Author: admin

ಯುವಜನತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಹಾಗೂ ಸಾಧಿಸಲು ಲಿಯೋ ಕ್ಲಬ್ ಉತ್ತಮ ವೇದಿಕೆ ಎಂದು ಲಿಯೋ ಜಿಲ್ಲಾ ಅಧ್ಯಕ್ಷೆ ಡಾ. ರಂಜಿತಾ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಕುಲಾಯಿ ಬಿಡಿಎಸ್ ಪ.ಪೂ ಕಾಲೇಜಿನಲ್ಲಿ ನಡೆದ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಪ್ರಾಯೋಜಕತ್ವದ ನೂತನ ಲಿಯೋ ಕ್ಲಬ್ ಮಂಗಳೂರು ಕುಡ್ಲದ ಉದ್ಘಾಟನಾ ಕಾರ್ಯಕ್ರಮದಲ್ಲಿ ಲಿಯೋ ಸದಸ್ಯರಿಗೆ ಪದಪ್ರದಾನ ಮಾಡಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ಲಯನ್ಸ್ ಜಿಲ್ಲಾ ಗವರ್ನರ್ ಡಾ.ಮೆಲ್ವಿನ್ ಡಿಸೋಜ, ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಲಿಯೋ ಸಂಸ್ಥೆಯಡಿ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಐಎಎಸ್ ಐಪಿಎಸ್ ನಂತಹ ಉನ್ನತ ಮಟ್ಟದ ಹುದ್ದೆಗೆ ತಯಾರಿಗೊಳ್ಳಬೇಕು ಎಂದರು. ಲಿಯೋ ಕ್ಲಬ್ ಅಧ್ಯಕ್ಷರಾಗಿ ಚಂದಪ್ಪ, ಕಾರ್ಯದರ್ಶಿಯಾಗಿ ಪ್ರತಿಕ್, ಖಜಾಂಚಿಯಾಗಿ ನಿಖಿತ ಮತ್ತು ಸದಸ್ಯರಿಗೆ ಪದಪ್ರದಾನ ಮಾಡಲಾಯಿತು. ಲಿಯೋ ಕ್ಲಬ್ ಬ್ಯಾನರ್ ಹಾಗೂ ಲಿಯೋ ಅಂತಾರಾಷ್ಟ್ರೀಯ ಪ್ರಮಾಣ ಪತ್ರ ಬಿಡುಗಡೆಗೊಳಿಸಿ ಲಿಯೋ ಕ್ಲಬ್ ಗೆ ಹಸ್ತಾಂತರಿಸಲಾಯಿತು. ಪ್ರಾಂತ್ಯಾಧ್ಯಕ್ಷ ಚಂದ್ರಹಾಸ ರೈ, ಭಾರತಿ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷ ಆದರ್ಶ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲೆ…

Read More

ಡಿಸೆಂಬರ್ ತಿಂಗಳ 5 ನೇ ತಾರೀಖು ಮಂಗಳವಾರ ಮತ್ತು 6 ನೇ ತಾರೀಖು ಬುಧವಾರದಂದು ಉಡುಪಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೋಟ ವಿವೇಕ ವಿದ್ಯಾಲಯದ ಆವರಣದಲ್ಲಿ ಸಾಹಿತ್ಯ ಗೋಷ್ಠಿ, ವಿಚಾರ ಗೋಷ್ಠಿ, ಸನ್ಮಾನ ಹಾಗೂ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಡಿಸೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧಕ್ಷರು ನಾಡೋಜ ಡಾ. ಮಹೇಶ್ ಜೋಶಿ ಸಮ್ಮೇಳನಕ್ಕೆ ಚಾಲನೆ ‌ನೀಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಸಾಲಿಗ್ರಾಮ ಗುರು ನರಸಿಂಹ ದೇಗುಲದಿಂದ ಸಮ್ಮೇಳನಾ ಸ್ಥಳಕ್ಕೆ ತಾಯಿ ಭುವನೇಶ್ವರಿಯ ಜಯಕಾರದೊಂದಿಗೆ ಕನ್ನಡದ ‌ಕಹಳೆ ಮೊಳಗುತ್ತಾ ಮೆರವಣಿಗೆ ಸಾಗಲಿದೆ. ಈ ಸಮ್ಮೇಳನವು ಮುಂಬಯಿಯ ಹಿರಿಯ ಸಾಹಿತಿ ಶ್ರೀ ಬಾಬು ಶಿವ ಪೂಜಾರಿಯವರ ಅಧ್ಯಕ್ಷತೆಯಲ್ಲಿ ವಿಶೇಷವಾದ ಮೆರುಗನ್ನು ಕಾಣಲಿದೆ. ಡಿಸೆಂಬರ್ 6 ರಂದು ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಉಡುಪಿ ಜಿಲ್ಲಾ ಹಿರಿಯ ಕಿರಿಯ ಕವಿಗಳಿಂದ ನಡೆಯಲಿರುವ ಕವಿ ಕಲರವ ಕವಿಗೋಷ್ಠಿಯಲ್ಲಿ ಮುಂಬಯಿ ಸಾಹಿತಿ ಲತಾ ಸಂತೋಷ…

