Author: admin

ಬಂಟರ ಸಂಘ ಕಾರ್ಯ ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ ವಿಸ್ಥಾರವಾಗಿ ತಿಳಿಯಲು ಸಂಘವು ಆಪ್ ನ್ನು ತಯಾರಿಸಿದ್ದೇವೆ. ಅದರಲ್ಲಿ ತಳಮಟ್ಟದಿಂದ ಉನ್ನತ ಮಟ್ಟಕ್ಕೇರಿ ಸಾಧನೆಗೈದ ಗಣ್ಯರ ಸಂದರ್ಶನವಿದೆ. ಮಕ್ಕಳು ಅದನ್ನು ಓದುವದು ಅತಿ ಅಗತ್ಯ. ಇದು ನಮ್ಮ ಸಮಾಜದ ಮಕ್ಕಳು ಉತ್ತಮ ಭವಿಷ್ಯ ರೂಪಿಸುವಲ್ಲಿ ಸಹಕಾರಿಯಾಗಬಹುದು. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪ್ರೋತ್ಸಾಹ ನೀಡಲು ಸಂಘ ಹಲವಾರು ಯೋಜನೆಗಳನ್ನು ಕೈಗೊಂಡಿದ್ದೇವೆ ಎಂದು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಚಂದ್ರಹಾಸ ಕೆ. ಶೆಟ್ಟಿ ಯವರು ನುಡಿದರು. ಕಾಂದಿವಲಿ ಪಶ್ಚಿಮದ ಪೊಯಿಸರ್ ಜಿಮ್ಖಾನದಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ನಿಟ್ಟೆ ಎಮ್. ಜಿ. ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವಿದ್ಯಾರ್ಥಿ ವೇತನ, ವಿಕಲ ಚೇತನ ವೇತನ, ಧನ ಸಹಾಯ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ಚಂದ್ರಹಾಸ ಕೆ. ಶೆಟ್ಟಿಯವರು ಬಂಟ ಸಮಾಜದ ಬಂಧುಗಳು ಸಾಧನೆ ಮಾಡುವ ಶಕ್ತಿವಂತರು, ನಮ್ಮ ವ್ಯಕ್ತಿತ್ವದ ಬಗ್ಗೆ ಯಾರಲ್ಲೂ ಕೀಳರಿಮೆ ಇರಬಾರದು.…

Read More

ಜಾನುವಾರುಗಳಲ್ಲಿ ಕಂಡುಬರುವ ಕಂದು ರೋಗ (ಬ್ರೂಸೆಲ್ಲೋಸಿಸ್‌)ವನ್ನು ತಡೆಗಟ್ಟುನ ನಿಟ್ಟಿನಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯಡಿ ಹೆಣ್ಣು ಕರುಗಳಿಗೆ ಲಸಿಕೆ (ಬ್ರೂಸೆಲ್ಲಾ ವ್ಯಾಕ್ಸಿನ್‌) ಅಭಿಯಾನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಂದು ರೋಗ ಮುಕ್ತ ಜಿಲ್ಲೆಯಾನ್ನಾಗಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ್‌, ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಈ ಉಚಿತ ಲಸಿಕಾ ಕಾರ್ಯಕ್ರಮ ಮೇ 31ರ ವರೆಗೆ ಹಮ್ಮಿಕೊಳ್ಳಲಾಗಿದೆ. ರೈತರು 4-8 ತಿಂಗಳೊಳಗಿನ ಹೆಣ್ಣು ಕರುಗಳಿಗೆ ಲಸಿಕೆ ಹಾಕಿಸಿ ರೋಗ ಮುಕ್ತಗೊಳಿಸಬಹುದು. ಇದು ಬ್ಯಾಕ್ಟೀರಿಯಾದಿಂದ ಹರಡುವ ರೋಗವಾಗಿದ್ದು, ಹಸು, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಒಂಟೆ ಮತ್ತು ಕುದುರೆಗಳು ಈ ರೋಗಕ್ಕೆ ತುತ್ತಾಗುತ್ತವೆ. ಈ ರೋಗವನ್ನು ತಡೆಗಟ್ಟಲು ಲಸಿಕೆ ಹಾಕಿಸುವುದೊಂದೇ ಪರಿಹಾರ. ಈ ರೋಗದಲ್ಲಿ ಸಾವಿನ ಪ್ರಮಾಣಕ್ಕಿಂತ ಸಂತಾನೋತ್ಪತ್ತಿಗೆ ಸಮಸ್ಯೆಯಾಗುತ್ತದೆ ಎನ್ನುತ್ತಾರೆ ಪಶು ವೈದ್ಯರು. ಭಾರತದಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳು ಹೊರ ದೇಶಗಳಿಗೆ ರಫ್ತಾಗುವುದಿಲ್ಲ. ಇದಕ್ಕೆ ಪ್ರಮುಖ ಕಾರಣ ನಮ್ಮಲ್ಲಿ ಉತ್ಪತ್ತಿಯಾಗುವ ಹಾಲು ರೋಗ ಮುಕ್ತ ಆಗಿಲ್ಲದಿರುವುದಿಲ್ಲ. ಆದ್ದರಿಂದ ಕೇಂದ್ರ…

