Author: admin

ರಾಜ್ಯದ ಪ್ರತಿಷ್ಠಿತ ಸಂಸ್ಥೆಯಾದ ಎನ್‌ಐಟಿಕೆ ಸುರತ್ಕಲ್ ಇದರ ಆಡಳಿತ ಮಂಡಳಿಗೆ ಉದ್ಯಮಿ ಮತ್ತು ಸುಪ್ರಜಿತ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಕೆ. ಅಜಿತ್ ಕುಮಾರ್ ರೈ ಇವರನ್ನು ರಾಜ್ಯ ಸರಕಾರದ ಪ್ರತಿನಿಧಿಯಾಗಿ ನಾಮನಿರ್ದೇಶನ ಮಾಡಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಹಾಗೂ ಕೆನಡಾದ ಡಾಲ್‌ಹೌಸಿ ವಿಶ್ವವಿದ್ಯಾಲಯದಿಂದ ಕೈಗಾರಿಕಾ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ. ಇವರ ನೇತೃತ್ವದ ಸುಪ್ರಜಿತ್ ಗ್ರೂಪ್ ಆಫ್ ಕಂಪೆನಿಯು ಆಟೋಮೋಟಿವ್ ಲೈಟಿಂಗ್, ಹ್ಯಾಲೊಜೆನ್ ಬಲ್ಬ್‌ಗಳು ಮತ್ತು ಕೇಬಲ್ ತಯಾರಕ ಮತ್ತು ದ್ವಿಚಕ್ರ ಕೇಬಲ್ ಮಾರುಕಟ್ಟೆಯಲ್ಲಿ ಜಾಗತಿಕ ನಾಯಕ ಸಂಸ್ಥೆಯಾಗಿದ್ದು ಚೀನಾ, ಯುಎಸ್‌ಎ, ಮೆಕ್ಸಿಕೊ, ಇಂಗ್ಲೆಂಡ್, ಹಂಗೇರಿ, ಸ್ಲೊವೇನಿಯಾ, ಲಕ್ಸೆಂಬರ್ಗ್ ಮತ್ತು ಜರ್ಮನಿ ಸೇರಿದಂತೆ ವಿವಿಧ ದೇಶಗಳಲ್ಲಿ ವ್ಯವಹಾರ ಹೊಂದಿದೆ. ವಿದ್ಯಾರ್ಥಿ ವೇತನದ ಮೂಲಕ ಶಿಕ್ಷಣವನ್ನು ಮುಂದುವರಿಸಲು ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು, ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳ ಉನ್ನತೀಕರಣದಲ್ಲಿ ನೆರವು, ವಿಟ್ಲದ ಶಾಲೆಗೆ ಪೀಟೋಪಕರಣ ಸಹಿತ ಕಟ್ಟಡ ನಿರ್ಮಾಣ, ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬೆಂಬಲ, ವಿವಿಧ…

Read More

ಮೂಡುಬಿದಿರೆ: ‘ಹಾಸ್ಯ ಬದುಕನ್ನು ಹಗುರವಾಗಿಸುತ್ತದೆ. ಸೈಬರ್ ಹಾಸ್ಯವು ನಗು ಮತ್ತು ಅರಿವಿನ ಕಾರ್ಯಕ್ರಮವಾಗಿದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ಎಂ ಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಆಳ್ವಾಸ್ ಪದವಿ ಕಾಲೇಜು, ಆಳ್ವಾಸ್ ಹೋಮಿಯೋಪತಿ ಕಾಲೇಜುಗಳ ಕನ್ನಡ ಸಂಘ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ(ಕೆಎಸ್‍ಸಿಎಸ್‍ಟಿ) ಹಾಗೂ ಸೈಸೆಕ್ ಸಹಯೋಗದಲ್ಲಿ ಭಾನುವಾರ ಸಂಜೆ ಕಾಲೇಜು ಆಡಿಟೋರಿಯಂನಲ್ಲಿ ನಡೆದ ‘ಸೈಬರ್ ಹಾಸ್ಯ ಸಂಜೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಸಾಮಾಜಿಕ ಮಾಧ್ಯಮಕ್ಕೆ ಸಮಾಜ ಕಟ್ಟುವ ಹೊಣೆಗಾರಿಕೆ ಇದೆ. ಆದರೆ, ಕೆಲವೊಮ್ಮೆ ಹಾಲಿಗೆ ಹುಳಿ ಹಿಂಡುವ ಕೆಲಸ ನಡೆಯುವುದೇ ಹೆಚ್ಚು’ ಎಂದು ಅಭಿಪ್ರಾಯಪಟ್ಟ ಅವರು, ‘ಕೆಎಸ್‍ಸಿಎಸ್‍ಟಿ ಹಾಗೂ ಸೈಸೆಕ್ ಸಹಯೋಗದಲ್ಲಿ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯಕ್ರಮ ನಡೆದಿರುವುದು ಸಂತಸ ನೀಡಿದೆ’ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಸುಳ್ಳು ರಾರಾಜಿಸುತ್ತಿದ್ದು, ಇಂತಹ ಸುದ್ದಿಗೆ ವಿದ್ಯಾರ್ಥಿಗಳು ಬಲಿಪಶು ಆಗಬಾರದು. ಎಚ್ಚರಿಕೆ ಅವಶ್ಯ ಎಂದರು.…

