Author: admin

‘ನಂಬಿಕೆ ಇರಲಿ, ಮೌಢ್ಯಕ್ಕೆ ಬಲಿಯಾಗಬೇಡಿ’ ವಿದ್ಯಾಗಿರಿ: ಬದುಕಿನಲ್ಲಿ ನಂಬಿಕೆ ಇರಬೇಕು. ಆದರೆ, ಮೂಢನಂಬಿಕೆಗೆ ಬಲಿಯಾಗದಂತಹ ವೈಜ್ಞಾನಿಕ ಹಾಗೂ ವೈಚಾರಿಕ ಎಚ್ಚರಿಕೆ ಅವಶ್ಯ’ಎಂದು ಆಳ್ವಾಸ್ ಪುನರ್ಜನ್ಮ ಕೇಂದ್ರದ ಆಪ್ತ ಸಮಾಲೋಚಕ ಲೋಹಿತ್ ಬಂಟ್ವಾಳ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಂಗಳವಾರ ಅವರು ‘ಮಾನಸಿಕ ಆರೋಗ್ಯ’ ಕುರಿತು ಮಾತನಾಡಿದರು. ಬದುಕಿಗೆ ನಂಬಿಕೆ ಬೇಕಾಗುತ್ತದೆ. ಆದರೆ, ಅದೇ ನಂಬಿಕೆಯನ್ನು ವ್ಯಾವಹಾರಿಕವಾಗಿ ಬಳಸುವ, ದುರುಪಯೋಗ ಪಡಿಸುವ ಮೂಢನಂಬಿಕೆಗಳಿಗೆ ಬಲಿಯಾಗಬೇಡಿ. ಎಲ್ಲವನ್ನೂ ತಾರ್ಕಿಕವಾಗಿ ಯೋಚಿಸಿ ಎಂದರು. ದೇವರು ಯಾವತ್ತೂ ಲಂಚ ಕೇಳುವುದಿಲ್ಲ. ಕೆಡುಕನ್ನು ಬೋಧಿಸುವುದಿಲ್ಲ. ವೈಭೋಗ ಬಯಸುವುದಿಲ್ಲ. ದೇವರ ಹೆಸರಲ್ಲಿ ಮೋಸ ಮಾಡುವವರ ಬಗ್ಗೆ ಸದಾ ಎಚ್ಚರಿಕೆ ಇರಲಿ ಎಂದರು. ಬದುಕಿನಲ್ಲಿ ಆತ್ಮವಿಶ್ವಾಸ ಇರಬೇಕು. ಕೀಳರಿಮೆಯನ್ನು ದೂರ ಮಾಡಬೇಕು. ಒತ್ತಡ ಮುಕ್ತ ಬದುಕು ಜೀವಿಸಲು ಉತ್ತಮ ಜೀವನಶೈಲಿ ಹೊಂದಬೇಕು ಎಂದು ಅವರು ಸಲಹೆ ನೀಡಿದರು. ವಾಸ್ತವಿಕವನ್ನು ಒಪ್ಪಿಕೊಳ್ಳಬೇಕು. ಭವಿಷ್ಯದ ಬಗ್ಗೆ ಭರವಸೆ ಬೇಕು. ಯಾರದೇ ಜೊತೆ ಹೋಲಿಕೆಯ ಅಥವಾ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ 28 – 29 ರಂದು ಜರಗುವ ವಿಶ್ವ ಬಂಟರ ಸಮ್ಮೇಳನ -2023 ಕ್ಕೆ ಪೂರ್ವಭಾವಿಯಾಗಿ ಹಸಿರು ಹೊರೆಕಾಣಿಕೆ ಸಮರ್ಪಣೆ ವಿಜೃಂಭಣೆಯಿಂದ ನಡೆಯಿತು. ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ 48 ಬಂಟರ ಸಂಘಟನೆಯ ಪ್ರತಿನಿಧಿಗಳು ಈ ಹಸಿರು ಹೊರೆಕಾಣಿಕೆಯಲ್ಲಿ ಭಾಗವಹಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉಡುಪಿಯ ಜೋಡುಕಟ್ಟೆಯಲ್ಲಿ ಹೊರೆಕಾಣಿಕೆ ಸಮರ್ಪಣೆಗೆ ಚಾಲನೆ ನೀಡಿದರು. ಜೋಡುಕಟ್ಟೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದವರೆಗೆ ಹಸಿರು ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಸಾಗಿತು. ಮೂರು ಜಿಲ್ಲೆಗಳಿಂದ ಸಾವಿರಾರು ಮಂದಿ ಬಂಟ ಸಮುದಾಯದ ಬಂಧುಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ, ವಿಶ್ವ ಬಂಟರ ಕ್ರೀಡಾಕೂಟದ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರು, ಸಹ ಸಂಚಾಲಕ ಡಾ. ರೋಶನ್ ಕುಮಾರ್ ಶೆಟ್ಟಿ,…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.), ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಇಂದು ದಿನಾಂಕ 02-10-2023 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ “ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಯೋಜಿಸಲಾದ” ಜನಜಾಗೃತಿ ಜಾಥಾ ಮತ್ತು ಸಮಾವೇಶ – 2023″ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಸತ್ಯಾನಂದ ನಾಯಕ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ…