Read More

ಮುಂಬಯಿ, ಸೆ.07: ಉಡುಪಿ ಹಿರಿಯಡ್ಕ ಇಲ್ಲಿನ ಕೊಂಡಾಡಿ ನಿವಾಸಿ ಶಾರದಾ ಯು.ಶೆಟ್ಟಿ (85.) ಕಳೆದ ಸೋಮವಾರ ವೃದ್ಧಾಪ್ಯ ಸಹಜತೆಯಿಂದ ತನ್ನ ಸ್ವನಿವಾಸದಲ್ಲಿ ನಿಧನರಾದರು. ಕಟಪಾಡಿ ಅಚಾಡ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮೂಡಬೆಟ್ಟು ಗುತ್ತು ಕಟಪಾಡಿ ದಿವಂಗತ ಉಮಾನಾಥ ಶೆಟ್ಟಿ ಇವರ ಧರ್ಮಪತ್ನಿಯಾಗಿದ್ದು ಸಮಾಜ ಸೇವೆಯಲ್ಲಿ ತೊಡಗಿಸಿದ್ದರು. ಮೃತರು ಪ್ರೇಮನಾಥ ಶೆಟ್ಟಿ (ಜೋಗೇಶ್ವರಿ-ಮುಂಬಯಿ), ವಿಶ್ವನಾಥ ಶೆಟ್ಟಿ, ಶ್ರೀನಾಥ್ ಶೆಟ್ಟಿ, ಅಮರನಾಥ ಶೆಟ್ಟಿ (ನಾಲ್ಕು ಸುಪುತ್ರರು) ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಬುಧವಾರ (ಸೆ.07) ಬೆಳಗ್ಗೆ 9 ಗಂಟೆಗೆ ಉಡುಪಿ ಹಿರಿಯಡ್ಕ ಕುಧಿ ಇಲ್ಲಿನ ಮಹಾಲಿಂಗೇಶ್ವರ ದೇವಸ್ಥಾನ ಕೊಂಡಾಡಿ ಸಮೀಪದ ಹತ್ತಿರ ನೆರವೇರಿಸಲ್ಪಟ್ಟಿತು.