Read More

ಒಂದರೊಳು ಒಂದಿಲ್ಲ, ಒಂದರೊಳು ಕುಂದಿಲ್ಲ, ಒಂದೊಂದು ಅಂದವೂ ತನಗೆ ತಾನೇ ಚಂದ ಎಂದು ವರಕವಿ ದ.ರಾ ಬೇಂದ್ರೆಯವರ ಹೂ ಕವನದ ಸಾಲುಗಳು ‌ನೆನಪಾದದ್ದು ಕೆಲ ದಿನಗಳ ಹಿಂದೆ ಮುಂಬಯಿ ಪ್ರಭಾದೇವಿ ಸಿದ್ದಿವಿನಾಯಕ ದೇವಸ್ಥಾನದಿಂದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಮಾರ್ಗದ ಬದಿಯಲ್ಲಿ ಬಲಯುತವಾಗಿ ಬೆಳೆದು ‌ನಿಂತ ಗುಲ್ ಮೊಹರ್ ಮರವೊಂದು ಮೈ ತುಂಬಾ ಕೇಸರಿ, ಹಳದಿ,‌ ಕೆಂಪು‌ ಮಿಶ್ರಿತ ಹೂವನ್ನು ಆವರಿಸಿಕೊಂಡು ಸೊಬಗಿನಿಂದ ಕಂಗೊಳಿಸುತ್ತಾ ಹೆಮ್ಮೆಯಿಂದ ಇಗೋ ಮೇ ತಿಂಗಳು ಬಂತು, ನಿಮಗೆಲ್ಲಾ ಹೂವಿನ ಸ್ವಾಗತ ಕೋರುತ್ತಿದ್ದೇನೆ ಎಂದು ನಕ್ಕಂತೆ ಆಯ್ತು. ಸೃಷ್ಟಿಯ ಸೌಂದರ್ಯಕ್ಕೆ ಇನ್ನೊಂದು ಮೆರಗು ಈ ಗುಲ್ ಮೊಹರ್ ಹೂವು ಬಿರು ಬಿಸಿಲು, ಬಿಸಿ ಗಾಳಿ, ಶುಷ್ಕ ನೆಲ, ನೀರಿನ ಅಭಾವವಿರುವ ಸನ್ನಿವೇಶದ ವಾತಾವರಣದಲ್ಲಿ ತಲೆ ಎತ್ತಿ ಅರಳಿ ನಿಲ್ಲುವ ಕೆಂಪು ಚೆಲುವೆ. ಎಪ್ರಿಲ್ ತಿಂಗಳು ಕಳೆಯುತ್ತಿದ್ದಂತೆ ಮೇ ತಿಂಗಳ ಆರಂಭದ ದಿನಗಳಲ್ಲಿ ಮೇ ಫ್ಲವರ್ ನ ಮರ ಹೂ ಧರಿಸಿ ಎಲ್ಲರ ಗಮನ ಸೆಳೆಯುತ್ತದೆ. ಚೆಲುವಿಗೆ, ಕೋಮಲತೆಗೆ, ಮೃದು…

