Author: admin
ಮಂಗಳೂರು ಮೆಟ್ರೋಪಾಲಿಟನ್ ನಗರವಾಗಿ ಬೆಳೆಯುತ್ತ ಹೋದಂತೆ, ಅದು ಪ್ರತ್ಯೇಕ ಮಂಗಳೂರು ನಗರ ಜಿಲ್ಲೆಯಾಗುವತ್ತ ಒಂದೊಂದೇ ಹೆಜ್ಜೆ ಮುಂದಿಡುತ್ತಿದ್ದಂತೆಯೇ, ದಕ್ಷಿಣ ಕನ್ನಡ ಜಿಲ್ಲೆಯ ಉಳಿದ ಸಣ್ಣ ನಗರ ಪ್ರದೇಶಗಳು ಮತ್ತು ಗ್ರಾಮಾಂತರ ಪ್ರದೇಶಗಳೆಲ್ಲಾ ಒಂದಾಗಿ ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲೆಯಾಗುವುದಂತೂ ಖಂಡಿತಾ ಅನ್ನುವ ಮಾತು ಶುರುವಾಗಿ ಆಗಲೇ ಹತ್ತತ್ತಿರ ಹತ್ತು ವರ್ಷಗಳೇ ಆಯಿತು. ಅದಕ್ಕೆ ತಕ್ಕ ಹಾಗೆ ಮುಂದೆ ಆಗಲಿರುವ ಈ ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲೆಗೆ ಪುತ್ತೂರೇ ಜಿಲ್ಲಾ ಕೇಂದ್ರವಾಗುತ್ತದೆ ಎಂಬ ಮಾತಿಗೂ ಪುಷ್ಟಿ ಸಿಕ್ಕಿತ್ತು. ಅದಕ್ಕೆ ತಕ್ಕ ಹಾಗೆ ಸರಿಯಾಗಿ ಹತ್ತು ವರ್ಷಕ್ಕೂ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರಕಾರವೇ ಇದ್ದಾಗ, ವಿ.ಎಸ್. ಆಚಾರ್ಯ ಗೃಹಮಂತ್ರಿಯಾಗಿದ್ದಾಗ ಮಂಗಳೂರಿಗೆ ಪೊಲೀಸ್ ಕಮೀಷನರ್ ಕಚೇರಿಯೂ ಬಂತು. ಈ ಪೊಲೀಸ್ ಕಮೀಷನರ್ ಆಡಳಿತ ವ್ಯಾಪ್ತಿಗೆ ಮೂಲ್ಕಿ, ಮೂಡಬಿದ್ರಿ, ಬಜ್ಪೆ, ಕೊಣಾಜೆ, ಇವೆಲ್ಲವನ್ನೂ ಸೇರಿಸಲಾಗಿತ್ತು. ಇಷ್ಟಾಗುವಾಗ ಮಂಗಳೂರಿನಲ್ಲಿದ್ದ ಎಸ್.ಪಿ ಕಚೇರಿಯ ವ್ಯಾಪ್ತಿಯಿಂದ ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಹೊರಬಿದ್ದವು. ಅಲ್ಲಿಗೆ ಮಂಗಳೂರಿನಲ್ಲಿ ಆಡಳಿತಾತ್ಮಕವಾಗಿ ಎಸ್.ಪಿ ಕಚೇರಿಯ…
ಇದು ಆಧುನಿಕ ಕಾಲ. ಭಾರತ ಅಭಿವೃದ್ಧಿ ಹೊಂದಿದೆ.. ಹಾಗಾಗಿ ನಮ್ಮಲ್ಲೇ ಅತ್ಯಾಧುನಿಕ ತಂತ್ರಜ್ಞಾನಗಳು ಬಂದಿದೆ. ಭಾರತ ರಸ್ತೆ ನಿರ್ಮಾಣದಲ್ಲಿ ಈಗಾಗಲೇ ನಾಲ್ಕು ವರ್ಲ್ಡ್ ರೆಕಾರ್ಡ್ ಗಳನ್ನೂ, ಗಿನ್ನೆಸ್ ರೆಕಾರ್ಡ್ ಗಳನ್ನೂ ಮಾಡಿದೆ. ಇತ್ತೀಚಿನದ್ದು ಅತ್ಯಂತ ವೇಗದ ರಸ್ತೆ ನಿರ್ಮಾಣ. 75 ಕಿಲೋಮೀಟರ್ ದೂರದ ಡಾಮಾರು ರಸ್ತೆಯನ್ನು ಕೇವಲ 105 ಗಂಟೆ 33 ನಿಮಿಷಗಳಲ್ಲಿ ನಿರ್ಮಿಸಲಾಗಿದೆ. ಇದರೊಂದಿಗೆ ಭಾರತ ಅತ್ಯಂತ ವೇಗವಾಗಿ ರಸ್ತೆ ನಿರ್ಮಿಸುವುದರಲ್ಲಿ ಗಿನ್ನೆಸ್ ದಾಖಲೆಗೆ ಸೇರಿಹೋಯಿತು. ಈ ಸುದ್ದಿ ಟಿವಿ. ಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಬರುತ್ತದೆ. ಪುತ್ತೂರು