Read More

ಬೆಂಗಳೂರಿನ ವಿವಿದೆಡೆ ಹಲವಾರು ಉದ್ಯಮಗಳನ್ನು ಸ್ಥಾಪಿಸಿ ಪ್ರತಿಷ್ಠಿತ “Xram Marketing Solution Pvt Ltd – Experiential Marketing Agency, Restaurant Chain – Coast by Chef Ashitha, Mangalore Sea Food Restaurant, Catering Service, Cha Angadi – Modern Tea outlet ಹೀಗೆ ವಿವಿಧ ಸಂಸ್ಥೆಗಳಲ್ಲಿ ಯಶಸ್ವಿಯಾಗಿ ಹಲವಾರು ದುಡಿಯುವ ಕೈಗಳಿಗೆ ಆಸರೆಯಾಗಿ ಜನ ಮನ್ನಣೆಯನ್ನು ಗಳಿಸಿದ ಪುತ್ತೂರಿನ ಪ್ರೀತಮ್ ಶೆಟ್ಟಿ ಅರಿಯಡ್ಕ ಹಾಗೂ ಮೊರಂಗಲ್ಲು ಆಶಿತಾ ಶೆಟ್ಟಿ ದಂಪತಿಗಳಿಗೆ ಯಶಸ್ವಿ ಉದ್ಯಮಿಗಳು ಎಂಬ ನೆಲೆಯಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ರಾಮಕೃಷ್ಣ ಮಿಷನ್, ಮಂಗಳೂರು ಇದರ ಪ್ರೇರಣೆಯಿಂದ ಶ್ರೀ ಅಂಬಾಮಹೇಶ್ವರಿ ಸೇವಾ ಟ್ರಸ್ಟ್ ಜೆಪ್ಪು ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇದರ ಸಹಯೋಗದಲ್ಲಿ ‘ನಮ್ಮ ಊರು – ನಮ್ಮ ಹೆಮ್ಮೆ’ ಎಂಬ ವಿಶೇಷ ಕಾರ್ಯಕ್ರಮಕ್ಕೆ ತಾ. 26/11/2023 ರಂದು ಮಂಗಳಾದೇವಿ ಸುತ್ತಲಿನ ಪ್ರದೇಶದ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಗಳನ್ನು ಗೌರವಿಸುವ ಮೂಲಕ ಚಾಲನೆ ನೀಡಲಾಯಿತು. ಬೆಳಿಗ್ಗೆ 7:30 ರಿಂದ 9.00 ಗಂಟೆಯವರೆಗೆ ಜಪ್ಪು ಪರಿಸರದ ಸುಮಾರು 800 ಮನೆಗಳಿಗೆ ಕರಪತ್ರ ಹಂಚುವ ಮೂಲಕ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಸಲಾಯಿತು. ನಂತರ ನಡೆದ ‘ಮಾದರಿ ವಾರ್ಡ್ ನತ್ತ – ಸಂಘ ಸಂಸ್ಥೆಗಳ ಚಿತ್ತ’ ಸಭಾ ಕಾರ್ಯಕ್ರಮದಲ್ಲಿ ಶ್ರೀ ಅಂಬಾಮಹೇಶ್ವರಿ ಸೇವಾ ಟ್ರಸ್ಟ್ ನಡೆದು ಬಂದ ದಾರಿ ಹಾಗೂ ತಮ್ಮ ವಾರ್ಡ್ ಗಳನ್ನು ಮಾದರಿ ವಾರ್ಡ್ ಗಳನ್ನಾಗಿ ಮಾಡಲು ಯೋಜಿಸಿದ ವಿವಿಧ ಚಟುವಟಿಕೆಗಳ ಬಗೆಗೆ ಸಾರ್ವಜನಿಕರಿಗೆ ವಿವರಿಸಲಾಯಿತು. ‘ನಮ್ಮ ಊರು – ನಮ್ಮ ಹೆಮ್ಮೆ’ ಯೋಜನೆಯಡಿಯಲ್ಲಿ ಮುಂದಿನ 6 ತಿಂಗಳುಗಳ ಕಾಲ ನಗರ ಪಾಲಿಕೆ ಮತ್ತು…

