Author: admin

ಆಹ್ವಾನ ಪತ್ರ (ಇನ್ವಿಟೇಶನ್ ಕಾರ್ಡ್) ಮದುವೆಗೆಂದು ಆಹ್ವಾನಿಸಲು ನೀಡುವ ಪತ್ರಕ್ಕೆಂದೇ ಸಾವಿರಾರು ರೂಪಾಯಿಗಳ ಖರ್ಚು ಮಾಡಿ ಕೊಡುವ ಕಾರ್ಡ್ ಗಳನ್ನು ಬಹುತೇಕರು ತೆರೆದು ಕೂಡಾ ನೋಡುವುದಿಲ್ಲ. ಇಲ್ಲಿಂದ ಶುರುವಾಗುವ ಈ ದುಂದು ವೆಚ್ಚ ಹೇಗಿರುತ್ತದೆ ನೀವೇ ನೋಡಿ. ಸಾವಿರಾರು ಜನರನ್ನು ಮದುವೆಗೆ ಕರೆಯುವುದು (ಕರೆದವರಿಗೆ ಯಾರು ಬಂದಿದ್ದಾರೆ ಎಂದು ಗಮನಿಸಲೂ ಸಮಯವಿಲ್ಲ. ಹಾಜರಾದವರಿಗೆ 6 ತಿಂಗಳ ನಂತರ ಯಾವ/ಯಾರ ಮದುವೆಗೆ ಹೋಗಿರುವುದು ಸಹ ನೆನಪಿರುವುದಿಲ್ಲ) ನಿಶ್ಚಿತಾರ್ಥದ ಹೆಸರಿನಲ್ಲಿ ವಿವಾಹವಾಗುವ ಮೊದಲೇ ಭವಿಷ್ಯದ ವಧು ವರರನ್ನು ಅಕ್ಕ ಪಕ್ಕ ಕೂರಿಸಿ ಇನ್ನಿಲ್ಲದ ಆರ್ಭಾಟ ಮಾಡುವುದು, ಮದುವೆಯ ಮೊದಲು ನಡೆಸುವ ಪ್ರೀ ವೆಡ್ ಫೋಟೋ ಶೂಟ್ ಒಂದು ಚಲನಚಿತ್ರ ಮಟ್ಟದಲ್ಲಿದ್ದು, ವಧು ಮತ್ತು ವರರು ವಿಚಿತ್ರ ಮತ್ತು ಪ್ರಜ್ಞಾಹೀನ ಭಂಗಿಗಳಲ್ಲಿ ಫೋಟೋಗಳಿಗೆ ಪೋಸ್ ನೀಡುತ್ತಾರೆ. ಅಲ್ಲದೆ, ಆ ಫೋಟೋಗಳನ್ನು (ಕೆಲವು ನಿಕಟವಾದವುಗಳು) ಮದುವೆ ಸಮಾರಂಭದಲ್ಲಿ ದೊಡ್ಡ ಟಿವಿ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ಮದುವೆಗೆ ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿದ ಹೂವಿನ ಅಲಂಕಾರ, ಬಗೆ…

Read More

ಪುಣೆ ಬಂಟ್ಸ್ ಅಸೋಸಿಯೇಷನ್ ನ 12ನೇ ವಾರ್ಷಿಕೋತ್ಸವ ಸಮಾರಂಭವು ಫೆಬ್ರವರಿ 8ರ ಶನಿವಾರದಂದು ಬಂಟರ ಭವನ, ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಭವನ, ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಅಪರಾಹ್ನ ಗಂಟೆ 2:30 ರಿಂದ ವಿವಿಧ ಸಾಂಸ್ಕೃತಿಕ ನೃತ್ಯ ವೈಭವ, ‘ಬಲೆ ತೆಲಿಪುಲೆ’ ಹಾಸ್ಯ ಪ್ರದರ್ಶನ, ಸಭಾ ಕಾರ್ಯಕ್ರಮ ಸಾಧಕರಿಗೆ ಸತ್ಕಾರಗಳೊಂದಿಗೆ ಜರಗಲಿದೆ. ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ಅಧ್ಯಕ್ಷತೆಯಲ್ಲಿ ನಡೆಯಲಿರುವ ವಾರ್ಷಿಕೋತ್ಸವ ಸಂಭ್ರಮದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭವಾನಿ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಮುಂಬೈಯ ಕಾರ್ಯಾಧ್ಯಕ್ಷ ಕೆ.ಡಿ. ಶೆಟ್ಟಿ, ಗೌರವ ಅತಿಥಿಗಳಾಗಿ ಕರ್ನಾಟಕ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಬಾಲಿವುಡ್ ನ ಹೆಸರಾಂತ ನಟಿ ಅಮೃತಾ ರಾವ್ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ ಬಂಟ ಸಮಾಜದ ಸಾಧಕರಿಗೆ ಸತ್ಕಾರ ನಡೆಯಲಿದೆ. ಬಂಟ್ಸ್ ಅಸೋಸಿಯೇಷನ್ ನ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಅಪರಾಹ್ನ ಗಂಟೆ 2:30 ರಿಂದ ಆರಂಭಗೊಳ್ಳಲಿದ್ದು, ಸಾಂಸ್ಕೃತಿಕ…