Read More

ಬಂಟರ ಸಂಘ (ರಿ) ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ) ಪಡುಬಿದ್ರಿ, ಬಂಟರ ಮಹಿಳಾ ವಿಭಾಗ ಪಡುಬಿದ್ರಿ ಇವರ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸಂಘದ ಮಾಜಿ ಕಾರ್ಯದರ್ಶಿ ಹಾಗೂ ನಿವೃತ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ದಂಪತಿಗಳನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ನಿವೃತ ಶಿಕ್ಷಕ ನಾರಾಯಣ ಶೆಟ್ಟಿ ದಂಪತಿಗಳನ್ನು ಅವರ ಮನೆಗೆ ತೆರಳಿ ಗೌರವಿಸಲಾಯಿತು. ಈ ಸಂದರ್ಭ ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷರಾದ ಶಶಿಧರ ಶೆಟ್ಟಿ ಎರ್ಮಾಳು, ಸಂಘದ ಉಪಾಧ್ಯಕ್ಷೆ ಅನಿತಾ ವಿಶು ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಎರ್ಮಾಳು, ಕಾರ್ಯದರ್ಶಿ ವಾಣಿ ರವಿ ಶೆಟ್ಟಿ, ಕೋಶಾಧಿಕಾರಿ ರಶ್ಮಿ ಸುಧಾಕರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಮಾಜಿ ಅಧ್ಯಕ್ಷೆ ಶೋಭಾ ಜೆ ಶೆಟ್ಟಿ, ಉಪಾಧ್ಯಕ್ಷೆ ಭಾರತಿ ಬಿ ಶೆಟ್ಟಿ,…

