Author: admin

ಪ್ರತೀ ವರ್ಷ ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ಕ್ರೆಡಿಟ್ ಸೊಸೈಟಿಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಬ್ಯಾಂಕೋ ಬ್ಲೂ ರಿಬ್ಬನ್‘ ಪ್ರಶಸ್ತಿಯು ಮುಂಬಯಿ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ನ್ನು ಗುರುತಿಸಿ 2022-23 ರ ಸಾಲಿನ ಠೇವಣಿ ವರ್ಗದ ಅಡಿಯಲ್ಲಿ ಈ ಪ್ರಶಸ್ತಿ ಲಭಿಸಿದೆ. ಬ್ಯಾಂಕೋ 1990 ರಲ್ಲಿ ಸ್ಥಾಪಿಸಲಾದ ಏವಿಎಸ್ ಪಬ್ಲಿಕೇಷನ್ ನ ಅತ್ಯಂತ ಪ್ರಸಿದ್ದ ಮತ್ತು ವಿಶ್ವಾಸಾರ್ಹ ಬಿಎಫ್ ಎಸ್ ಬಿ (ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮಾ ವಲಯ) ಪ್ರಕಾಶನ ಬ್ರಾಂಡ್ ಆಗಿದೆ. ಬ್ಯಾಂಕೋ ಬ್ಲೂ ರಿಬ್ಬನ್ ಎಲ್ಲಾ ಸಹಕಾರಿ ಬ್ಯಾಂಕ್ ಗಳು ಮತ್ತು ಕ್ರೆಡಿಟ್ ಸೊಸೈಟಿಗಳಿಗೆ ರಾಷ್ಟ್ರ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾಗಿದೆ. ಇಂತಹ ವೇದಿಕೆಯಲ್ಲಿ ಬಂಟ ಸಮಾಜದ ಪ್ರತಿಷ್ಠಿತ ಮಾತೃಭೂಮಿ ಕ್ರೆಡಿಟ್ ಸೊಸೈಟಿಯ ಆರ್ಥಿಕ ಸೇವಾ ಕಾರ್ಯಗಳನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಅಭಿನಂದಿಸಿದೆ. ಈ ಹಿಂದೆಯೂ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಗೆ 4 ಬಾರಿ ಈ ಪ್ರಶಸ್ತಿಯು ಲಭ್ಯವಾಗಿರುವುದಲ್ಲದೇ, ಈ…

Read More

ವಿದ್ಯಾಗಿರಿ (ಮೂಡುಬಿದಿರೆ): ‘ಯಾವುದೇ ಸೃಜನಶೀಲ ಕೆಲಸ ಸಾಕಾರಗೊಳ್ಳಲು ಬರಹವೇ ಬುನಾದಿ’ ಎಂದು ಜೀ ಕನ್ನಡ ವಾಹಿನಿಯ ನಿರ್ದೇಶಕ (ಫಿಕ್ಶನ್ ಪ್ರೋಗ್ರಾಮಿಂಗ್) ಸುಧೀಂದ್ರ ಭಾರದ್ವಾಜ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಳ್ವಾಸ್ ಫಿಲಂ ಸೊಸೈಟಿ ಹಮ್ಮಿಕೊಂಡ ‘ಸೃಜನಶೀಲತೆಯ ಸಂಕಿರಣ- ಜೀ ಕನ್ನಡ ವಾಹಿನಿ ಜೊತೆ ಕಾರ್ಯಾಗಾರ’ದಲ್ಲಿ ಅವರು ಮಾತನಾಡಿದರು. ಒಂದು ಉತ್ತಮ ಸಿನಿಮಾ, ವಿಡಿಯೊ, ಫಿಕ್ಶನ್, ರಿಯಾಲಿಟಿ ಷೋ ಯಾವುದೇ ಇದ್ದರೂ, ಅದರ ಚಿತ್ರಕತೆ ಬರೆದು ರೂಪಿಸಿದಾಗ ಮಾತ್ರ ಗುಣಮಟ್ಟದಲ್ಲಿ ನಿರ್ಮಾಣಗೊಳ್ಳಲು ಸಾಧ್ಯ. ಉತ್ತಮ ಬರಹದ ಮೂಲಕ ಉತ್ತಮವಾಗಿ ಸೃಜಿಸಬಹುದು ಎಂದರು. ಮನೋರಂಜನಾ ಮಾಧ್ಯಮದಲ್ಲಿ ಕೆಲಸ ಮಾಡುವವರು ವಿದ್ಯಾರ್ಥಿಗಳನ್ನು ಭೇಟಿ ಮಾಡಲು ಹೆಚ್ಚು ಇಷ್ಟಪಡುತ್ತೇವೆ. ಏಕೆಂದರೆ, ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ನಮ್ಮ ಓಟವನ್ನು ನಾವು ನಿಮಗೆ ಒಪ್ಪಿಸಬೇಕಾಗಿದೆ ಎಂದರು. ಸೃಜನಶೀಲ ಮಾಧ್ಯಮದಲ್ಲಿ ಕೆಲಸ ಮಾಡುವವರೆಲ್ಲ ಹುಚ್ಚರಂತೆ. ಹೊಸತನಕ್ಕಾಗಿ ಹಂಬಲಿಸುತ್ತಾ, ಕೆಲಸದಲ್ಲೇ ತನ್ಮಯ, ತಲ್ಲಿನ ಎಲ್ಲವೂ ಆಗಬೇಕು. ಆಗಲೇ ಯಶಸ್ಸು ಅರಸಿ ಬರಲು ಸಾಧ್ಯ. ನೀವೆಲ್ಲ ಬರಹದಲ್ಲಿ…