Read More

ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ಶ್ರೀಮತಿ ಸವಿತಾ ಅರುಣ್ ಶೆಟ್ಟಿಯವರು ಮಂಡಿಸಿರುವ ಸಂಶೋಧನಾತ್ಮಕ ಪ್ರಬಂಧ “ಬೆಳಕಿಂಡಿ”. ಇದು ಖ್ಯಾತ ಸಾಹಿತಿ ಶ್ರೀಮತಿ ಮಿತ್ರಾ ವೆಂಕಟ್ರಾಜ್ ರವರ ಬದುಕು, ಬರಹಗಳ ಮೇಲೆ ಬೆಳಕು ಚೆಲ್ಲುವ, ಅವರ ಸಾಹಿತ್ಯ ಕೃಷಿಯ ಸಮೃದ್ಧ ಮಾಹಿತಿ ನೀಡುವ ಕೃತಿ. ಓದಿ ಅಭಿಪ್ರಾಯ ಬರೆಯಲು ತಡವಾದುದಕ್ಕೆ ವಿಷಾದಿಸುತ್ತೇನೆ. ಉತ್ಕೃಷ್ಟ ಕನ್ನಡದಲ್ಲಿ ಸೊಗಸಾಗಿ ರಚಿಸಿದ ಸಾಹಿತ್ಯಾವಲೋಕನದ ಈ ಕೃತಿ ಸವಿತಾರವರ ಅಪ್ರತಿಮ ಪ್ರತಿಭೆಗೆ ಹಿಡಿದ ಕನ್ನಡಿ. ಆಧುನಿಕ ಕನ್ನಡ ಸಾಹಿತ್ಯದ ಪ್ರಸಿದ್ಧ ಮಹಿಳಾ ಕತೆಗಾರರಲ್ಲಿ ಮಿತ್ರಾ ವೆಂಕಟ್ರಾಜ್ ರವರ ಹೆಸರು ಮುಂಚೂಣಿಯಲ್ಲಿ ಬರುತ್ತದೆ. ಹೊರನಾಡು ಮುಂಬೈನಲ್ಲಿ ವಾಸವಿದ್ದರೂ ಹಳ್ಳಿಯ ಮತ್ತು ನಗರ ಜೀವನದ ಬದುಕು ಬವಣೆಗಳನ್ನು ಕಂಡು ಅನುಭವಿಸಿ ಅದನ್ನು ಕತೆಯಾಗಿಸಿ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದವರು ಮಿತ್ರಾ ವೆಂಕಟ್ರಾಜ್ ರವರು. ಇವರು ಬರೆದಿರುವ ಕಥಾ ಸಂಕಲನಗಳಾದ “ರುಕುಮಾಯಿ”, “ಹಕ್ಕಿ ಮತ್ತು ಅವಳು” ಹಾಗೂ “ಮಾಯಕದ ಸತ್ಯ” ಅಲ್ಲದೆ ಅನೇಕ ಪತ್ರಿಕೆ, ಸಾಪ್ತಾಹಿಕಗಳಿಗೆ ಬರೆದ…

