Author: admin
ಯಕ್ಷ ಮಿತ್ರರು ಸುರತ್ಕಲ್ ಇದರ 18 ನೇ ವರ್ಷದ ಪ್ರಯುಕ್ತ ಅ.8 ರಂದು ಭಾನುವಾರ ಸುರತ್ಕಲ್ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿ ವೇದಿಕೆಯಲ್ಲಿ ಕರ್ಣಾವಸಾನ ಯಕ್ಷಗಾನ ತಾಳಮದ್ದಳೆ ನಡೆಯಿತು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ, ಅರ್ಥಧಾರಿ ಸದಾಶಿವ ಆಳ್ವ ತಲಪಾಡಿ ಅವರನ್ನು ಸನ್ಮಾನಿಸಲಾಯಿತು. ದಿನೇಶ್ ಶೆಟ್ಟಿ ಕಾವಳಕಟ್ಟೆ ಅಭಿನಂದನಾ ಭಾಷಣದಲ್ಲಿ ಸದಾಶಿವ ಆಳ್ವರ ಕಲಾ ಸೇವೆಯನ್ನು ಕೊಂಡಾಡಿದರು. ತಾಳಮದ್ದಲೆ ಅರ್ಥಧಾರಿ ಯಾಗಿ ಸದಾಶಿವ ಆಳ್ವರವರ ಮಾತುಗಾರಿಕೆ, ತುಳು ಭಾಷೆಯಲ್ಲಿ ಅವರಿಗಿರುವ ಹಿಡಿತ ಇಂದಿನ ಯುವ ಕಲಾವಿದರಿಗೆ ಸ್ಪೂರ್ತಿಯಾಗಿದ್ದಾರೆ. ಈ ಹಿಂದೆ ಕಾಂಚನ ಸಂಜಿವ ರೈ, ಬೆಳ್ಳಾರೆ ವಿಶ್ವನಾಥ ಶೆಟ್ಟಿ ತುಳು ಭಾಷೆಯ ಬಗ್ಗೆ ಇದ್ದ ಒಲವು, ಭಾಷಾ ಶುದ್ಧತೆಯನ್ನು ಈಗ ನಾವು ಸದಾಶಿವ ಆಳ್ವರಲ್ಲಿ ಕಾಣಬಹುದು ಎಂದರು. ಇಡ್ಯಾ ದೇವಸ್ಥಾನದ ಆಡಳಿತ ಮೊಕ್ತೇಸರ ಐ. ರಮಾನಂದ ಭಟ್ ರವರ ಆಶೀರ್ವಚನದಲ್ಲಿ ಯಕ್ಷಮಿತ್ರರು ಯಕ್ಷಗಾನ ಕಲೆಯನ್ನು ಆರಾಧಿಸುತ್ತಾರೆ. ನಿರಂತರ ತಾಳಮದ್ದಳೆಯನ್ನು ಮಾಡುವ ಮೂಲಕ ಯಕ್ಷ ಕಲೆಗೆ ಪ್ರೋತ್ಸಾಹ ನೀಡುತ್ತಾರೆ. ಸದಾಶಿವ…
ದೇವಸ್ಥಾನಗಳು, ದೈವಸ್ಥಾನಗಳು ಜೀರ್ಣೋದ್ಧಾರಗೊಂಡಾಗ ಸಮಗ್ರ ಗ್ರಾಮ ಅಭಿವೃದ್ಧಿಗೊಳ್ಳುತ್ತದೆ : ಕರ್ನಿರೆ ವಿಶ್ವನಾಥ ಶೆಟ್ಟಿ.