Read More

ಅದೃಷ್ಟ ಮತ್ತು ಪ್ರಯತ್ನ ಜತೆ ಜತೆಯಾಗಿರುತ್ತದೆ. ಕೆಲವೊಮ್ಮೆ ಪ್ರಯತ್ನವಿಲ್ಲದೇ ಅದೃಷ್ಟ ಖುಲಾಯಿಸಿ ಬಿಡುತ್ತದೆ. ಇನ್ನು ಕೆಲವೊಮ್ಮೆ ಒಂದಷ್ಟು ಪ್ರಯತ್ನ ಪಟ್ಟರೂ ಗೆಲುವು ನಮ್ಮದಾಗುವುದಿಲ್ಲ. ಆದರೆ ನಮ್ಮ ಪ್ರಯತ್ನದಲ್ಲಿ ಸೋಲದೆ ಸತತ ಪ್ರಯತ್ನ ಪಟ್ಟರೆ ಯಶಸ್ಸು ನಮ್ಮದಾಗಬಹುದು. ಚಿನ್ನದ ಗಣಿಗಾರಿಕೆಯ ಕೆಲಸ ಆರಂಭಿಸಿದ ವ್ಯಕ್ತಿಯೊಬ್ಬ ತಿಂಗಳುಗಟ್ಟಲೆ ಚಿನ್ನದ ಹೊಸ ನಿಕ್ಷೇಪಕ್ಕಾಗಿ ದುಡಿದ. ಆದರೆ ಎಷ್ಟು ಆಳಕ್ಕೆ ಅಗೆದರೂ ಚಿನ್ನದ ಅದಿರು ಕಾಣಿಸಲಿಲ್ಲ. ಸುಸ್ತಾಗಿ ಸೋತು ಹೋದ. ತನ್ನಿಂದ ಆಗದು ಎಂದು ಕೈ ಚೆಲ್ಲಿ ಕುಳಿತ. ಸೋತು ತನ್ನ ಕೆಲಸವನ್ನು ನಿಲ್ಲಿಸಿದ. ಆ ಹೊತ್ತಿಗೆ ಸರಿಯಾಗಿ ಅಲ್ಲಿಗೆ ಬಂದ ಇನ್ನೊಬ್ಬ ಗಣಿಗಾರಿಕೆಯ ವ್ಯಕ್ತಿಗೆ ತನ್ನ ವಸ್ತುಗಳನ್ನು ಮಾರಿ ಹೊರಟು ಹೋದ. ಅರ್ಧ ಅಗೆದು ಬಿಟ್ಟ ಹೊಂಡವನ್ನು ಮತ್ತಷ್ಟು ಅಗೆಯುವಂತೆ ಅಲ್ಲಿನ ತಂತ್ರಜ್ಞ ಹೊಸದಾಗಿ ಬಂದವನಿಗೆ ಹೇಳಿದ. ಮೂರು ಅಡಿಗಳಷ್ಟು ಅಗೆದರೆ ಚಿನ್ನದ ಆದಿರು ಇದೆ ಎಂದ ಹೊಸದಾಗಿ ಬಂದಾತ. ಅಗೆಯಲು ಆರಂಭಿಸಿದ. ಸುಮಾರು ಮೂರು ನಾಲ್ಕು ಅಡಿಗಳಷ್ಟು ಅಗೆಯುವಷ್ಟರಲ್ಲಿ ಅವನಿಗೆ ಚಿನ್ನದ ನಿಕ್ಷೇಪ ಕಾಣಿಸಿತು.…

Read More

ಬ್ರಹ್ಮಾವರ ಜ. 16: ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ವಿಜ್ಞಾನ ಮಾದರಿ, ಚಿತ್ರಕಲೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಮೇಳವನ್ನು ಆಯೋಜಿಸಲಾಗಿತ್ತು. ಕಟಪಾಡಿಯ ಎಸ್.ವಿ.ಕೆ. ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ವೇತಾ ಪ್ರಶಾಂತ್ ಶೆಟ್ಟಿ ‘ಸೈನ್‍ಕ್ವೆಸ್ಟ್’ ಉದ್ಘಾಟಿಸಿ ಮಾತನಾಡಿ ವಿಜ್ಞಾನವು ವಾಸ್ತವದಲ್ಲಿ ನಡೆಯುವ ಒಂದು ಮ್ಯಾಜಿಕ್. ಇದು ಮಾನವರಿಗೆ ದೊರೆತ ಒಂದು ವರವಾಗಿದ್ದು ಎಂದಿಗೂ ಇದನ್ನು ಕಳೆದುಕೊಳ್ಳಬಾರದೆಂದು ಹೇಳಿ ವಿದ್ಯಾರ್ಥಿಗಳ ವಿಜ್ಞಾನ ಮಾದರಿಯನ್ನು ಪ್ರಶಂಸಿದರು. ಹಿರಿಯಡ್ಕ, ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಲಾ ಶಿಕ್ಷಕರಾದ ಮೋಹನ್ ಕಡಬ ‘ಜಿ ಎಮ್ ಸ್ಟ್ರೋಕ್ಸ್’ ಚಿತ್ರ ಸಂತೆಯನ್ನು ರಿಬ್ಬನ್ ಕತ್ತರಿಸಿ ಉದ್ಘಾಟಿಸಿ ಮಾತನಾಡಿ ಮಕ್ಕಳು ತಮ್ಮ ಭಾವನೆಗಳನ್ನು, ರೇಖೆ ಮತ್ತು ಬಣ್ಣದ ಮೂಲಕ ಪ್ರದರ್ಶಿಸಲು ಚಿತ್ರಕಲೆಯು ಒಂದು ಉತ್ತಮ ಮಾಧ್ಯಮವೆಂದರು. ಕ್ಯಾನ್ವಸ್ ಮೇಲೆ ಅಕ್ಷರವನ್ನು ಬರೆದು ಅದಕ್ಕೆ ಮರದ ರೂಪವನ್ನು ಕೊಟ್ಟು ಸುಂದರವಾದ ಚಿತ್ರವನ್ನು ಬಿಡಿಸುವ ಮೂಲಕ ಕಲಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಕ್ಕಳ ಮನಸ್ಸಿನ…