Read More

 ಸಾಯಿ ಕ್ರಿಕೆಟರ್ಸ್ ಪುಣೆ, ವಾರಿಜ ಎ ಶೆಟ್ಟಿ ಸ್ಮರಣಾರ್ಥ ಸಾಯಿ ಟ್ರೋಪಿ ,ಮಹಾಗಣಪತಿ ಯಕ್ಷಗಾನ ಮಂಡಳಿ ವಿನ್ನರ್ಸ್  ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ  ಪಾಲ್ಗೊಳ್ಳುವಿಕೆ ಮತ್ತು ಶಿಸ್ತು ಬದ್ದವಾದ ನಡವಳಿಕೆ ಮುಖ್ಯ –ಪ್ರವೀಣ್ ಶೆಟ್ಟಿ ಪುತ್ತೂರು ಪುಣೆ ; ಇಂದಿನ ಜೀವನವೇ ಸ್ಪರ್ದಾತ್ಮಕವಾಗಿದೆ , ಜೀವನದ ನಿರ್ವಹಣೆಗೆ ಗಂಡು ಹೆಣ್ಣೆಂಬ ಬೇದವಿಲ್ಲದೆ ದುಡಿಯುವ   ಜಂಜಾಟದಲ್ಲಿ    ಮನಸ್ಸಿಗೆ  ಸಮಾದಾನ  ನೆಮ್ಮದಿಗೆ  , ಮನೋರಂಜನಾ ಕಾರ್ಯಕ್ರಮಗಳು ,ಕ್ರಿಕೆಟ್    ಆಟೋಟಗಳು ,ಕ್ರೀಡೆಗಳು ತುಂಬಾ  ಸಹಾಯಕವಾಗಬಲ್ಲದು  ಇಂತಹ ಕ್ರೀಡೆಗಳಲ್ಲಿ ಭಾರತೀಯರಲ್ಲಿ ಅಚ್ಚು ಮೆಚ್ಚು ಎಂದರೆ  ಕ್ರಿಕೆಟ್,.  ನಮ್ಮ  ಪುಣೆಯಂತಹ ಮಹಾನಗರದಲ್ಲಿ   ನೆಲೆಸಿರುವ   ತುಳು ಕನ್ನಡಿರಲ್ಲಿ ಕೂಡಾ ಹೆಚ್ಚಿನ ಯುವ ಜನತೆ ಕ್ರಿಕೆಟ್ ನಲ್ಲಿ ಬಾಗಿಗಳಾಗುತ್ತಾರೆ .ಪುಣೆಯಲ್ಲಿ  ಜಾತಿ ಮತ ಬೇದ  ಬಾವವಿಲ್ಲದೆ ಪ್ರತಿ ವರ್ಷವೂ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿ ಉತ್ತಮವಾಗಿ ನಡೆಸಿಕೊಂಡು ಬಂದಿರುವ ಸಾಯಿ ಕ್ರಿಕೆಟರ್ಸ್ ನವರು ಒಂದು ಸಂಸ್ಥೆಯಾಗಿ ದುಡಿಯುತಿದ್ದಾರೆ  , ತುಳು ಕನ್ನಡಿಗ ಎಲ್ಲಾ ಕ್ರಿಕೆಟ್ ಆಟಗಾರರು , ಅಭಿಮಾನಿಗಳು ,ಆಸಕ್ತರನ್ನು  ಒಂದೇ ಸೂರಿನಡಿ…

Read More

ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘವು ಬಹಳ ಶಿಸ್ತು ಬದ್ಧವಾಗಿ ಕ್ರೀಡಾಕೂಟ, ರಾಷ್ಟ್ರಮಟ್ಟದ ಕಬಡ್ಡಿ ಹಾಗೂ ತ್ರೋ ಬಾಲ್ ಪಂದ್ಯಾಟವನ್ನು ಆಯೋಜಿಸಿರುವುದು ಅಭಿನಂದನೀಯವಾಗಿದೆ. ಪುಣೆಯಲ್ಲಿರುವ ವಿವಿಧ ಉದ್ಯೋಗ, ಉದ್ಯಮ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಸಮಾಜ ಬಾಂಧವರೆಲ್ಲರನ್ನೂ ಸಂಘದ ಒಂದೇ ಛತ್ರದಡಿಯಲ್ಲಿ ಸೇರಿಸಿಕೊಂಡು ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ನಮ್ಮೊಳಗಿನ ಒಗ್ಗಟ್ಟು ಬಲಗೊಂಡು ಬಾಂಧವ್ಯ ವೃದ್ಧಿಯಾಗಲು ಸಾಧ್ಯವಿದೆ. ಪ್ರತಿಯೊಂದು ಊರಿನಲ್ಲಿಯೂ ಇಂತಹ ಕಾರ್ಯಕ್ರಮಗಳು ನಡೆಯುವಂತಾದರೆ ಸಂಘಟನೆಗಳು ಶಕ್ತಿಯುತವಾಗುತ್ತದೆ ಎಂದು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕರ್ನಾಟಕ ಇದರ ಅಧ್ಯಕ್ಷರಾದ ರಾಕೇಶ್ ಮಲ್ಲಿ ಅಭಿಪ್ರಾಯಪಟ್ಟರು. ಅವರು ನಗರದ ಮೊರ್ಯಾ ಗೋಸಾವಿ ಕ್ರೀಡಾ ಸಂಕುಲದ ಎರ್ಮಾಳ್ ನಾರಾಯಣ ಕೆ ಶೆಟ್ಟಿ ವೇದಿಕೆಯಲ್ಲಿ ನಡೆದ ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ, ರಾಷ್ಟ್ರಮಟ್ಟದ ಕಬಡ್ಡಿ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿ ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಆಟಗಾರರಿಗೆ ಇಂದು ಮನ್ನಣೆ ಸಿಗುವಂತಾಗಲು ವಿಜಯಾ ಬ್ಯಾಂಕಿನ ಜಯಕರ್ ಶೆಟ್ಟಿಯವರು ಬಂಟ ಸಮಾಜದ ಕಬಡ್ಡಿ ಆಟಗಾರರಿಗೆ ಉದ್ಯೋಗ ನೀಡಿ…