Read More

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ಪ್ರವಾಸೋದ್ಯಮವು ವೇಗ ಪಡೆದುಕೊಂಡಿದ್ದು, ಒಂದರ ಮೇಲೊಂದರಂತೆ ವಿವಿಧ ಅಭಿವೃದ್ಧಿ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಇತ್ತೀಚೆಗಷ್ಟೇ ದೇಶದ ಅತಿದೊಡ್ಡ ಸಭಾಂಗಣವಾದ ಭಾರತ ಮಂಠಪವನ್ನು ದೇಶಕ್ಕೆ ಸಮರ್ಪಿಸುವ ವೇಳೆ ಮತ್ತೊಂದು ಮಹತ್ತರ ಯೋಜನೆಯನ್ನು ಪ್ರಧಾನಿ ಮೋದಿ ಘೋಷಿಸಿದ್ದರು. ಅದುವೇ ‘ಯುಗೇ ಯುಗೀನ ಭಾರತ’. ವಿಶ್ವದ ಅತಿದೊಡ್ಡ ವಸ್ತು ಸಂಗ್ರಹಾಲಯ ನಿರ್ಮಾಣದ ಈ ಯೋಜನೆಗೆ ಸಂಬಂಧಿಸಿದ ಕೆಲ ವಿವರ ಹೀಗಿದೆ.. ರಾಷ್ಟ್ರಕಥೆ ಸಾರಲು ಸಾರಥ್ಯ : ಪ್ರಸಕ್ತ ವಸ್ತು ಸಂಗ್ರಹಾಲಯವು ದೆಹಲಿಯ ಕರ್ತವ್ಯ ಪಥದ ಸಮೀಪದಲ್ಲಿದ್ದು, ನಿರ್ಮಾಣಗೊಳ್ಳಲಿರುವ ನೂತನ ವಸ್ತು ಸಂಗ್ರಹಾಲಯವು ರಾಷ್ಟ್ರಪತಿ ಭವನಕ್ಕೆ ಸಮೀಪವಾಗಿರಲಿದೆ. ಭಾರತದ ತಲಾತಲಾಂತರದ ಕಥನವನ್ನು ಸಾರುವ ಸಾಕ್ಷ್ಯಗಳಿಗೆ ಸಾರಥಿಯಾಗಿರಲಿದೆ. ಅಂದರೆ, ಪ್ರಾಚೀನ ಭಾರತದಿಂದ, ಮಧ್ಯಕಾಲೀನ ಹಾಗೂ ಆಧುನಿಕ ಭಾರತದ ಸಂಪೂರ್ಣ ಇತಿಹಾಸ, ವೈಭವ ಮತ್ತು ವಾಸ್ತವವನ್ನು ಇಲ್ಲಿ ತೆರೆದಿಡಲಾಗುತ್ತಿದೆ. ವಿಶೇಷವಾಗಿ ಡಚ್‌, ಬ್ರಿಟಿಷ್‌, ಪೋರ್ಚುಗೀಸರು ಸೇರಿದಂತೆ ವಸಹಾತುಶಾಹಿಗಳ ಆಡಳಿತ ಹಾಗೂ ಆ ನಂತರದ ಸ್ವಾತಂತ್ರ್ಯ ಹೋರಾಟ ಮತ್ತು ನಂತರದ 100…