Read More

ವಿಮರ್ಶೆಯು ಸಾಹಿತ್ಯದ ಸಹೃದಯತೆ, ಸಂವೇದನೆಯನ್ನು ವಿಸ್ತರಿಸುವ ಸಕಾರಾತ್ಮಕ ವಿಶ್ಲೇಷಣೆಯಾಗಿರಬೇಕು. ಪೂರ್ವಾಗ್ರಹ ಮನಃಸ್ಥಿತಿ ಇಟ್ಟುಕೊಂಡು ವಿಮರ್ಶೆ ಮಾಡಬಾರದು ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ತಿಳಿಸಿದರು. ಲೇಖಕಿ, ಸಂಶೋಧಕಿ ಇಂದಿರಾ ಹೆಗ್ಡೆ ಅವರಿಗೆ ಕರ್ನಾಟಕ ಲೇಖಕಿಯರ ಸಂಘದ ಎಚ್. ಎಸ್. ಪಾರ್ವತಿ ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ವಿಮರ್ಶೆ ಶ್ರೇಷ್ಠತೆಯ ಸೊಕ್ಕು ಆಗಬಾರದು ಶೋಧವಾಗಬೇಕು. ವಿಮರ್ಶೆಯ ವಿವೇಕ ಇರಬೇಕು. ಈ ಶ್ರೇಷ್ಠತೆಯ ಸೊಕ್ಕಿಗೂ ವರ್ಣಾಶ್ರಮ ಪದ್ಧತಿಗೂ ಇರುವ ಸಂಬಂಧವೇನು ಎಂಬುದರ ಶೋಧವೂ ಆಗಬೇಕು ಎಂದು ವಿಶ್ಲೇಷಿಸಿದರು. ಎಚ್. ಎಸ್. ಪಾರ್ವತಿ ಅವರು ಅನುವಾದಕರು, ಕಾದಂಬರಿಕಾರ್ತಿ. ಅವರನ್ನು ಜನಪ್ರಿಯ ಸಾಹಿತಿ ಎಂದು ಸಾಹಿತ್ಯ ಲೋಕ ಗುರುತಿಸಿದೆ. ಜನಪ್ರಿಯ ಸಾಹಿತಿಗಳು ನಿರ್ಲಕ್ಷ್ಯಕ್ಕೆ ಒಳಗಾದವರು. ನಿರ್ಲಕ್ಷ್ಯ ಮಾಡುವ ಬದಲು ಕನ್ನಡ ಕಟ್ಟುವ ಪ್ರಕ್ರಿಯೆಯಲ್ಲಿ ಅವರ ಕೊಡುಗೆಯನ್ನು ಗುರುತಿಸಬೇಕು ಎಂದು ತಿಳಿಸಿದರು. ಇಂದಿರಾ ಹೆಗ್ಡೆ ಅವರು ಲೇಖಕಿಯಾಗಿ, ಸಂಶೋಧಕಿಯಾಗಿ ಸ್ಥಳೀಯ ಸಂಸ್ಕೃತಿಗೆ ಮಹತ್ವ ತಂದುಕೊಟ್ಟವರು. ಸ್ಥಳೀಯತೆ ಇಲ್ಲದೇ ರಾಷ್ಟ್ರೀಯತೆಯೂ ಇಲ್ಲ, ಅಂತಾರಾಷ್ಟ್ರೀಯತೆಯೂ ಇಲ್ಲ ಎಂದು ಹೇಳಿದರು. ಕರ್ನಾಟಕ…