Read More

ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮೇ 6 ರಿಂದ 11 ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಪೂರ್ವಭಾವಿಯಾಗಿ ನಡೆಯಲಿರುವ ಜೀರ್ಣೋದ್ಧಾರ, ಇತರ ಅಭಿವೃದ್ಧಿ ಕಾರ್ಯಗಳು ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಿಗೆ ಸಂಬಂಧಿಸಿ ಫೆ. 23ರಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಕ್ಷೇತ್ರದ ತಂತ್ರಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಉಪಸ್ಥಿತಿಯಲ್ಲಿ ‘ಪರ್ವ ಸನ್ನಾಹ’ ಎಂಬ ವಿಶೇಷ ಕಾರ್ಯಕ್ರಮಕ್ಕೆ ಎಡನೀರು ಸ್ವಾಮೀಜಿಯವರನ್ನು ಆಹ್ವಾನಿಸಲಾಯಿತು.ಕಾಟುಕುಕ್ಕೆ ಕ್ಷೇತ್ರದ ಆಡಳಿತ ಮೊಕ್ತೇಸರ ತಾರಾನಾಥ ರೈ ಪಡ್ಡಂಬೈಲು ಗುತ್ತು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಶಾಸ್ತ್ರಿ, ಮಾತೃ ಸಮಿತಿ ಅಧ್ಯಕ್ಷೆ ರಾಜಶ್ರೀ ಟಿ. ರೈ, ಆಡಳಿತ ಮಂಡಳಿ ಸದಸ್ಯ ಗಿರೀಶ್ ಕುಮಾರ್ ಮಯ್ಯ, ಸುಧಾಕರ ಕಲ್ಲಗದ್ದೆ, ಪ್ರಶಾಂತ್ ಭಟ್ ಬಟ್ಯಮೂಲೆ ಶ್ರೀಮಠಕ್ಕೆ ತೆರಳಿ ಸ್ವಾಮೀಜಿಯ ಆಶೀರ್ವಾದ ಪಡೆದು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

Read More

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಮಾರು 1500 ಕೆ.ಜಿ. ಭಾರದ ಹಾಗೂ ಐದು ಅಡಿ ಎತ್ತರದ ಕಂಚಿನ ಗಂಟೆ ಸ್ಥಾಪನೆಯಾಗಲಿದೆ. ದೇಶದಲ್ಲೇ ದ್ವಿತೀಯ ಅತ್ಯಂತ ದೊಡ್ಡ ಗಂಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಸದ್ಯ ಅಯೋದ್ಯೆ ಶ್ರೀರಾಮ ಮಂದಿರದಲ್ಲಿ ಇರುವ 2200 ಕೆ.ಜಿ. ಗಂಟೆ ದೇಶದಲ್ಲೇ ಅತ್ಯಂತ ದೊಡ್ಡ ಗಂಟೆಯಾಗಿದೆ. ಕಾಪುವಿನಲ್ಲಿ ಸ್ಥಾಪಿಸಲಾಗುವ ಈ ಗಂಟೆ ಕರ್ನಾಟಕ ರಾಜ್ಯದಲ್ಲೇ ಅತ್ಯಂತ ದೊಡ್ಡ ಗಂಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಫೆಬ್ರವರಿ 9ರಂದು ನಡೆಯಲಿರುವ ಕಾಪು ಹೊಸ ಮಾರಿಗುಡಿಯ ನೂತನ ಸ್ವರ್ಣ ಗದ್ದುಗೆ, ಬೆಳ್ಳಿರಥ ಮತ್ತಿತರ ಕೊಡುಗೆಗಳನ್ನು ಬರಮಾಡಿಕೊಳ್ಳಲು ವೈಭವದ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಆ ಸಂದರ್ಭದಲ್ಲಿ ಈ ಗಂಟೆಯನ್ನು ಅದ್ದೂರಿ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಗುವುದು.ಮುಂಬೈಯ ಮಿರಾರೋಡ್ ನಲ್ಲಿ ಅಲಯನ್ಸ್ ಇನ್ಫ್ರಾಸ್ಟ್ರಕ್ಟರ್ ಆಂಡ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಉದ್ಯಮ ಸಂಸ್ಥೆ ಹೊಂದಿರುವ ಅರವಿಂದ ಶೆಟ್ಟಿ ಮತ್ತು ಪಲ್ಲವಿ ಶೆಟ್ಟಿ ದಂಪತಿ ಮಾರಿಯಮ್ಮನ ನೂತನ ದೇಗುಲಕ್ಕೆ ಇದನ್ನು ಕೊಡುಗೆಯಾಗಿ ನೀಡಲಿದ್ದಾರೆ. ಆಂಧ್ರಪ್ರದೇಶದ ಬಿ.ಎಸ್.ಎಂ ಫೌಂಡ್ರಿ…