ಕೂಡಾ ಭಾರತದಲ್ಲಿಯೇ ಇರುವುದರಿಂದಾಗಿ, ಭಾರತ ಅಭಿವೃದ್ಧಿ ಹೊಂದಿರುವುದರಿಂದ ಪುತ್ತೂರು ಕೂಡಾ ಅಭಿವೃದ್ಧಿ ಹೊಂದಿರಲೇ ಬೇಕು ಎಂಬ ತರ್ಕ ಇಟ್ಟುಕೊಂಡು ನೋಡಿದರೆ ಪುತ್ತೂರಲ್ಲಿಯೂ ಅತ್ಯಾಧುನಿಕ ತಂತ್ರಜ್ಞಾನಗಳೆಲ್ಲ ಬಂದಿದ್ದು ಇಲ್ಲಿನ ಜನ ಈಗ ಟಿವಿಗಳನ್ನು ನೋಡುತ್ತಿದ್ದಾರೆ ಮತ್ತು ಪತ್ರಿಕೆಗಳನ್ನು ಓದುತ್ತಿದ್ದಾರೆ. ಆದರೆ ಭಾರತ ಅತ್ಯಂತ ವೇಗದ ರಸ್ತೆ ನಿರ್ಮಾಣದಲ್ಲಿ ವಿಶ್ವ ದಾಖಲೆ ಮಾಡಿದ ಸುದ್ದಿ ಕೇಳಿ ಪುತ್ತೂರಿನ, ಅದರಲ್ಲೂ ಪುತ್ತೂರು ಉಪ್ಪಿನಂಗಡಿ ರಸ್ತೆ ಯ…
ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ(ರಿ.) ಪುತ್ತೂರು ಸಹಯೋಗದೊಂದಿಗೆ ನಡೆಸುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ ದ ದಶಮಾನ ಸಡಗರ ಇದೇ ನವೆಂಬರ 21ರಿಂದ 27ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜರಗಲಿದೆ. ಈ ಸಂದರ್ಭದಲ್ಲಿ ನೀಡಲಾಗುವ ‘ಯಕ್ಷಾಂಗಣ ರಾಜ್ಯೋತ್ಸವ’ ಪುರಸ್ಕಾರಕ್ಕೆ ಮುಂಬೈ ಉದ್ಯಮಿ ಮತ್ತು ಕಲಾಪೋಷಕ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಐಕಳ ಹರೀಶ್ ಶೆಟ್ಟಿ : ನಿರಂತರ ಸೇವಾರಾಧಕರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಐಕಳ ಹರೀಶ್ ಶೆಟ್ಟಿ ಮುಂಬೈ ನಗರದ ಪ್ರತಿಷ್ಠಿತ ಉದ್ಯಮಿ ಹಾಗೂ ಸಮಾಜಸೇವಕರು. ತಮ್ಮ ಶಾಲಾ ದಿನಗಳಿಂದಲೇ ಹುಟ್ಟೂರಿನಲ್ಲಿ ಉತ್ತಮ ಕ್ರೀಡಾಪಟುವಾಗಿ ದೇಹದಾರ್ಢ್ಯತೆ ಸ್ಪರ್ಧೆಯಲ್ಲಿ ರಾಜ್ಯ-ರಾಷ್ಟ್ರಮಟ್ಟದಲ್ಲಿ ಮಿ.ದಕ್ಷಿಣ ಕನ್ನಡ, ಕರ್ನಾಟಕ ಕಿಶೋರ್, ಭಾರತ್ ಕಿಶೋರ್ ಪ್ರಶಸ್ತಿಗಳನ್ನು ಪಡೆದವರು. ಮುಂಬೈ ಆಹಾರ್ ಉಪಾಧ್ಯಕ್ಷರಾಗಿ, ಸಾಯಿ ಸಂಧ್ಯಾ ಆರ್ಟ್ಸ್…
ಮೂಡಬಿದಿರೆಯ ಪ್ರತಿಷ್ಠಿತ ಮಿಜಾರು ಮನೆತನದ ಬಂಟ ಸಮಾಜದ ಹಿರಿಯರಾದ ಮಿಜಾರು ಆನಂದ ಆಳ್ವರಿಗೆ ಪುತ್ತೂರಿನ ಪಿ ಬಿ ರೈ ಪ್ರತಿಷ್ಠಾನದ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಶಿಕ್ಷಣ ಕಾಶಿ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ನಿರ್ಮಾತೃಗಳಾದ ಡಾ. ಮೋಹನ್ ಆಳ್ವ ಅವರ ಪಿತೃವರ್ಯರಾದ ಮಿಜಾರು ಆನಂದ ಆಳ್ವ ಅವರು ಕೃಷಿ, ಕಂಬಳ, ಧಾರ್ಮಿಕ ಶೈಕ್ಷಣಿಕ ಕ್ಷೇತ್ರಗಳಲ್ಲಿ ತನ್ನದೇ ಆದ ಸಾಧನೆಗೈದು 105 ವರುಷಗಳ ಸಾರ್ಥಕ ಬದುಕಿನಲ್ಲಿ ಮೂಡಬಿದಿರೆಯ ಶಿಕ್ಷಣ ಕಾಶಿ ಕ್ಷೇತ್ರದಲ್ಲಿ ಲಕ್ಷಾಂತರ ಮಂದಿಗೆ ಶಿಕ್ಷಣ ಕಲೆ ಉದ್ಯೋಗ ವನ್ನು ಒದಗಿಸಿದ ಮೂಡಬಿದಿರೆ ಯ ನಿರ್ಮಾತೃ ಡಾ. ಮೋಹನ್ ಆಳ್ವ ಅವರನ್ನು ಈ ಪುಣ್ಯ ಭೂಮಿಗೆ ಕೊಡುಗೆಯಾಗಿ ನೀಡಿರುವುದನ್ನು ಪಿ ಬಿ ರೈ ಪ್ರತಿಷ್ಠಾನದ ಗೌರವಾಧ್ಯಕ್ಷರಾದ, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಉಪಾಧ್ಯಕ್ಷರಾದ ಕಾವು ಹೇಮನಾಥ್ ಶೆಟ್ಟಿಯವರು ಗೌರವಾರ್ಪಣೆ ಸಲ್ಲಿಸಿ ಮುಕ್ತ ಕಂಠದಿಂದ ಪ್ರಷ0ಶಿಸಿದರು. ಪಿ ಬಿ ರೈ ಪ್ರತಿಷ್ಠಾನದ ಅಧ್ಯಕ್ಷರಾದ ದಂಬೆಕ್ಕಾನ ಸದಾಶಿವ ರೈ ಯವರು ಡಾ.…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ ರಾಕ್ಷಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಮುಂಬಯಿ ಇದರ ಆಡಳಿತ ನಿರ್ದೇಶಕ, ಸಮಾಜ ಸೇವಕ ಅತ್ತೂರು ಭಂಡಾರ ಮನೆ ರಾಜೇಶ್ ಎನ್ ಶೆಟ್ಟಿ ಅವರು ಆಯ್ಕೆಯಾದರು
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ ರಾಕ್ಷಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಮುಂಬಯಿ ಇದರ ಆಡಳಿತ ನಿರ್ದೇಶಕ, ಸಮಾಜ ಸೇವಕ ಅತ್ತೂರು ಭಂಡಾರ ಮನೆ ರಾಜೇಶ್ ಎನ್ ಶೆಟ್ಟಿ ಅವರು ಆಯ್ಕೆಯಾದರು. ಈ ಸಂಧರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಆಶಾಲತಾ ಶೆಟ್ಟಿ ಮತ್ತು ಮಯೂರ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾಗಿರಿ: ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಸಂಗೀತ ಸ್ಪರ್ಧೆ ‘ನಾದ ಲಹರಿ’ಯಲ್ಲಿ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆಯಿತು. ಒಟ್ಟು 41 ಅಂಕ ಪಡೆದ ಆಳ್ವಾಸ್ ಸಮಗ್ರ ಪ್ರಶಸ್ತಿ ಪಡೆದರೆ, 9 ಅಂಕ ಪಡೆದ ಕೊಣಾಜೆ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ರನ್ನರ್ ಅಪ್ ಪ್ರಶಸ್ತಿ ಪಡೆಯಿತು. ವಿವಿಧ ಸ್ಪರ್ಧೆಗಳ ವಿವರ: ಭಾರತೀಯ ಸಮೂಹ ಸಂಗೀತ: ಆಳ್ವಾಸ್ ಕಾಲೇಜು ಮೂಡುಬಿದಿರೆ-1, ಎಸ್ಡಿಪಿಟಿ ಪ್ರಥಮ ದರ್ಜೆ ಕಾಲೇಜು ಕಟೀಲ್ -2, ವಿಶ್ವವಿದ್ಯಾಲಯ ಕಾಲೇಜು ಕೊಣಾಜೆ-3. ಶಾಸ್ತ್ರೀಯ ಪರಿಕರ(ಏಕವ್ಯಕ್ತಿ- ತಾಳವಾದ್ಯೇತರ): ಆಳ್ವಾಸ್ ಕಾಲೇಜು ಮೂಡುಬಿದಿರೆ- 1, ವಿಶ್ವವಿದ್ಯಾಲಯ ಕಾಲೇಜು ಕೊಣಾಜೆ-2, ಪೂರ್ಣ ಪ್ರಜ್ಞ ಕಾಲೇಜು ಉಡುಪಿ-3. ಶಾಸ್ತ್ರೀಯ ಗಾಯನ(ಏಕ ವ್ಯಕ್ತಿ): ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ -1, ಆಳ್ವಾಸ್ ಕಾಲೇಜು ಮೂಡುಬಿದಿರೆ-2, ವಿಶ್ವವಿದ್ಯಾಲಯ ಕಾಲೇಜು ಕೊಣಾಜೆ-3. ಲಘು ಗಾಯನ(ಏಕ ವ್ಯಕ್ತಿ): ಆಳ್ವಾಸ್ ಕಾಲೇಜು ಮೂಡುಬಿದಿರೆ-1, ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ -2,…
ಮುಂಬಯಿಯ ಚಿಣ್ಣರಬಿಂಬ ಸಂಸ್ಥೆಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಸಂಸ್ಥೆಯ ರೂವಾರಿ, ಮುಂಬಯಿಯ ಮಾಜಿ ಪೊಲೀಸ್ ಅಧಿಕಾರಿ ಪ್ರಕಾಶ್ ಭಂಡಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ ಸ್ವೀಕರಿಸಿದರು. ವಾಣಿಜ್ಯ ನಗರಿ ಮುಂಬಯಿಯಲ್ಲಿ ಕನ್ನಡ – ತುಳು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಚಿಣ್ಣರ ಬಿಂಬ ತಂಡದ ಸದಸ್ಯರು ಶ್ರಮ ವಹಿಸುತ್ತಿದ್ದಾರೆ. ಸಾಮಾಜಿಕವಾಗಿ, ಸಾಂಸ್ಕೃತಿವಾಗಿ ಅನೇಕ ಮೈಲುಗಲ್ಲುಗಳನ್ನು ದಾಟಿ ಮುಂದುವರೆಯುತ್ತಿರುವ ಈ ಸಂಸ್ಥೆ ನಮ್ಮ ಮೌಲ್ಯಧಾರಿತ ಹಳೆಯ ಸಂಪ್ರದಾಯ, ಆಚಾರ ವಿಚಾರಗಳನ್ನು ಮಕ್ಕಳಿಗೆ ಮನದಟ್ಟು ಮಾಡುವ ವಿಷಯದಲ್ಲಿ ಹಲವು ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ. ವೃತ್ತಿಯಲ್ಲಿ ಪೊಲೀಸ್ ಅಧಿಕಾರಿಯಾಗಿದ್ದಾಗಲೇ ಪ್ರವೃತ್ತಿಯಲ್ಲಿ ಕಲಾಪೋಷಕರಾಗಿ ಗುರುತಿಸಿಕೊಂಡಿರುವ ಪ್ರಕಾಶ್ ಭಂಡಾರಿ ಅವರ ಪತ್ನಿ ರೇಣುಕಾ ಭಂಡಾರಿ, ಪುತ್ರಿಯರಾದ ಪೂಜಾ ಭಂಡಾರಿ, ನೇಹ ಭಂಡಾರಿ ಚಿಣ್ಣರ ಬಿಂಬದಲ್ಲಿ ಸಕ್ರಿಯರಾಗಿದ್ದಾರೆ. ವಿಜಯ್ ಕುಮಾರ್ ಶೆಟ್ಟಿ, ಸುರೇಂದ್ರ ಕುಮಾರ್ ಹೆಗ್ಡೆ, ಭಾಸ್ಕರ್ ಶೆಟ್ಟಿ, ವಿನೋಧಿನಿ ಹೆಗ್ಡೆ, ಸತೀಶ್ ಸಾಲಿಯಾನ್ ಮತ್ತಿತರರ ಸಂಪೂರ್ಣ ಸಹಕಾರ ಚಿಣ್ಣರ ಬಿಂಬಕ್ಕಿದೆ.
