಗಿರುತ್ತದೆ ಎಂಬ ಕಾರಣಕ್ಕೆ. ಲೇಖಕ ಹೇಳಿದ್ದಕ್ಕೆ ಅವನ ಆತ್ಮವೇ ಸಾಕ್ಷಿ, ಬೇರೆ ಸಾಕ್ಷಿ ಇಲ್ಲ, ಕೇಳಬೇಕಾಗಿಲ್ಲ. ಜೀವನ ಚರಿತ್ರೆ ಧ್ವನಿಸುವ ಅರ್ಥ ತುಸು ಬೇರೆ ಇರುತ್ತದೆ. ಆತ್ಮಕ್ಕೆ ನಾಶ ಇಲ್ಲ, ಸತ್ಯವನ್ನಲ್ಲದೆ ಸುಳ್ಳು ಹೇಳುವುದಿಲ್ಲ. ಎದೆ ಮುಟ್ಟಿ ಹೇಳುವ ಸತ್ಯ ಅದು.…
ಪ್ರತಿಯೊಬ್ಬರೂ ಯೋಧರಂತೆ ಜೀವನದಲ್ಲಿ ಶಿಸ್ತು, ಯೋಧನ ಮನಃಸ್ಥಿತಿಯನ್ನು ಬೆಳೆಸಿಕೊಂಡು ದೇಶಕ್ಕಾಗಿ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡು ಅಭಿವೃದ್ಧಿಯಲ್ಲಿ ಕೈ ಜೋಡಿಸುವುದು ಯೋಗ ವಿತ್ ಯೋಧ ಪರಿಕಲ್ಪನೆಯ ಉದ್ದೇಶವಾಗಿದೆ ಎಂದು ದ.ಕ. ಸಂಸದ ಬ್ರಿಜೇಶ್ ಚೌಟ ಹೇಳಿದರು. ಸಸಿಹಿತ್ಲುವಿನಲ್ಲಿ ಆಯೋಜಿಸಲಾದ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ಸಹಕಾರದಲ್ಲಿ ಹಂತ ಹಂತವಾಗಿ ಬೀಚ್ ಅಭಿವೃದ್ಧಿಯ ನೀಲಿ ನಕಾಶೆ ರೂಪಿಸಲಾಗುವುದು. ನವಯುಗ ನವಪಥ ಪರಿಕಲ್ಪನೆಯೊಂದಿಗೆ ಮುಂದಿನ ದಿನದಲ್ಲಿ ದ.ಕ. ಜಿಲ್ಲೆಯ ಅಭಿವೃದ್ಧಿಯ ಪರಿಕಲ್ಪನೆ ನನ್ನದಾಗಿದೆ. ಪ್ರಥಮ ಅಂಗವಾಗಿ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಕೇಂದ್ರವಾಗಿ ಸಸಿಹಿತ್ಲು ಬೀಚ್ ಅನ್ನು ರೂಪಿಸುವ ನಿಟ್ಟಿನಲ್ಲಿ “ಯೋಗ ವಿದ್ ಯೋಧ’ ಹೆಸರಲ್ಲಿ ಯೋಗ ದಿನವನ್ನು ಇಲ್ಲಿ ಆಚರಿಸಲಾಗಿದೆ ಎಂದರು. ನಿವೃತ್ತ ಯೋಧರ ತಂಡ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು, ಎನ್ನೆಸ್ಸೆಸ್ ತಂಡ, ಕಂಬಳ ಓಟದ ಸುದರ್ಶನ್ ದೋಟ, ವಂದಿತ್ ಶೆಟ್ಟಿ ಬಂಬ್ರಾಣ, ಯೋಗ ಪಟು ಮೈತ್ರಿ ಮಲ್ಲಿ, ಅತ್ಲೆಟ್ ವಿಕಾಸ್ ಪುತ್ರನ್, ಸರ್ಫಿಂಗ್ ಫೌಂಡೇಷನ್ನ ಗೌರವ್ ಹೆಗ್ಡೆ, ಪ್ರವಾಸೋದ್ಯಮ ಇಲಾಖೆಯ…
ವಿದ್ಯಾಗಿರಿ: ನಾಯಕನೆಂದರೆ ಜವಾಬ್ದಾರಿ, ಅಹಂ ತೊರೆದು ವಿಧೇಯತೆಯಿಂದ ಕಾರ್ಯ ನಿರ್ವಹಿಸುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಇಲ್ಲಿನ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ಸ್ಮಾರಕ ಸಭಾಂಗಣ (ಕೃಷಿ ಸಿರಿ ವೇದಿಕೆ) ದಲ್ಲಿ ಶನಿವಾರ ನಡೆದ ಪುತ್ತಿಗೆಯ ವಿವೇಕಾನಂದ ನಗರ ಆಳ್ವಾಸ್ ಕೇಂದ್ರೀಯ ಶಾಲೆಯ ‘ಸ್ವಾಗತ ದಿನ ಮತ್ತು ಇನ್ವೆಸ್ಟಿಚರ್ ಕಾರ್ಯಕ್ರಮ’ ದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬನಲ್ಲೂ ತಾನು ನಾಯಕನಾಗಬೇಕೆಂಬ ಹಂಬಲ ಇರಬೇಕು. ನಾಯಕನಾಗಲು ನಾನು ಅರ್ಹನಲ್ಲ ಎಂಬ ಹಿಂಜರಿಕೆ ಇರಬಾರದು. ಪ್ರತಿ ವಿದ್ಯಾರ್ಥಿಗಳು ಇಲ್ಲಿ ನಾಯಕರೇ. ನಾಯಕನಾದವನು ಅಹಂ ತೊರೆದು ತನಗಿರುವ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹಿತವಚನ ಹೇಳಿದರು. ಶಾಲೆಯು ನಮ್ಮ ಪ್ರಗತಿಗೆ ಮಹತ್ವದ ಸಮಯವನ್ನು ಒದಗಿಸುತ್ತದೆ. ಸರಿ ಹಾಗೂ ತಪ್ಪು ಈ ಎರಡೂ ವಿಷಯಗಳಲ್ಲೂ ವಿದ್ಯೆಯನ್ನು ಪಡೆಯುತ್ತೇವೆ. ಆದರೆ ತಪ್ಪೆಂದು ತಿಳಿದ ತಪ್ಪು ದಾರಿಗೆ ಸಾಗುವುದು ಸೂಕ್ತವಲ್ಲ ಎಂದರು. ಹಲವಾರು ಕಾರ್ಯಕ್ರಮಗಳು ವಿಭಿನ್ನ ವಿಚಾರಗಳನ್ನು ತಿಳಿಸುತ್ತದೆ. ಈ ಮೂಲಕ ಕಣ್ಣ ಮುಂದೆ…
ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂಪರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದರು. ಮುಖ್ಯ ಅತಿಥಿ ಕಟೀಲು ಯಕ್ಷಗಾನ ಮೇಳದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ ಶುಭ ಹಾರೈಸಿದರು. ಸಮಾರಂಭದಲ್ಲಿ ಶಿವಪ್ರಸಾದ್ ಕಂಡೆಲ್ ಕಾರ್, ಶಿವಪ್ರಸಾದ್ ಆಳ್ವ, ವಿಜಯಕುಮಾರ್ ಕೊಡಿಯಾಲ್ ಬೈಲ್, ಪ್ರಕಾಶ್ ಪಾಂಡೇಶ್ವರ್, ರವಿ ರೈ ಕಳಸ, ಜಗನ್ ಪವಾರ್ ಬೇಕಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ತಮ್ಮ ಲಕ್ಷಣ, ಸಂತೋಷ್ ಶೆಟ್ಟಿ ಕುಂಬ್ಳೆ, ಶ್ರೀಕಾಂತ್ ಶೆಟ್ಟಿ, ಜ್ಯೋತಿಷ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ಉಪ್ಪಳ, ಪುಷ್ಪರಾಜ್ ರೈ, ರಾಘವೇಂದ್ರ ಹೊಳ್ಳ, ಮಲ್ಲಿಕಾಪ್ರಸಾದ್, ದಿನೇಶ್ ಶೆಟ್ಟಿ ಮಲಾರಬೀಡು, ರಾಮ್ ಪ್ರಸಾದ್, ಭಾಸ್ಕರ ಚಂದ್ರ ಶೆಟ್ಟಿ, ಕಿರಣ್ ಶೆಟ್ಟಿ, ಪ್ರೇಮ್ ಶೆಟ್ಟಿ ಸುರತ್ಕಲ್,…