Read More

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಇದರ ವತಿಯಿಂದ ಫೆಬ್ರವರಿ 6 ರಂದು ಶ್ರೀ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ ಮತ್ತು ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರದ ಲೋಕಾರ್ಪಣೆ, ತುಳು ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮವನ್ನು ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪೋಜ್ವಲನ ಮಾಡುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಸಾದ್ವಿ ಶ್ರೀ ಮಾತನಂದಮಯಿ, ಸುಳ್ಯ ಕ್ಷೇತ್ರ ವಿಧಾನಸಭಾ ಶಾಸಕಿ ಭಾಗೀರತಿ ಮುರುಳ್ಯ, ಮೂಲ್ಕಿ ಬಂಟರ ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ವಾಮಯ್ಯ ಶೆಟ್ಟಿ ದಂಪತಿಗಳು, ದಾಮೋದರ್ ಶೆಟ್ಟಿ, ವಿಕ್ರಂ ಹೆಗ್ಡೆ, ಸುರೇಶ್ ರೈ ಮಕರಜ್ಯೋತಿ, ನವನೀತ್ ಶೆಟ್ಟಿ ಕದ್ರಿ, ಡಾ ಅದೀಪ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪೇಟೆಮನೆ, ಒಡಿಯೂರು ಶ್ರೀ ಗುರುದೇವಾನಂದ ಸಂಸ್ಥಾನಮ್ ನ ಎಲ್ಲಾ ಪದಾಧಿಕಾರಿಗಳು, ಸಮಿತಿ ಸದಸ್ಯರುಗಳು ಹಾಗೂ ಇತರರು ಉಪಸ್ಥಿತರಿದ್ದರು.

Read More

ಬಂಟರ ಸಂಘ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಫೆಬ್ರವರಿ 2 ರಂದು ಆಯೋಜಿಸಿದ್ದ ಸೀರೆ, ವಜ್ರಾಭರಣ ಹಾಗೂ ಇತರ ಆಕರ್ಷಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಯಶಸ್ವಿಯಾಗಿ ನೆರವೇರಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಅವರು ಮಾತನಾಡುತ್ತಾ, ಮಹಿಳೆಯರು ಅಲಂಕರಿಸಿಕೊಂಡರೆ ಮನೆಗೂ ಶೋಭೆ. ಇಂದಿನ ಈ ಪ್ರದರ್ಶನ ವಿಶೇಷವಾಗಿ ಮಹಿಳೆಯರಿಗಾಗಿದ್ದರೂ ಈ ಮೂಲಕ ತುಂಬಾ ಜನರಿಗೆ ಅನುಕೂಲವಾಗಲಿದೆ. ವ್ಯಾಪಾರದ ದೃಷ್ಟಿಯಿಂದ ಒಂದೆಡೆಯಾದರೆ ಮತ್ತೊಂದು ಕಡೆ ಎಲ್ಲರೂ ಸಂತೋಷದಿಂದ ಬೆರೆಯುವ ಅವಕಾಶ ದೊರೆಯುತ್ತದೆ. ಬಂಟರ ಸಂಘದ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿರುವುದು ನನಗೆ ಸಂತಸವನ್ನು ನೀಡಿದೆ. ಅದರಲ್ಲೂ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಪ್ರತಿಯೊಂದು ಕಾರ್ಯಕ್ರಮವೂ ಉತ್ತಮ ರೀತಿಯಲ್ಲಿ ಮೂಡಿ ಬರುತ್ತಿದೆ. ಇದಕ್ಕೆ ನಿಮ್ಮೆಲ್ಲರ ಪರಿಶ್ರಮವೇ ಕಾರಣ. ಇಂದಿನ ಈ ಪ್ರದರ್ಶನವೂ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಮುಂಬಯಿ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಅರ್ ಶೆಟ್ಟಿಯವರು ಮಾತನಾಡುತ್ತಾ,…