Read More

ಉಡುಪಿ ಅಜ್ಜರಕಾಡು ಸಾಯಿ ಹರ್ಷ ಪರ್ಲ್ ಔರಾ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡ ಮಹಾಗಣಪತಿ ಸೌಹಾರ್ದ ಸೇವಾ ಸಹಕಾರಿ ಸಂಘ ಇದರ ಉದ್ಘಾಟನೆ ಫೆ.12ರಂದು ನಡೆಯಿತು. ಸಂಘದ ಅಧ್ಯಕ್ಷ ಪ್ರಸಾದ್ ರೈ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಎಳ್ಳಾರೆ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಅರ್ಚಕ ಪುಟ್ಟಣ್ಣ ಅಡಿಗ, ಶ್ರೀಕ್ಷೇತ್ರ ಮೂಡುಸಗ್ರಿ ಇಲ್ಲಿನ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲು, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಕೊಡವೂರು ಯುವ ಬಂಟರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಉಡುಪಿ ದೈವರಾಧಕರ ಸಂಘದ ಅಧ್ಯಕ್ಷ, ಸಂಘದ ನಿರ್ದೇಶಕ ವಿನೋದ್ ಶೆಟ್ಟಿ ಸ್ವಾಗತಿಸಿ, ನವ್ಯ ಪುತ್ತೂರು ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ಸಚಿನ್ ವಂದಿಸಿದರು.