Read More

ಪುಣೆ ; ಯೋಗ ಆಧ್ಯಾತ್ಮಿಕ ಚಿಕಿತ್ಸೆಯಾಗಿ ಮನುಷ್ಯನ ವಿಕಾಸದ ಪ್ರಕ್ರೀಯೆಗೆ ಸಾರ್ವರ್ತಿಕ ಪ್ರಾಯೋಗಿಕದ ಒಂದು ವಿಧಾನ ,ವ್ಯಕ್ತಿಯ ಶಕ್ತಿಯನ್ನು ಸಂತುಲಿತ ರೀತಿಯಲ್ಲಿ ಸುಧಾರಿಸಲು ಮತ್ತು ಸದೃಡಗೊಳಿಸುವಲ್ಲಿ ರಾಮ ಬಾಣವಾಗಿ ಯೋಗ ಇಂದು ನಮ್ಮ ದೇಶ ಮತ್ತು ವಿದೇಶದಲ್ಲಿ ಪ್ರಚಲಿತವಾಗಿದೆ .ಮಾನ್ಯ ಮೋದಿಯವರ ಸಂಕಲ್ಪದಂತೆ ಭಾರತದಲ್ಲಿ ಯೋಗ ದಿನಾಚರಣೆಯ ಪರ್ವ ಶುರುವಾಗಿ ಇಂದು ಪ್ರಪಂಚದ ಮೂಲೆ ಮೂಲೆಯಲ್ಲೂ ಯೋಗಕ್ಕೆ ಮಾನ್ಯತೆ ಸಿಕ್ಕೀದೆ ಯೋಗದಿಂದ ಆಗುವ ಅನುಕೂಲಗಳನ್ನು ಅರಿತಿದ್ದಾರೆ .ನಮ್ಮ ದೇಶದ ಪ್ರತಿ ಕಡೆಯೂ ಯೋಗದ ಮಹತ್ವವನ್ನು ಅರಿತವರು ಅರೋಗ್ಯ ಪೂರ್ಣ ಜೀವನ ನಡೆಸುತಿದ್ದಾರೆ . ಆರೋಗ್ಯದ ದೃಷ್ಟಿಯಲ್ಲಿ ಭಕ್ತಿ ,ಜಪ ,ಕರ್ಮ,ರಾಜ ,ನಾಡಿ ,ಕುಂಡಲಿನಿ ,ಮತ್ತು ಅಷ್ಟಾಂಗ ಯೋಗ ಮೊದಲಾದ ಯೋಗಗಳ ಹಾದಿಗಳ ಮೂಲಕ ಮನುಷ್ಯನ ಶಾರೀರಿಕ ಸಮತೋಲನ ಕಾಪಾಡುವಲ್ಲಿ ಯೋಗ ಮಹತ್ತರವಾದ ಸ್ಥಾನವನ್ನು ಪಡೆದಿದೆ . ನಮ್ಮ ಮಕ್ಕಳಿಗೆ ಸಣ್ಣ ಪ್ರಾಯದಲ್ಲೇ ಯೋಗದ ಮಹತ್ವವನ್ನು ತಿಳಿಸುವ ಅಗತ್ಯತೆ ಇದೆ .ಒಟ್ಟಾರೆಯಾಗಿ ಯೋಗ ನಮ್ಮ ದೇಹದ ಆರೋಗ್ಯಕ್ಕೆ ಪರಿಪೂರ್ಣ ಶಕ್ತಿಯನ್ನು ನೀಡುವ ಪ್ರಕ್ರಿಯೆಯಂತೆ…

Read More

ದೇಶವನ್ನೇ ತನ್ನತ್ತ ಸೆಳೆದಿದ್ದ ಕರ್ನಾಟಕ ವಿಧಾನಸಭೆಯ ಚುನಾವಣೆ ಫ‌ಲಿತಾಂಶ ಪ್ರಕಟವಾಗಿದೆ. ಅತಂತ್ರ ವಿಧಾನಸಭೆ ರಚನೆಯಾಗಲಿದೆ ಮತ್ತು ಜೆಡಿಎಸ್‌ ಸರ್ಕಾರ ರಚನೆಯಲ್ಲಿ ಪ್ರಧಾನ ಪಾತ್ರ ವಹಿಸಲಿದೆ ಎಂದು ಹಲವು ಸುದ್ದಿ ವಾಹಿನಿಗಳು ಪ್ರಕಟಿಸಿದ ಮತಗಟ್ಟೆ ಸಮೀಕ್ಷೆಗಳು ಹುಸಿಯಾಗಿವೆ. 224 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ 136 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಇದರಿಂದಾಗಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸೋಲು ಅನುಭವಿಸಿದೆ. ಆಡಳಿತ ವಿರೋಧಿ ಅಲೆಗೆ ಹಾಲಿ ಸರ್ಕಾರದ ಒಟ್ಟು 14 ಮಂದಿ ಸಚಿವರು ಜನರ ಕೋಪಕ್ಕೆ ತುತ್ತಾಗಿದ್ದಾರೆ. ಸಾಮಾನ್ಯವಾಗಿ ಕರ್ನಾಟಕ ಆಡಳಿತರೂಢ ಪಕ್ಷಕ್ಕೆ ಮತ್ತೆ ಮಣೆ ಹಾಕು ವುದು ಅಪರೂಪ. ಈ ಬಾರಿಯೂ ಹಾಗೆಯೇ ಆಗಿದೆ. ಬಿಜೆಪಿ ಸರ್ಕಾರದ ವಿರುದ್ಧ ವ್ಯಕ್ತವಾಗಿದ್ದ ಶೇ.40 ಭ್ರಷ್ಟಾಚಾರ ಆರೋಪ, ಪೊಲೀಸ್‌ ಇಲಾಖೆಯಲ್ಲಿ ಉಂಟಾದ ನೇಮಕ ಹಗರಣ, ಬೆಲೆ ಏರಿಕೆ, ನಿರುದ್ಯೋಗ ವಿಚಾರದಲ್ಲಿ ಜನರ ಆಕ್ರೋಶವನ್ನು ಕಾಂಗ್ರೆಸ್‌ ಸಮರ್ಥ   ವಾಗಿಯೇ ಬಳಕೆ ಮಾಡಿಕೊಂಡಿದೆ. 2018ರ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳಲ್ಲಿ ಗೆದ್ದುಕೊಂಡು ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ನಂತರ ಕಾಂಗ್ರೆಸ್‌ ಮತ್ತು ಜೆಡಿಎಸ್‌…