ಮೂಲ್ಕಿ ತಾಲೂಕಿನ ಕರ್ನಿರೆ ಗ್ರಾಮದ ಗ್ರಾಮ ದೇವರಾದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜನವರಿ 17 ರಿಂದ 23 ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈ ಬಗ್ಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಗೋರೆಗಾಂ ಪೂರ್ವದ ಹೋಟೆಲ್ ಬಾಂಬೆ 63, ಇಲ್ಲಿ ಮುಂಬಯಿಯಲ್ಲಿ ವಾಸವಾಗಿರುವ ಗ್ರಾಮದ ಪ್ರಮುಖರೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಸಭೆಯನ್ನು ಊರಿನ ಮತ್ತು ಮುಂಬಯಿಯ ಬ್ರಹ್ಮಕಲಶ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಬ್ರಹ್ಮಕಲಶೋತ್ಸವ ಗೌರವ ಅಧ್ಯಕ್ಷ ರವೀಂದ್ರ ಸಾಧು ಶೆಟ್ಟಿಯವರು ದೀಪ ಪ್ರಜ್ವಲಿಸಿ ಉದ್ಘಾಟನೆ ಮಾಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಾದ ಕರ್ನಿರೆ ವಿಶ್ವನಾಥ ಶೆಟ್ಟಿಯವರು ಸಭೆಯಲ್ಲಿ ಭಾಗವಹಿಸಿದ ಪ್ರಮುಖರ ಪರಿಚಯ ನೀಡಿ ಕರ್ನಿರೆ ಗ್ರಾಮದಲ್ಲಿರುವ ದೈವಸ್ಥಾನವಾಗಲಿ, ದೇವಸ್ಥಾನವಾಗಲಿ, ಮತ್ತು ಧಾರ್ಮಿಕ ಸಾಮಾಜಿಕ ಚಟುವಟಿಕೆಗಳಿಗೆ ಮುಂಬಯಿಯಲ್ಲಿ ನೆಲೆ ನಿಂತಿರುವ ಗ್ರಾಮಸ್ಥರ ಕೊಡುಗೆ ಅಪಾರವಾಗಿದೆ. ಗ್ರಾಮದ ದೈವ ದೇವರುಗಳ ಮೇಲೆ ಅವರಿಟ್ಟಿರುವ ಭಕ್ತಿ ಎಲ್ಲಿ ಹೋದರೂ ಗ್ರಾಮದತ್ತ ಸೆಳೆಯುತ್ತದೆ ಮತ್ತು ಅದರ ಯಾವುದೇ ಅಭಿವೃದ್ಧಿಯ ಕಾರ್ಯದಲ್ಲಿ…
ಜನಪ್ರಿಯ ಸಂಘಟಕ, ಸಜ್ಜನ ಸಹೃದಯಿ ಬಂಧು, ಉದ್ಯಮಿ ಶ್ರೀ ಉದಯ್ ಎಮ್ ಶೆಟ್ಟಿ ಮಲಾರ ಬೀಡು ಅವರು ಬಂಟ್ಸ್ ಫೋರಂ ಮೀರಾ ಭಾಯಂದರ್ ಇದರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರ, ಹೀಗೆ ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಉದಯ್ ಶೆಟ್ಟಿಯವರು ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.
ನವಿಮುಂಬಯಿಯ ನೆರುಲ್ ಪಶ್ಚಿಮದಲ್ಲಿರುವ ನೋಂದಾಯಿತ ಚಾರಿಟೇಬಲ್ ಟ್ರಸ್ಟ್ ಆಗಿರುವ ನೆರುಲ್ ಜಿಮ್ಖಾನದ ಪ್ರಸ್ತುತ ಗೌರವ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಕಳಬಾವ ವಿಕಾಸ್ ಎಚ್ ಶೆಟ್ಟಿಯವರು ತನ್ನ ಮಾದರಿ ಕಾರ್ಯಗಳಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ ಹಾಗೂ ಬಂಟ ಬಾಂಧವರಿಗೆ ಸಹಾಯಹಸ್ತ ಚಾಚುತ್ತಿದ್ದಾರೆ. ದಿವಂಗತ ಐಕಳಬಾವ ಸರ್ವಾಣಿ ಶೆಟ್ಟಿ ಮತ್ತು ಹಿರಿಯಣ್ಣ ಶೆಟ್ಟಿ ಕೆಂಜೂರು ದಂಪತಿಯ ಪುತ್ರರಾಗಿರುವ ವಿಕಾಸ್ ಶೆಟ್ಟಿಯವರು ಸ್ವಂತ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಮುಂಬಯಿ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿದ್ದಾರೆ. ಸಮರ್ಥ ನಾಯಕರೂ, ದೂರಗಾಮಿ ಚಿಂತಕರೂ ಆಗಿರುವ ವಿಕಾಸ್ ಶೆಟ್ಟರು ಜವಾಬ್ದಾರಿ ವಹಿಸಿಕೊಂಡಿರುವ ಎಲ್ಲಾ ಸಂಘ ಸಂಸ್ಥೆಗಳಲ್ಲೂ ನಿಸ್ವಾರ್ಥದಿಂದ ದುಡಿಯುವ ಮೂಲಕ ಸಂಘ ಹಾಗೂ ಅದರ ಆಶ್ರಿತರಿಗೆ ಸಹಾಯ ಮಾಡಿಕೊಂಡು ಬರುತ್ತಿದ್ದಾರೆ. ವಿಕಾಸ್ ಶೆಟ್ಟರಿಗೆ ಬಾಲ್ಯದಿಂದಲೂ ಬಡವರ ಬಗ್ಗೆ ವಿಶೇಷ ಪ್ರೀತಿ, ಒಲವು, ಕಾಳಜಿ. ನಾಯಕತ್ವ ಹಾಗೂ ಆಡಳಿತ ನಿರ್ವಹಣೆಯಲ್ಲಿ ಎತ್ತಿದ ಕೈಯಾಗಿರುವ ಇವರು ಕಠಿಣ ಪರಿಶ್ರಮಿ. ತಾನು ಯಾವುದೇ ಕೆಲಸ ಮಾಡಿದರೂ ಅದರಲ್ಲಿ ನಿಷ್ಠೆ, ಬದ್ಧತೆ, ಅರ್ಪಣಾ ಮನೋಭಾವನೆ, ಗುಣಮಟ್ಟವನ್ನು ಕಾಪಾಡಿಕೊಂಡು ಬಾಂದವರು…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ವತಿಯಿಂದ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ, ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭ ಕಾಲೇಜಿನ ಆವರಣದಲ್ಲಿ ಮಂಗಳವಾರ ಜರುಗಿತು. ಆಳ್ವಾಸ್ ಧನ್ವಂತರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಆಯುರ್ವೇದ ಚಿಕಿತ್ಸಾ ತಜ್ಞ ಡಾ ಶ್ರೀಪತಿ ಕಿನ್ನಿಕಂಬಳ, ಈ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ನನ್ನನ್ನು ಹೆಚ್ಚು ಚಕಿತಗೊಳಿಸುವುದರ ಜೊತೆಗೆ ಅತೀವ ಸಂತೋಷವನ್ನು ನೀಡಿದೆ. ಈ ಪ್ರಶಸ್ತಿಯನ್ನು ನನ್ನ ಗುರುವೃಂದ ಹಾಗೂ ತಂದೆ-ತಾಯಿಗೆ ಅರ್ಪಿಸಲು ಬಯಸುತ್ತೆನೆ. ತಾವು ಹಾಗೂ ಮೋಹನ್ ಆಳ್ವರ ಸ್ನೇಹತ್ವ ಅರ್ಧ ಶತಮಾನಕ್ಕಿಂತಲೂ ಅಧಿಕವಾದುದ್ದು. ಪದವಿ ಶಿಕ್ಷಣದಲ್ಲಿ ಆರಂಭವಾದ ಸ್ನೇಹ, ಇಂದಿಗೂ ಶಾಶ್ವತವಾಗಿ ಉಳಿದಿದೆ. ಆ ದಿನಗಳಲ್ಲಿ ವಿದ್ಯಾಗಿರಿಯ ಗುಡ್ಡದ ತುದಿಯಲ್ಲಿ ನಿಂತು ವಿದ್ಯಾಕಾಶಿಯ ಕನಸು ಕಂಡಿದ್ದ ಆಳ್ವರು ಇಂದು ಆ ಕನಸನ್ನು ಸಂಪೂರ್ಣ ನನಸಾಗಿಸಿದ್ದಾರೆ. ಆಳ್ವಾಸ್ನಂತಹ ವಿದ್ಯಾಸಂಸ್ಥೆಯನ್ನು ಬೆಳೆಸಿದ ಮೋಹನ್ ಆಳ್ವರು ನಮ್ಮ ಕಾಲದ ಅದ್ಭುತ ವ್ಯಕ್ತಿ , ಅವರ ಶಕ್ತಿ…