Read More

ಭಾರತವು ಕೃಷಿ ಪ್ರಧಾನವಾದ ದೇಶವಾಗಿದ್ದು ಇಂದಿನ ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯವಿದೆ ಎಂದು ನಿವೃತ್ತ ಸುರತ್ಕಲ್ ಕೃಷಿ ಅಧಿಕಾರ ಅಬ್ದುಲ್ ಬಶೀರ್ ನುಡಿದರು. ಅವರು ಬಂಟರ ಸಂಘ ಸುರತ್ಕಲ್ ಲಯನ್ಸ್ ಕ್ಲಬ್ ಸುರತ್ಕಲ್ ಮತ್ತು ಜೇಸಿಐ ಸುರತ್ಕಲ್ ಸಹಯೋಗದಲ್ಲಿ ಬಂಟರ ಭವನ ಸುರತ್ಕಲ್ ನಲ್ಲಿ ನಡೆದ ಸಾವಯವ ಕೃಷಿಕರ ಮತ್ತು ಗ್ರಾಹಕರ ಮುಖಾಮುಖಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಈಗೀನ ಕಾಲಘಟ್ಟದಲ್ಲಿ ನಮ್ಮ ಆರೋಗ್ಯದ ಹಿತದೃಷ್ಟಿಯಿಂದ ಸಾವಯವ ಕೃಷಿಯ ಅಗತ್ಯವಿದೆ. ಗ್ರಾಹಕರು ನೇರವಾಗಿ ಕೃಷಿಕರಿಂದ ಆಹಾರದ ಪದಾರ್ಥಗಳನ್ನು ಖರೀದಿ ಮಾಡಿದಲ್ಲಿ ಕೃಷಿಕರಿಗೆ ಪ್ರಯೋಜನವಾಗಲಿದೆ ಎಂದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೃಷಿಕರಾದ ಎಕ್ಕಾರು ಸದಾಶಿವ ಶೆಟ್ಟಿ, ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷ ಜಯಂತ ಶೆಟ್ಟಿ ತಡಂಬೈಲ್, ಜೇಸಿಐ ಸುರತ್ಕಲ್ ಅಧ್ಯಕ್ಷೆ ಜ್ಯೋತಿ ಪಿ.ಶೆಟ್ಟಿ, ಬಂಟರ ಸಂಘ ಸುರತ್ಕಲ್ ನಿಕಟಪೂರ್ವ ಅಧ್ಯಕ್ಷ ಸುಧಾಕರ್ ಪೂಂಜಾ, ಕೃಷಿ ಸಮಿತಿ ಸಂಚಾಲಕ ಮೆಬೈಲ್…

Read More

ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ, ಸಮಾಜಸೇವಕ ಡಾ. ಹರ್ಷ ಕುಮಾರ್ ರೈ ಮಾಡವು ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳು :- ನಿಕಟಪೂರ್ವ ಅಧ್ಯಕ್ಷರು: ಶಶಿರಾಜ್ ರೈ, ಅಧ್ಯಕ್ಷರು: ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿ (ಆಡಳಿತ) : ರಂಜಿನಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ (ಸೇವೆ ಮತ್ತು ಕಾರ್ಯಕ್ರಮ) : ಪ್ರಜ್ವಲ್ ರೈ ಸರ್ವೆ, ಕೋಶಾಧಿಕಾರಿ : ಶಿವಶ್ರೀ ರಂಜನ್ ರೈ, ಜೊತೆ ಕಾರ್ಯದರ್ಶಿ : ಶುಭ ರೈ ನಿಮ್ಮ ಮುಂದಿನ ಬಂಟರ ಸಂಘದ ಸಂಘಟನಾ ಪ್ರಯಾಣ ಸುಸೂತ್ರವಾಗಿ ನಡೆಯಲಿ ಹಾಗೂ ಯಶಸ್ಸು ನಿಮ್ಮದಾಗಲಿ ಎಂದು ಬಂಟ್ಸ್ ನೌ ಮಾಧ್ಯಮ ಸಂಸ್ಥೆ ಶುಭ ಹಾರೈಸುತ್ತದೆ.