Read More

ಮಂಗಳೂರು ವಿ.ವಿ. ವ್ಯಾಪ್ತಿಯ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಆದಷ್ಟೂ ಬೇಗ ಸಂಘಟಿತ ರಾಗಿ ಎಲ್ಲ ಪ್ರಾಂಶುಪಾಲರು, ಪದಾಧಿ ಕಾರಿಗಳೊಂದಿಗೆ ವಿ.ವಿ.ಯ ಆಡಳಿತವನ್ನು ಭೇಟಿಯಾಗಿ ಎದು ರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲೇಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದ್ದಾರೆ. ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ 16ನೇ ಮಹಾಸಭೆ ಹಾಗೂ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆ ವಿಚಾರಗೋಷ್ಠಿಯನ್ನು ಅವರು ಉದ್ಘಾಟಿಸಿ ಮಾತನಾಡಿ, ಸರಕಾರ ಮತ್ತು ಮಂಗಳೂರು ವಿ.ವಿ. ನಮ್ಮನ್ನು ವಿಶ್ವಾಸಕ್ಕೇ ತೆಗೆದುಕೊಳ್ಳುತ್ತಿಲ್ಲ, ನಮ್ಮ ಸಭೆ ನಡೆಸುವುದಾಗಿ ಒಂದು ವರ್ಷದಿಂದ ಹೇಳಿದರೂ ಇದುವರೆಗೆ ಸಾಧ್ಯವಾಗಿಲ್ಲ ಎಂದರು. ಮಾನ್ಯತೆಗೆ ಹೆಚ್ಚು ಮೊತ್ತವನ್ನು ಖಾಸಗಿ ಕಾಲೇಜುಗಳು ವಿ.ವಿ.ಗೆ ಪಾವತಿಸಬೇಕಾಗುತ್ತದೆ. ಆದರೆ ಕಳೆದ ಐದು ವರ್ಷಗಳಿಂದ ವಿ.ವಿ.ಯ ವೇಳಾಪಟ್ಟಿಯೇ ಗೊಂದಲದಿಂದ ಕೂಡಿದೆ, ಪರೀಕ್ಷಾ ವ್ಯವಸ್ಥೆ, ಮೌಲ್ಯ ಮಾಪನ ಹದಗೆಟ್ಟು ಹೋಗಿದೆ. ಹೊಸ ಕೋರ್ಸ್‌ ಆವಿಷ್ಕಾರಗಳು ಆಗುತ್ತಿಲ್ಲ, ಪಿಜಿ ಕೋರ್ಸ್‌ ಪರಿಚಯಿಸುವಲ್ಲೂ ಹಿಂದಿದ್ದೇವೆ, ಪಿಜಿ ಕೋರ್ಸ್‌ಗಳಲ್ಲಿ ನಮ್ಮಲ್ಲಿ ಎಷ್ಟೇ ಕಷ್ಟಪಟ್ಟರೂ ಶೇ.…