ಎರಡು ದಿನಗಳ ಕಾಲ ಅರಮನೆ ಮೈದಾನದಲ್ಲಿ ನಡೆದ “ಬೆಂಗಳೂರು ಕಂಬಳ ನಮ್ಮ-ಕಂಬಳ”ಕ್ಕೆ ರವಿವಾರ ರಾತ್ರಿ ತೆರೆ ಬಿತ್ತು. ರಿಷಬ್ ಶೆಟ್ಟಿ ಅಭಿನಯದ “ಕಾಂತಾರ’ ಚಿತ್ರದಲ್ಲಿ ಓಡಿದ್ದ ಕೋಣ ಚಿನ್ನದ ಪದಕ ಪಡೆದುಕೊಂಡಿತು. ಬೊಳಂಬಳ್ಳಿ ಪರಮೇಶ್ವರ್ ಭಟ್ಟ ಅವರ ಅಪ್ಪು ಕುಟ್ಟಿ 6.5 ಕೋಲು ನೀರು ಚಿಮ್ಮಿಸಿ ಕೆನೆಹಲಗೆ ವಿಭಾಗದಲ್ಲಿ ಮೊದಲ ಚಿನ್ನದ ಪದಕ ಪಡೆದಿದೆ. ಇನ್ಮುಂದೆ ಮುಂಬಯಿಯಲ್ಲೂ ಆಯೋಜಿಸುವ ಚಿಂತನೆ ವ್ಯಕ್ತವಾಗಿದೆ. ಜತೆಗೆ ಪ್ರೀಮಿಯರ್ ಲೀಗ್ನಂತೆ ಕಂಬಳದ ಲೀಗ್ ನಡೆಸುವ ಮುನ್ಸೂಚನೆ ಮೇಲ್ಮೋಟಕ್ಕೆ ಕಂಡ ಬರುತ್ತಿದೆ. ಕಂಬಳ ಆಯೋಜನೆ ಬಗ್ಗೆ ಮಾಹಿತಿಯನ್ನು ಸಂಬಂಧಪಟ್ಟವರು ಪಡೆದುಕೊಂಡಿದ್ದಾರೆ. ಕಂಬಳವನ್ನು ರಜಾದಿನಗಳಲ್ಲಿ ಹಮ್ಮಿಕೊಂಡ ಕಾರಣ 8 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿ ಸಂಭ್ರಮಿಸಿದರು. ಕೊನೆಯ ದಿನದ ಕಂಬಳದಲ್ಲಿ ಎಲ್ಲಿ ನೋಡಿದರೂ ಜನರ ದಂಡು, ನೂಕು ನುಗ್ಗಲು, ಜಾತ್ರೆಯ ವಾತಾವರಣ ವಿಶೇಷವಾಗಿತ್ತು. ವೀಕ್ಷಕರ ವಿವರಣೆಗೆ 30 ಮಂದಿ! ಕಂಬಳದಲ್ಲಿ ಕೋಣಗಳು ಓಡುವುದು ಎಷ್ಟು ಮುಖ್ಯವೋ ವೀಕ್ಷಕ ವಿವರಣೆ ಕೂಡ ಅಷ್ಟೇ ಮುಖ್ಯ. ಈ ಬಾರಿ ಬೆಂಗಳೂರು ಕಂಬಳಕ್ಕೆ…
ಯಕ್ಷಗಾನ ಕಲಾವಿದರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಯೋಜನೆಗಳಲ್ಲಿ ಒಂದಾದ ಯಕ್ಷಾಶ್ರಯದಡಿ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯವನ್ನು ಟ್ರಸ್ಟ್ ಕಚೇರಿಯಲ್ಲಿ ವಿತರಿಸಲಾಯಿತು. ಸುಂಕದಕಟ್ಟೆ ಮೇಳದ ಜಯೇಂದ್ರ ಕಿದೂರ್, ಸಸಿಹಿತ್ಲು ಮೇಳದ ಗುಡ್ಡಪ್ಪ ಸುವರ್ಣ ಇವರುಗಳಿಗೆ 2ನೇ ಕಂತು ಮತ್ತು ಬಪ್ಪನಾಡು ಮೇಳದ ನಾಗಪ್ಪ ಪಡುಮಲೆ ಇವರಿಗೆ ಕೊನೆಯ ಕಂತಿನ ಮೊತ್ತದ ಚೆಕ್ಕನ್ನು ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ವಿತರಿಸಿದರು. ಈ ಸಂದರ್ಭದಲ್ಲಿ ಫೌಂಡೇಶನ್ನಿನ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಜತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ, ಬಪ್ಪನಾಡು ಮೇಳದ ದಿನೇಶ್ ಕೊಡಪದವು ಜತೆಗಿದ್ದರು.