Read More

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ 9 ಮಂದಿ ಸಾಧಕಿಯರಿಗೆ ಸಾವಿತ್ರಿ ಸತ್ಯವಾನ್ ಸಾಧಕ ಮಹಿಳೆ-2023 ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಶಿಕ್ಷಕಿ ಪೂರ್ಣಿಮಾ ಶೆಣೈ, ಸಾಹಿತಿ ಚೈತ್ರಾ ಕಬ್ಬಿನಾಲೆ, ನಾಟಿ ವೈದ್ಯೆ ಜಯಂತಿ ಮಾಳ, ವಿಜೇತ ವಿಶೇಷ ಶಾಲೆಯ ಸಂಸ್ಥಾಪಕಿ ಡಾ.ಕಾಂತಿ ಹರೀಶ್, ಕೃಷಿ ಕ್ಷೇತ್ರದ ಸಾಧಕಿ ಸುಮಲತಾ ಮಾಳ, ಸಂಗೀತ ಕ್ಷೇತದ ಸಾಧಕಿ ಆರತಿ, ಸಮಾಜ ಸೇವಕಿ ಗಾಯತ್ರಿ ಪ್ರಭು, ಸುರಕ್ಷಾ ಸೇವಾಶ್ರಮದ ಆಯೇಷಾ ಭಾನು, ಶಿಕ್ಷಕಿ ಗೀತಾ ಎಸ್ ಹೆಗ್ಡೆ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಾರ್ಚ್ 12 ರವಿವಾರದಂದು ಹೆಬ್ರಿಯ ಚೈತನ್ಯ ಸಭಾಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಸಾವಿತ್ರಿ ಸತ್ಯವಾನ್ ಟ್ರಸ್ಟ್ (ರಿ.) ಅಧ್ಯಕ್ಷೆ ಡಾ ಮಮತಾ ಹೆಗ್ಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯಲ್ಲಿನ ಮೈಸೂರು ಅಸೋಸಿಯೇಷನ್ ಮಿನಿ ಹಾಲ್‌ನಲ್ಲಿ ನಡೆದ ನಗರದ ಕನ್ನಡ ಲೇಖಕಿಯರ ಬಳಗ ‘ ಸೃಜನಾ’ ದ ಸಭೆಯಲ್ಲಿ 2023 ರಿಂದ 2025 ರವರೆಗಿನ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಸಂಚಾಲಕಿಯಾಗಿ ಶೀಮತಿ ಪದ್ಮಜಾ ಮಣ್ಣೂರ್ , ಕಾರ್ಯದರ್ಶಿಯಾಗಿ ಶೀಮತಿ ಲತಾ ಸಂತೋಷ್ ಮುದ್ದುಮನೆ, ಕೋಶಾಧಿಕಾರಿಯಾಗಿ ಡಾ. ದಾಕ್ಷಾಯಣಿ ಯಡಹಳ್ಳಿ ಆಯ್ಕೆಯಾದರು.ಸಹ ಸಂಚಾಲಕಿಯಾಗಿ ಡಾ. ಜಿ.