Read More

ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗವು ಖ್ಯಾತ ಸಂಘಟಕ, ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರಿಗೆ ‘ಸಾರ್ವಭೌಮ’ ಗೌರವ ಗ್ರಂಥದ ಲೋಕಾರ್ಪಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 10ರಂದು ಶನಿವಾರ ಮಧ್ಯಾಹ್ನ 2 ರಿಂದ ವಿಶ್ವವಿದ್ಯಾಲಯದ ಕಲೀನಾ ಕ್ಯಾಂಪಸ್ಸಿನಲ್ಲಿರುವ ಕವಿವರ್ಯ ಕುಸುಮಾಗ್ರಜ ಮರಾಠಿ ಭಾಷಾ ಭವನದಲ್ಲಿ ಆಯೋಜಿಸಿದೆ. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಮಾನ್ಯ ಸುನಿಲ್ ಕುಮಾರ್ ಅವರು ಈ ಗೌರವ ಗ್ರಂಥವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಜಿ. ಎನ್. ಉಪಾಧ್ಯ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಂಬಯಿಯ ಗಣ್ಯರ ಉಪಸ್ಥಿತಿಯಲ್ಲಿ ಈ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ನೆರವೇರಲಿದೆ. ಗೌರವಾನ್ವಿತ ಅತಿಥಿಗಳಾಗಿ ಸದಾಶಿವ ಶೆಟ್ಟಿ, ಕೂಳೂರು ಕನ್ಯಾನ (ಆಡಳಿತ ನಿರ್ದೇಶಕರು, ಹೇರಂಬ ಇಂಡಸ್ಟ್ರೀಸ್), ಆನಂದ ಶೆಟ್ಟಿ (ಆಡಳಿತ ನಿರ್ದೇಶಕರು, ಆರ್ಗಾನಿಕ್ ಕೆಮಿಕಲ್ಸ್), ಸುಧಾಕರ ಹೆಗ್ಡೆ (ಆಡಳಿತ…

Read More

ಪುಣೆಯ ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆ ಬಂಟರ ಸಂಘ ಪುಣೆ ಇದರ ಉತ್ತರ ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ನಾರಾಯಣ ರಾಜೀವ್ ಹೆಗ್ಡೆಯವರು ಸರ್ವಾನುಮತದಿಂದ ಅವಿರೋದವಾಗಿ ಆಯ್ಕೆಯಾದರು. ಜನವರಿ 13 ರಂದು ಪುಣೆ ಬಂಟರ ಭವನದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ಅಧ್ಯಕ್ಷತೆಯಲ್ಲಿ ಸಂಘದ ಮಹಾಸಭೆಯು ಜರಗಿತು. ಈ ಸಂದರ್ಭದಲ್ಲಿ ಉತ್ತರ ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಯ ನೂತನ ಸಮಿತಿಯನ್ನು ಆಯ್ಕೆ ಮಾಡಿ ಅಧಿಕೃತವಾಗಿ ಘೋಷಿಸಲಾಯಿತು. 2024 – 26 ರ ಸಾಲಿಗೆ ಉತ್ತರ ಪ್ರಾದೇಶಿಕ ಸಮಿತಿಯ ನೂತನ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರುಗಳಾಗಿ ಉದಯ ಎಚ್ ಶೆಟ್ಟಿ ಕಳತ್ತೂರು, ವಸಂತ್ ಅರ್.ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಸನ್ನ ಎಸ್ ಶೆಟ್ಟಿ, ಕೊಶಾಧಿಕಾರಿಯಾಗಿ ಸಂತೋಷ್ ಅರ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಯೋಗೇಶ್ ಪಿ ಶೆಟ್ಟಿ, ಜೊತೆ ಕೋಶಾಧಿಕಾರಿಯಾಗಿ ಗಣೇಶ್ ಎನ್ ಶೆಟ್ಟಿ, ಸಮಿತಿಯ ಪ್ರಧಾನ ಸಲಹೆಗಾರರಾಗಿ ರಾಜಾರಾಂ…

Read More