Read More

ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಕಂಪ್ಯೂಟರ್ ತರಬೇತಿ ಕೇಂದ್ರ, ಗ್ರಂಥಾಲಯ ಮತ್ತು ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಲಾಯಿತು. ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು- 300 ಟ್ರೀಸ್ ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ಮುಲ್ಲಿಬಾರು ಸ.ಹಿ.ಪ್ರಾ ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಮತ್ತು ಕ್ರೀಡಾ ಸಾಮಾಗ್ರಿಗಳನ್ನು ಒಳಗೊಂಡ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಗೌರವಾನ್ವಿತ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಉದ್ಘಾಟಿಸಿದರು. ಗ್ರಂಥಾಲಯಕ್ಕೆ ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾoತರಿಸಿದರು ಹಾಗೂ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ನಂತರ ಮಾತನಾಡಿದ ಶಾಸಕರು, ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆಯ ಬಗ್ಗೆ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 300 ಟ್ರೀಸ್ ಬಗ್ಗೆ ವಿವರಿಸಿದರು. ಮುಲ್ಲಿಬಾರು ಅಂತಹ ಕಡು ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತಿರುವುದಾಗಿ ಹೇಳಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಊರ, ಪರ ಊರ ದಾನಿಗಳ ನೆರವನ್ನೂ ಸ್ಮರಿಸಿದರು. ಸ್ವಯಂಸ್ಪೂರ್ತಿ…

Read More

ಮಹಾಕುಂಭ ಮೇಳದಲ್ಲಿ ಪ್ರಯಾಗ್ ರಾಜ್ ನ ಪಲಿಮಾರು ಮಾಧ್ವ ಮಠದಲ್ಲಿ ಶ್ರೀ ಶ್ರೀ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಕೇಂದ್ರೀಯ ಸಮಿತಿಯ ತಂಡವನ್ನು ಪೂಜ್ಯ ಸ್ವಾಮೀಜಿಯವರ ಶಿಷ್ಯ ವೃಂದದವರು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಊಟ ಫಲಹಾರಗಳನ್ನು ನೀಡಿ ಸತ್ಕರಿಸಿದರು ಹಾಗೂ ಬ್ರಾಹ್ಮೀ ಮುಹೂರ್ತದಲ್ಲಿ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ ನೇತೃತ್ವದಲ್ಲಿ ನೆರವೇರಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ, ಕೋಶಾಧಿಕಾರಿ ಸಿಎ ಸುರೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ತಂಡದಲ್ಲಿದ್ದರು.

Read More

ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ವತಿಯಿಂದ ಫೆಬ್ರವರಿ 8ರಂದು ಶನಿವಾರ ಸಂಜೆ 4 ಗಂಟೆಯಿಂದ ಮೀಂಜ ಬಂಟರ ಸಂಘ ಮೈದಾನ ಚಿಗುರುಪಾದೆಯಲ್ಲಿ ನಡೆಯುವ ಸದಾಶಿವ ಸಹಾಯ ಹಸ್ತ ವಿತರಣೆ ಮತ್ತು ಉಚಿತ ಅರೋಗ್ಯ ವಿಮೆ ಉದ್ಘಾಟನೆ ಹಾಗೂ ಸದಾಶಿವ ಶೆಟ್ಟಿ ಅಭಿಮಾನಿ ಬಳಗ ಹಾಗೂ ಹಿತೈಷಿಗಳಿಂದ ತುಳುನಾಡ ಕಣ್ಮಣಿ, ಕೊಡುಗೈ ದಾನಿ ಕರ್ನಾಟಕ ರಾಜ್ಯೋತ್ಸವ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಸದಾಶಿವ ಶೆಟ್ಟಿ ಕನ್ಯಾನರವರಿಗೆ ಅಭಿನಂದನಾ ಕಾರ್ಯಕ್ರಮವು ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ತುಳು ಜಾನಪದ ನಾಟಕದೊಂದಿಗೆ ಸಮಾರೋಪಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸುಮಾರು 4000 ಕ್ಕಿಂತ ಮೇಲ್ಪಟ್ಟು ಜನಸಾಮಾನ್ಯರು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಉಪಹಾರ ಮತ್ತು ಭೋಜನದ ವ್ಯವಸ್ಥೆ ಇದೆ ಹಾಗೂ ಈ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಸ್ತ, ಉಚಿತ ಅರೋಗ್ಯ ಕುಟುಂಬ ವಿಮೆ (5 ಲಕ್ಷ) ಆಂಬುಲೆನ್ಸ್ ಹಸ್ತಾಂತರ, ಶಾಲಾ ವಾಹನ ಹಸ್ತಾಂತರ, ಶಾಲಾ ಅಭಿವೃದ್ಧಿಗೆ ಸಹಾಯ, ಅಂಗವಿಕಲರಿಗೆ ಕೃತಕ ಕಾಲು,…

Read More