Read More

ತುಳುನಾಡ ರಕ್ಷಣಾ ವೇದಿಕೆ ಕಾಪು ವಲಯದ ಮಹಿಳಾ ಘಟಕವನ್ನು ಹಿರಿಯಡ್ಕದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿಯವರು ಮಾತನಾಡುತ್ತಾ, ಪ್ರಸ್ತುತ ಜಾತಿ ಧರ್ಮ, ಪಕ್ಷ ಎನ್ನುವುದರ ಬಗ್ಗೆಯೆ ಹೋರಾಡುತ್ತೇವೆ ವಿನಃ ಪ್ರಾದೇಶಿಕವಾಗಿ ಒಂದಾಗುವಲ್ಲಿ ವಿಫಲರಾಗುತ್ತಿದ್ದೇವೆ ಅದ್ದರಿಂದ ನಮ್ಮ ತುಳುನಾಡು ರಕ್ಷಣಾ ವೇದಿಕೆ ತುಳುವರ ನೆಲ ಜನ ಹಾಗೂ ಸಂಸ್ಕತಿ ಉಳಿವಿಗಾಗಿ ಕಟಿಬದ್ಧವಾಗಿದೆ. ನಮ್ಮೂರಿನಲ್ಲಿರುವ ಬ್ಯಾಂಕುಗಳಲ್ಲಿ, ಕೈಗಾರಿಕಾ ಕ್ಷೇತ್ರದಲ್ಲಿ ನಮ್ಮವರಿಗೆ ಅವಕಾಶ ಸಿಗಬೇಕು ಆಗ ಮಾತ್ರ ನಮ್ಮ ಪ್ರಾದೇಶಿಕತೆ ಉಳಿಯುತ್ತದೆ. ಇಲ್ಲದಿದ್ದಲ್ಲಿ ನಮ್ಮ ಮುಂದಿನ ಪೀಳಿಗೆ ತುಂಬಾ ತೊಂದರೆಯನ್ನು ಅನುಭವಿಸಬೇಕಾತ್ತದೆ. ಈ ನಿಟ್ಟಿನಲ್ಲಿ ಮಾತೆಯರು ಒಂದಾಗಬೇಕು ಅನ್ನುವ ಕಿವಿಮಾತನ್ನು ಹೇಳಿದರು. ವೇದಿಕೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೀಕ್ಷಕರಾದ ಫ್ರ್ಯಾಂಕಿ ಡಿ.ಸೋಜಾ, ಕೇಂದ್ರ ತುಳುನಾಡ ರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್, ಪಂಚಾಯತ್ ಸದಸ್ಯರಾದ ಲತಾ, ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ತಾಲೂಕು ಗೌರವಾಧ್ಯಕ್ಷರಾದ ರವಿ ಆಚಾರ್, ತು.ರ.ವೆ. ಉಡುಪಿ ತಾಲೂಕು ಅಧ್ಯಕ್ಷರಾದ ಕೃಷ್ಣ…

Read More

ವಿದ್ಯಾಗಿರಿ: ‘ಪಿಯುಸಿ ಶಿಕ್ಷಣವು ಬದುಕಿನ ಮಹತ್ವದ ಅಡಿಪಾಯ. ಈ ಹಂತದಲ್ಲಿ ಸಮರ್ಪಕ ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯಲು ಸಾಧ್ಯ’ ಎಂದು ವಾಗ್ಮಿ, ನಿವೃತ್ತ ಪ್ರಾಧ್ಯಾಪಕ ಡಾ.ಕೆ.ಪಿ.ಪುತ್ತೂರಾಯ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರೇರಣಾತ್ಮಕ ಕಾರ್ಯಕ್ರಮ- ‘ಸ್ಪೂರ್ತಿ’ಯಲ್ಲಿ ಅವರು ಮಾತನಾಡಿದರು. ಪೋಷಕರ ಕನಸನ್ನು ಈಡೇರಿಸುವುದೂ ವಿದ್ಯಾರ್ಥಿಗಳ ಕನಸಾಗಬೇಕು. ಪಠ್ಯದ ಜೊತೆ ಅನುಭವವೂ ನಮಗೆ ಶಿಕ್ಷಣ ನೀಡುತ್ತದೆ. ಅನುಭವವೂ ಒಳ್ಳೆಯ ಗುರು. ವಿದ್ಯಾರ್ಥಿ ಜೀವನವು ನಮ್ಮನ್ನು ಮಾನವನಾಗಿ ಪರಿವರ್ತಿಸುತ್ತದೆ ಎಂದರು. ‘ಯಶಸ್ಸಿಗೆ ಬೌದ್ಧಿಕ ಪ್ರಗತಿ ಅವಶ್ಯ. ಶಿಕ್ಷಣಕ್ಕೆ ಜಾತಿ ಇಲ್ಲ. ಜಾತಿಗೂ ಜ್ಞಾನಕ್ಕೂ ಸಂಬಂಧವಿಲ್ಲ. ಎಲ್ಲರೂ ಜ್ಞಾನ ಪಡೆಯಲು ಅರ್ಹರು. ಆದರೆ, ಕಲಿಕೆಯ ಹಸಿವು ಇರಬೇಕು. ಅದು ವ್ಯಕ್ತಿತ್ವ ವಿಕಸನಕ್ಕೂ ರಹದಾರಿಯಾಗುತ್ತದೆ’ ಎಂದರು. ಪ್ರಾಂಶುಪಾಲ ಪ್ರೋ ಎಂ ಸದಾಕತ್, ಉಪ ಪ್ರಾಂಶುಪಾಲೆ ಜಾನ್ಸಿ, ವಿವಿಧ ವಿಭಾಗಗಳ ಸಂಯೋಜಕರು ಹಾಗೂ ಡೀನ್‍ಗಳು ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ವೇಣುಗೋಪಾಲ್ ಕಾರ್ಯಕ್ರಮ ನಿರ್ವಹಿಸಿದರು.

Read More

ಮಿಜಾರು: ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ) ಕೃಷಿ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಬುಲ್ಲರ್ ಇಂಡಿಯಾ ಕಂಪನಿ ಜೊತೆ ಸೋಮವಾರ ಒಡಂಬಡಿಕೆಗೆ ಸಹಿ ಹಾಕಿತು. ಬುಲ್ಲರ್ ಇಂಡಿಯಾ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಗೋಖಲೆ ಹಾಗೂ ಕಂಪೆನಿಯ ವೆಂಕಟೇಶ್ ಮತ್ತು ರವೀಂದ್ರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕೃಷಿ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಶಶಿಕುಮಾರ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ ಸಮ್ಮುಖದಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಈ ಒಡಂಬಡಿಕೆ ಪ್ರಕಾರ ಬುಲ್ಲರ್ ಇಂಡಿಯಾ ಕಂಪೆನಿಯ ರೈಸ್ ಮಿಲ್ಲಿಂಗ್ (ಅಕ್ಕಿ ಗಿರಣಿ) ತಂತ್ರಜ್ಞಾನ ತರಬೇತಿ ಮತ್ತು ಪ್ರಮಾಣೀಕರಣದ ಕೋರ್ಸ್ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಒಪ್ಪಿಗೆ ಸೂಚಿಸಲಾಯಿತು. ಅಕ್ಕಿ ಗಿರಣಿ ತಂತ್ರಜ್ಞಾನ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಬುಲ್ಲರ್ ಇಂಡಿಯಾ ಕಂಪೆನಿಯು ತಾಂತ್ರಿಕ ಉಪನ್ಯಾಸ, ಕಾರ್ಯಾಗಾರ ಹಮ್ಮಿಕೊಳ್ಳುವುದು. ಆಹಾರ ಸಂಸ್ಕರಣಾ ತಂತ್ರಜ್ಞಾನದ ಕುರಿತು ಎಐಇಟಿ ವಿದ್ಯಾರ್ಥಿಗಳು ಹಾಗೂ ಮೇಳಗಳ ಸಂದರ್ಭದಲ್ಲಿ ಸಂವಾದ ನಡೆಸಲು ಬುಲ್ಲರ್…