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ಸಂಘದ ಸದಸ್ಯರ ಮಕ್ಕಳಿಗೆ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.95 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ 2023-24 ನೇ ಸಾಲಿನಲ್ಲಿ ಪಿಯುಸಿ ಉತ್ತೀರ್ಣರಾಗಿ, 2024-25 ನೇ ಶೈಕ್ಷಣಿಕ ಸಾಲಿನಲ್ಲಿ ಎಐಎಂಎಸ್, ಬಿಎಂಸಿ, ಎಂಎಂಸಿ, ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಬೆಂಗಳೂರು ಐಐಟಿ, ಎನ್ಐಟಿಕೆ, ನ್ಯಾಶನಲ್ ಲಾ ಕಾಲೇಜು ಐಐಎಂ ನಂತಹ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ಮತ್ತು ಸಂಘದ ಅಧಿಕೃತ ವೆಬ್ ಸೈಟ್ (http://ramakrishnacredit.com/) ನಲ್ಲಿ ಲಭ್ಯವಿದ್ದು ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಸಂಘದ…
ತ್ರಿರಂಗ ಸಂಗಮ ಮುಂಬಯಿ ಸಂಯೋಜನೆಯಲ್ಲಿ ಜೂನ್ 23ರಂದು ಥಾಣೆಯಲ್ಲಿ ‘ಧರ್ಮದೈವ’ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನ
ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮತ್ತು ನವೀನ್ ಶೆಟ್ಟಿ ಇನ್ನಾ ಬಾಳಿಕೆಯವರ ಮುಂದಾಳತ್ವದಲ್ಲಿ ಕಾರ್ಯ ರೂಪದಲ್ಲಿರುವ ತ್ರಿರಂಗ ಸಂಗಮ ಮುಂಬಯಿಯ ಆಶ್ರಯದಲ್ಲಿ ಇದೇ ಜೂನ್ 23 ರ ಆದಿತ್ಯವಾರದಂದು ಬೆಳಿಗ್ಗೆ ‘ಧರ್ಮದೈವ’ ತುಳು ಚಿತ್ರದ ಪ್ರೀಮಿಯರ್ ಶೋ ಪ್ರದರ್ಶನಗೊಳ್ಳಲಿದೆ. ಯುವ ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ್ ಶೆಟ್ಟಿ ಬಹಳಷ್ಟು ಶ್ರದ್ಧೆ- ಭಕ್ತಿಯಿಂದ ‘ಧರ್ಮದೈವ’ ಎಂಬ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಹಾಗೆಯೇ ಅವರ ಆಪ್ತಮಿತ್ರ ಆದರ್ಶ್ ಫಿಲಂ ಇನ್ಸ್ಟಿಟ್ಯೂಟ್ ನ ಪದವೀಧರ ನಿತಿನ್ ರೈ ಕುಕ್ಕುವಳ್ಳಿ ತನ್ನದೇ ಕಥೆಯಿಂದ ಕೂಡಿದ ಈ ಧರ್ಮದೈವ ಚಿತ್ರದ ಪೂರ್ಣ ನಿರ್ದೇಶಕರಾಗಿ ಚಿತ್ರಕ್ಕೆ ಜೀವ ಕಲೆಯನ್ನು ತುಂಬಿದ್ದಾರೆ. ಚಿತ್ರ ಕಥೆ, ಸಂಭಾಷಣೆಯನ್ನು ಹಮೀದ್ ಪುತ್ತೂರು ಕೂರ್ನಡ್ಕ ಅಚ್ಚ ತುಳು ಭಾಷೆಗೆ ರೂಪಾಂತರಿಸಿದ್ದಾರೆ. ಅರುಣ್ ರೈ ಕೆದಂಬಾಡಿ ಉತ್ತಮ ಛಾಯಾಗ್ರಹಣದ ಮೂಲಕ ‘ಧರ್ಮದೈವ’ ದ ಮಹಿಮೆ ಪ್ರೇಕ್ಷಕರನ್ನು ಆಕರ್ಷಿಸುವ ರೂಪದಲ್ಲಿ ತನ್ನ ಪ್ರತಿಭೆ ಮತ್ತು ಕೈ ಚಳಕದಿಂದ ಚೆನ್ನಾಗಿ ಮೂಡಿ ಬರುವಂತೆ ಮಾಡಿದ್ದಾರೆ. ಚಿತ್ರದಲ್ಲಿ ದೈವದ ಮಹಿಮೆ,…