Read More

ಜಗತ್ತಿನ ಒಟ್ಟು ಅಡಿಕೆ ಉತ್ಪನ್ನದಲ್ಲಿ ಭಾರತದ ಪಾಲು ಸುಮಾರು ಐವತ್ತು ಶೇಕಡಾದಷ್ಟು. ಅದರಲ್ಲೂ ಭಾರತದ ಒಟ್ಟು ಅಡಿಕೆ ಉತ್ಪನ್ನದಲ್ಲಿ ಕರ್ನಾಟಕವೊಂದೇ ಶೇಕಡಾ ಅರವತ್ತಕ್ಕಿಂತಲೂ ಹೆಚ್ಚು ಪಾಲು ಹೊಂದಿದೆ. ಕರ್ನಾಟಕದ ಒಟ್ಟು ಅಡಿಕೆ ಉತ್ಪನ್ನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯದ್ದು ಬಹುದೊಡ್ಡ ಪಾಲು. ಭಾರತದಲ್ಲಿ ಈ ಅಡಿಕೆ ಕೃಷಿಯ ಪರಂಪರೆ ಅದೆಷ್ಟು ಪುರಾತನವೆಂದರೆ “ತಾಂಬೂಲ’ ಅನ್ನುವುದರ ಪರಿಕಲ್ಪನೆ ಹಿಂದೂ ಧರ್ಮದಷ್ಟೇ ಹಳೆಯದು. ಹಾಗಾಗಿ ಅಡಿಕೆ ಎನ್ನುವುದು ನಮ್ಮ ಧರ್ಮದ ಅವಿಭಾಜ್ಯ ಅಂಗ. ಅದ್ಯಾವ ದೇವತಾ ಕಾರ್ಯಗಳೇ ಇರಲಿ, ಅದ್ಯಾವುದೇ ಶುಭಸಮಾರಂಭಗಳಿರಲಿ ವೀಳ್ಯದ ಎಲೆ ಮತ್ತು ಅಡಿಕೆ ಎಂಬುದು ಎಲ್ಲ ಆಚರಣೆಗಳ ಅವಿಭಾಜ್ಯ ಅಂಗ. ಅಡಿಕೆಯನ್ನು ನಮ್ಮ ಆಯುರ್ವೇದದಂಥಾ ಔಷಧಶಾಸ್ತ್ರಗಳೂ ಕೂಡಾ ಔಷಧವಾಗಿ ಬಳಕೆ ಮಾಡುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅಡಿಕೆಯ ಬಗ್ಗೆ ವಿಶ್ವಮಟ್ಟದಲ್ಲಿ ಅಪಪ್ರಚಾರ ನಡೆಯುತ್ತಿದೆ. ಅಡಿಕೆಯ ಅನೇಕ ಔಷಧೀಯ ಗುಣಗಳನ್ನರಿತು ಉಪಯೋಗಿಸುತ್ತಿದ್ದ ಭಾರತೀಯರ ನಂಬಿಕೆಗೆ ವಿರುದ್ಧವಾಗಿ ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿವೆ ಎನ್ನುವ ಸುದ್ದಿಗೆ ಹೆಚ್ಚು ಮನ್ನಣೆ ಕೊಡಲಾಯಿತು. ಹೆಚ್ಚಿನ ಸಂಶೋಧನೆಗಳೆಲ್ಲಾ ವೀಳ್ಯದೆಲೆ,…

Read More

ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅರ್ಹವಾದ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರಿಗೆ ಮಾಧ್ಯಮ ಕ್ಷೇತ್ರದ ಸಂಸ್ಥೆ ಸ್ಪೇಸ್ ಮೀಡಿಯಾ ಬೆಂಗಳೂರಿನ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿ ಅಂತಾರಾಷ್ಟ್ರೀಯ ಪ್ರಶಸ್ತಿ -2023 ಯನ್ನು ನೀಡಿ ಗೌರವಿಸಿದೆ. ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನಿಸಿದರು. ಸ್ಪೀಕರ್ ಯು.ಟಿ. ಖಾದರ್, ಎಸ್ ಡಿ ಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಡಾ. ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು. ಈ ಹಿಂದೆ ಕಿಶೋರ್ ಆಳ್ವ ಅವರು ಪ್ರತಿಷ್ಠಿತ ಬೆಂಗಳೂರು ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಸ್ ನ( ಬಿಸಿಐಸಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾಭಿವೃದ್ಧಿಗೆ ಶ್ರಮಿಸಿದ್ದರು. ಪ್ರತಿಷ್ಟಿತ ಕೊಜೆಂಟ್ರಿಕ್ಸ್ ಚೈನಾ ಲೈಟ್ ಆಂಡ್ ಪವರ್, ಯುನೋಕಾಲ್ ಎಂಬ ಪ್ರತಿಷ್ಠಿತ ಸಂಸ್ಥೆಗಳಿಗೆ ಹಿರಿಯ ಸಲಹೆಗಾರರಾಗಿ ಕೈಗಾರಿಕಾಭಿವೃದ್ಧಿಗೆ ಕಿಶೋರ್ ಆಳ್ವ ಅವರು ಕೈಜೋಡಿಸಿದ್ದಾರೆ. ತಮ್ಮ ವಿದ್ಯಾರ್ಥಿ ದೆಸೆಯಲ್ಲೂ ಸಹ ಕಿಶೋರ್ ಆಳ್ವ…