Read More

ಕರಾವಳಿಯ ಬಹುಮುಖ ಪ್ರತಿಭೆ ನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಅವರ ಹೊಸ ಸಿನಿಮಾದ ರಿಲೀಸ್‌ ಡೇಟ್ ಅನೌನ್ಸ್‌ ಆಗಿದೆ. ಹೊಸ ಸಿನಿಮಾವೆಂದರೆ ಇದು ಪಕ್ಕಾ ರಾಜ್‌ ಬಿ ಶೆಟ್ಟಿ ಅಭಿಮಾನಿಗಳು ಇಷ್ಟಪಡುವ ಜಾನರ್‌ ವುಳ್ಳ ಚಿತ್ರ. ‘ಗರುಡ ಗಮನ ವೃಷಭ ವಾಹನʼ ಸಿನಿಮಾ ಹಿಟ್‌ ಆಗಿತ್ತು. ಸಿನಿಮಾದ ಕೆಂಟೆಂಟ್‌ ಭಿನ್ನವಾಗಿತ್ತು. ಕರಾವಳಿಯ ಹುಲಿವೇಷ, ವಾತಾವರಣ ಭಾಷಾ ಸೊಗಡು ಸಿನಿ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಇದೇ ತಂಡವನ್ನಿಟ್ಟುಕೊಂಡು ರಾಜ್‌ ಬಿ ಶೆಟ್ಟಿ ಮತ್ತೊಂದು ಸಿನಿಮಾವನ್ನು ಅನೌನ್ಸ್‌ ಮಾಡುವುದರ ಬಗ್ಗೆ ಇತ್ತೀಚೆಗಷ್ಟೇ ಹೇಳಿದ್ದರು. ರಾಜ್‌ ಬಿ ಶೆಟ್ಟಿ ಅವರ ʼ ಲೈಟರ್ಸ್ ಬುದ್ಧ ಫಿಲ್ಮ್ʼ ʼ ಅಗಸ್ತ್ಯ ಫಿಲ್ಮ್ಸ್ʼ ಅವರೊಂದಿಗೆ ಜಂಟಿಯಾಗಿ ಬರುತ್ತಿರುವ ಸಿನಿಮಾಕ್ಕೆ “ಟೋಬಿ “ ಟೈಟಲ್‌ ಇಡಲಾಗಿದೆ. ಪೋಸ್ಟರ್‌ ನಲ್ಲಿ ಮೊದಲು ತಿಳಿಸಿದಂತೆ ಇದೊಂದು ಆ್ಯಕ್ಷನ್‌ ಜಾನರ್‌ ವುಳ್ಳ ಸಿನಿಮಾವಾಗಿರಲಿದೆ. ʼಟೋಬಿ” ಸಿನಿಮಾದ ಟೈಟಲ್‌ ನ್ನು ಈ ಹಿಂದೆಯೇ ಫಿಕ್ಸ್‌ ಮಾಡಲಾಗಿತ್ತು. ಇದೀಗ ಸಿನಿಮಾದ ರಿಲೀಸ್‌ ಡೇಟ್‌ ನ್ನು ರಿವೀಲ್‌…

Read More

ಯಕ್ಷಗಾನದಲ್ಲಿ ಮಹಿಳೆಯರು, ಮಕ್ಕಳು ತೊಡಗಿಕೊಳ್ಳಬೇಕು. ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹಿಳಾ ಘಟಕ ಕೆಲಸ ಮಾಡುವಂತಾಗಲಿ. ಇದಕ್ಕೆ ಪ್ರತೀ ವರ್ಷ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಐದು ಲಕ್ಷ ದೇಣಿಗೆಯನ್ನು ನೀಡುವುದಾಗಿ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ತಿಳಿಸಿದರು. ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಕೇಂದ್ರೀಯ ಮಹಿಳಾ ಘಟಕದ “ಪ್ರಮುದಾ ಪ್ರಭಾ” ವಾರ್ಷಿಕ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಟ್ರಸ್ಟ್ ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಮಹಿಳಾ ಘಟಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಮಹಿಳಾ ಘಟಕ ಇನ್ನಷ್ಟು ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ ಎಂದರು. ಇನ್ನೋರ್ವ ಮುಖ್ಯ ಅತಿಥಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ, ಟ್ರಸ್ಟ್ ನ ಪ್ರಧಾನ ಸಂಚಾಲಕ ಐಕಳ ಹರೀಶ್ ಶೆಟ್ಟಿ ಮಾತನಾಡಿ ಮಹಿಳಾ ಘಟಕವು ಪಟ್ಲ…

Read More

ಬಂಟರ ಸಂಘದ ಏಳಿಗೆಗಾಗಿ ಶ್ರಮಿಸಲು ಬದ್ಧನಾಗಿದ್ದು, ಒಳ್ಳೆಯ ಕಾರ್ಯದ ವಿಚಾರದಲ್ಲಿ ಯಾರೂ ಕೂಡಾ ತೊಂದರೆ ಕೊಡಬಾರದು ಎಂದು ಜಿಲ್ಲಾಧ್ಯಕ್ಷ ಬಿ.ಡಿ ಜಗದೀಶ್ ರೈ ಅಭಿಪ್ರಾಯಪಟ್ಟರು. ಮೂರ್ನಾಡು ಹೋಬಳಿ ಬಂಟರ ಸಂಘದ ವತಿಯಿಂದ ಎರಡು ದಿನಗಳ ಕಾಲ ಇಲ್ಲಿನ ಕಾಲೇಜು ಮೈದಾನದಲ್ಲಿ ನಡೆದ ‘ಸ್ವಜಾತಿ ಬಂಧುಗಳ ಸಮ್ಮಿಲನ – 2023’ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಂಟರ ಸಂಘ ಹಾಗೂ ಸಮುದಾಯದ ಅಭಿವೃದ್ಧಿ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಮುಂದಿನ ದಿನದಲ್ಲಿ ಒಂದೊಂದಾಗಿ ಕಾರ್ಯರೂಪಕ್ಕೆ ತರಲಾಗುವುದು. ಮುಖ್ಯವಾಗಿ ಬಂಟರ ಭವನ ನಿರ್ಮಾಣ ಕಾರ್ಯವನ್ನು ಶ್ರೀಘ್ರದಲ್ಲೇ ಆರಂಭಿಸಬೇಕೆಂಬ ಇರಾದೆ ಇದೆ. ಯಾರು ಕೂಡ ವಿನಾಕಾರಣ ಅಡ್ಡಗಾಲು ಹಾಕಬಾರದೆಂದು ಮನವಿ ಮಾಡಿದರು. ಜಿಲ್ಲಾ ಬಂಟರ ಶಾಂತಿ ಧಾಮಕ್ಕೆ ಸುಂದರ ರೂಪ ನೀಡಲಾಗಿದೆ. ಮುಂದೆ ಪ್ರತಿಭಾ ಪುರಸ್ಕಾರ, ಸಮುದಾಯದ ಸಾಧಕರನ್ನು ಗುರುತಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಸಮುದಾಯದವರ ಏಳಿಗೆಗಾಗಿ ಬಂಟರ ಸಂಘ ಸದಾ ಬೆಂಬಲವಾಗಿರುತ್ತದೆ. ಎಲ್ಲಾ ಹೋಬಳಿಯಲ್ಲೂ ಸಂಘದ ಘಟಕ ಆರಂಭಿಸಿ, ಕಾರ್ಯಚಟುವಟಿಕೆಯಿಂದ ಕೂಡಿರುವಂತೆ ಕಾಳಜಿ ವಹಿಸಬೇಕು. ಸಮುದಾಯದ…