Read More

ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಶೇಡಿ ಎಂಬಲ್ಲಿ ವಾಸವಿರುವ ಕೃಷ್ಣ ಭಂಡಾರಿ ಮತ್ತು ಗುಣವತಿ ದಂಪತಿಗಳ ಕುಟುಂಬ ಆರ್ಥಿಕವಾಗಿ ತೀರಾ ದುಸ್ಥಿತಿಯಲ್ಲಿದ್ದು ಕೂಲಿ ಕೆಲಸದ ಆದಾಯವೇ ಇವರಿಗೆ ಆಧಾರ. ಈ ದಂಪತಿಗಳ ಮಕ್ಕಳಿಬ್ಬರೂ ಪ್ರತಿಭಾವಂತರು. ಓದಿ ಸಾಧನೆ ಮಾಡಬೇಕೆಂಬ ತುಡಿತ ಮಕ್ಕಳದಾದರೆ, ಕಲಿಕೆಯಲ್ಲಿ ಮುಂದಿರುವ ಕುಟುಂಬದ ಕುಡಿಗಳನ್ನು ಓದಿಸಿ ಉನ್ನತ ಸ್ಥಾನಕ್ಕೇರಿಸಬೇಕು. ನಾವು ಅನುಭವಿಸುತ್ತಿರುವ ಸಂಕಷ್ಟ, ಸಮಸ್ಯೆ ,ನೋವು ತಮ್ಮ ಮಕ್ಕಳಿಗೆ ಆಗಬಾರದೆಂಬ ಮಹದಾಸೆ ಹೆತ್ತವರದು. ಪುತ್ರ ಪವನ್ ಇಂಜಿನಿಯರಿಂಗ್, ಪುತ್ರಿ ಸ್ಪಂದನ ಪಿಯುಸಿ ವಿಧ್ಯಾಬ್ಯಾಸ ಮಾಡುತ್ತಿದ್ದು, ಡಿಸ್ಟಿಂಕ್ಷನ್ ಸಾಧನೆ ಮಾಡುತ್ತಿರುವ ಇವರಿಗೆ ಕುಟುಂಬದ ಆರ್ಥಿಕ ಸಂಕಷ್ಟ ಅಡ್ಡಿಯಾಗುತ್ತಿದೆ. ಭವಿಷ್ಯ ಮಸುಕಾಗುತ್ತಿದೆ. ಇವರುಗಳು ವಿಧ್ಯಾಬ್ಯಾಸ ಕುಂಠಿತಗೊಳ್ಳಬಾರದೆಂಬ ಆತಂಕದ ಮಧ್ಯೆ ಯಾವುದೇ ದಾರಿ ಕಾಣದೇ ಮಕ್ಕಳ ಭವಿಷ್ಯದ ಆಶಾಭಾವನೆಯಿಂದ ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘದ ಮೂಲಕ ಸಹಾಯ ಹಸ್ತವನ್ನು ಯಾಚಿಸಿದ್ದಾರೆ. ಇತರರ ಸಂಕಷ್ಟಕ್ಕೆ ಸದಾ ಸ್ಪಂದಿಸುವ ಸಹೃದಯಿ ಬಂಟ ಬಂಧುಗಳಾದ ತಾವು ತಮ್ಮ ಕೈಲಾದ ಸಹಾಯವನ್ನು ಮಾಡುವಂತೆ ಈ ಮೂಲಕ ಕಳಕಳಿಯ…

Read More

ಸಿ.ಎ ಹಾಗೂ ಸಿ.ಎಸ್ ಫೌಂಡೇಶನ್ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ಅಗ್ರಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ. ಇಲ್ಲಿನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸಂಸ್ಥೆಗಳು ನವೆಂಬರ್ ಹಾಗೂ ಡಿಸೆಂಬರ್ 2023 ರಲ್ಲಿ ನಡೆಸಿದ ಸಿ.ಎ ಹಾಗೂ ಸಿ.ಎಸ್ ಫೌಂಡೇಶನ್ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಹೃತೀಕ್ ಎಂ.( ಸಿ.ಎ -237), ಆಯುಷ್ (ಸಿ.ಎ-236), ದೀಕ್ಷಾ (ಸಿ.ಎ-223), ಸಮೃದ್ಧಿ (ಸಿ.ಎ-218), ಅಮೋಘ (ಸಿ.ಎ-202), ವೈಷ್ಣವಿ (ಸಿ.ಎಸ್ -137), ಸಹನಾ (ಸಿ.ಎಸ್-118), ಭೂಮಿಕಾ (ಸಿ.ಎಸ್-112), ಅಂಕಗಳೊಂದಿಗೆ ಸಿ.ಎ ಹಾಗೂ ಸಿ.ಎಸ್ ಫೌಂಡೇಶನ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದುವುದರ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಳೆದ ಹಲವು ವರ್ಷಗಳಿಂದ ಸ್ವರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ಬಂದಿದ್ದು ಅನೇಕ ವಿದ್ಯಾರ್ಥಿಗಳು ಫೌಂಡೇಶನ್ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಮುಂದಿನ ಹಂತದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ…