ವಿದ್ಯಾಗಿರಿ: ‘ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ. ಪ್ರತಿ ಹಂತದ ಕಲಿಕೆ ಹೊಸದನ್ನು ಕಲಿಸುತ್ತದೆ. ಕಲಿಯುವ ಮನಸ್ಸು ನಮ್ಮದಾಗಿರಬೇಕು ಎಂದು ಖ್ಯಾತ ವೈದ್ಯ ಹಾಗೂ ಕರ್ನಾಟಕ ರೆಡ್ಕ್ರಾಸ್ ಸೊಸೈಟಿ ಅಧ್ಯಕ್ಷ ಡಾ. ರಾಮಚಂದ್ರ ಕೆ. ಜೋಯಿಷಿ ಹೇಳಿದರು. ಆಳ್ವಾಸ್ ಅಲೈಡ್ ಹೆಲ್ತ್ಸೈನ್ಸ್ ಮತ್ತು ಫಿಸಿಯೋಥೆರಪಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಲಿಕೆ ಕೇವಲ ಪಠ್ಯಕ್ಕೆ ಸೀಮಿತವಲ್ಲ. ಅದು ವ್ಯಾಪಕ. ಅದು ಬದುಕಿನ ಕೊನೆ ತನಕದ ಕ್ರಿಯೆ. ಯಶಸ್ಸಿನ ಪಯಣದಲ್ಲಿ ಪ್ರತಿಭೆ, ಜ್ಞಾನ, ಕಠಿಣ ಪರಿಶ್ರಮ, ಆತ್ಮಸ್ಥೈರ್ಯ, ಆತ್ಮ ವಿಶ್ವಾಸ ಬಹಳ ಮುಖ್ಯ. ಬದುಕು ಹೂವಿನ ಹಾಸಿಗೆಯಲ್ಲ ಎಂದರು. ಯಶಸ್ಸಿನಲ್ಲಿ ಬುದ್ಧಿಮತ್ತೆ ಮತ್ತು ಭಾವನಾತ್ಮಕತೆಯ ನಂಟು ಹಾಗೂ ಜ್ಞಾನದ ಬಳಕೆ ಅಗತ್ಯ. ಕೇವಲ ಬುದ್ಧಿಮತ್ತೆಯೇ ಹೆಚ್ಚಿದರೂ ಸೋಲುತ್ತೇವೆ. ಭಾವನೆಗಳ ಸ್ಪಂದನೆ ಇರಬೇಕು. ನಾವು ಏನೇ ಆದರೂ, ಪರಿಸರಕ್ಕೆ ಹೊಂದಿಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದರು. ಆಳ್ವಾಸ್ ಹೆಲ್ತ್ ಸೆಂಟರ್ನ ಆರಂಭದ ದಿನಗಳಲ್ಲಿ ಕೆಲಸ ಮಾಡಿದ ನೆನಪನ್ನು…
ಬಂಟರ ಸಂಘ ಮುಂಬಯಿಯ ಸಂಚಾಲಕತ್ವದಲ್ಲಿರುವ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇದರ 35ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ ಕುರ್ಲಾ ಪೂರ್ವದ ಬಂಟರ ಭವನ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಮಾತೃಭೂಮಿಯ ಕಾರ್ಯಾಧ್ಯಕ್ಷ ಉಳ್ತೂರು ಮೋಹನದಾಸ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ, ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ವಹಿಸಿದ ಉಳ್ತೂರು ಮೋಹನ್ದಾಸ್ ಶೆಟ್ಟಿ ಗ್ರಾಹಕರು, ಶೇರ್ ದಾರರು ಮತ್ತು ಹಿತೈಷಿಗಳನ್ನು