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಸ್ಫೂರ್ತಿ ತುಂಬಲು ವಿದ್ಯಾರ್ಥಿ ವೇತನ ಸಹಕಾರಿಯಾಗುತ್ತದೆ. ಆತ್ಮವಿಶ್ವಾಸದಿಂದ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ನಿಶ್ಚಿತ ಗುರಿ ಇರಿಸಿಕೊಂಡು ಮುನ್ನುಗ್ಗಿದರೆ ಯಶಸ್ಸು ಕಾಣಬಹುದು ಎಂದು ಜೆಸಿಬಿ ಇಂಡಿಯಾ ಸೌತ್ ಎಷ್ಯಾ ಆಂಡ್ ಆಫ್ರಿಕಾ ಈಸ್ಟ್ ಸಿಇಓ ಮತ್ತು ಎಂಡಿ ದೀಪಕ್ ಶೆಟ್ಟಿ ಅಭಿಪ್ರಾಯಪಟ್ಟರು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಉಡುಪಿ ತಾಲೂಕು ಸಮಿತಿ ವ್ಯಾಪ್ತಿಯ ಬಂಟರ ಸಂಘಗಳ ಆಶ್ರಯದಲ್ಲಿ ಅಮ್ಮಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ರವಿವಾರ ನಡೆದ ದಿ. ಕೆ. ಸತೀಶ್ಚಂದ್ರ ಹೆಗ್ಡೆ ವಿದ್ಯಾರ್ಥಿವೇತನ ವಿತರಣೆ, ಬಂಟ ಸಮ್ಮಿಲನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದತ್ತು ಸ್ವೀಕಾರ ಕಾರ್ಯಕ್ರಮವನ್ನು ರಿಮೋಟ್ ಒತ್ತುವ ಮೂಲಕ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಷ್ಟದಲ್ಲಿರುವವರನ್ನು ಗುರುತಿಸಿ ಅವರಿಗೆ ಸಹಾಯಹಸ್ತ ನೀಡುವುದು ದೇವರು ಮೆಚ್ಚುವ ಕಾರ್ಯ. ನಮ್ಮ ಬದುಕು ದೇವರಿಗೆ ಸಮರ್ಪಣೆಯಾಗುವಂತೆ ಇರಬೇಕು ಎಂದು ಹೇಳಿದರು. ವಿದ್ಯಾರ್ಥಿವೇತನಕ್ಕೆ ಚಾಲನೆ ನೀಡಿದ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್…
ಕಾರ್ಕಳದ ಯುವ ಉದ್ಯಮಿ ಮತ್ತು ಅಮ್ಮ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಸ್ಥಾಪಕ ಅವಿನಾಶ್ ಜಿ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಐಶ್ವರ್ಯ ಶೆಟ್ಟಿ ಕಳೆದ ಹಲವು ವರ್ಷಗಳಿಂದ ವಿಭಿನ್ನವಾದ ರೀತಿಯಲ್ಲಿ ಶೈಕ್ಷಣಿಕ ಸಪೋರ್ಟ್ ಸಿಸ್ಟಮನ್ನು ರೂಪಿಸುತ್ತಾ ಬಂದಿದ್ದಾರೆ. ಈ ಬಾರಿ ಕೂಡ ಅವರು ಕಾರ್ಕಳದ ಗಾಂಧಿ ಮೈದಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಅಂಬಾ ಭವಾನಿ ಕ್ರಾಕರ್ಸ್’ ಎಂಬ ಹೆಸರಿನ ಒಂದು ಪಟಾಕಿ ಅಂಗಡಿಯನ್ನು ತೆರೆದರು. ಅಲ್ಲಿ ಅವರ ಅನೇಕ ಬಂಧುಗಳು ಮತ್ತು ಸ್ನೇಹಿತರು ಹಗಲು ರಾತ್ರಿ ದುಡಿದರು. ಅದರಲ್ಲಿ ಬಂದ ಲಾಭಕ್ಕೆ ತಮ್ಮ ಒಂದಿಷ್ಟು ಪಾಲನ್ನು ಸೇರಿಸಿ ನಾಲ್ವತ್ತು ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರದಂತೆ ಒಟ್ಟು ಎರಡು ಲಕ್ಷ ರೂ ಮೊತ್ತದ ವಿದ್ಯಾರ್ಥಿ ವೇತನವನ್ನು ಈ ವರ್ಷ ಅವರು ನೀಡಿದರು. ಕಳೆದ ಹತ್ತು ವರ್ಷಗಳಿಂದ ಅವರು ಈ ರೀತಿಯ ಶೈಕ್ಷಣಿಕ ಸಪೋರ್ಟ್ ಸಿಸ್ಟಮನ್ನು ರೂಪಿಸಿರುವುದು ನಿಜಕ್ಕೂ ಶ್ಲಾಘನೀಯ ಆಗಿದೆ. ಕಾರ್ಕಳದ ಗಾಂಧಿ ಮೈದಾನದಲ್ಲಿ ನವೆಂಬರ್ 26ರಂದು ನಡೆದ ಈ ವಿದ್ಯಾರ್ಥಿವೇತನಗಳ…
ತುಳು ಸಂಘ ಬರೋಡಾ ಸಂಭ್ರಮಿಸಿದ ಅಮೃತ ಮಹೋತ್ಸವ ಸ್ವಾತಂತ್ರ್ಯೋತ್ಸವ ಅಭಿವ್ಯಕ್ತ ಸ್ವಾತಂತ್ರ್ಯ ನಮ್ಮ ಹಿರಿಮೆಯಾಗಿದೆ : ಶಶಿಧರ ಬಿ.ಶೆಟ್ಟಿ
ಬರೋಡಾ (ಆರ್ ಬಿ ಐ), ಆ.15: ಗುಜರಾತ್ ರಾಜ್ಯದ ಬರೋಡಾ ಮಹಾನಗರದಲ್ಲಿನ ಇಂಡಿಯಾ ಬುಲ್ಸ್ ಮೆಘಾ ಮಾಲ್ನಲ್ಲಿ ತುಳು ಸಂಘ ಬರೋಡಾ ನಿರ್ಮಿತ ವಿಶ್ವದ ಪ್ರಪ್ರಥಮ ಹಾಗೂ ಏಕೈಕ ತುಳು ಚಾವಡಿ ಇದರ ಸಭಾಗೃಹದಲ್ಲಿ ಇಂದಿಲ್ಲಿ ಸೋಮವಾರ ತುಳು ಸಂಘ ಬರೋಡಾ ಸಂಸ್ಥೆಯು ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದೊಂದಿಗೆ ರಾಷ್ಟ್ರದ 76ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಸಂಭ್ರಮಿಸಿತು. ತುಳು ಸಂಘ ಬರೋಡಾ ಇದರ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ (ಬೆಳ್ತಂಗಡಿ) ಇವರ ಮಾರ್ಗದರ್ಶನದಲ್ಲಿ ನಡೆಸಲ್ಪಟ್ಟ ಸಂಘದ ಸಾಂಸ್ಕೃತಿಕ ಕೇಂದ್ರದ ತುಳು ಚಾವಡಿ ಸಭಾಗೃಹದಲ್ಲಿ ನಡೆಸಲ್ಪಟ್ಟ ಸಂಭ್ರಮದಲ್ಲಿ ಸಂಘದ ಬಾಲ ಪ್ರತಿಭೆಗಳಾದ ಕು| ದೀಕ್ಷಿತ್ ಶೆಟ್ಟಿ, ಕು| ವಿಶ್ಮಿತಾ ಪೂಜಾರಿ, ಕು| ಕಾವ್ಯ ಶೆಟ್ಟಿ ಅತಿಥಿಗಳಾಗಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಾವು ಭಾರತದ ಪುಣ್ಯಭೂಮಿಯಲ್ಲಿ ಹುಟ್ಟು ಪಡೆದಿರುವುದೇ ನಮ್ಮ ಸೌಭಾಗ್ಯವಾಗಿದೆ. ವಿಶ್ವದಲ್ಲೇ ಇಂತಹ ಪುಣ್ಯಭೂಮಿ ಮತ್ತೊಂದಿಲ್ಲ ಅನ್ನುವುದು ಪ್ರತೀಯೋರ್ವ ಭಾರತೀಯನಿಗೆ ಹೆಮ್ಮೆಯೆಣಿಸಬೇಕು. ಆದುದರಿಂದ ನಾವೆಲ್ಲರೂ ಭಾರತಾಂಭೆಯ ಪ್ರತಿಷ್ಠೆಯ ಮಕ್ಕಳಾಗಿ ಸಾಮರಸ್ಯ, ಸೌಹಾರ್ದತೆಯಿಂದ ಬಾಳಬೇಕು. ಅಸಂಖ್ಯಾತ…