Read More

ಇಂದು ಬಂಟರು ಕೇವಲ ಹೋಟೆಲ್ ಉದ್ಯಮಕ್ಕೆ ಸೀಮಿತರಾಗಿಲ್ಲ. ಬಂಟರು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದುವರಿಯುತ್ತಿದ್ದಾರೆ. ಕ್ರೀಡೆಯಲ್ಲಿ ಜಯ ಅಪಜಯ ಮುಖ್ಯವಲ್ಲ. ಇಲ್ಲಿ ಎಲ್ಲಾ ವಿಧದಲ್ಲೂ ಅಂದರೆ ತಳಮಟ್ಟದಲ್ಲಿ ಶ್ರಮಿಸಿದವರ ಯೋಗದಾನವನ್ನು ಪರಿಗಣಿಸಬೇಕಾಗುತ್ತದೆ. ಯಶಸ್ಸಿನಲ್ಲಿ ಎಲ್ಲರ ಪಾಲು ಕಾರಣವಾಗುತ್ತದೆ ಎಂದು ಶಾಸಕ ಹಿತೇಂದ್ರ ಠಾಕೂರ್ ನುಡಿದರು. ಅವರು ಮೀರಾ ದಹಾಣೂ ಬಂಟ್ಸ್ ಇದರ ವಾರ್ಷಿಕ ಕ್ರೀಡಾ ಉತ್ಸವದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಕ್ರೀಡೆ ಬದುಕಿನ ಏಕತೆಯನ್ನು ಮೂಡಿಸುತ್ತದೆ. ಕ್ರೀಡೆಯು ಸ್ಪರ್ಧಿಗಳ ಮನೋಕಾಮನೆಯ ಮಹಾದಾಸೆಯನ್ನು ಪೂರೈಸುವ ಶ್ರಮದ ಅಂಗಳವಾಗಿದೆ. ಬಂಟ ಕ್ರೀಡಾಳುಗಳು ಕೇವಲ ತನ್ನ ಸಮಾಜದಲ್ಲಿ ಮಾತ್ರವಲ್ಲದೇ ಜಯ ಅಪಜಯದ ಯಶಸ್ಸನ್ನು ಕ್ರಮೇಣವಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾಣುವಂತಾಗಬೇಕು ಮೀರಾ ದಹಾಣೂ ಬಂಟ್ಸ್ ನ ಎಲ್ಲಾ ಬಂಟ ಬಾಂಧವರ ವೇದಿಕೆಗೆ ನನ್ನ ಸಂಪೂರ್ಣ ಸಹಕಾರ ಸದಾ ಲಭ್ಯ ಎಂದು ಭಾಗವಹಿಸಿದ ಬಂಟ ಕ್ರೀಡಾಪಟುಗಳಿಗೆ ಯಶಸ್ಸನ್ನು ಕೋರಿದರು. ಸಂಸ್ಥೆಯ ಗೌ. ಅಧ್ಯಕ್ಷರಾದ ವಿರಾರ್ ಶಂಕರ್ ಶೆಟ್ಟಿಯವರು ಪ್ರಸ್ತಾವಿಕವಾಗಿ ಮಾತನಾಡುತ್ತಾ 2009 ರಲ್ಲಿ ಸ್ಥಾಪನೆಗೊಂಡ…