Read More

“ಬಂಟರು ಯಾನೆ ನಾಡವರನ್ನು ಪ್ರವರ್ಗ 3(ಬಿ)ಯಿಂದ ಕೈಬಿಟ್ಟು 2(ಎ)ಗೆ ಸೇರಿಸಬೇಕು, ಬಂಟರ ನಾಡವರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬಂಟರ ಯಾನೆ ನಾಡವರ ಸಮಾಜ ಅಧ್ಯಯನ ಕೇಂದ್ರವನ್ನು ಸ್ಥಾಪಿಸಬೇಕು. ಈ ಕುರಿತು ರಾಜ್ಯ ಸರಕಾರ ಕೂಡಲೇ ಕಾರ್ಯಪ್ರವೃತ್ತರಾಗಿ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಬಂಟರ ಸಮಾಜಕ್ಕೆ ನ್ಯಾಯ ಒದಗಿಸಬೇಕು” ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, “ಬಂಟ ಸಮಾಜದಲ್ಲಿ 40% ಜನರು ಬಡತನ ರೇಖೆಗಿಂತ ಕೆಳಗಿದ್ದು ಕಷ್ಟ-ಕಾರ್ಪಣ್ಯಗಳೊಂದಿಗೆ ನಿತ್ಯ ದುಖಃದ ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ನಾವು ಹಲವು ಬಾರಿ ಮನವಿ ಮಾಡಿದ್ದರೂ ಈ ಹಿಂದಿನಿಂದ ಆಡಳಿತದಲ್ಲಿದ್ದ ಎಲ್ಲಾ ಸರಕಾರಗಳು ಯಾವುದೇ ಗಮನ ಕೊಡಲಿಲ್ಲ. ನಮ್ಮ ಬಗ್ಗೆ ತಾರತಮ್ಯ ಧೋರಣೆಯನ್ನು ಅನುಸರಿಸಿದ ಕಾರಣ ವಿದ್ಯೆ, ಉದ್ಯೋಗ, ರಾಜಕೀಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಬಂಟ ಸಮಾಜ ಬಾಂದವರು ಅವಕಾಶ ವಂಚಿತರಾಗುವಂತಾಗಿದೆ. ದೇಶದ, ರಾಜ್ಯದ ಹಾಗೂ ಜಿಲ್ಲೆಗಳ ಅಭಿವೃದ್ಧಿಯಲ್ಲಿ…

Read More

ಪ್ರೀತಿ, ವಿಶ್ವಾಸ ತುಳುವರ ಜೀವಾಳ. ತುಳುವರಿಗೆ ತುಳು ಸಂಸ್ಕೃತಿಯನ್ನು ನೆನಪಿಸುವ, ಜಾಗೃತಿ ಮೂಡಿಸುವ‌ ಜತೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನಗಳ ಆವಶ್ಯಕತೆ ಇದೆ. ತುಳುವಿಗೆ ಸ್ವಾದವಿದೆ, ಸೆಳೆತವಿದೆ. ತುಳುವರು ಔದಾಸೀನ್ಯವನ್ನು ಬಿಡಬೇಕು. ಮಾತೃಭಾಷೆಯಲ್ಲಿ ಮಾತನಾಡಲು ನಾಚಿಕೆ ಬೇಡ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಒಡಿಯೂರು ಸಂಸ್ಥಾನದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ, 23ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದರು. ಅಜ್ಜಿ ಕಥೆಯಲ್ಲಿ ಜೀವನ ಸಾರವನ್ನು ನೀಡುವ ನೈತಿಕ ಮೌಲ್ಯಗಳು ತುಂಬಿದೆ. ಭಾಷೆ – ಸಂಸ್ಕೃತಿ ಒಂದು ನಾಣ್ಯದ ಎರಡು ಮುಖಗಳು. ಹಿಂದಿನ ಆಚಾರ ವಿಚಾರಗಳನ್ನು ಉಳಿಸುವ ನಿಟ್ಟಿನಲ್ಲಿ ಯುವ ಶಕ್ತಿ ಪ್ರಯತ್ನಿಸಬೇಕು. ಮನೆಯಲ್ಲಿ ಬದಲಾವಣೆಯಾದಾಗ ದೇಶ ಬದಲಾಗಲು ಸಾಧ್ಯ ಎಂದರು. ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಡಾ| ವಸಂತ ಕುಮಾರ ಪೆರ್ಲ ಮಾತನಾಡಿ, ಕೃಷಿ ಪ್ರಧಾನವಾದ ತುಳುನಾಡು ಕೈಗಾರಿಕೀಕರಣದತ್ತ…

Read More