Read More

ಚಿಣ್ಣರ ಬಿಂಬದ ಕನ್ನಡ ತರಗತಿಗಳು ಮಕ್ಕಳಿಗೆ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವಲ್ಲಿ ಯಶಸ್ಸಾಗಿದೆ- ಪ್ರಕಾಶ್ ಭಂಡಾರಿ ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗ ಚಿಣ್ಣರ ಬಿಂಬ ಸಂಸ್ಥೆಗೆ ಸದಾ ಪ್ರೋತ್ಸಹವನ್ನು ನೀಡುತ್ತಿದೆ. ಚಿಣ್ಣರ ಬಿಂಬದ ಕನ್ನಡ ಕಲಿಕಾ ತರಗತಿಗಳನ್ನು ನಾವು ಪ್ರೋ. ಸೀತಾರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಆರಂಭಿಸಿದ್ದೆವು. ಈಗ ಆದಕ್ಕೊಂದು ಸ್ವರೂಪವನ್ನು ನೀಡಿ ಶಿಸ್ತುಬದ್ಧವಾಗಿ ನಡೆಸಿಕೊಂಡು ಹೋಗುವಲ್ಲಿ ಕನ್ನಡ ವಿಭಾಗದ ಸಹಕಾರವೂ ಇದೆ.  ಡಾ.ಜಿ.ಎನ್.ಉಪಾಧ್ಯ ಅವರು ಚಿಣ್ಣರ ಬಿಂಬದ ಆರಂಭದಿಂದಲೂ ನಮಗೆ ಮಾರ್ಗದರ್ಶನವನ್ನು ನೀಡುತ್ತಾ ಬಂದಿದ್ದಾರೆ. ನಮ್ಮಎಲ್ಲ ಶಿಕ್ಷಕರು ಬಹಳ ಮುತುವರ್ಜಿಯಿಂದ ಈ ಕನ್ನಡ ಕಲಿಕಾ ತರಗತಿಗಳ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ ಎಂದು ಹೇಳಲು ನನಗೆ ಅಭಿಮಾನವಾಗುತ್ತದೆ. ಈ ಕನ್ನಡ ತರಗತಿಗಳು ಭಾಷೆಯಲ್ಲಿ ಮಕ್ಕಳು ಪಳಗುವಂತೆ, ಪ್ರೌಢರಾಗುವಂತೆ ಮಾಡುತ್ತಿದೆ. ಅದೇ ರೀತಿ ನಮ್ಮ ಚಿಣ್ಣರ ಬಿಂಬದಲ್ಲಿ ಭಜನೆಯನ್ನು ಸಾವಿರಾರು ಮಕ್ಕಳು ಕಲಿಯುತ್ತಿದ್ದಾರೆ. ಭಜನೆಗಳನ್ನು ಕೂಡಾ ಬಹಳ ಉತ್ತಮವಾಗಿ ಚಿಣ್ಣರ ಬಿಂಬದಲ್ಲಿ ಕಲಿಸಲಾಗುತ್ತದೆ. ಇವರೆಲ್ಲರನ್ನು ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಮೂಲಕ ಗೌರವಿಸುತ್ತಿರುವುದು ಅರ್ಥಪೂರ್ಣವಾಗಿದೆ.…

Read More

ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ. ೧೩ ರಂದು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಲಿರುವ ಆಟಿಡೊಂಜಿ ದಿನ, ಸಾಧಕರಿಗೆ ಚಿನ್ನದ ಪದಕ ಪ್ರದಾನ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆಯು ಜು. ೨೭ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿತು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಬುಧಾಬಿಯ ಉದ್ಯಮಿ ಜಯರಾಮ ರೈ ಮಿತ್ರಂಪಾಡಿರವರುಗಳು ಅಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಬಂಟರ ಸಂಘದ ನಿಕಟಪೂರ್ವಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಧಾನ ಕಾರ್‍ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ, ಉಪಾಧ್ಯಕ್ಷರುಗಳಾದ ಚಿಲ್ಮೆತ್ತಾರು ಜಗಜೀವನ್‌ದಾಸ್ ರೈ, ರೋಶನ್ ರೈ ಬನ್ನೂರು, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಸಹ…

Read More