ಸ್ವಾಗತಿಸುತ್ತಾ, ಮಾತೃಭೂಮಿ ತಂಡ ರೂಪಗೊಳ್ಳುವಾಗ ಬಂಟರ ಸಂಘದ ಅಧ್ಯಕ್ಷರ, ಜಾಗತಿಕ ಬಂಟರ ಸಂಘದ ಅಧ್ಯಕ್ಷರು ಈ ಇಂದಿನ ಎಲ್ಲಾ ಕಾರ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ಸಮರ್ಥ ರೀತಿಯ ತಂಡ ಮಾರ್ಗದರ್ಶನ ನೀಡಿದ್ದಾರೆ. ಅವರೆಲ್ಲರ ಸಮರ್ಥ ಮಾರ್ಗದರ್ಶನದಲ್ಲಿ ಈ ಸಂಸ್ಥೆಯನ್ನು ನನ್ನ ತಂಡ ಮುನ್ನಡೆಸುತ್ತಿದೆ. ನಮ್ಮ ತಂಡದಲ್ಲಿ ವಿದ್ಯಾವಂತರು, ಸಂಘಟಕರು, ಲೆಕ್ಕ ಪರಿಶೋಧಕರು ಸಮರ್ಥ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಾತೃಭೂಮಿ ಕೋ…
ಮುಂಬಯಿ, ಜು.29: ಮುಂಬಯಿ ಸಾರಸ್ವತ ಲೋಕದ ಸಜ್ಜನ ಸಾಹಿತಿ, ‘ಶಿಮುಂಜೆ ಪರಾರಿ’ ಕಾವ್ಯ ನಾಮದಿ ಚಿರಪರಿಚಿತ ತುಳು ಕನ್ನಡ ಕವಿ, ಅನುವಾದಕಾರ, ನಾಟಕಕಾರ, ಅಧ್ಯಾಪಕ, ಕಂಠದಾನ ಕಲಾವಿದ ಮತ್ತು ನಟ ಎಂದೆಣಿಸಿ ಬಹುಮುಖ ಪ್ರತಿಭೆಗಳಿಂದ ಜನಮಾನಸದಲ್ಲಿ ಜನಾನುರೆಣಿಸಿರುವ ಶಿಮುಂಜೆ ಪರಾರಿ (ಸೀತಾರಾಮ ಮುದ್ದಣ್ಣ ಶೆಟ್ಟಿ) ಅವರನ್ನು ಐಲೇಸಾ ದಿ ವಾಯ್ಸ್ ಆಫ್ ಓಷನ್ (ರಿ.) ಸಂಸ್ಥೆಯು ವಯೋ ಸಮ್ಮಾನ-2023 ಗೌರವವನ್ನಿತ್ತು ಅಭಿನಂದಿಸಿತು. ಐಲೇಸಾ ಅಂತಾರಾಷ್ಟ್ರೀಯ ಡಿಜಿಟಲ್ ಸಂಸ್ಥೆ ಬೆಂಗಳೂರು ಇದೇ ಆಗಸ್ಟ್ ತಿಂಗಳಲ್ಲಿ ಸ್ಥಾಪನೆಯ ತೃತೀಯ ವರ್ಷ ಪೂರೈಸಿದ ನಿಮಿತ್ತ ಇಂದಿಲ್ಲಿ ಶನಿವಾರ ಅಪರಾಹ್ನ ಅಂಧೇರಿ ಪಶ್ಚಿಮದಲ್ಲಿನ ಕಂಟ್ರಿ ಕ್ಲಬ್ ಸಭಾಗೃಹದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಮುಂಜೆ ಪರಾರಿ (ಪತ್ನಿ ಚಂದ್ರಿಕಾ ಶೆಟ್ಟಿ ಅವರನ್ನೊಳಗೊಂಡು) ಪಾದಪೂಜೆ ನೆರವೇರಿಸಿ ವಿಭಿನ್ನ ಮತ್ತು ಅರ್ಥಪೂರ್ಣವಾಗಿ ಗೌರವ ಸಲ್ಲಿಸಿತು. ಐಲೇಸಾ ಸಂಸ್ಥೆಯ ಪ್ರಧಾನರು ಮತ್ತು ರಾಷ್ಟ್ರದ ಪ್ರಸಿದ್ದ ಹಿನ್ನಲೆ ಗಾಯಕ ರಮೇಶ್ಚಂದ್ರ ಬೆಂಗಳೂರು ಇವರನ್ನೊಳಗೊಂಡು ನಾಡಿನ ಪ್ರಸಿದ್ಧ ಕವಿ ಸುಬ್ರಾಯ ಚೊಕ್ಕಾಡಿ ಅವರು ವಯೋಸಾಧನೆಯ ನೆನಪಿಗೆ ರೂಪಾಯಿ…