ಪಿ. ಕುಸುಮ ,ಜೊತೆ ಕಾರ್ಯದರ್ಶಿಯಾಗಿ ಕುಸುಮ ಚಂದ್ರ ಪೂಜಾರಿ,ಜೊತೆ ಕೋಶಾಧಿಕಾರಿಯಾಗಿ ಶೀಮತಿ ಸರೋಜಾ ಅಮಾತಿಯವರನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಬಳಗದ ಸಂಚಾಲಕಿ ಶಾರದಾ ಅಂಬೇಸಂಗೆ ಪುಷ್ಪ ಗುಚ್ಚ ನೀಡಿ ಅಧಿಕಾರ ಹಸ್ತಾಂತರಿಸಿದರು. ಬಳಗದ ಸಂಚಾಲಕಿ ಶಾರದಾ ಅಂಬೇಸಂಗೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲಾ ಸದಸ್ಯೆಯರಿಗೂ ಕೃತಜ್ಞತೆಯನ್ನು ಸಲ್ಲಿಸಿದ ಅವರು ಬಳಗವು ನೂತನ ಪದಾಧಿಕಾರಿಗಳ ಅಧಿಕಾರಾವಧಿ ಯಲ್ಲಿ ಉತ್ತರೋತ್ತರ ಪ್ರಗತಿಯನ್ನು ಸಾಧಿಸಲೆಂದು ಹಾರೈಸಿದರು. ಸಲಹಾ ಸಮಿತಿಯ ಸದಸ್ಯೆ, ನಗರದ ಹಿರಿಯ ಲೇಖಕಿ ಡಾ.ಸುನೀತಾ ಶೆಟ್ಟಿಯವರು…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸದೃಢ ಬೆಳವಣಿಗೆಗೆ ಸಮಾಜದ ಸಹಕಾರ ಅಗತ್ಯ. ಇಂದು ಎಲ್ಲರ ಸಹಕಾರ ಪ್ರೋತ್ಸಾಹದಿಂದ ಪಟ್ಲ ಫೌಂಡೇಶನ್ ಟ್ರಸ್ಟ್ ಬೆಳೆದು ನಿಂತಿದೆ. ಯಕ್ಷಗಾನವನ್ನು ಒಂದು ಉನ್ನತ ಮತ್ತು ಗೌರವ ಸ್ಥಾನಕ್ಕೆ ಕೊಂಡೊಯ್ಯಲು ಪಟ್ಲ ಸತೀಶ ಶೆಟ್ಟಿಯವರ ಕೊಡುಗೆಯೂ ದೊಡ್ಡದಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ತಿಳಿಸಿದರು. ನಗರದ ಎಂಪೇರ್ ಮಾಲ್ ನಲ್ಲಿ ನಡೆದ ಪಟ್ಲಾಶ್ರಯ ಯೋಜನೆಯಲ್ಲಿ ಐದು ಮಂದಿ ಕಲಾವಿದರಿಗೆ ಮನೆ ನಿರ್ಮಾಣಕ್ಕೆ ಮೊದಲ ಕಂತಿನಲ್ಲಿ ತಲಾ ಎರಡು ಲಕ್ಷ ರೂಪಾಯಿಯ ಚೆಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಳೆದ ಏಳು ವರ್ಷಗಳಿಂದ ಸುಮಾರು ಎಂಟೂವರೆ ಕೋಟಿ ರೂ. ಮೊತ್ತದ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕೆಲಸ ಮಾಡಿದೆ ಎಂದರು. ಸಮಾರಂಭದಲ್ಲಿ ಬಡಗುತಿಟ್ಟಿನ ಯಕ್ಷಗುರು ಐರೋಡಿ ಮಂಜುನಾಥ ಕುಲಾಲ್, ಕಟೀಲು ಮೇಳದ ಕಲಾವಿದ ಶ್ರೀಧರ ಪಡ್ರೆ, ಕಟೀಲು ಮೇಳದ ಸುಖೇಶ್ ಹೆಗ್ಡೆ, ಹವ್ಯಾಸಿ ಮಹಿಳಾ…

Read More