Read More

ಮಹಾಸಿಂಹ ಮೂವೀಸ್ ಲಾಂಛನದಲ್ಲಿ ತಯಾರಾದ ದೀಕ್ಷಿತ್ ಶೆಟ್ಟಿ ಅಭಿನಯದ ಕೆಟಿಎಂ ಕನ್ನಡ ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಟಿ ಉಷಾ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕನ್ನಡದ ದಿಯಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೇರೆ ಬೇರೆ ತಾಣಗಳಲ್ಲಿ ಕೆಟಿಎಂ ಸಿನಿಮಾಕ್ಕೆ ಚಿತ್ರೀಕರಣ ನಡೆದಿದೆ ಎಂದು ಉಷಾ ಭಂಡಾರಿ ತಿಳಿಸಿದರು. ಕೆಟಿಎಂ ಸಿನಿಮಾ ಟೈಟಲ್ ನಿಂದ ಗಮನ ಸೆಳೆಯುತ್ತಿದೆ. ಹಾಡುಗಳ ಮೂಲಕ ಮೋಡಿ ಮಾಡುತ್ತಿರುವ ಕೆಟಿಎಂ ಸಿನಿಮಾದ ಟ್ರೇಲರ್ ಇತ್ತೀಚೆಗೆ ಅನಾವರಣಗೊಂಡಿದ್ದು ಪ್ರೇಕ್ಷಕರಲ್ಲಿ ಸಿನಿಮಾದ ಕುರಿತು ಆಸಕ್ತಿ ಮೂಡಿದೆ. ಒಂದು ಸುಂದರ ಪ್ರೇಮಕಥೆ. ಈ ಕಥೆಯಲ್ಲಿ ಒಬ್ಬ ನಾಯಕ ಇಬ್ಬರು ನಾಯಕಿಯರು. ಪ್ರೀತಿಗಾಗಿ ಪರಿತಪಿಸುವ ನಾಯಕ. ಅವನಂದ್ರೆ ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುವ ನಾಯಕಿಯರು. ನಾಯಕನ ಜೀವನದಲ್ಲಿ ನಡೆದ ಏರಿಳಿತಗಳು ಕೆಟಿಎಂ ಸಿನಿಮಾದ ಹೈಲೆಟ್ಸ್. ದೀಕ್ಷಿತ್ ಶೆಟ್ಟಿಗೆ ಜೋಡಿಯಾಗಿ ಸಂಜನಾ ದಾಸ್ ಹಾಗೂ ಕಾಜಲ್ ಕುಂದರ್ ಅಭಿನಯಿಸಿದ್ದಾರೆ. ಉಷಾ…

Read More

ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಮಾದರಿ ಬ್ರಹ್ಮಕಲಶೋತ್ಸವಾಗಿ ಆಗಬೇಕೆಂಬ ನಿಟ್ಟಿನಲ್ಲಿ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಕರ ಸೇವೆಯಲ್ಲಿ ಭಾಗಿಯಾಗುತ್ತಿದ್ದಾರೆ. ದೇವಸ್ಥಾನಕ್ಕೆ ಬರುವ ಸಂಪರ್ಕ ರಸ್ತೆ ಸಂಪೂರ್ಣವಾಗಿ ಅಭಿವೃದ್ಧಿಯಾಗಿದೆ. ಮುಖ್ಯ ರಸ್ತೆಯಲ್ಲಿ ಮಹಾದ್ವಾರ ನಿರ್ಮಾಣವಾಗಿದೆ. ವಲ್ಮೀಕದಲ್ಲಿ ನೆಲೆನಿಂತ ದೇವರು ಶ್ರೀಸುಬ್ರಹ್ಮಣ್ಯ ಸ್ವಾಮಿ: ಪ್ರಕೃತಿ ಸೌಂದರ್ಯದ ನೆಲೆ ಬೀಡು, ತಂಪು ತಂಪು ಹಸಿರಿನಿಂದ, ಬೆಟ್ಟ, ಗುಡ್ಡ ಬಯಲುಗಳಿಂದ ಸಮೃದ್ಧವಾದ, ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದಲ್ಲಿ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನವಿದೆ. ಇಲ್ಲಿ ಗುಹೆಯ ರೂಪದಲ್ಲಿದ್ದ ಸ್ಥಳದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರನ್ನು ಆರಾಧಿಸುತ್ತಾ ಬರುತ್ತಿರುವ ಪುಣ್ಯ ತಾಣ. ಇಲ್ಲಿ ವಲ್ಮೀಕ(ಹುತ್ತ)ದ ರೂಪದಲ್ಲಿ ನೆಲೆ ನಿಂತ ಶ್ರೀ ಸುಬ್ರಹ್ಮಣ್ಯ ದೇವರ ದೇವಸ್ಥಾನ ಪರಮ ಪವಿತ್ರವಾಗಿದ್ದು, ಭಕ್ತರ ಶ್ರದ್ಧಾ ಭಕ್ತಿ, ಶಕ್ತಿಯ ತಾಣವಾಗಿದೆ. ತನ್ನ ಕಾರಣಿಕ ಶಕ್ತಿಯಿಂದ ನಂಬಿ ಬಂದ ಭಕ್ತ ಜನರಿಗೆ ತಾಯಿ ಸಮಾನ ನೆಲೆಯಾಗಿದೆ.…

Read More